Author: admin

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿ ಗ್ರಾಮಸ್ಥರ ಹಾಗೂ ಭಕ್ತಾದಿಗಳ ಬಹುದಿನದ ಬೇಡಿಕೆಯಾಗಿದ್ದ ನೂತನ ಬಸ್ ನಿಲ್ದಾಣದ ಕಾಮಗಾರಿಗಳಿಗೆ 50 ಲಕ್ಷ ರೂ. ಗಳನ್ನು ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು, ನೂತನ ಬಸ್ ನಿಲ್ದಾಣದ ಕಾಮಗಾರಿಗಳಿಗೆ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು. ಇದಕ್ಕೂ ಮುನ್ನ ಅವರು ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಆಶೀರ್ವಾದ ಪಡೆದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಬಸವರಾಜ ಮ್ಯಾಗೋಟಿ, ಮಹೇಶ ಸುಗ್ಗೆಣ್ಣವರ, ಮಂಜುನಾಥ, ಮಲ್ಲೇಶ, ಉದಯ ಕೆಸರೂರು, ಬಾಳೇಶಿ, ಶೇಖರ ಹೊಸೂರಿ, ಬಸನಗೌಡ ಪಾಟೀಲ, ದೇವಣ್ಣ ಬಂಗೆಣ್ಣವರ, ಸಂತೋಷ, ಫಕೀರ್ ಕೋಲಕಾರ, ಶೇಖರ ಶಿಣಗಿ, ವಿಠ್ಠಲ ಬಂಡಿಗಿಣಿ, ಇಸ್ಮಾಯಿಲ್ ತಿಗಡಿ, ಕಲ್ಲಪ್ಪ ಕಾಮಕರ, ಸಂಭಾಜಿ ಯಮ್ಮಜಿ, ವಿಠ್ಠಲ ಮಂಡು, ನಾಗಯ್ಯ ಕುಡಚಿಮಠ, ನಾಗಯ್ಯ ಹಂಪಿಹೊಳಿ, ಮಂಜುನಾಥ ಪಟಲಿ, ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು, ಎನ್.ಪಿ. ತಿಮ್ಮಾರೆಡ್ಡಿ, ದಿನೇಶ್, ಮಂಜುನಾಥ, ಸುಳೇಬಾವಿ ಗ್ರಾಮ ಪಂಚಾಯಿತಿ…

Read More

ಕೊರಟಗೆರೆ: ಹಿಂದೂ ಅನ್ನೋದು ಪರ್ಷಿಯನ್ ಪದ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಸಂಬಂಧ ನಟ ಅಹಿಂಸಾ ಚೇತನ್  ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದಲ್ಲಿ ಪ್ರತಿಕ್ರಿಯಿಸಿದರು. ಸಿದ್ದರಬೆಟ್ಟದಲ್ಲಿ ನಡೆಯುತ್ತೀರುವ ಅಡವಿ ಚಲನಚಿತ್ರ ಚಿತ್ರಕರಣ ಸ್ಥಳಕ್ಕೆ ಆಗಮಿಸಿದ್ದ ನಟ ಚೇತನ್ ಮಾಧ್ಯಮಗಳ ಜೊತೆಗೆ ಮಾತನಾಡಿ,  ಸತೀಶ್‌ ಜಾರಕಿಹೊಳಿ ಹೇಳಿಕೆಯಲ್ಲಿ ಸತ್ಯ ಇದ್ರೇ ವಾಪಸ್ ಪಡಿಬಾದ್ರು,  ಕ್ರಿ.ಪೂ 6 ನೇ ಶತಮಾನದಲ್ಲಿ ಸಿಂದೂ ನದಿಯ ಹಿಂದೆ ಇದ್ದವರಿಗೆ ಹಿಂದೂ ಎಂಬ ಪದ ಪರ್ಷಿಯನ್‌ ರಿಂದ ಬಂದಿದೆ.  ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ವಾಪಸ್ ಪಡೆಯೋದಕ್ಕಿಂತ ದಾಖಲೆ ಒದಗಿಸಿ ವಿಶ್ಲೇಷಣೆ  ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು. ಪುರಾವೆ ಮತ್ತು ದಾಖಲೆ ಇಲ್ಲದೇ ಹೇಳಿಕೆ ನೀಡಬಾದ್ರು, ನೀಡಿದ ಮೇಲೆ ಅಧ್ಯಯನದ ವಿಶ್ಲೇಷನೆ ನೀಡ್ಬೇಕು. ಹಿಂದೂ, ಹಿಂದುತ್ವ, ಹಿಂದುಧರ್ಮ, ಹಿಂದೂಸ್ತಾನ, ಹಿಂದೂರಾಜ ಎಂಬ ಪದಗಳು ಬೇರೆ ಬೇರೆ ಚೌಕಟ್ಟಿನಲ್ಲಿ ಬೇರೆಯದೇ ಅರ್ಥ ಕೊಡುತ್ತದೆ.  ರಾಜಕೀಯ ಉದ್ದೇಶದಿಂದ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂದಕ್ಕೆ ಪಡೆದಿರೋದು…

Read More

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣಾ ಕಾರ್ಯಪಡೆ ಸಭೆ ಸೋಮವಾರ ನಡೆಯಲಿದೆ. ಎಐಸಿಸಿ ಅಧ್ಯಕ್ಷರಾದ ನಂತರ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಕಾರ್ಯಾಪಡೆ ಸಭೆ ಸೇರಲಿದ್ದು, ಮುಂಬರುವ 2024 ಚುನಾವಣೆಗೆ ಪಕ್ಷದ ಕಾರ್ಯನೀತಿ ಕುರಿತು ಚರ್ಚೆ ನಡೆಸಲಿದೆ. ಕಾರ್ಯಪಡೆಯ ಕಾಂಗ್ರೆಸ್ ಹಿರಿಯ ಮುಖಂಡರಾದ ಪಿ.ಚಿದರಂಬರಂ, ಮುಕುಲ್ ವಾಸ್ನಿಕ್, ಜೈರೂಮ್ ರಮೇಶ್, ಕೆಸಿ ವೇಣುಗೋಪಾಲ್, ಅಜಯ್ ಮಾಕೇನ್, ರಣದೀಪ್ ಸುರ್ಜೆವಾಲಾ, ಪ್ರಿಯಾಂಕಾ ಗಾಂಧಿ, ಸುನೀಲ್ ಕಾನುಗೊಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜಸ್ಥಾನದ ಉದಯ್ ಪುರದಲ್ಲಿ ಕಾಂಗ್ರೆಸ್ ಚಿಂತನ್ ಶಿಬಿರ ಏಪ್ರಿಲ್ ನಲ್ಲಿ ನಡೆದಿತ್ತು. ನಂತರ ಎಐಸಿಸಿ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಸಭೆ ನಡೆದಿರಲಿಲ್ಲ. ಇದೀಗ ಖರ್ಗೆ ಅಧಿಕಾರಕ್ಕೆ ಬಂದ ನಂತರ ಮೊದಲ ಸಭೆ ಸೋಮವಾರ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಿವಮೊಗ್ಗ: ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಅವರ ಪಕ್ಷದ ಮುಖಂಡರು, ನಾಯಕರು ಖಂಡಿಸಿದ್ದಾರೆ. ಈತ ಅವರಿಗಿಂತ ದೊಡ್ಡವನಾ.. ಎಂದು ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಹಿಂದೂ ಹಿಂದುತ್ವದ ಬಗ್ಗೆ ಯಾರು ಅಪಮಾನ ಮಾಡುತ್ತಾರೋ ಅಂತವರಿಗೆ ದೇಶದಲ್ಲಿ ಸ್ಥಾನಮಾನ ಇಲ್ಲ. ವಾಲ್ಮೀಕಿ ರಕ್ತ ಹಂಚಿಕೊಂಡು ಹುಟ್ಟಿದ ಸತೀಶ್ ಜಾರಕಿಹೊಳಿಯಿಂದ ರಾಮಾಯಣ, ಮಹಾಭಾರತಕ್ಕೆ ಅಪಮಾನವಾಗಿದೆ. ಅವರ ಹೇಳಿಕೆಯನ್ನು ಅವರ ಪಕ್ಷದ ಮುಖಂಡರು, ನಾಯಕರು ಖಂಡಿಸಿದ್ದಾರೆ. ಈತ ಅವರಿಗಿಂತ ದೊಡ್ಡವನಾ.. ಎಂದು ಕಿಡಿಕಾರಿದ್ದಾರೆ. ಪಕ್ಷದ ನಾಯಕರ ಒತ್ತಾಯಕ್ಕೆ ಮಣಿದು ಕ್ಷಮೆ ಕೇಳಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ ಸತೀಶ್ ಜಾರಕಿಹೊಳಿ. ನಿಮ್ಮ ರಾಷ್ಟ್ರೀಯ ನಾಯಕರಿಗಿಂತ ನೀನು ದೊಡ್ಡ ಮನುಷ್ಯನಾ.. ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ಸರಕಾರ 1500 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಹಿರಿಯ ಪಂಚಾಯ್ತಿ ಅಧಿಕಾರಿಯಾಗಿ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಮಂಜೂರಾದ 1500 ಪಿಡಿಓ ಹುದ್ದೆಗಳನ್ನು ಮುಂಬಡ್ತಿ ನೀಡಲಾಗಿದೆ. 40,900-78,200 ರೂಪಾಯಿ ವೇತನ ಶ್ರೇಣಿಯ ಗ್ರೂಪ್ ಬಿ ಕಿರಿಯ ವೃಂದದಲ್ಲಿ ಉನ್ನತೀಕರಿಸಿ ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂದು ಮರು ಪದನಾಮಕರಣ ಮಾಡಲಾಗಿದೆ. 4521 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಗ್ರೂಪ್ ಸಿ ವೃಂದದ 37,900 -70,850 ರೂ. ವೇತನ ಶ್ರೇಣಿಯಲ್ಲಿ ಮುಂದುವರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಳೂರಿನ ಬಸವಣ್ಣನಗರದ ನಿವಾಸಿ ಅಶೋಕ್ ಬಾಬು(31), 28 ವರ್ಷದ ಪತ್ನಿ, 2 ವರ್ಷದ ಮಗು ಮೃತಪಟ್ಟ ದುರ್ದೈವಿಗಳು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಮಧ್ಯೆ ಪೋಷಕರು ಬೈದಿದ್ದಕ್ಕೆ 7 ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ನೇಣಿಗೆ ಶರಣಾದ ಬಾಲಕ. ನಿನ್ನೆ ಸಂಜೆ 7 ಗಂಟೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಪೋಷಕರು ಬೈದಿದ್ದಕ್ಕೆ ಮನೆಯ ಟೆರೇಸ್ ಮೇಲೆ ಸಾಯಿಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿಂದಿಯ ಖ್ಯಾತ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಕುಂಕುಮ್, ಕಸೊಟಿ ಜಿಂದಗಿ ಕೀ ಮುಂತಾದ ಜನಪ್ರಿಯ ಧಾರವಾಹಿಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಸೂರ್ಯವಂಶಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಹೃದಯಘಾತದಿಂದ ಕುಸಿದುಬಿದ್ದಿದ್ದಾರೆ. ಪತ್ನಿ ಅಲೇಸಿಯಾಗೆ ಕೂಡ ಮಾಡೆಲಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 2017ರಲ್ಲಿ ಅಲೇಸಿಯಾ ಮತ್ತು ಸಿದ್ದಾಂತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸಿದ್ದಾಂತ್ ಮೊದಲ ಪತ್ನಿ ಇರಾ ಚೌಧರಿ್ಡ 2015ರಲ್ಲಿ ವಿಚ್ಛೇದನ ನೀಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಪ್ರಧಾನಿ ಮೋದಿಗೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆಯ ಕಾಮಧೇನುವನ್ನು ಮುಜರಾಯಿ ಹಜ್ ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಉಡುಗೊರೆಯಾಗಿ ನೀಡಿದ್ದಾರೆ. ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಭಾರತ ಗೌರವ್ ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಕಲೆಯಾಗಿರುವ ಕಿನ್ನಾಳ ಕಲೆಯಲ್ಲಿ ಸ್ಥಳೀಯ ಕಲಾವಿದರಿಂದ ನಿರ್ಮಿಸಲಾಗಿರುವ ಕಾಮಧೇನುವನ್ನು ಉಡುಗೊರೆಯಾಗಿ ನೀಡಲಾಯಿತು. ನಮ್ಮ ಸ್ಥಳೀಯ ಕಲೆಗೆ ಉತ್ತೇಜನ ನೀಡುವ ಸಲುವಾಗಿ ಈ ಕಾಮಧೇನು ಅನ್ನು ಉಡುಗೊರೆಯಾಗಿ ನೀಡಲಾಗಿದೆ. ಅದನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಕನಕದಾಸರು ತಮ್ಮ ದಾಸ ಸಾಹಿತ್ಯ, ಕೀರ್ತನೆಗಳ ಮೂಲಕ ಜೀವನಪಾಠ ಸಾರಿದವರು. ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಮಾಜದ ಅಂಕು ಡೊಂಕುಗಳನ್ನು ತಿದ್ದಿದಾರೆ ಎಂದು ಎಚ್. ಬಿ ಕೋಲಕಾರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ  ನಡೆದ ಶ್ರೀ ಭಕ್ತ ಕನಕದಾಸ ಹಾಗೂ ಒನಕೆ ಓಬವ್ವ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಲ ಕುಲ ಕುಲವೆಂದು ಬಡಿದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎಂದು ತಿಳಿಸಿದ ಅವರ ಕೀರ್ತನೆಗಳು ಸೇರಿದಂತೆ ಹಲವಾರು ಸಾಹಿತ್ಯಗಳು ನಮಗೆ ದಾರಿದೀಪ. ಕನಕದಾಸರ ತತ್ವಆದರ್ಶಗಳು ಇಂದಿಗೂ ಪ್ರಸ್ತುತ. ಅವುಗಳ ಮೂಲಕ ಸಮಾಜದಲ್ಲಿ ಶಾಂತಿ ಸಮಾನತೆ , ಪ್ರಗತಿ ಸಾಧಿಸಲು ಸಾಧ್ಯವಿದೆ ಎಂದು ಹೇಳಿದರು. ಸಹಜ ಬದುಕು ಬಾಳಿದ ಕನಕದಾಸರು, ಕೀರ್ತನರಾರರಾಗಿ, ತತ್ತ್ವಜ್ಞಾನಿಯಾಗಿ,…

Read More