Author: admin

ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ಪುಸ್ತಕದಲ್ಲಿ ದಾಖಲೆ ನಿರ್ಮಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಹರ್ ಘರ್ ತಿರಂಗಾ ಅಭಿಯಾನದ ಕರೆಗೆ ಓಗೊಟ್ಟು ಸಂಸದ ಎಸ್.ಮುನಿಸ್ವಾಮಿ ಅವರ ನೇತೃತ್ವದಲ್ಲಿ ದೇಶದ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಕ್ರೀಡಾಂಗಣದ ಉದ್ದಗಲಕ್ಕೂ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ರಕ್ಷಣಾ ಇಲಾಖೆಯ ಸೇನಾ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿ ಸಲ್ಲಿಸಲಾಯಿತು. ಆ ಕ್ಷಣದಲ್ಲಿ ಕ್ರೀಡಾಂಗಣದಲ್ಲಿ ನೆರೆದಿದ್ದ ಜನಸ್ತೋಮದ ಹರ್ಷೋದ್ಘಾರ ಎಲ್ಲೆ ಮೀರಿತ್ತು. ನಮ್ಮ ಧ್ವಜ ನಮ್ಮ ಹೆಮ್ಮೆ, ಭಾರತ ಮಾತೆಗೆ ಜೈಕಾರ ಸೇರಿದಂತೆ ದೇಶಪ್ರೇಮದ ಘೋಷಣೆಗಳನ್ನು ಕೂಗಿದರು. ಸಹಸ್ರಾರು ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಶಾಲಾ ಮಕ್ಕಳು ಸಂತಸದಿಂದ ಕುಣಿದಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸೇರಿದಂತೆ ಜನಪ್ರತಿಧಿನಿಗಳು, ಅಧಿಕಾರಿಗಳು ಬೃಹತ್ ಬಾವುಟ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. 20್ಡ5630 ಅಡಿ ವಿಸ್ತಿರ್ಣ ಹೊಂದಿದ ರಾಷ್ಟ್ರಧ್ವಜವು ಒಟ್ಟು 1.29 ಲಕ್ಷ ಚದರ ಅಡಿ…

Read More

ಶಿವಮೊಗ್ಗ: ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿ ಜೆ.ಸಿ. ನಗರ ನಿವಾಸಿ ಮೊಹಮ್ಮದ್ ಜಬಿ ಅಲಿಯಾಸ್ ಚರ್ಬಿಯನ್ನು ಗುಂಡು ಹಾರಿಸಿ ಬಂಧಿಸಲಾಗಿದೆ. ಯುವಕನಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನದೀಮ್ ಹಾಗೂ ಅಬ್ದುಲ್ ರೆಹೆಮಾನ್  ರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ  ಮುಖ್ಯ ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಮುಂಜಾನೆ 4 ಗಂಟೆ ಸುಮಾರಿನಲ್ಲಿ ತೀರ್ಥಹಳ್ಳಿ ರಸ್ತೆಯ ಫಲಕ್ ಸಮುದಾಯ ಭವನದ ಬಳಿ ಆರೋಪಿ ಮೊಹಮ್ಮದ್ ಜಬಿ ಇರುವ ಖಚಿತ ಮಾಹಿತಿಯೊಂದಿಗೆ  ವಿನೋಬ ನಗರ ಠಾಣೆ ಪಿ.ಎ. ಮಂಜುನಾಥ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳುತ್ತಿದ್ದಂತೆ ಪೊಲೀಸರನ್ನು ಕಂಡ ಆರೋಪಿ ಮೊಹಮ್ಮದ್ ಚಾಕುವಿನಿಂದ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆನ್ನಲಾಗಿದೆ. ಈ ವೇಳೆ ತಕ್ಷಣ ಪಿಎಸ್‍ಐ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದ್ದಾರೆ. ಆದರೆ ಪೊಲೀಸರ ಮಾತಿಗೆ ಕಿವಿಗೊಡದೆ ಮತ್ತೆ ಹಲ್ಲೆಗೆ ಮುಂದಾದಾಗ ಆತ್ಮ ರಕ್ಷಣೆಗಾಗಿ ಮಂಜುನಾಥ್ ಅವರು ಹಾರಿಸಿದ ಗುಂಡು…

