Author: admin

ಬೆಂಗಳೂರು: ಬಿಬಿಎಂಪಿಯ ಜಂಟಿ ಆಯುಕ್ತರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಬಿಎಂಪಿಯ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿರೋದಾಗಿ ತಿಳಿದು ಬಂದಿದೆ. ಹೈಕೋರ್ಟ್ ಎಸಿಬಿ ರದ್ದುಗೊಳಿಸಿದ ಬಳಿಕ ಲೋಕಾಯುಕ್ತಕ್ಕೆ ಅಧಿಕಾರ ನೀಡಲಾಗಿತ್ತು. ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಎಸಿಬಿ ರದ್ದುಗೊಳಿಸಿ, ಈ ಬೆನ್ನಲ್ಲೇ ಲೋಕಾಯುಕ್ತ ಕಾರ್ಯಾಚರಣೆ ಚುರುಕುಗೊಂಡಿದೆ. ಬೆಂಗಳೂರಿನ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ದಾಳಿ ನಡೆಸಿತ್ತು. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 8 ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನು ನಡೆಸಲಾಗಿತ್ತು. ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ವಿರುದ್ಧ ಖಾತೆ ಬದಲಾವಣೆ ಸಂಬಂಧ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿಯೇ ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಳಗಾವಿ : ಕೀಣೆ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯೂ ರಾಜಕೀಯ ರೋಚಕ ತಿರುವು ಪಡೆಯಿತು. 22 ಸದಸ್ಯರುಗಳ ಕೀಣೆ ಗ್ರಾಮ ಪಂಚಾಯತಿ ವರ್ಷದ ಅವಧಿಯ ಮುಂಚೆ ಮತ್ತೆ ಅಧ್ಯಕ್ಷರು ಬದಲಾವಣೆ ಹಾಗೂ ಸ್ಥಳೀಯ ರಾಜಕೀಯ ಹೊಂದಾಣಿಕೆಯಿಂದಾಗಿ ಈ ಬದಲಾವಣೆ ಕಂಡುಬಂತು. ಗ್ರಾಮ ಪಂಚಾಯತ್ ಅಧ್ಯಕ್ಷ ಹಿಂದುಳಿದ ವರ್ಗ ಮೀಸಲಾತಿಯನ್ನು ಹೊಂದಿದ್ದು, ಉಪಾಧ್ಯಕ್ಷ ಸಾಮಾನ್ಯ ವರ್ಗಕ್ಕೆ ನೀಡಲಾಗಿದೆ. ಅದರಂತೆ ಅಧ್ಯಕ್ಷತೆ ಚುನಾವಣೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಅರ್ಚನಾ ಚಿಗರಿಗೆ 13 ಮತಗಳು ಪಡೆದು ಅಧ್ಯಕ್ಷೆಯಾಗಿ ವಿಜಯಶಾಲಿಯಾದ್ದರು. ಉಪಾಧ್ಯಕ್ಷನ್ನಾಗಿ ಬ್ರಹ್ಮಣ್ಣ ಪಾಟೀಲ್ ಅವರಿಗೆ 14 ಮತಗಳನ್ನು ಪಡೆದು ವಿಜಯಶಾಲಿಯಾದ್ದರು. ಈ ಮೂಲಕ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಿತು. ಅಧ್ಯಕ್ಷರು ವಿರುದ್ಧವಾಗಿ ಒಂಬತ್ತು ಮತಗಳು ಬಿದ್ದರೆ ಉಪಾಧ್ಯಕ್ಷರ ವಿರುದ್ಧವಾಗಿ ಎಂಟು ಮತಗಳು ಬಿದ್ದವು. ನೋಡಲ್ ಅಧಿಕಾರಿಯಾಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಸುಭಾಷ್ ನಾಯಕ್ ಅಧಿಕಾರಿಯಾಗಿ ಚುನಾವಣೆ ನಡೆಸಿಕೊಟ್ಟರು. ಒಟ್ಟಾರೆ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕ್ಷೇತ್ರದಲ್ಲಿ ಪಕ್ಷ…

