Subscribe to Updates
Get the latest creative news from FooBar about art, design and business.
- ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
- ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
- ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
- ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
- ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
- ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
- ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
Author: admin
ಕೊರಟಗೆರೆ: ವರುಣನ ರುದ್ರಾವತಾರ ಮುಂದುವರೆದಿದ್ದು ವೃದ್ದೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕೊರಟಗೆರೆ ತಾಲ್ಲೂಕಿನ ಕುರುಡುಗನಹಳ್ಳಿ ಗ್ರಾಮದ ಲಕ್ಷ್ಮಮ್ಮ ಕೋಂ ವೀರಕ್ಯಾತಪ್ಪ ಎಂಬ 70 ವರ್ಷದ ವೃದ್ದೆಯು ತನ್ನ ಜಮೀನಿಗೆ ಹೋಗಿ ವಾಪಸ್ ಬರುವ ಮಾರ್ಗ ಮಧ್ಯೆಯ ಹುಂಜಿನ ಹಳ್ಳದ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ತಕ್ಷಣವೇ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಮತ್ತು ಆರಕ್ಷಕ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿ ಗ್ರಾಮಸ್ಥರ ಸಹಕಾರದಿಂದ ವೃದ್ಧೆಯ ಮೃತ ದೇಹವನ್ನು ಹುಡುಕಿ ಹೊರತೆಗೆದಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ.ಎಂ.ಎನ್ ., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ: ಮಳೆರಾಯನ ಆರ್ಭಟದಿಂದ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ ಸೇತುವೆಗಳು ಸಂಪೂರ್ಣ ಜಲಾವೃತವಾಗಿದೆ. ಕೊರಟಗೆರೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಬಹುತೇಕ ಮಣ್ಣಿನ ಮನೆಗಳು ಕುಸಿದಿವೆ. ರೈತಾಪಿವರ್ಗ ಬಿತ್ತನೆ ಮಾಡಿದ್ದ ಬೆಳೆಗಳು ನೀರಿನಲ್ಲಿ ಮುಳುಗಿ ರೈತರಿಗೆ ಕೋಟ್ಯಾಂತರ ರೂ ನಷ್ಟವಾಗಿದೆ. ಕೊರಟಗೆರೆ ಕ್ಷೇತ್ರದಲ್ಲಿ ಹುಟ್ಟಿ ಹರಿಯುವ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ 175ಕ್ಕೂ ಅಧಿಕ ಕೆರೆ-ಕಟ್ಟೆಗಳು ಭರ್ತಿಯಾಗಿವೆ. 25ವರ್ಷಗಳ ನಂತರ ಮಾವತ್ತೂರು ಕೆರೆಯ ಕೋಡಿ ಬಿದ್ದಿರುವ ಪರಿಣಾಮ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮತ್ತೊಂದು ಕಡೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಪರಿಣಾಮ ಗ್ರಾಮೀಣ ಪ್ರದೇಶದ ರೈತರಿಗೆ ಸಮಸ್ಯೆ ಎದುರಾಗಿದೆ. ಗ್ರಾಮೀಣ ಪ್ರದೇಶದ ತೋಟದ ಮನೆಗಳಲ್ಲಿ ವಾಸಿಸುತ್ತೀರುವ ರೈತರಿಗೆ ಈಗಾಗಲೇ ಸಂಕಷ್ಟ ಎದುರಾಗಿದೆ. ಮತ್ತೆ ಮಳೆಯಾದರೇ ಅನಾಹುತ ಎದುರಾಗುವ ಸಾಧ್ಯತೆಯೇ ಹೆಚ್ಚಾಗಿದೆ. ರೈತಾಪಿವರ್ಗ ತೋಟದ ಮನೆಗಳನ್ನು ತೊರೆದು ಗ್ರಾಮಗಳಿಗೆ ಆಗಮಿಸುವಂತೆ ಈಗಾಗಲೇ ಕಂದಾಯ, ಪೊಲೀಸ್ ಇಲಾಖೆ ಮತ್ತು ಗ್ರಾಪಂ ಅಧಿಕಾರಿವರ್ಗ ಮನವಿ ಮಾಡಿದೆ. ಮಳೆರಾಯನ ಆರ್ಭಟದಿಂದ ಸಂಕಷ್ಟ ಎದುರಾಗಿರುವ…
