Author: admin

ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ತಂದೆ ನಂತರ 44 ವರ್ಷಗಳ ನಂತರ ಸಿಜೆಎ ಹುದ್ದೆ ಅಲಂಕರಿಸಿದ ಮಗ ಎಂಬ ಗೌರವಕ್ಕೆ ಪಾತ್ರರಾದರು. ಡಿವೈ ಚಂದ್ರಚೂಡ್ ಮುಖ್ಯ ನ್ಯಾಯಮೂರ್ತಿಯಾಗಿ 2 ವರ್ಷಗಳ ಕಾಲ ಅಂದರೆ ನವೆಂಬರ್ 10, 2024ರವರೆಗೆ ಕಾರ್ಯ ನಿರ್ವಹಿಸಲಿದ್ಧಾರೆ. ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಡಿವೈ ಚಂದ್ರಚೂಡ್ ಸುಪ್ರೀಂಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಅವರ 74 ದಿನಗಳ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಜಾಗವನ್ನು ಚಂದ್ರಚೂಡ್ ಭರ್ತಿ ಮಾಡಿದರು. ವೈವೈ ಚಂದ್ರಚೂಡ್ ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ 7 ವರ್ಷಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ತಂದೆ ನಂತರ ಡಿವೈ ಚಂದ್ರಚೂಡ್ 44 ವರ್ಷಗಳ ನಂತರ ಈ ಹುದ್ದೆ ಅಲಂಕರಿಸಿದ್ದಾರೆ. ಡಿವೈ ಚಂದ್ರಚೂಡ್ ಇದಕ್ಕೂ ಮುನ್ನ ಹಲವಾರು ಮಹತ್ವದ ತೀರ್ಪುಗನ್ನು ಪ್ರಕಟಿಸಿದ ವಿವಿಧ ಪೀಠಗಳಲ್ಲಿ…

Read More

ಶಾಂತಿಗೆ ಭಂಗ ಉಂಟು ಮಾಡುತ್ತಿರುವ ಆರ್.ಎನ್. ರವಿ ರಾಜ್ಯಪಾಲ ಹುದ್ದೆಗೆ ಅಯೋಗ್ಯರಾಗಿದ್ದು, ಕೂಡಲೇ ಅವರನ್ನು ಸೇವೆಯಿಂದ ಹಿಂಪಡೆಯಬೇಕು ಎಂದು ತಮಿಳುನಾಡಿನ ಡಿಎಂಕೆ ಪಕ್ಷ ರಾಷ್ಟ್ರಪತಿಗೆ ದೂರು ಸಲ್ಲಿಸಿದೆ. ಸಾರ್ವಜನಿಕ ಸೇವೆ ಮಾಡುವುದಕ್ಕಾಗಿ ಪ್ರಮಾಣ ವಚನ ಸ್ವೀಕರಿಸಿರುವ ಆರ್.ಎನ್. ರವಿ ಅದಕ್ಕೆ ತದ್ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಪ್ರಮಾಣ ವಚನ ಉಲ್ಲಂಘಿಸುತ್ತಿದ್ದಾರೆ ಎಂದು ಡಿಎಂಕೆ ಪತ್ರದಲ್ಲಿ ಆರೋಪಿಸಿದೆ. ರಾಜ್ಯ ಸರಕಾರ ಅನುಮೋದಿಸಿದ ಕಾಯ್ದೆಗಳಿಗೆ ಅನುಮೋದನೆ ನೀಡದೇ ವಿಳಂಬ ಮಾಡುತ್ತಿದ್ದಾರೆ ಎಂದು ಡಿಎಂಕೆ ಸಂಸದರು ರಾಷ್ಟ್ರಪತಿಗೆ ದೂರು ಸಲ್ಲಿಸಿದ್ದಾರೆ. ಆದರೆ ಈ ಬಗ್ಗೆ ರಾಜ್ಯಪಾಲ ರವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ಮತ್ತೊಂದು ಸೌಹಾರ್ದ ಬ್ಯಾಂಕ್ ನ ಕರ್ಮಕಾಂಡ ಬಯಲಾಗಿದೆ. ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಐವರನ್ನು ಕೆಂಪೇಗೌಡನಗರ ಪೊಲೀಸರು ಬಂಧಿಸಿದ್ದಾರೆ. ಠೇವಣಿದಾರರ ಹಣವನ್ನ ದುರ್ಬಳಕೆ‌ ಮಾಡಿಕೊಂಡು ಕುರುಹಿನ ಶೆಟ್ಟಿ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಸಾಲ ನೀಡಿ ಆರ್ಥಿಕ ದಿವಾಳಿಗೆ ನೂಕಿ ಅಕ್ರಮವೆಸಗಿದ್ದ ಆರೋಪದಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಐವರನ್ನು ಕೆಂಪೇಗೌಡನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಮಾಜಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಈಶ್ವರಪ್ಪ, ಸಾಲಗಾರರಾದ ದಯಾನಂದ್, ಚಂದ್ರಶೇಖರ್ ಹಾಗೂ ಸುರಬಿ ಚಿಟ್ಸ್ ಮಾಲೀಕ ಬಿ.ಟಿ.