Author: admin

ದೇವರ ಹರಕೆ ತೀರಿಸಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ಮೂವರು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಂಭವಿಸಿದೆ. ಗೋಗಿ ತಾಂಡ ನಿವಾಸಿಗಳಾದ ದೀಪಕ್ (45), ಯುವರಾಜ್ (17) ಮತ್ತು ರಾಹುಲ್ (17) ಮೃತಪಟ್ಟ ದುರ್ದೈವಿಗಳು. ಗೋಗಿ ತಾಂಡಾದಿಂದ ಸಾವಳಗಿ ತಾಂಡಗೆ ದೇವರಿಗೆ ಹರಕೆ ತೀರಿಸಲು ಕುಟುಂಬ ಸಮೇತರಾಗಿ ತೆರಳಿದ್ದರು. ಕುಟುಂಬದವರು ಬೇರೆ ವಾಹನದಲ್ಲಿ ಮರಳಿದರೆ, ಈ ಮೂವರು ಬೈಕ್ ನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಾಗಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ವಾರ್ಡ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ಮತದಾರರ ಪಟ್ಟಿ ಪರಿಶೀಲಿಸಲು ಅವಕಾಶ ನೀಡಲಾಗಿದೆ. ತಮ್ಮ ಮೊಬೈಲ್​ನಲ್ಲಿ VHA ಆ್ಯಪ್ ಅಥವಾ NVSP ವೆಬ್​ಸೈಟ್ ​ಮೂಲಕ ಮಾಹಿತಿ ಪಡೆಯಬಹುದಾಗಿದೆ. e-EPIC download ಮಾಡಿಕೊಳ್ಳಲು ಇನ್ನಿತರ ಮತಗಟ್ಟೆ, ಶೇಕಡಾವಾರು ಮತದಾನದ ಮಾಹಿತಿ ಪಡೆಯಬಹುದು. ಈ ಹಿಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8614 ಮತಗಟ್ಟೆಗಳಿದ್ದವು. ಪ್ರಸ್ತುತ 8615 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿ ದೋಷಗಳಿದ್ದರೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳು ಅವಕಾಶ ಇದೆ. ಅಂದರೆ 8-12-22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅಂತಿಮ‌ ಮತದಾರರ ಪಟ್ಟಿಯನ್ನು 5-1-2023 ಕ್ಕೆ ಪ್ರಕಟಿಸಲಾಗುತ್ತೆ ಎಂದು ತುಷಾರ್ ಗಿರಿನಾಥ್​ ತಿಳಿಸಿದರು. ಇ-ಲಿಸ್ಟ್ ಇಂದು ಪ್ರಕಟನೆ ಮಾಡಿದ್ದೇವೆ. ಅದರ ಆಧಾರದ…

Read More

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಚೋದನೆ ನೀಡಿದ್ದಾರೆ ಎಂಬ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಜೆಪಿ ಹಿರಿಯ ಮುಖಂಡರಾದ ಎಲ್ ಕೆ ಆಡ್ವಾಣಿ, ಉಮಾಭಾರತಿ, ಮನೋಹರ್ ಜೋಷಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಸರೋಜ್ ಯಾದವ್ ಅವರನ್ನೊಳಗೊಂಡ ಪೀಠ, ಅಡ್ವಾಣಿ, ಉಮಾ ಭಾರತಿ, ದಿವಂಗತ ಕಲ್ಯಾಣ್ ಸಿಂಗ್, ಮನೋಹರ್ ಜೋಷಿ ಸೇರಿದಂತೆ 32 ಮಂದಿ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ. ಅಯೋಧ್ಯೆಯ ಇಬ್ಬರು ಮುಸ್ಲಿಮ್ ಮುಖಂಡರು ಬಾಬ್ರಿ ಮಸೀದಿ ಧ್ವಂಸಗೊಳಿಸಿ ರಾಮ ಮಂದಿರ ಸ್ಥಾಪನೆಗೆ ಪ್ರಚೋದನೆ ನೀಡಿ ಗಲಭೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಇವರ ಮೇಲಿದ್ದ ಆರೋಪಗಳನ್ನು ವಜಾಗೊಳಿಸಿದ್ದ ಸಿಬಿಐ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. 2020ರಲ್ಲಿ ಸಿಬಿಐ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ಯೋಜಿತ ಕೃತ್ಯ ಎಂದು ಹೇಳಿತ್ತು. ಆದರೆ ಅದೇ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆ ಹಾಗೂ ಸುಪ್ರೀಂಕೋರ್ಟ್ ವಿವಾದ ಬಗೆ…

Read More

ಭಾರತ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ಹೆಸರು ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದು, ಸಂಭಾವ್ಯ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಹಲವು ಘಟಾನುಘಟಿಗಳ ಜೊತೆ ರವೀಂದ್ರ ಜಡೇಜಾ ಅವರ ಪತ್ನಿ ಕೂಡ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಜಡೇಜಾ ಪತ್ನಿ ರಿವಾಬಾ ಜಡೇಜಾ ಮೆಕಾನಿಕಲ್ ಇಂಜಿನಿಯರ್ ವಿದ್ಯಾಭ್ಯಾಸ ಮಾಡಿದ್ದು, ರಿವಾಬಾ ಅವರ ಸಂಬಂಧಿ ಹರಿ ಸಿಂಗ್ ಸೋಲಾಂಕಿ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದಾರೆ. ಕರ್ಣಿಸೇನಾ ಮುಖಂಡರಲ್ಲಿ ಒಬ್ಬರಾಗಿರುವ ರಿವಾಬಾ ಜಡೇಜಾ ರಜಪುತ್ ಸಮುದಾಯದವರಾಗಿದ್ದಾರೆ. ರವೀಂದ್ರ ಜಡೇಜಾ ಅವರನ್ನು 2016ರಲ್ಲಿ ವಿವಾಹ ಆಗಿದ್ದಾರೆ. ಗುಜರಾತ್ ನಲ್ಲಿ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ ತವರೂರಾದ ಈ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿಗೆ ಪ್ರಮುಖವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ದೇಶದಲ್ಲೇ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿ ಅವರು 2ನೇ ಟರ್ಮಿನಲ್‍ಗೆ ಉದ್ಘಾಟನೆ ಮಾಡಲಿದ್ದಾರೆ. ಇದರಿಂದ ಇನ್ನುಮುಂದೆ ವಿಮಾನ ನಿಲ್ದಾಣಕ್ಕೆ ದೇಶ-ವಿದೇಶಗಳಿಂದ ಬಂದುಹೋಗುವ ವಿಮಾನಗಳು ಮತ್ತು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಲಿದೆ. ಟರ್ಮಿನಲ್-2ನ್ನು ಗಾರ್ಡನ್ ಟರ್ಮಿನಲ್ ಎಂದು ಬಿಲ್ ಮಾಡಲಾಗಿದೆ. ಉದ್ಯಾನ ನಗರಿ ಬೆಂಗಳೂರಿನ ಅಭಿವೃದ್ಧಿ ನೀತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ವಿಶೇಷವಾಗಿ ಟರ್ಮಿನಲ್ ಅನ್ನು ವಿನ್ಯಾಸಗೊಳಿಸಲಾಗಿದೆ . ಒಟ್ಟು 13,000 ಕೋಟಿ ರೂ. ವೆಚ್ಚದಲ್ಲಿ 2.55 ಲಕ್ಷ ಚದರ ಮೀ. ಟರ್ಮಿನಲ್-2 ನಿರ್ಮಾಣ ನಡೆಯುತ್ತಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತಿದೆ. 1.6 ಕೋಟಿ ಪ್ರಯಾಣಿಕರ ದಟ್ಟಣೆಯ ಹೊರೆ ತಗ್ಗಿಸಲು ಟರ್ಮಿನಲ್-2 (ಟಿ-2) ಸಿದ್ದಪಡಿಸಲಾಗಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ…

Read More

ಬೆಂಗಳೂರು: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದು, ಜನತೆಯಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ ಎಂದು ಹಿಂದೂ ಅರ್ಥ ಅಶ್ಲೀಲ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ. ಇಷ್ಟು ದಿನ ಕಾಂಗ್ರೆಸ್ಸಿಗರು ಹಿಂದೂಗಳನ್ನ ಅವಮಾನ ಮಾಡುತ್ತಾ ಅಲ್ಪಸಂಖ್ಯಾತರ ಮತ ಪಡೆದುಕೊಂಡು ಅಧಿಕಾರದ ಕುರ್ಚಿ ಮೇಲೆ ಕುಳಿತಿದ್ರು ಎಂದು ಕಿಡಿಕಾರಿದ್ದಾರೆ. ಈಗ ಇಡೀ ರಾಜ್ಯ ಮತ್ತು ದೇಶದ ಜನಕ್ಕೆ ಕಾಂಗ್ರೆಸ್ಸೇ ಒಂದು ಅಶ್ಲೀಲ ಅಂತ ಗೊತ್ತಾಗಿದೆ. ಹಾಗಾಗಿ ಜನ ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಾಗಲೇ ಹಿಂದೂಗಳಿಗೆ ಅವಮಾನ ಮಾಡಿದ್ದಕ್ಕೆ ಬೆಲೆ ತೆತ್ತಿದ್ದಾರೆ. ಮುಂದೆಯೂ ಬೆಲೆ ತೆರುತ್ತಾರೆ. ಇನ್ನೂ 5 ತಿಂಗಳಲ್ಲಿ ಚುನಾವಣೆ ಇದೆ. ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಧಾರವಾಡ, ನವೆಂಬರ್ 9 : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅವಕಾಶ ಪಾಲಿಕೆ ಅನುಮತಿ ಕೊಟ್ಟಿರುವುದರ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಇಲಾಖೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುತಾಲಿಕ್, ಬಿಜೆಪಿ ಆಡಳಿತದಲ್ಲಿ ಇರುವ‌ ಪಾಲಿಕೆ ಟಿಪ್ಪು ಜಯಂತಿಗೆ ಅನುಮತಿ ದ್ರೋಹ ಮಾಡಿದೆ ಎಂದು ಕಿಡಿಕಾರಿದ್ದಾರೆ. ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟು ಹಿಂದೂಗಳಿಗೆ ದ್ರೋಹ ಮಾಡಿದ್ದೀರಿ, ಇದನ್ನ ರದ್ದು ಮಾಡಿ ವಾಪಸ್ ಪಡೆಯಬೆಕು ಎಂದು ಅವರು ತಿಳಿಸಿದರು. ಗುರುವಾರ ಇದನ್ನು ವಿರೋಧಿಸಿ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪಾಲಿಕೆಗೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಪಾಲಿಕೆಯಿಂದ ಷರತ್ತುಬದ್ಧ ಅನುಮತಿ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದಕ್ಕಾಗಿ ಎಐಎಂಐಎಂ ಹಾಗೂ ಕೆಲವು ದಲಿತ ಸಂಘಟನೆಗಳಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ಕೇಳಿದ್ದವು. ಇದರ ಬಗ್ಗೆ ಸುದೀರ್ಘ ಸಭೆ ನಡೆಸಿದ ಪಾಲಿಕೆ, ಈದ್ಗಾ ಮೈದಾನದಲ್ಲಿ…

Read More

ಬೆಳಗಾವಿ ‌ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಬುಧವಾರ (ನ.9) ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್. ಹೆಚ್.ವಿ ಅವರು ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಆರಂಭಗೊಂಡ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಸಂಚರಿಸಿ, ಬೋಗಾರ್ವಿಸ್ ಸರ್ಕಲ್ ವರೆಗೆ ತಲುಪಿತು. ಸರ್ದಾರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸರ್ದಾರ್ ಶಿಕ್ಷಣ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳು, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು. ಈ ಸಂಧರ್ಬದಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಬೆಳಗಾವಿ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ. ಎಂ ಕಾಂಬಳೆ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾಗಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,, ಪರಿಶೀಲನೆ ನಡೆಸಿ ನಂತರ ಸಿಬ್ಬಂದಿ , ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳೆ ಮತ್ತು ಮಕ್ಕಳ ಸಾವಿನ ಬಗ್ಗೆ ಸಭೆ ನಡೆಸಿದ್ದೇನೆ. ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಿದ್ದೇನೆ. ಔಷಧ ಚೀಟಿಯನ್ನ ಹೊರಗೆ ಬರೆದುಕೊಡಬಾರದು. ಆಸ್ಪತ್ರೆಯೊಳಗೆ ನೀಡಬೇಕು ಎಂದು ಸೂಚಿಸಿದ್ದೇನೆ. ತಾಯಿ ಅವಳಿ ಮಕ್ಕಳ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗುತ್ತಿದೆ. ತನಿಖೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಆಸ್ಪತ್ರೆಯ ಕೊರತೆಗಳನ್ನ ಸರಿಪಡಿಸುತ್ತೇವೆ ಎಂದು ಸಚಿವ ಅರಗ ಜ್ಞಾನೇಂದ್ರ ನುಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More