ತುರುವೇಕೆರೆ: ತಾಲ್ಲೂಕಿನ ಕಲ್ಲೂರು ಕ್ರಾಸ್ ರಸ್ತೆಯಲ್ಲಿ ಕೊಂಡಜ್ಜಿ ಕ್ರಾಸ್ ಹತ್ತಿರ ಸೂಪ್ಪನಹಳ್ಳಿ ಹಳ್ಳದಲ್ಲಿ ಹರಿಯುತ್ತಿರುವ ನೀರಿನ ರಭಸಕ್ಕೆ ಮಾರುತಿ ಓಮ್ನಿ ಕಾರು ಕೊಚ್ಚಿ ಕೊಂಡು ಹೋದ ಘಟನೆ ನಡೆದಿದೆ. ಘಟನೆ ವೇಳೆ ಕಾರಿನಲ್ಲಿದ್ದ 70 ವರ್ಷ ವಯಸ್ಸಿನ ಪಟೇಲ್ ಕುಮಾರಯ್ಯ ಎಂಬವರು ನೀರು ಪಾಲಾಗಿದ್ದು, ಚಾಲಕ ಸೇರಿದ್ದಂತೆ ಇಬ್ಬರನ್ನು ದಾರಿ ಹೋಕರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಕೊಚ್ಚಿ ಹೋಗಿರುವ ವೃದ್ಧನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಈವರೆಗೆ ಕಾರೂ ಕೂಡ ಪತ್ತೆಯಾಗಿಲ್ಲ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಗುಬ್ಬಿ: ತಾಲೂಕಿನ ಅಂಕಸಂದ್ರ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿ ಮುಂಬಡ್ತಿ ಹೊಂದಿದ ಡಾ.ಎಸ್.ಕೃಷ್ಣಪ್ಪ ವಿದ್ಯಾರ್ಥಿನಿಯರ ಮೆಚ್ಚಿನ ಶಿಕ್ಷಕರಾಗಿದ್ದು, ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿನಿಯರು ಶಿಕ್ಷಕರನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ಘಟನೆ ಎಂಪ್ರೆಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ. ನಿರಂತರ 22 ವರ್ಷಗಳಿಂದ ನಗರದ ಎಂಪ್ರೆಸ್ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಡಾ.ಕೃಷ್ಣಪ್ಪ ಅವರು ಇತ್ತೀಚೆಗಷ್ಟೇ ಹಂಪಿ ವಿವಿಯಿಂದ ಪಿ.ಹೆಚ್.ಡಿ. ಪದವಿ ಪಡೆದಿದ್ದರು. ಶಿಕ್ಷಕರ ಅತ್ಯಂತ ಸರಳ ಹಾಗೂ ಪ್ರಾಮಾಣಿಕ ಶಿಕ್ಷಕರೆಂದು ಇಲಾಖೆಯಲ್ಲಿ ಕೃಷ್ಣಪ್ಪ ಗುರುತಿಸಿಕೊಂಡಿದ್ದರು. ಶಾಲೆಯಿಂದ ಬೀಳ್ಕೊಡುವ ಸಂದರ್ಭದಲ್ಲಿ ಶಿಕ್ಷಕರನ್ನು ಹೋಗ ಬೇಡಿ ಸರ್ ಎಂದು ತಬ್ಬಿಕೊಂಡು ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯರು ಹಾಗೂ ಶಾಲೆಯ ಸಹೋದ್ಯೋಗಿಗಳು ಕಣ್ಣೀರು ಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ರಾಜ್ಯದ ಜನರ ವಿಶ್ವಾಸ ಕಳೆದು ಕೊಂಡಿರುವ ಕಾಂಗ್ರೆಸ್ ಪಕ್ಷವೂ ಶೀಘ್ರದಲ್ಲೇ ವಸ್ತು ಸಂಗ್ರಹಾಲಯವಾಗಿ ಬದಲಾಗಲಿದೆ ಎಂದು ಸಚಿವ ಅಶ್ವತ್ಥ ನಾರಾಯಣ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಪ್ರತಿಯೊಬ್ಬ ನಾಯಕನಿಗೂ ಅಧಿಕಾರದ ದುರಾಸೆಯಿದೆ. ಹೀಗಾಗಿ ಕಾಂಗ್ರೆಸ್ ಸದ್ಯ ಒಡೆದ ಮನೆಯಾಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರು ರಾಜಕೀಯದಿಂದ ನಿವೃತ್ತಿ ಹೊಂದಬೇಕು ಮತ್ತು ಇತರರನ್ನು