Subscribe to Updates
Get the latest creative news from FooBar about art, design and business.
- ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
- ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
Author: admin
ತುರುವೇಕೆರೆ: ಡಿಸೆಂಬರ್ ವೇಳೆಗೆ ತುರುವೇಕೆರೆ ತಾಲೂಕಿನಲ್ಲಿ 57 ರ ನಮೂನೆ ಅರ್ಜಿ ದಾರರಿಗೆ ಸಾಗುವಳಿ ಚೀಟಿ ವಿತರಿಸುವ ವಿಶ್ವಾಸವಿದೆ ಎಂದು ಶಾಸಕ ಮಸಾಲ ಜಯರಾಮ್ ಹೇಳಿದರು. ತುರುವೇಕೆರೆ ಶಾಸಕ ಮಸಾಲ ಜಯರಾಮ್ ಸುದ್ದಿಗಾರರೊಂದಿಗೆ ಗುಬ್ಬಿ ಪಟ್ಟಣದಲ್ಲಿ ಮಾತನಾಡಿ, ನಮ್ಮ ತುರುವೇಕೆರೆ ತಾಲೂಕಿನಲ್ಲಿ 57 ನಮೂನೆ ಅರ್ಜಿ ಬಾಕಿ ಉಳಿದಿದ್ದು, ಅವುಗಳನ್ನು ಪರಾಮರ್ಶೆ ಮಾಡಿ ಬರುವ ಡಿಸೆಂಬರ್ ವೇಳೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿಗಳನ್ನು ಮಂಜೂರಿ ಕೊಡಲಾಗುವುದು ಎಂದರು. ಇನ್ನೂ ತುರುವೇಕೆರೆ ತಾಲೂಕಿನಲ್ಲಿ ಯಾವುದೇ ಅವ್ಯವಹಾರಗಳು ನಡೆದಿರುವುದಿಲ್ಲ 2017ರ ಹಿಂದೆ ನಡೆದಿದ್ದು, ಅವುಗಳನ್ನು ವಿಭಾಗಾಧಿಕಾರಿಗಳಿಗೆ ಪರಿಶೀಲನೆ ಮಾಡಲು ಕೊಟ್ಟಿದ್ದೆವು. ಅವುಗಳಲ್ಲಿ 915 ಅರ್ಜಿಗಳನ್ನ ನಾನೇ ಕುದ್ದು ವಜಾ ಮಾಡಿಸಿರುತ್ತೇನೆ. ನನ್ನ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಭಾಗದಲ್ಲಿ ಯಾವುದೇ ಅವ್ಯವಹಾರಗಳು ನಡೆದಿರುವುದಿಲ್ಲ. ಏಕೆಂದರೆ, ನನ್ನ ಭಾಗದಲ್ಲಿ ಹಿಡಿತ ಸಾಧಿಸಿದ್ದೇನೆ ಎಂದರು. ವರದಿ: ಸುರೇಶ್ ಬಾಬು ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತುಮಕೂರು: ಹಾಲು ಅಳತೆಯಲ್ಲಿ ಮೋಸ ಮಾಡುತ್ತಿದ್ದದ್ದನ್ನು ಪತ್ತೆ ಮಾಡಿದ ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತುಮಕೂರು ಹಾಲು ಒಕ್ಕೂಟ ವ್ಯಾಪ್ತಿಯ ಕುಣಿಗಲ್ ತಾಲೂಕಿನ ಹೆಡ್ಡಿಗೆರೆ ಡೈರಿಯಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ರೈತರು ತಗಾದೆ ತೆಗೆದಿದ್ದಾರೆ. ಹಾಲು ಪರೀಕ್ಷೆಗೆ ಹೆಚ್ಚುವರಿ ಹಾಲು ಪಡೆದು ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಮೋಸವನ್ನು ಪತ್ತೆ ಮಾಡಿ ಪ್ರಶ್ನಿಸಿದ ರೈತರ ಕೊರಳಪಟ್ಟಿ ಹಿಡಿದು ಕಾರ್ಯದರ್ಶಿ ಬೊರಮ್ಮ ಎಂಬಾಕೆ ಹಲ್ಲೆಗೆ ಯತ್ನಿಸಿದ್ದಾಳೆ ಎಂದು ದೂರಿದ್ದಾರೆ. ಹೆಡ್ಡಿಗೆರೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸಂಗ್ರಹಿಸುವ ಹಾಲಿನಲ್ಲಿ ರೈತರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿದ್ದು, ಹಾಲು ಪರೀಕ್ಷೆಗೆ 30 ಮಿ.