Read More

ಸರಗೂರು: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ಹಮ್ಮಿಕೊಳ್ಳಲಾಯಿತು. ಪ್ರಥಮ ದರ್ಜೆ ಕಾಲೇಜಿನಿಂದ ಶಾಲೆಯ ಮಕ್ಕಳು ಹೊರಟ ಸರಗೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಅದೇ ಮಾರ್ಗವಾಗಿ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ವಿವಿಧ ಶಾಲೆಯ ಮಕ್ಕಳಿಂದ ಪಥಸಂಚಲನ ನಡೆಸಿದರು ತಹಸೀಲ್ದಾರ್ ಚೆಲುವರಾಜು ಗೌರವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು ತಹಸೀಲ್ದಾರ್ ಚೆಲುವರಾಜು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ , ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪಪಂ ಸದಸ್ಯರು ಎಸ್ ಎಲ್ ರಾಜಣ್ಣ,  ಶ್ರೀನಿವಾಸ್, ಹೇಮಾವತಿ,  ರಮೇಶ್, ಸಣ್ಣತಾಯಮ್ಮ, ಶಿವಕುಮಾರ್, ಚೈತ್ರಸ್ವಾಮಿ, ಉಮಾರಾಚಂದ್ರ, ದಿವ್ಯನವೀನ್, ಚಲುವಕೃಷ್ಣ, ನೂರಾಳಸ್ವಾಮಿಇನ್ನೂ ತಾಲ್ಲೂಕಿನ ಅಧಿಕಾರಿಗಳು ಹಾಗೂ ಶಾಲೆಯ ಮಕ್ಕಳು ಶಿಕ್ಷಕರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಿಬ್ಬಂದಿ ಭಾಗವಹಿಸಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ತಿಪಟೂರು: ಇಲ್ಲಿನ  ಕೆ.ಆರ್. ಬಡಾವಣೆಯಲ್ಲಿರುವ ಜಯಕರ್ನಾಟಕ ವೃತ್ತದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 75 ನೇ ಸುವರ್ಣ ಮಹೋತ್ಸವ ಸ್ವಾತಂತ್ರೋತ್ಸವದ  ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸೈನಿಕ ಟಿ.ಎಸ್.ಷಣ್ಮುಖ, ಉಪವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ  ಮತ್ತು ನಿವೃತ್ತ ಲೀಡ್ ಬ್ಯಾಂಕ್ ಮುಖ್ಯಸ್ಥ ಜ್ಯೋತಿ ಗಣೇಶ್ ಮಾತನಾಡಿದರು. ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್,ನಿವೃತ್ತ ಶಿಕ್ಷಕ ಸೋಮಶೇಖರ್, ಸಂಘಟನೆಯ   ಜಿಲ್ಲಾ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನೌಕರರ ಘಟಕದ ಡಾ.ಮೋಹನ್ ಎಐಟಿಯುಸಿ ಸಂಚಾಲಕ ಗೋವಿಂದರಾಜ್, ಸಮಾಜ ಸೇವಕ ಬಿ.ಆರ್.ಶಶಿಧರ್,  ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿ ಹಿಂಡಿಸ್ಕೆರೆ ರವಿ, ನಗರ  ಕಾರ್ಯದರ್ಶಿ ಲೋಕೇಶ್, ಮುಖಂಡ ಕೆ.ಆರ್. ಬೋಜೇಗೌಡ, ಸಹ ಕಾರ್ಯದರ್ಶಿ ವಿಜಯಕುಮಾರ್, ಆಟೋ ಘಟಕದ ಕಾಂತರಾಜ್, ಕಲ್ಕೆಳೆ  ಘಟಕದ ಗಂಗಾಧರಯ್ಯ, ಯುವ ಘಟಕದ ರೋಹನ್ ರಾಜ್, ಶ್ವೇತಕುಮಾರ್, ಕೆ.ಇ.ಬಿ. ಸೋಮಶೇಖರ್, ಮುಖಂಡರಾದ ಅಂಗಡಿ ಕಿಟ್ಟಪ್ಪ, ನಿವೃತ್ತ ನೌಕರ ಷಡಕ್ಷರಿ, ಸಂಘಟನೆಯ ರಮೇಶ್ ಮತ್ತು  ಚಂದ್ರಶೇಖರ್ ಸೇರಿದಂತೆ ಸಂಘಟನೆಯ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು. ವರದಿ:…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಡಿ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ 75 ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್ ಬಳಿಕ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ, ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ನಗರದಲ್ಲಿ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸಿದೆ. ಹಿರಿಯೂರು ತಾಲ್ಲೂಕಿನಲ್ಲಿ ಸಹ ನೂರು ಕಿಲೋಮೀಟರ್ ಗಳ ಪಾದಯಾತ್ರೆ ಯನ್ನು ಮುಕ್ತಾಯಗೊಳಿಸಿದ್ದೇವೆ . ಈ ದಿನ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆಯಿತು. ಪ್ಲಾಸಿಯ ಕದನದಲ್ಲಿ ಬ್ರಿಟಿಷರ ವಿಜಯದ ನಂತರ, ಈಸ್ಟ್ ಇಂಡಿಯಾ ಕಂಪನಿಯು 1757ರಲ್ಲಿ ಭಾರತದಲ್ಲಿ ತನ್ನ ಆಡಳಿತವನ್ನು ಆರಂಭಿಸಿತು. ಭಾರತೀಯ ಸ್ವಾತಂತ್ರ್ಯ ಚಳುವಳಿಯು ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಪ್ರಾರಂಭವಾಯಿತು ಮತ್ತು ಮೋಹನ್ ದಾಸ್ ಕರಮದಾಸ್ ಗಾಂಧಿ ನೇತೃತ್ವದಲ್ಲಿ ನಡೆಯಿತು. ಆಗಸ್ಟ್ 15, 1947…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕರ್ನಾಟಕ ಸಮೃದ್ಧಿ ಜನಸೇವಾ ವೇದಿಕೆಯ ಯುವ ಕಣ್ಮಣಿ , ಯುವ ಘಟಕದ ಅಧ್ಯಕ್ಷರಾಗಿದ್ದ ಸಿ.ಟಿ.ವಸಂತ್ ಕುಮಾರ್ ನಾಯಕ ಅವರ ಸವಿ ನೆನಪಿಗಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಕುರಿತು ನಮ್ಮ ತುಮಕೂರು ಜೊತೆಗೆ ಮಾತನಾಡಿದ ತಾಲ್ಲೂಕು ನಗರದ ಘಟಕದ ಅಧ್ಯಕ್ಷರಾದ ಅಪ್ಸರ್ ಪಾಷಾ ಅವರು, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಕೋರಿದರು. ಕರ್ನಾಟಕ ಸಮೃದ್ದಿ ಜನಸೇವಾ ವೇದಿಕೆಯ ಯುವ ಘಟಕದ ಅಧ್ಯಕ್ಷರಾದ ಸಿ.ಟಿ.ವಸಂತ್ ಕುಮಾರ್ ಅವರನ್ನು ಕಳೆದುಕೊಂಡಿರುವುದು ನಮ್ಮೆಲ್ಲರ ದೌರ್ಬಲ್ಯದ ಸಂಗತಿಯಾಗಿದೆ. ಸಿ.ಟಿ.ವಸಂತ್ ಕುಮಾರ್ ನಾಯಕ ರವರು ಪ್ರತಿಯೊಂದು ಸ್ಪರ್ಧೆಯಲ್ಲೂ ಮುಂದಿದ್ದರು. ಇಂತಹ ಯುವ ಪ್ರತಿಭೆಗಳು ಇಂದು ನಮ್ಮೆಲ್ಲರನ್ನು ಅಗಳಿರುವುದು ನಿಜಕ್ಕೂ ಸಹ ದುರ್ದೈವದ ವಿಷಯವಾಗಿದೆ ಎಂಬುದಾಗಿ ಬೇಸರ ವ್ಯಕ್ತಪಡಿಸಿದರು. ಸಿ.ಟಿ.ವಸಂತ್ ಕುಮಾರ್ ನಾಯಕ ಅವರು, ಕಳೆದ ತಿಂಗಳುಗಳ ಹಿಂದೆಯಷ್ಟೇ ಬೈಕ್ ಅಪಘಾತದಲ್ಲಿ ನಿಧನ ಹೊಂದಿದ್ದು, ಅವರ ಸವಿ ನೆನಪಿಗಾಗಿಯೇ ಈ 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಈ ಕ್ರಿಕೆಟ್ ಪಂದ್ಯಾವಳಿಯನ್ನು…