ಆಶೀರ್ವದಿಸುತ್ತಾ ಕುಳಿತುಕೊಳ್ಳಬೇಕು ಎಂದು ಸಚಿವರು ಹೇಳಿದರು. ಕಾಂಗ್ರೆಸ್ ನಾಯಕರು ತೋರಿಕೆಗೆ ಮಾತ್ರ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ ಎಂದು ಇದೇ ವೇಳೆ ಅಶ್ವತ್ಥ ನಾರಾಯಣ ಆರೋಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ : ಮಳೆರಾಯನ ಆರ್ಭಟದಿಂದ ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಪಾತ್ರದ ಸೇತುವೆಗಳು ಜಲಾವೃತ ಆಗಿದೆ. ಕೊರಟಗೆರೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಬಹುತೇಕ ಮಣ್ಣಿನ ಮನೆಗಳು ಕುಸಿದಿವೆ. ರೈತಾಪಿವರ್ಗ ಬಿತ್ತನೆ ಮಾಡಿದ್ದ ಸಾವಿರಾರು ಎಕರೇ ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಬೆಳೆಗಳು ನೀರಿನಲ್ಲಿ ಮುಳುಗಿ ರೈತರಿಗೆ ಕೋಟ್ಯಾಂತರ ರೂ ನಷ್ಟವಾಗಿದೆ. ಕೊರಟಗೆರೆ ಕ್ಷೇತ್ರದ ಜಯಮಂಗಲಿ, ಸುವರ್ಣಮುಖಿ ಮತ್ತು ಗರುಡಾಚಲ ನದಿಗಳು 25ವರ್ಷಗಳ ನಂತರ ಮತ್ತೇ ಸಂಗಮವಾಗಿವೆ. ವೀರಸಾಗರ ಮತ್ತು ಚೀಲಗಾನಹಳ್ಳಿ ಗ್ರಾಮವೇ ಜಲಾವೃತವಾಗಿ ಮನೆಯಲ್ಲಿದ್ದ ದವಸದಾನ್ಯಗಳು ನೀರಿನಲ್ಲಿ ಮುಳುಗಿ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಯ ಸಹಾಯದಿಂದ ತೋಟದಲ್ಲಿನ ರೈತರನ್ನು ರಕ್ಷಣೆ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದಲ್ಲಿ ರೈತರು ಬಿತ್ತನೆ ಮಾಡಲಾಗಿದ್ದ ಕೃಷಿ ಬೆಳೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ನೂರಾರು ಮನೆಗಳು ನೆಲಸಮ ಆಗಿವೆ. ಮನೆಯಲ್ಲಿದ್ದ ಧಾನ್ಯಗಳು ನಾಶವಾಗಿವೆ. ಹೂವಿನ ಬೆಳೆಗಳು ನೀರಿನಲ್ಲಿ ಮುಳುಗಿವೆ. ತೋಟಗಳಲ್ಲಿ 5ಅಡಿಗೂ ಅಧಿಕ ನೀರು ನಿಂತಿದೆ.…
ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಮಕೂರಿನ ಹಿಂದೂಪುರ ಮಾರ್ಗದ ಸೇತುವೆ ಜಲಾವೃತವಾಗಿದ್ದು, ಹಿಂದೂಪುರದಿಂದ ವೆಂಕಟಾಪುರ ಮಾರ್ಗವಾಗಿ ಪಾವಗಡಕ್ಕೆ ಬರುತ್ತಿದ್ದ ಬಸ್ಸೊಂದು ನೀರಿನ ಮಧ್ಯೆ ಸಿಲುಕಿದ ಘಟನೆ ನಡೆಯಿತು. ಸೇತುವೆ ಮೇಲೆ ಬಂದಿದ್ದ ಬಸ್ ನೀರಿನ ವೇಗದಿಂದಾಗಿ ಮುಂದಕ್ಕೆ ಚಲಿಸಲು ಸಾಧ್ಯವಾಗದೇ ಸ್ಥಳದಲ್ಲೇ ನಿಂತಿದೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ್ರವಾಗಿ ಆತಂಕಗೊಂಡರು. ತಕ್ಷಣವೇ ವೆಂಕಟಾಪುರ ಗ್ರಾಮಸ್ಥರು ಹಗ್ಗದ ಸಹಾಯದಿಂದ ಸೇತುವೆ ಮೇಲೆ ನಿಂತ ಬಸ್ನಿಂದ ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ. ನೀರಿನ ನಡುವೆ ಸಿಲುಕಿದ್ದ ಬಸ್ಸನ್ನು ಮತ್ತೊಂದು ಖಾಸಗಿ ಬಸ್ ಸಹಾಯದಿಂದ ಸೇತುವೆ ಮೇಲಿದ್ದ ಬಸ್ ಅನ್ನು ಹೊರಕ್ಕೆ ತೆಗೆಯಲಾಗಿದೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ದಾವಣಗೆರೆ: ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿದ್ದರಾಮೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ನ ಅಧ್ಯಕ್ಷರಾಗಿದ್ದಾರೆ. ಅನೇಕ ಬಾರಿ ವಿರೋಧ ಪಕ್ಷದವರು ಜನರಿಗೆ ತಪ್ಪು ಮಾಹಿತಿಯನ್ನು ಕೊಡುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ದೊಡ್ಡ ಬಿರುಕಿದೆ ಅಂತ. ಈ 75ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಕ್ಕೆ ಡಿ.ಕೆ.ಶಿವಕುಮಾರ್ ಅವರ ವಿರೋಧವಿದೆ ಅಂತ ಅಪಪ್ರಚಾರ ಮಾಡಿದ್ರು, ಆದರೆ ನಾನು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕರ್ನಾಟಕದಲ್ಲಿ ಒಂದು ಭ್ರಷ್ಟ, ಕೋಮುವಾದಿ ಸರ್ಕಾರ ಇದೆ. ಈ ಭ್ರಷ್ಟ, ಕೋಮುವಾದಿ ಸರ್ಕಾರವನ್ನು ಕಿತ್ತೊಗೆದು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಮಧುಗಿರಿ: ಮಳೆ ಹಾನಿ ಪೀಡಿತ ಸ್ಥಳಗಳಿಗೆ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಹಾಗೂ ತಹಸೀಲ್ದಾರ್ ಸುರೇಶ್ ಆಚಾರ್ ತೆರಳಿ ಗ್ರಾಮವಾಸಿಗಳ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ,. ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಬಗ್ಗೆ ಮತ್ತು ಕಡಿತಗೊಂಡ ರಸ್ತೆಗಳ ಸಂಪರ್ಕದ ಬಗ್ಗೆ ಪರಿಶೀಲನೆ ನಡೆಸಿ, ಜಲಾವೃತಗೊಂಡ ಮನೆಗಳಲ್ಲಿ ಸಿಲುಕಿದ ಗ್ರಾಮ ವಾಸಿಗಳನ್ನು ರಕ್ಷಿಸಿದರು. ಈ ಬಗ್ಗೆ ಅಧಿಕಾರಿಗಳು ಮಾಧ್ಯಮದೊಂದಿಗೆ ಮಾತನಾಡಿ , ಸಾರ್ವಜನಿಕರು ಹಳ್ಳ-ಕೊಳ್ಳ ಕೆರೆ-ಕಟ್ಟೆ ಹರಿಯುತ್ತಿರುವ ನದಿಯ ದಡಕ್ಕೆ ಯಾರು ಸಹ ಇಳಿಯಬಾರದು. ಮುಖ್ಯವಾಗಿ ಮಕ್ಕಳನ್ನು ಈ ಸಮಯದಲ್ಲಿ ಹರಿಯುತ್ತಿರುವ ನೀರಿನ ಹತ್ತಿರ ಹೋಗದಂತೆ ತಡೆಯಬೇಕು ಎಂದು ಎಚ್ಚರಿಸಿದರು. ಸತತವಾಗಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳು ತುಂಬಿದ್ದು , ಜಯಮಂಗಲಿ ನದಿ ಮೈದುಂಬಿ ಹರಿಯುತ್ತಿದ್ದು , ಇದರಿಂದ ತಗ್ಗುಪ್ರದೇಶದ ಗ್ರಾಮಗಳಿಗೆ ನೀರು ನುಗ್ಗಿ ಜಲವೃತವಾಗಿದೆ. ಇದರಿಂದ ಅಪಾರ ಹಾನಿಯಾಗಿದೆ ಎಂದು ತಿಳಿಸಿದರು. ಮಳೆಯಿಂದಾಗಿ ಗ್ರಾಮಗಳಿಗೆ ನೀರು ನುಗ್ಗಿ ಜಲಾವೃತಗೊಂಡರೆ ಗ್ರಾಮವಾಸಿಗಳು ತಕ್ಷಣ ತಾಲೂಕು ಅಧಿಕಾರಿಗಳಾದ ತಹಸೀಲ್ದಾರ್, ತಾಲೂಕು ಪಂಚಾಯಿತಿ ಇ ಒ. ಸಂಬಂಧಪಟ್ಟ ಗ್ರಾಮಗಳ…
ಚಿತ್ರದುರ್ಗ: ಇಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಉತ್ಸವದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸಂಸದ ರಾಹುಲ್ ಗಾಂಧಿ, ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಶ್ರೀಗಳ ಆಶೀರ್ವಾದ ಪಡೆದು ಕೊಂಡರು. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಅವರ ಮಾತನ್ನು ಅರ್ಧಕ್ಕೆ ತಡೆದಿದ್ದಾರೆ ಎನ್ನಲಾಗಿದೆ. ಇನ್ನೂ ಸಿದ್ದರಾಮಯ್ಯಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz