Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಶಾಸಕ ಸತೀಶ್ ಜಾರಕಿಹೊಳಿಯವರು ಮರಾಠಾ ಮತ್ತು ಹಿಂದೂ ಸಮಾಜದ ವಿರೋಧಿ ಅಲ್ಲ. ಆದರೆ ಬಿಜೆಪಿ, ಆರ್ಎಸ್ಎಸ್ನವರು ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರ ರೂಪಿಸಿ, ದ್ವೇಷ ರಾಜಕಾರಣ ಮಾಡುತ್ತಿದ್ದು, ಇದನ್ನು ಮರಾಠಾ ಸಮಾಜದವರು ಸಹಿಸಲ್ಲ ಎಂದು ಮರಾಠಾ ಸಮಾಜದ ನೂರಾರು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸತೀಶ್ ಜಾರಕಿಹೊಳಿಯವರು ಸದಾ ಮರಾಠಾ ಸಮುದಾಯದ ಸೇರಿದಂತೆ ಎಲ್ಲಾ ಸಮಾಜದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅವರು ಯಾವುದೇ ಜಾತಿಗೆ ಇದುವರೆಗೂ ಅನ್ಯಾಯ ಮಾಡಿಲ್ಲ. ಆದರೆ ಶಾಸಕ ಸತೀಶ್ ಜಾರಕಿಹೊಳಿ ಅವರು ಮರಾಠಾ ಸಮುದಾಯದ ವಿರೋಧಿ ಇದ್ದಾರೇ ಎಂದು ಯಮಕನಮರಡಿ ಕ್ಷೇತ್ರದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿದೆ ಎಂದರು. ಕೆಲವು ದಿನಗಳ ಹಿಂದೆ ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಶಿವಾಜಿ ಇತಿಹಾಸದ ಬಗ್ಗೆಯೂ ಮಾತನಾಡಿದ್ದರು. ಆದರೆ ಶಾಸಕ ಸತೀಶ್ ಜಾರಕಿಹೊಳಿ ಅವರು ಈ ನಾಡಿನ ಜನತೆಗೆ ಇತಿಹಾಸ ತಿಳಿಸುವ…
ಕೊರೋನಾ ಭೀತಿ ಶುರುವಾಗಿರುವ ಹಿನ್ನೆಲೆ ಪರಿಸ್ಥಿತಿ ನೋಡಿಕೊಂಡು ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಚಿವ ಸುಧಾಕರ್, ಮಾಸ್ಕ್ ಕಡ್ಡಾಯ ಮಾಡಿಲ್ಲ. ಸಲಹೆ ನೀಡಿದ್ದೇವೆ. ಬೂಸ್ಟರ್ ಡೋಸ್ ಸ್ವಲ್ಪ ವೇಸ್ಟ್ ಆಗಿದೆ. ಬೂಸ್ಟರ್ ಡೋಸ್ ಬಗ್ಗೆ ಜನ ಆಸಕ್ತಿ ವಹಿಸಿಲ್ಲ. ಮೊದಲ ಎರಡು ಡೋಸ್ ಗೆ ಇದ್ದ ಆಸಕ್ತಿ ಈಗ ಕಡಿಮೆಯಾಗಿದೆ. ಜನ ಕೊರೋನಾ ಹೋಗಿದೆ ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದರು. ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯ ಮಾಡುತ್ತೇವೆ. ಪ್ರಧಾನಿ ಮೋದಿಗೆ ಬೆಲೆಕೊಟ್ಟು ಮಾಸ್ಕ್ ಧರಿಸಿ ಎಂದು ಸಚಿವ ಸುಧಾಕರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರಿನಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರು ಮತ್ತೆ ಎಡವಟ್ಟು ಮಾಡಿದ್ದು ವಾಹನ ತಪಾಸಣೆ ವೇಳೆ ವೃದ್ಧ ಬೈಕ್ ನಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಚಾಮರಾಜಪುರಂ ನ ನಿವಾಸಿ ಬಸವರಾಜು ಬೈಕ್ ನಿಂದ ಬಿದ್ದು ಗಾಯಗೊಂಡ ವೃದ್ಧ. ಮೈಸೂರಿನ ಆರ್ ಟಿಓ ವೃತ್ತದಲ್ಲಿ ಕೆ ಆರ್ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು . ಹೆಲ್ಮೆಟ್ ಹಾಕದ ವೃದ್ಧನಿಗೆ ಬ್ಯಾರಿಕೇಡ್ ಅಡ್ಡಗಟ್ಟಿ ನಿಲ್ಲಿಸಲು ಟ್ರಾಫಿಕ್ ಪೊಲೀಸರು ಯತ್ನಿಸಿದ್ದು, ತಪ್ಪಿಸಿಕೊಳ್ಳುವ ಯತ್ನದಲ್ಲಿ ಬೈಕ್ ನಿಂದ ಬಿದ್ದು ವೃದ್ಧನಿಗೆ ಗಂಭೀರ ಗಾಯಗಳಾಗಿದೆ. ಮರದ ಹಿಂದೆ ಅವಿತು ಹಿಡಿಯಲು ಪೊಲೀಸರು ಯತ್ನಿಸಿದ ಪರಿಣಾಮ ಈ ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರತಿದಿನ ವಾಹನ ತಪಾಸಣೆ ಹೆಸರಿನಲ್ಲಿ ವಾಹನ ಸವಾರರಗೆ ಪೋಲಿಸರು ಕಿರಿಕರಿ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಈ ವೇಳೆ ಕೆಲಕಾಲ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ…
ತಮಿಳುನಾಡು : ಸೆಲ್ವಂ ಪಲ್ಲಡಂ ರಾಯರಪಾಳ್ಯಂ ಪ್ರದೇಶದವರು. ಪಲ್ಲಡಂ ಸಮೀಪದ ಗರುಡಮುತ್ತೂರಿನಲ್ಲಿ ಇವರ ಒಡೆತನದ ತೆಂಗಿನಕಾಯಿ ತಯಾರಿಕಾ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ. 50ಕ್ಕೂ ಹೆಚ್ಚು ಉತ್ತರ ರಾಜ್ಯ ಹಾಗೂ ಸ್ಥಳೀಯ ಕಾರ್ಮಿಕರು ಇದರಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ತೆಂಗಿನ ನಾರುಗಳನ್ನು ಬೇರ್ಪಡಿಸುವ ಕಾರ್ಯದಲ್ಲಿ ರೋಟವೇಟರ್ ಯಂತ್ರದ ಮೂಲಕ ಕೆಲಸ ಮಾಡಲಾಗುತ್ತಿತ್ತು. ಅಷ್ಟರಲ್ಲಿ ಅಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ತೆಂಗಿನ ನಾರುಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಾವರದ ವ್ಯವಸ್ಥಾಪಕ ಸುರೇಶ್ ನೀಡಿದ ಮಾಹಿತಿ ಮೇರೆಗೆ ಪಲ್ಲಡಂ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ 5ಕ್ಕೂ ಹೆಚ್ಚು ನೀರಿನ ಲಾರಿಗಳ ಮೂಲಕ ನೀರು ಸಿಂಪಡಿಸಿ ಬೆಂಕಿ ನಂದಿಸಿದ್ದಾರೆ. ಗಾಳಿಯ ರಭಸಕ್ಕೆ ಲಕ್ಷಾಂತರ ಮೌಲ್ಯದ ತೆಂಗಿನ ನಾರುಗಳು ಬೆಂಕಿಗೆ ಆಹುತಿಯಾಗಿ ಹಾನಿಯಾಗಿದೆ ಎನ್ನಲಾಗಿದೆ. ತೆಂಗಿನಕಾಯಿ ಒಣಗಿಸಲು ಬಳಸುವ ಯಂತ್ರದಿಂದ ಕಿಡಿ ಹೊತ್ತಿಸಿ ಹಠಾತ್ ಬೆಂಕಿ ಸಂಭವಿಸಿದೆಯೇ ಅಥವಾ ಇನ್ನಾವುದೇ ಕಾರಣಕ್ಕಾಗಿ ಕಾಮನಾಯಕನಪಾಳ್ಯಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಳಗಾವಿ: ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ನಡೆಯುತ್ತಿದ್ದ ವೇಳೆ ಕಳ್ಳರು ಸುಮಾರು 25 ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿದ್ದಾರೆ. ಸಮಾವೇಶದಲ್ಲಿ ಬಂದಿದ್ದವರ 25 ಮೊಬೈಲ್ ಫೋನ್ ಗಳನ್ನು ಕಳ್ಳರು ಎಗರಿಸಿದ್ದಾರೆ. ಮೊಬೈಲ್ ವಾಪಸ್ ನೀಡುವಂತೆ ಆಯೋಜಕರು ಮನವಿ ಮಾಡುತ್ತಿರುವುದು ಕಂಡು ಬಂದಿತ್ತು. ಆದರೆ ಕಳ್ಳರ ಪತ್ತೆಯೇ ಇಲ್ಲದಂತಾಗಿದೆ. 2 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿರುವ ವೇಳೆ ಗುಂಪಿನೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿದ್ದು, ಪ್ರತಿಭಟನಾಕಾರರ ಮೊಬೈಲ್ ಗಳನ್ನು ಕಳವು ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಿವೃತ್ತ ನ್ಯಾಯಾಧೀಶ ಎಜೆ ಸದಾಶಿವ ಆಯೋಗದ ವರದಿ ಜಾರಿಗಾಗಿ ಸಾಮಾಜಿಕ ನ್ಯಾಯ ಸಂಕಲ್ಪ ರಾಲಿಯನ್ನು ಹಮ್ಮಿಕೊಳ್ಳಲಾಯಿತ್ತು. ಚಲೋ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಬೆಳಗಾವಿ ಚಲೋ ನಡೆಸಲಾಯಿತು. ರಾಣಿ ಚೆನ್ನಮ್ಮ ವೃತ್ತದಿಂದ ಸುವರ್ಣಸೌಧದ ವರೆಗೆ ಪರಿಶಿಷ್ಟರ ಒಳ ಮೀಸಲಾತಿ ಜಾರಿಗಾಗಿ ಸಾಮಾಜಿಕ ನ್ಯಾಯ ಸಂಕಲ್ಪ ರಾಲಿಯನ್ನು ರಾಜ್ಯಾಧ್ಯಕ್ಷರಾದ ಡಾ. ಎನ್ ಮೂರ್ತಿ ಮತ್ತು ಜಿಲ್ಲಾಧ್ಯಕ್ಷರಾದ ಶಿವಾನಂದ ಮಾದರ ಮತ್ತು ಸಂಚಾಲಕರಾದ ಸಿದ್ದರಾಮ ಹೊಸಮನಿ ಮತ್ತು ಬೈಲಹೊಂಗಲ ತಾಲೂಕ ಅಧ್ಯಕ್ಷರಾದ ಮಹೇಶ್ವರಿ ಅವರ ನೇತೃತ್ವದಲ್ಲಿ ನಡೆಯಿತು. ರಾಜ್ಯಾಧ್ಯಕ್ಷ ಎನ್ ಮೂರ್ತಿಯವರು ರಾಲಿ ಮುಖ್ಯ ಕಾರಣವನ್ನು ಉದ್ದೇಶದ ಬಗ್ಗೆ ಮಾತನಾಡಿ, 101 ಪರಿಶಿಷ್ಟ ಜಾತಿಗಳಿಗೆ ನೀಡುತ್ತಿರುವ ಮೀಸಲಾತಿ ಜಾತಿಗಳ ಮಧ್ಯೆ ಸಮನಾಗಿ ಹಂಚಿಕೆ ಆಗಿಲ್ಲ.ಆದ್ದರಿಂದ ಪರಿಶಿಷ್ಟ ಜಾತಿಗಳ ಜನರಲ್ಲಿ ಅಸಮಾಧಾನ ಉಂಟಾಗಿ ಕಳೆದ 30 ವರ್ಷಗಳಿಂದ ಪರಿಶಿಷ್ಟ ಮೀಸಲಾತಿಗಾಗಿ ಒತ್ತಾಯಿಸಿ ತೀವ್ರ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಚಳುವಳಿಗಾರರೊಂದಿಗೆ ಚರ್ಚಿಸಿ ಮಾತುಕತೆ ನಡೆಸಿಲ್ಲ ಎಂದು…
