Subscribe to Updates
Get the latest creative news from FooBar about art, design and business.
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
- ತುರುವೇಕೆರೆ: ಚಿರತೆ ಸಿಕ್ಕರೂ ಗ್ರಾಮಸ್ಥರಲ್ಲಿ ದೂರವಾಗದ ಆತಂಕ
- ಶಿರಾ: ಮರಕ್ಕೆ ಡಿಕ್ಕಿ ಹೊಡೆದ ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ
- ತುಮಕೂರು | ಕುದ್ಮಲ್ ರಂಗರಾವ್ ರಾಜ್ಯ ಪ್ರಶಸ್ತಿ ಪ್ರದಾನ–ಕವಿಗೋಷ್ಠಿ
Author: admin
ಹಾವೇರಿ: ಜಿಲ್ಲೆಯ ನಾಗೇಂದ್ರಮಟ್ಟಿ ಬಡಾವಣೆಯಲ್ಲಿ ಕಳ್ಳರು ಸರಣಿ ಕಳ್ಳತನ ಮಾಡುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದ್ದಾರೆ. ಒಂದೇ ರಾತ್ರಿ ಸುಮಾರು 7ಕ್ಕೂ ಅಧಿಕ ಮನೆಗಳ ಬೀಗ ಮುರಿದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ. ಘಟನೆಯ ವಿವರ: ನಾಗೇಂದ್ರಮಟ್ಟಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಮನೆ ಮಾಲೀಕರು ಊರಿಗೆ ಹೋದ ಸಮಯವನ್ನೇ ಕಾದು ಕುಳಿತಿದ್ದ ಖದೀಮರು, ಕಿಟಕಿ ಹಾಗೂ ಬಾಗಿಲುಗಳ ಬೀಗ ಮುರಿದು ಒಳನುಗ್ಗಿದ್ದಾರೆ. ಮನೆಯಲ್ಲಿದ್ದ ಕಪಾಟುಗಳನ್ನು ಜಾಲಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ಮತ್ತು ನಗದನ್ನು ದೋಚಿದ್ದಾರೆ. ಕಳ್ಳರ ವಿಚಿತ್ರ ವರ್ತನೆ: ಕಳ್ಳತನ ಮಾಡಲು ಬಂದ ಖದೀಮರು ಮನೆಯಲ್ಲಿದ್ದ ವಸ್ತುಗಳನ್ನು ದೋಚಿದ್ದಲ್ಲದೆ, ನಿರಾಳವಾಗಿ ಅಡುಗೆ ಮನೆಗೆ ನುಗ್ಗಿ ಚಹಾ ಮಾಡಿಕೊಂಡು ಕುಡಿದಿದ್ದಾರೆ! ಚಳಿಯ ವಾತಾವರಣವಿದ್ದ ಕಾರಣ, ಕಳ್ಳತನದ ನಡುವೆಯೇ ಚಹಾ ಸೇವಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಕಳ್ಳರ ಈ ಧೈರ್ಯ ಮತ್ತು ವಿಚಿತ್ರ ವರ್ತನೆ ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಸರಣಿ ಕಳ್ಳತನದಿಂದ ಕಂಗಾಲಾಗಿರುವ ನಾಗೇಂದ್ರಮಟ್ಟಿ ನಿವಾಸಿಗಳು ಪೊಲೀಸರ…
ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕಾಮರಾಜು ಪಶ್ಚಿಮ ವಲಯ ರೈಲ್ವೆ ಅಂದ್ರೆ ಇದು ಹುಬ್ಬಳ್ಳಿ ವಲಯ ಅದಕ್ಕೆ ಸಂಬಂಧ ಪಟ್ಟಂತ ಜಿಲ್ಲೆಗಳ ಒಂದು ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ, ಅವರಿಗೆ ಶುಭಾಶಯಗಳು ಎಂದು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಕಾಮರಾಜ್ ನಿರ್ದೇಶಕನಾಗಿ ಆಯ್ಕೆ ಮಾಡಿದ ನಮ್ಮ ತುಮಕೂರು ಸಂಸದ ಕೇಂದ್ರ ಸಚಿವರು ವಿ. ಸೋಮಣ್ಣ ನವರಿಗೆ ಧನ್ಯವಾದಗಳು ಎಂದ ತಿಳಿಸಿದರು. ನಮ್ಮ ಕೇಂದ್ರ ಸಚಿವರು ತುಮಕೂರಿನ ಲೋಕಸಭಾ ಸದಸ್ಯರು ಕೇಂದ್ರ ಜನಶಕ್ತಿ ಮತ್ತು ರೈಲ್ವೆ ಸಚಿವರಾಗಿರತಕ್ಕಂತಹ ವಿ.ಸೋಮಣ್ಣನವರು ನಮ್ಮ ಪಕ್ಷದ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿರ್ತಕ್ಕಂತ ಕಾಮರಾಜುರವರಿಗೆ ಆಯ್ಕೆ ಮಾಡಿರುವುದು ಬಹಳ ಸಂತೋಷದ ವಿಷಯ. ಈ ಒಂದು ಹುದ್ದೆಗೆ ಕಾಮರಾಜ್ ನೇಮಕ ಆಗಿರುವುದು ನಿಜವಾಗ್ಲೂ ಕೂಡ ಎಲ್ಲರಿಗೂ ಕೂಡ ಸಂತೋಷವನ್ನು ಮಾಡಿದೆ ಎಂದರು. ಜನಗಳ ಸೇವೆ ಮಾಡ್ಲಿಕ್ಕೆ…
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಡಿಯುತ್ತಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪಂಚಾಯಿತಿ ಆವರಣದಲ್ಲಿ ಧರಣಿ ಕುಳಿತರು. ಪ್ರತಿಭಟನೆಗೆ ಮುಖ್ಯ ಕಾರಣಗಳು: ಆರ್.ಟಿ.ಐ ಅರ್ಜಿಗಳಿಗೆ ಮಾಹಿತಿ ನೀಡದಿರುವುದು, ಐಮಾಸ್ ದಂಧೆ ಹಾಗೂ ಹಣ ದುರ್ಬಳಕೆಯ ಆರೋಪಗಳು ಕೇಳಿಬಂದಿವೆ. ವಾರ್ಡ್ ಸಭೆಗಳನ್ನು ನಡೆಸದಿರುವುದು, ‘ಇ-ಸ್ವತ್ತು’ ಮಾಡಿಕೊಡಲು ರೂ. 10 ರಿಂದ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮತ್ತು ವಾಣಿಜ್ಯ ಮಳಿಗೆಗಳಿಂದ ಅತಿಯಾದ ಸುಂಕ ವಸೂಲಿ ಮಾಡುತ್ತಿರುವುದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ದಲಿತರ ಬೀದಿಗಳನ್ನು ಸ್ವಚ್ಛಗೊಳಿಸದೆಯೇ ಹಣ ಬಿಡುಗಡೆ ಮಾಡಲಾಗಿದೆ ಮತ್ತು ಸಾರ್ವಜನಿಕರೊಂದಿಗೆ ಅಧಿಕಾರಿಗಳು ದುರ್ವರ್ತನೆ ತೋರುತ್ತಿದ್ದಾರೆ ಎಂದು ದೂರಿದರು. ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಮುಖಂಡರು ಪಟ್ಟು ಹಿಡಿದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುರುವೇಕೆರೆ: ತಾಲೂಕಿನ ಹರೆಮಲ್ಲೇನೆಹಳ್ಳಿ ಗ್ರಾಮದ ಸುಜಾತ ಎಂಬ 40 ವರ್ಷದ ಮಹಿಳೆ ಜಾನುವಾರು ಮೇಯಿಸಲು ಹೋದಾಗ ಭಾನುವಾರ ಸಂಜೆ 4:30 ರಿಂದ 5:30ರ ಸಮಯದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಮಾಡಿ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ವಿಷಯ ತಿಳಿದ ತಹಶೀಲ್ದಾರ್ ಅಹಮದ್ ಸಿಬ್ಬಂದಿಗಳೊಂದಿಗೆ ತೆರಳಿ ಸ್ಥಳದಲ್ಲೇ ರಾತ್ರಿ 12 ಗಂಟೆಯವರೆಗೆ ಮೊಕ್ಕಂ ಹೂಡಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಇನ್ನು ಸೋಮವಾರ ಬೆಳಿಗ್ಗೆ ಚಿರತೆ ದಾಳಿಯಿಂದಾಗಿ ಸುಜಾತ ಎಂಬ 40 ವರ್ಷದ ಮಹಿಳೆ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ಚಿರತೆ ದಾಳಿಯಿಂದ ಸಾವಿಗೀಡಾದ ಮಹಿಳೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಜಿಲ್ಲಾಧಿಕಾರಿ ಹಾಗೂ ತಾಲ್ಲೂಕು ಶಾಸಕರಾದ ಎಂ.ಟಿ.ಕೃಷ್ಣಪ್ಪ ಅವರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದು, ಸ್ಥಳದಲ್ಲಿ ಜಿಲ್ಲಾಧಿಕಾರಿ ಅರಣ್ಯ ಅಧಿಕಾರಿಗಳಿಗೆ ಚಿರತೆ ಹಿಡಿಯಲು ಖಡಕ್ ಸೂಚನೆ ನೀಡಿದ್ದಾರೆ. ಚಿರತೆ ದಾಳಿಯಿಂದ ಸಾವಿಗೀಡಾದ ಮಹಿಳೆಯ ಕುಟುಂಬಕ್ಕೆ ಭದ್ರಾ ಫೌಂಡೇಶನ್ ವತಿಯಿಂದ 20…
ತಿಪಟೂರು: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಿಸೆಂಬರ್ 24ರಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಕೆರೆಗೋಡಿ–ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ‘ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಕಲಾಕೃತಿ ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಧರ್, ರಂಗಾಪುರ ಮಠದ ಶ್ರೀಗಳ ಮಾರ್ಗದರ್ಶನದಲ್ಲಿ ಈ ಬೃಹತ್ ಸಾಂಸ್ಕೃತಿಕ ಹಬ್ಬ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ, ಯಕ್ಷಗಾನ, ದಾಂಡಿಯಾ, ಮಣಿಪುರಿ ನೃತ್ಯ ಹಾಗೂ ಡೊಳ್ಳು ಕುಣಿತ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕಲಾಪ್ರಕಾರಗಳ ಪ್ರದರ್ಶನವಿರಲಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶಾವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕಲಾಕೃತಿ ಕಾರ್ಯದರ್ಶಿ ಜ್ಯೋತಿ ಗಣೇಶ್, ತಿಪಟೂರು ಕೃಷ್ಣ, ವೊಡಾಫೋನ್ ಚಂದ್ರು ಹಾಗೂ ತೋಂಟಿ ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಪಾವಗಡ: ಪಾವಗಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 51 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆ ನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ತಮ ಅರ್ಜಿಯನ್ನು 2026ರ ಜನವರಿ 9ರೊಳಗಾಗಿ https://karnemaka-one.kar.nic.in/abcd/ ವಿಳಾಸದ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 08136–245733ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ಡಿಸೆಂಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ. ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿ/ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರು ತಮ್ಮ ಅರ್ಜಿಯಲ್ಲಿ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯದ ಬಗ್ಗೆ ಮಾಹಿತಿ ನೀಡಬೇಕು. ಅರ್ಜಿ ನಮೂದಿಸಿದ ತಿನಿಸನ್ನು ಮನೆಯಲ್ಲಿಯೇ ತಯಾರಿಸಿ ಡಿಸೆಂಬರ್ 31ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರದರ್ಶಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಗೆ ಒಂದೇ ಸಸ್ಯಹಾರಿ ತಿನಿಸು (ಸಿಹಿ ಅಥವಾ ಖಾರ ಅಥವಾ ಮರೆತು ಹೋದ ಖಾದ್ಯ) ಪ್ರದರ್ಶಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ…
ಚಾಮರಾಜನಗರ: ಜಿಲ್ಲೆಯ ನಂಜೇದೇವನಪುರ ಗ್ರಾಮದ ಬಳಿ ಏಕಕಾಲಕ್ಕೆ ಐದು ಹುಲಿಗಳು ಕಾಣಿಸಿಕೊಂಡಿದ್ದು, ಸ್ಥಳೀಯ ಜನರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮಗಳ ಜಮೀನುಗಳಲ್ಲಿ ಹುಲಿಗಳ ಓಡಾಟ ಪತ್ತೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಅವರು ಈ ಭಾಗದಲ್ಲಿ ಸೆಕ್ಷನ್ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಬಳಕೆಯಾಗದ ಕಲ್ಲು ಕ್ವಾರಿಗಳನ್ನು ಹುಲಿಗಳು ತಮ್ಮ ಆವಾಸಸ್ಥಾನವನ್ನಾಗಿ ಮಾಡಿಕೊಂಡಿರುವುದು ಡ್ರೋನ್ ಕ್ಯಾಮೆರಾ ಕಾರ್ಯಾಚರಣೆಯಲ್ಲಿ ದೃಢಪಟ್ಟಿದೆ. ತಾಯಿ ಹುಲಿ ಮತ್ತು ಮರಿಗಳಿರುವ ಸಾಧ್ಯತೆಯಿದ್ದು, ಅರಣ್ಯ ಇಲಾಖೆಯು ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ನಡೆಸಲು ಸಿದ್ಧತೆ ನಡೆಸಿದೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿಗಳನ್ನು ತಕ್ಷಣ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಾಳೆ ಸಂಜೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ತಾಲೂಕಿನ ತಹಶೀಲ್ದಾರ್ ಕಚೇರಿಗೆ ಸೋಮವಾರ ಬೆಳಿಗ್ಗೆ ಬಂದಂತಹ 2 ಆರ್ ಡಿ ಎಕ್ಸ್ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಮೇಲ್ ಸಂದೇಶ ಕೆಲಕಾಲ ಆತಂಕಕ್ಕೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಲ್ಲಿ ಕಾರಣವಾಗಿತ್ತು. ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ತಕ್ಷಣ ತೆರವುಗೊಳಿಸಿ’ ಎಂಬ ಶೀರ್ಷಿಕೆಯನ್ನು ಕನ್ನಡದಲ್ಲಿ ಉಲ್ಲೇಖಿಸಿ, ಗೈನಾ ರಮೇಶ್@ಔಟ್ಲುಕ್ ಡಾಟ್ ಕಾಂ ಎಂಬ ಈ-–ಮೇಲ್ ಐಡಿಯಿಂದ ಬೆಳಿಗ್ಗಿನ ಜಾವ 5 ರ ಸುಮಾರಿಗೆ ದುಷ್ಕರ್ಮಿಯೊಬ್ಬರು ಸಂದೇಶ ರವಾನಿಸಲಾಗಿತ್ತು. ಮೇಲ್ ನೋಡಿದ ಸಮಯದಲ್ಲಿ ತಾಲೂಕು ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಭಯಭೀತರಾಗಿ ತಹಶೀಲ್ದಾರ್ ಮೋಹನಕುಮಾರಿ ಗಮನಕ್ಕೆ ತಂದ ಕೂಡಲೇ ಪೋಲಿಸ್ ಠಾಣೆಗೆ ಮಾಹಿತಿ ನೀಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಕಚೇರಿಯಿಂದ ಹೊರ ಕೇಳಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಮೈಸೂರುದಿಂದ ಆಗಮಿಸಿದ ಬಾಂಬ್ ನಿಷ್ಕ್ರೀಯ ಹಾಗೂ ಶ್ವಾನ ದಳದಿಂದ ಕಚೇರಿ ಮತ್ತು ಸುತ್ತಮುತ್ತಲಿನ…
ತುಮಕೂರು : ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಾಳಲ್ಲೂ ಶಿಕ್ಷಣದ ಬೆಳಕು ಮೂಡಬೇಕೆಂದು ತಮ್ಮ 111 ವರ್ಷಗಳ ಸುದೀರ್ಘ ಆಯಸ್ಸನ್ನು ಮುಡುಪಾಗಿಟ್ಟ ನಾಡಿನ ಮಹಾಬೆಳಕು ಸಿದ್ದಗಂಗಾ ಶ್ರೀಗಳು ಎಂದು ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಹೇಳಿದರು. ಸಿದ್ಧಗಂಗಾಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ “ಸಿದ್ಧಗಂಗಾಶ್ರೀ’ ‘ಸಂಘ ಸಿರಿ’ ಪ್ರಶಸ್ತಿ ಸಮಾರಂಭದಲ್ಲಿ ಸಂಘದ ಪರವಾಗಿ ಅನಿಸಿಕೆ ಕುರಿತು ಅವರು ಮಾತನಾಡಿದರು. ನಮ್ಮ ರಾಜ್ಯದ ಹಿರಿಯ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಳೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘಕ್ಕೆ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ಮಿಂಚಿನ ಸಂಚಾರ ಎಲ್ಲರಿಗೂ ಚೈತನ್ಯದಾಯಕವಾಗಿದೆ ಎಂದರು. ಮಂಡ್ಯದಲ್ಲಿ ಪೂಜ್ಯರ ಉದ್ಯಾನವನ ನಿರ್ಮಾಣಗೊಳಿಸಲು ಸಂಪೂರ್ಣವಾಗಿ ಆಶೀರ್ವದಿಸಿ ಪೂಜ್ಯರ ಪುತ್ಥಳಿಯನ್ನು ದಯಪಾಲಿಸಿದ ಮಹಾ ಕರುಣಾಮಯಿ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರ ಕಾಯಕ ನಿಷ್ಠೆ ಸಮಾಜಕ್ಕೆ ಸ್ಪೂರ್ತಿದಾಯಕ ಎಂದು ಬಣ್ಷಿಸಿದರು. ಸಸ್ಯಾಂದೋಲನ : ರೈತರು ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ…