Subscribe to Updates
Get the latest creative news from FooBar about art, design and business.
- ತುರ್ತು ಚಿಕಿತ್ಸಾ ವೈದ್ಯರ ಹುದ್ದೆಯ ನೇರ ಸಂದರ್ಶನ
- ಮಹಿಳೆಯರಲ್ಲಿ ಮುಟ್ಟಿನ ನೈರ್ಮಲ್ಯದ ಅರಿವು ಅಗತ್ಯ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
- ವೈದ್ಯರ ಸೇವೆ ಉತ್ತಮವಾಗಿದ್ದರೆ ಜನ ಮಾನಸದಲ್ಲಿ ಉಳಿಯುತ್ತಾರೆ : ಸಿಇಒ
- ನಿಜಶರಣ ಅಂಬಿಗರ ಚೌಡಯ್ಯ ಜಯಂತಿ, ಅಕ್ಷರ ದಾಸೋಹ ದಿನಾಚರಣೆ
- ತುಮಕೂರು: ಜನವರಿ 21ರಂದು ಉಚಿತ ಆರೋಗ್ಯ ತಪಾಸಣೆ
- ಜನವರಿ 21: ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮ : ರಾಜ್ಯಪಾಲರಿಂದ ಉದ್ಘಾಟನೆ
- ದೇಶಕ್ಕೆ ದ್ರೋಹಿಯಾಗುವುದಕ್ಕಿಂತ ದೇಹಿಯಾಗುವುದು ಲೇಸು: ಹಿರೇಮಗಳೂರು ಕಣ್ಣನ್
- ಗೋಮೂತ್ರದಲ್ಲಿನ ಔಷಧೀಯ ಗುಣವಿದೆ: ಐಐಟಿ ಮದ್ರಾಸ್ ನಿರ್ದೇಶಕ
Author: admin
ಬೆಂಗಳೂರು: ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಆರೋಪಿಸಿದರು. ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ: ಮೈಕ್ರೋ ಫೈನಾನ್ಸ್ನವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೇ ಕಿರುಕುಳ ಕೊಟ್ಟರೂ ಅವರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿ ಆತನ ಜೀವ ಕಾಪಾಡಿದ್ದಾರೆ. ಸೋಮವಾರ ಬೆಳಗ್ಗೆ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಪ್ರಕಾರ, ಸೋಮವಾರ ಬೆಳಗ್ಗೆ 10:25ರ ಸುಮಾರಿಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗ ಬಿಹಾರ ಮೂಲದ ವಾಯುಪಡೆಯ ಮಾಜಿ ವ್ಯಕ್ತಿ ಅನಿಲ್ ಕುಮಾರ್ ಪಾಂಡೆ ಎಂಬುವವರು ಹಳಿ ಮೇಲೆ ಹಾರಿದ್ದಾರೆ. ಅವರು ಟ್ರ್ಯಾ ಕ್ಗೆ ಜಿಗಿದ ತಕ್ಷಣ, ತುರ್ತು ಟ್ರಿಪ್ ಸಿಸ್ಟಮ್ (ಇಟಿಎಸ್) ಅನ್ನು ಬಳಸಿ BMRCL ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ. ಘಟನೆಯ ನಂತರ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳ ಮೇಲೆ ಕೆಲಕಾಲ ಪರಿಣಾಮ ಬೀರಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಯಾವುದೇ ಗಾಯಗಳಾಗಿಲ್ಲ. 