Subscribe to Updates
Get the latest creative news from FooBar about art, design and business.
- ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
- ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?
- ಬೀದರ್ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
- ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
- ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
- ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
- ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
- ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
Author: admin
ಬೆಂಗಳೂರು: ಈಗಾಗಲೇ ಬೆಂಗಳೂರು, ರಾಜ್ಯಾದ್ಯಂತತ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಕಿರುಕುಳ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಬಳಿಕ ಮತ್ತೆ ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮಾಹಿತಿ ನೀಡಿದಂತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ‘ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ ಎಂದರು. ಆದರೆ, ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ…
ಕೊಡಗು: ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದಿನ ತಡೆಗೋಡೆ ಕುಸಿತ ನೋಡಲು ತೆರಳಿದ್ದ ಅವರಲ್ಲಿ ಸ್ಥಳೀಯರು ವಾಹನ ಸಂಚಾರ ನಿಷೇಧಿಸದೆ ದುರಸ್ತಿ ಕಾರ್ಯ ನಡೆಸುವಂತೆ ಮನವಿ ಮಾಡಿದರು. ಮಡಿಕೇರಿ ಒಂದು ಕಿ.ಮೀ ದೂರವಷ್ಟೆ ಇದೆ. ಆದರೆ ವಾಹನ ಸಂಚಾರ ನಿಷೇಧಿಸಿರುವುದರಿಂದ 10 ಕಿ.ಮೀ ದೂರ ಪ್ರಯಾಣ ಮಾಡಬೇಕಿದೆ ಎಂದು ಅಳಲು ತೋಡಿಕೊಂಡರು. ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಮಳೆಯಿಂದ ಗುಡ್ಡದ ಒಂದು ಪಾರ್ಶ್ವ ಕುಸಿದಿದ್ದ ಮದೆನಾಡಿಗೂ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಬಾಲ ತಪಸ್ವಿ, ಸುವರ್ಣ ಶ್ರೀ, ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರ 41 ನೇ ಜನ್ಮದಿನದ ಅಂಗವಾಗಿ ಶ್ರೀ ಮಠಕ್ಕೆ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀಗಳನ್ನು ಸನ್ಮಾನಿಸಿ ಶುಭ ಹಾರೈಸಿದರು. ನಂತರ ಶ್ರೀಗಳು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ರವರನ್ನು ಶ್ರೀಗಳು ಸನ್ಮಾನಿಸಿ ಸಂಘಟನೆಯ ಬಗ್ಗೆ ಕೆಲವೊಂದು ಮಾರ್ಗದರ್ಶನವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್, ತಾಲ್ಲೂಕು ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್., ರಾಕೇಶ್ ಗಂಗಾಧರ್, ಪುಟ್ಟರಾಜು, ಮಹದೇವ್ ಇತರರು ಹಾಜರಿದ್ದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುರುವೇಕೆರೆ: ತಾಲ್ಲೂಕಿನ ಕಸಬಾ ಮತ್ತು ಮಾಯಸಂದ್ರ ಹೋಬಳಿಯ ಗ್ರಾಮಗಳಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಸಾಲಾ ಜಯರಾಮ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಶಾಸಕರು ಮಾತನಾಡಿ , ಗ್ರಾಮಗಳ ಜನರಿಗೆ ನೀಡಿದಂತಹ ಭರವಸೆಯನ್ನು ನಾನು ಈಡೇರಿಸಿದ್ದೇನೆ. ಹಾಗೆಯೇ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ಗ್ರಾಮಗಳಲ್ಲಿ ಮಣ್ಣು ರಹಿತ ರಸ್ತೆ ಗಳನ್ನಾಗಿ ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು. ನಿಮ್ಮ ಮನೆಯ ಮಗನಾಗಿ ನಿಮ್ಮ ಸೇವೆಗೆ ಯಾವಾಗಲೂ ಸಿದ್ದನಿದ್ದೇನೆ. ಗ್ರಾಮಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಲಾಗುವುದು. ವಿವಿಧ ಗ್ರಾಮಗಳಲ್ಲಿ ಸುಮಾರು 95 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಚಿಕ್ಕೋನಹಳ್ಳಿ ಗ್ರಾಮದಲ್ಲಿ ಸಿ.ಸಿ. ರಸ್ತೆ ಕಾಮಗಾರಿ ಅಂದಾಜು ವೆಚ್ಚ 10 ಲಕ್ಷ, ಕಳ್ಳನಕೆರೆ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ಅಂದಾಜು ವೆಚ್ಚ 20 ಲಕ್ಷ, ದೊಡ್ಡ ಮಲ್ಲಿಗೆರೆಯಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿ ಅಂದಾಜು ಮೊತ್ತ 25 ಲಕ್ಷ, ಚಿಕ್ಕ…
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದು, ದೇಶಕ್ಕೆ ಬೆಳ್ಳಿ ಪದಕಕ್ಕೆ ನೀಡಿದ್ದಾರೆ. ಈ ಸಾಧನೆ ಭಾರತದ ಪಾಲಿಗೆ ಹೆಮ್ಮೆ ಎಂದೆನ್ನಬಹುದು. ಏಕೆಂದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ನಲ್ಲಿ ನೀರಜ್ ಚೋಪ್ರಾ ಅವರ ಚೊಚ್ಚಲ ಪಂದ್ಯ ಉತ್ತಮವಾಗಿರಲಿಲ್ಲ. ನೀರಜ್ ಚೋಪ್ರಾ ಅವರ ಮೊದಲ ಎಸೆತವು ಫೌಲ್ ಎಂದು ಸಾಬೀತಾಯಿತು. ಮೊದಲ ಪ್ರಯತ್ನದಲ್ಲಿಯೇ ವಿಫಲರಾದ ಚೋಪ್ರಾ, ಎರಡನೇ ಸುತ್ತಿನಲ್ಲಿ ಜಾವೆಲಿನ್ ಅನ್ನು 82.39 ಮೀಟರ್ ದೂರಕ್ಕೆ ಎಸೆದರು. ಇನ್ನು ಮೂರನೇ ಸುತ್ತಿನಲ್ಲಿ ತಮ್ಮ ಪ್ರದರ್ಶನವನ್ನು ಸುಧಾರಿಸಿದ್ದರು. ಈ ಸುತ್ತಿನಲ್ಲಿ 86.37 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಪದಕ ಗೆಲ್ಲುವ ಭರವಸೆ ಮೂಡಿಸಿದರು. ಇನ್ನು ನಾಲ್ಕನೇ ಪ್ರಯತ್ನದಲ್ಲಿ, ನೀರಜ್ ಶ್ರಮವನ್ನೆಲ್ಲಾ ಒಗ್ಗೂಡಿಸಿ ಬರೋಬ್ಬರಿ 88.13 ಮೀ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಪದಕ ಗೆಲ್ಲುವ ರೇಸ್ ಗೆ ಪ್ರವೇಶಿಸಿದರು.…
ಚಳ್ಳಕೆರೆ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಚಂದ್ರಪ್ಪ ಮಾತನಾಡಿ, ಮೂಢನಂಬಿಕೆಗಳನ್ನು ತೊಡೆದುಹಾಕಿ ಬಾಬಾಸಾಹೇಬರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ನಿಮ್ಮ ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕರೆ ನೀಡಿದರು. ದಲಿತರಿಗೆ, ಅಸ್ಪೃಶ್ಯರಿಗೆ , ಶೋಷಿತರಿಗೆ ದೌರ್ಜನ್ಯ , ಅತ್ಯಾಚಾರಗಳು ನಡೆದರೆ, ಅಂತಹ ಸಂದರ್ಭದಲ್ಲಿ ಸಮುದಾದ ಪರವಾಗಿ ನಿಂತು ಪ್ರತಿಯೊಬ್ಬರೂ ನ್ಯಾಯಕೊಡಿಸುವ ಕೆಲಸ ಮಾಡಬೇಕು ಎಂದು ನೂತನ ಪದಾಧಿಕಾರಿಗಳಿಗೆ ತಿಳಿಸಿದರು. ಹಿರಿಯ ದಲಿತ ಮುಖಂಡರಾದ ವಿಜಯಕುಮಾರ್ ಅವರು ನೂತನ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿ, ಸಂಘಟನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬಾರದಂತೆ, ತಾಯಿ ಹೃದಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಚಳ್ಳಕೆರೆ ತಾಲೂಕು ಅಧ್ಯಕ್ಷರು ಮಾತನಾಡಿ, ನಮ್ಮ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಆರ್ ಕೋದಂಡರಾಮ್ ಅವರು ಬಹಳ ಒಳ್ಳೆಯ ಹೋರಾಟಗಾರರು ಇಂತಹ ರಾಜ್ಯ ಅಧ್ಯಕ್ಷರು ಸಿಕ್ಕಿರುವುದು ನಮ್ಮ…
