Author: admin

ಸರಗೂರು ತಾಲ್ಲೂಕಿನ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ್ ರವರ ಭಾವಚಿತ್ರ ವನ್ನು ಇಡದೆ ಆಚರಣೆ ಮಾಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಗ ಸಂಸ್ಥೆಯಾದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ಫೋಟೋ ಬಳಸದಿರುವ ಬಗ್ಗೆ ವಿವೇಕಾನಂದ ಆಸ್ಪತ್ರೆಯ ಅಧಿಕಾರಿಗಳು ವಿಚಾರಿಸಿದಾಗ ಸ್ವಾತಂತ್ರ್ಯ ದಿನದಂದು ನಾವು ಅಂಬೇಡ್ಕರ್ ಪೋಟೋ ಇಡುವುದಿಲ್ಲ. ಜನವರಿ 26ರಂದು ಇಡುತ್ತೀವಿ ಎಂದರಲ್ಲದೇ ನಿಮ್ಮ ಹತ್ತಿರ ಸರ್ಕಾರದ ಸುತ್ತೋಲೆ ಇದ್ದರೆ ಕೊಡಿ ಎಂದು ಉಡಾಫೆಯ ವರ್ತನೆ ತೋರಿದರು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯೋತ್ಸವದಲ್ಲಿ ಅಂಬೇಡ್ಕರ್ ಭಾವ ಚಿತ್ರ ಬಳಸದೇ ನಿರ್ಲಕ್ಷ್ಯತನದಿಂದ ಮಾತನಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ. ಈ ವೇಳೆ ಎಸ್ ಎಲ್ ರಾಜಣ್ಣ ಶಿವಣ್ಣ ಕುಮಾರ್ ಗೊವಿಂದರಾಜು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಳೇ ಕಡಲೆಕಾಯಿ ಮಂಡಿ, ನೆಹರು ಕ್ರೀಡಾಂಗಣದ ಒಳಗಡೆ ಇರುವ ಸಾರ್ವಜನಿಕ ಶೌಚಾಲಯದ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯೂರು ನಗರ ಪೋಲಿಸ್ ಠಾಣೆಯ ಪಿ ಎಸ್ ಐ ಅನಸೂಯ ಹಾಗೂ ಹೊರಕೇರಪ್ಪ ಸೇರಿದಂತೆ ಸಿಬ್ಬಂದಿ ತನಿಖೆ ನಡೆಸಿ ಮೃತದೇಹವನ್ನು ಸ್ಥಳಾಂತರಿಸಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು ಎಂದು ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಮುಂದಿನ ತನಿಖೆ ಆರಂಭಿಸಿದ್ದಾರೆ. ವರದಿ: ಮುರುಳಿಧರನ್ ಆರ್ ಚಿತ್ರದುರ್ಗ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮಧುಗಿರಿ: ಪಟ್ಟಣದ 19 ವಾರ್ಡ್ ನಲ್ಲಿ ಶಾಸಕ ಎಂ.ವಿ ವೀರಭದ್ರಯ್ಯ ನವರು ಸುಮಾರು ಎಂಟು ಲಕ್ಷದ ಮೌಲ್ಯದ  ಶುದ್ಧ ನೀರಿನ ಘಟಕವನ್ನು ಉದ್ಘಾಟನೆ ಮಾಡಿದ್ದರು.  ಆದರೆ ಶುದ್ಧ ನೀರಿನ ಘಟಕ ನೋಡಿಕೊಳ್ಳುವವರು ಯಾರು ಇಲ್ಲದ,  ಕಾರಣ   ಸುತ್ತಮುತ್ತ ನಿಂತಿರುವ ಕೊಚ್ಚೆ ನೀರು ತೊಟ್ಟಿಗೆ ಬಂದು, ಅದೇ ನೀರು ಶುದ್ಧವಾಗಿ ಬರುತ್ತಿತ್ತು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿ ಕುಡಿಯುವ ನೀರಿನ ಘಟಕ ತೆರೆದಿದ್ದರೂ, ಕುಡಿಯಲು ನೀರು ಯೋಗ್ಯವಲ್ಲದ ಕಾರಣ ಸಾರ್ವಜನಿಕರು  ಯಾರು ನೀರನ್ನೂ ಕುಡಿಯುತ್ತಿರಲಿಲ್ಲ. ಇದನ್ನು ಮನಗಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಸ್ವತಃ ಸ್ಥಳಕ್ಕೆ ಹೋಗಿ ನೀರನ್ನು ಕುಡಿದು ಪರೀಕ್ಷಿಸಿದಾಗ ನೀರು ಅಶುದ್ಧಿಯಾಗಿ ಬರುತ್ತಿರುವುದು ಕಂಡುಬಂದಿತು. ಕುಡಿಯುವ ನೀರಿನ ಘಟಕದ ದುಸ್ಥಿತಿ ಕಂಡ ಕನ್ನಡ ಜಾಗೃತಿ ವೇದಿಕೆಯ ಪದಾಧಿಕಾರಿಗಳು ನಮ್ಮ ತುಮಕೂರು ನ್ಯೂಸ್ ಗೆ ಮಾಹಿತಿ ತಿಳಿಸಿದ್ದು, ಈ ವಿಚಾರದ ಬಗ್ಗೆ  ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸುದ್ದಿ ನಮ್ಮ ತುಮಕೂರು ನ್ಯೂಸ್ ಚಾನಲ್ ನಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು…