ಮೋಹನ್ ಎಂಬುವರನ್ನು ಬಂಧಿಸಲಾಗಿದೆ‌. ಕೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕುರುಹಿನ ಶೆಟ್ಟಿ ಬ್ಯಾಂಕ್ ನಲ್ಲಿ 2011 ರಿಂದ 22ರವರೆಗೆ ಶ್ರೀನಿವಾಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದರು‌‌. ನೂರಾರು ಗ್ರಾಹಕರು ಠೇವಣಿ ರೂಪದಲ್ಲಿ ಬಂದಿದ್ದ ಕೋಟ್ಯಾಂತರ ರೂಪಾಯಿ ಹಣವನ್ನ ಸಾಲ ಮಂಜೂರಾತಿ ಸಮಿತಿ ಅಧಿಕಾರಿಗಳ ಮುಖಾಂತರ ದಾಖಲಾತಿ ಪರಿಶೀಲಿಸದೆ ಸಾಲ ಮಂಜೂರು ಮಾಡಿಸಿದ್ದರು. ನೋಟು ಅಮಾನ್ಯನೀಕರಣ ಹಾಗೂ ಕೊರೊನಾ ನೆಪ ಹೇಳಿ…

Read More

ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಪಾಪಿ ತಂದೆ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಹೃದಯವಿದ್ರಾವಕ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ಆರೋಪಿಯನ್ನು ಕುಡತಿನಿ ಪಟ್ಟಣದ ನಿವಾಸಿ 31 ವರ್ಷದ ಓಂಕಾರ್ ಗೌಡ ಎಂದು ಗುರುತಿಸಲಾಗಿದೆ. ಪದೇಪದೇ ಬುದ್ದಿ ಹೇಳಿದರೂ ಮಗಳು ಕೇಳದೇ ಅನ್ಯ ಕೋಮಿನ ಯುವಕನ ಜೊತೆ ಮಾತನಾಡುತ್ತಿದ್ದರಿಂದ ಸಿಟ್ಟಿಗೆದ್ದ ಆರೋಪಿ ಮಗಳನ್ನು ಚಾನೆಲ್ ಗೆ ತಳ್ಳಿ ಕೊಲೆ ಮಾಡಿದ್ದಾನೆ. ಅಕ್ಟೋಬರ್ 31ರಂದು ಸಿನಿಮಾಗೆ ಕರೆದುಕೊಂಡು ಹೋಗುತ್ತೇನೆ ಎಂದು ಓಂಕಾರ್ ಮಗಳಿಗೆ ಹೇಳಿದ್ದಾನೆ. ಅದರಂತೆ ಇಬ್ಬರು ಮನೆಯಿಂದ ಸಿನಿಮಾಗೆ ಹೋದಾಗ ತಡವಾಗಿದೆ. ಹಾಗಾಗಿ ಸಿನಿಮಾ ನೋಡದೇ ದೇವಸ್ಥಾನಕ್ಕೆ ಹೋಗಿದ್ದಾರೆ. ದೇವಸ್ಥಾನಕ್ಕೆ ಹೋದ ನಂತರ ಜ್ಯುವೆಲರಿ ಅಂಗಡಿಗೆ ಹೋಗಿ ಅಲ್ಲಿ ಮಗಳಿಗೆ ಓಂಕಾರ್ ಒಡವೆ ಕೊಡಿಸಿದ್ದಾನೆ. ನಂತರ ಎತ್ತರವಾದ ಪ್ರದೇಶಕ್ಕೆ ಕರೆದೊಯ್ದು ಅಲ್ಲಿಂದ ಕೆಳಗೆ ಹರಿಯುತ್ತಿದ್ದ ಚಾನೆಲ್ ಗೆ ಮಗಳನ್ನು ತಂದೆ ತಳ‍್ಳಿದ್ದಾನೆ.ಮಗಳು ರಕ್ಷಣೆಗಾಗಿ ಬೇಡಿಕೊಂಡರೂ ಕರಗದ ಅಪ್ಪ ಆಕೆ ಸಾಯುವುದನ್ನು ದೃಢಪಡಿಸಿಕೊಂಡಿದ್ದಾನೆ. ಮಗಳನ್ನು ಕೊಂದ ನಂತರ ಓಂಕಾರ್ ತಿರುಪತಿಗೆ ಓಡಿ ಹೋಗಿದ್ದಾನೆ.…

