Author: admin

ಸುಳ್ಯ:ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಯ ಪ್ರಮಾಣ ತಗ್ಗಿದ್ದರೂ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದುಅಪಾರ ನಷ್ಟ ಸಂಭವಿಸುತ್ತಿದೆ. ತೊಡಿಕಾನ ಗ್ರಾಮದ ಕುಂಟುಕಾಡು ಬಳಿ ಪೆರಾಜೆಯ ವ್ಯಾಪಾರೆ ದಾಮೋದರ ಅವರು ಖರೀದಿಸಿದ ಸ್ಥಳದಲ್ಲಿ ಇತ್ತೀಚಿನ ೨ ವರ್ಷಗಳಿಂದ ನೂತನ ಗೃಹ ನಿರ್ಮಾಣ ಮಾಡಿದ್ದು, ಇನ್ನೆರಡು ತಿಂಗಳುಗಳಲ್ಲಿ ಮನೆಯ ಕೆಲಸ ಪೂರ್ತಿಗೊಳಿಸಿ ಮನೆಯ ಗೃಹ ಪ್ರವೇಶ ಮಾಡುವುದೆಂದು ನಿಶ್ಚಯಿಸಿದ್ದರು. ಆದರೆ ಇತೀಚಿನ ಬಾರಿ ಮಳೆಗೆ ಭೂಮಿ ಅದುರಿದಂತಾಗಿ ಮನೆಯ ಹಿಂದಿನ ಬರೆ ಸ್ವಲ್ಪ ಸ್ವಲ್ಪವೇ ಕುಸಿಯುತ್ತಾ ಸೋಮವಾರ ಮತ್ತು ಮಂಗಳವಾರ ಬರೆ ಕುಸಿದು ಹೊಸ ಮನೆ ಬಾಗಶಃ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಜಾಲ್ಸೂರಿನ ಕಜೆಗದ್ದೆ ಕಾಂಪ್ಲೆಕ್ಸ್ ಹಿಂಬದಿಯಲ್ಲಿ ಬರೆ ಕುಸಿತಗೊಂಡ ಸ್ಥಳಕ್ಕೆ ಎ.ಸಿ. ಗಿರೀಶ್ ನಂದನ್, ತಹಸೀಲ್ದಾರ್ ಕು. ಅನಿತಾಲಕ್ಷ್ಮಿ, ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ನವೀನಚಂದ್ರ ಜೋಗಿ ಹಾಗೂ ಅಧಿಕಾರಿಗಳು ಸೋಮವಾರ ಸಂಜೆ ಭೇಟಿ ಪರಿಶೀಲನೆ ನಡೆಸಿದರು. ಚೆಂಬು ಗ್ರಾಮದ ಕುದ್ರೆಪಾಯ ಕಟ್ಟಪಾರೆ ಜನಾರ್ಧನ ನಾಯ್ಕ ರವರ ಮನೆಯ…

Read More

ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿರುವ ಘಟನೆ ಇಲ್ಲಿಗೆ ಸಮೀಪದ ಸಂತೆಕಟ್ಟೆ ಕೆ.ಜಿ .ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.12ರಂದು ನಡೆದಿದೆ. ಘಟನೆಯಲ್ಲಿ ಎಸ್ಕಾರ್ಟ್ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸಚಿವ ಕೋಟ ಅವರ ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೆ ನೀಡದೆ ಏಕಾಏಕಿ ಪಥ ಬದಲಿಸಿದ ಕಾರಣ, ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅವರನ್ನು , ಸಚಿವ ಕೋಟ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿ ಗುರುಪೂರ್ಣಿಮೆಯನ್ನು ಹಿರಿಯೂರು ನಗರದ ಬಸವರಾಜ್ ಆಸ್ಪತ್ರೆ ಯ ರಸ್ತೆಯಲ್ಲಿರುವ ಸಾಯಿಬಾಬಾ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ಸಾಯಿಬಾಬಾ ಸ್ವಾಮಿ ದೇವಸ್ಥಾನದಲ್ಲಿ ಗುರು ಪೂರ್ಣಿಮೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸಿದರು. ಗುರುಪೂರ್ಣಿಮೆ ನಿಮಿತ್ತ ಹಿರಿಯೂರು ನಗರದ ರಾಯರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಿರಿಯೂರು ನಗರದ ಬಸವರಾಜ್ ಹಾಸ್ಪಿಟಲ್ ರಸ್ತೆಯಲ್ಲಿರುವ ಸಾಯಿಬಾಬಾ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಕಾಕಡಾರತಿ, ಮಹಾಭಿಷೇಕ, ಮಂಗಲಸ್ನಾನ, ಅಲಂಕಾರ, ಆರತಿ ನಡೆಯಿತು. ನೂರಾರು ಜನರು ರುದ್ರಾಭಿಷೇಕ, ಸಹಸ್ರಬಿಲ್ವಾರ್ಚನೆ ಹಾಗೂ ಕುಂಕುಮಾರ್ಚನೆ ಕಾರ್ಯಕ್ರಮಗಳು ಸಹ ನಡೆದವು. ಬೆಳಗಿನಿಂದಲೇ ಭಕ್ತರು ಭಜನೆಯಲ್ಲಿ ನಿರತರಾಗಿದ್ದರು. ಹೋಮ-ಹವನಗಳಲ್ಲಿ ಪಾಲ್ಗೊಂಡರು. ನಂತರ ರಾಯರ ಮೆರವಣಿಗೆಯು ಸಹ ಹಿರಿಯೂರು ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು. ಸಾಯಿಬಾಬಾನ ಭಕ್ತಾದಿಗಳಿಂದ ಅನ್ನಸಂತರ್ಪಣೆಯೂ ಸಹ ಬಹಳ ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದಂತಹ ಹಿರಿಯೂರು ನಗರಸಭೆ ಸದಸ್ಯರಾದ ಅಂಬಿಕಾ ಯಾನೆ ಅಂಬಿಕಾಬಾಯಿ , ವಿಶಾಲಾಕ್ಷಮ್ಮ , ಲೋಕೇಶ್ ಅವರು ಸೇರಿದಂತೆ…

Read More

ಪರೋಟ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಸಾಲದ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡು ಘಟನೆ ಸಾಲಿಗ್ರಾಮದ ಕಾರ್ಕಡ ಸಮೀಪ ಭಟ್ರಕಟ್ಟೆಯಲ್ಲಿ ನಡೆದಿದೆ. ಕಾರ್ಕಡ ಭಟ್ರಕಟ್ಟೆ ನಿವಾಸಿ 43 ವರ್ಷದ ಸುಧಾಕರ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಪರೋಟ ವ್ಯಾಪಾರ ಮಾಡಿಕೊಂಡಿದ್ದರು. ಪರೋಟ ವ್ಯಾಪಾರಕ್ಕೆ ದೊಡ್ಡ ಪ್ರಮಾಣದ ಬಂಡವಾಳ ಹೂಡಿದ್ದರು. ಆದರೆ, ಇತ್ತೀಚೆಗೆ 3 ವರ್ಷಗಳಿಂದ ವ್ಯಾಪಾರ ಸರಿಯಾಗಿ ಆಗದೇ ಸಾಲದ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಇದೇ ವಿಚಾರದಲ್ಲಿ ಜೀವನದಲ್ಲಿ ಮನನೊಂದು ನಿನ್ನೆ ಸಂಜೆ ಪರೋಟ ಮಾಡುವ ಶಡ್ ನಲ್ಲಿರುವ ಕಿಟಕಿಯ ಸರಳಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಅನಾಮದೇಯ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರುಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಹಿಂಬದಿ ಸೀಟ್ ನಲ್ಲಿ ವ್ಯಕ್ತಿ ಇದ್ದು, ವ್ಯಕ್ತಿಯ ಶವ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟುಕರಕಲಾಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಂತಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ ಆತ್ಮಹತ್ಯೆಯೋ ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಯ ಜೊತೆಗೆ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಆರ್ಥಿಕ ದಿವಾಳಿಯಿಂದ ಜರ್ಜರಿತಗೊಂಡಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅರಾಜಕತೆ, ದೊಂಬಿ ಗಂಭೀರ ಸ್ವರೂಪ ಪಡೆದುಕೊಂಡಿದ್ದು ಇಂದು ದೇಶದಲ್ಲಿ ಹಠಾತ್ತಾನೆ ತುರ್ತು ಘೋಷಣೆ ಮಾಡಲಾಗಿದೆ. ಹಂಗಾಮಿ ಅಧ್ಯಕ್ಷರಾಗಿ ರನಿಲ್ ವಿಕ್ರಂ ಸಿಂಘೆ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇಶದಾದ್ಯಂತ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕ ಜೊತೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿರುವ ಸುದ್ಧಿ ತಿಳಿಯುತ್ತಿದ್ದಂತೆ ಜನಾಕ್ರೋಶ ಭುಗಿಲೆದ್ದಿದೆ. ಗೊಟಬಯ ರಾಜೀನಾಮೆಗೆ ಪಟ್ಟು ಹಿಡಿದು ಇಂದು ಸಾವಿರಾರು ಜನರು ರಾಜಧಾನಿ ಕೊಲಂಬೊ ನಗರದ ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ರೊಚ್ಚಿಗೆದ್ದ ಗುಂಪು ಶ್ರೀಲಂಕಾ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಭರ್ಜರಿ ಜಟಾಪಟಿ ನಡೆಯಿತು. ಏಕಾಏಕಿ ಆಕ್ರೋಶಗೊಂಡ ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ಅಶ್ರುವಾಯು ಸಿಡಿಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ…

Read More

ಪುತ್ತೂರು: ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ(ರಿ) (BSI) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ‘ಧಮ್ಮ ಚಕ್ರ ಪ್ರವರ್ತನ’ ದಿನವಾದ ಆಷಾಡ ಹುಣ್ಣಿಮೆಯನ್ನು  (ಗುರು ಪೂರ್ಣಿಮೆ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆಚರಿಸಲಾಯಿತು. ಸಮ್ಯಕ್ ಜ್ಞಾನವನ್ನು ಪಡೆದ ಭಗವಾನ್ ಬುದ್ಧರು ಧಮ್ಮವನ್ನು ಮೊಟ್ಟ ಮೊದಲ ಬಾರಿಗೆ ಸಾರನಾಥದಲ್ಲಿರುವ ಜಿಂಕೆವನದಲ್ಲಿ ( Deer park) ಐದು ಜನ ಭಿಕ್ಕುಗಳಿಗೆ ಬೋಧಿಸಿದ ಐತಿಹಾಸಿಕ ದಿನವೇ ಧಮ್ಮ ಚಕ್ರ ಪ್ರವರ್ತನ ದಿನ. ಇದು ಆಷಾಡ ಹುಣ್ಣಿಮೆಯಂದು ನಡೆದ ಘಟನೆಯಾಗಿದ್ದು ಭಗವಾನ್‌ ಬುದ್ಧರು ಧಮ್ಮ ಬೋಧನೆ ಮಾಡಿದ ಕುರುಹಾಗಿ ‘ಗುರು ಪೂರ್ಣಿಮೆ’ ಎಂದೂ ಈ ದಿನವನ್ನು ಸಂಭ್ರಮಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಬಿಎಸ್ ಐ(ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾದ ಆಯುಷ್ಮಾನ್ ದೇವಪ್ಪ ಕಾರೆಕ್ಕಾಡ್, ಉಪಾಧ್ಯಕ್ಷರಾದ ಆಯುಷ್ಮತಿ ಜಯಶ್ರೀ, ಖಚಾಂಚಿಗಳಾದ ಆಯುಷ್ಮಾನ್ ಮನೋಹರ್ ಪುತ್ತೂರು ಹಾಗೂ ಇನ್ನಿತರ ಬೌದ್ಧ ಉಪಾಸಕ, ಉಪಾಸಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಆಯುಷ್ಮಾನ್ ಭಾಸ್ಕರ್ ವಿಟ್ಲ…

Read More

ಅಮರಾವತಿ:  ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕಾಲರಾದಿಂದ ಐದು ಜನರು ಸಾವನ್ನಪ್ಪಿದ್ದು, 181 ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು  ಮೃತಪಟ್ಟವರಾಗಿದ್ದು, ಈ ರೋಗಿಗಳಲ್ಲಿ ಮೂವರು 24 ರಿಂದ 40 ವರ್ಷ ವಯಸ್ಸಿನವರು ಮತ್ತು ಇಬ್ಬರು 70 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ತಿಳಿದು ಬಂದಿದೆ. ಜುಲೈ 7 ರಂದು ಅಮರಾವತಿ ಜಿಲ್ಲೆಯ ಚಿಖಲ್ದಾರ ಮತ್ತು ಅಮರಾವತಿ ಬ್ಲಾಕ್ ಗಳಲ್ಲಿ ಏಕಾಏಕಿ ಕಾಲರ ಹರಡಿದೆ. ಸಾಂಕ್ರಾಮಿಕ ಪೀಡಿತ ಗ್ರಾಮಗಳಲ್ಲಿ ವೈದ್ಯಕೀಯ ತಂಡಗಳು ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ನೀರಿನಲ್ಲಿ ಕಾಲರ ಹರಡುವ ಹಿನ್ನೆಲೆಯಲ್ಲಿ ನೀರಿನ ಗುಣಮಟ್ಟದ ಮೇಲ್ವಿಚಾರಣೆ, ರೋಗಿಗಳ ಕಣ್ಗಾವಲು, ನಿರ್ವಹಣೆ ಮತ್ತು ಚಿಕಿತ್ಸೆ ಮತ್ತು ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು:  ಆರೋಪಗಳು ಶಿವ, ಬ್ರಹ್ಮ ಕೃಷ್ಣನನ್ನೇ ಬಿಟ್ಟಿಲ್ಲ, ಸಮಂತಕ ಮಣಿ‌ ವಿಚಾರದಲ್ಲಿ ಕೃಷ್ಣನನ್ನೇ ಕಳ್ಳ ಅಂದರು ಅಂತರದಲ್ಲಿ ಮೋದಿಯನ್ನು ಬಿಡ್ತಾರಾ? ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಪ್ರಶ್ನಿಸಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ಭೇಟಿಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುರುಪೂರ್ಣಿಮೆಯಂದು ಗುರುಗಳ ದರ್ಶನ ಪಡೆದಿದ್ದೇನೆ. ಮನಸ್ಸಿಗೆ ಖುಷಿ ಅನಿಸಿದೆ ಶ್ರೀಗಳ ಆಶೀರ್ವಾದ ನನ್ನ ಮೇಲೆ ಸದಾ ಇದೆ ಎಂದರು. ಈ ರಾಷ್ಟ್ರದ ಜನ‌ ಎದ್ದೆಯುಬ್ಬಿಸಿ ಹೇಳಬೇಕಾದದ್ದುದಂತಹ ಒಳ್ಳೇ ಧೀಮಂತ ನಾಯಕ ಸಿಕ್ಕಿದ್ದಾನೆ.  ಘರ್ಜಿಸುತ್ತಿರುವ ಆ ಸಿಂಹ ಆಯಪ್ಪನೇ ಮೋದಿ,  ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ,  ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ ಲಾಂಛನದ ಬಾಯಿ‌ ಮುಚ್ಚಿತ್ತು. ಈಗ‌ ಬಹಳ ಸ್ವಾಭಿಮಾನದಿಂದ ಬಾಯಿ ತೆರೆದಿದೆ. ಮತ್ತೆ ಘರ್ಜನೆ ಮಾಡುತ್ತಿದೆ ಎಂದರು. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ. ಅವರನ್ನು ಆರಾಧಿಸುವವರ ಸಂಖ್ಯೆ 98% ಇದೆ.…

Read More

ಬೆಂಗಳೂರು: ಶಿಥಿಲಾವಸ್ಥೆಯಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೀಪಾಂಜಲಿನಗರದ ಜಂಕ್ಷನ್ ಬಳಿ ನಡೆದಿದೆ. ಶಿಥಿಲಾವಸ್ಥೆಯಲ್ಲಿದ್ದ ತಡೆಗೋಡೆ ಇದಾಗಿದ್ದು, ಭಾರಿ ಮಳೆಯಿಂದಾಗಿ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೃತರನ್ನು ರಾಜಾಮಣಿ ಹಾಗೂ ಬಾಲು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More