Read More

ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುವ ಫ್ಲಕ್ಸ್’ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಗರದ ಎಂಪ್ರೆಸ್ ಕಾಲೇಜು ಮುಂಭಾಗ ನಗರ ಶಾಸಕ ಜ್ಯೋತಿಗಣೇಶ್ ರವರು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ಅಳವಡಿಸಿದ್ದು, ಕಿಡಿಗೇಡಿಗಳು ಸಾವರ್ಕರ್ ರವರ ಭಾವಚಿತ್ರವಿರುವ ಫ್ಲೆಕ್ಸನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳು ಶಿವಮೊಗ್ಗದಲ್ಲಿ ನಡೆದ ಘಟನೆಯಿಂದ ಪ್ರೇರಿತಗೊಂದು ಶಾಂತಿ ಸುವ್ಯವಸ್ಥೆಯಿಂದಿರುವ ತುಮಕೂರು ನಗರದಲ್ಲಿ  ವೀರ ಸಾವರ್ಕರ್​​ ಫೋಟೋ ಹರಿದು ಹಾಕಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೂರು ದಿನಗಳ ಹಿಂದೆ ಫ್ಲೆಕ್ಸ್​ ಹಾಕಲಾಗಿದ್ದು, ಅಂದಿನಿಂದ ಎಲ್ಲ ಫ್ಲೆಕ್ಸ್’ಗಳು ಸುಸ್ಥಿತಿಯಲ್ಲಿದ್ದವು. ಆದರೆ  ಸ್ವಾತಂತ್ರ್ಯ ದಿನೋತ್ಸವದ  ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್​ ಅನ್ನು ಮಾತ್ರ ಹರಿದು ಹಾಕಿದ್ದಾರೆ. ಈ ಕುರಿತು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ನಾಗರೀಕರು ತೀವ್ರ ಬೇಸರ ವ್ಯಕ್ತಪಡಿದ್ದಾರೆ.  ತುಮಕೂರು ನಗರ ಪೊಲೀಸ್​ ಠಾಣಾ…

Read More

ತುಮಕೂರು ನಗರದ ಅಶೋಕ ರಸ್ತೆಯಲ್ಲಿನ ಎಂಪ್ರೆಸ್ ಕಾಲೇಜಿನ ಮುಂಭಾಗ ಅಳವಡಿಸಲಾಗಿದ್ದ ವೀರ ಸಾವರ್ಕರ್ ರವರ ಭಾವಚಿತ್ರವಿರುವ ಫ್ಲೆಕ್ಸ್ ಹರಿದುಹಾಕಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್.ಪಿ‌. ರಾಹುಲ್ ಕುಮಾರ್ ಶಹಪುರ್ವಾಡ ತಿಳಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಗರದ ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜ್ ಮುಂಭಾಗ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ನಲ್ಲಿ ಅಳವಡಿಸಲಾಗಿದ್ದ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದು ಇದು ಜನರನ್ನು ಪ್ರಚೋದನೆಗೊಳಿಸುವ ತಂತ್ರವಾಗಿದೆ. ಈಗಾಗಲೇ ಇದರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಲಾಗಿದೆ. ಈ ರೀತಿಯಾದೆ. ಈ ರೀತಿಯಾದ ಪ್ರಚೋದನಕಾರಿ ಕೃತ್ಯಗಳಿಂದ ಸಾರ್ವಜನಿಕರು ಪ್ರಚೋದನೆಗೊಳಗಾಗದೆ ಶಾಂತಿಯನ್ನು ಕಾಪಾಡಬೇಕು. ಒಂದು ವೇಳೆ ಪ್ರಚೋದನೆಗೊಳಗಾದರೆ ಪ್ರಚೋದಿತ ವ್ಯಕ್ತಿಗಳ ಪ್ರಯತ್ನ ಸಫಲವಾದಂತಾಗುತ್ತದೆ ಆದ್ದರಿಂದ ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿರ್ವಹಿಸುತ್ತದೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸವನ್ನು ಮಾಡುತ್ತದೆ ಎಂದು ಅವರು ತಿಳಿಸಿದರು. ಇದೇ…

Read More

ಪಾವಗಡ: ತಾಲ್ಲೂಕಿನ ಯ.ನಾ. ಹೊಸಕೋಟೆ ಹೋಬಳಿಯ ತಿಪ್ಪಯ್ಯನದುರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಕೃಷ್ಣ ನಾಯ್ಕ ಬ್ಯಾಗ್ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಕೃಷ್ಣ ನಾಯ್ಕ ಅವರು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಬಡ ವಿದ್ಯಾರ್ಥಿಗಳು ಆಗಿರುತ್ತಾರೆ ಎಂದು ತಿಳಿದು ಈ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಬಿಜೆಪಿ ಮಂಡಲ ಅಧ್ಯಕ್ಷ ರವಿಶಂಕರ್ ನಾಯ್ಕ, ಮಂಡಲ ಉಪಾಧ್ಯಕ್ಷ ನಾರಾಯಣಪ್ಪ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ್, ರೈತ ಮೋರ್ಚಾ ಅಧ್ಯಕ್ಷ ಕೋಟೆಶ್ವರ್ ರೆಡ್ಡಿ, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರವಿ ನಾಯ್ಕ ಮತ್ತು ಪ್ರಸಾದ್ ಬಾಬು, ಯುವ ಮುಖಂಡ ವಸಂತ್ ನಾಯ್ಕ, ಬಿಜೆಪಿ ಕಾರ್ಯಕರ್ತ ಹರೀಶ್ ನಾಯ್ಕ ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಖರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ದೆಹಲಿಯಲ್ಲಿರುವ ಎ.ಬಿ.ವಾಜಪೇಯಿ ಅವರ ಸದೈವ್ ಅಟಲ್ ಸ್ಮಾರಕಕ್ಕೆ ತೆರಳಿದ ರಾಷ್ಟ್ರ ನಾಯಕರು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಿ ಮೋದಿಯಲ್ಲದೆ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ ಅವರು ಕೂಡ ಬಿಜೆಪಿ ನಾಯಕರೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ದಿವಂಗತ ಮಾಜಿ ಪ್ರಧಾನಿ, ಭಾರತೀಯ ಜನತಾ ಪಕ್ಷದ ಹೆಸರಾಂತ ನಾಯಕ, ಹಿರಿಯ ಧುರೀಣರಾಗಿದ್ದ ವಾಜಪೇಯಿ ಅವರು ಅನಾರೋಗ್ಯದಿಂದ 2018ರಲ್ಲಿ ನಿಧನರಾದರು. ಮೂರು ಬಾರಿ ಭಾರತದ ಪ್ರಧಾನಿಯಾಗಿದ್ದ…

Read More

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮನೆ ಮೇಲೆ ತ್ರಿವರ್ಣ ಧ್ವಜ ಕಟ್ಟುತ್ತಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಮನಕಲುಕುವ ಘಟನೆ ಸಿಲಿಕಾನ್ ಸಿಟಿಯ ಹೆಚ್ ಬಿಆರ್ ಲೇಔಟ್ ನಲ್ಲಿ ನಡೆದಿದೆ. ವಿಶುಕುಮಾರ್ (33) ಮೃತ ದುರ್ದೈವಿಯಾಗಿದ್ದಾರೆ. ಬೆಂಗಳೂರಿನ ಹೆಚ್ ಬಿಆರ್ ಲೇಔಟ್ ನಲ್ಲಿ ದುರ್ಘಟನೆ ನಡೆದಿದ್ದು, ವಿಶುಕುಮಾರ್ ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ದಕ್ಷಿಣ ಕನ್ನಡದ ಸುಳ್ಯ ಮೂಲದವರಾದ ವಿಶುಕುಮಾರ್ ನಿನ್ನೆ ಮಧ್ಯಾಹ್ನ 1.45 ಸುಮಾರಿಗೆ ತ್ರಿವರ್ಣ ಧ್ವಜ ಕಟ್ಟಲು ಎರಡನೇ ಮಹಡಿಯಲ್ಲಿರುವ ಮನೆ ಟೇರಸ್ ಮೇಲೆ ಏರಿದ್ದಾರೆ. ಈ ವೇಳೆ ಆಯತಪ್ಪಿ 30 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ವಿಶುಕುಮಾರ್ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಕುಟುಂಬಸ್ಥರು ಸ್ಥಳೀಯರ ಸಹಾಯದಿಂದ ವಿಶುಕುಮಾರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ವಿಶುಕುಮಾರ್ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಹೆಂಡತಿ ಹಾಗೂ 2 ವರ್ಷದ ಮುದ್ದಾದ ಮಗುವಿದೆ. ಇನ್ನೂ…

Read More

ಬಾಗಲಕೋಟೆ: ಸ್ವಾತಂತ್ರ್ಯ ದಿನಾಚರಣೆಯಂದೇ ಜೈಲಿನಲ್ಲಿ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ನಗರದ ಜಿಲ್ಲಾ ಕಾರಾಗೃಹದ ಕೈದಿ ಮಂಜುನಾಥ ಕುರಿ (28) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಜೈಲಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದಲ್ಲಿ ಮಂಜುನಾಥ ಭಾಗವಹಿಸಿದ್ದರ. ಕಾರ್ಯಕ್ರಮ ಮುಗಿದ ನಂತರ ಬ್ಯಾರೆಕ್‌ ಗೆ ತೆರಳಿ, ಕಿಟಕಿಗೆ ಟವೆಲ್‌ನಿಂದ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಈ ಸಸ್ಯವು ನಮ್ಮ ಮನೆಗಳು, ಉದ್ಯಾನಗಳು, ಉದ್ಯಾನವನಗಳು ಮತ್ತು ಕಛೇರಿಗಳಲ್ಲಿ ಬಹಳ ಸಾಮಾನ್ಯವಾಗಿದೆ (ಒಳಾಂಗಣ ಮತ್ತು ಹೊರಾಂಗಣ ಸಸ್ಯವಾಗಿ ಜನಪ್ರಿಯವಾಗಿದೆ). ಸಸ್ಯ (ಡಂಬ್ ಕೇನ್ ಅಥವಾ ಡೈಫೆನ್‌ಬಾಚಿಯಾ) ಈಗ ಅಪಾಯಕಾರಿ ಎಂದು ಸಾಬೀತಾಗಿದೆ, ಆದ್ದರಿಂದ ದಯವಿಟ್ಟು ಕಾಳಜಿ ವಹಿಸಿ! ಈ ಸಸ್ಯದ ಎಲೆಯು ಅದರ ರಸ (ಹಾಲು) ನಿಮ್ಮ ಚರ್ಮಕ್ಕೆ ತಾಗಿದರೆ ತುರಿಕೆ ಉಂಟಾಗುತ್ತದೆ. ಆದರೆ ಹೆಚ್ಚು ಅಪಾಯಕಾರಿ ಸಂಗತಿಗಳಿವೆ! ಕೆಳಗಿನ ವಿವರಗಳನ್ನು ಓದಿ. ನನ್ನ ಸ್ನೇಹಿತರೊಬ್ಬರು ಈ ಗಿಡದ ಎಲೆಯ ತುಂಡನ್ನು ಬಾಯಿಗೆ ಹಾಕಿಕೊಂಡ ಮಗಳನ್ನು ಕಳೆದುಕೊಂಡರು ಮತ್ತು ಅವಳ ನಾಲಿಗೆ ಉಸಿರುಗಟ್ಟುವ ಹಂತಕ್ಕೆ ಊದಿಕೊಂಡಿತು. ಹೆಸರು: ಡಂಬ್ ಕೇನ್ ಅಥವಾ ಡಿಫೆನ್‌ಬಾಚಿಯಾ ಈ ಸಸ್ಯವು ರುವಾಂಡಾದಲ್ಲಿ ಸಾಮಾನ್ಯವಾಗಿದೆ. ಇದು ಮಾರಣಾಂತಿಕ ವಿಷವಾಗಿದೆ, ವಿಶೇಷವಾಗಿ ಮಕ್ಕಳಿಗೆ. ಇದು ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ಮಗುವನ್ನು ಮತ್ತು 15 ನಿಮಿಷಗಳಲ್ಲಿ ವಯಸ್ಕನನ್ನು ಕೊಲ್ಲುತ್ತದೆ. ಇದನ್ನು ತೋಟಗಳಿಂದ ಕಿತ್ತು ಕಛೇರಿಯಿಂದ ಹೊರಗೆ ತೆಗೆಯಬೇಕು. ಮುಟ್ಟಿದರೆ, ಒಬ್ಬನು ಅವನ/ಅವಳ ಕಣ್ಣುಗಳನ್ನು ಮುಟ್ಟಬಾರದು; ಇದು ಭಾಗಶಃ…

Read More