Author: admin

ಸರಗೂರು:  ಕಾಡಂಚಿನ ಗ್ರಾಮದ  ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ  ಪ್ರಶಂಸನೀಯ ಹಾಗೂ  ತುಂಬಾ ಸಂತೋಷಕರ ವಿಷಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ನೇಮ್ಮನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐ.ಸಿ.ಟಿ.ಸಿ.ವಿಭಾಗ ಹೆಚ್.ಡಿ.ಕೋಟೆ ಇವರ ವತಿಯಿಂದ, ಬಿ.ಮಟಕೆರೆ  ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ನೆಮ್ಮನ ಹಳ್ಳಿ ಗ್ರಾಮದಲ್ಲಿ ಶುಕ್ರವಾರದಂದು ಸಮುದಾಯ ಆಧಾರಿತ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನೆಮ್ಮನ ಹಳ್ಳಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದು ಹಾಗೂ ನಾವು ಇಂದು 2ನೇ ಬಾರಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಈ ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮಧುಮೇಹ ಮತ್ತು ರಕ್ತದೊತ್ತಡ, ಐಸಿಟಿಸಿ ರಕ್ತ ಪರೀಕ್ಷೆ, ಕಫ ಪರೀಕ್ಷೆ  ಬಗ್ಗೆ ತಪಾಸಣೆ  ಮಾಡಲಾಗುತ್ತದೆ. ಸುತ್ತಮುತ್ತಲ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಶಿಬಿರವನ್ನು…

Read More

ಕುಣಿಗಲ್: ಕುಣಿಗಲ್ ದೊಡ್ಡಕೆರೆಯ ರಾಮಬಾಣ ಹಂತದ ಕಾಲುವೆ ತೂಬನ್ನು ಹತ್ತು ವರ್ಷಗಳ ಹಿಂದೆ ಕಾಂಕ್ರಿಟ್ ನಿಂದ  ಮುಚ್ಚಲಾಗಿದ್ದು, ಹೇಮಾವತಿ ನಾಲಾ ವಲಯದ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ ಪರಿಶೀಲಿಸಿ ತೆರವಿಗೆ ಮುಂದಾಗಿದ್ದಾರೆ. ದೊಡ್ಡಕೆರೆಗೆ ರಾಮಬಾಣ ಹಂತ ಮತ್ತು ಲಕ್ಷ್ಮೀದೇವಿ ಹಂತದ ಎರಡು ಕಾಲುವೆಗಳಿದ್ದು, ಸಾವಿರಾರು ಎಕರೆ ಅಚ್ಚುಕಟ್ಟು ಪ್ರದೇಶವಿದೆ. ಹೇಮಾವತಿ ನಾಲಾ ನೀರು ಬರುವ ಮುನ್ನ ಮಳೆಗೆ ಕೆರೆ ತುಂಬುವುದು ಕಷ್ಟ. ನೀರು ಸಂಗ್ರಹಣೆಗಾಗಿ ಕೆಲವರು ಕೆರೆ ನೀರು ತೂಬಿನ ಮೂಲಕ ಹೋಗದಂತೆ ತಡೆಯಲು ತೂಬಿಗೆ ಕಾಂಕ್ರಿಟ್ ಸುರಿದು ಮುಚ್ಚಿದ್ದರು. ಇದರಿಂದಾಗಿ ಅಚ್ಚುಕಟ್ಟುದಾರರಿಗೆ ನೀರಿಲ್ಲದೆ ಬೆಳಗಳನ್ನು ಬೆಳೆಯಲ್ಲಿ ಸಾಧ್ಯವಾಗದೆ ಕೆಲವರು ನಿವೇಶನಗಳನ್ನು ವಿಂಗಡಿಸಿ ಮಾರಾಟ ಮಾಡಿದ್ದಾರೆ. ಕಳೆದ ಏಳು ವರ್ಷಗಳಿಂದ ಹೇಮಾವತಿ ನೀರಿನಿಂದ ದೊಡ್ಡಕೆರೆ ತುಂಬಿ ಕೋಡಿಯಾಗುತ್ತಿದ್ದರೂ, ಅಚ್ಚುಕಟ್ಟು ಪ್ರದೇಶಕ್ಕೆ ಮಾತ್ರ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಅಚ್ಚುಕಟ್ಟುದಾರರು ಬೆಳೆಗಳಿಗೆ ನೀರು ಹರಿಸಲು ಶಾಸಕರಿಗೆ ಮನವಿ ಮಾಡಿದ್ದರು. ಶಾಸಕರ ಸೂಚನೆ ಮೇರೆಗೆ ಹೇಮಾವತಿ ನಾಲಾವಲಯದ ಅಧಿಕಾರಿಗಳಾದ ಕಿರಣ್, ರವಿ ಸೇರಿದಂತೆ ಮುಳುಗು…

Read More

ತಿಪಟೂರು: ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 2024ರ ಆಗಸ್ಟ್‌ ನಲ್ಲಿ ನಡೆದ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಆರೋಪದ ಮೇರೆಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ನಗರಸಭಾ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಜಿಲ್ಲಾಧಿಕಾರಿ ನ್ಯಾಯಾಲಯ ಆದೇಶಿಸಿದೆ. 31ನೇ ವಾರ್ಡ್‌ನ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್‌ನ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್‌ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್‌ನ ಜೆಡಿಎಸ್ ಬೆಂಬಲಿತ ಸದಸ್ಯೆ ಅಸೀಪಾ ಬಾನು ಅನರ್ಹಗೊಂಡ ಸದಸ್ಯರು. 33 ಸಂಖ್ಯಾಬಲದ ನಗರಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಯಮುನಾ ಎ.ಎಸ್., ಉಪಾಧ್ಯಕ್ಷ ಸ್ಥಾನಕ್ಕೆ ಮೇಘಶ್ರೀ ಭೂಷಣ್ ಸ್ಪರ್ಧಿಸಿದ್ದರು. ಬಿಜೆಪಿ ಹಾಗೂ ಜೆಡಿಎಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಲತಾ ಲೋಕೇಶ್‌ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಂಗಮೇಶ್ ಸ್ಪರ್ಧಿಸಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ 18 ಹಾಗೂ 15 ಮತಗಳು ಚಲಾವಣೆಗೊಂಡು ಯಮುನಾ ಅಧ್ಯಕ್ಷರಾಗಿ, ಮೇಘಶ್ರೀ ಉಪಾಧ್ಯಕ್ಷರಾಗಿ…

Read More

ಬೆಂಗಳೂರು: ಮಹಿಳೆ ಸೀರೆ ಕದ್ದಳೆಂದು ಆರೋಪಿಸಿ ಅವಳನ್ನು ರಸ್ತೆಗೆ ಎಳೆದುಕೊಂಡು ಹೋಗಿ ಪದೇ ಪದೆ ಹೊಡೆದು ಕಾಲಿನಿಂದ ಒದ್ದು ನಂತರ ಅವಳನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆಯೊಂದು ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆ ವಿರುದ್ಧ ಕಳ್ಳತನ ಪ್ರಕರಣ ದಾಖಲಾದರೆ, ಅಂಗಡಿ ಮಾಲಿಕನ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದ್ದು, ಅಂಗಡಿ ಮಾಲೀಕ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಮಹಿಳೆ ಅಂಗಡಿಯೊಳಗೆ ನಿಂತು ಸೀರೆಗಳ ಬಂಡಲ್ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದಾಳೆ, ನಂತರ, ಮಹಿಳೆ ಪ್ಯಾಕ್ ಮಾಡಿದ ಬಂಡಲ್ ಅನ್ನು ಹೊರಗೆ ತೆಗೆದುಕೊಂಡು ಹೋಗಿದ್ದಾಳೆ. ನಂತರ ಮಹಿಳೆ ಹೆಚ್ಚಿನ ಸೀರೆ ಕಳ್ಳತನ ಮಾಡಲು ಅದೇ ಅಂಗಡಿಗೆ ಬಂದಿದ್ದಳು. ಆದರೆ ಈ ಬಾರಿ ಅಂಗಡಿಯವನು ಅವಳನ್ನು ಗುರುತಿಸಿ ರೆಡ್ ಹ್ಯಾಂಡ್ ಆಗಿ ಹಿಡಿದನು. ಕೋಪದಿಂದ, ಅಂಗಡಿಯವನು ಅವಳನ್ನು ರಸ್ತೆಗೆ ಎಳೆದುಕೊಂಡು ಹೋಗಿ ಪದೇ ಪದೆ ಹೊಡೆದು ಕಾಲಿನಿಂದ ಒದ್ದು ನಂತರ ಅವಳನ್ನು ಪೊಲೀಸರಿಗೆ ಒಪ್ಪಿಸಿದನು. ಹತ್ತಿರದಲ್ಲಿ ನಿಂತಿದ್ದ ಅಂಗಡಿಯವರು ಮತ್ತು…

Read More

ಬೆಂಗಳೂರು: ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ ಗಳ ಮೂಲ ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಆರೋಪಿಗಳು ಬಿಹಾರದಿಂದಲೇ 4–5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಆ ನಾಲ್ಕು ಅಕೌಂಟ್ ಗಳು ಕೂಡ ನಕಲಿ ಆಗಿದ್ದು, ಅದೇ ನಂಬರ್ ಬಳಸಿ, ಅದೇ ದಿನ ತಮಿಳುನಾಡು, ಆಂಧ್ರಪ್ರದೇಶದಲ್ಲೂ ಕೆಲವರ ಮೊಬೈಲ್ ಗಳನ್ನು ಹ್ಯಾಕ್ ಮಾಡಿದ್ದಾರೆ. ಸದ್ಯ ಸದಾಶಿವನಗರ ಪೊಲೀಸರು, ಹ್ಯಾಕರ್‌ ಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದು, ಬಿಹಾರಕ್ಕೆ ವಿಶೇಷ ತಂಡ ಕಳುಹಿಸಲು ಸಿದ್ದತೆ ನಡೆಸಿದ್ದಾರೆಂದು ತಿಳಿದಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೀದರ್‌ : ರಾಜ್ಯ ಸರ್ಕಾರವು ಆರಂಭಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ “ಹಿಂದು” ಮತ್ತು ಜಾತಿ ಕಾಲಂನಲ್ಲಿ “ಮಾದಿಗ” ಎಂದು ಕಡ್ಡಾಯವಾಗಿ ಬರೆಯಬೇಕು ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್ ಅವರು ಒತ್ತಾಯಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅವರು, ನಾವು ಈ ನೆಲದ ಮಕ್ಕಳು, ಬಹುದಿನಗಳ ನಮ್ಮ ಬೇಡಿಕೆಯಾಗಿದ್ದ ಒಳ ಮೀಸಲಾತಿ ಕೊನೆಗೂ ಜಾರಿಯಾಗಿದ್ದು, ಸಂತೋಷದ ವಿಷಯವಾಗಿದೆ. ಈಗ ಮತ್ತೆ ರಾಜ್ಯ ಸರ್ಕಾರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭಿಸಿದೆ. ನಾವು ಆದಿ ಜಾಂಬವ ವಂಶಸ್ಥರು. ಹಾಗಾಗಿ ನಮ್ಮ ಪೂರ್ವಜರೆಲ್ಲರೂ ಮೂಲತಃ ಹಿಂದುಗಳಾಗಿದ್ದಾರೆ. ಹಾಗಾಗಿ ನಾವು ಧರ್ಮದ ಕಾಲಂನಲ್ಲಿ ಕಡ್ಡಾಯವಾಗಿ ಹಿಂದು ಎಂದು ಬರೆಸಬೇಕು ಎಂದರು. ಸಮುದಾಯದ ಹಳ್ಳಿ ಕಡೆಗಳಲ್ಲಿ “ಮಾಂಗ್”, “ಮಾತಂಗ್” ಎಂಬ ಹೆಸರುಗಳು ಬಳಸಲಾಗುತ್ತಿದ್ದರೂ, ಸಮುದಾಯದ ಸದಸ್ಯರು ಕೇವಲ ಜಾತಿ ಕಾಲಂನಲ್ಲಿ ಮಾದಿಗ ಎಂದು ದಾಖಲಿಸಬೇಕು ಎಂದು ಒತ್ತಾಯಿಸಿದರು. ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಕಮಲಾಕರ್ ಹೆಗಡೆ,…

Read More

ಬೀದರ್: ರಾಜ್ಯ ಸರ್ಕಾರದಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವೇಳೆ ನೆಟ್‌ ವರ್ಕ್ ಸಮಸ್ಯೆ ಎದುರಿಸಿದ ಶಿಕ್ಷಕರೊಬ್ಬರು ಮರ ಹತ್ತಿದ ಘಟನೆ ಬಸವಕಲ್ಯಾಣ ತಾಲ್ಲೂಕಿನ ಮಿರಖಲ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಸಮೀಕ್ಷೆಗೆ ನಿಯುಕ್ತಿಗೊಂಡಿದ್ದ ಮಿರಖಲ್ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಗೋವಿಂದ ಮಹಾರಾಜ ನೆಟ್‌ವರ್ಕ್‌ಗಾಗಿ ಮರ ಹತ್ತಿದ್ದಾರೆ. ಆದರೆ, ಮರ ಹತ್ತಿದ ನಂತರವೂ ಸರಿಯಾದ ನೆಟ್‌ವರ್ಕ್‌ ಸಿಗದೆ ಮರದಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ಸೆ.22ರಿಂದ ರಾಜ್ಯ ಸರ್ಕಾರ ಸಮೀಕ್ಷೆ ಆರಂಭಿಸಿದ್ದು, ಗಡಿ ಭಾಗದಲ್ಲಿರುವ ಮಿರಖಲ್ ಗ್ರಾಮದಲ್ಲಿ ನೆಟ್‌ ವರ್ಕ್‌ ಸಮಸ್ಯೆ ಹೆಚ್ಚಾಗಿ ಇರುವುದರಿಂದ ಅವರು ಮರಕ್ಕೆ ಹತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ನವದೆಹಲಿ: ರಷ್ಯಾ ಜೊತೆಗಿನ ಭಾರತದ ದೀರ್ಘಕಾಲದ ಪಾಲುದಾರಿಕೆಯನ್ನು ಮತ್ತು ಉಭಯ ದೇಶಗಳ ಬಂಧವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಮೂರನೇ ಆವೃತ್ತಿಯ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ –2025ಕ್ಕೆ ಗೌತಮಬುದ್ಧನಗರ ಜಿಲ್ಲೆಯ ಗ್ರೇಟರ್​ ನೋಯ್ಡಾದಲ್ಲಿ ಅವರು ಇಂದು ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಈ ಬಾರಿ ವ್ಯಾಪಾರ ಪ್ರದರ್ಶನದ ದೇಶದ ಪಾಲುದಾರ ರಷ್ಯಾ ನಮ್ಮ ಜೊತೆಯಾಗಿದೆ. ಈ ವ್ಯಾಪಾರ ಪ್ರದರ್ಶನದ ಮೂಲಕ ನಮ್ಮ ಸಮ–ಪರೀಕ್ಷಿತ ಪಾಲುದಾರಿಕೆ ಮತ್ತಷ್ಟು ಬಲಗೊಳ್ಳಲಿದೆ ಎಂದರು. ಜಾಗತಿಕ ಅಡೆತಡೆ ಮತ್ತು ಅನಿಶ್ಚಿತತೆ ನಡುವೆ ಭಾರತದ ಆರ್ಥಿಕತೆಯು ಬಲವಾಗಿ ಆಕರ್ಷಿತವಾಗಿ ಬೆಳೆಯುತ್ತಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಪ್ರೇಮಿಗಳು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ನಿಲ್ದಾಣದ ಬಳಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು. ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ ಮದುವೆ ಆಗೋಣವೆಂದು ನಿರ್ಧರಿಸಿದ್ದರು. ಅದರಂತೆ ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಆದರೆ ಜಾತಿ ಕಾರಣವೊಡ್ಡಿ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮದುವೆಗೆ ಪೋಷಕರು ಒಪ್ಪದ ಕಾರಣ ನೊಂದಿದ್ದ ಪ್ರೇಮಿಗಳು ಆತಹತ್ಯೆಗೆ ನಿರ್ಧರಿಸಿದ್ದಾರೆ. ನಿನ್ನೆ ಸತೀಶ್‌ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾನೆ. ಇಂದು ಬೆಳಗ್ಗೆ ಇಬ್ಬರು ಮನೆಯಿಂದ ಹೊರಬಂದಿದ್ದಾರೆ. ನಂತರ ಬೈಕ್‌ ನಲ್ಲಿ ತನ್ನ ಪ್ರಿಯತಮೆ ಶ್ವೇತಾಳನ್ನು ಸತೀಶ್‌ ಕರೆದುಕೊಂಡು ಮಾಲೂರಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿಹೋಗಿ ಬೈಕ್‌…

Read More

ದೊಡ್ಡಬಳ್ಳಾಪುರ: ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲಿ ದುಷ್ಕರ್ಮಿಗಳು ಸಿಮೆಂಟ್‌ ಇಟ್ಟಿಗೆಯಿಂದ ತಲೆ ಜಜ್ಜಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬುಲೆಟ್‌ ರಘು (38) ಎಂದು ಗುರುತಿಸಲಾಗಿದೆ. ತಡರಾತ್ರಿ ದುಷ್ಕರ್ಮಿಗಳ ಗುಂಪು ರಘು ಮೇಲೆ ದಾಳಿ ಮಾಡಿ ಇಟ್ಟಿಗೆಯಿಂದ ತಲೆಜಜ್ಜಿ ಕೊಲೆಗೈದು ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ಪಿ ರವಿ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್‌ ಸಾಧಿಕ್‌ ಬಾಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ವಯಕ್ತಿಕ ಕಾರಣಕ್ಕಾಗಿ ಪರಿಚಯಸ್ಥರೇ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಕೊಲೆಗೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More