Read More

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಬಂದಿದ್ದು, ಕಂದಾಯ ಇಲಾಖೆ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿದ ಅವರು, ಮುರುಘಾ ಮಠದಲ್ಲಿ ಈ ಹಿಂದೆ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದ್ದು, ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುರುಘಾ ಶ್ರೀಗಳ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ವ್ಯಾಖ್ಯಾನ ಮಾಡುವುದಿಲ್ಲ. ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಶಾಸಕ ಸತೀಶ್ ಜಾರಕಿಹೊಳಿಯವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಶತಮಾನಗಳಿಂದ ಯಾವುದೇ ಧರ್ಮ ನಡೆಯುವುದು ನಂಬಿಕೆ, ವಿಶ್ವಾಸದ ಮೇಲೆ ಸ್ಥಾಪಿತವಾಗಿರುವ ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಮಾಡಿದ್ದಾರೆ. ಅದರ ಮೇಲೆ ಚರ್ಚೆ ಮಾಡುವುದೇನಿದೆ. ತಾಂತ್ರಿಕವಾಗಿ ಅವರ ಶಾಲಾ,…

Read More

ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ರಾಜ್ಯದೆಲ್ಲೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಬೆಂಗಳೂರು, ಮೈಸೂರು, ಉಡುಪಿ ಸೇರಿದಂತೆ ರಾಜ್ಯಾದ್ಯಂತೆ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಭುಗಿಲೆದಿದ್ದು ತಮ್ಮ ಹೇಳಿಕೆಯನ್ನ ಹಿಂಪಡೆದು ಕ್ಷಮೆಯಾಚಿಸುವಂತೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಸತೀಶ್ ಜಾರಕಿಹೊಳಿ ಪ್ರತಿಕೃತಿ ದಹಿಸಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಸಾಹಿತ್ಯಭವನದ ಮುಂದೆ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ಹಾಗೆಯೇ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ, ಉಡುಪಿ ಕಾರವಾರದಲ್ಲೂ ಸತೀಶ್ ಜಾರಕಿಹೊಳಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಪ್ರತಿಭಟನೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಂದಿನಿ ಬ್ರಾಂಡ್​ನ  ಹಲವು ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ನಂದಿನಿ ತುಪ್ಪದ ದರವನ್ನು ಹೆಚ್ಚಿಸಿದೆ. ಎರಡೂವರೆ ತಿಂಗಳಲ್ಲಿ ಒಂದು ಲೀಟರ್ ತುಪ್ಪದ ಬೆಲೆ ಬರೋಬ್ಬರಿ 180 ರೂ. ಹೆಚ್ಚಳವಾಗಿದ್ದು, ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ನಂದಿನಿ ತುಪ್ಪ ಈಗ ಬಿಸಿ ತುಪ್ಪವಾಗಿ ಪರಿಣಮಿಸಿದೆ. 2022ರ ಆಗಸ್ಟ್ 22 ರಂದು 450 ರೂ.ಗೆ ಮಾರಾಟವಾಗಿದ್ದ ಒಂದು ಲೀಟರ್ ನಂದಿನಿ ತುಪ್ಪ ಈಗ ಲೀಟರ್‌ಗೆ 630 ರೂ.ಗೆ ಮಾರಾಟವಾಗುತ್ತಿದೆ. ಹಬ್ಬದ ಋತು ಆರಂಭವಾಗುವ ಪೂರ್ವದಲ್ಲಿ ಒಂದು ಲೀಟರ್‌ ತುಪ್ಪ 450 ರೂ.ಗೆ ಮಾರಾಟ ಮಾಡಲಾಗಿತ್ತು. ಹಬ್ಬದ ಋತುವಿನಲ್ಲಿ ಕೆಎಂಎಫ್‌ ನಿಯಮಿತವಾಗಿ ತುಪ್ಪದ ಬೆಲೆ ಏರಿಕೆಯನ್ನು ಪ್ರಾರಂಭಿಸಿತು. ನಂದಿನಿ ತುಪ್ಪ ಸೆಪ್ಟೆಂಬರ್‌ ಮೊದಲ ವಾರ ಲೀಟರ್‌ಗೆ 470 ರೂ.ಗೆ ಮಾರಾಟವಾಗುತ್ತಿತ್ತು. ಅಕ್ಟೋಬರ್‌ನಲ್ಲಿ ಒಂದು ಲೀಟರ್‌ ತುಪ್ಪವನ್ನು 518 ರೂ.ಗೆ ಮಾರಾಟ ಮಾಡಲಾಗಿತ್ತು. ಈಗ ಕಳೆದ ಒಂದು ವಾರದಿಂದ 620 ರೂ.ನಿಂದ 630 ರೂ.ಗೆ ಮಾರಾಟವಾಗುತ್ತಿದೆ ಎಂದು ಕೆಎಂಎಫ್ ರೀಟೇಲ್ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ. ಒಂದು…

Read More

ಕರ್ನಾಟಕ ರಾಜ್ಯ ಸರಕಾರ ನಡೆಸಿದ ರಾಜ್ಯ ಶಿಕ್ಷಕರ ನೇಮಕಾತಿ ಪರೀಕ್ಷೆ ಹಾಲ್ ಟಿಕೆಟ್ ನಲ್ಲಿ ಮಾಜಿ ನೀಲಿಚಿತ್ರ ತಾರೆ ಸನ್ನಿ ಲಿಯೊನ್ ಅವರ ಅರೆಬೆತ್ತಲೆ ಭಾವಚಿತ್ರ ಪ್ರಕಟವಾಗಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು ಹೋದ ಮಹಿಳೆ ತಮಗೆ ನೀಡಿದ ಹಾಲ್ ಟಿಕೆಟ್ ನೋಡಿ ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಅಲ್ಲಿ ತಮ್ಮ ಫೋಟೊ ಬದಲು ಸನ್ನಿ ಲಿಯೋನ್ ಅವರ ಅರೆಬೆತ್ತಲೆ ಫೋಟೊ ಮುದ್ರಣಗೊಂಡಿತ್ತು. ಸನ್ನಿ ಲಿಯೊನ್ ಇರುವ ಹಾಲ್ ಟಿಕೆಟ್ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಅಲ್ಲದೇ ಘಟನೆ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ. ಕರ್ನಾಟಕ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಬಿಆರ್ ನಾಯ್ಡು ಮಂಗಳವಾರ ಈ ಗಂಭೀರ ಆರೋಪ ಮಾಡಿದ್ದು, ಶಿಕ್ಷಕರ ಪರೀಕ್ಷೆಗೆ ನೀಡಲಾದ ಅಭ್ಯರ್ಥಿಯ ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೊನ್ ಫೋಟೊ ಪ್ರಕಟವಾಗಿದೆ. ಇದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿ ಕಾರಣ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ದೇಶದಲ್ಲಿ ಆರ್ಥಿಕ ಬದಲಾವಣೆ ತಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶ ಋಣಿ ಆಗಿರಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಟಿಐಒಎಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ನೀತಿಗಳನ್ನು ರೂಪಿಸುವ ಮೂಲಕ ಮನಮೋಹನ್ ಸಿಂಗ್ ಬಡವರಿಗೂ ಸರಕಾರದ ಯೋಜನೆಗಳು ತಲುಪುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 1991ರಲ್ಲಿ ಮನಮೋಹನ್ ಸಿಂಗ್ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಆರ್ಥಿಕ ಪುನಶ್ಚೇತನ ನೀತಿ ಜಾರಿಗೆ ಬಂದಿತು. ಈ ಮೂಲಕ ದೇಶದಲ್ಲಿ ಆರ್ಥಿಕ ಉದಾರೀಕರಣದ ಹೊಸ ಅಧ್ಯಾಯ ಆರಂಭವಾಯಿತು ಎಂದು ಅವರು ಹೇಳಿದರು. ಮನಮೋಹನ್ ಸಿಂಗ್ ಹೊಸ ಆರ್ಥಿಕ ಉದಾರೀಕರಣ ಜಾರಿಗೆ ತಂದಿದ್ದರಿಂದ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದಾಗ ರಸ್ತೆಗಳನ್ನು ರೂಪಿಸಲು ಸಾಧ್ಯವಾಯಿತು. ಅಲ್ಲದೇ ಆರ್ಥಿಕ ಉದಾರೀಕರಣದಿಂದ ಹೆಚ್ಚು ಪ್ರಯೋಜನವಾಗಿದ್ದು ಬಡವರಿಗೆ ಮತ್ತು ರೈತರಿಗೆ ಎಂದು ಗಡ್ಕರಿ ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ರಾಜಧಾನಿ ದೆಹಲಿಯಲ್ಲಿ ಮಂಗಳವಾರ ತಡರಾತ್ರಿ 2 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ.ದೆಹಲಿಯಲ್ಲಿ ಭೂಮಿ ನಡುಗಿದರೆ ನೆರೆಯ ನೇಪಾಳ ದೇಶದಲ್ಲಿ ಭೂಕಂಪನ ಕೇಂದ್ರ ಬಿಂದು ಕಂಡು ಬಂದಿದ್ದು, ರಿಕ್ಡರ್ ಮಾಪಕದಲ್ಲಿ 6.3ರಷ್ಡು ತೀವ್ರತೆ ದಾಖಲಾಗಿದೆ. ದೆಹಲಿಯಲ್ಲಿ ನಡುರಾತ್ರಿ ಭೂಕಂಪನ ಸಂಭವಿಸಿದ್ದರಿಂದ ಮನೆಯಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ಇನ್ನೂ ಕೆಲವರು ನಿದ್ದೆಯಲ್ಲಿ ಇದ್ದಿದ್ದರಿಂದ ಅರಿವಿಗೆ ಬಂದಿಲ್ಲ. ದೆಹಲಿ, ನೋಯ್ಡಾ ಹಾಗೂ ಗುರ್ ಗಾಂವ್ ನಲ್ಲಿ ಸುಮಾರು 10 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ನೇಪಾಳದ ಸೈಸಿಮೊಗ್ಲಿ ಎಂಬ ಪಟ್ಟಣದಲ್ಲಿ 10 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದ್ದು, ಯಾವುದೇ ಸಾವು ನೋವು ವರದಿಯಾಗಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More