Author: admin

ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ 3ನೇ ರೈಲ್ವೆ ಗೇಟ್ ಫ್ಲೈ ಓವರ್ ಉದ್ಘಾಟನೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಹಿಷ್ಕರಿಸಿದರು. ರೈಲ್ವೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರನ್ನೂ ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮಕ್ಕೆ ಹಾಜರಾಗದೆ ನನ್ನ ಪ್ರತಿಭಟನೆಯನ್ನು ದಾಖಲಿಸುತ್ತಿದ್ದೇನೆ. ಈ ಕುರಿತು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೋರಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಡ್ಯ: ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂತರಾಜು ಬಂಧಿತ ಆರೋಪಿ. 9 ವರ್ಷದ ಬಾಲಕಿ ನಿನ್ನೆ ಟ್ಯೂಷನ್ ಗೆಂದು ತೆರಳಿದ್ದಳು. ಬಾಲಕಿ ವಾಪಸ್ ಮನೆಗೆ ಬಾರದೆ ಇದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದರು. ನಂತರ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾಗಿತ್ತು. ಇದೀಗ ಟ್ಯೂಷನ್ ನಡೆಸುತ್ತಿದ್ದ ಕಾಂತರಾಜು ಎಂಬುವವನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.  ಬಾಲಕಿಯ  ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಬಳಿಕ ಆರೋಪಿ ಕಾಂತರಾಜು ಶವವನ್ನ ಸಾಗಿಸಲು ಯತ್ನಿಸಿದ್ದು ನಂತರ ಸಂಪ್ ನಲ್ಲಿ ಎಸೆದು ಪರಾರಿಯಾಗಿದ್ದ ಎನ್ನಲಾಗಿದೆ. ಇದೀಗ ಆರೋಪಿ ಕಾಂತರಾಜುನನ್ನ ಮಳವಳ್ಳಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಹಿರಿಯೂರು:  ನಗರದ  ಗಾಂಧಿ ಸರ್ಕಲ್ ಬಳಿಯ ನೆಹರು ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನೂ ಒದಗಿಸದೇ ಹಿರಿಯೂರು ನಗರಸಭೆ ನಿರ್ಲಕ್ಷ್ಯವಹಿಸಿದೆ ಎಂದು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆಯನ್ನು ನಿರ್ವಹಿಸುವಲ್ಲಿ ಹಿರಿಯೂರು ನಗರ ಸಭೆ ವಿಫಲವಾಗಿದ್ದು, ನಗರದಲ್ಲಿ ಮಳೆ ಸುರಿದರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ನಿಂತುಕೊಳ್ಳಲು ಕೂಡ ಯಾವುದೇ ವ್ಯವಸ್ಥೆಗಳಿಲ್ಲ. ನಗರಸಭೆಗೆ ವ್ಯಾಪಾರಿಗಳು ಬಾಡಿಗೆ ಪಾವತಿ ಮಾಡುತ್ತಿದ್ದರೂ, ಕನಿಷ್ಠ ಮೂಲಭೂತ ಸೌಲಭ್ಯ ಒದಗಿಸದೇ ನಿರ್ಲಕ್ಷ್ಯವಹಿಸಲಾಗಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಸ್ಥರ ಪಾಡು ಹೇಳ ತೀರದಂತಾಗಿದೆ. ಮಳೆ ಸುರಿದರೆ, ಮಾರುಕಟ್ಟೆಯ ದುಸ್ಥಿತಿ ನೋಡಲಾಗದೇ ಸಾರ್ವಜನಿಕರು ಮಾರುಕಟ್ಟೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಕಂಡೂ ಕಾಣದಂತಿರುವ ನಗರಸಭೆ ಇನ್ನಾದರೂ ಎಚ್ಚೆತ್ತುಕೊಂಡು, ಮಾರುಕಟ್ಟೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇನ್ನೂ ನೆಹರು ಮಾರುಕಟ್ಟೆ ದುಸ್ಥಿತಿಯ ಕುರಿತು ಜನಪ್ರತಿನಿಧಿಗಳು ಮೌನವಾಗಿದ್ದಾರೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ತಕ್ಷಣವೇ ಜನ ಪ್ರತಿನಿಧಿಗಳು ಈ ಬಗ್ಗೆ…

Read More

ಮಧುಗಿರಿ: ತಾಲೂಕು ಕಸಬಾ  ಹೋಬಳಿ ಕಂಬದಹಳ್ಳಿ  ಗ್ರಾಮದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಮತ್ತು ತುಮುಲ್ ನಿರ್ದೇಶಕರಾದ  ಕೊಂಡವಾಡಿ ಚಂದ್ರಶೇಖರ್  ಟೇಪ್   ಕತ್ತರಿಸುವ ಮೂಲಕ   ಹಾಲು  ಉತ್ಪಾದಕರ ನೂತನ ಸಂಘದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ.ವಿ.ವೀರಭದ್ರಯ್ಯ, ರೈತರು ಆರ್ಥಿಕವಾಗಿ ಮುಂದುವರಿಯಲು ಹಾಲು ಉತ್ಪಾದನೆ ಬಹಳ ಮುಖ್ಯವಾಗಿದ್ದು, ಬೇಸಾಯ ಕೈಕೊಟ್ಟ ಸಂದರ್ಭದಲ್ಲಿ ಉಪಕಸುಬುಗಳಿಂದ ಹಳ್ಳಿಗಳಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತದೆ  ಎಂದರು. ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಟ್ಟಿದೆ. ರೈತರಿಗೆ ವ್ಯವಸಾಯ ಕೈ ಕೊಟ್ಟಾಗ ಹಾಲು ಉತ್ಪಾದನೆಯು ಸಹಕಾರಿಯಾಗಿದೆ. ಕೊಂಡವಾಡಿ ಚಂದ್ರಶೇಖರ್ ರವರು ತುಮುಲ್ ಅಧ್ಯಕ್ಷರಾಗಿದ್ದ ಸಂಧರ್ಭದಲ್ಲಿ ಹಾಲು ಉತ್ಪಾದಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಹಾಗೂ ರೈತರು ಸಹಕಾರ…

Read More

ಕೊರಟಗೆರೆ: ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿ ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸದಂತೆ ರಾಜ್ಯ ರೈತ ಸಂಘ (ಪುಟ್ಟಣ್ಣ ನವರ ಬಣದಿಂದ) ಕೊರಟಗೆರೆ ತಹಶೀಲ್ದಾರ್ ಮುಖೇನ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ವಿದ್ಯುತ್ ಕ್ಷೇತ್ರದ ಖಾಸಗಿಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಕಚೇರಿ ಮುಂದೆ  ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ, ಕೃಷಿ ಪಂಪ್ಸೆಟ್ಟುಗಳಿಗೆ ಮೀಟರ್ ಅಳವಡಿಸುವ ಹುನ್ನಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೆ ಸರಿಯಾಬೇಕು. ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಪ್ರಕರಣಗಳಲ್ಲಿ ಟ್ರಾನ್ಸ್ ಫಾರಂನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಹಾಗೂ ಬಾಕಿ ಎಲ್ಲಾ ವಿದ್ಯುತ್ ಬಿಲ್ಲುಗಳನ್ನು ಮನ್ನಾ ಮಾಡಬೇಕು. ಕೇಂದ್ರ ಸರ್ಕಾರ ಅಡಿಕೆ ಆಮದಿನ ಮೇಲೆ ಹೆಚ್ಚು ಸುಂಕ ವಿಧಿಸಿ, ಭೂತಾನ್ ಸೇರಿದಂತೆ ಬೇರೆ ಬೇರೆ ರಾಷ್ಟಗಳಿಂದ ಆಮದು ಮಾಡಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ತಿಳಿಸಿದರು. ನಂತರ ಕರ್ನಾಟಕ ರಾಜ್ಯ…

Read More

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಜ್ಯದ 25 ಲಕ್ಷ ವಿದ್ಯಾರ್ಥಿಗಳು ಮತ್ತು 2 ಲಕ್ಷ ಸ್ವಸಹಾಯ ಸಂಘಗಳ 29 ಲಕ್ಷ ಸದಸ್ಯರು ಸೇರಿದಂತೆ ತಮ್ಮ ಇಲಾಖೆಗಳ ವ್ಯಾಪ್ತಿಯಿಂದ 54 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಲಿದ್ದಾರೆ ಎಂದು ಉನ್ನತ ಶಿಕ್ಷಣ ಮತ್ತು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲಕುಮಾರ್ ಅವರೊಂದಿಗೆ ಮಂಗಳವಾರ ಅವರು ಸಭೆ ನಡೆಸಿದರು.  ಬಳಿಕ ಮಾತನಾಡಿದ  ಸಚಿವ ಅಶ್ವಥ್ ನಾರಾಯಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆರಿಸಿರುವ 6 ಹಾಡುಗಳನ್ನು ರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಸರಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹಾಡಲಾಗುವುದು. ಜತೆಗೆ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯೆಯರು ಕೂಡ ಈ ಸಂಭ್ರಮದ ಭಾಗವಾಗಲಿದ್ದಾರೆ ಎಂದರು. ಹೋದ ವರ್ಷದ ರಾಜ್ಯೋತ್ಸವದಲ್ಲಿ ‘ಮಾತಾಡ್ ಮಾತಾಡು ಕನ್ನಡ’ ಕಾರ್ಯಕ್ರಮದಲ್ಲಿ 22 ಲಕ್ಷ ಜನ ಪಾಲ್ಗೊಂಡಿದ್ದರು. ಈ ವರ್ಷ ‘ಕೋಟಿ…

Read More

ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ. ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನ ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನ ಹೇಳಲಿ ಸಾಕು. ಟಿಪ್ಪುಗೆ ಮೈಸೂರಿಗೆ ಏನು ಸಂಬಂಧ. ಟಿಪ್ಪು ಏನ್ ಮೈಸೂರಿನವನಾ..?  ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲ. ಆದ್ರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ ಎಂದರು. ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯ ಇಲ್ಲ. ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲಾ ಎನ್ನುವವರ ಹೆಸರನ್ನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ. ನಾನು ಮೈಸೂರಿಗೆ 10…

Read More

ಮೈಸೂರು: ರಜೆ ಮೇಲೆ ಊರಿಗೆ ಬಂದಿದ್ಧ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಚಿಟ್ಟಕ್ಯಾತನಹಳ್ಳಿ ಗ್ರಾಮದ ನಿವಾಸಿ ಯೋಧ ಮಹೇಶ್ (40)  ಹೃದಯಾ‍ಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮಹೇಶ್ ಸಾವನ್ನಪ್ಪಿದ್ದಾರೆ. ಮೃತ ಯೋಧ ಮಹೇಶ್  ಪಶ್ಚಿಮ ಬಂಗಾಳದ ಸೇನೆ ತುಕುಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಾಲ್ಕು ದಿನದ ಹಿಂದೆ ರಜೆ ಮೇಲೆ  ಊರಿಗೆ ಆಗಮಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನ ಬಿಬಿಎಂಪಿ ಅಧಿಕಾರಿಗಳು ಮುಂದುವರೆಸಿದ್ದು, ಈ ನಡುವೆ ತಮ್ಮ ಮನೆ ಡೆಮಾಲಿಷ್ ಮಾಡಲು ಮುಂದಾದ ಹಿನ್ನೆಲೆ ದಂಪತಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ನಗರದ ಕೆಆರ್ ಪುರಂ ಗಾಯತ್ರಿ ಲೇಔಟ್ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಕ್ಕೆ  ದಂಪತಿ ವಿರೋಧ ವ್ಯಕ್ತಪಡಿಸಿದ್ದಾರೆ.  ಮೈಮೇಲೆ ಪೆಟ್ರೋಲ್ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. 40 ಲಕ್ಷ ಲೋನ್ ಮಾಡಿ ಮನೆ ಕಟ್ಟಿದ್ದೇನೆ.  ಹೇಗೆ ಡೆಮಾಲಿಷನ್ ಮಾಡುತ್ತೀರಾ.  ನಾವು ನಮ್ಮ ಮನೆ ಬಿಡಲ್ಲ. ನಮ್ಮ ಮನೆಯನ್ನ ಡೆಮಾಲಿಷನ್ ಮಾಡಲು ಬಿಡಲ್ಲ ಎಂದು ಪೆಟ್ರೋಲ್ ಕ್ಯಾನ್ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ. ಪೊಲೀಸರು ದಂಪತಿ ಮನವೊಲಿಕೆಗೆ ಯತ್ನಿಸಿದ್ದು ,  ಸ್ಥಳಕ್ಕೆ ಸಿಎಂ ಬರುವಂತೆ ದಂಪತಿ  ಪಟ್ಟು ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾಲ್ಲೂಕಿನ ಕಮಲಾಪುರದ ಡಾ.ಬಿ.ಆರ್.‌ಅಂಬೇಡ್ಕರ್ ಕಾಲೊನಿಯ ಪರಿಶಿಷ್ಟ ಜಾತಿಯ ಹಿರಾಳ್ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು. ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ಸವಿದ್ದು,ಚಹಾ ಕುಡಿದರು. ಅವರೊಂದಿಗೆ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಇತರರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More