Author: admin

ತುಮಕೂರು: ಕಷ್ಟಪಟ್ಟು ದುಡಿದರೆ ಕನಸು ನನಸಾಗುತ್ತೆ ಅನ್ನೋದಕ್ಕೆ  ವೈ.ಎನ್. ಹೊಸಕೋಟೆ ಶ್ರೀನಿವಾಸ್.ಬಿ.  ಅವರು ಜೀವಂತ ಉದಾಹರಣೆ. ತಿಪಟೂರಿನ ಕಲ್ಪತರು ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ತೋರಿಸುತ್ತಿರುವ ಅವರು, ಈಗ ಅಂತರರಾಷ್ಟ್ರೀಯ ಟ್ರ್ಯಾಕ್‌ ನಲ್ಲಿ ಭಾರತದ ಬಾವುಟ ಹಾರಿಸಿದ್ದಾರೆ. ಜೂನ್ 5 ರಿಂದ 7 ರವರೆಗೆ ಮಲೇಷಿಯಾದ ಕೌಲಾಲಂಪುರ್‌ ನ ಯು.ಪಿ.ಎಂ. ಕ್ರೀಡಾಂಗಣದಲ್ಲಿ ನಡೆದ 38ನೇ ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್‌ ಶಿಪ್ ನಲ್ಲಿ ಶ್ರೀನಿವಾಸ್ ಅವರು ಸೌತ್ ಇಂಡಿಯಾ ಅಥ್ಲೆಟಿಕ್ಸ್ ಅಸೋಸಿಯೇಷನ್‌ ನಿಂದ ಆಯ್ಕೆಯಾಗಿ ಸ್ಪರ್ಧಿಸಿದರು. ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಸೇರಿ 28 ದೇಶಗಳ ಟಾಪ್ ಅಥ್ಲೀಟ್‌ ಗಳು ಪಾಲ್ಗೊಂಡಿದ್ದ ಈ ಪ್ರತಿಷ್ಠಿತ ಕೂಟದಲ್ಲಿ ಅವರು 100 ಮೀಟರ್, 200 ಮೀಟರ್, 400 ಮೀಟರ್ ಓಟ ಹಾಗೂ ತ್ರಿವಿಧ ಜಿಗಿತ — ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ಭಾಗವಹಿಸಿ ಎಲ್ಲದರಲ್ಲೂ ಕಂಚಿನ ಪದಕ ಗೆಲ್ಲುವ ಮೂಲಕ ಅಸಾಧ್ಯ ಸಾಧನೆ ಮಾಡಿದ್ದಾರೆ. ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು…

Read More

ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆರೆಯನ್ನು ಗ್ರಾಮಸ್ಥರಿಂದ ಹಸ್ತಾಂತರ ಪಡೆದು ಪುನಶ್ಚೇತನಗೊಳಿಸಿ, ಬಳಿಕ ಗ್ರಾಮಸ್ಥರಿಗೆ ಮರಳಿ ಹಸ್ತಾಂತರಿಸಲಾಯಿತು. ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಸ್ಥಳೀಯ ರೈತರ ಸಹಕಾರದೊಂದಿಗೆ 10 ಎಕರೆಗೂ ಅಧಿಕ ವಿಸ್ತೀರ್ಣದ ಕೆರೆಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿ ಪಡಿಸಲಾಗಿದ್ದು, ಯೋಜನೆಯ ವತಿಯಿಂದ ಇದುವರೆಗೆ ಪುನರುಜ್ಜೀವನಗೊಳಿಸಲಾದ 963ನೇ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿಧರ ಹಾಲಪ್ಪ ಅವರು ಕೆರೆಗೆ ಪೂಜೆ ಸಲ್ಲಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಈ ಕೆರೆ ಸ್ಥಳೀಯ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ನೀರಿನ ಮೂಲವಾಗಿ ಉಪಯೋಗವಾಗಲಿದ್ದು, ಗ್ರಾಮೀಣ ಪ್ರದೇಶದ ಜಲ ಸಂರಕ್ಷಣೆಗೆ ಇಂತಹ ಯೋಜನೆಗಳು ಅತ್ಯಂತ ಅಗತ್ಯ” ಎಂದು ಹೇಳಿದರು. ಈ ಸಂದರ್ಭದಲ್ಲಿ…

Read More

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಮೂಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೊಡಿ ಎಂದು ನಾವು ಬಿಜೆಪಿ ನಾಯಕರಲ್ಲಿ ಕೇಳಿರಲಿಲ್ಲ. ಜನರಿಗಾಗಿ ಧ್ವನಿ ಎತ್ತಲು ದೇವೇಗೌಡರು ಮತ್ತೊಮ್ಮೆ ರಾಜ್ಯಸಭೆಗೆ ಹೋಗಬೇಕು ಎಂಬುದು ಕೇವಲ ಜನರ ಆಶಯವಾಗಿತ್ತು. ನಾವು ಅಧಿಕೃತವಾಗಿ ಸೀಟು ಕೇಳದೇ ಇರುವುದರಿಂದ ನಮಗೆ ಯಾವುದೇ ಅಸಮಾಧಾನವಿಲ್ಲ” ಎಂದಿದ್ದಾರೆ. “ನಾವು ಸೀಟು ಕೇಳಿ, ಅವರು ಕೊಡದೇ ಇದ್ದಿದ್ದರೆ ಬೇಸರ ಮಾಡಿಕೊಳ್ಳಲು ಕಾರಣ ಇರುತ್ತಿತ್ತು. ಆದರೆ ಇಲ್ಲಿ ಆ ಪ್ರಶ್ನೆಯೇ ಬಾರದು. ಹೀಗಾಗಿ ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ” ಅಂತಾ ತಿಳಿಸಿದ್ದಾರೆ. “ನಮ್ಮ ಮೈತ್ರಿ ಕೇವಲ ಇಂದಿಗೆ ಸೀಮಿತವಾಗಿಲ್ಲ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿಯೇ ಮುನ್ನಡೆಯಲಿವೆ” ಎಂದು ಸುರೇಶ್ ಬಾಬು…

Read More

ಕಾನ್ಪುರ: ಕುಟುಂಬ ಸಂಬಂಧಗಳ ಮಿತಿಯನ್ನು ಮೀರಿ, ಅಳಿಯನೊಬ್ಬ ತನ್ನ ಸ್ವಂತ ಅತ್ತೆಯನ್ನೇ ನ್ಯಾಯಾಲಯದಲ್ಲಿ ಮದುವೆಯಾಗಿರುವ ವಿಚಿತ್ರ ಮತ್ತು ಶಾಕಿಂಗ್ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಇವರಿಬ್ಬರ ವಿವಾಹದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ವರದಿಗಳ ಪ್ರಕಾರ, ಅಳಿಯ ಮತ್ತು ಅತ್ತೆಯ ನಡುವೆ ಕಳೆದ ನಾಲ್ಕು ವರ್ಷಗಳಿಂದ ಆತ್ಮೀಯತೆ ಇತ್ತು ಎನ್ನಲಾಗಿದೆ. ಈ ಇಬ್ಬರ ನಡುವಿನ ಪ್ರೇಮ ಸಂಬಂಧವನ್ನು ಕುಟುಂಬಸ್ಥರಿಂದ ಸಂಪೂರ್ಣವಾಗಿ ಗುಪ್ತವಾಗಿಡಲಾಗಿತ್ತು. ಆದರೆ, ಇತ್ತೀಚೆಗೆ ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ಮನೆಯಿಂದ ಹೊರಬಂದು, ನೇರವಾಗಿ ನ್ಯಾಯಾಲಯದಲ್ಲಿ (ಕೋರ್ಟ್ ಮ್ಯಾರೇಜ್) ಮದುವೆಯಾಗಿದ್ದಾರೆ. ನ್ಯಾಯಾಲಯದಲ್ಲಿ ವಿವಾಹ ನೋಂದಣಿ ಮಾಡಿಕೊಂಡ ನಂತರ, ಕೈಯಲ್ಲಿ ಮದುವೆ ಪ್ರಮಾಣಪತ್ರ ಹಿಡಿದು, ಕೊರಳಿಗೆ ಹೂಮಾಲೆ ಧರಿಸಿರುವ ಈ ಜೋಡಿಯ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಇಬ್ಬರೂ ಸಮಾಜಕ್ಕೆ ಮನವಿ ಮಾಡಿದ್ದು, “ನಮ್ಮ ಸಂಬಂಧವನ್ನು ಸಮಾಜವು ಒಪ್ಪಿಕೊಳ್ಳಬೇಕು ಮತ್ತು ನಮಗೆ ಆಶೀರ್ವದಿಸಬೇಕು” ಎಂದು ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.…

