Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಬಾಗಲಕೋಟೆ : ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ಅಂತಹದೇ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟೂರ್ ಬೈಪಾಸ್ ಬಳಿ ನಡೆದಿದೆ.ತಂದೆಯನ್ನೇ ಹತ್ಯೆ ಮಾಡಿ 30 ತುಂಡುಗಳನ್ನು ಜಮೀನು ಒಂದರ ನಿರುಪಯುಕ್ತ ಬೋರ್ವೆಲ್ ನಲ್ಲಿ ಹಾಕಿದ್ದಾನೆ. 54 ವರ್ಷದ ಪರಶುರಾಮ ಕುಳಲಿ ಕೊಲೆಯಾದ ವ್ಯಕ್ತಿ. ಅವರ ಪುತ್ರ ವಿಠ್ಠಲ್(20) ಕೊಲೆ ಆರೋಪಿಯಾಗಿದ್ದಾನೆ.ಸಿಪಿಐ ಅಯ್ಯನಗೌಡ ಪಾಟೀಲ, ಎಸ್ಐ ಸಂಗಮೇಶ ಹೊಸಮನಿ, ಕ್ರೈಂ ಪಿಎಸ್ಐ ಕೆ.ಬಿ. ಮಾಂಗ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಪರಶುರಾಮ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ವಿಠ್ಠಲ್ ಕೊಲೆ ಮಾಡಿ ನಿರುಪಯುಕ್ತ ಬೋರ್ವೆಲ್ ನಲ್ಲಿ ಅಂಗಾಂಗಗಳನ್ನು ಹಾಕಿದ್ದಾನೆ ಎನ್ನುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಹೊಸದುರ್ಗ : ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೊಸದುರ್ಗ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಮುಂಬರುವ ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಇನ್ನು ಈ ವರ್ಷವೂ 100 ಪದವಿ ಪೂರ್ವ ಕಾಲೇಜು ಹಾಗೂ 100 ಪ್ರೌಢಶಾಲೆಗಳನ್ನು ಕೊಟ್ಟಿದ್ದೇವೆ. ಎಲ್ಲಿ ಶಾಲೆ ಹಾಗೂ ಕಾಲೇಜು ಅವಶ್ಯಕತೆ ಇದೆಯೋ ಅಲ್ಲಿ ನೂತನವಾಗಿ ಆರಂಭವಿಸಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಶೀತ ಗಾಳಿ ವರದಿಯಾಗಿದ್ದು, ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರೆಯುವ ಸಾಧ್ಯತೆಯಿದೆ. ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಲ್ಲಿಗೆ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಾಗೂ ಮುಂಬರುವ ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು, ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಆರೋಗ್ಯ ಇಲಾಖೆ ಬಿಡುಗಡೆ ಮಾಡುತ್ತಿರುವ ಸಲಹೆಗಳನ್ನು ಪಾಲಿಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅರುಣಾಚಲ ಪ್ರದೇಶ : ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಉಭಯ ದೇಶಗಳ ಸೈನಿಕರು ಗಾಯಗೊಂಡಿದ್ದಾರೆ. ತವಾಂಗ್ ಬಳಿ ಡಿಸೆಂಬರ್ 9 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 2021ರಲ್ಲಿ, ಅರುಣಾಚಲ ಪ್ರದೇಶದ ಯಾಂಗ್ಸೆಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ವಿವಾದವಿತ್ತು. 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಜೂನ್ 15, 2020ರ ಘಟನೆಯ ನಂತರ ಇದೇ ಮೊದಲನೆಯದು. ನಂತರ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು ಮತ್ತು ಅನೇಕರು ಗಾಯಗೊಂಡರು. ಈ ಚಕಮಕಿಯಲ್ಲಿ ಚೀನಾದ ಹಲವು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಅಕ್ಟೋಬರ್ 2021ರಲ್ಲಿ, ಕೆಲವು ಚೀನೀ ಸೈನಿಕರನ್ನು ಯಾಂಗ್ಸೆಯಲ್ಲಿ ಕೆಲವು ಗಂಟೆಗಳ ಕಾಲ ಭಾರತೀಯ ಸೈನಿಕರು ಬಂಧಿಸಿದಾಗ ಇದೇ ರೀತಿಯ ಘಟನೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಕರ್ನಾಟಕದಲ್ಲಿ ಮೊದಲ ಝೀಕಾ ಪ್ರಕರಣ ಪತ್ತೆಯಾಗಿದ್ದು, ಈ ಹಂತದಲ್ಲಿ ಜನತೆ ರೋಗ ಹರಡದಂತೆ ಎಚ್ಚರ ವಹಿಸುವುದು ಬಹಳ ಮುಖ್ಯ. *ಸೊಳ್ಳೆ ಕಡಿತ ತಪ್ಪಿಸುವುದು Zika ವಿರುದ್ಧ ರಕ್ಷಿಸಲು ಮುಖ್ಯ ಮಾರ್ಗ *ಗರ್ಭಿಣಿಯರು, ಬಾಣಂತಿಯರು, ಚಿಕ್ಕ ಮಕ್ಕಳು ಸೊಳ್ಳೆ ಕಚ್ಚದಂತೆ ಎಚ್ಚರಿಕೆ ವಹಿಸಬೇಕು. *ಸಂಜೆ ವೇಳೆ ಕಿಟಕಿ-ಬಾಗಿಲು ಮುಚ್ಚಿ ಸೊಳ್ಳೆ ಮನೆಯೊಳಗೆ ಬರದಂತೆ ನೋಡಿಕೊಳ್ಳಿ; ಮಲಗುವಾಗ ಸೊಳ್ಳೆ ಪರದೆ ಬಳಸಿ. *ಮನೆ, ಸುತ್ತಮುತ್ತ ಮತ್ತು ಸಾರ್ವಜನಿಕ ಸ್ಥಳದಲ್ಲಿ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಬೇಡಿ. ರೋಗಲಕ್ಷಣಗಳು ಝಿಕಾ ವೈರಸ್ ಸೋಂಕಿತ ಹೆಚ್ಚಿನ ಜನರು ರೋಗಲಕ್ಷಣಗಳನ್ನು ಅಭಿವೃದ್ಧಿಪಡಿಸುವುದಿಲ್ಲ. ಹಾಗೆ ಮಾಡುವವರಲ್ಲಿ, ಅವರು ಸಾಮಾನ್ಯವಾಗಿ ಸೋಂಕಿನ ನಂತರ 3-14 ದಿನಗಳ ನಂತರ ಪ್ರಾರಂಭಿಸುತ್ತಾರೆ, ದದ್ದು, ಜ್ವರ, ಕಾಂಜಂಕ್ಟಿವಿಟಿಸ್, ಸ್ನಾಯು ಮತ್ತು ಕೀಲು ನೋವು, ಅಸ್ವಸ್ಥತೆ ಮತ್ತು ತಲೆನೋವು ಸೇರಿದಂತೆ ಸಾಮಾನ್ಯವಾಗಿ ಸೌಮ್ಯವಾಗಿರುತ್ತವೆ ಮತ್ತು ಸಾಮಾನ್ಯವಾಗಿ 2 – 7 ದಿನಗಳವರೆಗೆ ಇರುತ್ತದೆ . ಈ ರೋಗಲಕ್ಷಣಗಳು ಇತರ ಆರ್ಬೋವೈರಲ್ ಮತ್ತು ಆರ್ಬೋವೈರಲ್ ಅಲ್ಲದ ರೋಗಗಳಿಗೆ ಸಾಮಾನ್ಯವಾಗಿದೆ; ಹೀಗಾಗಿ,…
ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆಯಂತೆ ಹೆರಿಗೆ ಮಾಡಿಸಲು ಹೋಗಿ ಹೆಚ್ಚುಕಮ್ಮಿಯಾದ ಕಾರಣ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಬಂದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆ ಪ್ರಸೂತಿ ತಜ್ಞರು ಲಭ್ಯವಿರಲಿಲ್ಲ. ನೋವು ಹೆಚ್ಚಾದ ಕಾರಣ ಸಿಬ್ಬಂದಿ ವೈದ್ಯರಿಗೆ ಕರೆ ಮಾಡಿ ತಿಳಿಸಿದ್ದಾರೆ. ವೈದ್ಯರು ವಿಡಿಯೋಕಾಲ್ನಲ್ಲಿ ಗೈಡ್ ಮಾಡ್ತಿನಿ, ಆಪರೇಷನ್ ಮಾಡಿ ಎಂದಿದ್ದಾರೆ. ಈ ವೇಳೆ ಏನೋ ಅನಾಹುತವಾಗಿ ತಾಯಿ & ಮಗುವಿನ ಪ್ರಾಣ ಹೋಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಡಿಸೆಂಬರ್ 19 ರಿಂದ 30 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಅಧಿವೇಶನವು 15ನೇ ವಿಧಾನಸಭೆಯ ಕೊನೆಯ ಅಧಿವೇಶನವಾಗಿದ್ದು, ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.ಈ ಸಿದ್ಧತೆಗಳನ್ನು ವಿಧಾನಸಭೆಯ ಸಭಾಪತಿಗಳಾದ ವಿಶ್ವನಾಥ್ ಹೆಗಡೆ ಕಾಗೇರಿ ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಇದು 8ನೇ ಅಧಿವೇಶನ. ಒಟ್ಟು ಬೆಳಗಾವಿಯಲ್ಲಿ ಹತ್ತು ಅಧಿವೇಶನಗಳು ಜರುಗಿದ್ದು, ಅದರಲ್ಲಿ ಎರಡು ಅಧಿವೇಶನ ಕೆ .ಎಲ್ .ಇ .ಜೆ ಎಂ ಸಿ ಮೆಡಿಕಲ್ ಕಾಲೇಜಿನಲ್ಲಿ ಅಧಿವೇಶನ ನಡೆಸಲಾಗಿತ್ತು. ಬಿಜೆಪಿ ಸರಕಾರದ ಅವಧಿಯಲ್ಲಿ ನಡೆಯುವ 5ನೇ ವರ್ಷದ ಹಾಗೂ ಕೊನೆಯ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಈ ಅಧಿವೇಶನದಲ್ಲಿ ಒಟ್ಟು 6 ವಿಧೇಯಕಗಳು ಮಂಡಿಸಲಾಗುವುದು. ಸಮಯ ಇರುವರಿಂದ ಹೆಚ್ಚಿನ ವಿಧೇಯಕಗಳು ಸರ್ಕಾರಗಳಿಂದ ಪ್ರಸ್ತಾವನೆಯ ನಿರೀಕ್ಷೆಯಲ್ಲಿ ನಾವಿದ್ದೇವೆ. 6 ವಿಧೇಯಕಗಳಲ್ಲಿ ಮೊದಲನೇ ವಿಧೇಯಕ ಅಭಿವೃದ್ಧಿ ವಿದಾಯಕವಾಗಿದ್ದು, ಇದು ಈಗಾಗಲೇ ಸದನದಲ್ಲಿ ಮಂಡನೆಯಾಗಿದ್ದು, ಆದರೆ…
ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಸದ್ಯ ಈ ವಿಚಾರವಾಗಿ ಬೆಳಗಾವಿಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಮಾತನಾಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಈಗ ಯಾರಿಗೂ ಬೇಕಾಗಿಲ್ಲ. ಎಲ್ಲವನ್ನೂ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಮೂರ್ನಾಲ್ಕು ತಿಂಗಳಲ್ಲಿ ಏನು ಅಭಿವೃದ್ಧಿ ಮಾಡಲು ಆಗುತ್ತೆ? ಹೊಸ ಸರ್ಕಾರದಲ್ಲಿ ಮಂತ್ರಿ ಆಗಬೇಕೆಂದು ಎಲ್ಲರೂ ಸುಮ್ಮನಿದ್ದಾರೆ ಎಂದು ಖಡಕ್ ಆಗಿ ಹೇಳಿದ್ದಾರೆ. ಗುಜರಾತ್ ಮಾದರಿಯಲ್ಲೇ ಹೊಸಬರಿಗೆ ಅವಕಾಶ ನೀಡಬೇಕು. ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡ್ತಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಜಿಲ್ಲೆಯ ಬಿಎಸ್ ಎಫ್ ಯೋಧ ಸದ್ದಾಂ ಜಮಾದಾರ್ ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಗುಜರಾತ್ನ ಬುಜ್ನಲ್ಲಿ ನಿಧನರಾಗಿದ್ದಾರೆ. ಸದ್ದಾಂ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದವರು. ಇತ್ತೀಚಿಗೆ ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸದ್ದಾಂ ಜಮಾದಾರ್ ಅವರಿಗೆ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆದರೆ ಅಕಾಲಿಕವಾಗಿ ನಿಧನ ಹೊಂದಿದ್ದು, ಅತೀವ ದುಃಖ ಉಂಟಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಅಣ್ಣತಮ್ಮಂದಿರನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂತಾರ ಸಿನಿಮಾದ ಯಶಸ್ಸಿನ ಬಳಿಕ ಕಾಂತಾರ- 2 ಸಿನಿಮಾ ಮಾಡಲು ನಿರ್ದೇಶಕ ರಿಷಭ್ ಶೆಟ್ಟಿ ಪ್ಲ್ಯಾನ್ ಮಾಡಿದ್ದಾರೆ ಎಂಬ ವಿಚಾರವೊಂದು ಹರಿದಾಡುತ್ತಿತ್ತು. ಅದಕ್ಕೆ ಇದೀಗ ಸ್ಪಷ್ಟನೆ ದೊರೆತಂತಿದೆ. ನಟ ರಿಷಬ್ ಶೆಟ್ಟಿ ಅನುಮತಿ ಪಡೆದ ಬಗ್ಗೆ ದೈವ ನರ್ತಕ ಉಮೇಶ್ ಗಂಧಕಾಡು ಮಾತನಾಡಿ, ರಿಷಭ್ ಶೆಟ್ಟಿಯವರು ಕೆಲವು ದಿನಗಳ ಹಿಂದೆ ಅಣ್ಣಪ್ಪ ಪಂಜುರ್ಲಿ ಸೇವೆ ಮಾಡಬೇಕೆಂದು ಕೇಳಿಕೊಂಡಿದ್ದರು. ಅದಕ್ಕಾಗಿ ನಗರದ ಬಂದಲೆಯ ಮಡಿವಾಳಬೆಟ್ಟು ದೈವಸ್ಥಾನದಲ್ಲಿ ನಾನೇ ಅಣ್ಣಪ್ಪ ಪಂಜುರ್ಲಿ ದೈವದ ನರ್ತನ ಸೇವೆ ಮಾಡಿದ್ದೆ. ದೈವದ ನೇಮದ ವೇಳೆ ಹೇಳುವ ನುಡಿ ನರ್ತಕ ಹೇಳುವುದಲ್ಲ ಬದಲಾಗಿ ದೈವವೇ ಹೇಳುವುದು. ಅದು ದೈವ ನರ್ತಕರಾದ ನಮಗೆ ಗೊತ್ತಾಗದೇ ಆಗುವಂತದ್ದು ಎಂದರು. ಅಣ್ಣಪ್ಪ ಪಂಜುರ್ಲಿಯ ನೇಮದ ವೇಳೆ ಪುಷ್ಪ ಪ್ರಶ್ನೆಯಲ್ಲಿ ದೈವದ ಬಳಿ ಕಾಂತಾರ-2 ಸಿನಿಮಾ ಮಾಡಲು ಅರಿಕೆ ಮಾಡಿದ್ದ ವೇಳೆ ಶುಭ ಶಕುನ ಬಂದಿದೆ. ಕಾಂತಾರ-2 ಸಿನಿಮಾ ಬಹಳ ಶುದ್ಧಾಚಾರದಿಂದ ಮಾಡಬೇಕು. ಧರ್ಮಸ್ಥಳಕ್ಕೆ ತೆರಳಿ ಅಣ್ಣಪ್ಪ ಪಂಜುರ್ಲಿ ದೈವದ ಬಳಿ ಪ್ರಾರ್ಥನೆಯೂ ಮಾಡಬೇಕು…