Author: admin

ವಿಜಯಪುರ: ರಾಜಕೀಯವಾಗಿ ನನ್ನನ್ನು ಮುಗಿಸಲು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮಾತು ಕೇಳಿ ಕೆಲ ಮಾಧ್ಯಮಗಳು ವ್ಯವಸ್ಥಿವಾಗಿ ಅಪಪ್ರಚಾರ ಮಾಡಿದವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ನನ್ನನ್ನು ಮುಗಿಸಲು, ಬಿಜೆಪಿ ಪಕ್ಷದ ಸನ್ಮಾನ್ಯ ಉಪಾಧ್ಯಕ್ಷ ವಿಜಯೇಂದ್ರನ ಮಾತು ಕೇಳಿ, ಕೊಟ್ಟ ಪ್ರಸಾದ ಸ್ವೀಕರಿಸಿ, ಕೇಂದ್ರದವರು 2500 ಕೋಟಿ ರೂ. ಕೇಳಿದ್ದಾರೆಂದು ನನ್ನ ಝೀರೋ ಮಾಡುವುದಕ್ಕಾಗಿ ಕೆಲ ದೃಶ್ಯಮಾಧ್ಯಮಗಳು ವ್ಯವಸ್ಥಿವಾಗಿ ಅಪಪ್ರಚಾರ ಮಾಡಿದವು ಎಂದರು. ದೆಹಲಿಯಿಂದ ಈಗಲೂ ಓರ್ವ ಸ್ವಾಮೀಜಿ 1,500 ಕೋಟಿ ರೂ. ಕೂಡಿಸಿಕೊಂಡು ದೆಹಲಿ ಬನ್ನಿ. ನಿಮ್ಮನ್ನು ಜೆ.ಪಿ.ನಡ್ಡಾ, ಮೋದಿ ಅವರ ಭೇಟಿಗೆ ಸಮಯ ನಿಗದಿ ಮಾಡುತ್ತೇನೆ ಅಂತೆಲ್ಲ ಹೇಳುತ್ತಾರೆ. ಇಂಥದ್ದನ್ನೆಲ್ಲ ನಂಬಬೇಡಿ ಎಂದಿದ್ದೇನೆ. ಇಂಥವರ ಮಾತು ನಂಬಿಕೊಂಡು ಹಲವರು ಭಾರಿ ಪ್ರಮಾಣದ ಹಣ ಕಳೆದುಕೊಂಡು ಸಂಕಷ್ಟ ಅನುಭವಿಸಿದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಸಿದ್ಧರಾಮಯ್ಯ ಹಿಂದುಳಿದ ವರ್ಗದವರ ಭಿಕ್ಷೆಯಲ್ಲಿ ಸಿಎಂ ಆದವರು. ಆದರೆ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲ್,  ಎರಡು ತಂಡವಾಗಿ ಜನ ಸಂಕಲ್ಪಯಾತ್ರೆ ಮಾಡುತ್ತೇವೆ.  ಸರ್ಕಾರ ಎರಡು ಸಮುದಾಯದ ಬೇಡಿಕೆ ಈಡೇರಿಸಿದೆ. ಸಿದ್ಧರಾಮಯ್ಯ   ಅಹಿಂದ ನಾಯಕ ಎನ್ನುತ್ತಾರೆ. ಆದರೆ  ಹಿಂದುವಳಿದ ವರ್ಗದವರ ನ್ಯಾಯ ಕೊಡಿಸಲಿಲ್ಲ. ಸಿದ್ಧರಾಮಯ್ಯ ಅವಧಿಯಲ್ಲಿ ಮೀಸಲಾತಿ ಕೊಡಲಿಲ್ಲ. ಈಗ ಮೀಸಲಾತಿ ವಿರೋಧಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ ಎಂದು ಕುಟುಕಿದರು. ನಾವು  ಕೆಲಸ ಮಾಡಿದ್ದೇವೆ ಕ್ರೆಡಿಟ್ ತೆಗೆದುಕೊಳ್ಳುತ್ತೇವೆ. ಭ್ರಷ್ಟಾಚಾರ ಶುರು ಮಾಡಿದ್ದೇ.  ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅಕ್ಟೋಬರ್ 21ರಂದು ನಡೆಯುವ ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಗೆ ಆಗಮಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಡಾ.ರಾಜ್ ಕುಟುಂಬ ಆಹ್ವಾನ ನೀಡಿತು. ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಆಗಿದ್ದು,  ಸಖತ್​ ಸದ್ದು ಮಾಡುತ್ತಿದೆ.  ಅಕ್ಟೋಬರ್ 21ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದ್ದು  ಪುನೀತ್ ರಾಜ್ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​, ಹಿರಿಯ ನಟ ರಾಘವೇಂದ್ರ ರಾಜ್​ಕುಮಾರ್​, ಯುವ ರಾಜ್​ಕುಮಾರ್​ ಇಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ಸಿನಿಮಾದ ರೀತಿ ಚಿತ್ರಮಂದಿರದಲ್ಲೇ  ಗಂಧದಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅ.21ರಂದು ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ವಿನಂತಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​’ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ‘ಪುನೀತ ಪರ್ವ’ ಎಂದು ಕರೆಯಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಮಧುಗಿರಿ : ಗಂಡ ಹೆಂಡತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಗಂಡನೇ ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಷ್ಪಲತಾ (24) ಕೊಲೆಯಾದ ಮಹಿಳೆ. ಕೂಲಿಯ ಹಣದ  ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿಯ ನಡುವೆ ಮಾತಿಗೆ ಮಾತು ಬೆಳೆದಿದ್ದು, ಜಗಳ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಗಂಡ ರಾಮಾಂಜನೇಯ ತನ್ನ ಹೆಂಡತಿಯ ಮೇಲೆ ಮಚ್ಚಿನಿಂದ ಬೀಸಿದ್ದು, ಹೆಂಡತಿ ಮನೆಯಲ್ಲಿಯೇ ಮೃತಪಟ್ಟಿದ್ದು ಗಂಡ ರಾಮಾಂಜನೇಯ ತಲೆಮರೆಸಿಕೊಂಡಿದ್ದಾನೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರನ್ನು ಕರ್ನಾಟಕದ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೊಲಿಜಿಯಂ ಸೆಪ್ಟೆಂಬರ್ 28 ರಂದು ನ್ಯಾಯಮೂರ್ತಿ ವರಾಳೆ ಅವರ ಉನ್ನತಿ ಶಿಫಾರಸು ಮಾಡಿತ್ತು. ನ್ಯಾ. ವರಾಳೆ ಅವರು 1962 ಜೂನ್ 23ರಂದು ಜನಿಸಿದ್ದು, 1985ರ ಆಗಸ್ಟ್ 12 ರಂದು ವಕೀಲರಾಗಿ ಸೇವೆ ಆರಂಭಿಸಿದರು. ಬಳಿಕ 1990ರಿಂದ 1992ರವರೆಗೆ ಔರಂಗಾಬಾದ್​ ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ, ಹೈಕೋರ್ಟ್ ಪೀಠಿದಲ್ಲಿ ಸೇವೆ ಸಲ್ಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅವಳಿ ಮಕ್ಕಳಿಗೆ ಪೋಷಕರಾಗಿರುವ ನಯನತಾರಾ- ವಿಘ್ನೇಶ್ ಶಿವನ್ ದಂಪತಿಗಳಿಗೆ ಇದೀಗ ತಮಿಳುನಾಡು ಸರ್ಕಾರ ಶಾಕ್ ನೀಡಿದೆ. ನಟಿ ನಯನತಾರ ಹಾಗೂ ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಮೂಲಕ ತಾವು ಪೋಷಕರಾಗುತ್ತಿರುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಾದ ಬೆನ್ನಲ್ಲೆ ತನಿಖೆಗೆ ಸರಕಾರ ಆದೇಶಿಸಿದೆ. ಅಂದಹಾಗೆ ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಮೂವರು ಕೆಎಎಸ್ ಅಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನು ನೇಮಿಸಿ ಆದೇಶ ಹೊರಡಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೆ. ಶಾಂತಲಾ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಹೇಶ್ ಬಾಬು, ಗುಲ್ಬರ್ಗ ವಿವಿಗೆ ಡಾ. ಬಿ.ಶರಣಪ್ಪ ಅವರನ್ನು ಕುಲಸಚಿವರಾಗಿ ನೇಮಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಜಾರ್ಖಂಡ್: ವಿಶ್ವವಿದ್ಯಾಲಯದ ಎಡವಟ್ಟಿನಿಂದಾಗಿ ವಿದ್ಯಾರ್ಥಿನಿ ಹಾಲ್​ ಟಿಕೆಟ್​ ನಲ್ಲಿ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಚಿತ್ರದ ಫೋಟೋ ಲಗತ್ತಿಸಲಾಗಿದೆ. ಇದನ್ನು ಕಂಡು ವಿದ್ಯಾರ್ಥಿನಿಯೇ ಆಶ್ಚರ್ಯ ಚಕಿತರಾಗಿದ್ದಾರೆ. ಜಾರ್ಖಂಡ್​ ನ ಬಿನೋದ್ ಬಿಹಾರಿ ಮಹ್ತೊ ಕೊಯಲಾಂಚಲ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಮುಂದಿನ ವಾರ ನಡೆಯುವ ಪರೀಕ್ಷೆಗಾಗಿ ಆನ್​ಲೈನ್​ನಲ್ಲಿ ಹಾಲ್​ ಟಿಕೆಟ್​ ಪಡೆದಿದ್ದಾರೆ. ತಮ್ಮ ಚಿತ್ರದ ಜಾಗದಲ್ಲಿ ಐಶ್ವರ್ಯಾ ರೈ ಫೋಟೋ ಕಂಡು ವಿದ್ಯಾರ್ಥಿನಿ ಶಾಕ್ ಆಗಿದ್ದಾರೆ. ಈ ಬಗ್ಗೆ ಕುಲಪತಿಗಳಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿನಿ ನೀಡಿದ ಮಾಹಿತಿಯ ಮೇಲೆ ಹಾಲ್​ ಟಿಕೆಟ್​ ಸಿದ್ಧಪಡಿಸಲಾಗಿರುತ್ತದೆ. ಐಶ್ವರ್ಯಾ ರೈ ಅವರ ಚಿತ್ರ ಬರುವಂತೆ ಮಾಡಿದ್ದು, ವಿವಿಯ ಹೆಸರು ಕೆಡಿಸಲು ಯಾರೋ ಸಂಚು ರೂಪಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಕುಲಪತಿ ತಿಳಿಸಿದ್ದಾರೆ. ಇನ್ನು, ವಿದ್ಯಾರ್ಥಿನಿ ಹಾಲ್​ ಟಿಕೆಟ್​ ನಲ್ಲಿ ಚಿತ್ರ ತಪ್ಪಾಗಿ ಮುದ್ರಿತವಾಗಿದ್ದು, ತಾವು ಪರೀಕ್ಷೆಯಿಂದ ಹೊರಬೀಳುವ ಆತಂಕದಲ್ಲಿದ್ದಾರೆ. ಆದರೆ, ವಿದ್ಯಾರ್ಥಿನಿಗೆ ತೊಂದರೆಯಾಗದಂತೆ ತಾಂತ್ರಿಕ ದೋಷ ಸರಿಪಡಿಸಲಾಗುವುದು ಎಂದು ವಿವಿ ಸಿಬ್ಬಂದಿ…

