Subscribe to Updates
Get the latest creative news from FooBar about art, design and business.
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
- ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
- ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
- ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
- ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
- 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
- ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
Author: admin
ಬೆಂಗಳೂರು: ಬಹಳ ದಿನಗಳ ನಂತರ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಮ್ಮ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಣಜಿ: ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗೋವಾ ಸರ್ಕಾರ ಕೇಂದ್ರವನ್ನು ಕೋರಿದೆ. ಸೋನಾಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸೋನಾಲಿ ಕುಟುಂಬ ಸದಸ್ಯರು ಹರಿಯಾಣ ಸಿಎಂ ಕಟ್ಟರ್ ಅವರಿಗೆ ಮನವಿ ಮಾಡಿದ್ದಾರೆ. ಗೋವಾ ಸರ್ಕಾರದ ತನಿಖೆಯಿಂದ ನಮಗೆ ತೃಪ್ತಿ ಇಲ್ಲ ಎಂದು ಸೋನಾಲಿ ಕುಟುಂಬ ಹೇಳಿದೆ. ಗೋವಾ ಪೊಲೀಸರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಸೋನಾಲಿ ಮಗಳ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹಲವರು ಪತ್ರವನ್ನೂ ಬರೆದಿದ್ದು, ಹೀಗಾಗಿಯೇ ಕೇಂದ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಸಿಎಂ ಬಹಿರಂಗಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು (Bengaluru): ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ದೊಡ್ಡದಾಗಿದೆ. ಇದರಿಂದ ವಾಹನಗಳು ಗಂಟೆಗಟ್ಟಲೆ ಟ್ರಾಫಿಕ್ನಲ್ಲಿ ಸಿಲುಕಿಕೊಳ್ಳಬೇಕಾಗಿದೆ. ನಿಗದಿತ ಸಮಯದೊಂದಿಗೆ ಕೆಲಸಕ್ಕೆ ಹೋಗುವವರಿಗೆ ಕಷ್ಟಗಳು ಅನಿವಾರ್ಯ. ಆದರೆ ಇತ್ತೀಚಿಗೆ ಬೆಂಗಳೂರಿನ ವೈದ್ಯರೊಬ್ಬರು ತಮ್ಮ ಕಾರನ್ನು ಟ್ರಾಫಿಕ್ನಲ್ಲಿ ಬಿಟ್ಟು ಆಸ್ಪತ್ರೆಗೆ ಧಾವಿಸಿದ್ದಾರೆ. ಆ ಒಂದು ವಿಡಿಯೋ ಈಗ ವೈರಲ್ ಆಗಿದೆ. ಸರ್ಜಾಪುರದ ಮಣಿಪಾಲ್ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಶಸ್ತ್ರಚಿಕಿತ್ಸಕ ಡಾ.ಗೋವಿಂದ್ ನಂದಕುಮಾರ್ ಅವರು ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಮಹಿಳೆಯೊಬ್ಬರಿಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆ ಮಾಡಬೇಕಾಗಿತ್ತು. ಆದರೆ ವೈದ್ಯರು ಮನೆಯಿಂದ ಹೊರಬಂದು ಟ್ರಾಫಿಕ್ನಲ್ಲಿ ಸಿಲುಕಿಕೊಂಡರು. ಶಸ್ತ್ರಚಿಕಿತ್ಸೆಗೆ ತಡವಾಗಬಹುದೆಂಬ ಭಯದಿಂದ ವೈದ್ಯರು ಮೂರು ಕಿಲೋಮೀಟರ್ ಓಡಿದರು. ಕಾರು ಚಾಲಕನಿಗೆ ಬಿಟ್ಟುಕೊಟ್ಟ ವೈದ್ಯರು ಆಸ್ಪತ್ರೆಗೆ ಧಾವಿಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದರು. ರೋಗಿಯು ಆರೋಗ್ಯವಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಕಡಿತದಿಂದ ವೈದ್ಯರು ಹಾಗೂ ರೋಗಿಗಳು ಪರದಾಡಿದರು. ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಬಂದಿಲ್ಲ. ಇದರೊಂದಿಗೆ ವೈದ್ಯರು ತಮ್ಮ ಮೊಬೈಲ್ ಫೋನ್ಗಳ ಟಾರ್ಚ್ಲೈಟ್ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದರು. ಬಲ್ಲಿಯಾ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ರೋಗಿಗಳು ಪರದಾಡಿದರು. ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಬಂದಿಲ್ಲ. ಆಸ್ಪತ್ರೆಯಲ್ಲಿ ಜನರೇಟರ್ ಕೆಲಸ ಮಾಡಿಲ್ಲ. ತುರ್ತು ದೀಪಗಳೂ ಇಲ್ಲ. ವೈದ್ಯರು ತಮ್ಮ ಮೊಬೈಲ್ ಫೋನ್ಗಳ ಟಾರ್ಚ್ಲೈಟ್ನ ಸಹಾಯದಿಂದ ವೈದ್ಯಕೀಯ ಸೇವೆಗಳನ್ನು ಒದಗಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಕತ್ತಲು ಆವರಿಸಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏತನ್ಮಧ್ಯೆ, ಈ ಘಟನೆಯ ಕುರಿತು ಬಲ್ಲಿಯಾ ಜಿಲ್ಲಾ ಆಸ್ಪತ್ರೆಯ ಪ್ರಭಾರಿ ಡಾ.ಆರ್.ಡಿ.ರಾಮ್ ಸೋಮವಾರ ವಿವರಣೆ ನೀಡಿದರು.…
ವಿಜಯನಗರ : ನೇಣು ಹಾಕಿಕೊಳ್ಳುತ್ತಿದ್ದ ವ್ಯಕ್ತಿಯನ್ನು ತಡೆಯುವುದು ಬಿಟ್ಟು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಹನುಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಮೇಲೆ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದನ್ನು ತಡೆಯುದು ಬಿಟ್ಟು ಕೆಲವರು ವಿಡಿಯೋ ಮಾಡಿದ್ದಾರೆ. ಮೃತ ಯುವಕನನ್ನು ಮಂಜುನಾಥ್ (25) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮಂಜುನಾಥ್ ನೇಣಿಗೆ ಶರಣಾಗಿದ್ದಾರೆ. ಆದರೆ ಅವನು ತಡೆಯುವ ಪ್ರಯತ್ನ ಮಾಡದೇ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಈಗ ರಾಮದುರ್ಗಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಪಟ್ಟಣದ ಹೊರವಲಯದ ತೇರ ಬಜಾರ್ ನ ನಾಲ್ಕಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ನದಿ ತೀರದ ಜನತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು, ಜನ ಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತವರು ಮನೆಗೆ ಹೋಗಿದ್ದ ಹೆಂಡತಿ ವಾಪಸ್ ಬರಲ್ಲ ಎಂದು ಹೇಳಿದ್ದಕ್ಕೆ ಹೆಂಡತಿ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಸೆಪ್ಟೆಂಬರ್ 11 ರಂದು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಕರೆಯಲು ಹೋಗಿದ್ದ ವೇಳೆ ಗಂಡನೇ ಮೇಲೆ ಫೈರಿಂಗ್ ಮಾಡಿದ್ದಾನೆ. ಗುಂಡು ಹಾರಿಸಿದ ಶಿವಾನಂದನನ್ನು ಪೊಲೀಸರು ಬಂಧಿಸಿದ್ದಾರೆ. 4 ವರ್ಷದ ಹಿಂದೆ ಶಿವಾನಂದ, ಪ್ರೀತಿ ಮದುವೆಯಾಗಿತ್ತು. ಆದರೆ ಗಂಡ ಶಿವಾನಂದನ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪ್ರೀತಿ ತವರು ಮನೆ ಸೇರಿದ್ರು. ಸೆಪ್ಟೆಂಬರ್ 11 ರ ರಾತ್ರಿ ಪ್ರೀತಿ ಅವರ ತವರು ಮನೆಗೆ ಬಂದ ಶಿವಾನಂದ ತನ್ನ ಜೊತೆಗೆ ಬರುವಂತೆ ಪಟ್ಟು ಹಿಡಿದಿದ್ದಾನೆ. ಆದರೆ ಪತ್ನಿ ಪ್ರೀತಿ ನಿನ್ನೆ ಜೊತೆಗೆ ಬರಲ್ಲ ಎಂದು ಹೇಳಿದಾಗ ಪಿಸ್ತೂಲ್ ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಹೆಂಡತಿ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಇತ್ತೀಚೆಗೆ ದೆಹಲಿ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಪಿಟ್ಬುಲ್ ನಾಯಿ ದಾಳಿ ಘಟನೆಗಳು ನಡೆದಿವೆ. ಬಹಳ ಕಟ್ಟುಮಸ್ತಾದ, ಭಯಂಕರವೆನಿಸುವ ಈ ನಾಯಿಗಳನ್ನು ಕಂಡರೆ ಜನರು ಹೆದರಿ ಮಾರು ದೂರ ಹೋಗುವಂತಾಗಿದೆ. ಘಾಜಿಯಾಬಾದ್ನಲ್ಲಿ ಇತ್ತೀಚೆಗೆ ಪಾರ್ಕ್ನಲ್ಲಿ ವಾಕ್ ಮಾಡುತ್ತಿದ್ದ 10 ವರ್ಷದ ಬಾಲಕನನ್ನು ಪಿಟ್ಬುಲ್ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ. ನವದೆಹಲಿ ಪಕ್ಕದಲ್ಲೇ ಇರುವ ಇದೇ ಘಾಜಿಯಾಬಾದ್ನಲ್ಲಿ 6 ವರ್ಷದ ಬಾಲಕನೊಬ್ಬನನ್ನು ಮತ್ತೊಂದು ಪಿಟ್ಬುಲ್ ನಾಯಿ ದಾಳಿ ಮಾಡಿ ಗಾಯಗಳಿಸಿತ್ತು. ಗುರುಗ್ರಾಮದಲ್ಲಿ ಒಬ್ಬ ಮಹಿಳೆ, ಲಕ್ನೋದಲ್ಲಿ ವೃದ್ಧೆಯೊಬ್ಬರ ಮೇಲೆ ಪಿಟ್ಬುಲ್ ದಾಳಿ ಮಾಡಿ ಗಾಯ ಮಾಡಿದೆ. ಬೆಂಗಳೂರಿನಲ್ಲೂ ಪಿಟ್ಬುಲ್ ಡಾಗ್ ದಾಳಿ ಘಟನೆಗಳು ಹಲವು ಜರುಗಿವೆ. ಕಳೆದ ವರ್ಷ ಯಲಹಂಕದ ಅಟ್ಟುರು ಲೇಔಟ್ ಬಳಿಕ ಕಟ್ಟಡ ಕೆಲಸದಲ್ಲಿದ್ದ ಕಾರ್ಮಿಕನನ್ನು ಪಿಟ್ಬುಲ್ ಕೊಂದುಹಾಕಿತ್ತು. ಮಧ್ಯಾಹ್ನ ಕಟ್ಟಡ ಕೆಲಸ ಮುಗಿಸಿ ಪಕ್ಕದ ಮನೆಯ ಸ್ಟೇರ್ಕೇಸ್ ಬಳಿ ವಿಶ್ರಾಂತಿ ಮಾಡುತ್ತಿದ್ದವನ ಮೇಲೆ ಪಿಟ್ ಬುಲ್ ದಾಳಿ ಮಾಡಿ, ಕುತ್ತಿಗೆಯನ್ನು ಕಚ್ಚಿ ಸಾಯಿಸಿತ್ತು. ಐದು ವರ್ಷಗಳ ಹಿಂದೆ ಚಿಕ್ಕಮಗಳೂರಿನಲ್ಲಿ ಇನ್ನೂ…
ಬೈಕ್ ಮೇಲೆ ಮರ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ರಾಯಣ್ಣ ಸರ್ಕಲ್ ಸರ್ಕಲ್ ಬಳಿ ನಡೆದಿದೆ. ರಾಯಣ್ಣ ಸರ್ಕಲ್ ನಿಂದ ಇಬ್ಬರು ಯುವಕರು ಚನ್ನಮ್ಮ ಸರ್ಕಲ್ ಕಡೆಗೆ ಬೈಕ್ ಮೇಲೆ ಹೊರಟಿದ್ದರು. ಈ ವೇಳೆ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಗೋಕಾಕ್ ತಾಲ್ಲೂಕಿನ ಸುಲದಾಳ ಗ್ರಾಮದ ರಾಕೇಶ್ ಸುಲದಾಳ (25 ವರ್ಷ) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು,ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದ ಶ್ರೀ ಮಸಣಾಯಿ ಮಂದಿರದ ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 3 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಚೆಕ್ ನ್ನು ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸರಿತಾ ನಾಯಕ, ಸಂಗೀತಾ ಅಂಬೇಕರ್, ಸುಚಿತ್ ಸಾಂಬ್ರೇಕರ್, ಪುಂಡಲೀಕ ಬಾಂದುರ್ಗೆ, ಯಲ್ಲಪ್ಪ ಲೋಹಾರ, ದತ್ತು ಚೌಗುಲೆ, ಮಲ್ಲಪ್ಪ ತರಳೆ, ರಾಜು ಕೊಚೇರಿ, ವಿಕ್ರಂ ತರಳೆ, ಕುಲದೀಪ ತರಳೆ, ಮಿಲೀಂದ್ ಬಾತ್ಕಂಡೆ, ದೇವಸ್ಥಾನ ಕಮೀಟಿಯವರು ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz