Subscribe to Updates
Get the latest creative news from FooBar about art, design and business.
- 26 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಡೆಂಗ್ಯೂ ಜ್ವರದಿಂದ ಬಾಲಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರಿಂದ ಪ್ರತಿಭಟನೆ
- ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
- ಸಾಹಿತ್ಯ, ಜೀವನ ಬೇರೆ ಬೇರೆ: ಎಸ್.ದಿವಾಕರ್
- ಅಕ್ಕಿರಾಂಪುರ ಗ್ರಾ.ಪಂ. ಸದಸ್ಯರಿಂದ ರಾಜಿನಾಮೆ ಪರ್ವ: ಕಂದಾಯ ವಸೂಲಾತಿ ಪುಸ್ತಕಗಳೇ ಇಲ್ವಂತೆ
- ವಿಶೇಷ ಪ್ರಕರಣದಡಿ ಗಂಗರಾಜುಗೆ ನಿವೇಶನ ಭಾಗ್ಯ
- ಮಟ್ಕಾ ಜೂಜಾಟ ಮೇಲೆ ಪೊಲೀಸರಿಂದ ದಾಳಿ: ಆರೋಪಿ ವಿರುದ್ಧ ಕಾನೂನು ಕ್ರಮ
- ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪಾಠ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
Author: admin
ತುಮಕೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರು ದಲಿತ ಸಿಎಂ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಹುಲ್ ಗಾಂಧಿ ನನಗೆ, ಏನಾಗಬೇಕು? ಎಂದು ಕೇಳಿದ್ದರು. ತಕ್ಷಣ ನಾನು ಸಿಎಂ ಆಗಬೇಕು ಎಂದು ಹೇಳಿದ್ದೆ. ಮಂತ್ರಿ ಆಗುವ ಆಸೆ ಇಲ್ಲ. ಸಿಎಂ ಆಗಬೇಕು ಎಂದು ಹೇಳಿದ್ದೆ. ನಾನು ಸಿಎಂ ಆಗಬಹುದು. ಆಗದೇ ಇರಬಹುದು. ಈ ಮಾತಿನಿಂದ ದಲಿತ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ಅದೃಷ್ಟ ಯಾರಿಗೆ ಬರುತ್ತೆ ನೋಡೋಣ, ದಲಿತರು ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು, ದಲಿತ ಸಿಎಂ ಹೋರಾಟಕ್ಕೆ ಜಿ.ಪರಮೇಶ್ವರ್ ಪರೋಕ್ಷ ಕರೆ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಗುಬ್ಬಿ: ಚುನಾವಣಾ ಆಯೋಗದ ನಿರ್ದೇಶನದಂತೆ ತಾಲ್ಲೂಕು ಕಚೇರಿ ಹಾಗೂ ತಾಲ್ಲೂಕಿನ ಎಲ್ಲಾ 212 ಮತಗಟ್ಟೆಗಳಲ್ಲಿಯೂ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ಬಿ. ಆರತಿ ತಿಳಿಸಿದರು. ತಾಲ್ಲೂಕು ಕಚೇರಿಯ ಕಂದಾಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ಹೊಸ ಸೇರ್ಪಡೆ, ಯಾವುದೇ ದೋಷ, ಬದಲಾವಣೆಗಳಿದ್ದರೂ ಮತದಾರರು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸುವ ಮೂಲಕ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು. 2022ರ ಜ.13ಕ್ಕೆ ಅರ್ಹ ದಿನಾಂಕವನ್ನು ಇಟ್ಟುಕೊಂಡಿದ್ದು 18 ವರ್ಷ ಪೂರೈಸುವ ಹೊಸ ಮತದಾರರ ಸೇರ್ಪಡೆಗೆ ನಮೂನೆ 6, ಪಟ್ಟಿಯಿಂದ ಕೈಬಿಡಲು ನಮೂನೆ 7, ತಿದ್ದುಪಡಿಗೆ ನಮೂನೆ 8, ವರ್ಗಾವಣೆಗೆ ನಮೂನೆ 8ಎರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಅರ್ಹ ಮತದಾರರು ಚುನಾವಣಾ ಆಯೋಗದ ವೋಟರ್ ಹೆಲ್ಪ್ಲೈನ್ ಆಯಪ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಮುಂದಿನ ನಾಲ್ಕು ಭಾನುವಾರಗಳಂದು ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣಾ ವಿಶೇಷ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬೂತ್…
ತುರುವೇಕೆರೆ: ತಾಲ್ಲೂಕಿನ ಚೌದ್ರಿ ಸೇವಾ ಟ್ರಸ್ಟ್, ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಮತ್ತು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಆಶ್ರಯದಲ್ಲಿ ನ. 15ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಚೌದ್ರಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಚೌದ್ರಿ ನಾಗೇಶ್ ತಿಳಿಸಿದರು. ಪಟ್ಟಣದ ಚೌದ್ರಿ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜನರಲ್ಲಿ ತಮ್ಮ ಆರೋಗ್ಯದ ಕಾಳಜಿ ಹೆಚ್ಚಿಸುವ ಸಲುವಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಹೃದ್ರೋಗ, ನರರೋಗ, ಮೂತ್ರಪಿಂಡ, ಮಧುಮೇಹ, ಚರ್ಮರೋಗ, ಶ್ವಾಸಕೋಶ, ದಂತ ರೋಗ, ಸ್ತ್ರೀಯರ ರೋಗಗಳು, ಕಿವಿ, ಮೂಗು, ಮಕ್ಕಳ, ನೇತ್ರ, ಕೀಲು ಮತ್ತು ಮೂಳೆ, ಮಾನಸಿಕ ರೋಗ ಹಾಗೂ ಕ್ಷಯ ರೋಗಕ್ಕೆ ಸಂಬಂಧಿಸಿದ ವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ತಿಳಿಸಿದರು. ಪಟ್ಟಣದ ಉಡುಸಲಮ್ಮ ದೇವಾಲಯದ ಹಿಂಭಾಗದ ಚೌದ್ರಿ ಕನ್ವೆಂಷನ್ ಹಾಲ್ನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಆರೋಗ್ಯ ತಪಾಸಣಾ ಶಿಬಿರ…
ತುಮಕೂರು: 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ ತುಮಕೂರಿನ ಪೋಕ್ಸೋ ನ್ಯಾಯಾಲಯವು 10 ವರ್ಷ ಜೈಲು ಹಾಗೂ 40 ಸಾವಿರ ದಂಡ ಹಾಕಿದ್ದು, ಅತ್ಯಾಚಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದೆ. 2019ರಲ್ಲಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 28 ವರ್ಷದ ಮಂಜುನಾಥ್ ಎಂಬುವವನು 15 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಮಾಡಿದ್ದ. ಈ ಬಗ್ಗೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ತುಮಕೂರು ಪೋಕ್ಸೋ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ನ್ಯಾಯಾಧೀಶ ಕೃಷ್ಣಯ್ಯ ಅವರು ಆದೇಶ ನೀಡಿದ್ದು, ಸರ್ಕಾರಿ ವಕೀಲೆ ಬಿ.ವಿ. ಗಾಯತ್ರಿ ರಾಜು ವಾದ ಮಂಡಿಸಿದ್ದರು. ಸದ್ಯ ಅತ್ಯಾಚಾರ ಆರೋಪಿಗೆ ಹತ್ತು ವರ್ಷ ಜೈಲು ಹಾಗೂ 40 ಸಾವಿರ ರೂ. ದಂಡ ವಿಧಿಸಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಸರಗೂರು: ತಾಲ್ಲೂಕಿನ ಗಡಿಭಾಗದ ಸರಗೂರಿನಲ್ಲಿ ಒಂದು ವಾರದಿಂದ ಮಳೆ ಸುರಿಯುತ್ತಿರುವುದರಿಂದಾಗಿ ಕಬಿನಿ ಹಿನ್ನೀರು ಪಕ್ಕದಲ್ಲಿ ಗ್ರಾಮದ ಬಸಾಪುರ ಗ್ರಾಮದಲ್ಲಿ ಮನೆಗಳು ನೆಲಸಮವಾಗಿದೆ. ಬಿದರಹಳ್ಳಿ ಗ್ರಾ.ಪಂ. ಬಸಾಪುರ ಗ್ರಾಮದ ನಿವಾಸಿಯಾದ ಮಹದೇವಮ್ಮ, ಮಹದೇವನಾಯಕ ಎಂಬುವರ ಮನೆ ರಾತ್ರಿ 8 ಗಂಟೆಯ ಸಮಯದಲ್ಲಿ ಮಳೆಯಿಂದಾಗಿ ಗೋಡೆಗಳು ಕುಸಿದು ಬಿದ್ದಿವೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ವಿಡಿಯೋ ನೋಡಿ.. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಸರಗೂರು: ತಾಲ್ಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಸಂಜೆ ವೇಳೆ. ಶ್ರೀ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಹೆಚ್ಚುವರಿ ಪೊಲೀಸ್ ಅಧಿಕಾರಿ ಶಿವಕುಮಾರ್ ಸಮಿತಿಯ ಅಧ್ಯಕ್ಷ ನಿಂಗರಾಜು ಸದಸ್ಯರು ನಡುವೆ ಮಾತುಕತೆ ನಡೆಸಿದರು. ತಾಲ್ಲೂಕಿಕ್ಕೆ ಪ್ರಥಮವಾಗಿ ನಡೆಯುವ ಜಾತ್ರೆಯಾಗಿದೆ. ಇದೆ ತಿಂಗಳು ನಡೆಯುವ ಕೊನೆಯ ಕಾರ್ತಿಕ ಮಾಸದಲ್ಲಿ ಜಾತ್ರೆಗೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ರವರ ಆದೇಶ ಮೇರೆಗೆ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿನ ಹಾಗೂ ಹೋಗುಗಳ ಬಗ್ಗೆ ತಿಳಿದು ಕೊಂಡು ಪರಿಶೀಲನೆ ಮಾಡಿದರು. ನಂತರ ಸಮಿತಿಯ ಅಧ್ಯಕ್ಷ ನಿಂಗರಾಜು ಮತ್ತು ಸದಸ್ಯರು ಅಧಿಕಾರಿವರಿಗೆ ನಮ್ಮ ಪ್ರತಿ ವರ್ಷ ಕಡೆ ಕಾರ್ತಿಕ ಮಾಸದಲ್ಲಿ ದಿನಾಂಕ .28/11/21 ರಿಂದ 1/12/21 ರವರಗೆ ಜಾತ್ರ ಮಹೊತ್ಸವ ನಡೆಯುತ್ತದೆ. ಜಾತ್ರೆಗೆ ಭಕ್ತರು ಮೈಸೂರು, ಚಾಮರಾಜನಗರ ವಿವಿಧ ಜಿಲ್ಲೆ ಗಳಿಂದ ತಾಲ್ಲೂಕು ಭಾಗಗಳಿಂದ ಭಕ್ತರು ಬರುತ್ತಾರೆ ಎಂದರು . ನಂತರ ಪೊಲೀಸ್ ಹೆಚ್ಚುವರಿ ಅಧಿಕಾರಿ ಶಿವಕುಮಾರ್ ಮಾತನಾಡಿ, ನಮ್ಮ ರಾಜ್ಯಾದ್ಯಂತ ಕೊವಿಡ್ ಇರುವದರಿಂದ ಸರ್ಕಾರದ ನಿಯಮದ ಪ್ರಕಾರ…
ಸರಗೂರು: ತಾಲ್ಲೂಕಿನ ಕುರ್ಣೇಗಾಲ ಗ್ರಾಮದ ಯುವ ಸಮೂಹದವರು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ.ಪುಣ್ಯ ಸ್ಮರಣೆ ಕಾರ್ಯಕ್ರಮವ ಆಯೋಜನೆ ಮಾಡಿದ್ದು, ಗ್ರಾಮ ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷ ಬೆಟ್ಟಸ್ವಾಮಿ ಭಾಗವಹಿಸಿದ್ದರು. ತಾಲ್ಲೂಕಿನ ಬಿ.ಮಟಕೇರಿ ಗ್ರಾಪಂನ ಕುರ್ಣೇಗಾಲ ಗ್ರಾಮದಲ್ಲಿ ಪ್ರಮುಖ ಬೀದಿಗಳಲ್ಲಿ ಮೂಂಬತ್ತಿ ಹಿಡಿದುಕೊಂಡು ಯುವ ಸಮೂಹ ಯುವಕರು ಮೆರವಣಿಗೆ ಮೂಲಕ ಮಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ಮೌನಾಚರಣೆ ಮಾಡುವ ಮೂಲಕ ಗ್ರಾಮಸ್ಥರು ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ನಮ್ಮ ಊರಿನ ಕುಟುಂಬದ ಒಬ್ಬ ಸದಸ್ಯರನ್ನು ಕಳೆದುಕೊಂಡಂತೆ ಬಹಳ ನೋವಾಗುತ್ತಿದೆ. ಮುಂದಿನ ದಿನಗಳಲ್ಲಿ ಪುನೀತ್ ರಾಜ್ಕುಮಾರ್ ಅವರ, ಪುಣ್ಯ ಸ್ಮರಣಾರ್ಥವಾಗಿ ತಾಲೂಕಿನಲ್ಲಿ ಕುರ್ಣೇಗಾಲ ಗ್ರಾಮದಲ್ಲಿ ಅರ್ಥಪೂರ್ಣವಾಗಿ ಪುನೀತ್ ಅವರು ಮಾಡುತ್ತಿದ್ದ ಸೇವೆಯಂತೆ ನೊಂದ ಬಡಜನರಿಗೆ ನೆರವಾಗುವ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಕೈಗೊಂಡರು. ಬೆಟ್ಟಸ್ವಾಮಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾಯಿ ಸಮಿತಿ ಅಧ್ಯಕ್ಷ , ಹಾದನೂರು ಗ್ರಾಮ ಪಂಚಾಯಿತಿ…
ಸರಗೂರು: ದೇವಾಲಯಗಳಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸರಗೂರು ಪಟ್ಟದ ಪೊಲೀಸ್ ಯಶಸ್ವಿಯಾಗಿದ್ದಾರೆ. ಕೃಷ್ಣ(40) ಕುಮಾರ ಅಲಿಯಾಸ್ ಸೀನ(28) ಕುಮಾರ (35) ಬಂಧಿತ ಆರೋಪಿಗಗಳಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಟ್ಟಣದ ಗ್ರಾಮೀಣ ಭಾಗದಲ್ಲಿ ಕೂದಲು ವ್ಯಾಪಾರ ಹಾಗೂ ಚಿನ್ನ ಬೆಳ್ಳಿ ಅಭರಣಗಳಿಗೆ ಪಾಲಿಶ್ ಮಾಡುವ ಕೆಲಸ ಮಾಡುತ್ತಿದ್ದ ಇವರು, ವ್ಯಾಪಾರದ ವೇಳೆ ಮನೆ ಹಾಗೂ ದೇವಾಲಯಗಳನ್ನು ಸೂಕ್ಷ್ಮವಾಗಿ ಗಮನಸಿಕೊಂಡು ಬಳಿಕ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ. ಹಲವಾರು ದಿನಗಳಿಂದ ಒಂದಾದ ಮೇಲೆ ಒಂದರಂತೆ ದೇವಾಲಯಗಳಲ್ಲಿ ಕಳ್ಳತನವಾಗುತ್ತಿದ್ದ ಪ್ರಕರಣವನ್ನು ಬೆನ್ನತ್ತಿದ ಸರಗೂರು ಪೊಲೀಸರು, ಸರ್ಕಲ್ ಇನ್ಸ್ ಪೆಕ್ಟರ್ ಆನಂದ ನೇತೃತ್ವದಲ್ಲಿ ಪಿಎಸ್ ಐ ಶ್ರಾವಣ ದಾಸ ರೆಡ್ಡಿ ಮಾರ್ಗದರ್ಶನದಲ್ಲಿ ತಂಡವನ್ನು ರಚನೆ ಮಾಡಿ, ಕಾರ್ಯಚರಣೆ ನಡೆಸಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ತಾಲ್ಲೂಕಿನ ಕೊತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇರುವ ರಂಗಮಂದಿರದಲ್ಲಿ ರಾತ್ರಿ ವೇಳೆ ತಂಗುತ್ತಿದ್ದರು. ಖಚಿತ ಮಾಹಿತಿ ಪಡೆದು ಕಳ್ಳರನ್ನು ಬಂಧಿಸಿ…
ಕೊರಟಗೆರೆ: ಜಿ.ಕೆ.ವಿ.ಕೆ. ಕೃಷಿ ಮೇಳದಲ್ಲಿ ತಾಲೂಕಿನ ‘ಉತ್ತಮ ಯುವ ಪ್ರಗತಿ ಪರ ಕೃಷಿಕ’ ಪ್ರಶಸ್ತಿಯನ್ನು ಯುವ ಕೃಷಿಕ ದಾಸಾಲಕುಂಟೆಯ ಅಭಿಷೇಕ್ ಅವರಿಗೆ ನೀಡಿ ಗೌರವಿಸಲಾಗಿದೆ. ಅಭಿಷೇಕ್ ಅವರು ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದಾರೆ. ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಕೃಷಿ ಬೆಳೆಗಳಾದ ತೊಗರಿ, ಅಗಸೆ, ಮೆಕ್ಕೆ ಜೋಳ ಹಾಗೂ ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ, ಬಾಳೆ, ತರಕಾರಿ ಸೊಪ್ಪುಗಳನ್ನು ಬೆಳೆದು ಅಧಿಕ ಆದಾಯ ಪಡೆಯುತ್ತಿದ್ದಾರೆ. ಕೃಷಿ ಚಟುವಟಿಕೆಗೆ ಪೂರಕವಾಗಿ ಹೈನುಗಾರಿಕೆಯಲ್ಲಿ ತೊಡಗಿ, ಹಸು ಹಾಗೂ ನಾಟಿ ಕೋಳಿ ಸಾಕಣಿಕೆ ಮಾಡಿ ಹೆಚ್ಚಿನ ಆದಾಯವನ್ನು ಪಡೆಯುತ್ತಿದ್ದಾರೆ. ಜೊತೆಗೆ ವಿವಿಧ ರೀತಿಯ ಅರಣ್ಯ ಕೃಷಿಯನ್ನು ಕೂಡ ಬೆಳೆದಿರುತ್ತಾರೆ. ಅಭಿಷೇಕ್ ರವರನ್ನು ಗುರುತಿಸಿದ ತಾಲ್ಲೂಕು ಕೃಷಿ ಇಲಾಖೆ, ಕೃಷಿ ವಿಜ್ಙಾನ ಕೇಂದ್ರವು ಇಂದು ನಡೆದ ಜಿ.ಕೆ.ವಿ.ಕೆ.ಕೃಷಿ ಮೇಳದಲ್ಲಿ “ಉತ್ತಮ ಯುವ ಪ್ರಗತಿ ಪರ ಕೃಷಿಕ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ ಯವರು ಸೀಬಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಶಾಸಕರಾದ ಡಾ.ಸಿ.ಎಂ.ರಾಜೇಶ್ ಗೌಡರವರು ನಾರು ನಿಗಮ ಮಂಡಳಿ ಅಧ್ಯಕ್ಷರು ಬಿ.ಕೆ.ಮಂಜಣ್ಣ, ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷರು ಎಸ್.ಆರ್.ಗೌಡ, ಬಿಜೆಪಿ ಗ್ರಾಮಾಂತರ ಅಧ್ಯಕ್ಷರು ರಂಗಸ್ವಾಮಿ, ನಗರ ಅಧ್ಯಕ್ಷರು ವಿಜಯರಾಜ್, ರಘು, ಯುವ ಗ್ರಾಮಾಂತರ ಮೋರ್ಚಾ ಅಧ್ಯಕ್ಷರು ಮದು ಯಾದವ್, ಮುದಿಮಡು ಮಂಜಣ್ಣ, ಯಲಿಯೂರು ಮಂಜಣ್ಣ ರವರು, ನಟರಾಜ್, ಸತ್ಯನಾರಾಯಣ, ನರೇಂದ್ರ, ಸಂತೋಷ್, ಮೂಗನಹಳ್ಳಿ ರಾಮು, ಕರಿಯಣ್ಣ, ಸೋರೆಕುಂಟೆ ರಘು, ಕಿಟ್ಟಪ್ಪ, ಮಂಜುನಾಥ್, ಲಿಂಗರಾಜು ಮುಂತಾದ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700