Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮ್ಯಾಂಡಸ್ ಚಂಡಮಾರುತ ಉಂಟಾಗಿದ್ದು, ರಾತ್ರಿ 1.30ರ ವೇಳೆಗೆ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಸುಮಾರು 70 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ತಮಿಳುನಾಡಿನ ಚೆಂಗಲ್ ಪೇಟೆ, ನಾಗಪಟ್ಟಣಂ, ಕೊಡೈಕೆನಾಲ್, ಪುದುಚೇರಿ ಸೇರಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು & ಪುದುಚೇರಿ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ಇನ್ನು ಭಾರೀ ಮಳೆ ಪರಿಣಾಮ ನಗರದ ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕಾಂಗ್ರೆಸ್ ಪಕ್ಷ ಯಾರೊಬ್ಬರ ಮನೆ ಆಸ್ತಿಯಲ್ಲ, ಇದು ನಮ್ಮ ಶಕ್ತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು..? ನಮ್ಮ ಪಕ್ಷದಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು. ಕಾಂಗ್ರೆಸ್ ನಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ನಾವು ಬೇರೆಯವರ ಹಾಗೆ ಮುಸ್ಲಿಂ ಸಿಎಂ ಮಾಡ್ತೀವಿ ಎಂದು ಹೇಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡಿದರು. ದಲಿತ ಎಂತಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಅವರು ಪಕ್ಷದಲ್ಲಿ ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ಹಾಗೂ ಸಮರ್ಥ ರಾಜಕಾರಣಿ ಎಂಬ ಕಾರಣಕ್ಕೆ ಅಧ್ಯಕ್ಷ ಹುದ್ದೆ ನೀಡಲಾಗಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ಸಭೆ ನಡೆಸಲಿದ್ದಾರೆ. ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಮುಖ್ಯಮಂತ್ರಿಗೆ ಸೂಚಿಸಬೇಕು ಎಂದು ಹೇಳಿದೆ. ಇನ್ನು ಗಡಿ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿರುವ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಶಾಲೆಗಳಲ್ಲಿ, ಹಾಗೂ ಒಂದೇ ಅಡುಗೆ ಮನೆ ಇರುವ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 1-5ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ, 6 ರಿಂದ 10ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ 2 ಗಂಟೆಯಿಂದ 2.40 ರವರೆಗೆ ಪ್ರತ್ಯೇಕ ಸಮಯದಲ್ಲಿ ಬಿಸಿಯೂಟ ವಿತರಿಸಲು ತಿಳಿಸಲಾಗಿದೆ. ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಚರ್ಚಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ದೊಡ್ಡ ಮಕ್ಕಳೊಂದಿಗೆ ಚಿಕ್ಕ ಮಕ್ಕಳನ್ನು ಒಟ್ಟಿಗೆ ನಿಲ್ಲಿಸಿ ಆಹಾರ ವಿತರಿಸಿವುದು ಮತ್ತು ಕಡಿಮೆ ಸಮಯದಲ್ಲಿ ಊಟ ನೀಡುವುದು, ತಟ್ಟೆ – ಲೋಟ ತೊಳೆಯುವಾಗ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಬಿಸಿಯೂಟ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲು ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ನವದೆಹಲಿ : ರಾಜ್ಯದ ಬೆಟ್ಟ ಕುರುಬ ಸಮುದಾಯಕ್ಕೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕದ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಮಂಡಿಸಿದೆ. ಅನುಸೂಚಿತ ಬುಡಕಟ್ಟುಗಳು ಆದೇಶ, 1950 ರಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳ ಮೂಲಕ ತಮಿಳುನಾಡು, ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಛತ್ತೀಸ್ ಗಢದ ನಾಲ್ಕು ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳ ಪಟ್ಟಿಯನ್ನು ಮಾರ್ಪಡಿಸುವ ನಾಲ್ಕು ಮಸೂದೆಗಳನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಿದೆ. ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಕೆಳಮನೆಯಲ್ಲಿ ದಿನದ ಕಲಾಪದ ಮೊದಲಾರ್ಧದಲ್ಲಿ ಈ ಮಸೂದೆಗಳನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. ಹೀಗಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆ ಅಂಗೀಕಾರವಾದ ಬಳಿಕ ಕಾಯ್ದೆಯಾಗಿ ಬದಲಾಗಲಿದೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಕೊರಟಗೆರೆ: ಕಲ್ಪತರು ನಾಡಿಗೆ ಅಕ್ಷರ ಜ್ಞಾನ ನೀಡಿದ ಶ್ರೀಮಠ ನಮ್ಮ ಹೆಮ್ಮೆಯ ಸಿದ್ದಗಂಗಾ ಕ್ಷೇತ್ರ.. ಟೀ ಅಂಗಡಿಯಲ್ಲಿ ಚಹಾ ಮಾಡುತ್ತಿದ್ದ ಸಾಮಾನ್ಯ ಮನುಷ್ಯ ಇಂದು ದೇಶದ ಪ್ರಧಾನಿ.. ನಮ್ಮ ಮಕ್ಕಳು ಸರಕಾರಿ ಕೆಲಸ ಪಡೆಯದಿದ್ರು ಪರವಾಗಿಲ್ಲ—ಭಾರತ ದೇಶವನ್ನು ಪೂಜಿಸುವ ಉತ್ತಮ ಪ್ರಜೆಯಾದ್ರೇ ಸಾಕು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ನರಸಾಪುರದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಮತ್ತು ಸಿ.ಎನ್.ದುರ್ಗ ಹೋಬಳಿಯ ನೇಗಲಾಲದ ಇಂದಿರಾ ಗಾಂಧಿ ವಸತಿಶಾಲೆಯ ನೂತನ ಕಟ್ಟಡದ ಉದ್ಘಾಟನೆ ನೇರವೇರಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಪವಾಡ ಪುರುಷ. ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಕೋಟಿಗಟ್ಟಲೆ ಸುರಿದು ಸರಕಾರ ಹೈಟೆಕ್ ಶಾಲೆ ನಿರ್ಮಾಣ ಮಾಡಿದೆ. ವಿಶ್ವಕ್ಕೆ ಮಾನವ ಸಂಪನ್ಮೂಲ ನೀಡುವ ದೇಶ ನಮ್ಮದು. ಶೈಕ್ಷಣಿಕ ಅಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡಿದೆ. ನಮ್ಮೂರಲ್ಲೆ ವ್ಯವಸಾಯಕ್ಕೆ ಜನರೇ ಸಿಗುತ್ತಿಲ್ಲ. ತಂತ್ರಜ್ಞಾನ ಹೆಚ್ಚಾಗಿದೆ ಆದರೇ ಶ್ರಮ ಇಲ್ಲದಿದ್ದರೇ ಆಗೋದಿಲ್ಲ ಎಂದು ಹೇಳಿದರು. ಕೊರಟಗೆರೆ ಶಾಸಕ…
ತುರುವೇಕೆರೆ: ಪಟ್ಟಣದಲ್ಲಿ ತಾಲೂಕು ಕಚೇರಿ ಮುಂಭಾಗ ಕೊಬ್ಬರಿಗೆ ಇಪ್ಪತ್ತು ಸಾವಿರ ನಿಗದಿ ಬೆಲೆಗೆ ಒತ್ತಾಯಿಸಿ ತೆಂಗು ಮತ್ತು ಬೆಳೆಗಾರರ ಸಂಘದ ಅಧ್ಯಕ್ಷರಾದ ಎನ್.ಆರ್.ಜಯರಾಮ್ ಗ್ರೇಡ್ 2 ತಹಶೀಲ್ದಾರ್ ಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ಜಯರಾಮ್, ಕೊಬ್ಬರಿ ಬೆಲೆ ಜನವರಿ ತಿಂಗಳಲ್ಲಿ ಕ್ವಿಂಟಾಲ್ ಗೆ 18ರಿಂದ 19 ಸಾವಿರದ ಆಸು ಪಾಸಿನಲ್ಲಿತ್ತು. ನಂತರದ ತಿಂಗಳುಗಳಲ್ಲಿ ಹಂತ ಹಂತವಾಗಿ ಇಳಿದು 11 ಸಾವಿರಕ್ಕೆ ಬಂದು ನಿಂತಿದೆ. ತೆಂಗಿನ ಮರಗಳಲ್ಲಿ ಹೊಂಬಾಳೆ ಹೊಡೆದು ಎಳೆನೀರು, ತೆಂಗಿನಕಾಯಿ ಕಿತ್ತು ಕೊಬ್ಬರಿ ಮಾಡುವ ಒಟ್ಟಿಗೆ ಎರಡು ವರ್ಷ ಕಾಲಾವಕಾಶ ಬೇಕಾಗುತ್ತದೆ.ಈ ಕಾರಣಕ್ಕಾಗಿ ರೈತರಿಗೆ ವರ್ಷಕ್ಕೆ 13 ರಿಂದ 14,000 ಖರ್ಚನ್ನು ಮಾಡುತ್ತಾರೆ ಇದರಿಂದ ಲಾಭಕ್ಕಿಂತ ಅಸಲು ಹೆಚ್ಚಾಗುತ್ತದೆ ಎಂದರು. ಸರ್ಕಾರ ಕೂಡಲೇ ರೈತ ಬೆಳೆದ ಕೊಬ್ಬರಿಯ ಖರೀದಿಯನ್ನು ನಪೆಡ್ ಮೂಲಕ ಖರೀದಿಸಿ, ಪ್ರತಿ ಕ್ವಿಂಟಾಲ್ ಗೆ 20,000 ನಿಗದಿತ ಬೆಲೆಯನ್ನು ನೀಡಬೇಕು. ಇಲ್ಲದಿದ್ದಲ್ಲಿ ತಾಲೂಕಿನ ಎಲ್ಲಾ ರೈತ ಸಂಘಟನೆಗಳ ಹಾಗೂ ವಿವಿಧ ರಾಜಕೀಯ ಪಕ್ಷಗಳ…
