Subscribe to Updates
Get the latest creative news from FooBar about art, design and business.
- ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ: ಡಿ.ಕೆ.ಸುರೇಶ್
- ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
- ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
- ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
- ಖಮೇನಿ ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
- ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್ ಬಾಬು ಸೂಚನೆ
- ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
- ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
Author: admin
ಬೆಳಗಾವಿ : ಜಿಲ್ಲೆಯ ಸುಳೆಭಾವಿ ಗ್ರಾಮದಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ನಡೆದಿದೆ. ಹಂತಕರು ಇಬ್ಬರು ಯುವಕರ ಮೇಲೆ ಅಟ್ಯಾಕ್ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಳೆಭಾವಿ ಗ್ರಾಮದ ಮಹೇಶ್ ರಾಮಚಂದ್ರ ಮುರಾರಿ,25, ಪ್ರಕಾಶ್ ನಿಂಗಪ್ಪಾ ಉಪರಿ ಪಾಟೀಲ 22 ಎಂಬಾತರು ಹತ್ಯೆಗೀಡಾದ ದುರ್ದೈವಿಗಳು. ಹಿರಿಯ ಪೋಲೀಸ್ ಅಧಿಕಾರಿಗಳು ಸುಳೆಭಾವಿ ಗ್ರಾಮಕ್ಕೆ ದೌಡಾಯಿಸಿದ್ದಾರೆ. ಪರಿಸ್ಥಿತಿ ಈಗ ಉದ್ವಿಗ್ನವಾಗಿದ್ದು ಮಾರಿಹಾಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಗಾಳಿಪಟ ಹಾರಿಸುವಾಗ ಆಯತಪ್ಪಿ ಕಟ್ಟಡ ಮೇಲಿಂದ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಉಜ್ವಲ್ ನಗರದ ತಿರಂಗಾ ಕಾಲೋನಿಯ ಅರ್ಮಾನ್ ದಫೆದಾರ್(11) ಮೃತ ಬಾಲಕ. ನಿನ್ನೆ ಅಶೋಕ ನಗರದ ತಮ್ಮ ಸಂಬಂಧಿಕರ ಮನೆಗೆ ಕುಟುಂಬಸ್ಥರ ಜೊತೆಗೆ ಬಾಲಕ ಬಂದಿದ್ದನು. ಈ ವೇಳೆ ಅಣ್ಣನ ಜೊತೆಗೆ ಗಾಳಿಪಟ ಹಾರಿಸಲು ಕಟ್ಟಡದ ಟೆರಸ್ ಮೇಲೆ ಹೋಗಿದ್ದಾನೆ. ಈ ವೇಳೆ ಗಾಳಿಪಟ ಹಾರಿಸುವಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರ್ಮಾನ್ ಇಂದು ಕೊನೆಯುಸಿರೆಳೆದಿದ್ದಾನೆ. ಮಗನ ಕಳೆದುಕೊಂಡ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ ಗ್ರಾಮ ಪಂಚಾಯಿತಿ ಪಿಡಿಓ ಗಜದಂಡಯ್ಯ ಕೊಲೆಯಾದ ವ್ಯಕ್ತಿ.ಹಳೆ ವೈಷಮ್ಯ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪಿಡಿಓನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಲಿಂಗಸಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಮತ್ತು ಬಿಜೆಪಿ ನಡೆಸಿದ ಜನಸ್ಪಂದನಾ ಕಾರ್ಯಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಭಾರತ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆ ಉದ್ದೇಶವೇನು ಎಂದು ಜನರಿಗೆ ಗೊತ್ತೇ ಇಲ್ಲ . ಮೇಕೆದಾಟು ವಿಚಾರವಾಗಿ ದೊಡ್ಡಮಟ್ಟದಲ್ಲಿ ಪಾದಯಾತ್ರೆ ಮಾಡಿದರು. ಮೇಕೆದಾಟು ಅಲ್ಲಿಯೇ ಇದೆ ಇನ್ನೇನು ಆಗಲಿಲ್ಲ. ಈಗ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಇದರಿಂದ ಜನರ ಬದುಕಲ್ಲಿ ಏನು ಬದಲಾವಣೆಯಾಗಲ್ಲ ಎಂದು ಟಾಂಗ್ ನೀಡಿದರು. ಹಾಗೆಯೇ ಬಿಜೆಪಿ ಜನಸ್ಪಂದನಾ ಯಾತ್ರೆ ಬಗ್ಗೆ ಟೀಕಿಸಿದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯವರು ಜನಸ್ಪಂದನಾ ಕಾರ್ಯಕ್ರಮ ಮಾಡಿದ್ರು. ಜನಸ್ಪಂದನಾ ಕಾರ್ಯಕ್ರಮದಲ್ಲಿ ತೊಡೆ ತಟ್ಟಿದ್ದು ಶಕ್ತಿ ಪ್ರದರ್ಶನ ಬಿಟ್ರೆ ಬೇರೇನೂ ಮಾಡಲಿಲ್ಲ. ಸರ್ಕಾರ ಮಾಡಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಲೇ ಇಲ್ಲ ಎಂದು ಕುಟುಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಮಂಡ್ಯ : ಭಾರತ್ ಜೋಡೋ ಪಾದಯಾತ್ರೆ ಬಳಿಕ ರಾಜ್ಯಾದ್ಯಂತ ಬಸ್ ಯಾತ್ರೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದತೆ ನಡೆಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ತಿಂಗಳು ಕೊನೆಯಲ್ಲಿ ನಡೆಯಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಸ್ ಯಾತ್ರೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ಬಸ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ವರಿಷ್ಠರನ್ನು ಸದ್ಯದಲ್ಲೇ ಭೇಟಿ ಮಾಡಿ ಅವರ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಹಿನ್ನೆಲೆಯಲ್ಲಿ ಮಾಯಸಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡದಲ್ಲಿ ಚೌದರಿ ಟೀ ರಂಗಪ್ಪ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎನ್ನಾರ್ ಜಯರಾಮ್ ರವರ ನೇತೃತ್ವದಲ್ಲಿ ಮಾಯಸಂದ್ರ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಚುಂಚನಗಿರಿಯಿಂದ ಆಗಮಿಸುವ ರಾಹುಲ್ ಗಾಂಧಿಯವರನ್ನು ಬರಮಾಡಿಕೊಳ್ಳಲು ಹಾಗೂ ಮಾಯಸಂದ್ರದಿಂದ ತುರುವೇಕೆರೆವರೆಗೂ ಪ್ರತಿ ಗೇಟ್ ನಲ್ಲಿ ಆಹಾರ ನೀರು ಹಣ್ಣುಗಳ ವಿತರಿಸುವ ಸ್ಟಾಲ್ ಗಳನ್ನು ಜವಾಬ್ದಾರಿಯೊಂದಿಗೆ ವಿತರಿಸುವ ಹೊಣೆಗಾರಿಕೆಯನ್ನು ಆಯಾ ಭಾಗದ ಕಾಂಗ್ರೆಸ್ ಮುಖ್ಯಸ್ಥರುಗಳಿಗೆ ವಹಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕಾಂತರಾಜ್ ರವರು ಮಾತನಾಡಿ, ಕನಿಷ್ಠ ಮಾಯಸಂದ್ರ ಹೋಬಳಿಯಿಂದ ಸಾವಿರ ಜನ ಪಾದಯಾತ್ರೆಗಳನ್ನು ಕರೆತಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ಕಾರ್ಯಕರ್ತರಲ್ಲಿ ಹಾಗೂ ಮುಖಂಡರುಗಳಲ್ಲಿ ಮನವಿ ಮಾಡಿಕೊಂಡರು. ಸುಮಾರು 40 ಸಾವಿರ ಜನಕ್ಕೆ ಊಟ ತಿಂಡಿ ವ್ಯವಸ್ಥೆ, ಉಪಹಾರ ವ್ಯವಸ್ಥೆ, ನೀರು ಎಲ್ಲವನ್ನು ನೋಡಿಕೊಳ್ಳುವುದಾಗಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಭಾರತ ಐಕ್ಯತಾ ಯಾತ್ರೆಯ ರಾಹುಲ್ ಗಾಂಧಿಯ ಆಗಮನದ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಸಿದ್ಧತೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ಸ್ಥಳ ಪರಿಶೀಲನೆ ನಡೆಸಿದರು. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಪಾದಯಾತ್ರೆ ಗಳಿಗೆ ಊಟದ ವ್ಯವಸ್ಥೆ, ಸುಸಜ್ಜಿತವಾಗಿ ಶಾಮಿಯಾನ ವ್ಯವಸ್ಥೆ, ನೀರಿನ ವ್ಯವಸ್ಥೆ ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಮಾಡುವಲ್ಲಿ ಸಂಬಂಧಪಟ್ಟ ಮೇಲುಸ್ತುವಾರಿಗಳಿಗೆ ಮಾಹಿತಿ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆಯ ಗ್ರಾಮ ದೇವತೆಗಳಾದ ಶ್ರೀ ವೀರಭದ್ರ ಸ್ವಾಮಿ, ಶ್ರೀ ಕೆಂಪಮ್ಮ ದೇವಿ, ಪ್ಲೇಗಿನಮ್ಮ ದೇವಿ, ಶ್ರೀ ಗೌರಮ್ಮ ಮತ್ತು ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಗೌರಮ್ಮ ಮತ್ತು ಗಣಪತಿ ಮೂರ್ತಿ ತೆಪ್ಪೋತ್ಸವದ ಮಾಡುವುದರ ಮೂಲಕ 15 ವರ್ಷಗಳ ನಂತರ ತುಂಬಿದ ಹಾಲ್ಕುರಿಕೆ ಅಮಾನಿ ಕೆರೆಯಲ್ಲಿ ವಿಸರ್ಜಿಸಲಾಯಿತು. ಕಾರ್ಯಕ್ರಮದಲ್ಲಿ ಕೋವಿಯ ಮುಖಾಂತರವಾಗಿ ಅಂಬು ಹೊಡೆಯುವ ದೃಶ್ಯ ಗಮನ ಸೆಳೆಯಿತು. ಇದನ್ನು ನೋಡಲು 15 ರಿಂದ 20 ಹಳ್ಳಿಯಿಂದ ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಗಂಗಾ ಪೂಜೆ, ಮಡಿಲಕ್ಕಿ ಪೂಜೆ ಇನ್ನು ಹಲವು ಪೂಜೆಗಳನ್ನು ಭಕ್ತಿ ಭಾವದೊಂದಿಗೆ ಸಲ್ಲಿಸಲಾಯಿತು. ತೆಪ್ಪೋತ್ಸವದ ಮುಖಾಂತರವಾಗಿ ಗೌರಮ್ಮ ಮತ್ತು ಗಣಪತಿಯ ವಿಸರ್ಜನೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಥಾಯ್ಲೆಂಡ್; ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಡೇ ಕೇರ್ ಸೆಂಟರ್ ಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ಪರಿಣಾಮ 22 ಮಕ್ಕಳು ಸೇರಿ 34 ಮಂದಿ ಸಾವನ್ನಪ್ಪಿರುವ ಘಟನೆ ಥಾಯ್ಲೆಂಡ್ ನಲ್ಲಿ ನಡೆದಿದೆ. ಥಾಯ್ಲೆಂಡ್ ನಲ್ಲಿ ಮಕ್ಕಳ ಡೇ ಕೇರ್ ಸೆಂಟರ್’ನಲ್ಲಿ ಗುಂಡಿನ ದಾಳಿಯಲ್ಲಿ 34 ಜನ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಶೂಟೌಟ್ ಮುನ್ನ ಮಾಜಿ ಪೊಲೀಸ್ ಅಧಿಕಾರಿ ತನ್ನ ಪತ್ನಿ ಹಾಗೂ ಮಗುವನ್ನಕೊಂದಿದ್ದಾನೆ. ನಂತರ ಡೇ ಕೇರ್ ಗೆ ನುಗ್ಗಿ 34 ಜನರ ಪ್ರಾಣ ಬಲಿ ಪಡೆದಿದ್ದಾನೆ ಎನ್ನಲಾಗಿದೆ. ಬಳಿಕ ತಾನೂ ಶೂಟೌಟ್ ಮಾಡಿಕೊಂಡು ಅಸುನೀಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತದ ನಿಯಂತ್ರಕರು ಮತ್ತು ಮಹಾಲೇಖಪಾಲರ (ಸಿಎಜಿ) ವರದಿ, ಕೇಂದ್ರ ಸರ್ಕಾರದ ದೀನದಯಾಳ್ ಉಪಾಧ್ಯಾಯ ಗ್ರಾಮ ಜಯೋತಿ ಯೋಜನೆ (ಡಿಡಿಯುಜಿಜೆವೈ) ಹಾಗೂ ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ (ಸೌಭಾಗ್ಯ) ಯೋಜನೆಗಳಡಿ ಕರ್ನಾಟಕದಲ್ಲಿ ಐದು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂಗಳು), ಗುತ್ತಿಗೆಗಳ ಮಂಜೂರಾತಿ ಹಾಗೂ ನಿಧಿ ನಿರ್ವಹಣೆಯಡಿ ಉಂಟಾಗಿರುವ ಕೊರತೆಗಳು ಮತ್ತು ಲೋಪಗಳನ್ನು ಉಲ್ಲೇಖಿಸಿದೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕವಿಲ್ಲದ 39 ಗ್ರಾಮಗಳು, ಭಾಗಶಃ ವಿದ್ಯುತ್ ಸಂಪರ್ಕವಿರುವ ೧೩,೯೪೯ ಗ್ರಾಮಗಳು ಹಾಗೂ ೫,೭೦,೯೨೨ ಬಿಪಿಎಲ್ ಕುಟುಂಬಗಳಿಗೆ ಈ ಯೋಜನೆಗಳಡಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದರೂ ಸಹ, ಯೋಜನೆಯಡಿ ಉಂಟಾಗಿರುವ ಲೋಪಗಳು ಹಾಗೂ ಅದರಿಂದ ಆಗಿರುವ ಸಮಯ ಮತ್ತು ಹಣದ ನಷ್ಟದ ಕುರಿತು ನಿಗಾವಹಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಎಸ್ಕಾಂಗಳ ವೈಫಲ್ಯದ ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಿಎಜಿ ಆಡಿಟ್ ಅಡಿ ಪರಿಗಣಿಸಲಾಗಿದ್ದಂತಹ ಐದು ಎಸ್ಕಾಂಗಳ ಪೈಕಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್),…