Read More

ಹಾವೇರಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದಿದೆ. ಹೀಗಾಗಿ ಸೆಪ್ಟೆಂಬರ್ 19 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿಯಲ್ಲಿರುವ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನೀಡಿದ್ದ ಗಡುವು ಮುಗಿದಿದ್ದು,ಶಿಗ್ಗಾವಿ, ಸವಣೂರು ತಾಲೂಕಿನ ಪ್ರತಿ ಗ್ರಾಮಗಳಿಗೆ ಸಂಚರಿಸಿ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ. ಸಮಾಜದ ಬಡ ಮಕ್ಕಳ ಭವಿಷ್ಯದ ಕಲ್ಯಾಣಕ್ಕೆ ಹೋರಾಡುವುದು ಅನಿವಾರ್ಯವಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮನೆಯ ಮಹಡಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಅರಂತೋಡಿನ ಹೊನ್ನಪ್ಪ ಮಡಿವಾಳ ರವರ ಮಗ ಕೇಶವ (32). ಇವರು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು.ಅವರು ಕೊರೊನಾ ಬಳಿಕ ಬೆಂಗಳೂರಿನಿಂದ ಊರಿಗೆ ಹಿಂತಿರುಗಿದ್ದರು. ಸದ್ಯ ಅವರು ವರ್ಕ್ ಪ್ರಮ್ ಹೋಮ್ ಮಾದರಿಯಲ್ಲಿ ಮನೆಯಲ್ಲಿದೆ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮನೆಯವರೆಲ್ಲ ಹೊರ ಹೋಗಿದ್ದ ವೇಳೆ ಕೇಶವರವರು ಮನೆಯ ಮಹಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಮನೆಯವರು ದೇವಸ್ಥಾನಕ್ಕೆ ಹೋಗಿದ್ದರು ಎನ್ನಲಾಗಿದೆ.ಮನೆಯವರು ದೇವಸ್ಥಾನದಿಂದ ವಾಪಸ್ಸು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯೂ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳದಲ್ಲಿ ಡೆತ್ ನೋಟ್ ಲಭಿಸಿದ್ದು, ಅದನ್ನು ಹಾಗೂ ಅವರು ಬಳಸುತ್ತಿದ್ದ ಲ್ಯಾಪ್ ಟಾಪ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರು ಅವಿವಾಹಿತರಾಗಿದ್ದು, ತಂದೆ,ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.…

Read More

ವಾರಣಾಸಿ: ಜ್ಞಾನ್ವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ. ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆಗೆ ಕಾರಣವಾದ ಮಹಿಳೆಯರ ಪ್ರಕರಣವು ವಿಚಾರಣೆ ಮುಂದುವರಿಯುತ್ತದೆಯೇ ಅಥವಾ ಅದು ಯಾವುದೇ ಕಾನೂನು ಸ್ಥಾನಮಾನವನ್ನು ಹೊಂದುವುದಿಲ್ಲವೇ ಎಂಬ ಬಗ್ಗೆ ದೇಶದಲ್ಲಿ ಕೂತುಹಲಕ್ಕೆ ಕಾರಣವಾಗಿತ್ತು. ಈ ನಡುವೆ ಜ್ಞಾನ್ವಾಪಿ ಮಸೀದಿಗೆ ಸಂಬಂಧಿಸಿದಂತೆ ಲಕ್ನೋದಲ್ಲಿ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರು ಲಕ್ನೋ ಚೌಕ್ ಛೇದಕದಿಂದ ನಖಾಸ್ ಗೆ ಮೆರವಣಿಗೆ ನಡೆಸಿದರು. ಭದ್ರತೆಯ ದೃಷ್ಟಿಯಿಂದ, ಆಯುಕ್ತರು ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಅಕ್ಟೋಬರ್ 16 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಭಾರತ ಜೋಡೋ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ನಡೆಸುವುದಕ್ಕೆ ರಾಯಚೂರಿಗೆ ಆಗಮಿಸಿ ಮಾತನಾಡಿದ ಅವರು, ನಾನು ಅಧ್ಯಕ್ಷನಾಗಿ ಎರಡು‌ ವರ್ಷಗಳು ಪೂರ್ಣವಾಗುತ್ತಿದೆ. ಎಐಸಿಸಿ ಈಗಾಗಲೇ ಪ್ರಕಟಿಸಿದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ‌ಭವನದಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು. ಇನ್ನು ಕಾಂಗ್ರೆಸ್ ಹಗರಣಗಳನ್ನು ಬಯಲಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಚೆಗೆ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ನನ್ನ ಮೇಲೆ ಹಾಗೂ ಸಿದ್ದರಾಮಯ್ಯ ಅವರ ಮೇಲೆ ಪ್ರೀತಿ ಜಾಸ್ತಿ ಅದಕ್ಕೆ ನಮ್ಮ ಬಗ್ಗೆ ಹಗರಣದ ಆರೋಪ ಮಾಡುತ್ತಾರೆ ಎಂದು ಹೇಳಿದರು. ಬಿಜೆಪಿಯವರ ಬೆದರಿಕೆಗೆ ನಾವು ಹೆದರುವುದಿಲ್ಲ. ದಿಟ್ಟತನದಿಂದ ಉತ್ತರಿಸುತ್ತೇವೆ. ಆದರೆ ಸಾಮಾಜಿಕ ಮಾಧ್ಯಮಗಳ ಬಿಜೆಪಿಯವರಿಗೆ ಪ್ರತಿದಿನ ಒಂದು ಪ್ರಶ್ನೆ ಕೇಳುತ್ತಿದ್ದೇವೆ ಆದರೆ ಏಕೆ ಉತ್ತರಿಸುತ್ತಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಂಗಳೂರು, ಸೆಪ್ಟೆಂಬರ್ 12: ರಾಜ್ಯದಲ್ಲಿ ಬಿಸಿಯೂಟ ತಯಾರಿಸುವ ನೌಕರರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ತಮ್ಮ ಕುಟುಂಬ ನಿರ್ವಹಣೆಗೂ ಪರದಾಡಬೇಕಾದ ಸ್ಥಿತಿಯಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ. ಎಂದಿನಂತೆ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಈ ಶೈಕ್ಷಣಿಕ ವರ್ಷದಲ್ಲಿ ಹೆಚ್ಚೆಚ್ಚು ಮಕ್ಕಳನ್ನು ಮರಳಿ ಶಾಲೆಗೆ ಕರೆತರುತ್ತಿದೆ. ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ನೀಡುವ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ. ಆದರೆ, ರಾಜ್ಯಾದ್ಯಂತ ಈ ಊಟವನ್ನು ತಯಾರಿಸಲು ಮತ್ತು ಬಡಿಸಲು ನೇಮಕಗೊಂಡ ಅಡುಗೆಯವರು ಮತ್ತು ಕಾರ್ಮಿಕರಿಗೆ ಈ ವರ್ಷದ ಏಪ್ರಿಲ್‌ನಿಂದ ಗೌರವಧನ ಸಿಕ್ಕಿಲ್ಲ. ಹಲವಾರು ಶಾಲೆಗಳಿಗೆ ತರಕಾರಿಗಳನ್ನು ಖರೀದಿಸಲು ಹಣಕಾಸು ಒದಗಿಸಿಲ್ಲ. ಕೇಂದ್ರ ಸರ್ಕಾರದ ಸೂಚನೆಗಳ ಪ್ರಕಾರ ನೇರವಾಗಿ ಫಲಾನುಭವಿಗಳಿಗೆ ವೇತನವನ್ನು ವಿತರಿಸಲು ರಾಜ್ಯ ಸರ್ಕಾರವು ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆಗೆ ಬದಲಾಯಿಸುತ್ತಿದೆ. ಆದಾಗ್ಯೂ, ಅಕಾಲಿಕ ಶಿಫ್ಟ್ ಮತ್ತು ಸ್ಥಳದಲ್ಲಿ ಬ್ಯಾಕಪ್ ಕಾರ್ಯವಿಧಾನವಿಲ್ಲದೆ, ಬಿಸಿಯೂಟ ತಯಾರಿಸುವ ಕಾರ್ಮಿಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ”ಬಿಸಿಯೂಟ ನೌಕರರು ತಿಂಗಳಿಗೆ 2,000 ರೂ.ನಿಂದ 3,500 ರೂ.ವರೆಗಿನ ಸಂಬಳದೊಂದಿಗೆ ಕೆಲಸ ಮಾಡುತ್ತಿದ್ದಾರೆ. ಆದರೆ ಈಗಾಗಲೇ…

Read More

ಲೋಕಾಯುಕ್ತಕ್ಕೆ ಮಾತ್ರ ಈಗ ಭಷ್ಟಾಚಾರ ಪ್ರಕರಗಣ ವಿಚಾರಣೆ ಮಾಡುವ ಅಧಿಕಾರ ಇದ್ದು, ಲೋಕಾಯುಕ್ತ ಇಲಾಖೆಗೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಧಾರವಾಡದಲ್ಲಿ ನಿ‌ವೃತ್ತ ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ ಹೇಳಿದರು. ನಗರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲೋಕಾಯುಕ್ತ ಪುನಃ ಅಧಿಕಾರ ಬಂದಿದ್ದು, ಒಳ್ಳೆಯ ನಿರ್ಧಾರ ಆಗಿದೆ. ಲೋಕಾಯುಕ್ತಕ್ಕೆ ಸರ್ಕಾರ ಸೂಕ್ತ ಸಿಬ್ಬಂದಿ ನಿಯೋಜಿಸಬೇಕು. ಸೂಕ್ತ ಸಿಬ್ಬಂದಿ ಕೊಟ್ಟರೆ ಸರ್ಕಾರಕ್ಕೆ ನಾನು ಸಲಾಂ ಹೇಳುತ್ತೇನೆ. ಈಗಾಗಲೇ ಅನೇಕ ಕೊರತೆಗಳ ನಡುವೆಯೂ ಲೋಕಾಯುಕ್ತ ಕೆಲಸ ಮಾಡುತಿದೆ. ಅದ್ದರಿಂದ ಲೋಕಾಯುಕ್ತಕ್ಕೆ ಸರ್ಕಾರ ಬೇಕಾದ ಸಿಬ್ಬಂದಿಯನ್ನು ಕೊಡಬೇಕು ಎಂದರು. ಕೆಲವು ಲೋಕಾಯುಕ್ತ ಕಾಯ್ದೆಗಳಿಗೆ ತಿದ್ದುಪಡಿ ಆಗಬೇಕು. ಈ ಹಿಂದೆ ಇದ್ದ ಅಧಿಕಾರಗಳನ್ನು ಪುನಃ ಮರಳಿ ಅವರನ್ನು ಅಧಿಕಾರಕ್ಕೆ ತರಬೇಕು. ಆದರೆ ಯಾವುದೇ ಕಾರಣಕ್ಕೂ ನಾನು ಪುನಃ ಲೋಕಾಯುಕ್ತಕ್ಕೆ ಬರುವುದಿಲ್ಲ. ಈಗಾಗಲೇ ನಾನು ಐದು ವರ್ಷ ಕರ್ತವ್ಯ ನಿಭಾಯಿಸಿದ್ದೇನೆ. ನನಗೆ ಈಗ 83 ವರ್ಷ ವಯಸ್ಸಾಯಿತು ಎಂದರು. ನನ್ನ ಬಳಿ ಸಹಾಯಕ್ಕೆ ಬಂದರೆ ಸ್ಪಂದಿಸುವೆ; ನನಗೆ ಈಗ…

Read More

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಪೊಲೀಸರ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಆಮ್‌ ಆದ್ಮಿ ಪಕ್ಷ ಗುಜರಾತ್‌ನಲ್ಲಿ ಎಎಪಿ ಪಕ್ಷಕ್ಕೆ ಸಿಗುತ್ತಿರುವ ಜನ ಬೆಂಬಲ ಕಂಡು ಬಿಜೆಪಿ ಆತಂಕಗೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಹಮದಾಬಾದ್‌ಗೆ ಬಂದಾಗಲೇ ಈ ದಾಳಿ ನಡೆಸಲಾಗಿದೆ ಎಂದು ದೂರಿದೆ. ಪೊಲೀಸರ ದಾಳಿ ಕುರಿತು ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, “ಪಕ್ಷದ ಕಚೇರಿಯಲ್ಲಿರುವ ನಾಯಕರು, ಕಾರ್ಯಕರ್ತರು ಪ್ರಮಾಣಿಕರು. ಕಚೇರಿಯಲ್ಲಿ ಪೊಲೀಸರಿಗೆ ಏನೂ ಸಿಕ್ಕಿಲ್ಲ” ಎಂದು ಹೇಳಿದ್ದಾರೆ. ಎಎಪಿ ಕಚೇರಿ ಮೇಲೆ ದಾಳಿ ಏಕೆ ನಡೆಸಲಾಗಿದೆ?. ದಾಳಿಯ ವೇಳೆ ಸಿಕ್ಕಿರುವುದು ಏನು? ಎಂಬ ಬಗ್ಗೆ ಗುಜರಾತ್ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಈ ದಾಳಿ ಎಎಪಿ ಮತ್ತು ಬಿಜೆಪಿ ನಡುವೆ ರಾಜ್ಯದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ. “ದೆಹಲಿ ಬಳಿಕ ಗುಜರಾತ್‌ನಲ್ಲಿಯೂ ದಾಳಿಗಳು ಆರಂಭವಾಗಿವೆ. ದೆಹಲಿಯಲ್ಲಿ ಏನೂ ಸಿಗಲಿಲ್ಲ,…

Read More

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ‌ಕಾಲೇಜಿನ‌ ಅತಿಥಿ ಉಪನ್ಯಾಸಕ ಆದೇಶ್​ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ. ಬೆಳಗಾವಿ ಎಸ್​ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆಯಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More