Author: admin

ಮಂಡ್ಯ:  ಜೆಡಿಎಸ್‌ ನ ಯಾರೂ ಸರ್ವನಾಶ ಮಾಡಲು ಸಾಧ್ಯವಿಲ್ಲ.ಈ ಪಕ್ಷದಿಂದ ಬೆಳೆದು ಹೋದ ಕೆಲವರು ಜೆಡಿಎಸ್‌ ನ ಮುಗಿಸಿದ್ದೇವೆ ಎಂದು ಅಹಂನಲ್ಲಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್‌ ನ ಯಾರೂ ಸರ್ವನಾಶ ಮಾಡಲು ಸಾಧ್ಯವಿಲ್ಲ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಸೋಮನಹಳ್ಳಿಯ ಜೆಡಿಎಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ದ್ವೇಷದ ಭಾವನೆ ಧಾರೆ ಎರೆಯುತ್ತಿವೆ. ಇದರಿಂದ ಮಂಗಳೂರಿನಲ್ಲಿ ಸರಣಿ ಹತ್ಯೆಯಾಗಿದೆ. ಸಿಎಂ ಸ್ಥಳದಲ್ಲಿದ್ದಾಗಲೇ ಮತ್ತೊಂದು ಹತ್ಯೆಯಾಗುತ್ತದೆ. ನಾನು ಅಧಿಕಾರದಲ್ಲಿದ್ದಾಗ ಎಂದೂ ಇದಕ್ಕೆ ಅವಕಾಶ ಕೊಟ್ಟಿಲ್ಲ ಎಂದರು. ಇನ್ನು ಯಾರೋ ಒಬ್ಬ ಎಂಪಿ ಹೇಳುತ್ತಾನೆ. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು, ಮತ್ತೊಬ್ಬ ಮಾಜಿ ಸಿಎಂ ಈ ಸರ್ಕಾರಕ್ಕೆ ಮೊಟ್ಟೆಯಲ್ಲಿ ಹೊಡೆಯಬೇಕು ಅಂತಾರೆ. ಹೀಗೆ ಎರಡೂ ರಾಷ್ಟ್ರೀಯ ಪಕ್ಷಗಳು ದ್ವೇಷದ ಭಾವನೆ ಧಾರೆ ಎರೆಯುತ್ತಿದ್ದಾರೆ ಎಂದು ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಂಪೇನಹಳ್ಳಿ ಗ್ರಾಮದ  ಯುವಕನೋರ್ವ ಮದುವೆಯಾಗಿಲ್ಲ ಎನ್ನುವ ಬೇಸರದಿಂದ  ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನರಸಿಂಹಯ್ಯನ ಮಗ ಕಿರಣ್ ಕುಮಾರ್ (28) ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಮದುವೆಯಾಗಲು ಹೆಣ್ಣು ಸಿಗದ ಕಾರಣ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಕಷ್ಟು ಕಡೆ ಹೆಣ್ಣುಗಳನ್ನು ನೋಡಿದ್ದ ಮಾತುಕತೆಗೆ ಅಥವಾ ನಿಶ್ಚಿತಾರ್ಥದ ಹಂತಕ್ಕೆ ಬಂದು ಮದುವೆ ಮುರಿದು ಬೀಳುತ್ತಿದ್ದವು ಇದರಿಂದ ತೀವ್ರ ಕೈಸಾಲಗಳನ್ನು ಮಾಡಿಕೊಂಡು ಕುಡಿತಕ್ಕೆ ಒಳಗಾಗಿದ್ದ ಯುವಕ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಜುಲೈ 25 ರ ಸೋಮವಾರ ಮಧ್ಯಾಹ್ನ ಮನೆಯಿಂದ ಹೋದವನು ಊರಿನ ಹೊರಭಾಗದ ಗುಡ್ಡೆಯಲ್ಲಿ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಕಿರಣ್ ಕುಮಾರನ ಶವ ಪತ್ತೆಯಾಗಿದೆ ವಿಷಯ ತಿಳಿದ ತಕ್ಷಣವೇ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಪಿಎಸ್ಐ ನಾಗರಾಜ್,ಪಿಎಸ್ಐ…

Read More

ಮಧುಗಿರಿ: ರೈತರೊಬ್ಬರ ಜಮೀನಿನಲ್ಲಿ ನೆಲದಡಿಯಿಂದ ನೀರು ಉಕ್ಕಿ ಬಂದಿದ್ದು, ಇನ್ನು ಮೂರು ವರ್ಷಗಳ ಕಾಲ ನಮಗೆ ಕೃಷಿಗೆ ನೀರಿನ ಬರವಿಲ್ಲ ಎಂದು ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ದೊಡ್ಡ ತಿಮ್ಮಯ್ಯ ಮತ್ತು ಮೂಡಲಗಿರಿಯಪ್ಪ ಎಂಬ ರೈತರ ಜಮೀನಿನಲ್ಲಿ ನೀರು ಉಕ್ಕುತ್ತಿದ್ದು, ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ವಕೀಲರಾದ ಶಿವಣ್ಣನವರು ಈ ಬಗ್ಗೆ ಮಾತನಾಡಿ, ಲಕ್ಷ್ಮಿಪುರದ ಕೆರೆ ತುಂಬಿ ಕೋಡಿ ಹರಿಯುತ್ತಿದ್ದು, ಸುತ್ತಮುತ್ತಲಿನ ಹಳ್ಳ ತುಂಬಿ ಹರಿಯುತ್ತಿದೆ. ದೊಡ್ಡೇರಿ ಗ್ರಾಮದ ಲಕ್ಷ್ಮಿಪುರದ ಕೆರೆಯ ಹಿಂಬದಿ ಇರುವ ಜಮೀನುಗಳಲ್ಲಿ ವ್ಯವಸಾಯಕ್ಕೆ ಯೋಗ್ಯವಾಗಿ ಇನ್ನೂ ಎರಡು ಮೂರು ವರ್ಷ ವ್ಯವಸಾಯ ಮಾಡಿಕೊಳ್ಳಲು ಜೀವನ ನಡೆಸಲು ಯಾವುದೇ ತೊಂದರೆ ಇಲ್ಲ ಎಂದರು. ದೊಡ್ಡೇರಿ ಗ್ರಾಮದ ವಾಸಿಯಾದ ಡಿ.ಟಿ.ಚೇತನ್ ಮಾತನಾಡಿ, ದೊಡ್ಡೇರಿ ಲಕ್ಷ್ಮಿಪುರದ ಕೆರೆ ಹಿಂಭಾಗ ಎಲ್ಲಾ ಬಾವಿಗಳು ತುಂಬಿ ತುಳುಕಿದ್ದು, ಹೊಲಗಳಲ್ಲಿ ನೀರು ನಿಂತಿವೆ. ಇದು ಸಂತೋಷದ ವಿಚಾರ ಎಂದರು. ಈ ಸಂದರ್ಭದಲ್ಲಿ ಸತೀಶ್ ಡಿ.ಎಂ. ರಮೇಶ್ ಡಿಎಸ್ ರಮೇಶ್ ರಾಮಣ್ಣನವರು ಹೊಲದ ಮಾಲೀಕರು ಇದ್ದರು. ವರದಿ:…

Read More

ಭಾರತದಂತ ದೇಶದ ಮೇಲೆ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಹೇರುವುದು ಅಸಾಧ್ಯ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭಾರತದಲ್ಲಿ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು ಒಂದು ಭಾಷೆ ಮತ್ತು ಒಂದು ಧರ್ಮವನ್ನು ಪ್ರಚಾರ ಮಾಡುವವರು ನಮ್ಮ ಏಕತೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಅಂತಹವರು ಭಾರತ ಮತ್ತು ಭಾರತೀಯರ ಶತ್ರುಗಳು’ ಎಂದು ಅವರು ಹೇಳಿದರು. ಸಂಯುಕ್ತ ವ್ಯವಸ್ಥೆಯು ನಮ್ಮ ದೇಶದ ಅಡಿಪಾಯ ಎಂದ ಅವರು, ಬಲಿಷ್ಠ ಸ್ವಾಯತ್ತ ರಾಜ್ಯಗಳನ್ನು ಹೊಂದುವುದೊಂದೇ ಭಾರತ ಅಭಿವೃದ್ಧಿ ಹೊಂದಲು ಇರುವ ಏಕೈಕ ಮಾರ್ಗವಾಗಿದೆ  ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಚುರುಕುಗೊಂಡಿದೆ. ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ ಕೌಂಟರ್‌  ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಆತ ಹಲವು ದಿನಗಳಿಂದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದು, ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ. ಈತನಿಂದ ಒಂದು ಬಂದೂಕು, 2 ಮ್ಯಾಗಜೀನ್‌ಗಳು ಸೇರಿದಂತೆ 30 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಮನೆಗಳಿಗೂ ನೀರು ನುಗ್ಗಿದ್ದು, ಜನ ಬಿಬಿಎಂಪಿಯನ್ನು ಶಪಿಸುತ್ತಾ ನಿದ್ರೆಗೆಟ್ಟು ರಾತ್ರಿಯಿಡಿ ನೀರನ್ನು ಹೊರ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ರಾತ್ರಿ 11:00 ರ ಸುಮಾರಿಗೆ ಮಳೆ ಸುರಿದಿದ್ದು, ಒಟ್ಟಾರೆ 22.39 ಮಿಲಿಮೀಟರ್ ಮಳೆಯಾಗಿದೆ ಎಂದು ತಿಳಿದು ಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಅತಿ ಹೆಚ್ಚು ಅಂದರೆ 65 ಮಿಲಿ ಮೀಟರ್ ಮಳೆಯಾಗಿದೆ. ಇನ್ನುಳಿದಂತೆ ಬಿಬಿಎಂಪಿ ವ್ಯಾಪ್ತಿಯ ಪೂರ್ವ ವಿಭಾಗದಲ್ಲಿ 61.50 ಮಿಲಿಮೀಟರ್, ದಕ್ಷಿಣ ವಿಭಾಗದಲ್ಲಿ 59.50 ಮಿಲಿ ಮೀಟರ್, ಬೊಮ್ಮನಹಳ್ಳಿ 53 ಮಿಲಿ ಮೀಟರ್ ಮತ್ತು ಪಶ್ಚಿಮ ವಿಭಾಗದಲ್ಲಿ 44.50 ಮಿಲಿಮೀಟರ್ ಮಳೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಶಿವಸೇನೆ ನಾಯಕ ಸಂಜಯ್ ರಾವತ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅವರ ವಿಚಾರಣೆ ನಡೆಸಿತ್ತು. ಭಾನುವಾರ ಬೆಳಗ್ಗೆ ಮುಂಬೈನಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್‌ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೀದರ್ : ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಡಿಸೆಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಸೂಚಿಸುತ್ತದೆ. ನಾವು ಬಲವಾದ ನೆಲೆಯನ್ನು ಹೊಂದಿರುವ 134 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ’ ಎಂದು ತಿಳಿಸಿದರು. ಜೆಡಿಎಸ್  ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಬೀದರ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಇನ್ನೂ 10 ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ಪಟ್ಟಣದ ಶಿವಗಂಗಾ ಚಿತ್ರ ಮಂದಿರದಲ್ಲಿ ಕೊರಟಗೆರೆ ಪೊಲೀಸ್ ಅಧಿಕಾರಿಗಳಾದ ಯೋಗೀಶ್ ಮತ್ತು ಮಂಜುನಾಥ್ ರವರಿಗೆ ರಜತ ಕಿರೀಟಧಾರಣೆ ಸಮಾರಂಭದ ಪ್ರಯುಕ್ತ ತುಮಕೂರಿನ ಹೆಸರಾಂತ ಶ್ರೀ ಬಸವೇಶ್ವರ ಡ್ರಾಮಾ ಸೀನ್ಸ್ ಮತ್ತು ಶ್ರೀ ರಾಮೇಶ್ವರ ಕೃಪಾ ಪೋಷಿತ ನಾಟಕ ಮಂಡಳಿಯ ವತಿಯಿಂದ ವಿದ್ಯುತ್ ದೀಪಗಳಿಂದ ಅಲಂಕೃತವಾದ ರಂಗ ಸಜ್ಜಿಗೆಯಲ್ಲಿ ಐತಿಹಾಸಿಕ ಭಗವದ್ಗೀತೆ ಅಥವಾ ಶ್ರೀ ಕೃಷ್ಣ ಸಂಧಾನವೆಂಬ ಪೌರಾಣಿಕ ನಾಟಕ ಪ್ರದರ್ಶನ ಕಾಣಲಿದೆ. ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳ ಮತ್ತು ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿರವರ ಆಶೀರ್ವಾದಗಳೊಂದಿಗೆ ತಾಲೂಕಿನ ಮತ್ತು ಜಿಲ್ಲೆಯ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಹಿರಿಯ ಮತ್ತು ಕಿರಿಯ ನುರಿತ ಕಲಾವಿದರ ತಂಡದಿಂದ ದಿನಾಂಕ 31-7-2022ರ ಭಾನುವಾರ ಬೆಳಿಗ್ಗೆ ಸುಮಾರು 10 : 30 ಗಂಟೆಗೆ ಈ ಅದ್ಭುತವಾದ ನಾಟಕವು ಪ್ರದರ್ಶನ ಕಾಣಲಿದ್ದು ತಾಲೂಕಿನ ಕಲಾಭಿಮಾನಿಗಳು, ಕಲಾರಸಿಕರ, ಕಲಾಪೋತ್ಸಾಹಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಟಕವನ್ನು ಯಶಸ್ವಿಗೊಳಿಸಬೇಕೆಂದು ಕಲಾತಂಡ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.…

Read More

ಸಿರಾ:  ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಹೇಮಾವತಿ ನೀರು ಹರಿಸಿದ ಹಿನ್ನೆಲೆಯಲ್ಲಿ ಶಿರಾ ನಗರದಲ್ಲಿರುವ ದೊಡ್ಡಕೆರೆ ತುಂಬಿ ಕೋಡಿ ಹರಿದಿದೆ. ದೊಡ್ಡಕೆರೆ ತುಂಬಿ ಕೋಡಿ ಹರಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ  ದೊಡ್ಡಕೆರೆ ಗೆ ಭೇಟಿ ನೀಡಿ ಕೆರೆ ವೀಕ್ಷಿಸಿ, ಸಾರ್ವಜನಿಕರು ಮತ್ತು ಕಾರ್ಯಕರ್ತರೊಂದಿಗೆ ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ಯುವ ಮುಖಂಡರು ಹಾಗೂ ಮಾಜಿ ನಗರ ಸಭೆ ಸದಸ್ಯರಾದ ಸಂತೆಪೇಟೆ ನಟರಾಜು, ನಾಮ ನಿರ್ದೇಶಿತ ಸದಸ್ಯರಾದ ನರೇಂದ್ರ, ಮಾಜಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಈರಣ್ಣ ಪಟೇಲ್, ಗ್ರಾಮ ಪಂಚಾಯ್ತಿ ಸದಸ್ಯರಾದ ಎಂ.ಶಿವಲಿಂಗಯ್ಯ, ವಿ.ಎಸ್.ಎಸ್.ಎನ್ ನಿರ್ದೇಶಕರಾದ ಕೊಟ್ಟ ಶ್ರೀನಿವಾಸ್, ಮಾಜಿ ಸುಡಾ ಅಧ್ಯಕ್ಷರಾದ ಈರಣ್ಣ, ಮಂಡಿ ಮರ್ಚಂಟ್ ರವಿ, ಹುಳಿಗೆರೆ ತಿಮ್ಮರಾಜು, ಯುವ ಮುಖಂಡರಾದ ಕರೆದಾಸರಹಳ್ಳಿ ಹೇಮಂತ್, ಚಿನ್ನೆನಹಳ್ಳಿ ನಾಗರಾಜು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ವರದಿ: ಪ್ರವೀಣ್, ಶಿರಾ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More