Author: admin

ಸರಗೂರು: ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಾಣ ವಾಗುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ತಕ್ಷಣವೇ ತನಿಖೆ ನಡೆಸಬೇಕು ಎಂದು ಪಟ್ಟಣ ಪಂಚಾಯತಿ ಸದಸ್ಯ ಶ್ರೀನಿವಾಸ್ ಒತ್ತಾಯಿಸಿದ್ದಾರೆ. ಕಟ್ಟಡ ಕಾಮಗಾರಿಯ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದ್ದು, ಇಲಾಖೆಗೆ ಎಂಜಿನಿಯರ್ ಧ್ರುವರಾಜ್ ಅವರು ಗುತ್ತಿಗೆದಾರನೊಂದಿಗೆ ಶಾಮಿಲಾಗಿ  ಆರಂಭದಿಂದಲೂ ಕಟ್ಟಡ ಕಾಮಗಾರಿಯನ್ನು ಕಳಪೆಯಾಗಿ ನಿರ್ಮಿಸಿದ್ದಾರೆ ಎಂದು ಅವರು ಆರೋಪಿಸಿದರು. ತಕ್ಷಣವೇ ಕಾಮಗಾರಿಯನ್ನು ನಿಲ್ಲಿಸಲು ಎಂಜಿನಿಯರ್‌‌ ಧ್ರುವ ರಾಜ್, ಗುತ್ತಿಗೆದಾರನಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದ ಅವರು, ಕಳಪೆ ಕಾಮಗಾರಿಯ ಬಗ್ಗೆ ಪ್ರಶ್ನಿಸಿದರೆ, ಧ್ರುವ ರಾಜ ಅವರು ಉಡಾಫೆ  ಉತ್ತರ ನೀಡುತ್ತಿದ್ದಾರೆ. ಕಾಮಗಾರಿ ನಿಲ್ಲಿಸಲು ಶಾಸಕರ ಗಮನಕ್ಕೆ ತರಲಾಗಿದೆ ಎಂದರೂ ಶಾಸಕರ ಮಾತಿಗೂ ಕ್ಯಾರೆ ಎನ್ನುತ್ತಿಲ್ಲ ಎಂದು ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ನಿಲ್ಲಿಸುವುದಿಲ್ಲ, ಯಾರಿಗೆ ಬೇಕಾದರೂ  ಹೇಳಿಕೊಳ್ಳಿ ಎಂದು ಬೇಜವಾಬ್ದಾರಿಯ ಉತ್ತರ ನೀಡುವ ಮೂಲಕ ಶಾಸಕರಿಗೂ ಧ್ರುವ ರಾಜ್ ಅಗೌರವ ತೋರಿದ್ದಾರೆ. ಹೀಗಾಗಿ ಎಂಜಿನಿಯರ್‌ ವಿರುದ್ದ ಸೂಕ್ತಕ್ರಮ ವಹಿಸಬೇಕು. ಕಾಮಗಾರಿ ನಿಲ್ಲಿಸಬೇಕು.…

Read More

ಪ್ರಧಾನಿ ಮೋದಿಯವರ ನಾಳಿನ ಬೆಂಗಳೂರು ಭೇಟಿ ಎಲೆಕ್ಷನ್ ಗಿಮಿಕ್ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ಮೋದಿ ಬೆಂಗಳೂರು ಭೇಟಿ ಎಲೆಕ್ಷನ್ ಗಿಮಿಕ್. ಮೊದಲು 40 ಪರ್ಸೆಂಟ್ ಆರೋಪಕ್ಕೆ ಮೋದಿ ಉತ್ತರಿಸಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪತ್ರ ಬರೆದರೂ ಉತ್ತರಿಸಿಲ್ಲ ಎಂದು ಟಾಂಗ್ ನೀಡಿದರು. ವಾಲ್ಮಿಕಿ ಕನಕ ಪ್ರತಿಮೆಗೆ ಮಾಲಾರ್ಪಣೆ ಇದು ಎಲೆಕ್ಷನ್ ಗಿಮಿಕ್ . ವಾಲ್ಮಿಕಿ ಕನಕ ಪ್ರತಿಮೆ ನಿರ್ಮಿಸಿದ್ದು ಕಾಂಗ್ರೆಸ್. ಈಗ ಮಾಲಾರ್ಪಣೆ ಮಾಡಲು ಮೋದಿ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮೋದಿ ಬರ್ತಾರೆ ಅಂತಾ ಹಿಂದೆ ಗುಂಡಿ ಮುಚ್ಚಿದ್ದರು. ಈಗ ರಸ್ತೆ ಗುಂಡಿ ಮುಚ್ಚುತ್ತಿದ್ದಾರೆ. ಕಳಪೆ ರಸ್ತೆ ನಿರ್ಮಿಸಿ ಕಿತ್ತೋದ್ರೆ ಏನು ಪ್ರಯೋಜನ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಾಳೆ 108 ಅಡಿಯ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿದ್ದು, ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಾರೆ. ಮೋದಿ ಆಗಮನ ಹಿನ್ನೆಲೆ ಬೆಂಗಳೂರು ರಸ್ತೆ ಸಂಚಾರದಲ್ಲಿ ಮಾರ್ಗ ಬದಲಾವಣೆಯಾಗಲಿದ್ದು, ಟ್ರಾಫಿಕ್​ ಹಾಗೂ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಕೆಲ ರಸ್ತೆಗಳು ಬಂದ್​ ಆಗಲಿವೆ. CTO ಜಂಕ್ಷನ್​, ಪೊಲೀಸ್​ ತಿಮ್ಮಯ್ಯ ಜಂಕ್ಷನ್​​, ರಾಜಭವನ, ಸ್ಯಾಂಕಿ ರಸ್ತೆ, ಏರ್​​ಪೋರ್ಟ್​ ಕಾರಿಡಾರ್​, ಮಹಾರಾಣಿ ಬ್ರಿಡ್ಜ್ ಸೇರಿದಂತೆ ಕೆಲ ರಸ್ತೆಗಳು​ ಬಂದ್ ಆಗಲಿವೆ.