Subscribe to Updates
Get the latest creative news from FooBar about art, design and business.
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
- ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ: ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
Author: admin
ತುಮಕೂರು: ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ರಾಜ್ಯ ಮಟ್ಟದ ಪಾದರಕ್ಷಾ ತಯಾರಿಕಾ ಸ್ಪರ್ಧೆಗಾಗಿ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೈಜ ಚರ್ಮ ಕುಶಲಕರ್ಮಿಗಳಿಗೆ ಕರಕುಶಲತೆಯ ಕೌಶಲ್ಯ ಹಾಗೂ ಪಾದರಕ್ಷೆಗಳ ತಯಾರಿಕೆಯ ನೈಪುಣ್ಯ, ಸೃಜನಶೀಲತೆ, ತಾಂತ್ರಿಕ ಕೌಶಲ್ಯವನ್ನು ಗುರುತಿಸಿ ಉತ್ತೇಜಿಸುವ ಉದ್ದೇಶದಿಂದ ಚರ್ಮ ಕುಶಲಕರ್ಮಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸುವರ್ಣ ಅವಕಾಶ ಕಲ್ಪಿಸಿ, ಸ್ಥಳದಲ್ಲೇ ಪಾದರಕ್ಷಾ ತಯಾರಿಕೆ ಸ್ಪರ್ಧೆಯನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಆಸಕ್ತರು ಮೇ 30ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ, ಕೇಂದ್ರ ಕಚೇರಿ, ಬೆಂಗಳೂರು ಇವರಿಗೆ ಅಂಚೆ ಮೂಲಕ ಸಲ್ಲಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಪಾವಗಡ: ಪಟ್ಟಣದ ಶನಿಮಹಾತ್ಮ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಜಗನ್ನಾಥ್ (50) ಮಂಗಳವಾರ ಅಪಘಾತದಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಂಗಳವಾರ ಕುಟುಂಬ ಸಮೇತ ಅವರು ಪಾವಗಡದಿಂದ ಶಿವಮೊಗ್ಗ ಕಡೆ ಪ್ರವಾಸ ತೆರಳಿದ್ದು, ಚನ್ನಗಿರಿ ಪಟ್ಟಣದ ಸಮೀಪ ಇವರು ಪ್ರಯಾಣಿಸುತ್ತಿದ್ದ ಎರ್ಟಿಗಾ ಕಾರಿನ ಟೈಯರ್ ಪಂಚರ್ ಆಗಿ ಮರಕ್ಕೆ ಗುದ್ದಿ ಈ ಅಪಘಾತ ಜರುಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಜಗನ್ನಾಥ್ ಅವರ ಅತ್ತೆ, ಪತ್ನಿ, ಮತ್ತು ಮಗಳಿಗೆ ಹಾಗೂ ವಾಹನ ಚಾಲಕ ರಘು ಅವರಿಗೆ ತೀವ್ರ ಗಾಯಗಳಾಗಿರುವ ವರದಿಯಾಗಿದೆ. ಇವರನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಕಳೆದ 10 ದಿನಗಳ ಹಿಂದೆ ದೇವಸ್ಥಾನದ ಅರ್ಚಕರಾದ ಕೃಷ್ಣ ಶಾಸ್ತ್ರಿ ಎನ್ನುವವರು ಹೃದಯ ಘಾತದಿಂದ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ದೇವಸ್ಥಾನದ ಮ್ಯಾನೇಜರ್ ಜಗನ್ನಾಥ್ ಸಾವನ್ನಪ್ಪಿದ್ದು ಇದರಿಂದ ಶನಿಮಹಾತ್ಮ ದೇವಸ್ಥಾನದ ಸಮಿತಿ ತೀವ್ರ ಆಘಾತಕ್ಕೆ ಈಡಾಗಿದೆ.…
