Author: admin

2022-23ನೇ ಸಾಲಿನ ಬೆಳಗಾವಿ ತಾಲೂಕ ಆದರ್ಶ ಶಿಕ್ಷಕಿಯಾಗಿ ಶ್ರೀಮತಿ ಹೇಮಾವತಿ ಐ.ಬಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಗಡಿ ಗ್ರಾಮ ಕನ್ನಡ ಶಾಲೆ ಶಿಕ್ಷಕಿ ಹೇಮಾವತಿ ಐ.ಬಿ ಅವರನ್ನು ಕನ್ನಡ ಮರಾಠಿ ಗಡಿಭಾಗದ ಕನ್ನಡ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಉಪಾಧ್ಯಯರಾದ ರೇಣುಕಾ. ಅಳ್ಳಾವರ ಹಾಗೂ ಶಿಕ್ಷಕ ವೃಂದ ಶಾಲೆಯ ವತಿಯಿಂದ ಸನ್ಮಾನಿಸಿದರು. ಈ ವೇಳೆ ಸುನಂದ ಹಿರೇಮಠ ಮಾತನಾಡಿ, ಶಾಲೆಯ ಮತ್ತು ನಮ್ಮ ಗ್ರಾಮದ ಗೌರವ ತರುವ ಸಂದರ್ಭವಾಗಿದೆ. ಅದಕ್ಕೆ ನಾನು ಶ್ರೀಮತಿ ಹೇಮಾವತಿ ಅವರಿಗೆ ನಾನು ಅಭಿನಂದರಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮರಾಠಿ ಮಾದರಿ ಶಾಲೆ ಎಲ್ಲೂರು ಎನ್. ಜಿ .ಎಚ್. ಎಮ್ . ಮುಖ್ಯ ಉಪಾಧ್ಯಯರಾದ ಮೋಹನ್ ಪಾಟೀಲ್ ಹಾಗೂ ಅವರ ಸಿಬ್ಬಂದಿ ವರ್ಗ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಆದರ್ಶ ಶಿಕ್ಷಕರಿಗೆ ಗೌರವ ಸನ್ಮಾನ ಮಾಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಸಾಮಾಜಿಕ ಜಾಲತಾಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದವರ ವಿರುದ್ಧ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ, ಈಗ ಮಂದಿರದ ಟ್ರಸ್ಟ್‌ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಓಬಿಸಿ ಇಲ್ಲ ಎಂದು ಕೀಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿದವರ ಕುರಿತು ಸೂಕ್ತ ತನಿಖೆ ನಡೆಸಬೇಕು ಅಂತಾ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಕೆಡಿಸಲು ಹುನ್ನಾರ ಮಾಡಲಾಗಿದೆ ಎಂದು ಅವರ ಅಭಿಮಾನಿಗಳು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್ ಪರೀಕ್ಷೆ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮಕ್ಕೆ ಬಳಸಲು ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಮಾರ್ಪಾಡು ಮಾಡಿ, ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದ ಮೂವರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದು, ಬಂಧಿತರ ಸಂಖ್ಯೆ 19ಕ್ಕೆ ಏರಿದೆ. ಅರಭಾಂವಿಯ ಅಕ್ಷಯ ದುಂದಪ್ಪ ಭಂಡಾರಿ (33), ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟ್ಟಿ (34) ಹಾಗೂ ರಾಜಾಪುರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಢಾರಿಗೆ ಅಕ್ಷಯ ಬಂಢಾರಿ ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ತಂದು ಕೊಟ್ಟಿದ್ದ ಎನ್ನಲಾಗಿದೆ. ಆರೋಪಿ ಸಂಜು ಭಂಡಾರಿಯಿಂದ ಪಡೆದು ಶ್ರೀಧರ ಕಟ್ಟಿಕಾರ ಅಭ್ಯರ್ಥಿಗಳಿಗೆ ವಿತರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನು ಬಸವರಾಜ ದುಂದನಟ್ಟಿಯು ಶಿರಹಟ್ಟಿಯಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಗಳಿಗೆ ಉತ್ತರ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಮೂರು ಮೊಬೈಲ್​ಫೋನ್​, ಒಂದು ದ್ವಿಚಕ್ರವಾಹನ ಹಾಗೂ 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಫೈ ಮಾಡಿರುವ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಜಪ್ತಿ ಮಾಡಲಾಗಿದ್ದು,…