Read More

ತುರುವೇಕೆರೆ: ತಾಲ್ಲೂಕು ಆಡಳಿತದ ವತಿಯಿಂದ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಣು ಕುಮಾರ್ ರವರು ಧ್ವಜಾರೋಹಣ ನೆರವೇರಿಸಿ ತಾಲೂಕಿನ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದರು. ಇದೇ ವೇಳೆ ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ, ಪೋಲಿಸ್ ಇಲಾಖೆಯಿಂದ ಕವಾಯತು, ಗೃಹರಕ್ಷಕ ದಳದಿಂದ ಪಥಸಂಚಲನ ನಡೆಯಿತು. ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಸಾಲ ಜಯರಾಮ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಪಥ ಸಂಚಲ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ತಹಸಿಲ್ದಾರರು ವಂದನೆ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ರಾಜಕೀಯದ ಗಣ್ಯರು ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು. ವರದಿ: ಸುರೇಶ್ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ಕಲ್ಪತರು ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಲಾಯಿತು.ತಿಪಟೂರು ಉಪವಿಭಾಗಾಧಿಕಾರಿ ಕಲ್ಪಶ್ರೀ ಧ್ವಜಾರೋಹಣ ನೆರವೇರಿಸಿ ಪೋಲಿಸ್ ತುಕಡಿ, ಗೃಹರಕ್ಷಕದಳ ಎನ್.ಸಿ.ಸಿ ತುಕ್ಕಡಿ , ಸ್ಕೌಟ್ಸ್ ತುಕ್ಕಡಿ ಸೇರಿದಂತೆ ವಿವಿಧ ಶಾಲಾ ತಂಡಗಳಿಂದ ಧ್ವಜವಂದನೆ ಸ್ವೀಕರಿಸಿದರು. ಇದೇ ವೇಳೆ ಮಾತನಾಡಿದ ಅವರು, ದೇಶದ ಲಕ್ಷಾಂತರ ಜನರಲ್ಲಿ ದೇಶ ಪ್ರೇಮದ ಕಿಚ್ಚನ್ನು ಹೊತ್ತಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಳುವಳಿ, ದಂಡಿಯಾತ್ರೆ, ಅಸಹಕಾರ ಚಳುವಳಿ , ಕ್ವಿಟ್ ಇಂಡಿಯಾ ಸತ್ಯಾಗ್ರಹದಂತಹ ಸಾವಿರಾರು ಹೋರಾಟಗಳು ಬ್ರಿಟಿಷ್ ಸರ್ವಾಧಿಕಾರಿ ಆಡಳಿತವನ್ನು 1947 ರ ಆಗಸ್ಟ್ 15 ರಂದು ಕೊನೆಗಾಣಿಸಿತು. ಲಕ್ಷಾಂತರ ಜನ ಧೀಮಂತ ನಾಯಕರು ತ್ಯಾಗ ಬಲಿದಾನದ ಮೂಲಕ ಅಪರಿಮಿತ ಶ್ರಮದ ಮೂಲಕ ಈ ಸುದಿನವನ್ನು ನಮ್ಮ ಪಾಲಿಗೆ ಬಿಟ್ಟುಹೋಗಿದ್ದಾರೆ . ಸ್ವಾಮಿ ವಿವೇಕಾನಂದರು ‘ ಏಳಿ , ಎದ್ದೇಳಿ , ಗುರಿ ಮುಟ್ಟುವ ತನಕ ನಿಲ್ಲದಿರಿ ‘ ಎಂಬ ಘೋಷಣೆಯೊಂದಿಗೆ ಯುವ ಸಮುದಾಯವನ್ನು ಹುರಿದುಂಬಿಸಿದರು ಎಂದರು. ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ…

Read More

ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಾಬಿರ್ ಉಸೇನ್ ಹಾಗೂ ಸದಸ್ಯರಾದ ಸಂದೇಶ್ ರವರು , ಸ್ವಾತಂತ್ರ್ಯ ಎಂಬುದು ನಮ್ಮ ಭಾರತ ದೇಶ ಹೆಮ್ಮೆಪಡುವ ವಿಷಯ. ದೇಶಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಸ್ಮರಿಸಿ ಗೌರವಿಸಿ ಅವರ ಧ್ಯೇಯ ಪಾಲಿಸುವ ಮೂಲಕ ಆತ್ಮ ನಿರ್ಭರ ಭಾರತ ನಿರ್ಮಾಣ ಆಗಬೇಕು ಎಂದರು. ಹಾಲಿ ಅಧ್ಯಕ್ಷರಾದ ಜಾಬಿರ್ ಹುಸೇನ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸು, ಕರವಸೂಲಿಗಾರ ಬಾಲ ಕುಮಾರ್ , ಕಾರ್ಯದರ್ಶಿ ಸಿ .ಡಿ.ವೆಂಕಟಾಚಲ ಮೊದಲಾದವರು ಈ ವೇಳೆ ಇದ್ದರು. ವರದಿ: ಸುರೇಶ್ ಬಾಬು, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy  

Read More

ಮಧುಗಿರಿ: ಮಧುಗಿರಿ ತಾಲೂಕು ಆಡಳಿತದ ವತಿಯಿಂದ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ನಡೆಯಿತು. ತಾಲೂಕು ದಂಡಾಧಿಕಾರಿಗಳಾದ ಸೋಮಪ್ಪ ಕಡಕೋಳ ಧ್ವಜಾರೋಹಣ ನಡೆಸಿ ತಾಲೂಕಿನ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ಕೋರಿದರು. ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಕವಾಯತು, ಗೃಹರಕ್ಷಕ ದಳದಿಂದಲೂ ಪಥಸಂಚಲನ ನಡೆಯಿತು. ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪಥ ಸಂಚಲ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ತಹಶೀಲ್ದಾರರು ವಂದನೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ರಾಜಕೀಯದ ಗಣ್ಯರು, ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More