ಸಿರಾ: ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಋತುಚಕ್ರದ ಸಂದರ್ಭದಲ್ಲಿ ವೈಜ್ಞಾನಿಕ ರೀತಿಯಲ್ಲಿ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡುವ ಮೂಲಕ ಸೋಂಕುಗಳಿಂದ ಮುಕ್ತರಾಗಿ ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ ಎಂದು ತಾಯಿ ಮತ್ತು ಮಕ್ಕಳ ಆರೋಗ್ಯ, ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ ಆಪ್ತಸಮಾಲೋಚಕರಾದ ಕಾವೇರಿ ಎನ್. ಕರೆ ನೀಡಿದರು. ಅವರು ಕೂಸುಕುಂಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜನನಿ ಸಮಗ್ರ ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗಾಗಿ ಆಯೋಜಿಸಿದ್ದ ಋತುಸ್ರಾವದ ನೈರ್ಮಲ್ಯ, ಆರೋಗ್ಯ ಮತ್ತು ಪೋಕ್ಸೋ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಕಿಶೋರಿಯರು ಮತ್ತು ಹೆಣ್ಣುಮಕ್ಕಳು ಋತುಚಕ್ರದ ಸವಾಲುಗಳನ್ನು ಎದುರಿಸಲು ಮಾನಸಿಕ ಮತ್ತು ದೈಹಿಕವಾಗಿ ಸನ್ನದ್ಧರಾಗಬೇಕು. ಋತುಸ್ರಾವದೊಂದಿಗೆ ಬೆರೆತಿರುವ ಮೂಢನಂಬಿಕೆಗಳನ್ನು ಎದುರಿಸಲು ಕುಟುಂಬ ಮತ್ತು ಸಾಮಾಜಿಕ ಬೆಂಬಲದ ಅಗತ್ಯವೂ ಅವರಿಗಿದೆ ಎಂದರು. ವೈಯಕ್ತಿಕ ಸ್ವಚ್ಛತೆ, ರಕ್ತದ ಹೀರುವಿಕೆಗಾಗಿ ಬಳಸುವ ವಿವಿಧ ಸಲಕರಣೆಗಳ ಪರಿಚಯ, ಅವುಗಳ ಬಳಕೆಯಲ್ಲಿ ಸ್ವಚ್ಛತೆಯ ಪಾಲನೆ ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ಅವುಗಳ ನಿರ್ವಹಣೆಯ…
ತುಮಕೂರು: ಕಚೇರಿಗಳಿಗೆ ರೈತರ ಅಲೆದಾಟ ತಪ್ಪಿಸಲು ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇ-ಪೌತಿ, ಕಂದಾಯ ಗ್ರಾಮ ಹಕ್ಕು ಪತ್ರ, ದರಖಾಸ್ತು ಮೋಡಿ ಮತ್ತು ಪೋಡಿಮುಕ್ತ ಅಭಿಯಾನದ ಮೂಲಕ ರೈತರಿಗೆ ಯಾವುದೇ ಶ್ರಮವಿಲ್ಲದೆ ಯೋಜನೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕರ್ನಾಟಕ ಸರ್ಕಾರದ 3 ವರ್ಷದ ಸಾಧನೆಯ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಈ 3 ವರ್ಷದ ಅವಧಿಯಲ್ಲಿ ತುಮಕೂರು ಜಿಲ್ಲೆಯ 1,52,492 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಹಕ್ಕು ಪತ್ರ ನೀಡಲಾಗಿದೆ. ಸರ್ಕಾರದ 3 ವರ್ಷಗಳ ಸಾಧನೆ ಏನು ಎನ್ನುವವರಿಗೆ ಇದೇ ಉತ್ತರ ಎಂದರು. ಮಂಜೂರಾದ ಜಮೀನುಗಳಿಗೆ ರೈತರು 50 ವರ್ಷ ಕಳೆದರೂ ಹಕ್ಕು ದಾಖಲೆ ಪಡೆಯಲು ಸಾಧ್ಯವಾಗಿರಲಿಲ್ಲ. ಸರ್ವೆ ಸ್ಕೆಚ್, ಪೋಡಿ ಆಗದೆ ರೈತರು ತ್ರಿಶಂಕು ಸ್ಥಿತಿಯಲ್ಲಿದ್ದರು. ಹಿಂದಿನ ಸರ್ಕಾರ 2018 ರಿಂದ 2013 ರ ಅವಧಿಯಲ್ಲಿ ಕೇವಲ 8800 ಪೋಡಿ ದುರಸ್ತಿ ಮಾಡಿತ್ತು. ಈಗ ನಮ್ಮ…
ತುಮಕೂರು: ರಾಜ್ಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತುಮಕೂರನ್ನು ಬೆಂಗಳೂರಿನ ಭಾಗವಾಗಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮಾವೇಶದ ವೇದಿಕೆಯಲ್ಲಿ ಪ್ರಸ್ತಾಪಿಸಿ ಸಿಎಂ, ಡಿಸಿಎಂ ಅವರಲ್ಲಿ ಮನವಿ ಮಾಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶದಲ್ಲಿ ಮಾತನಾಡಿದ ಅವರು, ತುಮಕೂರು ಬೆಂಗಳೂರಿಗೆ ಕೇವಲ 60 ಕಿ.ಮೀ ದೂರವಿದೆ. ರಾಜಧಾನಿ ಜನದಟ್ಟಣೆ ನಿಯಂತ್ರಣ, ತುಮಕೂರು ಅಭಿವೃದ್ಧಿ ದೃಷ್ಟಿಯಿಂದ ತುಮಕೂರನ್ನು ಬೆಂಗಳೂರಿಗೆ ಸೇರಿಸಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗೃಹಸಚಿವ ಪರಮೇಶ್ವರ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಸಚಿವ ಕೃಷ್ಣ ಬೈರೇಗೌಡ ಇದ್ದರು. ಬೆಂಗಳೂರು ಬಿಟ್ಟರೆ ಸನಿಹದ ತುಮಕೂರಿಗೆ ಒಂದು ದೊಡ್ಡ ಇತಿಹಾಸ. ಶಿಕ್ಷಣ ಕಾಶಿ, ಕಲ್ಪತರು ನಾಡು, ಧಾರ್ಮಿಕ, ಐತಿಹಾಸಿಕ, ದಕ್ಷಿಣದ ಕಾಶಿಯಂತೆ ಕಂಗೊಳಿಸುತ್ತಿದೆ. ಅನ್ನ, ಅಕ್ಷರ, ಆಶ್ರಯ ನೀಡಿದಂತಹ ಒಂದು ಪವಿತ್ರವಾದಂತಹ ಭೂಮಿ. ಸಹೋದ್ಯೋಗಿ…
ರಾಘವೇಂದ್ರ ಅಡಿಗ ಎಚ್ಚೆನ್. ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆಯಾಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಶ್ ಲುಕ್ ಹಾಗೂ ಅದ್ಭುತ ಡ್ಯಾನ್ಸ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಭರ್ಜರಿ ನೃತ್ಯ ಸಂಯೋಜನೆ ಹಾಗೂ ಕಲರ್ಫುಲ್ ದೃಶ್ಯಗಳೊಂದಿಗೆ ಈ ಹಾಡು ರಕ್ಕಿ ಸುರೇಶ್ ಅವರನ್ನು ಹೊಸ ತಲೆಮಾರಿನ ಮಾಸ್ ಹೀರೋ ಆಗಿ ಪರಿಚಯಿಸುತ್ತದೆ. ಇಂದಿನ Gen Z ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ಹಾಡು ಟ್ರೆಂಡಿ ಬೀಟ್ಸ್, ಯೂತ್ಫುಲ್ ಎನರ್ಜಿ ಮತ್ತು ಸ್ಟೈಲಿಶ್ ಮೇಕಿಂಗ್ನಿಂದ ವಿಶೇಷ ಆಕರ್ಷಣೆಯಾಗಿದೆ. “ಹಚ್ಚಿಟ್ಟಿರೋ ಪಟಾಕಿ” ಎಂಬ ಸಾಹಿತ್ಯದ ಮೂಲಕ ನಾಯಕನ ಭರ್ಜರಿ ಎಂಟ್ರಿಯನ್ನು ಹಾಡಿನಲ್ಲಿ ಬಿಂಬಿಸಲಾಗಿದ್ದು, ಸಿಡಿಯಲು…
ಕುಣಿಗಲ್: ತಾಲ್ಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರ ಲಾಳಪುರದ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೆಂಗಳೂರಿನ ಜಯಮಾಲಾ (59) ಮತ್ತು ಅವರ ಮಗಳು ರಾಜೇಶ್ವರಿ (42) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಃ ರಾಯಚೂರಿನವರಾದ ಇವರು ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಜೇಶ್ವರಿ ಅವರ ಮಗ ಪ್ರೀತಮ್ ನನ್ನು ಶಾಲೆಗೆ ಸೇರಿಸುವ ಸಲುವಾಗಿ ಇವರು ಬೆಂಗಳೂರಿನಿಂದ ತುಮಕೂರಿಗೆ ರೈಲಿನಲ್ಲಿ ಬಂದಿದ್ದರು. ಅಲ್ಲಿಂದ ತಮ್ಮ ಸಂಬಂಧಿ ಮಹಾವೀರ ಅವರೊಂದಿಗೆ ಕಾರಿನಲ್ಲಿ ಶ್ರವಣಬೆಳಗೊಳಕ್ಕೆ ತೆರಳುತ್ತಿದ್ದರು. ಈ ವೇಳೆ ಲಾಳಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಮಹಾವೀರ ಮತ್ತು ಬಾಲಕ ಪ್ರೀತಮ್ ಸದ್ಯ ಆಸ್ಪತ್ರೆಯಲ್ಲಿ…
ನಮ್ಮತುಮಕೂರು ವರದಿ: (Namma Tumakuru) ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ತುಮಕೂರಿನಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಬಿಜೆಪಿಯವರಂತೆ ದ್ವೇಷದ ಬೆಂಕಿಯನ್ನು ಹಚ್ಚುವ ಅಥವಾ ವಿಷ ಬಿತ್ತುವ ಕೆಲಸವನ್ನು ಎಂದಿಗೂ ಮಾಡಿಲ್ಲ” ಎಂದು ಹೇಳಿದರು. ಬಿಜೆಪಿ ಇವತ್ತು ಅಧಿಕಾರಕ್ಕಾಗಿ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸಿ, ದ್ವೇಷವನ್ನು ಹಚ್ಚುವ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. ನರೇಂದ್ರ ಮೋದಿಯವರು 12 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದರು ಮತ್ತು ಕಳೆದ 35 ವರ್ಷಗಳಿಂದ ಗುಜರಾತ್ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ ಎಂಬುದನ್ನು ನೆನಪಿಸಿದ ಸಿದ್ದರಾಮಯ್ಯನವರು, ಸ್ಥಳೀಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. “ಇಲ್ಲಿನ ಬಿಜೆಪಿ ನಾಯಕರಾದ ಯಡಿಯೂರಪ್ಪ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ಮತ್ತು ವಿಜಯೇಂದ್ರ ಅವರು ಯಾವಾಗಲೂ ‘ಗುಜರಾತ್ ಮಾದರಿ ಸರ್ಕಾರ’…
ಕೊರಟಗೆರೆ: ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಅಂಗವಾಗಿ ಕೊರಟಗೆರೆ ತಾಲ್ಲೂಕು ಆಡಳಿತ ಕಂದಾಯ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ಒಟ್ಟು 13,353 ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಮೂಲಕ ಹೊಸ ಮೈಲಿಗಲ್ಲು ನಿರ್ಮಿಸಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇ–ಪೌತಿ ಆಂದೋಲನದಡಿ 8,018 ಫಲಾನುಭವಿಗಳಿಗೆ ಇ–ಪೌತಿ ವಿತರಣೆ ಮಾಡಲಾಗಿದೆ. ಬಹುಕಾಲದಿಂದ ಬಾಕಿ ಉಳಿದಿದ್ದ 273 ದರಖಾಸ್ತು ಪೋಡಿ ಪ್ರಕರಣಗಳನ್ನು ಕಾರ್ಯರೂಪಕ್ಕೆ ತಂದು ರೈತರು ಹಾಗೂ ಭೂಸ್ವಾಮಿಗಳಿಗೆ ನೆಮ್ಮದಿ ಕಲ್ಪಿಸಲಾಗಿದೆ. ಸವಲತ್ತುಗಳಿಂದ ವಂಚಿತವಾಗಿದ್ದ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸುವ ಉದ್ದೇಶದಿಂದ 1,770 ಫಲಾನುಭವಿಗಳಿಗೆ ಕಂದಾಯ ಗ್ರಾಮ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವು ಮೇ 19ರಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಪೂರ್ಣಗೊಂಡ ಮನೆ ಗಣತಿ ಕಾರ್ಯದ ವೇಳೆ ಭಾರಿ ಪ್ರಮಾಣದಲ್ಲಿ ಜನರ ವಲಸೆ ಹೋಗಿರುವುದು ಬೆಳಕಿಗೆ ಬಂದಿದೆ. ಜನಗಣತಿಯ ಭಾಗವಾಗಿ ನಡೆದ ಈ ಪ್ರಕ್ರಿಯೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 1,514 ಮನೆಗಳಿಗೆ ಬೀಗ ಹಾಕಿರುವುದು ಕಂಡುಬಂದಿದೆ. ಏಪ್ರಿಲ್ 16ರಿಂದ ಮೇ 15ರ ವರೆಗೆ ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 8,97,038 ಮನೆಗಳ ಗಣತಿ ಮಾಡುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಗಣತಿ ಸಮಯದಲ್ಲಿ ಅನೇಕ ಕುಟುಂಬಗಳು ಮನೆಗೆ ಬೀಗ ಹಾಕಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಜಿಲ್ಲೆಯ ಪಾವಗಡ, ಶಿರಾದ ಗಡಿ ಭಾಗಗಳು, ಚಿಕ್ಕನಾಯಕನಹಳ್ಳಿ ಹಾಗೂ ತುಮಕೂರು ನಗರ ಪ್ರದೇಶಗಳಲ್ಲಿ ಅತಿ ಹೆಚ್ಚು ಮನೆಗಳಿಗೆ ಬೀಗ ಹಾಕಲಾಗಿದೆ. ವಿಶೇಷವಾಗಿ ಪಾವಗಡ ಮತ್ತು ಶಿರಾ ಭಾಗದ ಜನರು ಉದ್ಯೋಗ ಹಾಗೂ ಜೀವನೋಪಾಯ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗಿರುವುದರಿಂದ ಇಲ್ಲಿನ ಮನೆಗಳು ಖಾಲಿ ಬಿದ್ದಿವೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 5,253 ಗಣತಿ ಬ್ಲಾಕ್ಗಳನ್ನು (ಹೌಸ್ ಲಿಸ್ಟಿಂಗ್ ಬ್ಲಾಕ್) ಗುರುತಿಸಲಾಗಿದ್ದು,…