ಮ್ಯಾಂಡಸ್ ಚಂಡಮಾರುತದಿಂದಾಗಿ ಚಳಿ ಹೆಚ್ಚಾಗಿದ್ದು, ಇದರಿಂದ ಮಕ್ಕಳಲ್ಲಿ ಜ್ವರ, ಉಸಿರಾಟ ಸಮಸ್ಯೆ, ವೈರಲ್ ಬ್ರಾಂಕೋ ನ್ಯೂಮೋನಿಯಾ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ದಿಢೀರ್ ಏರಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ನಿರಂತರ ಜ್ವರ, ಕೆಮ್ಮು, ನೆಗಡಿ, ಪ್ರಜ್ಞೆ ಕಳೆದುಕೊಳ್ಳುವುದು ಸೇರಿದಂತೆ ಮಕ್ಕಳು ಆಹಾರವನ್ನು ಸರಿಯಾಗಿ ಸೇವನೆ ಮಾಡದೆ ಇದ್ದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ ಎಂದಿದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 40% ಹೆಚ್ಚಿದೆ. ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಅಪಾಯ ಖಂಡಿತ. ಸಾಧ್ಯವಾದಷ್ಟು ಬಿಸಿ ನೀರು ಕುಡಿಯೋದಕ್ಕೆ ಕೊಡಿ, ಮಳೆಯಲಿ ನೆನೆಯಲು ಬಿಡಬೇಡಿ, ಕೋಲ್ಡ್ ಅಥವಾ ತಣ್ಣನೆಯ ಪದಾರ್ಥ ಕೊಡಬೇಡಿ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ತಾಲೂಕಿಗೆ ಇದೇ ತಿಂಗಳು 12ನೇ ತಾರೀಕಿನಂದು ಜಾತ್ಯತೀತ ಜನತಾದಳದ ಪಂಚ ರತ್ನ ರಥಯಾತ್ರೆ ಆಗಮಿಸಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇನ್ನು ಅನೇಕ ಮುಖಂಡರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈಗಾಗಲೇ ತುಮಕೂರು ಜಿಲ್ಲೆಗೆ ಈ ರಥಯಾತ್ರೆ ಆಗಮಿಸಿ, ಗುಬ್ಬಿ, ಶಿರಾ, ಮಧುಗಿರಿ, ಪಾವಗಡದಲ್ಲಿ ಯಾತ್ರೆ ಮುಗಿದಿದ್ದು, 12ರಂದು ತುರುವೇಕೆರೆ ತಾಲೂಕಿನ, ಗ್ರಾಮಗಳಿಗೆ ಆಗಮಿಸಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವುದು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ, ರೈತರಿಗೆ ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣ ವ್ಯವಸ್ಥೆ, ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ ಜೊತೆಗೆ ಯುವಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ, ವಸತಿ ಇಲ್ಲದವರಿಗೆ ಸರಕಾರದಿಂದಲೇ ವಸತಿ ಕಟ್ಟಿಸಿ ಕೊಡುವ ಯೋಜನೆ ಹಾಗೂ ಸ್ತ್ರೀಶಕ್ತಿ ಸಂಘದ ಎಲ್ಲಾ ಸಾಲವನ್ನು…
ಕೊರಟಗೆರೆ: ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಪೊಲೀಸರ ದೌರ್ಜನ್ಯವನ್ನ ಖಂಡಿಸಿ ಕೊರಟಗೆರೆ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತ್ತು ಎಂದು ವಕೀಲರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ತಿಳಿಸಿದರು. ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯಾದ ಅವರಣದ ಮುಂಭಾಗದಲ್ಲಿ ತಾಲ್ಲೂಕು ವಕೀಲರ ಸಂಘದ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಡಿ.3ರಂದು ಮಂಗಳೂರಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಯುವ ವಕೀಲ ಕುಲದೀಪ್ ಶಟ್ಟಿ ಅವರ ಮೇಲೆ ಅಮಾನುಷವಾಗಿ ವರ್ತನೆ ಮಾಡಿ, ವಕೀಲರ ವೃತ್ತಿ ಭಾಂದವರಿಗೆ ಅವಮಾನ ಮಾಡಿದ್ದಾರೆ. ಅವರ ತಾಯಿ ಕಾಡಿಬೇಡಿ ಕೈಮುಗಿದುಕೊಂಡರೂ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ವಕೀಲ ಎಂದರೂ ಸಹ ನೀನು ನ್ಯಾಯಲಯದಲ್ಲಿ ವಾದ ಮಾಡು ಎಂದು ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಈ ಕೂಡಲೇ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಹಿರಿಯ ವಕೀಲ ಟಿ.ಕೃಷ್ಣಮೂರ್ತಿ ಮಾತನಾಡಿ, ಮಂಗಳೂರಿನಲ್ಲಿ ಯುವ ವಕೀಲ ಕುಲದೀಪ್ ಶಟ್ಟಿ ಅವರನ್ನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಏಕಾಏಕಿ ಅವರ ಮನೆಗೆ ನುಗ್ಗಿ…