Read More

ಸರಗೂರು: ಮನುಗನಹಳ್ಳಿ ಪಂಚಾಯಿತಿ ಪಿಡಿಒ ಯೋಗೇಂದ್ರ ದರ್ಪದಿಂದ ಮೆರೆಯುತ್ತಿದ್ದು, ಹಾಡಹಗಲೇ ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರನ್ನು ಗದರಿಸಿ ನನಗೆ ಪೆಟ್ರೋಲ್  ಗೆ ಹಣ ಕೊಡಿ,  ಇಲ್ಲವಾದ್ರೆ ನಿಮ್ಮ ಕೆಲಸ ಮಾಡುವುದಿಲ್ಲ ಎಂದು ಜನರನ್ನು ಗದರಿಸುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇ ಸ್ವತ್ತು ಕೊಡಲು ಪಿಡಿಒ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಹಾಡು ಹಗಲೇ ಈ ರೀತಿಯಲ್ಲಿ ಲಂಚ ದಂಧೆ ನಡೆಯುತ್ತಿದ್ದರೂ ಶಾಸಕ  ಅನಿಲ್ ಚಿಕ್ಕಮಾದು ಅವರು ಕ್ರಮಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲದ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಬಿಲ್ ಮಾಡಿ ಪಿಡಿಒ ಹಣ ಲೂಟಿ ಮಾಡಿದ್ದಾರೆ. ಪಿಡಿಒ ಯೋಗೇಂದ್ರ ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ ಮೇಲಾಧಿಕಾರಿಗಳು ಅವರ ವಿರುದ್ಧ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಓ ಯೋಗೇಂದ್ರ ವರ್ತನೆಯಿಂದ ಬೇಸತ್ತಿರುವ ಗ್ರಾಮಸ್ಥರು  ಪಂಚಾಯತ್ ಗೆ ಇವರಿಂದ ಯಾವಾಗ ಮುಕ್ತಿ ಸಿಗುತ್ತದೆ ಎಂದು ಕಾಯುವಂತಾಗಿದೆ.…

Read More

ಕೋವಿಡ್ 19 ರ ನಂತರ, ವೈಯಕ್ತಿಕ ಚಲನಶೀಲತೆಯ ಪ್ರಾಮುಖ್ಯತೆ ಹೆಚ್ಚಾಗಿದೆ. ದೂರದ ಊರುಗಳಿಗೆ ಹೋಗುವ ಉದ್ದೇಶ ಇರುವವರು ಸ್ವಂತ ಕಾರು ಹೊಂದಲು ಬಯಸುತ್ತಾರೆ. ಆದರೆ, ಕುಟುಂಬದ ಅಗತ್ಯತೆಗಳಿಂದಾಗಿ ಹೊಸ ಕಾರು ಖರೀದಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಜನರು ಸೆಕೆಂಡ್ ಹ್ಯಾಂಡ್ ಕಾರುಗಳನ್ನು (Second Hand Cars) ಖರೀದಿಸುತ್ತಾರೆ. ಇಲ್ಲಿಯವರೆಗೆ, ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟಕ್ಕೆ ಸರ್ಕಾರ ಯಾವುದೇ ನಿಯಮಗಳನ್ನು ಜಾರಿಗೆ ತರುತ್ತಿಲ್ಲ. ಇನ್ಮುಂದೆ ಸೆಕೆಂಡ್ ಹ್ಯಾಂಡ್ ಕಾರು (Second Hand Cars Sale) ಮಾರುಕಟ್ಟೆ ಸರ್ಕಾರದ ಹಿಡಿತಕ್ಕೆ ಬರಲಿದೆ. ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಸೂಚನೆ ನೀಡಲಿದೆ. ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಖರೀದಿಸುವ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಗ್ರಾಹಕರ ಅನುಕೂಲಗಳನ್ನು ರಕ್ಷಿಸುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಸರ್ಕಾರದ ಇತ್ತೀಚಿನ ನಿಯಮಗಳ ಪ್ರಕಾರ, ಡೀಲರ್‌ಗಳು (Second Hand Cars Dealers) ವಾಹನ ಮರುಮಾರಾಟದ ಮಾಹಿತಿಯನ್ನು ಸರ್ಕಾರ ಮತ್ತು ಸಾರಿಗೆ ಇಲಾಖೆಯೊಂದಿಗೆ…

Read More

ಬೆಂಗಳೂರು : ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ 2012-13 ಮತ್ತು 2014-15ರಲ್ಲಿ ತಲಾ 5 ರಿಂದ 10 ಲಕ್ಷ ರೂ.ಗೆ ಶಿಕ್ಷಕರ ಹುದ್ದೆ ಮಾರಾಟ ಮಾಡಲಾಗಿದೆ ಎಂದು ಸಿಐಡಿ ತನಿಖೆಯಿಂದ ತಿಳಿದುಬಂದಿದೆ. ಉನ್ನತ ಮೂಲಗಳ ಪ್ರಕಾರ, ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಕೆಲ ಅಭ್ಯರ್ಥಿಗಳು 5 ರಿಂದ 10 ಲಕ್ಷ ರೂಪಾಯಿಗೆ ಲಂಚ ನೀಡಿದ್ದಾರೆ. ಈ ಬಗ್ಗೆ ಸಿಐಡಿ ವಶದಲ್ಲಿರುವ ಮಹಿಳಾ ಅಭ್ಯರ್ಥಿಯೊಬ್ಬರು, ಕೆಲಸ ಮಾಡಲು 15 ಲಕ್ಷ ರೂ.ಗಳನ್ನು ಪಾವತಿಸಿದ್ದಾರೆ ಎಂದು ತನಿಖೆಯ ವೇಳೆ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. ತುಮಕೂರು, ವಿಜಯಪುರ ಹಾಗೂ ಕೋಲಾರ ಜಿಲ್ಲೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದು ದಾಖಲೆಗಳಿಂದ ಗೊತ್ತಾಗಿದೆ ಎನ್ನಲಾಗಿದೆ. ಈ ಜಿಲ್ಲೆಯಲ್ಲಿ ಅಕ್ರಮವಾಗಿ ಹುದ್ದೆಗೆ ಆಯ್ಕೆಯಾಗಲು ಸಹ ಶಿಕ್ಷಕರು, ತಲಾ 5 ಲಕ್ಷದಿಂದ 10 ಲಕ್ಷ ನೀಡಿರುವುದು ಪತ್ತೆಯಾಗಿದೆ. ಇನ್ನು ಹಣವನ್ನು ಹಂತ ಹಂತವಾಗಿ ಪಾವತಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

Read More

ಬೆಂಗಳೂರು: ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ನಗರದ ಅಂಬೇಡ್ಕರ್ ಭವನದಲ್ಲಿ ಎಐಸಿಸಿ ವರಿಷ್ಠ ಹಾಗೂ ಸದಸ್ಯತ್ವ ನೊಂದಣಿ ಉಸ್ತುವಾರಿ ಸುದರ್ಶನ ನಾಚಿಯಪ್ಪನ್ ಸಮ್ಮುಖದಲ್ಲಿ ಆಂತರಿಕ ಚುನಾವಣೆ ನಡೆಯಲಿದೆ. ಡಿ.ಕೆ.ಶಿವಕುಮಾರ್ ಎದುರು ಯಾರಾದರೂ ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೈಲಾ ಪ್ರಕಾರ ಮೂರು ವರ್ಷಕ್ಕೊಮ್ಮೆ ಚುನಾವಣೆ ನಡೆಸಬೇಕಿದೆ. ನೂತನ ಕೆಪಿಸಿಸಿ ಪದಾಧಿಕಾರಿಗಳು ಆಯ್ಕೆಯಾದಾಗ ಸಂಪ್ರದಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಬೇಕಿದೆ. ಆದರೆ ದಿನೇಶ್ ಗುಂಡೂರಾವ್ ರಾಜಿನಾಮೆ ಬಳಿಕ ಪದಾಧಿಕಾರಿಗಳ ಆಯ್ಕೆ ಮೂಲೆ ಗುಂಪಾಗಿತ್ತು. ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ಸದಸ್ಯತ್ವ ನೋಂದಣಿಗೆ ಚಾಲನೆ ಸಿಕ್ಕಿದೆ. ಕೆಪಿಸಿಸಿಗೆ ಹೊಸ ಪದಾಧಿಕಾರಿಗಳು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಚುನಾವಣೆ ಪ್ರಕ್ರಿಯೆ ನಡೆಯಲಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿರುವ ಕಾರಣ ಎಲ್ಲಾ ರಾಜ್ಯಗಳ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ. ಮೂರು ವರ್ಷಗಳ ಅವಧಿ ಪೂರ್ಣವಾಗದವರನ್ನು ಅಧಿಕಾರದಲ್ಲಿ ಮುಂದುವರಿಸುವ…

Read More

ಪರಿಸರ ಮಾಲಿನ್ಯದಿಂದಾಗಿ ವಾತಾವರಣದಲ್ಲಿರುವ ಓಝೇನ್ ಪದರ ನಿರಂತರವಾಗಿ ಹಾನಿಗೊಳಗಾಗುತ್ತಿದೆ.ಹೀಗಾಗಿ ಓಝೇನ್ ಅನ್ನು ರಕ್ಷಿಸುವ & ಸಮಸ್ಯೆ ನಿವಾರಿಸುವ ಸಲುವಾಗಿ ಜಾಗೃತಿ ಮೂಡಿಸಲು ಪ್ರತಿವರ್ಷ ಸೆ.16ರಂದು ವಿಶ್ವ ಓಝೇನ್ ದಿನವನ್ನಾಗಿ ಆಚರಿಸಲಾಗುತ್ತದೆ. ಸೂರ್ಯನ ವಿಕಿರಣ ಭೂಮಿಗೆ ನೇರವಾಗಿ ಅಪ್ಪಳಿಸಿ, ಜೀವಸಂಕುಲಗಳಿಗೆ ಹಾನಿಯನ್ನುಂಟುಮಾಡುತ್ತದೆ. ಸೂರ್ಯನ ಕಿರಣ ನೇರವಾಗಿ ಭೂಮಿಗೆ ಬೀಳದಂತೆ ಓರೋನ್ ಪದರ ನೋಡಿಕೊಳ್ಳುತ್ತದೆ. ಹೀಗಾಗಿ ಪರಿಸರ ರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…? ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ…