10:50ಕ್ಕೆ ಹಸಿರು ಮಾರ್ಗದಲ್ಲಿ ರೈಲು ಸೇವೆಗಳನ್ನು ಪುನರಾರಂಭಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಶಿವಮೊಗ್ಗ: ಬೀದಿ ನಾಯಿಯನ್ನು ಕೊಂದು ಆಟೋ ಹಿಂದೆ ಕಟ್ಟಿ ಎಳೆದೊಯ್ದ ಆಟೋ ಚಾಲಕನೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ವಾಜೀದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಕೆಂಚನಾಳ ಗ್ರಾಮದಲ್ಲಿ ಜ.16ರಂದು ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ಪಾಡಿಗೆ ಮಲಗಿದ್ದ ನಾಯಿಯ ತಲೆ ಮೇಲೆ ಪದೇ ಪದೇ ಕಲ್ಲು ಎತ್ತಿ ಹಾಕಿ ಅರೆ ಜೀವ ಮಾಡಿ ಬಳಿಕ ಆಟೋಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದು ಕೊಂದಿರುವ ಆರೋಪ ಕೇಳಿ ಬಂದಿದೆ. ಈ ಘಟನೆಯನ್ನು ಯುವಕನೊಬ್ಬ ವಿಡಿಯೋ ಮಾಡಿಕೊಂಡು ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮನೇಕಾ ಗಾಂಧಿ ಹಾಗೂ ಪ್ರಾಣಿ ದಯಾ ಸಂಘದವರ ಮೇಲ್ ಐಡಿಗೆ ಯುವಕನ ಮೊಬೈಲ್ನಿಂದಲೇ ಸಂದೇಶ ಕಳುಹಿಸಿದ್ದಾರೆ. ಕೇವಲ 45 ನಿಮಿಷಗಳಲ್ಲೇ ಸ್ಪಂದಿಸಿದ ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ಯುವಕನಿಗೆ ಕೂಡಲೇ ಸ್ಥಳೀಯ ಠಾಣೆಗೆ ತೆರಳಿ ದೂರು ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಶಿವಮೊಗ್ಗ ಎಸ್ಪಿ…
ಬೆಂಗಳೂರು: ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಮೂಕ ಪ್ರಾಣಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ ನೀಡಿದ್ದೇನೆಂದು ಹೇಳಿದರು. ಈ ರೀತಿಯ ಮನಸ್ಥಿತಿ ಇರುವವರನ್ನು ಮೊದಲು ಗುರುತಿಸಬೇಕು. ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ? ಅಥವಾ ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲಾ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ರವಿವಾರ ನಡೆದಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಅವಘಡದಿಂದ ಬಸ್ ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ. ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಢಾಬಾ ಮಾಲೀಕರ ದೂರಿನ ಆಧಾರದ ಮೇಲೆ ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: 50 ಸಾವಿರ ರೂಪಾಯಿ ಸಾಲ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿ ಸಾಲ ವಸೂಲಿ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ಘಟನೆ ಸಂಬಂಧ ಸಂತ್ರಸ್ತ ಬಾಲಕಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವಿಶಾಲ್ ಪುಂಡಲೀಕ ಡವಳಿ (22) , ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಫ್ ಐಆರ್ ನಲ್ಲಿ ವಿಶಾಲ್ ನ ತಂದೆ ಮತ್ತು ಸಹೋದರನ ಹೆಸರೂ ಇದೆ ಎಂದು ತಿಳಿದುಬಂದಿದೆ. ಬಾಲಕಿಯ ತಾಯಿಯು ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರಿಗೆ ಕಿವಿಯೋಲೆ ಅಡವಿರಿಸಿ 50 ಸಾವಿರ ಸಾಲ ಪಡೆದುಕೊಂಡಿದ್ದರು. ಒಪ್ಪಿದ ಅವಧಿಯೊಳಗೆ ಸಾಲು ಪಾವತಿ ಮಾಡದ ಹಿನ್ನೆಲೆ ಮಗಳನ್ನು ತನ್ನ ಮಗ ವಿಶಾಲ್ ಗೆ ಮದುವೆ ಮಾಡಿಕೊಡಲು ರೇಖಾ ಪುಂಡಲೀಕ ಒತ್ತಡ ಹೇರಲು ಆರಂಭಿಸಿದ್ದಳು, ಸೆಪ್ಟೆಂಬರ್ 17, 2024 ರಂದು, ಬಾಲಕಿಯನ್ನು ಅಪಹರಿಸಿ ಮರುದಿನ ಅಥಣಿಗೆ ಕರೆದೊಯ್ದು, ಅಲ್ಲಿ ತನ್ನ ಮಗನೊಂದಿಗೆ…
ತುಮಕೂರು: ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸೂಕ್ತ ಸಂದರ್ಭದಲ್ಲಿ ಸಿಗಬೇಕಾದರೆ ಪತ್ರಕರ್ತರ ಸಂಘಗಳು ಮತ್ತಷ್ಟು ಗಟ್ಟಿಗೊಳ್ಳಬೇಕಿದೆ. ಆ ಮೂಲಕ ಪತ್ರಿಕಾ ಸ್ವಾತಂತ್ರ, ಮತ್ತು ಅಭಿವ್ಯಕ್ತಿ ಸ್ವಾತಂತ್ರವನ್ನು ರಕ್ಷಣೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಮ್ಯಾಗ್ನೇಸ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಡಾ.ಪಿ.ಸಾಯಿನಾಥ್ ತಿಳಿಸಿದ್ದಾರೆ. ನಗರದ ಶ್ರೀಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ 39ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡುತಿದ್ದ ಅವರು, ಪತ್ರಿಕಾ ಒಕ್ಕೂಟಗಳು ಅವನತಿಯಾದರೆ ಸ್ವಾತಂತ್ರ ಪತ್ರಿಕೋದ್ಯಮ ಸತ್ತ ಹಾಗೆ. ಆದ್ದರಿಂದ ಪತ್ರಕರ್ತರು ಮತ್ತು ಸಂಘಟನೆಗಳು ಸಂಯುಕ್ತವಾಗಿ ಇಂತಹ ವೇದಿಕೆಗಳ ಹೋರಾಟ ನಡೆಸುವ ಅಗತ್ಯವಿದೆ ಎಂದರು. ಸಮ್ಮೇಳನಗಳು, ಕಾರ್ಯಾಗಾರಗಳಲ್ಲಿ, ಪತ್ರಕರ್ತರ ಸಮಸ್ಯೆಗಳ, ಹಕ್ಕು ಬಾಧ್ಯತೆಗಳನ್ನು ಚರ್ಚಿಸಲು ಇಂತಹ ವೇದಿಕೆಗಳು ನಿರಂತರವಾಗಿ ನಡೆಯಬೇಕು. ಪತ್ರಿಕೋದ್ಯಮ ಮತ್ತು ಪತ್ರಕರ್ತರ ನಡುವೆ ಸಾಕಷ್ಟು ವೈರುಧ್ಯವಿದೆ. ಉದ್ಯಮ ಬದಲಾವಣೆಗಳನ್ನು ಕಾಣುತ್ತಿದೆ. ವೃತ್ತಿಪರ ಪತ್ರಕರ್ತರ ಬದುಕು ಹಸನಾಗಲು ಸರಕಾರಗಳನ್ನು ಮನವೊಲಿಸುವ ತೀವ್ರ ಹೋರಾಟಗಳನ್ನು ಸಮ್ಮೇಳನಗಳಲ್ಲಿ ರೂಪಿಸಬೇಕೆಂದು ಪಿ.ಸಾಯಿನಾಥ್ ಸಲಹೆ ನೀಡಿದರು. ಬಂಡವಾಳ…
ಒಮ್ಮೆ ರಾಜನೊಬ್ಬ ಒಂದು ಕುಸ್ತಿ ಪಂದ್ಯ ಏರ್ಪಡಿಸಿ ಯಾರು ನನ್ನನ್ನು ಕುಸ್ತಿಯಲ್ಲಿ ಸೋಲಿಸುತ್ತಾರೋ ಅವರಿಗೆ ತನ್ನ ಮಗಳನ್ನು ಕೊಟ್ಟು ವಿವಾಹ ಮಾಡುವುದಾಗಿ ಡಂಗೂರ ಸಾರಿಸಿದನು. ರಾಜನನ್ನು ಸೋಲಿಸಲು ಬಹಳ ಜನ ಬಂದರು. ಕುಸ್ತಿ ಪಂದ್ಯ ಆರಂಭವಾಯಿತು ಎಲ್ಲರೂ ರಾಜನಿಂದ ಪರಾಭವಗೊಂಡು ಹೋಗುತ್ತಿದ್ದರೇ ಹೊರತು ಯಾರಿಂದಲೂ ರಾಜನನ್ನು ಸೋಲಿಸಲು ಆಗಲಿಲ್ಲ. ಜನರ ಗುಂಪಿನಲ್ಲಿ ಇದನ್ನೆಲ್ಲಾ ನೋಡುತ್ತಿದ್ದ ಒಬ್ಬ ಭಿಕ್ಷುಕನೊಬ್ಬನಿದ್ದ ತಾನೊಂದು ಕೈ ನೋಡಿಬಿಡುವ ಎಂದುಕೊಂಡು ಕಣಕ್ಕೆ ಬಂದ ಅವನ ಅದೃಷ್ಟವೋ ಏನೋ ಎಂಬಂತೆ ಕುಸ್ತಿಯಲ್ಲಿ ರಾಜನನ್ನು ಸೋಲಿಸಿಯೇ ಬಿಟ್ಟ, ಸಂತೋಷಗೊಂಡ ರಾಜ ನೀವೇನು ಕೆಲಸ ಮಾಡುತ್ತಿರುವಿರಿ ಎಂದಾಗ ಭಿಕ್ಷುಕ ತಾನು ಭಿಕ್ಷಾಟನೆ ಮಾಡುತ್ತಿರುವುದಾಗಿ ಹೇಳಿದ ಆದರೂ ರಾಜ ಅಳುಕದೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ವಿವಾಹ ಕಾರ್ಯ ಆರಂಭಿಸಿಯೇ ಬಿಟ್ಟ. ಭಿಕ್ಷುಕನಿಗೆ ಇದು ಸತ್ಯವೇ, ನನಗೆ ರಾಜನ ಮಗಳೊಂದಿಗೆ ವಿವಾಹವಾಗುವುದೇ? ಇದು ನನಸೇ, ಎಂದು ತನ್ನನ್ನು ತಾನೇ ನಂಬದಾದ. ಮತ್ತು ರಾಜನ ಮಗಳನ್ನು ಕೇಳಿದ ನಿಮಗೆ ನನನ್ನೊಡನೆ ವಿವಾಹ ಬೇಸರವಿಲ್ಲವೇ ಎಂದಾಗ ರಾಜನ ಮಗಳು…
ತುಮಕೂರು: ನೋಡುಗರಿಂದ ಓದುಗರಿಂದ ಪತ್ರಿಕೆಗಳು ದೂರದಲ್ಲಿವೆ. ರಾಜಕಾರಣಿಗಳು ಸಿನಿಮಾರಂಗದವರನ್ನ ಬಿಟ್ಟು ಜನಸಾಮನ್ಯರ ಬಳಿ ಪತ್ರಿಕೆಗಳು ಹೋಗಬೇಕಿದೆ ಆಗ ಓದುಗರ ಸಂಖ್ಯೆ ಹೆಚ್ಚುತ್ತದೆ, ಪತ್ರಿಕೆಗಳು ಸಿದ್ದಾಂತ, ನಡವಳಿಕೆಗಳನ್ನು ಬದಲಾಯಿಸದೆ ಹೋದರೆ ಕಷ್ಟ ಸಾಧ್ಯ, ನಾವು ವಿಶ್ವಾಸಾರ್ಹತೆ ಗಳಿಸಬೇಕು ಎಂದು ರವೀಂದ್ರ ಭಟ್ ಐನೈಕ್ಯ ಹೇಳಿದ್ದಾರೆ. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಕರ್ನಾಟಕ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುಮಕೂರಿನಲ್ಲಿ ನಡೆದ ಸಮ್ಮೇಳನ ಕ್ಕೆ ತುಮಕೂರು ಕಾ.ನಿ.ಪ. ಜಿಲ್ಲಾ ಸಂಘಕ್ಕೆ ಅಭಿನಂದನೆ ಸಲ್ಲಿಸುತ್ತೇನೆ, ಪತ್ರಕರ್ತರ ರಾಜ್ಯ ಸಮ್ಮೇಳನ ರಾಷ್ಟ್ರೀಯ ಸಮ್ಮೇಳನವಾಗಿ ಪರಿವರ್ತನೆಯಾಗಬೇಕು ಸಮ್ಮೇಳನಕ್ಕೆ ಸರ್ವಾಧ್ಯಕ್ಷರೊಬ್ಬರನ್ನು ಸೃಷ್ಟಿ ಮಾಡಬೇಕು ಎಂದು ತಿಳಿಸಿದರು. ಗೋಷ್ಠಿ ಉದ್ಘಾಟಿಸಿ ಮಾತನಾಡಿದ ವಿಜಯವಾಣಿ ಸಂಪಾದಕ ಕೆ.ಎನ್.ಚೇನ್ನೆಗೌಡ, ಪತ್ರಿಕೋದ್ಯಮದಲ್ಲಿ ಓದುಗರ ಕೊರತೆ ಇದೆ, ಸೋಷಿಯಲ್ ಮೀಡಿಯಾ ಅಬ್ಬರ ಹೆಚ್ಚಿದೆ. ಅದರಲ್ಲೂ ಸವಾಲುಗಳನ್ನು ಎದುರಿಸಿ ಪತ್ರಿಕೆಗಳು ನಡೆಯುತ್ತಿವೆ. ಓದುಗರನ್ನ ಜಾಗೃತೆಗೊಳಿಸುವುದು ಸಂಪಾದಕರು ಜವಾಬ್ದಾರಿ ಓದುಗರಲ್ಲಿ ಸುದ್ದಿಯ ಕುತೂಹಲ ಕೆರಳಿಸುವ ಹಂತದಲ್ಲಿ ವಿಫಲರಾಗುದ್ದೇವೆ ಎನ್ನುವ…
ತುಮಕೂರು: ಪತ್ರಿಕೋದ್ಯಮ ಇಂದು ತಾಂತ್ರಿಕವಾಗಿ ಬಹಳಷ್ಟು ಅಭಿವೃದ್ಧಿ ಹೊಂದಿದ್ದು ಪತ್ರಕರ್ತರಿಗೆ ಸಾಮಾಜಿಕ ಜಾಲತಾಣದಲ್ಲಿನ ಅನುಕೂಲಗಳಿಗಿಂತ ಸವಾಲುಗಳು ಹೆಚ್ಚಾಗಿವೆ ಎಂದು ವಿಜಯಕರ್ನಾಟಕ ದಿನಪತ್ರಿಕೆಯ ಸಂಪಾದಕರಾದ ಸುದರ್ಶನ್ ಚನ್ನಂಗಿಹಳ್ಳಿ ಅವರು ತಿಳಿಸಿದರು. ತುಮಕೂರು ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಎರಡು ದಿನಗಳ ಕರ್ನಾಟಕ ಕಾರ್ಯ ನಿರ್ವಹಿತ ಪತ್ರಕರ್ತರ ಸಂಘದ 39ನೇ ಸಮ್ಮೇಳನದ ‘ಸಾಮಾಜಿಕ ಜಾಲತಾಣ ಮತ್ತು ಪತ್ರಕರ್ತರ ಸವಾಲುಗಳು’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಮೊಬೈಲ್ ಗಳಲ್ಲಿ ಒಂದು ಆಪ್ ಹೇಗೆ ಅಪ್ಡೇಟ್ ಆಗುತ್ತದೆಯೋ ಅದೇ ರೀತಿಯಾಗಿ ತಾಂತ್ರಿಕವಾಗಿ ಇಂದಿನ ಪತ್ರಕರ್ತರು ಬದಲಾವಣೆ ಕಾಣಬೇಕಿದೆ ಪೆನ್ನಿನಲ್ಲಿ ಬರೆಯುವ ಅನೇಕ ಪತ್ರಕರ್ತರು ಇಂದಿನ ಡಿಜಿಟಲ್ ಮಾಧ್ಯಮಕ್ಕೆ ಅನಿವಾರ್ಯವಾಗಿ ಹೊಂದಿಕೊಂಡಿದ್ದಾರೆ. ಅದೇ ರೀತಿಯಲ್ಲಿ ಸರ್ಕಾರಿ ಕಚೇರಿಯಲ್ಲಿ ತಾಂತ್ರಿಕ ವ್ಯವಸ್ಥೆಗಳು ಜಾರಿಯಲ್ಲಿವೆ. ಹಾಗೆಯೇ ಇಂದಿನ ಪತ್ರಕರ್ತರು ನವಮಾಧ್ಯಮದ ಅಂತರ್ಯಗಳನ್ನ ಅರಿತುಕೊಂಡು ಪತ್ರಿಕೋದ್ಯಮವನ್ನು ಮುನ್ನಡೆಸಬೇಕು ಎಂದು ತಿಳಿಸಿದರು. ಇಂದು AI ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ನಮ್ಮ ಪತ್ರಕರ್ತರ ಕಾರ್ಯವೈಖರಿಗಳನ್ನು ಕಸಿದುಕೊಂಡಿದ್ದು, ಅನ್ಯ ಭಾಷೆಗಳ…