Subscribe to Updates
Get the latest creative news from FooBar about art, design and business.
- ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
- ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
Author: admin
ಹೆಚ್.ಡಿ. ಕೋಟೆ: ತಾಲ್ಲೂಕಿನ ಚಿಕ್ಕಕೆರೆಯೂರು ಗ್ರಾಮದಿಂದ ಹೆಚ್.ಡಿ.ಕೋಟೆಗೆ ಮತ್ತು ಮೈಸೂರು ಕಡೆಗೆ ಹೋಗುವ ರಸ್ತೆಗಳು ತುಂಬಾ ಹದಗೆಟ್ಟಿದ್ದು, ಸಾರ್ವಜನಿಕರು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ . ಮಲಾರ ಕಾಲೋನಿ ಗ್ರಾಮದಿಂದ ಹೆಚ್.ಡಿ.ಕೋಟೆಗೆ ಹೋಗುವ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಅದರೂ ರಸ್ತೆ ದುರಸ್ತಿ ಮಾಡಲು ಅಧಿಕಾರಿಗಳು ಮೀನಾಮಿಷ ಎಣಿಸುತ್ತಿದ್ದಾರೆ. ರಸ್ತೆಯಲ್ಲಿ ಗುಂಡಿಗಳೋ ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಎನ್ನುವಂತಾಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಎಂದರೆ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡೇ ವಾಹನ ಚಲಾಯಿಸಬೇಕು ಎಂದು ಹೇಳುತ್ತಾರೆ ಇಲ್ಲಿನ ಸಾರ್ವಜನಿಕರು. ಈ ರಸ್ತೆಯಲ್ಲಿ ಪ್ರತಿ ನಿತ್ಯ ಸಂಚಾರಿಸುವ ನೂರಾರು ವಿದ್ಯಾರ್ಥಿಗಳು, ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಶಾಲಾ ಕಾಲೇಜುಗಳಿಗೆ ಹೋಗಿ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆಯಿಂದ ರೋಸಿ ಹೋಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ರಸ್ತೆ ಸರಿಪಡಿಸುವಂತೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ರಸ್ತೆಯಲ್ಲಿನ ಗುಂಡಿಗಳನ್ನು…
ಪ್ರೇಯಸಿಯ ತಲೆಯನ್ನು ಗೋಡೆಗೆ ಗುದ್ದಿ ಪ್ರಿಯಕರ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ. ನೇಪಾಳ ಮೂಲದ ಕೃಷ್ಣಕುಮಾರಿ (23) ಹತ್ಯೆಗೀಡಾದ ಯುವತಿ. ಸಂತೋಷ್ ದಾಮಿ (27) ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಕೃಷ್ಣಕುಮಾರಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದರೆ, ಸಂತೋಷ್ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದ. ಪರಸ್ಪರ ಪರಿಚಯ ಆದ ನಂತರ ನೇಪಾಳ ಮೂಲದ ಇಬ್ಬರು ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ವಾಸವಾಗಿದ್ದರು. ಬುಧವಾರ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಸಿಟ್ಟಿನ ಭರದಲ್ಲಿ ಸಂತೋಷ್ ಪ್ರೇಯಸಿಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾನೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಬಿಎಸ್-3 ವಾಹನಗಳ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅಶೋಕ್ ಲೈಲ್ಯಾಂಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಯಲ ದಾಳಿ ಮಾಡಿದೆ. ವಾಯುಮಾಲಿನ್ಯ ನಿಯಂತ್ರಣ ನಿಯಮದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಬಿಎಸ್-3 ವಾಹನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯ ಪತ್ರಕರ್ತರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಎನ್ ಡಿಟಿವಿಯ ನಿರ್ದೇಶಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಎನ್ನಲಾದ ಗೌತಮ್ ಆದಾನಿ ಎನ್ ಡಿಟಿವಿಯ ನಿರ್ದೇಶಕ ಮಂಡಳಿಯಾದ ಆರ್ ಆರ್ ಆರ್ ಆರ್ ಹೋಲ್ಡಿಂಗ್ ಪ್ರವೇಟ್ ಲಿಮಿಟೆಡ್ ನಲ್ಲಿ ಪಾಲುದಾರರಾಗಿ ನವೆಂಬರ್ 29ರಿಂದ ಅಧಿಕಾರ ಹಿಡಿದ ಬೆನ್ನಲ್ಲೇ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ರಾಜೀನಾಮೆ ನೀಡುವ ಮೂಲಕ ಕಂಪನಿಯಿಂದ ಹೊರಬಂದಿದ್ದಾರೆ. ಇದೇ ವೇಳೆ ಸುಭಿತಾ ಭಟ್ಟಾಚಾರ್ಯ, ಸಂಜಯ್ ಪುಗಾಲಿಯಾ, ಸೇಂಥಿಲ್ ಸಿನ್ಹಾ ಮತ್ತು ಚೆಂಗಲ್ ವಾರ್ಯನ್ ಅವರನ್ನು ಎನ್ ಡಿಟಿವಿಯ ನಿರ್ದೇಶಕರನ್ನಾಗಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರ ಪ್ರದೇಶ ಫಿರೋಜಾಬಾದ್ ಜಿಲ್ಲೆ ಪಾಧಮ್ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ವರು ಮಕ್ಕಳು, ಇಬ್ಬರು ಯುವಕರು. ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫಿರೋಜಾಬಾದ್ ಜಿಲ್ಲೆಯ ಜಸ್ರಾನಾದ ಪದಮ್ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿರುವ ಅಂಗಡಿ ಮತ್ತು ಅದರ ಮೇಲಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಆರು ಮಂದಿ ಬಲಿಯಾಗಿದ್ದಾರೆ. 18 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿವೆ ಎಂದು ಎಸ್ಪಿ ಆಶಿಶ್ ತಿವಾರಿ ಹೇಳಿದ್ದಾರೆ. ಘಟನೆಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತೀವ್ರ ಕುಡಿತದ ಚಟ ಹೊಂದಿದ್ದ ವ್ಯಕ್ತಿಗೆ ಮಗಳ ಮದುವೆಯಂದು ಕುಡಿಯಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಕ್ನೋದ ಮೋಹನ್ಲಾಲ್ ಗಂಜ್ ಪ್ರದೇಶದಲ್ಲಿ ನಡೆದಿದೆ ಮಗಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಂಜೆ ದಿಬ್ಬಣ ಬರಲಿದೆ ಎನ್ನುವ ಸಮಯದಲ್ಲಿ ವಧುವಿನ ತಂದೆ 55 ವರ್ಷದ ಸುನೀಲ್ ದ್ವಿವೇದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುನೀಲ್ ದ್ವಿವೇದಿ ಸ್ಥಳೀಯ ಮೋಹನ್ಲಾಲ್ ಗಂಜ್ ಪ್ರದೇಶದ ತಿಕ್ರಾ ಗ್ರಾಮದ ನಿವಾಸಿ. ಕಂಠಪೂರ್ತಿ ಕುಡಿದುಕೊಂಡೇ ಇರುತ್ತಿದ್ದರು.ಮಗಳ ಮದುವೆ ಭಾನುವಾರ ನಿಶ್ಚಯವಾಗಿತ್ತು. ಶನಿವಾರ ಸಂಜೆ ಕೂಡ ಸುನಿಲ್ ಕುಡಿತದ ಅಮಲಿನಲ್ಲಿ ಮನೆಗೆ ಬಂದಿದ್ದರು. ಇದನ್ನು ನೋಡಿದ ಕುಟುಂಬಸ್ಥರು ಮಗಳ ಮದುವೆಗೆ ಅಡ್ಡಿಪಡಿಸಬೇಡಿ ಎಂದು ಹೇಳಿದ್ದಾರೆ. ಸಂಬಂಧಿಕರು ಭಾನುವಾರ ಮದ್ಯ ಸೇವನೆ ಮಾಡಬೇಡಿ ಎಂದು ಹೇಳಿದ್ದರು. ಭಾನುವಾರ ಮುಂಜಾನೆ ಮದುವೆಯ ತಯಾರಿ ಆರಂಭ ಮಾಡಿದ್ದರು. ಎಲ್ಲಿಯೂ ಸುನೀಲ್ ಸುಳಿವು ಇದ್ದಿರಲಿಲ್ಲ. ಅವರಿಗಾಗಿ ಮನೆಯಲ್ಲಿ ಶೋಧ ಕಾರ್ಯ ಮಾಡಿದ್ದಾರೆ. ಈ ವೇಳೆ ಮನೆಯ ಹಿಂಬದಿಯಲ್ಲಿ ದನದ ಕೊಟ್ಟಿಗೆಯಲ್ಲಿ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟೀಕಿಸಿದರು. ಪ್ರಧಾನಿ ಮೊದಿ ರಾವಣ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಹಿರಿಯರಾದ ಖರ್ಗೆ ಈ ರೀತಿ ಮಾತನಾಡಬಾರದು. ಪ್ರಧಾನಿ ಮೋದಿಯನ್ನ ಪ್ರಪಂಚವೇ ಮೆಚ್ಚಿದೆ. ಎಐಸಿಸಿ ಅಧ್ಯಕ್ಷ ಖರ್ಗೆ ರಬ್ಬರ್ ಸ್ಟಾಂಪ್ ಆಗಿದ್ದಾರೆ ಎಂದರು. ಬಿಜೆಪಿ ರೌಡಿಗಳ ಪಕ್ಷ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ರೌಡಿಗಳ ಪಕ್ಷ, ಬಿಜೆಪಿ ಸುಸಂಸ್ಕೃತ ಪಕ್ಷವಾಗಿದೆ. ಕಾಂಗ್ರೆಸ್ ರೌಡಿಗಳ ಪಕ್ಷ ಎಂದು ತಿರಸ್ಕರಿಸಿದ್ದಾರೆ. ಡಿಕೆ ಶಿವಕುಮಾರ್ ಯಾವಾಗ ಜೈಲಿಗೆ ಹೋಗ್ತಾರೋ ಗೊತ್ತಿಲ್ಲ ಅಂತವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಇದೆ. ನಲಪಾಡ್ ಜೈಲಿಗೆ ಹೋಗಿ ಬದವನು. ಅವನಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಸೋಲದೇವನಹಳ್ಳಿಯಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೇ ಪ್ರಿಯಕರನ ಜೊತೆ ಸೇರಿಕೊಂಡು ಗಂಡನ ಕೊಲೆ ಮಾಡಿರುವ ಘಟನೆ ನಡೆದಿದೆ. ದಾಸೇಗೌಡ (48) ಕೊಲೆಯಾದ ವ್ಯಕ್ತಿ. ನಾಪತ್ತೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಸಿನಿಮಾ ರೀತಿಯಲ್ಲಿ ನಡೆದ ಈ ಕೊಲೆ ರಹಸ್ಯ ಬಯಲಾಗಿದೆ. ದಾಸೇಗೌಡ ನಾಪತ್ತೆಯಾಗಿದ್ದ ಬಗ್ಗೆ ಸೋಲದೇವನಹಳ್ಳಿಯಲ್ಲಿ ಪತ್ನಿ ದೂರು ದಾಖಲಿಸಿದ್ದಳು. ರಾಮನಗರ ಗ್ರಾ. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಸೇಗೌಡನ ಮೃತದೇಹ ಪತ್ತೆಯಾಗಿದ್ದು, ದಾಸೇಗೌಡನ ಪತ್ನಿ ಸೇರಿ ಇಬ್ಬರನ್ನು ವಿಚಾರಣೆ ನಡೆಸಿದಾಗ ನಿಜ ಹೊರ ಬಂದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಒಂ ಮೃತದೇಹವನ್ನು ಸೋಲದೇವನಹಳ್ಳಿ ಫಾರ್ಮ್ ಹೌಸ್ನಿಂದ ಕಾರಿನಲ್ಲಿ ಸಾಗಟ ಮಾಡಿದ್ದು, ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮೋರಿಯಲ್ಲಿ ಎಸೆದಿದ್ದಾರೆ. ಕೊಲೆ ಮಾಡಲು ಬಳಸಿದ್ದ ಹಗ್ಗವನ್ನು ಬೇರೆಡೆ ಎಸೆದಿದ್ದು, ಸಾಕ್ಷ್ಯ ಸಿಗದಂತೆ ಒಂದೊಂದು ಕಡೆ ವಸ್ತುಗಳು ಎಸೆದಿದ್ದಾರೆ. 35 ವರ್ಷದ ಜಯ 16 ವರ್ಷದ ಹಿಂದೆ ದಾಸೇಗೌಡನನ್ನ ಮದುವೆಯಾಗಿ ಇಬ್ಬರು ಮಕ್ಕಳು ಇದ್ದರು. ಗಂಡ ಹೆಂಡತಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಗಂಡ…
ಕೆಎಸ್ಸಾರ್ಟಿಸಿಯು ಹೊಸದಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ಬ್ರಾಂಡ್ ಹೆಸರು ಟ್ಯಾಗ್ಲೈನ್ ಹಾಗೂ ಗ್ರಾಫಿಕ್ಸ್ ಆಹ್ವಾನಿಸಿದೆ. ಪ್ರತಿ ಮಾದರಿಯ ವಾಹನಗಳಿಗೆ ಉತ್ತಮ ಬ್ರಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ ₹10,000 ಹಾಗೂ ಉತ್ತಮ ಗ್ರಾಫಿಕ್ಸ್ ನೀಡಿದವರಿಗೆ ತಲಾ ₹ 25,000 ಬಹುಮಾನ ನೀಡಲಾಗುವುದು. ಹೆಸರನ್ನು ಸೂಚಿಸಲು ಡಿಸೆಂಬರ್ 5 ಕೊನೆ ದಿನ ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ–ಮೇಲ್ ಗೆ ಅಥವಾ ನಿಗಮದ ಫೇಸ್ಬುಕ್/ಟ್ವಿಟರ್ ಖಾತೆಗೆ ಸಲ್ಲಿಸಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಡರಾತ್ರಿ ಊಟ ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಸೇರಿದಂತೆ ಯುವಕರ ಗುಂಪೊಂದು ಮಹಿಳೆಯರು ಸೇರಿದಂತೆ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.20ರಂದು ರಾತ್ರಿ 11.30ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ನಗರದ ಬಳಿಯ ವಿಲೇಜ್ ರೆಸ್ಟೋರೆಂಟ್ನಲ್ಲಿ ಯುವಕರ ಗುಂಪು ಗೂಂಡಾಗಿರಿ ನಡೆಸಿ, ಮಹಿಳಾ ಸಿಬ್ಬಂದಿ ಮೇಲೂ ಹಲ್ಲೆ ಮಾಡಲಾಗಿದೆ. ಈ ವೀಡಿಯೋ ಇದೀಗ ವೈರಲ್ ಆಗಿದೆ. ರೆಸ್ಟೋರೆಂಟ್ನ ಮಹಿಳಾ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿ ಊಟ ಕೊಟ್ಟರೆ ಸರಿ, ಇಲ್ದಿದ್ರೆ ಒದೆ ತಿಂತೀಯಾ ಅಂತ ಬೆಂಗಳೂರು ನಗರ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ರಾಮಚಂದ್ರಪ್ಪನ ಮಗ ಧನುಶ್ ಕೆಸಿ ದಾಂಧಲೆ ಮಾಡಿದ್ದಾನೆ. ನಾನ್ ಹೇಳಿದಂಗೆ ಕೇಳ್ಬೇಕು ಇಲ್ದಿದ್ರೆ ಈ ರೆಸ್ಟೋರೆಂಟ್ ಇರಲ್ಲ ಎಂದು ಬೆದರಿಕೆ ಹಾಕಿದ್ದಾನೆ. ಬರ್ತ್ಡೇ ಪಾರ್ಟಿ ಮಾಡಿದ ನಂತರ ರಾತ್ರಿ 11:30ಕ್ಕೆ ವಿಲೇಜ್ ರೆಸ್ಟೋರೆಂಟ್ಗೆ ಬಂದಿದ್ದ…