Subscribe to Updates
Get the latest creative news from FooBar about art, design and business.
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
- ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
- ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
- ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
- ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್ ಲೈನ್ ಅರ್ಜಿ ಆಹ್ವಾನ
- ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
- NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಜು. 29ರಂದು ಔರಾದ್ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
Author: admin
ಕೊರಟಗೆರೆ: ಕೊರಟಗೆರೆ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಭರದಿಂದ ಸಾಗುತ್ತಿದ್ದು, ಕ್ಷೇತ್ರದ ಒಟ್ಟು 2,09,495 ಮತದಾರರಿಗೆ ಗಣಕೀಯ ನಮೂನೆ ಪತ್ರಗಳನ್ನು ತಲುಪಿಸುವ ಮೂಲಕ ಶೇಕಡಾ 100 ರಷ್ಟು ಪ್ರಗತಿ ಸಾಧಿಸಲಾಗಿದೆ. ಈಗಾಗಲೇ 1,68,482 (ಶೇ.82.25) ಮತದಾರರ ಡಿಜಿಟಲ್ ಸೇರ್ಪಡೆ ಪೂರ್ಣಗೊಂಡಿದೆ ಎಂದು ಮತದಾನ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದ್ದಾರೆ. ಕೊರಟಗೆರೆ ಪಟ್ಟಣದ 3ನೇ ವಾರ್ಡಿನಲ್ಲಿ ನಡೆಯುತ್ತಿರುವ ಮನೆ ಮನೆ ಬಿಎಲ್ ಓ (BLO) ಭೇಟಿ ಕಾರ್ಯಕ್ರಮಕ್ಕೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು. 8 ದಿನಗಳಲ್ಲಿ 100% ಡಿಜಿಟಲೀಕರಣದ ವಿಶ್ವಾಸ: ಕ್ಷೇತ್ರದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪರಿಷ್ಕರಣೆ ಕಾರ್ಯ ವೇಗವಾಗಿ ನಡೆಯುತ್ತಿದೆ. ಕೆಲಸ ನಿಧಾನವಾಗಿರುವ ಅಥವಾ ಗೊಂದಲವಿರುವ ಭಾಗಗಳಲ್ಲಿ ಹೆಚ್ಚುವರಿ ಬಿಎಲ್ಓ ಹಾಗೂ ಸಿಬ್ಬಂದಿಯನ್ನು ನೇಮಿಸಲಾಗಿದೆ. ಮುಂದಿನ 8 ದಿನಗಳ ಒಳಗಾಗಿ ಶೇ.100 ರಷ್ಟು ಡಿಜಿಟಲ್ ಸೇರ್ಪಡೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ನೋಂದಣಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಸ್ಥಳೀಯರ ಸಹಕಾರ ಅಗತ್ಯ:…
ಕೊರಟಗೆರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಹಳ್ಳಿಗಳ ಸರ್ವಾಂಗೀಣ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಬಡವರಿಗೆ ಆಸರೆಯಾಗಿ, ದೇವಾಲಯಗಳ ಜೀರ್ಣೋದ್ದಾರ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ (ಕರಿ ತಿಮ್ಮಪ್ಪ) ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸ್ವಾಮೀಜಿ ಅವರು ಮಾತನಾಡಿ, “ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಆರ್ಥಿಕ, ಶೈತ್ರಿಕ ಹಾಗೂ ಸಾಮಾಜಿಕವಾಗಿ ಆಸರೆಯಾಗಿರುವ ಈ ಸಂಸ್ಥೆಯ ಸೇವೆ ನಿಜಕ್ಕೂ ಅನುಕರಣೀಯ. ಇಂತಹ ಸಂಸ್ಥೆಗಳ ಪ್ರೋತ್ಸಾಹದಿಂದಲೇ ನಮ್ಮ ಹಳ್ಳಿಗಳು ಮತ್ತು ಪುರಾತನ ದೇವಾಲಯಗಳು ಉಳಿದು ಬೆಳೆಯುತ್ತಿವೆ” ಎಂದು ಹರ್ಷ…
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ದತ್ತು ಪಡೆಯಬೇಕೆಂಬ ಸರ್ಕಾರದ ಹೇಳಿಕೆಗೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್ಒ – AIDSO) ತೀವ್ರ ವಿರೋಧ ವ್ಯಕ್ತಪಡಿಸಿದೆ. ಸರ್ಕಾರದ ಈ ನಡೆಯು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗಿಯವರಿಗೆ ಹಸ್ತಾಂತರಿಸುವ ‘ಷಡ್ಯಂತ್ರ’ ಎಂದು ಸಂಘಟನೆ ಆಪಾದಿಸಿದೆ. ಖಾಸಗೀಕರಣದ ಹುನ್ನಾರ: AIDSO ಖಂಡನೆ ಖಾಸಗಿ ಸಂಸ್ಥೆಗಳಿಗೆ ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಯೋಜನೆಯು ಶಿಕ್ಷಣದ ವ್ಯಾಪಾರೀಕರಣಕ್ಕೆ ದಾರಿ ಮಾಡಿಕೊಡುತ್ತದೆ ಎಂದು ವಿದ್ಯಾರ್ಥಿ ಸಂಘಟನೆ ಆಕ್ರೋಶ ಹೊರಹಾಕಿದೆ. “ಲಾಭಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ಗುತ್ತಿಗೆ ನೀಡುವುದು ಸಾರ್ವಜನಿಕ ಶಿಕ್ಷಣದ ಆಶಯಕ್ಕೇ ಸಂಪೂರ್ಣ ವಿರುದ್ಧವಾಗಿದೆ. ಇದು ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ಒಪ್ಪಿಸುವ ಸ್ಪಷ್ಟ ಹುನ್ನಾರವಾಗಿದೆ.” — ಎಐಡಿಎಸ್ ಒ (AIDSO) ರಾಜ್ಯ ಸಮಿತಿ ‘ಬಜೆಟ್ ನಲ್ಲೇ ಹೆಚ್ಚಿನ ಅನುದಾನ ಮೀಸಲಿಡಿ’ ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರಿ ಶಾಲೆಗಳ…
ತುಮಕೂರು: ಎಸ್ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ಶುಭಕಲ್ಯಾಣ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರದಲ್ಲಿ ಗುರುತಿಸಲಾದ 22,98,879 ಸಂಖ್ಯೆಯ ಮತದಾರರೆಲ್ಲರಿಗೂ ಎನ್ಯುಮರೇಷನ್ ಅರ್ಜಿಗಳನ್ನು ವಿತರಣೆ ಮಾಡಲಾಗಿದ್ದು, ಈ ಪೈಕಿ 1,80,5783 ಅರ್ಜಿಯನ್ನು ಮರು ಸ್ವೀಕರಿಸಿ ಶೇ.78.55ರಷ್ಟು ಡಿಜಿಟೈಸೇಷನ್ ಮಾಡಲಾಗಿದೆ. ಇದರಲ್ಲಿ ಆನ್ ಲೈನ್ ಮೂಲಕ ಮತದಾರರಿಂದಲೇ ಸಲ್ಲಿಕೆಯಾದ ಅರ್ಜಿಗಳ ಸಂಖ್ಯೆ 10,930ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. 68,597 ಮಂದಿ ಮತದಾರರು ನಿಧನ, ಸ್ಥಳಾಂತರ ಮತ್ತಿತರ ಕಾರಣದಿಂದ ಗಣತಿ ವೇಳೆ ಲಭ್ಯವಾಗದಿರುವುದು ಕಂಡುಬಂದಿದೆ ಎಂದಿದ್ದಾರೆ. ಆಗಸ್ಟ್ 8ರವರೆಗೆ ಗಣತಿ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಅಷ್ಟರೊಳಗೆ ಎಲ್ಲಾ ಅರ್ಜಿದಾರರ ಅರ್ಜಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತಿಪಟೂರು: ಕನ್ನಡ ಚಲನಚಿತ್ರ ರಂಗದ ಸಂಗೀತ ಕ್ಷೇತ್ರದಲ್ಲಿ ಹಾಡುಗಾರಿಕೆಯನ್ನು ಉಸಿರಾಗಿಸಿಕೊಂಡ ಜಾನಕಮ್ಮ ನವರ ಸ್ವರ ಮಾಧುರ್ಯಕ್ಕೆ ಮನ ಸೋಲದವರೇ ಇಲ್ಲ ಎಂದು ಶ್ರೀ ಸಿದ್ಧಿವಿನಾಯಕ ಸೇವಾ ಸಂಘದ ಅಧ್ಯಕ್ಷ ಮಾದಿಹಳ್ಳಿ ಉಮೇಶ್ ತಿಳಿಸಿದರು. ತಾಲೂಕಿನ ಮೀಸೆ ತಿಮ್ಮನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಇತ್ತೀಚೆಗೆ ನಿಧನರಾದ ಕನ್ನಡ ಚಲನಚಿತ್ರ ರಂಗದ ಗಾನಕೋಗಿಲೆ ಎಸ್.ಜಾನಕಿ ಅಮ್ಮನವರಿಗೆ ನುಡಿ ನಮನ ಹಾಗೂ ಸ್ಮರಣಾರ್ಥವಾಗಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ತೋಟಾರಾಧ್ಯ ಮಾತನಾಡಿ, ನಮ್ಮ ಶಾಲೆಯನ್ನು ಗುರುತಿಸಿ, ಸ್ವರ ಸಾಮ್ರಾಜ್ಯ ಲೋಕದ ತಾರೆ ಜಾನಕಮ್ಮ ನವರ ಹೆಸರಿನಲ್ಲಿ ಮಕ್ಕಳ ವಿದ್ಯಾಭ್ಯಾಸದಲ್ಲಿ ಅನುಕೂಲವಾಗಲೆಂದು ಪರಿಕರಗಳನ್ನು ವಿತರಿಸಿರುವುದು ಸಂಗೀತ ಲೋಕಕ್ಕೆ ಸಂದ ಗೌರವವಾಗಿದೆ. 60 ವರ್ಷಗಳ ಸಂಗೀತ ಪಯಣದಲ್ಲಿ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 33 ವಿವಿಧ ರಾಜ್ಯಗಳ ಚಲನಚಿತ್ರ ಪ್ರಶಸ್ತಿಗಳು ಮುಡಿಗೇರಿಸಿಕೊಂಡು, ಅವರ ಕಂಠಕ್ಕಸರಿ ಸಾಟಿಯಿಲ್ಲದಂತೆ…
ಸರಗೂರು: ತಾಲೂಕಿನ ದಡದಹಳ್ಳಿ ಗ್ರಾಮದ ಸಣ್ಣಮ್ಮ ಎಂಬವರ ಜಮೀನಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದ್ದ ಕಾಡಾನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆಹಿಡಿದು ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಜಮೀನಿನಲ್ಲಿ ಕಾಡಾನೆ ಮರಿ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ತೀವ್ರ ಭೀತಿ ಎದುರಾಗಿತ್ತು. ಇದರಿಂದಾಗಿ ರೈತರು ಹೊಲ–ಗದ್ದೆಗಳಿಗೆ ಕೆಲಸಕ್ಕೆ ತೆರಳಲು ಹೆದರುವಂತಾಗಿದ್ದು, ಕೃಷಿ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು. ಈ ಕುರಿತು ಗ್ರಾಮಸ್ಥರು ನೀಡಿದ ತುರ್ತು ಮಾಹಿತಿಯನ್ನಾಧರಿಸಿ ಬುಧವಾರ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಾಕಾನೆಗಳ ನೆರವಿನೊಂದಿಗೆ ಮುನ್ನೆಚ್ಚರಿಕೆ ವಹಿಸಿ ಯಶಸ್ವಿ ಕಾರ್ಯಾಚರಣೆ ನಡೆಸಿದರು. ಯಾವುದೇ ಅನಾಹುತ ಸಂಭವಿಸದಂತೆ ಮರಿಯಾನೆಯನ್ನು ಸುರಕ್ಷಿತವಾಗಿ ಸೆರೆಹಿಡಿದು, ತಾಲೂಕಿನ ರಾಂಪುರ ಆನೆ ಶಿಬಿರಕ್ಕೆ ರವಾನಿಸಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರಕ್ಕೆ ಆಗ್ರಹ: ಕಾಡಾನೆ ಮರಿಯ ಓಡಾಟ ಹಾಗೂ ತುಳಿತದಿಂದಾಗಿ ಸಣ್ಣಮ್ಮ ಅವರ ಜಮೀನಿನಲ್ಲಿ ಬೆಳೆದಿದ್ದ ಜೋಳ ಹಾಗೂ ಹತ್ತಿ ಬೆಳೆಗಳು ಸಂಪೂರ್ಣ ನಾಶವಾಗಿವೆ. ಇದರಿಂದ ತಮಗೆ ಭಾರಿ…
ಬೆಂಗಳೂರು: ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಿದೆ. ಈಗಾಗಲೇ 1 ಕೋಟಿಯನ್ನು ಪ್ರತಿಯೊಬ್ಬ ಶಾಸಕರಿಗೂ ನೀಡಲು ತೀರ್ಮಾನಿಸಿದ್ದೇವೆ. ಅಲ್ಲದೇ, ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಪ್ರತಿ ಜಿಲ್ಲೆಗೆ 5 ಕೋಟಿ ಹಣವನ್ನು ನೀಡಿದ್ದೇವೆ. ಈಗಾಗಲೇ ಪಿಡಿ ಖಾತೆಗಳಲ್ಲಿ 329 ಕೋಟಿ ಲಭ್ಯವಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. “ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಲು ಎಲ್ಲಾ ಜಿಲ್ಲಾ ಪಂಚಾಯತ್ ಸಿಇಒಗಳು ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಡಲೇ ಜನರಿಗೆ ಉದ್ಯೋಗ ನೀಡುವಂತೆ ಸೂಚಿಸಿದ್ದೇನೆ. ನಮ್ಮಲ್ಲಿ ಹಣದ ಕೊರತೆ ಇಲ್ಲ. ಶೀಘ್ರವೇ ಕಾಮಗಾರಿಗಳನ್ನು ಆರಂಭಿಸುವಂತೆ ತಿಳಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ನಾವು ಪತ್ರ ಬರೆದಿದ್ದೇವೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗಸ್ಟ್ ತಿಂಗಳಲ್ಲಿ ಅವರು ಮನವಿಯನ್ನು ನಿರೀಕ್ಷಿಸುತ್ತಾರೆ. ಆವಾಗ ನಾವು ಮನವಿ ಸಲ್ಲಿಸಿದರೆ ಹಣವನ್ನು ಬಿಡುಗಡೆ ಮಾಡುತ್ತಾರೆ.” — ಡಾ. ಜಿ. ಪರಮೇಶ್ವರ್, ಉಪ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದ…
ತಿಪಟೂರು: ನಗರದ ಮಂಜುನಾಥ ನಗರದಲ್ಲಿ ಜುಲೈ 27ರಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅಶ್ವಥ್ ನಾರಾಯಣ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ತಾಲೂಕು ಆಡಳಿತ ಅಡೆತಡೆ ಉಂಟುಮಾಡುತ್ತಿದೆ ಎಂದು ಅಶ್ವಥ್ ನಾರಾಯಣ್ ಗಂಭೀರವಾಗಿ ಆರೋಪಿಸಿದ್ದಾರೆ. ತಿಪಟೂರು ತಾಲೂಕಿನ 26 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ನಗರ ಪ್ರದೇಶದಲ್ಲಿ ಸ್ಥಳೀಯ ಆಡಳಿತದಿಂದ ಸೂಕ್ತ ಅನುಮತಿ ಪಡೆದೇ ಪ್ರಚಾರದ ಬ್ಯಾನರ್ಗಳನ್ನು ಹಾಕಲಾಗಿತ್ತು. ಆದರೆ, ‘ನನ್ನ ಬೆಳವಣಿಗೆಯನ್ನು ಸಹಿಸದ ಕೆಲವರು ತಾಲೂಕು ಆಡಳಿತ ಮತ್ತು ಅಧಿಕಾರಿಗಳನ್ನು ತಮ್ಮ ಕೈಗೊಂಬೆಯಾಗಿಸಿಕೊಂಡು ನಾವು ಹಾಕಿದ್ದ ಬ್ಯಾನರ್ಗಳನ್ನು ತೆರವುಗೊಳಿಸಿದ್ದಾರೆ’ ಎಂದು ಅವರು ಕಟುವಾಗಿ ಕಿಡಿಕಾರಿದ್ದಾರೆ. ಜುಲೈ 27ರ ಕಾರ್ಯಕ್ರಮದಲ್ಲಿ ಸುಮಾರು 10 ರಿಂದ 12 ಸಾವಿರಕ್ಕೂ ಹೆಚ್ಚು ಜನರು, ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ. ಅವರಿಗೆ ‘ಭಾಗಿನ’ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಬೃಹತ್ ಕಾರ್ಯಕ್ರಮಕ್ಕೂ ತಾಲೂಕು ಆಡಳಿತ ಅನಗತ್ಯವಾಗಿ ತೊಂದರೆ ನೀಡುತ್ತಿದೆ ಎಂದು ಅವರು ಹೇಳಿದರು. ಉಚಿತ ನೋಟ್ ಬುಕ್ ವಿತರಣೆಗೂ ತಡೆ: ತಾಲೂಕಿನ ಸರ್ಕಾರಿ…
ತುಮಕೂರು: ನೀಟ್ ವಿಚಾರವನ್ನು ಮುಂದಿಟ್ಟುಕೊಂಡು ದೇಶ ಹಾಗೂ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಮುಂದಾಗಿದ್ದು, ರಾಜ್ಯದಲ್ಲಿ ಬಿಜೆಪಿ ಶಾಸಕರ ಮೇಲೆ ಗೂಂಡಾಗಿರಿ ನಡೆಸುತ್ತಿದೆ ಎಂದು ಆರೋಪಿಸಿ ಗುರುವಾರ ಜಿಲ್ಲಾ ಬಿಜೆಪಿ ಮುಖಂಡರು ನಗರದ ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜನರಿಂದ ತಿರಸ್ಕೃತರಾಗಿರುವ ಕಾಂಗ್ರೆಸ್, ಜನರ ವಿಶ್ವಾಸಗಳಿಸಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಭದ್ರಗೊಳಿಸಲು ಹೊರಟಿರುವುದು ನಾಚಿಕೆಗೇಡು. ನೀಟ್ ಪರೀಕ್ಷೆ ನೆಪ ಮಾಡಿಕೊಂಡು ದೇಶದ್ರೋಹಿಗಳ ಜೊತೆ ಸೇರಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡುವ ಮೂಲಕ ರಾಜಕೀಯ ಲಾಭ ಪಡೆಯಲು ಹೊರಟ ಕಾಂಗ್ರೆಸ್ ಉದ್ದೇಶ ಈಡೇರುವುದಿಲ್ಲ ಎಂದು ಕಿಡಿಕಾರಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿ, ಕಾಂಗ್ರೆಸ್ ಪಕ್ಷ ಅವಸಾನದ ಅಂಚಿನಲ್ಲಿದೆ. ದೇಶದಲ್ಲಿ ಕೇವಲ ಮೂರು ಕಡೆ ಕಾಂಗ್ರೆಸ್ ಆಡಳಿತದಲ್ಲಿದೆ. ಉತ್ತಮ ಆಡಳಿತ ನಡೆಸುತ್ತಿರುವ ಪ್ರಧಾನಿ ಮೋದಿಯವರ ವರ್ಚಸ್ಸು ಕಳೆಯಲು, ತನ್ನರಾಜಕೀಯ ಅಸ್ತಿತ್ವ…
ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೇತೃತ್ವದಲ್ಲಿ ವಕೀಲರು ಗುರುವಾರ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ನೀಟ್ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಕೀಲರು ಒತ್ತಾಯಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಟಿ.ಎನ್. ಸುರೇಶ್, “ಪ್ರಶ್ನೆಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ರಾಷ್ಟ್ರಪತಿಗಳು ಸಂವಿಧಾನದ ಅನುಚ್ಛೇದ 75(2)ರ ಅಡಿಯಲ್ಲಿ ತಮ್ಮ ಅಧಿಕಾರ ಬಳಸಿ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರಧಾನಿ ನಿವಾಸದೆದುರು ಧರಣಿ ನಡೆಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…