Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಹೆಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಸರ್ಕಾರದ ತೆರಿಗೆ ಹಣ ದುರುಪಯೋಗವಾಗಿದೆ, ಅಕ್ರಮ ಖಾತೆ ಮಾಡಿದ್ದಾರೆ, ಅಧಿಕಾರಿಗಳು ಅಕ್ರಮದಲ್ಲಿ ತೊಡಗಿದ್ದಾರೆ ಎಂದು ಪೌರ ಆಡಳಿತ ಸಚಿವಾಲಯಕ್ಕೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕಳೆದ ಒಂಬತ್ತು ತಿಂಗಳ ಹಿಂದೆ ದೂರು ನೀಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದರು ಕೂಡ ಯಾವುದೇ ಕ್ರಮ ಆಗಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯ ಮಿಲ್ ನಾಗರಾಜು ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದಾರೆ. ಪುರಸಭಾ ಮುಂಭಾಗ ಏಕಾಂಗಿಯಾಗಿ ಉಪವಾಸ ಆರಂಭಿಸಿರುವ ಅವರು, ಸದಸ್ಯರು, ಅಧಿಕಾರಿಗಳ ಮೇಲೆ ಕ್ರಮ ಆಗುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಇವರಿಗೆ ಹಲವು ಪ್ರಗತಿಪರ ಸಂಘಟನೆಯ ಮುಖಂಡರು ಬೆಂಬಲ ವ್ಯಕ್ತಪಡಿಸಿದರು. ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಸದಸ್ಯ ಮಿಲ್ ನಾಗರಾಜು, ಕಳೆದ ನಾಲ್ಕು ವರ್ಷದ ಹಿಂದೆ ಪುರಸಭೆಗೆ ಚುನಾಯಿತರಾದ ನಂತರ ಸಾರ್ವಜನಿಕವಾಗಿ ಪುರಸಭೆ ವತಿಯಿಂದ ಅಭಿವೃದ್ಧಿ ಕೆಲಸ ಕಾರ್ಯ ಮಾಡಿಕೊಡಲು ನಮ್ಮಿಂದ ಸಾಧ್ಯವಾಗಿಲ್ಲ, ಕಾರಣ ಅಧಿಕಾರಿಗಳು ನಮಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು. ಸಾಮಾನ್ಯ ಸಭೆಯಲ್ಲಿ ಆಡಳಿತ…
ಮಂಜುಸ್ವಾಮಿ.ಎಂ.ಎನ್, ಕೊರಟಗೆರೆ. ಕೊರಟಗೆರೆ: ಜನ ಸ್ನೇಹಿ ತಹಶೀಲ್ದಾರ್ ಎಂದೇ ಹೆಸರು ಪಡೆದಿರುವ ತುಮಕೂರು ಜಿಲ್ಲೆ ಕೊರಟಗೆರೆಯ ತಹಶೀಲ್ದಾರ್ ನಾಹೀದಾ ಜಮ್ ಜಮ್ ಅವರು, ಮಾರುವೇಷದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ್ದು, 108 ತುರ್ತು ಸೇವೆಯ ನಿರ್ವಹಣೆ ವೈಫಲ್ಯವನ್ನು ಬಯಲು ಮಾಡಿದ್ದಾರೆ. ಚಿರತೆ ದಾಳಿಯಿಂದ ಗಾಯಗೊಂಡು ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತರು ಮತ್ತು ಮಕ್ಕಳ ಆರೋಗ್ಯ ವಿಚಾರಣೆಗೆ ಬಂದ ನಾಹಿದಾ ಅವರ ಬಳಿ ತುರ್ತು ಆರೋಗ್ಯ ಸೇವೆ 108 ಕುರಿತು ದೂರು ನೀಡಿದ್ದರು. ಚಿರತೆ ದಾಳಿ ಸಂದರ್ಭದಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಕುರಿತು ವಿವರಿಸಿ ಕಣ್ಣೀರು ಹಾಕಿದ್ದರು. ಈ ಹಿನ್ನೆಲೆಯಲ್ಲಿ 108 ಕ್ಕೆ ರಾಮಕ್ಕನ ಹೆಸರಿನಲ್ಲಿ ವಡ್ಡಗೆರೆ ಕ್ರಾಸ್ ಬಳಿ ಅಪಘಾತ ಆಗಿದೆ ಎಂದು ತಹಶೀಲ್ದಾರ್ ಕರೆ ಮಾಡ್ತಾರೆ. 2 ನಿಮಿಷ 108 ಗ್ರಾಹಕ ಸೇವಾಕೇಂದ್ರದ ಸಿಬ್ಬಂದಿ ಮಾಹಿತಿ ಪಡೆಯುತ್ತಾರೆ. ನಂತರ ಕರೆಯು ಆಂಬ್ಯುಲೆನ್ಸ್ ಸಿಬ್ಬಂದಿಗೆ ವರ್ಗಾವಣೆ ಆಗುತ್ತದೆ. ಆಂಬ್ಯುಲೆನ್ಸ್ ಸಿಬ್ಬಂದಿ ಉಮಾದೇವಿಯ ಜೊತೆ 8 ನಿಮಿಷ ತಹಶೀಲ್ದಾರ್ ಮಾತನಾಡುತ್ತಾರೆ.…
ಈ ವರ್ಷದ ಆಗಸ್ಟ್ ತಿಂಗಳಿಂದ ರಾಜ್ಯಾದ್ಯಂತ ಅನೇಕ ಅಂಗನವಾಡಿ ಕೇಂದ್ರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳು ಹಾಗೂ ಗರ್ಭಿಣಿಯರಿಗೆ ‘ತಾಂತ್ರಿಕ’ ಕಾರಣಗಳಿಂದಾಗಿ ಮೊಟ್ಟೆಗಳನ್ನು ಹಂಚಿಕೆ ಮಾಡುವಲ್ಲಿ ತೊಂದರೆ ಅನುಭವಿಸುತ್ತಿವೆ. ಮಕ್ಕಳು ಹಾಗೂ ಮಹಿಳೆಯರಲ್ಲಿ ಅಪೌಷ್ಠಿಕತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ವಾರದಲ್ಲಿ ಮೂರು ಮೊಟ್ಟೆಗಳು ಹಾಗೂ ಗರ್ಭಿಣಿಯರಿಗೆ ವಾರದಲ್ಲಿ ಆರು ಮೊಟ್ಟೆಗಳನ್ನು ಹಂಚಿಕೆ ಮಾಡುತ್ತಿದೆ. ಆದರೆ ಹಣಕಾಸು ಇಲಾಖೆಯ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ ಖಜಾನೆ-|| ವತಿಯಿಂದ ಹಣ ಬಿಡುಗಡೆಯಲ್ಲಿ ಆಗಿರುವ ತೊಂದರೆಯಿಂದಾಗಿ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಸಿಬ್ಬಂದಿಗಳೇ ತಮ್ಮ ಸ್ವಂತ ಖರ್ಚಿನಿಂದ ಮೊಟ್ಟೆಗಳ ಬಿಲ್ಲುಗಳನ್ನು ಪಾವತಿಸುತ್ತಿದ್ದಾರೆ, ಹಾಗೂ ಹಣ ಇಲ್ಲದಿರುವವರು ಫಲಾನುಭವಿಗಳಿಗೆ ಮೊಟ್ಟೆಗಳ ಹಂಚಿಕೆಯನ್ನು ನಿಲ್ಲಿಸಿದ್ದಾರೆ. ಗದಗ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಮೂರು ಅಂಗನವಾಡಿ ಕೇಂದ್ರಗಳಲ್ಲಿ ಹಣಕಾಸಿನ ಕೊರತೆಯಿಂದಾಗಿ ಮಕ್ಕಳಿಗೆ ಮೊಟ್ಟೆಗಳನ್ನು ಕೊಡುವುದು ಸಾಧ್ಯವಾಗುತ್ತಿಲ್ಲವಂತೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರೆಯರ ಮತ್ತು ಸಹಾಯಕಿಯರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ ಅವರ ಪ್ರಕಾರ…
ಬೆಂಗಳೂರು : ಮತ್ತೆ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಅಂದೇ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ. ವಿಧಾನಸಭೇ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಿಂದ ಕೈಬಿಡಲಾಗಿದ್ದ ನಾಯಕರನ್ನು ಮತ್ತೆ ಸಂಪುಟಕ್ಕೆ ಸೇರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಮಾಜಿ ಸಚಿವರಾದ ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚೆನ್ನೈ: ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆಯಿಂದ ದೂರವಾಗಿರುವ ನಾಯಕರು ಮತ್ತೆ ಒಂದಾಗಲಿದ್ದಾರೆಯೇ? ಲೋಕಸಭೆ ಚುನಾವಣೆಗೆ ಒಟ್ಟಿಗೆ ಸ್ಪರ್ಧಿಸುತ್ತಾರಾ? ಅಥವಾ 1987 ರ ಬಿಕ್ಕಟ್ಟು ಎರಡು ರಾಷ್ಟ್ರಗಳ ಚಿಹ್ನೆಯ ನಷ್ಟಕ್ಕೆ ಕಾರಣವಾಗಬಹುದೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯದ ರಾಷ್ಟ್ರೀಯ ಪಕ್ಷ ಬಿಜೆಪಿ ಗೊಂದಲಕ್ಕೆ ಸಿಲುಕಿದೆ ಎಂದರೆ ಅತಿಶಯೋಕ್ತಿಯಲ್ಲ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ನಂತರ ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಮತ್ತು ಪ್ರಸ್ತುತ ಪ್ರಮುಖ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿರುವ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್) ಅವರು ಭಿನ್ನಮತೀಯ ನಾಯಕರನ್ನು ಸೇರಿಸಿಕೊಳ್ಳುವ ಉದ್ದೇಶವನ್ನು ಪಕ್ಷ ಹೊಂದಿಲ್ಲ ಎಂದು ಹೇಳುತ್ತಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಪನ್ನೀರಸೆಲ್ವಂ ಅವರು ಇಪಿಎಸ್ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆ ಸಿಂಧುವಾಗಿದೆ ಎಂಬ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಮೇಲ್ಮನವಿ ಸೋಮವಾರ ವಿಚಾರಣೆಗೆ ಬರಲಿದೆ. ಇಪಿಎಸ್ ಮತ್ತು ಒಪಿಎಸ್ ಇದನ್ನು ವಿರೋಧಿಸಿ ಅಫಿಡವಿಟ್ ಸಲ್ಲಿಸುತ್ತಿದ್ದಾರೆ. ಮೇಲ್ಮನವಿಯ ವಿಚಾರಣೆಯ ನಂತರ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಮ್ಯಾಂಡಾಸ್ ಚಂಡಮಾರುತದಿಂದಾಗಿ ನೆರೆಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಇದರ ಎಫೆಕ್ಟ್ ಕರ್ನಾಟಕದ ಮೇಲೂ ತಟ್ಟಿದೆ. ಈ ಹಿನ್ನೆಯಲ್ಲಿ ಮಳೆ, ಶೀತಗಾಳಿ ಹೆಚ್ಚಾಗಿದ್ದು ಮಕ್ಕಳು, ವೃದ್ಧರು ತುಂಬಾ ಎಚ್ಚರಿಕೆಯಿಂದಿರುವಂತೆ ಆರೋಗ್ಯ ಸಚಿವ ಸುಧಾಕರ್ ಸಲಹೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಚಳಿಗಾಲದ ಜೊತೆ ಚಂಡಮಾರುತದ ಪರಿಣಾಮ ಎದುರಿಸುತ್ತಿದ್ದೇವೆ. ಹೀಗಾಗಿ ಮಕ್ಕಳು, ವೃದ್ಧರು ತುಂಬಾ ಎಚ್ಚರಿಕೆಯಿಂದ ಇರಬೇಕು. ವೃದ್ಧರನ್ನ, ಮಕ್ಕಳನ್ನ ತುಂಬಾ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದಲೂ ಮಾರ್ಗಸೂಚಿ ಹೊರಡಿಸಿದ್ದೇವೆ. ವೈದ್ಯರಿಗೂ ಎಚ್ಚರಿಕೆ ವಹಿಸಲು ಸಭೆ ಕರೆದು ಸೂಚಿಸುತ್ತೇನೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೂ ಮುಂಜಾಗ್ರತಾ ಕ್ರಮ ವಹಿಸಲು ಈಗಾಗಲೇ ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಎಲ್ಲಾ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಈಗ ಸಭೆ ಕರೆದು ವೈದ್ಯರಿಗೂ ಸೂಚನೆ ಕೊಡುತ್ತೇನೆ. ಈ ವಾತಾವರಣದಿಂದ ಕೊರೋನಾ ಉಲ್ಬಣವಾಗುವುದಿಲ್ಲ. ಆದರೆ ದೇಹವನ್ನು ತುಂಬಾ ಬೆಚ್ಚಗೆ ಕಾಪಾಡಿಕೊಳ್ಳಬೇಕು.ನಾವೂ ಕೂಡ ತುಂಬಾ ಮುಂಜಾಗ್ರತೆವಹಿಸಿದ್ದೇವೆ ಎಂದರು.…
ಭಾರತೀಯ ಒಲಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ.ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷ ಸಹದೇವ್ ಯಾದವ್ ಖಜಾಂಚಿಯಾಗಿ ಆಯ್ಕೆಯಾದರೆ, ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಹಾಗೂ ಮಾಜಿ ಗೋಲ್ ಕೀಪರ್ ಕಲ್ಯಾಣ್ ಚೌಬೆ ಸಹ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ನಡೆಸದಿದ್ದರೆ ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸೂಚನೆ ನೀಡಿದ್ದ ಬೆನ್ನಲ್ಲೇ ಈ ಮಹತ್ವದ ಚುನಾವಣೆ ನಡೆದಿತ್ತು. ಅಸೋಸಿಯೇಷನ್ ನಿರ್ದೇಶಕರಾಗಿ ಭೂಪೇಂದ್ರ ಸಿಂಗ್ ಬಜ್ವಾ, ಅಮಿತಾಬ್ ಶರ್ಮಾ, ಹರ್ಪಾಲ್ ಸಿಂಗ್ ಹಾಗೂ ರೋಹಿತ್ ರಾಜ್ಪಾಲ್ ಆಯ್ಕೆಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚೆನ್ನೈ: ನಟ ರಜನಿಕಾಂತ್ ಇಂದು (ಡಿ.12) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರತಿ ಹುಟ್ಟುಹಬ್ಬ ಆಚರಿಸುತ್ತಿರುವಾಗ ಅಭಿಮಾನಿಗಳು ಅವರನ್ನು ನೋಡಲು ಅವರ ಮನೆ ಮುಂದೆ ಸೇರುತ್ತಾರೆ. ಈ ಹುಟ್ಟುಹಬ್ಬದ ದಿನವೂ ಬೋಯಸ್ ತೋಟದ ಮನೆಯ ಮುಂದೆ ಅಭಿಮಾನಿಗಳು ಜಮಾಯಿಸಿ ರಜನಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ಇದಾದ ಬಳಿಕ ಮನೆಯಿಂದ ಹೊರ ಬಂದ ರಜನಿ ಪತ್ನಿ ಲತಾ, “ನಟ ರಜನಿ ಶೂಟಿಂಗ್ಗಾಗಿ ಹೈದರಾಬಾದ್ಗೆ ಹೋಗಿದ್ದಾರೆ. ಯಾವುದೇ ಅಭಿಮಾನಿಗಳು ಸೇರಬಾರದು ಎಂದು ಅವರು ಹೇಳಿದರು. ಇದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಇದೇ ವೇಳೆ ಮುಖ್ಯಮಂತ್ರಿ ಸ್ಟಾಲಿನ್, ತಮಿಳುನಾಡು ಬಿಜೆಪಿ ಅಧ್ಯಕ್ಷ, ಅಣ್ಣಾಮಲೈ ಮತ್ತಿತರ ನಾಯಕರು ನಟ ರಜನಿಕಾಂತ್ ಅವರಿಗೆ ಶುಭಾಶಯಗಳನ್ನು ಕೋರಿದರು. ಮುಖ್ಯಮಂತ್ರಿಗಳಿಂದ ಅಭಿನಂದನಾ ಸಂದೇಶ: “ನನ್ನ ಆತ್ಮೀಯ ಗೆಳೆಯ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಶುಭಾಶಯಗಳು ಎಂದು ತಿಳಿಸಿದರು. ಈಗೆ ಅನೇಕ ರಾಜಿಕೀಯ ನಾಯಕರು, ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಜಿನಿಕಾಂತ್ ಅವರಿಗೆ ಶುಭಾಶಯಗಳನ್ನು ಕೋರಿದರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ.…
ಬೆಳಗಾವಿ: ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲೆ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 25 ತೊಲೆ ಬಂಗಾರ, 20 ತೊಲೆ ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಗೋಕಾಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮಿಳುನಾಡು :ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರುತ್ತಿದ್ದ ಅಂಗಡಿಗೆ ‘ಸೀಲ್’ ಜೈವಿಕ ವಿಘಟನೀಯವಲ್ಲದ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ ಮಾರಾಟ ನಡೆಯುತ್ತಿರುವ ಬಗ್ಗೆ ನಗರಸಭೆಗೆ ಸೂಚನೆ ನೀಡಲಾಗಿತ್ತು. ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಸೆಂಥಿಲಕುಮಾರ್ ಉತ್ತರ ಆರೋಗ್ಯ ನಿರೀಕ್ಷಕ ಕರ್ಪುಸಾಮಿ ಹಾಗೂ ಅಧಿಕಾರಿಗಳು ಅವಿನಾಶಿ ದಿನಸಿ, ಸಾಮಾನ್ಯ ಸರಕು, ಲೇಖನ ಸಾಮಗ್ರಿ ಸೇರಿದಂತೆ ಅಂಗಡಿಗಳ ತಪಾಸಣೆ ನಿಭಾಯಿಸಿದೆ ಆಗ ಹಳೆ ಬಸ್ ನಿಲ್ದಾಣ ಧ್ವಂಸವಾಗಿತ್ತು ಹತ್ತಿರದ 2 ಅಂಗಡಿಗಳು ಮಾರಾಟಕ್ಕಿದ್ದವು 620 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ ಪ್ರತಿ ಅಂಗಡಿಗೆ ರೂ. 15 ಸಾವಿರ ಹಾಗೂ ಇನ್ನೊಂದು ಅಂಗಡಿಗೆ ರೂ. 50 ಸಾವಿರ ದಂಡವನ್ನೂ ವಿಧಿಸಲಾಗಿದೆ. ಈ ಒಂದು ಅಂಗಡಿಯಲ್ಲಿ ಈಗಾಗಲೇ ಪ್ಲಾಸ್ಟಿಕ್ ಉತ್ಪನ್ನಗಳನ್ನು ರೂ. 20 ಸಾವಿರ ದಂಡ ವಿಧಿಸಿ ಮತ್ತೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡಿದ ಕಾರಣ ಅಂಗಡಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಪುರಸಭೆ ಆರೋಗ್ಯ ನಿರೀಕ್ಷಕರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…