ಕೋವಿಡ್ ಪರಿಸ್ಥಿತಿಯ ಲಾಭ ಪಡೆಯಲು ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಬೇಗ ನಡೆಸಬಹುದು ಎಂಬ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಯನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಳ್ಳಿಹಾಕಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 4 ತಿಂಗಳು ಬಾಕಿ ಉಳಿದಿದ್ದು, ಬಿಜೆಪಿ ಸರ್ಕಾರವು ಸಮಯಕ್ಕೆ ಮುಂಚಿತವಾಗಿ ತಯಾರಿ ನಡೆಸುತ್ತಿದೆ ಎಂದು ಶಿವಕುಮಾರ್ ಹೇಳಿದ್ದಾರೆ. ಚುನಾವಣೆ ಬೇಗ ನಡೆಯಲಿದೆ ಎಂದು ದೆಹಲಿ ನಾಯಕರು ಹೇಳುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ನಾಯಕರು ಈ ಬಗ್ಗೆ ತಮ್ಮೊಂದಿಗೆ ಮಾತನಾಡಿಲ್ಲ ಮತ್ತು ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸುವ ಯಾವುದೇ ಯೋಜನೆ ಇಲ್ಲ. ಚುನಾವಣಾ ಸಿದ್ಧತೆ ಕುರಿತು ಮುಖ್ಯಮಂತ್ರಿಗಳು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಅವರೊಂದಿಗೆ ಮಾತನಾಡಿರುವುದಾಗಿಯೂ ಶಿವಕುಮಾರ್ ಹೇಳಿದ್ದರು. ‘ಕೋವಿಡ್ನಿಂದಾಗಿ ಅವರು ಅವಧಿಪೂರ್ವ ಚುನಾವಣೆ ನಡೆಸಬಹುದು. ಈ ನಿಟ್ಟಿನಲ್ಲಿ ಆಗಿರುವ ಪ್ರಗತಿ ಕುರಿತು ಮುಖ್ಯಮಂತ್ರಿಗಳು ಪೊಲೀಸ್ ಮಹಾನಿರ್ದೇಶಕರೊಂದಿಗೆ ಮಾತನಾಡಿದರು. ಅವರು ಇಂದು ಸಂಪುಟ ಸದಸ್ಯರೊಂದಿಗೆ ಮಾತನಾಡಿದರು. ಇದು ಅಧಿಕೃತ ಮಾಹಿತಿಯಲ್ಲ, ಅನಧಿಕೃತ ಎಂದು ಡಿಕೆ…
ಕೋವಿಡ್ಗೆ ಆಂಟಿವೈರಲ್ ಔಷಧವು ಚೇತರಿಕೆಯನ್ನು ವೇಗಗೊಳಿಸುತ್ತದೆ ಎಂದು, ಅಧ್ಯಯನವು ಕಂಡುಹಿಡಿದಿದೆ. ಕೋವಿಡ್ ಲಸಿಕೆ ತೆಗೆದುಕೊಂಡ ನಂತರ ಅಸ್ವಸ್ಥರಾದ ಸುಮಾರು 25,000 ಜನರ ಪ್ರಯೋಗದ ಕೊನೆಯಲ್ಲಿ ಈ ತೀರ್ಮಾನವನ್ನು ತಲುಪಿಸಲಾಯಿ. ತು.ಇದು ಕೋವಿಡ್ -19 ರ ಒಮಿಕ್ರಾನ್ ರೂಪಾಂತರದಿಂದ ಸೋಂಕಿತ ರೋಗಿಗಳಿಗೆ ಐದು ದಿನಗಳವರೆಗೆ ಮನೆಯಲ್ಲಿ ಔಷಧಿಗಳನ್ನು ನೀಡುವ ಮೂಲಕ ನಡೆಸಿದ ಪ್ರಯೋಗವಾಗಿದೆ.ಆ್ಯಂಟಿವೈರಲ್ ಔಷಧಿ ‘ಮೊಲ್ನುಪ್ರವಿರ್’ ಅನ್ನು ರೋಗಿಗಳಿಗೆ ದಿನಕ್ಕೆ ಎರಡು ಬಾರಿ ನೀಡಲಾಯಿತು.’ಮೊಲ್ನುಪ್ರವಿರ್’ ಎಂಬ ಆಂಟಿವೈರಲ್ ಔಷಧವು ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಎಂದು ಪ್ರಯೋಗವು ಕಂಡುಹಿಡಿದಿದೆ. ಆಂಟಿವೈರಲ್ ಔಷಧಿಗಳು ಚೇತರಿಸಿಕೊಳ್ಳುವ ಸಮಯವನ್ನು ನಾಲ್ಕು ದಿನಗಳವರೆಗೆ ಕಡಿಮೆ ಮಾಡಬಹುದು ಎಂದು ಹೊಸ ಅಧ್ಯಯನಗಳು ತೋರಿಸುತ್ತವೆ. ಇದಲ್ಲದೆ, ದೇಹದ ಮೇಲೆ ದಾಳಿ ಮಾಡುವ ವೈರಸ್ ಪ್ರಮಾಣವೂ ಕಡಿಮೆಯಾಗುತ್ತದೆ. ಔಷಧವು ದುಬಾರಿಯಾಗಿರುವುದರಿಂದ, ಔಷಧವನ್ನು ಎಲ್ಲರಿಗೂ ನೀಡಲಾಗುವುದಿಲ್ಲ ಆದರೆ ತುರ್ತು ಸಂದರ್ಭಗಳಲ್ಲಿ ಬಳಸಬಹುದು ಎಂದು ಅಧ್ಯಯನವು ಸೂಚಿಸುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಭಾಷಣ ಮಾಡಿದರು. ಅವರ ಭಾಷಣವನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ: 1956ರ ರಾಜ್ಯಗಳ ಮರುವಿಂಘಡನೆ ಕಾಯ್ದೆ ನಂತರ ಅನೇಕ ರಾಜ್ಯಗಳಲ್ಲಿ ಗಡಿ ವಿವಾದ ಸೃಷ್ಟಿಯಾದವು. 1947ಕ್ಕಿಂತ ಮುಂಚಿತವಾಗಿ ಬಿಜಾಪುರ, ಬೆಳಗಾವಿ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳು ಬಾಂಬೆ ಪ್ರೆಸಿಡೆನ್ಸಿಯಲ್ಲಿದ್ದವು, ಸ್ವಾತಂತ್ರ್ಯ ನಂತರ ಭಾಷಾವಾರು ಪ್ರಾಂತ್ಯಗಳ ರಚನೆ ಮಾಡುವ ಉದ್ದೇಶದಿಂದ ಫಜಲ್ ಆಲಿ ಆಯೋಗವನ್ನು ರಚನೆ ಮಾಡಲಾಯಿತು. ಅನೇಕ ರಾಜ್ಯಗಳಲ್ಲಿ ಭಿನ್ನ ಭಾಷಿಗ ಜನರು ಇದ್ದರು. ಉದಾಹರಣೆಗೆ ನಮ್ಮ ರಾಜ್ಯದ ಗಡಿ ಜಿಲ್ಲೆಗಳಾದ ಬಳ್ಳಾರಿಯಿಂದ ಬೀದರ್ ವರೆಗಿನ ಜನ ತೆಲುಗು ಭಾಷೆ ಮಾತನಾಡುತ್ತಾರೆ. ಫಜಲ್ ಆಲಿ ಆಯೋಗದ ಶಿಫಾರಸಿನ ಮೇರೆಗೆ ಮೈಸೂರು ರಾಜ್ಯ ಸ್ಥಾಪನೆ ಆಯಿತು, ಆದರೆ ಬಾಂಬೆ ರಾಜ್ಯದವರು 1956ರ ಕಾಯ್ದೆಯನ್ನು ಒಪ್ಪಿಕೊಳ್ಳಲಿಲ್ಲ, ಅವರ ಒತ್ತಾಯದ ಮೇರೆಗೆ 1966ರಲ್ಲಿ ಮೆಹರ್ ಚಂದ್ ಮಹಾಜನ್ ಆಯೋಗವು ರಚನೆ ಆದದ್ದು, ಆ ಸಂದರ್ಭದಲ್ಲಿ ಎಸ್, ನಿಜಲಿಂಗಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.…
ಭಾರತದಲ್ಲಿ 3 ಕೊರೊನಾ ರೂಪಾಂತರಗಳು ವರದಿಯಾದ ನಂತರ, ಸರ್ಕಾರಗಳು ಹೆಚ್ಚಿನ ಎಚ್ಚರಿಕೆಯನ್ನು ಹೊಂದಿವೆ. ವೈರಸ್ ಹರಡುವಿಕೆಯು ತೀವ್ರಗೊಳ್ಳುತ್ತಿದ್ದಂತೆ, ಕೇರಳವನ್ನು ಎಚ್ಚರಿಸಲಾಗಿದೆ ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಧನಾತ್ಮಕ ಪರೀಕ್ಷೆ ಮಾಡಿದ ಎಲ್ಲರ ಮಾದರಿಗಳನ್ನು ತಳೀಯವಾಗಿ ಅನುಕ್ರಮಗೊಳಿಸಬೇಕೆಂದು ನಿರ್ಧರಿಸಲಾಯಿತು. ಯಾವ ರೂಪಾಂತರವು ಹರಡುತ್ತಿದೆ ಎಂಬುದನ್ನು ನಾವು ತ್ವರಿತವಾಗಿ ಕಂಡುಹಿಡಿಯಬೇಕು ಎಂದು ತಿಳಿಸಲಾಗಿದೆ. ಎಲ್ಲಾಜನರು ಮಾಸ್ಕ್ ಧರಿಸಲು ಸೂಚಿಸಲಾಗಿದೆ., ಅಧಿಕೃತ ಅಂಕಿಅಂಶಗಳ ಪ್ರಕಾರ ಡಿಸೆಂಬರ್ ತಿಂಗಳಲ್ಲಿ ಕೇರಳದಲ್ಲಿ 1,431 ಜನರು ಕರೋನವೈರಸ್ನಿಂದ ಪ್ರಭಾವಿತರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy