Subscribe to Updates
Get the latest creative news from FooBar about art, design and business.
- ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
- ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
- ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
- ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
- ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
- ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
- ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
- ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್ ಗಳ ಕ್ಯೂ!
Author: admin
ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ಕುಮಾರಸ್ವಾಮಿ ಲೇಔಟ್ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಹಿತಾಶ್ವ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ ಶರತ್ ಲೋಹಿತಾಶ್ವ, ‘ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಯಾವ ರೀತಿ ಸ್ಪಂದನೆ ಮಾಡ್ತಾರೆ ಅನ್ನೋದು ಗೊತ್ತಾಗಬೇಕಿದೆ’ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಮೂರು ಕಾರುಗಳು ಹಾಗೂ ಒಂದು ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿ, ತಾಯಿ ಹಾಗೂ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಹತ್ತಿರ ರವಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಲಹೊಂಗಲ ತಾಲೂಕಿನ ಭಾರತಿ (28) ಹಾಗೂ ವೇದಾಂತ ಪೂಜೇರಿ (6) ಇವರಿಬ್ಬರು ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಇವರು ದ್ವಿಚಕ್ರ ವಾಹನ ಮೇಲೆ ಸಂಚರಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡು ಕಾರು ಘಟಪ್ರಭಾದಿಂದ ಹುಕ್ಕೇರಿ ಕಡೆ ಬರುತ್ತಿದ್ದವು ಒಂದು ಕಾರು ಗೋಕಾಕದಿಂದ ಹುಕ್ಕೇರಿ ಕಡೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ ಎಂದು ಸಚಿವ ಶ್ರೀರಾಮಲು ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ದ್ವಾಪರಯುಗದಲ್ಲಿ ನಮ್ಮ ಸಮಾಜದ ಹಿಂದೆ ಶ್ರೀರಾಮಚಂದ್ರ ನಿಂತಿದ್ದರು. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಮುಖ್ಯಮಂತ್ರಿ ಬೊಮ್ಮಾಯಿ ನಿಂತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಅಂದು ನಾನು ಅವತ್ತೇ ಹೇಳಿದ್ದೆ. ಮೀಸಲಾತಿ ಹೆಚ್ಚಳ ಮಾಡುತ್ತೇನೆ ಎಂದು ಅದು ಈಗ ಈಡೇರಿದೆ ಎಂದರು. ಮೀಸಲಾತಿ ಕೊಡಲು ನಮ್ಮ ಸರ್ಕಾರ ಬರಬೇಕು ಅಂದಿದ್ದೆ. ಆದರೆ ನನ್ನನ್ನು ಕೆಲವರು ಗೇಲಿ ಮಾಡಿದರು. ಆದರೂ ತಾಳ್ಮೆಯಿಂದ ಇದ್ದಿದ್ದಕ್ಕೆ ನಮ್ಮ ಸಮಾಜಕ್ಕೆ ಫಲ ಸಿಕ್ಕಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂದೂ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಸಿಪಿಐ ಕರೆಪ್ಪ ಬನ್ನೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 6 ರಂದು ಗಣಪತಿ ಮೆರವಣಿಗೆ ವೇಳೆ ಸಿಪಿಐ, ಬೇಗ ಗಣೇಶ ಮೆರವಣಿ ಸಾಗಿಸಿ ಎಂದು ಹೇಳಿದ್ದಕ್ಕೆ ಸಿಪಿಐ ಸೇರಿದಂತೆ ಇಬ್ಬರು ಕಾನ್ಸ್’ಟೇಬಲ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಸಿಪಿಐ ಕರೆಪ್ಪ ಬನ್ನೆ ಈ ಆರು ಮಂದಿಗೆ ಜೈಲಿನಲ್ಲಿ ಟಾರ್ಚರ್ ನೀಡಿದ್ದರು ಎಂದು ಹಿಂದೂ ಜಾಗರಣಾ ವೇದಿಕೆ ಕೆರೂರು ಚಲೋ ಪ್ರತಿಭಟನೆ ನಡೆಸಿದ್ದರು. ಸುಳ್ಳು ಪ್ರಕರಣ ದಾಖಲಿಸಿದ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಸಿಪಿಐ ಕರೆಪ್ಪ ಬನ್ನೆ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ನವದೆಹಲಿ : ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಬಣಗಳಿಗೆ ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಬಳಸಬಾರದೆಂದು ಕೇಂದ್ರ ಚುನಾವಣಾ ಆಯೋಗವು ತಾತ್ಕಾಲಿಕ ಆದೇಶ ನೀಡಿದೆ. ಈ ನಿರ್ಣಯ ಮಹಾರಾಷ್ಟ್ರದ ರಾಜ್ಯ ರಾಜಕಾರಣದಲ್ಲಿ ಇದು ಒಂದು ಮಹತ್ವದ ಎಂದೇ ಭಾವಿಸಲಾಗುತ್ತಿದೆ. 25 ವರ್ಷಗಳ ಹಳೆಯ ಮೈತ್ರಿ ಬಿಜೆಪಿ ಪಕ್ಷ ಮತ್ತು ಶಿವಸೇನೆ ಮೈತ್ರಿಯನ್ನು ಮುರಿದು ರಾಷ್ಟ್ರವಾದಿ ಕಾಂಗ್ರೆಸ್, ಕಾಂಗ್ರೆಸ್ ಪಕ್ಷ, ಮತ್ತು ಶಿವಸೇನೆ ಮಹಾ ಘಟಬಂಧನ್ ರಚಿಸಿ ಮಹಾರಾಷ್ಟ್ರದಲ್ಲಿ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಶಿವಸೇನೆಯ ತನ್ನ ಆಂತರಿಕ ಭಿನ್ನಮತದಿಂದಾಗಿ ಪಕ್ಷ ವಿಭಾಗವಾಯಿತು. 52 ಶಾಸಕರ ಹೊಂದಿದ್ದ ಶಿವಸೇನೆ 40 ಶಾಸಕರು ಜೊತೆ ಸೇರಿ ಏಕನಾಥ್ ಶಿಂಧೆ ಪಕ್ಷದಲ್ಲಿ ಬಂಡಾಯವೆದ್ದು ಬಿಜೆಪಿ ಪಕ್ಷದ ಬೆಂಬಲ ಪಡೆದು ಸರ್ಕಾರ ರಚನೆ ಮಾಡಿದರು. ಮುಖ್ಯಮಂತ್ರಿ ಆಗಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಆ ಬಳಿಕ ರಾಜಕೀಯ ಬೆಳವಣಿಗಳಲ್ಲಿ ಶಿಂಧೆ ಬಣ ಹಾಗೂ ಠಾಕ್ರೆ ಬಣ ಶಿವಸೇನೆ ಪಕ್ಷದ ಮಾಲೀಕತ್ವದ…
ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನ.22 1939ರಲ್ಲಿ ಜನಿಸಿದ ಅವರು, ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಜನರ ಮನಸ್ಸಿನಲ್ಲಿ ದಶಕಗಳ ಕಾಲ ಅಚ್ಚಳಿಯದೆ ಉಳಿದಿದ್ದು, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಮುಲಾಯಂ ಸಿಂಗ್ ಯಾದವ್ ಹಿನ್ನೆಲೆ: ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫೈ ಗ್ರಾಮದ ಸಾಧಾರಣ ಕುಟುಂಬದಲ್ಲಿ ನ.22, 1939 ಜನಿಸಿದರು. ಆಗ್ರಾ ವಿವಿಯಿಂದ M.A ಪದವಿ ಪಡೆಯುವ ಅವರು, ಲೋಹಿಯಾ & ರಾಜ್ ನಾರಾಯಣ್ ರಂತಹ ಮಹಾನಾಯಕರ ಮಾರ್ಗದರ್ಶನದಲ್ಲಿ 1967ರಲ್ಲಿ ಉತ್ತರಪ್ರದೇಶ ವಿಧಾನಸಭೆಗೆ ಚುನಾಯಿತರಾದರು. ಕಾಲಾನಂತರದಲ್ಲಿ ಸಮಾಜವಾದಿ ಪಕ್ಷವನ್ನು ಕಟ್ಟಿದರು. ಮೂರು ಬಾರಿ ಸಿಎಂ ಆಗಿಯೂ ಆಯ್ಕೆಯಾದರು. 1996ರಲ್ಲಿ ಲೋಕಸಭೆಗೆ ಆಯ್ಕೆಯಾದ ಅವರು ರಕ್ಷಣಾ ಸಚಿವರಾಗಿಯು ಕಾರ್ಯನಿರ್ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಮಧುಗಿರಿ: ಶಾಸಕ ಎಂ.ವಿ.ವೀರಭದ್ರಯ್ಯ ಅವರನ್ನೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಲು ಮಧುಗಿರಿ ಕ್ಷೇತ್ರದಿಂದ ಕಾರ್ಯಕರ್ತರು ಹಾಗೂ ಎಂ.ವಿ.ವೀರಭದ್ರಯ್ಯ ಅಭಿಮಾನಿಗಳು ಸಹಸ್ರಾರು ವಾಹನಗಳಲ್ಲಿ ಭಾನುವಾರ ಬೆಂಗಳೂರಿಗೆ ತೆರಳಿದರು. ಕ್ಷೇತ್ರದ ವಿವಿಧ ಗ್ರಾಮಗಳಿಂದ ವಾಹನಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ದಂಡಿನ ಮಾರಮ್ಮ ದೇವಾಲಯದ ಮುಂಭಾಗ ಜಮಾವಣೆಗೊಂಡು ಶಾಸಕ ಎಂ.ವಿ.ವೀರಭದ್ರಯ್ಯ ಅವರೇ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಯಾಗಬೇಕೆಂದು ಆಗ್ರಹಿಸಿ ಜೈ ಕಾರ ಹಾಕಿದರು. ಎಚ್.ಡಿ.ಕುಮಾರಸ್ವಾಮಿ ಅವರು ಈ ವಿಚಾರವಾಗಿ ಸೂಕ್ತ ತೀರ್ಮಾನ ಕೈ ಗೊಂಡರೆ ಕ್ಷೇತ್ರದಲ್ಲಿ ಯಾವುದೇ ಗೊಂದಲ ಉಂಟಾಗುವುದಿಲ್ಲ ಎಂದರು. ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ ಮಾತನಾಡಿ, ಕ್ಷೇತ್ರದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಅವರು ಉತ್ತಮವಾದ ಅಭಿವೃದ್ಧಿ ಕೆಲಸ – ಕಾರ್ಯಗಳನ್ನು ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಂ.ವಿ.ವೀರಭದ್ರಯ್ಯ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಬೇಕು. ಅವರನ್ನು ಗೆಲ್ಲಿಸುವುದಕ್ಕೆ ನಾವೆಲ್ಲರೂ ಶ್ರಮ ಹಾಕಬೇಕೆಂದು ತಿಳಿಸಿದರು. ಮುಖಂಡ ಬಿ.ಎಸ್.ಶ್ರೀನಿವಾಸ ಮಾತನಾಡಿ, ಎಂ.ವಿ.ವೀರಭದ್ರಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವವರೆಗೂ…
ಮಧುಗಿರಿ: ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ತಿಳಿಸಿದರು. ಪಟ್ಟಣದ ಎಂ.ಎಸ್.ರಾಮಯ್ಯ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗದ ಸಮಾವೇಶದ ಪೂರ್ವಭಾವಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇಂದ್ರ ಸರ್ಕಾರದಲ್ಲಿ 27 ಮಂತ್ರಿ ಸ್ಥಾನ ನೀಡುವ ಮೂಲಕ ಹಿಂದುಳಿದ ಸಮುದಾಯ ಅಭಿವೃದ್ಧಿಗೆ ಮುಂದಾಗಿದೆ. ಅ.30ರಂದು ಕಲಬುರ್ಗಿಯಲ್ಲಿ ನಡೆಯುವ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಮಧುಗಿರಿ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಕಾರ್ಯಕರ್ತರು ಬಿಜೆಪಿ ಸರ್ಕಾರಗಳ ಸಾಧನೆಗಳನ್ನು ಜನರಿಗೆ ತಿಳಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು. ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಬಿಜೆಪಿ ಪಕ್ಷ ಜಿಲ್ಲೆಯಲ್ಲಿ ಸದೃಡವಾಗಿ ಬೆಳೆಯುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ 3 ಕ್ಷೇತ್ರವನ್ನು ಗೆಲ್ಲಲು ಪಣ ತೊಡಲಾಗಿದೆ. ಇದಕ್ಕೆ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದರು. ಮಾಜಿ…
ತುರುವೇಕೆರೆ: ‘ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ. ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು. ಆರ್ಥಿಕ ಅಸಮಾನತೆ ಮೂಲಕ ಕೆಲವರು ದೇಶದ ಶ್ರೀಮಂತರಾದರೆ, ಬಹುತೇಕರು ಬಡವರಾಗುತ್ತಿರುವುದರ ವಿರುದ್ಧ. ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯೋಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿರುವುದರ ವಿರುದ್ಧ. ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿರುವುದರ ವಿರುದ್ಧ. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಜನಸಾಮಾನ್ಯರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತ ಐಕ್ಯತಾ ಯಾತ್ರೆ ಭಾಗವಾಗಿ ತುಮಕೂರಿನ ತುರುವೇಕೆರೆಯಲ್ಲಿ ಮಾಧ್ಯಮಗಳ ಜತೆ ರಾಹುಲ್ ಗಾಂಧಿ ಅವರು ಶನಿವಾರ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಜೈರಾಮ್ ರಮೇಶ್, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ…
ಕೊರಟಗೆರೆ: ನೈಸರ್ಗಿಕ ಬಂಡೆಗಳ ಮೇಲೆ ನೂರಾರು ವರ್ಷಗಳಿಂದ ಕೃಷಿ ಉತ್ಪನ್ನಗಳನ್ನು ಶುಚಿ ಮಾಡುತ್ತಿದ್ದ ರೈತರಿಗೆ ಕಳೆದ ಮೂರು ವರ್ಷಗಳಿಂದ ಮದ್ಯದ ಬಾಟಲ್ ನ ಚೂರುಗಳನ್ನು ಸ್ವಚ್ಚಗೊಳಿಸುವುದೇ ತಲೆ ನೋವಾಗಿದೆ. ಕೃಷಿಕರು ತಾವು ಬೆಳೆದ ರಾಗಿ,ತೊಗರಿ,ಜೋಳ ಸೇರಿದಂತೆ ಆಹಾರ ಬೆಳೆಗಳನ್ನು ನೈಸರ್ಗಿಕ ಬಂಡೆಯ ಮೇಲೆ ಶುಚಿ ಮಾಡುತ್ತಿದ್ದರು. ಜಮೀನುಗಳಲ್ಲಿ ಕಣ ಸಿದ್ಧ ಮಾಡುವ ಸಂಪ್ರದಾಯ ಕೈಬಿಟ್ಟ ನಂತರ ಮತ್ತು ರಸ್ತೆ ಮೇಲೆ ಸಂಸ್ಕರಣೆ ಮಾಡಿದರೆ ಶುಚಿಯಾಗಿರುವುದಿಲ್ಲ ಎಂದು ಬಂಡೆಗಳನ್ನೇ ರೈತರು ಅಶ್ರಯಿಸಿದ್ದರು. ಅನಂತರ ಬಂಡೆಗಳ ಮೇಲೆ ಜಾಗ ಕಾಯ್ದಿರಿಸಲು ಕೃಷಿಕರಲ್ಲಿ ಪೈಪೋಟಿ ಪ್ರಾರಂಭವಾಗಿತ್ತು. ತೋವಿನಕೆರೆ ಸಮೀಪ ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ತಿರುವಿನಲ್ಲಿರುವ ಬಂಡೆ ಮೇಲೆ ರಾಗಿ ತೆನೆಗಳನ್ನು ರಾಶಿ ಹಾಕಿ ಶುಚಿ ಮಾಡಲಾಗುತ್ತಿದೆ. ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ಆಲದ ಮರದ ಬಂಡೆ, ಮಲ್ಲಪುಡಿ ಬಂಡೆ, ಓಣಿ ಬಂಡೆ, ಜುಂಜರಾಮನಹಳ್ಳಿ ಬಂಡೆ, ಹೊಲತಾಳುವಿನ ಸೀಬಯ್ಯನ ಬಂಡೆ,ಗೊಲ್ಲರ ಹಟ್ಟಿ ಬಂಡೆ, ನವನಗರ ಬಂಡೆ, ಬಿಕ್ಕೆಗುಟ್ಟೆ ಬಂಡೆಗಳ ಮೇಲೆ ಹಲವು ಟನ್ ಗಳಷ್ಟು ರಾಗಿ,…