ಲೀ ಹಾಲು ಪಡೆಯುವ ಬದಲು 180 ಮಿ.ಲೀ ಹಾಲು ಪಡೆಯಲಾಗುತ್ತಿದೆ ಎಂದು ಕಾರ್ಯದರ್ಶಿ ಬೋರಮ್ಮ ವಿರುದ್ಧ ರೈತರು ಆರೋಪಿಸಿದ್ದಾರೆ. ಹೆಚ್ಚುವರಿ ಹಾಲು ಪಡೆಯುತ್ತಿದ್ದದ್ದನ್ನು ಪಶ್ನೆ ಮಾಡಿದಾಗ 50 ಮಿ.ಲೀ ಅಷ್ಟೇ ಎಂದು ವಾದಿಸಿ ಕಾರ್ಯದರ್ಶಿ ಬೋರಮ್ಮ ಗಲಾಟೆ…
ಚಾಮರಾಜಪೇಟೆ ಆಟದ ಮೈದಾನ ಭೂ ವಿವಾದ ಹಿನ್ನೆಲೆಯಲ್ಲಿ ಕರೆ ನೀಡಿದ್ದ ಬಂದ್ ಯಶಸ್ವಿಯಾಗಿದ್ದೇ ಅದೇ ಉತ್ಸಾಹದಲ್ಲಿ ಇದೀಗ ಮುಂದುವರದ ಭಾಗವಾಗಿ ಮತ್ತೊಂದು ಹೋರಾಟಕ್ಕೆ ನಾಗರಿಕ ಒಕ್ಕೂಟ ವೇದಿಕೆ ಮುಂದಾಗಿದೆ. ಈ ಬಾರಿ ಸ್ಥಳೀಯ ಸಂಸದ ಪಿ.ಸಿ ಮೋಹನ್ ಕಣಕ್ಕಿಳಿದಿದ್ದು, ಹೋರಾಟಗಾರರಿಗೆ ಆನೆ ಬಲ ಬಂದಾಗಿದೆ. ಕಳೆದೊಂದು ತಿಂಗಳಿನಿಂದ ಚಾಮರಾಜಪೇಟೆ ಈದ್ಗಾ ಮೈದಾನ ಭೂ ಮಾಲಿಕತ್ವ ವಿವಾದ ಚರ್ಚೆಯಲ್ಲಿದೆ. ಸದ್ಯ ಈ ಮೈದಾನ ಯಾರಿಗೆ ಸೇರಿದ್ದು ಎಂಬ ಕುರಿತು ಬಿಬಿಎಂಪಿ ವರ್ಸಸ್ ವಕ್ಫ್ ಬೋರ್ಡ್ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಇದೀಗ ಈ ಮೈದಾನ ರಾಜಕೀಯ ತಿರುವು ಪಡೆದಿದೆ. ಕೆಲ ದಿನಗಳ ಹಿಂದೆ ತನ್ನ ಬೆಂಬಲಿಗರ ಸಭೆ ಕರೆದ ಸ್ಥಳೀಯ ಜಮೀರ್ ಅಹ್ಮದ್ ಟಾಂಗ್ ಕೊಡುವಂತೆ ಇಂದು ನಾಗರಿಕ ಒಕ್ಕೂಟ ವೇದಿಕೆ ಜೊತೆ ಬಿಜೆಪಿ ಸಂಸದ ಪಿ.ಸಿ ಮೋಹನ್ ಕಾಣಿಸಿಕೊಂಡಿದ್ದಾರೆ. ಇಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಭೇಟಿ ಮಾಡಿ ಮೈದಾನ ಕುರಿತು ಪಿಸಿ ಮೋಹನ್ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು. ಸಂಸದ ಪಿ.ಸಿ…
ಖ್ಯಾತ ಪಂಜಾಬಿ ಗಾಯಕ ದಲೇರ್ ಮೆಹಂದಿ ಅವರನ್ನು ಬಂಧಿಸಲಾಗಿದೆ. ವಿದೇಶಕ್ಕೆ ಮಾನವ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ 2 ವರ್ಷ ಜೈಲು ಶಿಕ್ಷೆಯಾಗಿದೆ. ಅಕ್ರಮವಾಗಿ ವಿದೇಶಗಳಿಗೆ ಜನರನ್ನು ಕಳುಹಿಸಿದ ಆರೋಪ ಅವರ ಮೇಲಿದೆ. ಇದಕ್ಕೂ ಮೊದಲು ಪಟಿಯಾಲಾದ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಹಂದಿ ವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಿ ಆದೇಶ ನೀಡಿತ್ತು. ಈ ಹಿನ್ನೆಲೆ ಗುರುವಾರ ಅವರನ್ನು ಬಂಧಿಸಲಾಗಿದೆ. ಈ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ನಡೆಯುತ್ತಿತ್ತು. 27 ಆಗಸ್ಟ್ 2003ರಲ್ಲಿ ನಮೂದಾದ ಎಫ್ಐಆರ್ ಸಂಖ್ಯೆ 498ರ IPS u/s 406,420,120B, 465,468,471 ಮತ್ತು ಭಾರತೀಯ ಪಾಸ್ಪೋರ್ಟ್ ಕಾಯ್ದೆಯ ಅಡಿ ಈ ಪ್ರಕರಣ ನಮೂದಿಸಲಾಗಿತ್ತು, HS ಗ್ರೆವಾಲ್ ನ್ಯಾಯಾಲಯವು ಆರೋಪಿ ಗಾಯಕ ದಲೇರ್ ಮೆಹಂದಿ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿರುದ್ಧ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ದಲೇರ್ ಮೆಹಂದಿ ಅವರಿಗೆ 16 ಮಾರ್ಚ್ 2018 ರಂದು ಜೆಎಂಐಸಿ ಪಟಿಯಾಲ…
ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ ಅವರು ಇಂದು ನಟಿ ಸುಶ್ಮಿತಾ ಸೇನ್ ಅವರೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ, ಅಷ್ಟೇ ಅಲ್ಲದೆ ಅವರನ್ನು ಬೆಟರ್ ಹಾಫ್ ಎಂದು ಕರೆದುಕೊಂಡಿದ್ದಾರೆ. ಈಗ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಜೋಡಿಗಳು ಈಗಾಗಲೇ ಮದುವೆಯಾಗಿದ್ದಾರಾ? ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ.ಆದರೆ ಅವರ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಲಲೀತ್ ಮೋದಿ ತಾವಿನ್ನೂ ಮದುವೆಯಾಗಿಲ್ಲ, ಬರಿ ಡೇಟಿಂಗ್ ಮಾತ್ರ ಮಾಡುತ್ತಿರುವುದು..ಮುಂದೊಂದು ದಿನ ಅದು ಆದರೂ ಆಗಬಹುದು ಎಂದು ಅವರು ಹೇಳಿದ್ದಾರೆ. ಐಪಿಎಲ್ಗೆ ಸಂಬಂಧಿಸಿದ ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯ ತನಿಖೆಯ ಮಧ್ಯೆ ಲಲಿತ್ ಮೋದಿ 2010 ರಲ್ಲಿ ಭಾರತವನ್ನು ತೊರೆದಿದ್ದರು. ಅಂದಿನಿಂದ ಅವರು ಲಂಡನ್ನಲ್ಲಿದ್ದಾರೆ.ಸುಶ್ಮಿತಾ ಸೇನ್ 1994 ರಲ್ಲಿ ಭುವನ ಸುಂದರಿ ಕಿರೀಟವನ್ನು ಧರಿಸಿದ ನಂತರ ಅವರು 1996 ರ ದಸ್ತಕ್ ಚಲನಚಿತ್ರದಲ್ಲಿ ಬಾಲಿವುಡ್ಗೆ ಪಾದಾರ್ಪಣೆ ಮಾಡಿದರು. ಅವರು ಬಿವಿ ನಂ 1,…
ಖ್ಯಾತ ಪಂಜಾಬಿ ಗಾಯಕ ದಲೇರ್ ಮೆಹಂದಿ ಅವರನ್ನು ಬಂಧಿಸಲಾಗಿದೆ. ವಿದೇಶಕ್ಕೆ ಮಾನವ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ 2 ವರ್ಷ ಜೈಲು ಶಿಕ್ಷೆಯಾಗಿದೆ. ಅಕ್ರಮವಾಗಿ ವಿದೇಶಗಳಿಗೆ ಜನರನ್ನು ಕಳುಹಿಸಿದ ಆರೋಪ ಅವರ ಮೇಲಿದೆ. ಇದಕ್ಕೂ ಮೊದಲು ಪಟಿಯಾಲಾದ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಹಂದಿ ವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡ ವಿಧಿಸಿ ಆದೇಶ ನೀಡಿತ್ತು. ಈ ಹಿನ್ನೆಲೆ ಗುರುವಾರ ಅವರನ್ನು ಬಂಧಿಸಲಾಗಿದೆ. 27 ಆಗಸ್ಟ್ 2003ರಲ್ಲಿ ನಮೂದಾದ ಎಫ್ಐಆರ್ ಸಂಖ್ಯೆ 498ರ IPS u/s 406,420,120B, 465,468,471 ಮತ್ತು ಭಾರತೀಯ ಪಾಸ್ಪೋರ್ಟ್ ಕಾಯ್ದೆಯ ಅಡಿ ಈ ಪ್ರಕರಣ ನಮೂದಿಸಲಾಗಿತ್ತು, HS ಗ್ರೆವಾಲ್ ನ್ಯಾಯಾಲಯವು ಆರೋಪಿ ಗಾಯಕ ದಲೇರ್ ಮೆಹಂದಿ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿರುದ್ಧ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ದಲೇರ್ ಮೆಹಂದಿ ಅವರಿಗೆ 16 ಮಾರ್ಚ್ 2018 ರಂದು ಜೆಎಂಐಸಿ ಪಟಿಯಾಲ 2 ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ…
ವಯಾಕಾಂ18ರ ಮುಂಚೂಣಿಯ ಆನ್-ಡಿಮ್ಯಾಂಡ್ ಸ್ಟ್ರೀಮಿಂಗ್ ಪ್ಲಾಟ್ಫಾರಂ ವೂಟ್ 8 ಸೀಸನ್ಗಳಿಂದ ಅಭೂತಪೂರ್ವ ಯಶಸ್ಸು ಗಳಿಸಿದ ಬಿಗ್ ಬಾಸ್ ಕನ್ನಡದ ಒಟಿಟಿ ಆವೃತ್ತಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಕನ್ನಡದ ಖ್ಯಾತ ನಟ `ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ ಈ ಕಾರ್ಯಕ್ರಮವನ್ನು ಹೊಚ್ಚಹೊಸ ಉತ್ಸಾಹಕರ ಮಾದರಿಯಲ್ಲಿ ಆಯೋಜಿಸಲಿದೆ. ಈ ಕಾರ್ಯಕ್ರಮ ಪ್ರಾರಂಭ ಕುರಿತು ಕಿಚ್ಚ ಸುದೀಪ, “ಉತ್ಸಾಹಕರ 8 ಋತುಗಳನ್ನು ಆಯೋಜಿಸಿದ ನಂತರ ಬಿಗ್ ಬಾಸ್ ಕನ್ನಡ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಈ ವರ್ಷ ಮೊಟ್ಟಮೊದಲನೆಯ ಒಟಿಟಿ ಆವೃತ್ತಿಯ ಮೂಲಕ ಮನರಂಜನೆಯಲ್ಲಿ ಕಥೆಗೆ ಟ್ವಿಸ್ಟ್ ತರಲು ಬಹಳ ಸಂತೋಷ ಹೊಂದಿದ್ದೇವೆ. ನಾವು ವೂಟ್ನಲ್ಲಿ ಈ ಶೋ ಪ್ರದರ್ಶನಕ್ಕೆ ಸಜ್ಜಾಗಿದ್ದು ನಾನು ವೀಕ್ಷಕರಿಗೆ 24/7 ಲೈವ್ ಆಕ್ಷನ್, ಆಸಕ್ತಿದಾಯಕ ಸಂವಹನಗಳು ಮತ್ತು ಪ್ಲಾಟ್ ಟ್ವಿಸ್ಟ್ಗಳನ್ನು ವೀಕ್ಷಕರಿಗೆ ತರಲು ಉತ್ಸುಕನಾಗಿದ್ದೇನೆ, ಇದು ನಮ್ಮ ವೀಕ್ಷಕರನ್ನು ಸೆಳೆಯುತ್ತದೆ ಎಂಬ ಭರವಸೆ ನನ್ನದು” ಎಂದರು. ಬಿಗ್ ಬಾಸ್ ಕನ್ನಡ ಹಿಂದಿನ ವರ್ಷಗಳಲ್ಲಿ ಅಪಾರ ಜನಪ್ರಿಯತೆ ಗಳಿಸಿದೆ. ಈ…
ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಪಕ್ಕದಲ್ಲಿರುವ ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ಹಲಸಿನ ಹಣ್ಣನ್ನು ತಿನ್ನಲು ಬಂದ ಕರಡಿ ಮರಿಯೊಂದು ಮುಳ್ಳಿನ ತಂತಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಬೆಳಿಗ್ಗೆ ಜಮೀನಿನ ಕಡೆ ಬಂದ ರೈತರು ಮರದಲ್ಲಿ ಸಿಲುಕಿಹಾಕಿಕೊಂಡು ವೇದನೆ ಪಡುತ್ತಿದ್ದ ಕರಡಿಮರಿಯನ್ನು ಗಮನಿಸಿದ ರೈತರು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ . ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಕರಡಿ ಮರಿಗೆ ಅರವಳಿಕೆ ಮದ್ದು ನೀಡಿ ಸುರಕ್ಷಿತವಾಗಿ ಮುಳ್ಳು ತಂತಿಯಿಂದ ಬಿಡಿಸಿ ಮುಳ್ಳು ತಂತಿಯಿಂದ ಸಣ್ಣಪುಟ್ಟ ಗಾಯಗಳಾಗಿತ್ತು ಚಿಕಿತ್ಸೆ ನೀಡಿ ದೂರದ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ ಕಾರ್ಯಾಚರಣೆಯಲ್ಲಿ ಕೊರಟಗೆರೆ ಯ ಅರಣ್ಯ ಇಲಾಖೆ ಅಧಿಕಾರಿಗಳಾದ ಸುರೇಶ್, ನಾಗರಾಜು, ಸಿಬ್ಬಂದಿಗಳುಹಾಗೂ ಪಶು ವೈದ್ಯಾಧಿಕಾರಿಗಳು ಹಾಜರಿದ್ದರು . ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ಸಿಎಂ ಬಳಿಕ ಮಾತನಾಡಿ, ಇದೊಂದು ಹೊಸ ಕಾರ್ಯಕ್ರಮ. ಇತ್ತೀಚೆಗೆ ಕಾಶಿಯನ್ನು ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ನವೀಕರಣ ಮಾಡಿದ್ದಾರೆ. ಕಾಶಿ ಎಂದರೆ ಒಂದು ಶ್ರದ್ಧಾಸ್ಥಳ. ಬಹಳಷ್ಟು ಜನ ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ. ಮೊದಲು ಏನು ಕೂಡ ವ್ಯವಸ್ಥೆ ಇಲ್ಲದೇ ಇದ್ದಾಗ ಅಂತಿಮಯಾತ್ರೆ ಅಂತ ಹೋಗುತ್ತಿದ್ದರು. ಈಗ ಬಹಳಷ್ಟು ಬದಲಾವಣೆ ಆಗಿದೆ. ನೇರವಾಗಿ ವಾರಣಾಸಿಗೆ ವಿಮಾನ, ರೈಲು, ಬಸ್ ವ್ಯವಸ್ಥೆಯಾಗಿದೆ. ಇದರಿಂದ ಕಾಶಿ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತದೆ. ಇಂದು ಕಾಶಿ ಯಾತ್ರೆಗೆ ಹೋಗಿ ಬಂದ ಹತ್ತು ಜನರಿಗೆ ಚೆಕ್ ವಿತರಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನೇರವಾಗಿ ಡಿ.ಬಿ.ಟಿ ಮೂಲಕ ಆನ್…
ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಅಗಮಿಸುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ. ಸಂಪಾಜೆಗೆ ಭೇಟಿ ನೀಡಿ ಮಳೆ ಮತ್ತು ಭೂಕಂಪನದಿಂದ ಹಾನಿಗೊಂಡು ಬಿರುಕು ಬಿಟ್ಟ ಮನೆಯನ್ನು ವೀಕ್ಷಣೆ ಮಾಡಿದರು. ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೆಲೆಸಿರುವವರಿಗೆ ಧೈರ್ಯ ತುಂಬಿದರು. ಸೇರಿದ್ದ ಜನರಿಂದ ಸಿಎಂ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಸಿ.ಸಿ.ಪಾಟೀಲ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆಗಳ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು. ದ.ಕ.ಸಂಪಾಜೆಗೆ ಭೇಟಿ: ಬಳಿಕ ದ.ಕ.ಸಂಪಾಜೆಯಲ್ಲಿ ಭೂಕಂಪನದಿಂದ ಬಿರುಕು ಬಿಟ್ಟ ಗ್ರಾ.ಪಂ.ಮಾಜಿ ಸದಸ್ಯ ಪಿ.ಆರ್. ನಾಗೇಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ…