Author: admin

ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆ (IAS /IPS ಮತ್ತು ಇತರೆ) ಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ಪರೀಕ್ಷಾ ಪೂರ್ವತರಬೇತಿ ನೀಡಲು ರಾಜ್ಯದ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದವರಿಂದ ಅರ್ಜಿಗಳನ್ನು sw.kar.nic.in Online ಮೂಲಕ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು: ಸೆಪ್ಟಂಬರ 20 ಕೊನೆಯ ದಿನವಾಗಿದೆ ಹೆಚ್ಚಿನ ವಿವರಗಳಿಗೆ ಇಲಾಖಾ ವೆಬಸೈಟ್ sw.kar.nic.in ರಲ್ಲಿ ನೋಡಬಹುದು. ಸ್ಪಷ್ಟೀಕರಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ:8277799990 ನ್ನು ಸಂಪರ್ಕಿಸಬಹುದು. ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅಕ್ಟೋಬರ 10. ರಂದು ಭಾನುವಾರ ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ಪಂಗಡದ (ಎಸ್.ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಿರುವ ಪ್ರಯುಕ್ತ ರಾಜ್ಯ ಮಟ್ಟದಲ್ಲಿ ಶೈಕ್ಷಣ ಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿರವರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿ ಇವರ ಕಛೇರಿಯ ದೂರವಾಣ ಸಂಖ್ಯೆ: 0831-2407246ನ್ನು ಹಾಗೂ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿರವರನ್ನು ಸಂಪರ್ಕಿಸಲು ಕೋರಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ಸಪ್ಟಂಬರ 15ರೊಳಗೆ ಇರುತ್ತದೆ. ನಂತರ ಬಂದಂತಹ…

Read More

ಬೆಂಗಳೂರು ನಗರದಲ್ಲಿ ಒಣ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕಿಸಲು 11.49 ಕೋಟಿ ರೂ.ಗಳ ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಕೇಂದ್ರವನ್ನು ಅಧಿಕಾರಿಗಳು ಶೀಘ್ರದಲ್ಲೇ ನಿಯೋಜಿಸಲಿದ್ದಾರೆ. ಇದು ಮೂಲದಲ್ಲೇ ತ್ಯಾಜ್ಯದ ಪ್ರತ್ಯೇಕತೆಯನ್ನು ಉತ್ತೇಜಿಸುವ ಬಿಬಿಎಂಪಿಯ ಮೂಲ ತಂತ್ರಕ್ಕೆ ವಿರುದ್ಧವಾದ ಯೋಜನೆಯಾಗಿದೆ. ನಗರಾಭಿವೃದ್ಧಿ ಇಲಾಖೆ (ಯುಡಿಡಿ) ಯೋಜನೆಗೆ ಮಂಜೂರಾತಿ ನೀಡಿದ್ದು, ಐದು ವರ್ಷಗಳವರೆಗೆ ಕಾರ್ಯಾಚರಣೆ ಮತ್ತು ನಿರ್ವಹಣೆಗೆ (ಒ & ಎಂ) 17.33 ಕೋಟಿ ರೂ. ಖರ್ಚು ಮಾಡಲಿದೆ ಎನ್ನಲಾಗಿದೆ. ಬಂಡವಾಳ ವೆಚ್ಚ ಸೇರಿದಂತೆ 28.82 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯನ್ನು ಪಾಣಾಟಿ ವಿಠಲನಾಥ ರೆಡ್ಡಿ ಅವರ ಪರಿಶುದ್ಧ ವೆಂಚರ್ಸ್‌ಗೆ ನೀಡಲಾಗಿದೆ. ಸಂಸ್ಥೆಯು ಇತ್ತೀಚೆಗೆ ಏಳು ವರ್ಷಗಳ ಕಾಲ 305 ಕೋಟಿ ರೂಪಾಯಿಗಳಲ್ಲಿ ಮೂರು ದೊಡ್ಡ ಕಸ ವರ್ಗಾವಣೆ ಕೇಂದ್ರಗಳನ್ನು ಸ್ಥಾಪಿಸುವ ಗುತ್ತಿಗೆಯನ್ನು ಪಡೆದುಕೊಂಡಿತ್ತು. ಸರ್ಕಾರದ ಆದೇಶದ ಪ್ರಕಾರ, ಎರಡು ಕಂಪನಿಗಳು ಟೆಂಡರ್‌ನಲ್ಲಿ ಭಾಗವಹಿಸಿದ್ದವು. ಆ ಇನ್ನೊಂದು ಕಂಪನಿ ಸಾಧನಾ ಎನ್ವಿರೋ ಪ್ರೈವೇಟ್ ಲಿಮಿಟೆಡ್ ಆಗಿದೆ. ನಗರದಲ್ಲಿ ಉತ್ಪಾದನೆಯಾಗುವ 4,200 ಮೆಟ್ರಿಕ್‌ ಟನ್‌ ತ್ಯಾಜ್ಯದಲ್ಲಿ ಶೇ.…