Read More

ತಮಿಳುನಾಡು : ಭಾರತೀಯ ಜನತಾ ಪಕ್ಷದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಕ ಹೊಂದಿರುತ್ತದೆ. ಸ್ಥಳೀಯ ಘಟಕದ ಪ್ರಕಾರ, ಸೆಪ್ಟೆಂಬರ್ 17 ರಂದು ಆಸ್ಪತ್ರೆಯಲ್ಲಿ 10-15 ಮಕ್ಕಳು ಜನಿಸುವ ನಿರೀಕ್ಷೆಯಿದೆ. ಮೀನು ವಿತರಿಸುವ ಬಗ್ಗೆ ಮಾತನಾಡಿದ ಅವರು, ಇದಕ್ಕಾಗಿ ಎಂ.ಕೆ.ಸ್ಟಾಲಿನ್ ಅವರ ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಮೋದಿಯವರಿಗೆ 72 ವರ್ಷವಾಗುವುದರಿಂದ 720 ಕೆಜಿ ಮೀನು ವಿತರಿಸಲಾಗುವುದು ಎಂದು ಪತ್ರಿಕೆಯೊಂದು ವರದಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗಡಿ ವಿಚಾರವಾಗಿ ಒಂದಲ್ಲ ಒಂದು ರೀತಿ ಕಿತಾಪತಿ ಮಾಡುತ್ತಲೇ ಇರುವ ಎಂಇಎಸ್ ಇದೀಗ ಕರ್ನಾಟಕ ಪೊಲೀಸರನ್ನು ಬೈದಾಡುವ ಸಿನಿಮಾವನ್ನು ಮಾಡಿದ್ದು, ಇಂದು ಮರಾಠಿ ಚಿತ್ರ ಬಾಯ್ಸ್ – 3 ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವೆಡೆ ಬಿಡುಗಡೆ ಮಾಡಲು ಎಂಇಎಸ್ ಸಿದ್ಧತೆ ನಡೆಸಿದೆ. ವಿವಾದಾತ್ಮಕ ಚಿತ್ರ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಕನ್ನಡಿಗರಿಗೆ ಪ್ರಚೋದಿಸುವಂತೆ ಮಾಡಲು ವಿವಾದಾತ್ಮಕ ಮರಾಠಿ ಚಲನಚಿತ್ರ ಬಾಯ್-3 ಬಿಡುಗಡೆ ಮಾಡಲಾಗುತ್ತಿದ್ದು, ಇದು ಕೇವಲ ಮನೋರಂಜನಾ ಚಿತ್ರವಾಗಿದ್ದಲ್ಲಿ ನಮ್ಮ ವಿರೋಧವಿರಲಿಲ್ಲ. ಆದರೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿಷಯವನ್ನಿಟ್ಟು ತಯಾರಾಗಿರುವ ಚಿತ್ರವಾಗಿದೆ. ಚಿತ್ರದ ಒಂದು ದೃಶ್ಯದಲ್ಲಿ ಕರ್ನಾಟಕದ ಪೊಲೀಸ್ ಠಾಣೆಗೆ ಬಂದು, ನಮ್ಮ ಪೊಲೀಸರಿಗೆ ನಿಮಗೆ ಕನ್ನಡ ಭಾಷೆಯ ಮೇಲೆ ಅಭಿಮಾನವಿದ್ದರೆ ನಮಗೂ ನಮ್ಮ ಮರಾಠಿ ಭಾಷೆಯ ಮೇಲೆ ದುಪ್ಪಟ್ಟು ಅಭಿಮಾನವಿದೆ, ಅಷ್ಟಕ್ಕೂ ಮರಾಠಿ ಭಾಷೆಯನ್ನು ಬೆಳಗಾವಿಯಲ್ಲಿ ಮಾತನಾಡದಿದ್ದರೆ ಮತ್ತೆಲ್ಲಿ ಮಾತನಾಡಬೇಕು? ಎಂದು ಪ್ರಶ್ನಿಸುವ ದೃಶ್ಯವಿದೆ. ಆದ್ದರಿಂದ…

Read More