Read More

ಮುಂಬೈ: ರಿಯಾಲಿಟಿ ಶೋವೊಂದರಲ್ಲಿ ಹಾಸ್ಯ ನಟನೊಬ್ಬ ತನ್ನ ಪತ್ನಿಯನ್ನೇ ಪೈಲ್ವಾನ್ ಜೊತೆ ಕುಸ್ತಿ ಮಾಡಲು ಅಖಾಡಕ್ಕೆ ಇಳಿಸಿದ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹೌದು, ಪ್ರಸಿದ್ಧ ‘ಲಾಫರ್ ಶೆಫ್ಸ್ ಅನ್‌ಲಿಮಿಟೆಡ್ ಎಂಟರ್‌ಟೈನ್‌ಮೆಂಟ್’ (Laughter Chefs) ರಿಯಾಲಿಟಿ ಶೋನಲ್ಲಿ ಈ ಸ್ವಾರಸ್ಯಕರ ಘಟನೆ ನಡೆದಿದೆ. ಇತ್ತೀಚೆಗೆ ಪ್ರಸಾರವಾದ ‘ಲಾಫರ್ ಶೆಫ್ಸ್ ಅಖಾಡ’ ವಿಶೇಷ ಎಪಿಸೋಡ್‌ಗೆ ದೇಶದ ಖ್ಯಾತ ಪೈಲ್ವಾನರು ಆಗಮಿಸಿದ್ದರು. ಶೋನಲ್ಲಿ ಸ್ಪರ್ಧಿಗಳು ಅಡುಗೆ ಮಾಡುವುದರ ಜೊತೆಗೆ ಮಸ್ತಿ-ತಮಾಷೆಯನ್ನೂ ಮಾಡುತ್ತಾರೆ. ಈ ವೇಳೆ ಬಂದಿದ್ದ ಪೈಲ್ವಾನರು ಸ್ಪರ್ಧಿಗಳಿಗೆ ಕಲ್ಲಿನಲ್ಲಿ ಚಟ್ನಿ ಅರೆದು ಕೊಟ್ಟು ಅಡುಗೆಗೆ ಸಹಾಯ ಕೂಡ ಮಾಡಿದ್ದಾರೆ. ಕಾರ್ಯಕ್ರಮದ ಮಧ್ಯೆ ಪೈಲ್ವಾನರ ಜೊತೆ ಕುಸ್ತಿ ಆಡುವ ಸವಾಲು ಎದುರಾದಾಗ, ಪ್ರಖ್ಯಾತ ಹಾಸ್ಯ ನಟ ಕೃಷ್ಣ ಅಭಿಷೇಕ್ (Krushna Abhishek) ತನ್ನ ಪತ್ನಿ ಕಾಶ್ಮೇರಾ ಶಾ (Kashmera Shah) ಅವರನ್ನು ಕುಸ್ತಿ ಮಾಡಲು ಮುಂದೆ ನೂಕಿದ್ದಾರೆ. ಗಂಡನ ಮಾತಿನಂತೆ ಅಖಾಡಕ್ಕಿಳಿದ ಕಾಶ್ಮೇರಾ, ನೇರವಾಗಿ ಪೈಲ್ವಾನನ…

Read More

ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಮಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವ ಕುರಿತು ಅತ್ಯಂತ ಭಾವುಕರಾಗಿ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗುವುದು ತಮ್ಮ ಬಹುಕಾಲದ ಕನಸಾಗಿದ್ದರೂ, ರಾಜಕೀಯ ಸನ್ನಿವೇಶಗಳಿಂದಾಗಿ ಅದು ಹೇಗೆ ಕೈಗೂಡಲಿಲ್ಲ ಎಂಬುದನ್ನು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ. “2013ರ ಚುನಾವಣೆಯಲ್ಲಿ ನಾನು ಸೋತಿದ್ದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಅಂದು ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ” ಎಂದು ಪರಮೇಶ್ವರ್ ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ. “2018ರಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಅವತ್ತು ನನ್ನನ್ನೂ ಮುಖ್ಯಮಂತ್ರಿ ಮಾಡಬಹುದಿತ್ತು, ಆದರೆ ಆ ಅವಕಾಶ ಸಿಗಲಿಲ್ಲ” ಎಂದು ಅವರು ಹೇಳಿದ್ದಾರೆ. ಪ್ರಸ್ತುತ ರಾಜಕೀಯ ವಿದ್ಯಮಾನಗಳಲ್ಲೂ ತಮಗೆ ಸಿಎಂ ಹುದ್ದೆಯ ನಿರೀಕ್ಷೆ ಇತ್ತು, ಆದರೆ ವಿವಿಧ ರಾಜಕೀಯ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ಪಕ್ಷದ ಹೈಕಮಾಂಡ್ ಜತೆಗಿನ…

Read More

ತುಮಕೂರು: ಸರ್ಕಾರದ ಅಧಿಕೃತ ಜಾಹೀರಾತುಗಳಲ್ಲಿ ತಮ್ಮ ಭಾವಚಿತ್ರವನ್ನು ಕೈಬಿಟ್ಟಿರುವ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿಗೆ ಹಿಂತಿರುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಇನ್ನೂ ಆ ಜಾಹೀರಾತುಗಳನ್ನು ಗಮನಿಸಿಲ್ಲ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ ಅಧಿಕಾರಿಗಳ ಮಟ್ಟದಲ್ಲಿ ಈ ಲೋಪವಾಗಿದ್ದರೆ ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈಗ ಸರ್ಕಾರದ ಕೆಲಸ ಮಾಡುವುದು ನಮಗೆ ಮುಖ್ಯವೇ ಹೊರತು, ಫೋಟೋ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ,” ಎಂದು ಹೇಳಿದರು. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರ ಜನ್ಮದಿನದ ಅಂಗವಾಗಿ ಹಿಂದುಳಿದ ವರ್ಗಗಳ ಇಲಾಖೆ ಬಿಡುಗಡೆ ಮಾಡಿದ್ದ ಸರ್ಕಾರಿ ಜಾಹೀರಾತುಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಪ್ರಮುಖವಾಗಿ ಪ್ರಕಟವಾಗಿತ್ತು. ಆದರೆ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನೂ ಹೊಂದಿರುವ ಡಿಸಿಎಂ ಪರಮೇಶ್ವರ್ ಅವರ ಫೋಟೋ ಇರಲಿಲ್ಲ. ಈ…

Read More

ಪಾವಗಡ : ಕರ್ನಾಟಕ ರಾಜ್ಯ ದಲಿತ ಹಿಂದುಳಿದ ವರ್ಗಗಳ ಮಠಾಧೀಶರು ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಡಾ.ವಾಲ್ಮೀಕಿ ಪ್ರಸನ್ನ ನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಹಿಂದುಳಿದ ಮಠಾಧೀಶರ ಒಕ್ಕೂಟದ 20ಕ್ಕೂ ಹೆಚ್ಚು ಪೂಜ್ಯ ಗುರುಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಬೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಕೃಷ್ಣ ಯಾದವನಂದ ಸ್ವಾಮೀಜಿ, ಡಾ. ಶಾಂತವೀರ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ಕುಂಬಾರ ಗುಂಡಯ್ಯ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಮಹರ್ಷಿ ವಾಲ್ಮೀಕಿ ಮೂರ್ತಿಗೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾಧ್ಯಕ್ಷ ಲೋಕೇಶ್ ಪಾಳೇಗಾರ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಗಿರಾಜು, ಮಾಜಿ ತಾ.ಪಂ ಸದಸ್ಯ ಅಂಜನ್ ನಾಯಕ, ಮಾಜಿ…

Read More

ಹುಮನಾಬಾದ್‌: ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗ್ರಾಮದಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ, ತಾಲೂಕು ಕೇಂದ್ರಕ್ಕೆ ತೆರಳುವ ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ನಿಗದಿತ ಬಸ್‌ ಸೌಕರ್ಯ ಇಲ್ಲದಿರುವುದರಿಂದ ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಸಿಗಾಗಿ ದೀರ್ಘ ಸಮಯ ಕಾಯಬೇಕಾದ ಪರಿಸ್ಥಿತಿ ಇದೆ ಎಂದು ದೂರಿದ್ದಾರೆ. ಕೂಡಲೇ ಚಿತ್ತಕೋಟಾ ಗ್ರಾಮಕ್ಕೆ ನಿಯಮಿತ ಸಮಯಕ್ಕೆ ಹೆಚ್ಚುವರಿ ಬಸ್‌ ಓಡಿಸಿ ಸಾರ್ವಜನಿಕರಿಗೆ ಹಾಗೂ ಶಾಲಾ–ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕದಸಂಸ ತಾಲೂಕಾಧ್ಯಕ್ಷ ರಾಹುಲ ಉದ್ದಾ, ಸಿದ್ದಾರ್ಥ ಕಾಂಬಳೆ, ಗೀತಾಬಾಯಿ, ರಮಾಬಾಯಿ, ವಿದ್ಯಾಸಾಗರ ಸಾದನೂರ, ರೇವಪ್ಪಾ ಡಾಂಗೆ, ಮಲ್ಲಮ್ಮ, ಸುವರ್ಣ ಮತ್ತಿತರರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ತುಮಕೂರು: ಸಮಾಜದ ಎಲ್ಲ ವರ್ಗಗಳೂ ಸಮಾನವಾಗಿ ಬದುಕಬೇಕು, ಉತ್ತಮ ಜೀವನ ರೂಪಿಸಿಕೊಳ್ಳಲೆಂಬ ಉದ್ದೇಶದಿಂದ ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಡವರ ಪರವಾಗಿ ಕೆಲಸ ಮಾಡಿಕೊಡುವುದು ನಮ್ಮ ಕರ್ತವ್ಯ ಕೂಡ ಎಂದು ಎಂದು ಉಪ ಮುಖ್ಯಮಂತ್ರಿ, ಡಾ.ಜಿ.ಪರಮೇಶ್ವರ ತಿಳಿಸಿದರು. ಜಿಲ್ಲಾಡಳಿತ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶದ ವತಿಯಿಂದ ಭಾನುವಾರ ಟೌನ್‌ಹಾಲ್ ವೃತ್ತದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ತುಮಕೂರು ಜಿಲ್ಲೆ ವಿವಿಧೆಡೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ವಸತಿರಹಿತ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಬಂದಿದೆ. ಈ ಸರ್ಕಾರದ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿದೆ ಎಂದರು. ಕರ್ನಾಟಕ ಇಡೀ ದೇಶದಲ್ಲೇ 25 ವರ್ಷಗಳಿಗೂ ಮುಂದಿರುವುದನ್ನು ತಾವು ಕಾಣಬಹುದು. ಬೇರೆ…

Read More