Author: admin

ತುಮಕೂರು: ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿ ಹೋರಾಟ ತೀವ್ರಗೊಂಡಿದ್ದು ಹೆದ್ದಾರಿ ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನಿಟ್ಟೂರು ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಹೇಮಾವತಿ ಲಿಂಕ್‌ ಕೆನಾಲ್‌ ಮೂಲಕ ನೀರು ತೆಗೆದುಕೊಂಡು ಮಾಗಡಿ, ರಾಮನಗರಕ್ಕೆ ಹೋದರೆ ತುಮಕೂರು ಜನರಿಗೆ ಅನ್ಯಾಯವಾಗಲಿದೆ. ಸರ್ಕಾರ ಯಾವುದೇ ಮುಂದಾಲೋಚನೆ ಇಲ್ಲದೆ ಯೋಜನೆ ಜಾರಿಗೊಳಿಸಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ. ಕೂಡಲೇ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೆ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಹೋರಾಟ ಸಮಿತಿ ಇಂದು ಬೃಹತ್‌ ಹೋರಾಟಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುಬ್ಬಿ ತಹಶೀಲ್ದಾರ್‌ ಬಿ.ಆರತಿ ಅವರು ಮೇ 31ರ ಬೆಳಿಗ್ಗೆ 6 ಗಂಟೆಯಿಂದ ಜೂನ್‌ 1ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇನ್ನು ಪ್ರತಿಭಟನಾಕಾರರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೆ ನಿಷೇಧಾಜ್ಞೆ ಧಿಕ್ಕರಿಸಿ ರೈತರು, ಮುಖಂಡರು ಹೋರಾಟ ತೀವ್ರಗೊಳಿಸಿದ್ದಾರೆ. ಶಾಸಕರಾದ ಬಿ. ಸುರೇಶ್‌ಗೌಡ,…

Read More

ತುಮಕೂರು:  ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಇಂದು ತುಮಕೂರಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಭಾರೀ ಪ್ರತಿಭಟನೆ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾಮಗಾರಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಜಿಲ್ಲಾಧಿಕಾರಿ ಪೋನ್ ಮೂಲಕ ಭರವಸೆ ನೀಡಿದ ನಂತರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಹೋರಾಟಗಾರರು ಹೋರಾಟ ಕೈಬಿಟ್ಟಿದ್ದಾರೆ. ಸಂಕಾಪುರ ಬಳಿಯ ಕಾಮಗಾರಿ ಬಳಿಗೆ ಬಂದು ರೈತರು ಹೋರಾಟ ಮಾಡಿದ್ದಾರೆ. ರೈತರ ಹೋರಾಟಕ್ಕೆ ಸ್ಪಂದಿಸಿ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಶಾಸಕರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುವಂತೆ‌ ಸೂಚನೆ ನೀಡಲಾಗಿದ್ದು, ಸದ್ಯ ಹೋರಾಟಗಾರರಿಂದ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಬ್ಬಿ ತಾಲೂಕಿನ ಚೇಳೂರಿನ ಫಾರ್ಮ್ ಹೌಸ ವೊಂದರಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.  ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾಕಾರರು ಪ್ರತಿಭಟನೆಗೆ ಕರೆ ನೀಡಿದ್ದರು. ಇನ್ನೂ  ಮೂರು ಬಸ್ ನಲ್ಲಿ ಆಗಮಿಸಿದ್ದ ಪ್ರತಿಭಟನಕಾರರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ನಿಟ್ಟೂರು ಸಮೀಪ ಆಂಜನೇಯಸ್ವಾಮಿ ಬಳಿ ಪ್ರತಿಭಟನಾಕಾರರು  ಸೇರಿದ್ದರು. ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಮಧುಗಿರಿ ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳಡಿ ರೈತರಿಗೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ರೈತರಿಗೆ ಹಾಗೂ ಉದ್ದಿಮೆದಾರರಿಗೆ ನೆರವು ನೀಡಲಾಗುವುದು. ಈ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಬಾಳೆ, ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಗೋಡಂಬಿ, ಕೋಕೊ, ಕಾಳುಮೆಣಸು ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಅಣಬೆ ಉತ್ಪಾದನಾ ಘಟಕ, ಹಸಿರು ಮನೆ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ; ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ…

Read More

ನವದೆಹಲಿ: ಅಡುಗೆ ಎಣ್ಣೆ(Cooking Oil)ಗಳ ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡುವ ಮತ್ತು ದೇಶೀಯ ಸಂಸ್ಕರಣಾಗಾರಗಳನ್ನು ರಕ್ಷಿಸುವ ಗುರಿ ಹೊಂದಿರುವ ಕೇಂದ್ರವು ಶುಕ್ರವಾರ ಕಚ್ಚಾ ಪಾಮ್ ಎಣ್ಣೆ, ಕಚ್ಚಾ ಸೋಯಾಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಮೂಲ ಕಸ್ಟಮ್ ಸುಂಕವನ್ನು ಶೇ. 10 ಕ್ಕೆ ಇಳಿಕೆ ಮಾಡಿದೆ. ಈ ಮೂರು ಕಚ್ಚಾ ಖಾದ್ಯ ತೈಲಗಳ ಮೇಲಿನ ಸುಂಕವು ಶೇ. 20 ರಷ್ಟಿತ್ತು. ಅದನ್ನೀಗ ಸರ್ಕಾರ ಶೇ 10ರಷ್ಟು ಇಳಿಕೆ ಮಾಡಿದೆ. ಹೀಗಾಗಿ ಅಡುಗೆ ಎಣ್ಣೆ ಬೆಲೆಗಳಲ್ಲಿ ಇಳಿಕೆ ಆಗುವ ಸಾಧ್ಯತೆಗಳಿವೆ. ಭಾರತವು ತನ್ನ ದೇಶೀಯ ಖಾದ್ಯ ತೈಲದ ಅಗತ್ಯದ ಶೇ. 50 ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳುತ್ತದೆ. 2023-24 ರ ತೈಲ ಮಾರುಕಟ್ಟೆ ವರ್ಷದಲ್ಲಿ (ನವೆಂಬರ್ ನಿಂದ ಅಕ್ಟೋಬರ್ ವರೆಗೆ) ಭಾರತವು 159.6 ಲಕ್ಷ ಟನ್ ಖಾದ್ಯ ತೈಲಗಳನ್ನು ಆಮದು ಮಾಡಿಕೊಂಡಿದ್ದು, ಇದರ ಮೌಲ್ಯ ಸುಮಾರು 1.32 ಲಕ್ಷ ಕೋಟಿ ರೂಪಾಯಿ ಎಂಬುದು ಗಮನಾರ್ಹ. ಈ ಸಂಬಂಧ ಹಣಕಾಸು ಸಚಿವಾಲಯ…

Read More

ದಾವಣಗೆರೆ: ವಿಶೇಷ ಚಿತ್ರಕಲೆ, ಮಕ್ಕಳಿಗೆ ಬಣ್ಣದ ಕಿರೀಟ, ಹೂವು ನೀಡುವುದು, ಪಠ್ಯಪುಸ್ತಕ ವಿತರಣೆ ಹಾಗೂ ಸಿಹಿ ಊಟದ ವ್ಯವಸ್ಥೆ ಮಾಡುವುದರ ಮೂಲಕ ಹಬ್ಬದ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವ ಚನ್ನಗಿರಿ ತಾಲೂಕಿನಲ್ಲಿ ಮಾಡಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ ಹೇಳಿದರು. ಸಂತೆಬೆನ್ನೂರು ಗ್ರಾಮದಲ್ಲಿ ಗುರುವಾರ ಕೆಪಿಎಸ್ ಶಾಲೆಯ ಪ್ರಾಥಮಿಕ ವಿಭಾಗದ ಶಾಲಾ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಿ ಮಾತನಾಡಿದರು . ಪೋಷಕರಿಗೆ ಮಕ್ಕಳನ್ನು ಕಳಿಸಿಕೊಡಿ ಎಂದು ಆಹ್ವಾನ ಪತ್ರ ಬರೆದಿದ್ದೆವು. ಅದೇ ರೀತಿ ಮಕ್ಕಳ ಶಾಲೆ ಪ್ರಾರಂಭೋತ್ಸವ ದಿನ ಮಕ್ಕಳು ಸಂಭ್ರಮದಿಂದ ಬಂದಿದ್ದಾರೆ. ಹಿಂದಿನಿಂದಲೇ ಇಲಾಖೆ ಆದೇಶ ಪ್ರಕಾರ ಸೇತುಬಂಧ ಪ್ರಾರಂಭಿಸಿದ್ದೇವೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಹಳೆಯ ವಿದ್ಯಾರ್ಥಿಗಳು ಪೋಷಕರು ಶಾಲಾಭಿವೃದ್ಧಿ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಸಹಕಾರ ಕೋರಲಾಗಿದೆ ಎಂದು ಹೇಳಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ರೇಣುಕಾ ಮೂರ್ತಪ್ಪ ಮಾತನಾಡಿ, ಸಂತೆವೆನ್ನೂರು ಹೋಬಳಿಯಲ್ಲಿ ಕೆಪಿಎಸ್ ಶಾಲೆ ಕೇಂದ್ರಬಿಂದುವಾಗಿದೆ ಆದ್ದರಿಂದ ಹೆಚ್ಚುವರಿ ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆಯಲು ಶಿಕ್ಷಣ ಇಲಾಖೆ ಅನುಮತಿ ನೀಡಬೇಕು…

Read More

ತುಮಕೂರು: ತಿಪಟೂರು ನಗರಸಭೆಯು ಸ್ವಚ್ಛ ಭಾರತ್ ಮಿಷನ್–2.0 ಯೋಜನೆಯಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ(ಐಇಸಿ) ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸ್ವಸಹಾಯ ಗುಂಪಿನ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಉದ್ದೇಶಿಸಿದೆ. ಐಇಸಿ ಚಟುವಟಕೆಗಳನ್ನು ನಡೆಸಲಿಚ್ಛಿಸುವ ಸ್ವಸಹಾಯ ಗುಂಪಿನ ಆಸಕ್ತ ಸದಸ್ಯರು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಬಹುದಾಗಿದೆ. ಆಯ್ಕೆಯಾದವರಿಗೆ ಮಾಹೆಯಾನ 18,339 ರೂ.ಗಳ ಮಾಸಿಕ ಗೌರವಧನವನ್ನು ನೀಡಲಾಗುವುದು. ಇಚ್ಛೆ ವ್ಯಕ್ತಪಡಿಸುವವರು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ–ಡೇ ಯೋಜನೆಯಡಿ ನೋಂದಾಯಿಸಿಕೊಂಡಿರಬೇಕು. ಹೆಚ್ಚಿನ ವಿವರ, ಷರತ್ತು ಮತ್ತು ನಿಯಮಗಳಿಗಾಗಿ ಜಾಲತಾಣ: http://www.tipturcity.mrc.gov.in/en/tenders  ಅನ್ನು ವೀಕ್ಷಿಸಬಹುದಾಗಿದೆ. ಆಸಕ್ತರು ಜಾಲತಾಣದಲ್ಲಿ ಅಪ್‌ಲೋಡ್ ಮಾಡಿರುವ ಷರತ್ತುಗಳನ್ವಯ ನಗರಸಭೆಯ ಇ–ಮೇಲ್ ka.tiptur.cmc@gmail.com  ವಿಳಾಸಕ್ಕೆ ಅಗತ್ಯ ದಾಖಲಾತಿಗಳ ಸ್ಕ್ಯಾನ್ ಪ್ರತಿಗಳನ್ನು ಜೂನ್ 10ರೊಳಗಾಗಿ ಸಲ್ಲಿಸಬಹುದಾಗಿದೆ. ಇ–ಮೇಲ್ ಮೂಲಕ ಸಲ್ಲಿಸಿರುವ ದಾಖಲಾತಿಗಳ ಒಂದು ಪ್ರತಿಯನ್ನು ನಗರಸಭಾ ಕಚೇರಿಗೆ ತಲುಪಿಸಬೇಕು. ಐಇಸಿ ಚಟುವಟಕೆಗಳನ್ನು ನಡೆಸಲಿಚ್ಛಿಸುವ ಸ್ವಸಹಾಯ ಗುಂಪಿನ ಸದಸ್ಯರಿಗಾಗಿ ಜೂನ್ 13ರಂದು ಸಂದರ್ಶನ ನಡೆಸಲಾಗುವುದು ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು:  ಬೆಂಗಳೂರಿನ ಅಲಂಕಾರಿಕ ಮೀನು ಕೇಂದ್ರವೊಂದರಲ್ಲಿ ಕೋಯಿ ಕಾರ್ಪ್ ಅಲಂಕಾರಿಕ ಮೀನಿನ ತಳಿಯಲ್ಲಿ ಕೋಯಿ ಹರ್ಪ್ಸ್ ವೈರಸ್(ಕೆಹೆಚ್‌ ವಿ) ಸೋಂಕಿನ ಲಕ್ಷಣ ಕಂಡು ಬಂದಿದೆ ಎಂದು ನ್ಯಾಷನಲ್ ಬ್ಯೂರೋ ಆಫ್ ಫಿಶ್ ಜೆನೆಟಿಕ್ ರಿಸೋರ್ಸಸ್‌ ನವರು ದೃಢಪಡಿಸಿದ್ದಾರೆ. ಮೀನು ಕೃಷಿಕರು ಯಾವುದೇ ಮೀನನ್ನು ಬೇರೆ ದೇಶದಿಂದ ಆಮದು ಮಾಡಿಕೊಳ್ಳುವಾಗ ಕಡ್ಡಾಯವಾಗಿ ಕೆಹೆಚ್‌ ವಿ ತಪಾಸಣೆಗೊಳಪಡಿಸಬೇಕು ಎಂದು ವರ್ಲ್ಡ್ ಆರ್ಗನೈಸೇಷನ್ ಫಾರ್ ಅನಿಮಲ್ ಹೆಲ್ತ್ನವರು ಸೂಚಿಸಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಈ ವೈರಸ್ ದಾಖಲಾಗಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಯಾರಾದರೂ ಬೇರೆ ದೇಶದಿಂದ ಅಲಂಕಾರಿಕ ಮೀನು ತರಲಿಚ್ಛಿಸುವವರು ವೈರಸ್ ತಪಾಸಣೆಯಲ್ಲಿ ನೆಗೆಟಿವ್ ವರದಿ ಇದ್ದರೆ ಮಾತ್ರ ತರಬೇಕೆಂದು ಮಂಗಳೂರಿನ ಮೀನುಗಾರಿಕೆ ಕಾಲೇಜು ಸೂಚಿಸಿದೆ ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಶಂಕರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಒಬ್ಬ ವ್ಯಕ್ತಿಯ ದೇಹಕ್ಕೆ ಸಾವಿರುತ್ತದೆ ಆದರೆ ಆತ್ಮಕ್ಕೆ ಎಂದಿಗೂ ಸಾವಿರುವುದಿಲ್ಲ. ಅದು ಅವರ ಸಾಧನೆಗಳಲ್ಲಿ ಅಡಗಿರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ ಯವರು ಅವರ ಸಾಹಿತ್ಯ ನಮ್ಮೊಂದಿಗೆ ಸದಾ ಇರುತ್ತದೆ ಎಂದು ವಿಶ್ವವಿದ್ಯಾಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ದಾಕ್ಷಾಯಿಣಿ ತಿಳಿಸಿದರು. ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ಹಮ್ಮಿಕೊಂಡಿದ್ದ ಎಚ್.ಎಸ್.ವೆಂಕಟೇಶಮೂರ್ತಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಿನ ವಿದ್ಯಾರ್ಥಿಗಳು ಎಚ್.ಎಸ್.ವೆಂಕಟೇಶಮೂರ್ತಿ  ಅವರ ಸಾಹಿತ್ಯ ಕಲೆಯನ್ನು ಮತ್ತು ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇಂಗ್ಲಿಷ್ ವಿಭಾಗದ ಸಹಪ್ರಾಧ್ಯಾಪಕ ಡಾ.ಬಿ.ಎನ್.ವೇಣುಗೋಪಾಲ ಮಾತನಾಡಿ, ಆಕೃತಿ ಅಳಿದಿದೆ ಆತ್ಮ ಉಳಿದಿದೆ. ಎಚ್.ಎಸ್.ವೆಂಕಟೇಶಮೂರ್ತಿ ಯವರ ಸಾಧನೆ ಹಲುವು ಕ್ಷೇತ್ರಗಳಲ್ಲಿ ಜೀವಂತವಾಗಿದೆ.ಅವರು ರಚಿಸಿರುವಂತಹ ಭಾವಗೀತೆಗಳು ನಾಟಕಗಳು ಹಾಡುಗಳು ಸಿನಿಮಾದ ಮೇಲಿನ ಒಲವು ಅಪಾರವಾದದ್ದು ಎಂದರು. ಕನ್ನಡ ಸಹಪ್ರಾಧ್ಯಾಪಕ ಡಾ.ಶಿವಣ್ಣ ಬೆಳವಾಡಿ ಮಾತನಾಡಿ, ಎಚ್.ಎಸ್.ವೆಂಕಟೇಶಮೂರ್ತಿ ಯವರು ಸಾಹಿತಿಗಳು ಅಷ್ಟೇ ಅಲ್ಲ ಒಳ್ಳೆಯ ಹಾಡುಗಾರರು ಕೂಡ ಹೌದು. ಎಲ್ಲರೊಡಗಿನ ಅವರ ಒಡೆನಾಟ ಯಾರೂ ಕೂಡ ಮರೆಯಲಾಗದಂತಹದು. ಅವರಸಾಹಿತ್ಯದಲ್ಲಿ ವೈಚಾರಿಕ ಭಾವನೆಗಳನ್ನು ತುಂಬಿದಂತಹ ಮಹಾನ್ ವ್ಯಕ್ತಿ ಮತ್ತು…

Read More

ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‌ ನಲ್ಲಿ ಪ್ರಸ್ತುತ ನೂತನವಾಗಿ ಮೆನು ಸಿದ್ಧಪಡಿಸಲಾಗಿದ್ದು, ಈ ಮೆನುವಿನಂತೆ ಬೆಳಗಿನ ಉಪಹಾರದಲ್ಲಿ ರೈಸ್‌ ಬಾತ್, ಚಿತ್ರಾನ್ನ, ಉಪ್ಪಿಟ್ಟು, ಕೇಸರಿಬಾತ್, ಇಡ್ಲಿ–ಸಾಂಬಾರ್–ಚಟ್ನಿ; ಮಧ್ಯಾಹ್ನದ ಊಟಕ್ಕೆ ಮುದ್ದೆ, ಅನ್ನ, ಸಾಂಬಾರ್, ಮೊಸರನ್ನ, ಚಪಾತಿ ಹಾಗೂ ರಾತ್ರಿ ಊಟಕ್ಕೆ ರೈಸ್‌ ಬಾತ್ ಮತ್ತು ಮೊಸರನ್ನ ನೀಡಲಾಗುತ್ತಿದೆ. ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ 4 ಇಂದಿರಾ ಕ್ಯಾಂಟೀನ್‌ ಗಳೊಂದಿಗೆ ಹೊಸದಾಗಿ ತುಮಕೂರು ಜಿಲ್ಲಾಸ್ಪತ್ರೆ ಮತ್ತು ಎಪಿಎಂಸಿ ಮಾರುಕಟ್ಟೆ ಬಳಿ 2 ಇಂದಿರಾ ಕ್ಯಾಂಟೀನ್‌ ಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ರೋಗಿಗಳು ಹಾಗೂ ಮಾರುಕಟ್ಟೆಗೆ ಆಗಮಿಸುವ ರೈತರು, ಗ್ರಾಹಕರು ಹಾಗೂ ವರ್ತಕರ ಅನುಕೂಲಕ್ಕಾಗಿ ಹೊಸದಾಗಿ 2 ಇಂದಿರಾ ಕ್ಯಾಂಟೀನ್‌ ಗಳನ್ನು ಪ್ರಾರಂಭಿಸಲಾಗಿದೆ. ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಂದಾಗಿ ಬಡಜನರು ಅವರ ಸಮತೋಲಿತ ಹಾಗೂ ಪೌಷ್ಠಿಕ ಆಹಾರದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರವು ರಾಜ್ಯದ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ…

Read More