​​ ಮೋದಿ ಭದ್ರತೆಗಾಗಿ ಒಟ್ಟು 4 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಏರ್‌ ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಇದರಿಂದಾಗಿ ಗ್ರಾಹಕರು ಪರದಾಡಿದ ಘಟನೆ ನಡೆದಿದೆ. ತಾಂತ್ರಿಕ ಅಡಚಣೆಯ ಹಿನ್ನೆಲೆಯಲ್ಲಿ ಏರ್ ಟೆಲ್ ಗ್ರಾಹಕರ ಬಳಿಕ ಕ್ಷಮೆಯಾಚಿಸಿದೆ. ಏರ್ ಟೆಲ್  ನ ಸೇವೆಯಲ್ಲಿ ಹಲವೆಡೆ ಸೇವಾ ಅಡೆತಡೆಗಳು ಉಂಟಾಗಿದ್ದು, ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಏರ್ ಟೆಲ್ ಈ ಬಗ್ಗೆ ಸ್ಪಷ್ಟನೆ ನೀಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ನಿಮ್ಮ ಏರ್‌ ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸೇವೆಗಳಲ್ಲಿ ನೀವು ಅಡಚಣೆಯನ್ನು ಅನುಭವಿಸಬಹುದು. ನಿಮ್ಮ ಸೇವೆಗಳನ್ನು ಪುನರಾರಂಭಿಸಲು ನಿರೀಕ್ಷಿತ ಸಮಯ 10 ನವೆಂಬರ್ 2022, 5:44 PM ಆಗಿದೆ. ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಏರ್ ಟೆಲ್ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನಟಿ ರಶ್ಮಿಕಾ ಮಂದಣ್ಣ ಮಾಡಿರುವ ಪೋಸ್ಟ್​ ಕುರಿತು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಶ್ಮಿಕಾ ಟ್ರೋಲ್​ ಮತ್ತು ನೆಗೆಟಿವಿಟಿ ಕಾರಣದಿಂದ ನಮಗೆ ಆಗಿರುವ ತೊಂದರೆ ಕುರಿತು ಅವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕುರಿತು ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಟ್ರೋಲಿಂಗ್​ ಕೆಟ್ಟದ್ದು. ಜನರ ಜೀವನದ ಬಗ್ಗೆ ನಾವು ಅಭಿಪ್ರಾಯಗಳನ್ನು ಹೇರೋಕೆ ಆಗಲ್ಲ. ವಾಸ್ತವ ಆ ವ್ಯಕ್ತಿಗೆ ಮಾತ್ರ ಗೊತ್ತಿರುತ್ತದೆ. ಅವರ ಪಾಡಿಗೆ ಅವರನ್ನು ಇರಲು ಬಿಡಿ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಅಂದಹಾಗೆ ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್​ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್​ ಬ್ಯಾಗ್​ ರೀತಿ ಆಗಿದ್ದೇನೆ ಎಂದು ಬರೆದುಕೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಡಿಕೇರಿ; ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ. ಶ್ರೀನಾಥ್ ಎಂಬಾತ 60 ಕ್ಕೂ ಹೆಚ್ಚು ಜನರಿಗೆ ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ ವಂಚನೆ ಮಾಡಿದ್ದ. ಪ್ರತಿಯೊಬ್ಬರಿಂದ 1 ಲಕ್ಷ ರೂ. ಸಂಗ್ರಹ ಮಾಡಿದ್ದ ಎನ್ನಲಾಗಿದೆ. ಕೊಡಗು, ದಕ್ಷಿಣ ಕನ್ನಡ ಕೇರಳಾದಲ್ಲೂ ಆರೋಪಿ ವಂಚನೆ ಮಾಡಿದ್ದು, ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾಜಿ ವಿಶ್ವ ಸುಂದರಿ, ನಟಿ ಪ್ರಿಯಾಂಕಾ ಚೋಪ್ರಾ ಹಲವು ವರ್ಷಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ತಾರತಮ್ಯವನ್ನು ಕೊನೆಗೊಳಿಸಲು ಯುನಿಸೆಫ್ ಕಾರ್ಯಗಳ ಪ್ರಗತಿಯನ್ನು ನೋಡಲು ಅವರು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಿದ್ದಾರೆ. ಅಂದಹಾಗೆ ಪ್ರಿಯಾಂಕಾ ಚೋಪ್ರಾ ಯುನಿಸೆಫ್‌ನ ಸದ್ಭಾವನಾ ರಾಯಭಾರಿಯಾಗಿದ್ದು ಅವರು ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಿಷಯವನ್ನು ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ತಮ್ಮ ಭೇಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು “ಸದ್ಯ, ನಾನು ಯುನಿಸೆಫ್‌ನೊಂದಿಗೆ ಭಾರತದ ಲಕ್ನೋದಲ್ಲಿದ್ದೇನೆ. ನಾನು ಈ ಕ್ಷೇತ್ರ ಭೇಟಿಗಾಗಿ ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಯುದ್ಧಕ್ಕೆ ಸಜ್ಜಾಗಿ ಗೆಲುವಿಗೆ ಹೋರಾಡಿ ಎಂದು ಸೇನೆಗೆ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಕರೆ ನೀಡಿದ್ದಾರೆ. ಸತತ ಮೂರನೇ ಬಾರಿ 5 ವರ್ಷಗಳ ಅವಧಿಯ ಚೀನಾ ನ್ಯಾಷನಲ್ ಸೆಕ್ಯೂರೆಟಿ ಮುಖ್ಯಸ್ಥರಾಗಿ ನೇಮಕಗೊಂಡ ನಂತರ ಸೇನೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಸೇನೆಯಲ್ಲಿ ಅತ್ಯಂತ ಅಸ್ಥಿರ ಕಾಡುತ್ತಿದ್ದು, ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು. ಪಕ್ಷದ ಮೂರು ಪ್ರಮುಖ ಹುದ್ದೆಗಳನ್ನು ಹೊಂದಿರುವ ಕ್ಸಿ ಜಿನ್ ಪಿಂಗ್, ಚೀನಾ ಸೇನೆ ಹಿಂದೆದಿಗಿಂತಲೂ ಹೆಚ್ಚು ಸವಾಲುಗಳನ್ನು ಎದುರಿಸುತ್ತಿದ್ದು, ಅದರ ವಿರುದ್ಧ ಹೋರಾಡಿ ಗೆಲ್ಲಬೇಕಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಎಎಸ್ ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪೇರೇಸಂದ್ರ ಗ್ರಾಮದಲ್ಲಿನ ಎಎಸ್ ಐ ನಾರಾಯಣ ಸ್ವಾಮಿ ಮನೆಯಲ್ಲಿ ಈ ಘಟನೆ ನಡೆದಿದೆ. ನಾರಾಯಣ ಸ್ವಾಮಿ ಅವರ ಪುತ್ರ ಶರತ್ ಗೆ ಮೂರು ಗುಂಡು ತಗುಲಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಶರತ್ ಮೇಲೆ ಗುಂಡು ಹಾರಿಸಿ ಪತ್ನಿ ಹಾಗೂ ಸೊಸೆ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ತಾರಾ ಅವರ ಕಾರು ಚಾಲಕನ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾರಾ ಅವರ ಕಾರು ಚಾಲಕ ಅಕ್ಷಯ್ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅಕ್ಟೋಬರ್ 29ರಂದು ನಟಿ ತಾರಾ ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕ ಅಕ್ಷಯ್ ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿದ್ದಾರೆ. ಮುಂದೆ ಇದ್ದ ಕಾರು ಜಖಂಗೊಂದಿತ್ತು, ಅಕ್ಷಯ್ ಅವರ ಅಜಾಗರೂಕ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎಂದು ಮುಂದಿನ ಕಾರಿನಲ್ಲಿದ್ದ ಗಿರೀಶ್ ಅವರು ಆರೋಪಿಸಿದ್ದರು. ಘಟನಾ ನಂತರ ಕಾರು ರಿಪೇರಿ ಮಾಡಿಸುವುದಾಗಿ ಅಕ್ಷಯ್ ಭರವಸೆ ನೀಡಿದ್ದರು. ಆದರೆ ರಿಪೇರಿ ಮಾಡಿಸದೇ ನಂತರ ಸಾಕಷ್ಟು ಬಾರಿ ಅಲೆದಾಡಿಸಿದ್ದಾರೆ ಎಂದು ಮತ್ತೊಂದು ಕಾರಿನ ಗಿರೀಶ್ ದೂರು ನೀಡಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ‘ಅಜಾಗರೂಕ ಚಾಲನೆ’ ಎಂದು ಪ್ರಕರಣ ದಾಖಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More