ತಿಪಟೂರು: ನಗರದ ಪ್ರತಿಷ್ಠಿತ ಜನವಸತಿ ಪ್ರದೇಶಗಳಾದ ಮಾರನಗೆರೆ ಶಾರದಾ ನಗರ .ಶ್ರೀ ಸಿದ್ದಾರಾಮೇಶ್ವರ ಬಡಾವಣೆ.ನಾರಾಯಣಗೌಡ ಲೇಹೌಟ್.ಶಿವನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆಗಳ ಓಡಾಟ ಕಂಡುಬಂದಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ ಪ್ರತಿದಿನ ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ವಾಯುವಿಹಾರಿಗಳು ಸಂಚರಿಸುವ ಮಾರ್ಗವಾಗಿದ್ದು, ಜನವಸತಿ ಪ್ರದೇಶದ ಪಕ್ಕದ ತೋಟಗಳಲ್ಲಿ ಎರಡು ಚಿರತೆ ಸಂಚಾರ ಕಾಣಿಸಿಕೊಂಡ ಕಾರಣ ಆತಂಕಕ್ಕೆ ಕಾರಣವಾಗಿದ್ದು, ರಾತ್ರಿ ಚಿರತೆ ಸಂಚರಿಸುವಾಗ ವಾಹನ ಸವಾರೊಬ್ಬರು ತಮ್ಮ ಮೊಬೈಲ್ ಮೂಲಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋ ನೋಡಿದ ಇಲ್ಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಅರಣ್ಯ ಇಲಾಖೆ ಶೀಘ್ರವೇವಾಗಿ ಚಿರತೆ ಸೆರೆಹಿಡಿಯ ಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ಪರಿಶೀಲನೆ ನಡೆದಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಆಂಧ್ರಪ್ರದೇಶದ ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಅಪಘಾತಕ್ಕೊಳಗಾದವರು ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ತನಿಖೆಯ ಸಂಬಂಧ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ತಾಲ್ಲೂಕಿನ ಅಯ್ಯನಬಾವಿ ಆಟದ ಮೈದಾನದಲ್ಲಿ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಅಯ್ಯನಬಾವಿ ರಾಯಲ್ ಕ್ರಿಕೆಟರ್ಸ್ ವತಿಯಿಂದ ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ನಡೆಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿ,ಗ್ರಾಮೀಣ ಭಾಗಗಳಲ್ಲಿ ಇಂತಹ ಕ್ರೀಡಾ ಚಟುವಟಿಕೆಗಳು ನಡೆಯುತ್ತಿರುವುದು ತುಂಬ ಸಂತೋಷದ ಸುದ್ದಿ. ಇಂತಹ ಗ್ರಾಮೀಣ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು. ಬಳಿಕ ಬ್ಯಾಟು ಬೀಸುವುದರ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಗ್ರಾಮದ ಹಿರಿಯ ಮುಖಂಡ ಕೃಷ್ಣಪ್ಪ, ಸಮಾಜ ಸೇವಕ ಬೋಜೇಗೌಡ ಮತ್ತು ಪ್ರಥಮ ದರ್ಜೆ ಅರಣ್ಯ ಗುತ್ತಿಗೆದಾರ ಬಿ.ಆರ್.ಶಶಿಧರ್ ಮಾತನಾಡಿದರು. ಮತ್ತೀಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷೆ ತೇಜಾವತಿ ಶ್ರೀನಿವಾಸ್, ಸದಸ್ಯ ತಿಮ್ಮರಾಜು, ಮಾಜಿ ಸದಸ್ಯರಾದ ಮೂರ್ತಿ, ನಾಗರಾಜ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ.ಕುಮಾರ್, ಮುಖಂಡರಾದ ಗಂಗಾಧರಯ್ಯ ಮತ್ತು ಸತೀಶ್ ಸೇರಿದಂತೆ ಸಂಘಟನೆ ರಾಯಲ್ ಕ್ರಿಕೆಟರ್ಸ್ ನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಆನಂದ್…
ತಿಪಟೂರು: ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ಯಾರ್ಡ್ ನಲ್ಲಿರುವ ಟಿಎಪಿಸಿ ಎಂ ಎಸ್ ಲಿಮಿಟೆಡ್ ನ ಕಚೇರಿಯ ಬಾಗಿಲು ಮುರಿದು, ಸುಮಾರು 53 ಸಾವಿರ ನಗದು ದೋಚಿ ಘಟನೆ ನಡೆದಿದೆ. ಕಳ್ಳರು ಕೃತ್ಯದ ವೇಳೆ ದಾಖಲಾತಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದು, ಘಟನೆ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಶಂಕರ ಮೂರ್ತಿ (ಮಡೇನೂರು) , ರಾತ್ರಿ ನಗರದ ನಮ್ಮ ಕಛೇರಿಯಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಗರ ಮತ್ತು ತಾಲೂಕಿನಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಘಟನೆ ಬೆನ್ನಲ್ಲೇ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz