Author: admin

ಮಧುಗಿರಿ:  ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ದೊಡ್ಡೇರಿ ಗ್ರಾಮದ ಜಮೀನಿನಲ್ಲಿ ಮೇಯುತಿದ್ದ ಎರಡು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಎರಡು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ. ತಾಲೂಕಿನ ದೊಡ್ಡೇರಿ ಗ್ರಾಮದ ರಂಗನಾಥಪ್ಪನವರಿಗೆ ಸೇರಿದ ಮೇಕೆಗಳಾಗಿದ್ದು, ಸುಮಾರು ಮೂವತ್ತು ಸಾವಿರ ನಷ್ಟವಾಗಿದೆ ಎಂದು ಮಾಲೀಕ ಊರಿನ ಗ್ರಾಮಸ್ಥರು  ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದರು. ಈ ವೇಳೆ ನಮಗೆ ಪರಿಹಾರ ನೀಡಬೇಕು  ಎಂದು ಮಾಲೀಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಊರಿನ ಗ್ರಾಮಸ್ಥರಾದ ರಂಗನಾಥಪ್ಪ ಜಯಕುಮಾರ್ ರವೀಶ್ ಅಪ್ಪು ಕಾಂತು ಕಾಟ್ಮೆ ಲಿಂಗಯ್ಯ ಮೊದಲಾದವರು  ಪರಿಹಾರ ಕೋರಿ ಮನವಿ ಸಲ್ಲಿಸಿದ್ದಾರೆ. ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

‘ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ. ಕೃಷ್ಣ ಅವರ ನಂತರ ನಾನು ಪಕ್ಷದ ಅಧ್ಯಕ್ಷನಾಗಿದ್ದು, ಒಕ್ಕಲಿಗ ಸಮಾಜ ನನ್ನ ಬೆನ್ನ ಹಿಂದೆ ನಿಲ್ಲಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಪತ್ರಕರ್ತರು, ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ತಾವು ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದೀರಾ ಎಂದು ಪ್ರಶ್ನಿಸಿದಾಗ ಅವರು ಉತ್ತರಿಸಿದರು. ‘ನಾನೇನು ಸನ್ಯಾಸಿನಾ? ನಾನು ಖಾದಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ ಹೊರತು, ಕಾವಿ ಬಟ್ಟೆ ಹಾಕಿ ಬಂದಿಲ್ಲ. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಪಕ್ಷ ತೀರ್ಮಾನ ಮಾಡಲಿದೆ. ನಾನು ಮುಖ್ಯಮಂತ್ರಿ ಆಗುವುದಕ್ಕಿಂತ ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ…

Read More

ಉಡುಪಿ: ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡಿರುವ ಕರ್ನಾಟಕದ ಕರಾವಳಿಯ ಕುವರಿ ಸಿನಿ ಶೆಟ್ಟಿಗೆ ಹುಟ್ಟೂರು ಉಡುಪಿಯಲ್ಲಿ ಮಂಗಳವಾರ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಅದ್ಧೂರಿಯ ಸ್ವಾಗತ ಕೋರಲಾಯಿತು. ಈ ಸಂದರ್ಭ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹುಟ್ಟೂರು ಕರಾವಳಿಯಲ್ಲಿ ಸಿಕ್ಕ ಅದ್ಧೂರಿ ಸ್ವಾಗತದಿಂದ ಖುಷಿಯಾಗಿದೆ. ತವರಿನಲ್ಲಿ ಅಜ್ಜಿಯನ್ನು ಭೇಟಿಯಾಗಿದ್ದು ಸಂತಸವನ್ನು ಹೆಚ್ಚಿಸಿದೆ. ನನ್ನ ಸಾಧನೆಯ ಹಿಂದೆ ಅಜ್ಜಿಯ ಸ್ಪೂರ್ತಿ ತುಂಬಿದ ಮಾತುಗಳು ಹಾಗೂ ಪ್ರೇರಣೆ ಇದೆ ಎಂದರು. ಇದೇ ವೇಳೆ ಮಿಸ್ ವರ್ಲ್ಡ್ ಸ್ಪರ್ಧೆಗೆ ತಯಾರಾಗುತ್ತಿದ್ದು, ಕರಾವಳಿಯ ಜನರ ಪ್ರೀತಿ ಹಾಗೂ ಇಲ್ಲಿನ ದೈವ ದೇವರ ಆಶೀರ್ವಾದ ಬೇಕು ಎಂದರು. ಸಿನಿ ಶೆಟ್ಟಿ ಜೊತೆಗೆ ತಂದೆ ಸದಾನಂದ ಶೆಟ್ಟಿ ಹಾಗೂ ತಾಯಿ ಹೇಮಾ ಶೆಟ್ಟಿ ಜತೆಗಿದ್ದರು. ಸಾರೋಟು ಸಮಾರಂಭದ ಅಂಗಳ ತಲುಪುತ್ತಿದ್ದಂತೆ ಅಭಿಮಾನಿಗಳು ಫೋಟೊ ಕ್ಲಿಕ್ಕಿಸಿ, ಸೆಲ್ಫಿ ತೆಗೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಂಗಳೂರು:  ನಾಡ ಹಬ್ಬ ಮೈಸೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. ಇಂದು ಮೈಸೂರು ದಸರಾ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ  ಉನ್ನತ ಮಟ್ಟದ ಸಭೆಯಲ್ಲಿ  ದಸರಾ ಹಬ್ಬದ ಉದ್ಘಾಟಕರಾಗಿ ಯಾರನ್ನು ಆಹ್ವಾನ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ದಸರಾ ಆಚರಣೆಯ ಸಮಿತಿ, ದಸರಾ ಉದ್ಘಾಟನೆಗೆ ಆಹ್ವಾನಿತರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಸರಾ ಬಗ್ಗೆ ಪ್ರಚಾರ ಮಾಡಲಾಗುವುದು. ದಸರಾ ಬ್ರ್ಯಾಂಡ್ ಆಗಬೇಕು ಎಂದರು. ಸೆಪ್ಟೆಂಬರ್ 26 ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ 5 ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಈ ವಸ್ತು ಪ್ರದರ್ಶನ 15 ದಿನ ಮೊದಲೇ ಆರಂಭಿಸಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.…

Read More

ಮಂಡ್ಯ: ಸಾಹಿತಿ ದೇವನೂರು ಮಹಾದೇವ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿ, ಸಂಸದ ಪ್ರತಾಪ ಸಿಂಹ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ಹೊರಹಾಕಿದರು. ದೇವನೂರು ಮಹಾದೇವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಪ್ರತಾಪ ಸಿಂಹ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇದೇ ವೇಳೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಸರಗೂರು: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬಾಬು ಜಗಜೀವನರಾಂ ವಿಚಾರ ವೇದಿಕೆಯ ನೂತನ ಅಧ್ಯಕ್ಷರಾಗಿ ಕಲ್ಲಂಬಾಳು ನಾಗಣ್ಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯ ವಹಿಸಿ ಮಾತನಾಡಿದ ವೈಕುಂಠಯ್ಯ, ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಎರಡು ತಾಲ್ಲೂಕಿನಿಂದ ಒಬ್ಬರೇ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಸರಗೂರು ತಾಲ್ಲೂಕು ವಿಂಗಡನೆಯಾದ ಬಳಿಕ ಇದೆ ಮೊದಲ ಬಾರಿಗೆ ನೂತನ ಸರಗೂರು ತಾಲ್ಲೂಕಿನ ಬಾಬು ಜಗಜೀವನರಾಂ ವಿಚಾರ ವೇದಿಕೆ ನೂತನ ಅಧ್ಯಕ್ಷರನ್ನು ಎಲ್ಲಾ ಊರಿನ ಯಾಜಮಾರು ಮತ್ತು ಗ್ರಾಮಸ್ಥರು ಸಮ್ಮುಖದಲ್ಲಿ ಈ ಸಭೆ ನೂತನ ಅಧ್ಯಕ್ಷರನ್ನು ಆಯ್ಕೆ ನಡೆಯಿತು. ಮುಂದಿನ ಸಭೆಯಲ್ಲಿ ಪದಾಧಿಕಾರಿಗಳು ಆಯ್ಕೆ ಮಾಡುತ್ತೇವೆ ಎಂದರು. ನೂತನ ಅಧ್ಯಕ್ಷ ಕಲ್ಲಂಬಾಳು ಎನ್.ಕೆ.ನಾಗಣ್ಣ, ನಾಗಯ್ಯ(ದಾಸಿ).ಹೆಚ್ ಹನು ನಾಗಣ್ಣ, ವೆಂಕಟಪ್ಪ, ಸ್ವಾಮಿ, ಪುಟ್ಟಸ್ವಾಮಿ, ಶಿವರಾಜು, ಸುರೇಶ್, ಹೆಚ್ಚೂಪ್ರಸಾದ್, ಅಪಾಜ್ಜಿ, ನಾಗರಾಜು, ಜವರಯ್ಯ, ರಾಮಚಂದ್ರ ಡಿ ಆರ್ ಸಿ.ಇವರು ಅಧ್ಯಕ್ಷರನ್ನು ಅಭಿನಂದಿಸಿದರು. ಮುಖಂಡರ ಜಯರಾಮ್, ಗುಂಠಪ್ಪ, ಸಣ್ಣಕರಿಯ, ಆಟೋ ರಮೇಶ್, ಜಯರಾಂ ಜೆಪಿ.ನಂಜುಂಡ, ಗೊವಿಂದ, ವೆಲ್ಡಿಂಗ್ ಸ್ವಾಮಿ, ಶಿವರಾಜು,…

Read More

ತಿಪಟೂರು: ಮಕ್ಕಳು ತಿನ್ನುವ ಅನ್ನ, ಸಾಂಬಾರ್, ಮೊಸರು ಕಳಪೆಯಾಗಿದ್ದು, ಶಾಲಾ ಮಕ್ಕಳಿಗೆ ಇದೇ ಆಹಾರ ಗತಿ ಎನ್ನುವಂತಹ ಪರಿಸ್ಥಿತಿ ತಿಪಟೂರು ನಗರದ ಹಳೇಪಾಳ್ಯ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದಿದೆ. ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಮಸ್ಯೆಗಳ ಆಗರವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಕ್ಷರ ದಾಸೋಹ ಇಲಾಖೆ ಹುಳು ಬಿದ್ದ ಅಕ್ಕಿ ಬೆಳೆಯನ್ನು ಶಾಲೆಗಳಿಗೆ ಸರಬರಾಜು ಮಾಡಲಾಗುತ್ತಿದ್ದು, ಅಧಿಕಾರಿಗಳ ಮರ್ಜಿಗೆ ಬಿದ್ದ ಅಡುಗೆ ಸಿಬ್ಬಂದಿ, ಹುಳುಬಿದ್ದ ಪದಾರ್ಥಗಳಲ್ಲಿಯೇ ಅಡುಗೆ ತಯಾರಿಸಿ ಮಕ್ಕಳಿಗೆ ಬಡಿಸುವ ಅನಿವಾರ್ಯ ಸ್ಥಿತಿ ಸೃಷ್ಟಿಯಾಗಿದೆ. ನಗರದ ಹಳೇಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸುಮಾರು 407ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮಕ್ಕಳಿಗೆ ಕಳಪೆಗುಣಮಟ್ಟದ ಆಹಾರ ನೀಡಲಾಗುತ್ತಿದೆ. ಇನ್ನೊಂದೆಡೆ ಅಡುಗೆಗೆ ತರಕಾರಿ ತಾರದೇ ಹಣ ಗುಳುಂ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಶಾಲೆಯಲ್ಲಿ ಮುಖ್ಯಶಿಕ್ಷಕರಿಲ್ಲದೆ ಸಹ ಶಿಕ್ಷಕರೇ ಕೆಲಸ ನಿರ್ವಹಿಸುತ್ತಿದ್ದಾರೆ. ಶಿಕ್ಷಣ ಸಚಿವರ ತವರಿನಲ್ಲೇ ಸರ್ಕಾರಿ ಶಾಲೆಗಳಿಗೆ…

Read More

ಕಳೆದ ಕೆಲ ದಿನಗಳ ಹಿಂದೆ ತರಕಾರಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದಿತ್ತು. ಆದರೆ ನಿನ್ನೆ ಮತ್ತು ಇಂದು ಯಾವುದೇ ಬದಲಾವಣೆ ಇಲ್ಲದೆ ಮುಂದುವರೆದಿದೆ. ಇನ್ನು ನಿನ್ನೆ ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಜಿಎಸ್‌ಟಿ ನೀತಿಯ ಪರಿಣಾಮ ತರಕಾರಿ ಬೆಲೆಯ ಮೇಲೂ ಬೀಳುತ್ತದೆಯೇ ಎಂದು ಗ್ರಾಹಕರು ಭೀತಿಯಲ್ಲಿದ್ದರು. ಆದರೆ ತರಕಾರಿ ಹೊರತು ಪಡಿಸಿ ಉಳಿದೆಲ್ಲಾ ವಸ್ತುಗಳ ಮೇಲೆ ತೆರಿಗೆ ಹಾಕಲಾಗಿದೆ. ಬೀಟ್‌ರೂಟ್‌, ಅವರೆಕಾಳು, ಗೋರೆಕಾಯಿ, ಬೀನ್ಸ್ ಹೀಗೆ ಹಲವಾರು ತರಕಾರಿಗಳ ಇಂದಿನ ಬೆಲೆಯನ್ನು ಈ ಕೆಳಗೆ ವಿವರವಾಗಿ ನೀಡಲಾಗಿದೆ. ಹರಿವೆ ಸೊಪ್ಪು (ಕೆಜಿ) ರೂ. 8 ನೆಲ್ಲಿಕಾಯಿ ರೂ. 65 ಬೂದು ಕುಂಬಳಕಾಯಿ ರೂ. 24 ಬೇಬಿ ಕಾರ್ನ್ ರೂ. 48 ಬಾಳೆ ಹೂವು ರೂ. 13 ಬೀಟ್‌ರೂಟ್‌ ರೂ. 53 ಕ್ಯಾಪ್ಸಿಕಂ ರೂ. 30 ಹಾಗಲಕಾಯಿ ರೂ. 38 ಸೋರೆಕಾಯಿ ರೂ. 27 ಅವರೆಕಾಳು ರೂ. 57 ಎಲೆಕೋಸು ರೂ. 26 ಕ್ಯಾರೆಟ್ ರೂ. 57 ಹೂಕೋಸು ರೂ. 26…

Read More

ಭಾರತ ಚೀನಾ ಗಡಿಯ ಪಕ್ಕದಲ್ಲಿರುವ ನಾಭಿಧಾಂಗ್‌ನ ನಿರ್ಬಂಧಿತ ಪ್ರದೇಶದಲ್ಲಿ ಮಹಿಳೆಯೊಬ್ಬಳು ಹೈಡ್ರಾಮ ನಡೆಸಿದ್ದಾಳೆ. ಆಕೆಯನ್ನು ಅಲ್ಲಿಂದ ಕರೆತರಲು ಹೋದ ಪೊಲೀಸರಿಗೂ ಆಕೆ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಇಷ್ಟಕ್ಕೂ ಆ ಮಹಿಳೆ ಮಾಡಿದ್ದೇನು ಎಂದರೆ ನಿಮಗೆ ಶಾಕ್‌ ಆಗಬಹುದು. ಉತ್ತರ ಪ್ರದೇಶದ ಅಲಿಗಂಜ್ ಪ್ರದೇಶದ ನಿವಾಸಿಯಾಗಿರುವ ಹರ್ಮಿಂದರ್‌ ಕೌರ್‌ ಎಂಬ ಮಹಿಳೆ ಎಸ್‌ಡಿಎಂ ಧಾರ್ಚುಲಾ ನೀಡಿದ 15 ದಿನಗಳ ಅನುಮತಿಯ ಮೇರೆಗೆ ತನ್ನ ತಾಯಿಯ ಜೊತೆಗೆ ಭಾರತ-ಚೀನಾ ಗಡಿಯ ಪಕ್ಕದಲ್ಲಿರುವ ನಾಭಿಧಾಂಗ್‌ನ ನಿರ್ಬಂಧಿತ ಪ್ರದೇಶಕ್ಕೆ ತೆರಳಿದ್ದರು. ಆದರೆ ಅನುಮತಿಯ ಅವಧಿ ಮುಗಿದರೂ ಆಕೆ ಹಿಂತಿರುಗಲು ಒಪ್ಪುತ್ತಿಲ್ಲ. ಇದಕ್ಕೆ ಕಾರಣ ಆಕೆ ನೀಡುತ್ತಿರುವ ಹೇಳಿಕೆ. “ನಾನು ಪಾರ್ವತಿಯ ಅವತಾರ, ಕೈಲಾಸ ಪರ್ವತದ ಮೇಲೆ ವಾಸಿಸುವ ಶಿವನನ್ನು ಹೊರತಾಗಿ ನಾನು ಯಾರನ್ನೂ ವಿವಾಹವಾಗುವುದಿಲ್ಲ” ಎಂದು ಹೇಳುತ್ತಿದ್ದಾಳೆ. ಪಿಟಿಐ ವರದಿ ಪ್ರಕಾರ, ನಿರ್ಬಂಧಿತ ಪ್ರದೇಶದಿಂದ ಹರ್ಮಿಂದರ್ ಕೌರ್ ಅವರನ್ನು ಹಿಂತಿರುಗಿ ಕರೆತರಲು ಹೋದ ಪೊಲೀಸ್ ತಂಡಕ್ಕೂ ನಿರಾಸೆಯಾಗಿದೆ. ತನ್ನನ್ನು ಕರೆದುಕೊಂಡು ಹೋಗುವಂತೆ ಒತ್ತಾಯಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆ…

Read More

ತುರುವೇಕೆರೆ: ಪಟ್ಟಣದ ಪಿ ಕಾರ್ಡ್ ಬ್ಯಾಂಕ್ ಆವರಣದಲ್ಲಿ ಮೈಸೂರು ರಾಜ್ಯದ ಗೌರವಾನ್ವಿತ ಮಹಾರಾಜರು ಕ್ರೀಡೆ ಹಾಗೂ ಸಂಗೀತ ಪ್ರೇಮಿ ಜಯ ಚಾಮರಾಜೇಂದ್ರ ಒಡೆಯರ್ ರವರ ಜನ್ಮದಿನವನ್ನು ಆಚರಿಸಲಾಯಿತು. ಜಯಚಾಮರಾಜೇಂದ್ರ ಒಡೆಯರ್ ರವರ ಭಾವಚಿತ್ರವನ್ನು ಸಭಾಂಗಣದಲ್ಲಿ ಇರಿಸಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಲಾಯಿತು ಹಾಗೂ ತಾಲೂಕಿನ ಪತ್ರಕರ್ತರಾದ ಶ್ರೀಕಾಂತ ರಾಜ್ ಅರಸ್ ಅವರು, ಜನ್ಮದಿನ ಆಚರಣೆ ಪ್ರಯುಕ್ತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರಿಗೂ ಸಿಹಿ ವಿತರಿಸಿದರು. ಇದೇ ವೇಳೆ ಅಮಾನಿ ಕೆರೆ ಮಂಜಣ್ಣರವರು ಒಡೆಯರ್ ಅವರ ಗುಣಗಾನ ಹಾಗೂ ಅವರ ಸಾಧನೆ,  ಕೈಗೊಂಡ ಕಾರ್ಯಗಳನ್ನು ಕೊಂಡಾಡಿದರು. ಈ ಸಂದರ್ಭದಲ್ಲಿ  ಪಿ ಕಾರ್ಡ್ ಬ್ಯಾಂಕ್ ನ ಅಧ್ಯಕ್ಷ ಮೂಡ್ಲಗಿರಿಯಪ್ಪ, ತಾವರೆಕೆರೆ ರಾಮೇಗೌಡರು, ಉಗ್ರೇಗೌಡರು, ಕೋಳಾಲ ನಾಗರಾಜ್, ಗೊಟ್ಟಿಕೆರೆ ಕಾಂತರಾಜು, ಕರುನಾಡ ವಿಜಯ ಸೇನೆಯ ತಾಲೂಕು ಅಧ್ಯಕ್ಷ   ಎಚ್.ಎಸ್ .ಸುರೇಶ್,  ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ವೆಂಕಟೇಶ್, ಆಬುಲಕಟ್ಟೆ ರಾಮಣ್ಣ  ಮತ್ತಿತರರು ಈ ವೇಳೆ ಹಾಜರಿದ್ದರು. ವರದಿ: ಸುರೇಶ್ ಬಾಬು ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More