Read More

ನವದೆಹಲಿ: ಸ್ವಿಸ್ ಬ್ಯಾಂಕ್‌ ನಲ್ಲಿ ಭಾರತೀಯರ ಹಣದ ಮಾಹಿತಿ ಹಾಗೂ ಖಾತೆದಾರರ ನಾಲ್ಕನೇ ವಿವರvನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ. ವೈಯುಕ್ತಿಕ ವ್ಯಕ್ತಿಗಳ ಖಾತೆ, ಕಾರ್ಪೋರೇಟ್, ಟ್ರಸ್ಟ್ ಖಾತೆ ಸೇರಿದಂತೆ 100ಕ್ಕೂ ಹೆಚ್ಚು ಖಾತೆದಾರರ ಮಾಹಿತಿಯನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ. ವಾರ್ಷಿಕ ಮಾಹಿತಿ ವಿನಿಮಿಯ ನೀತಿ ಅಡಿಯಲ್ಲಿ ಸ್ವಿಸ್ ಬ್ಯಾಂಕ್ 101 ದೇಶಗಳ 34 ಲಕ್ಷ ಖಾತೆಗಳ ಮಾಹಿತಿಯನ್ನು ಆಯಾ ದೇಶಕ್ಕೆ ನೀಡಿದೆ. ಫೆಡರಲ್ ಟ್ಯಾಕ್ಸ್ ಅಡ್ಮಿನಿಸ್ಟ್ರೇಷನ್ ನೀಡಿದ ಮಾಹಿತಿಯ ಪ್ರಕಾರ, ಭಾರತೀಯರ ಉಳಿತಾಯ ಖಾತೆಯ ಠೇವಣಿ 4,800 ಕೋಟಿ ರು.ಗಳಿಗೆ ಏರಿಕೆಯಾಗಿದೆ. ಇದು ಕಳೆದ 7 ವರ್ಷಗಳ ಗರಿಷ್ಠ. 15.61 ಸಾವಿರ ಕೋಟಿ ರೂ.ಗಳಷ್ಟುಮೌಲ್ಯದ ಬಾಂಡ್‌, ಭದ್ರತೆಗಳನ್ನು ಭಾರತೀಯರ ಗ್ರಾಹಕರ ಹೆಸರಿನಲ್ಲಿ ಸ್ವಿಸ್‌ ಬ್ಯಾಂಕಿನಲ್ಲಿಡಲಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗವು ಉದ್ಧವ್ ಠಾಕ್ರೆ ನೇತೃತ್ವದ ಬಣಕ್ಕೆ ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣಕ್ಕೆ ಬಾಳಾಸಾಹೆಬಂಚಿ ಶಿವಸೇನಾ ಎಂಬ ಹೆಸರನ್ನು ನಿಗದಿಪಡಿಸಿದೆ. ಚುನಾವಣಾ ಸಂಸ್ಥೆಯು ಠಾಕ್ರೆ ನೇತೃತ್ವದ ಶಿವಸೇನಾ ಪಕ್ಷದ ಚಿಹ್ನೆಯಾಗಿ ಉರಿಯುತ್ತಿರುವ ಟಾರ್ಚ್ ನೀಡಿತು. ಆದರೆ, ಶಿಂಧೆ ಬಣಕ್ಕೆ ಪಕ್ಷದ ಚಿಹ್ನೆಯನ್ನು ನೀಡದೆ, ಹೊಸದಾಗಿ ಚಿಹ್ನೆಗಳ ಪಟ್ಟಿಯನ್ನು ನೀಡುವಂತೆ ಅದು ಹೇಳಿದೆ. ಹಿಂದಿನ ದಿನ ಠಾಕ್ರೆ ನೇತೃತ್ವದ ಶಿವಸೇನಾ ಬಣವು ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಸ್ಥಗಿತಗೊಳಿಸುವ ಭಾರತೀಯ ಚುನಾವಣಾ ಆಯೋಗದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಮಹಾರಾಷ್ಟ್ರದಲ್ಲಿ ಮುಂಬರುವ ಉಪಚುನಾವಣೆಯ ದೃಷ್ಟಿಯಿಂದ ಚುನಾವಣಾ ಆಯೋಗ, ಶಿವಸೇನಾದ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ತಡೆ ಹಿಡಿದು ಪಕ್ಷದ ಠಾಕ್ರೆ ಅವರ ಬಣ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣ ಬಳಸದಂತೆ ನಿರ್ಬಂಧಿಸಿದೆ. ಪಕ್ಷದ ಮೂರು ವಿಭಿನ್ನ ಹೆಸರಿನ…

Read More