Read More

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ವಾರಾಂತ್ಯದಲ್ಲಿ ಕರಾವಳಿ ಮತ್ತು ಮಹಾರಾಷ್ಟ್ರದ ಮಧ್ಯ ಭಾಗಗಳಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಯಗಡ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೊಂಕಣ-ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ (ಸೆಪ್ಟೆಂಬರ್ 09-12) ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮುಂಬೈ, ಪುಣೆ, ಸತಾರಾ, ಕೊಲ್ಲಾಪುರ, ನಾಸಿಕ್, ವಿದರ್ಭ ಮತ್ತು ಮರಾಠವಾಡ ಪ್ರದೇಶಗಳಲ್ಲಿ ಮಳೆಯ ಬಗ್ಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಸಂಜೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅಧಿಕ ಮಳೆ ಸುರಿದಿದೆ. ಜಲಾವೃತಗೊಂಡ ರಸ್ತೆಗಳಿಂದಾಗಿ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಭಾರಿ ಮಳೆಯಿಂದಾಗಿ ನಾಸಿಕ್‌ನ ಗೋದಾವರಿ ನದಿಯ ದಡದಲ್ಲಿರುವ ಅನೇಕ ದೇವಾಲಯಗಳು ಜಲಾವೃತಗೊಂಡಿವೆ. ಜೊತೆಗೆ ರಾಜ್ಯದಲ್ಲಿ ಪ್ರವಾಹದಂತಹ…

Read More

ಗಣೇಶ ಗಣೇಶ ಮೌರ್ಯ ಮುಂದಿನ ವರ್ಷ ಬೇಗನೆ ಬಾ ಎಂಬ ಜಯ ಘೋಷದೊಂದಿಗೆ ಬೆಳಗಾವಿ ಜನತೆ ಬಲು ಅದ್ಧೂರಿಯಿಂದ ವಿಘ್ನೇಶ್ವರನಿಗೆ ವಿದಾಯ ಹೇಳಿದರು. ಎರಡು ವರ್ಷಗಳ ನಂತರ ಬೆಳಗಾವಿ ನಗರವನ್ನೇ ಗಣೇಶ ಉತ್ಸವ ವರ್ಣ ರಂಜಿತ ಇತಿಹಾಸವನ್ನು ಪುನರಗೊಳಿಸಿತ್ತು. ಹತ್ತು ದಿನಗಳ ಕಾಲ ಅದ್ಧೂರಿಯಿಂದ ಆಚರಣೆ ಮಾಡಲಾಯಿತು. ಗಣೇಶ್ ಉತ್ಸವವನ್ನು ಅತಿ ಉಲ್ಲಾಸದಿಂದ ಬೆಳಗಾವಿ ಜನತೆ ಆಚರಣೆ ಮಾಡಿದರು. ಗಣಪತಿ ವಿಸರ್ಜನೆ ಮೆರವಣಿಗೆ ಮೂಲಕ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದರು. ಬೆಳಗಾವಿಯಲ್ಲಿ ಕಳೆದು ಹೋದ ಗತವೈಭವ ಮತ್ತೆ ಗಣೇಶ್ ವಿಸರ್ಜನೆ ಮೆರವಣಿಗೆಯಲ್ಲಿ ಕಂಡು ಬಂತು. ಇನ್ನು ರಾಜಕೀಯ ಪಕ್ಷಗಳು ಗಣೇಶ ಉತ್ಸವದಲ್ಲಿಯೂ ತಮ್ಮ ರಾಜಕೀಯ ಶಕ್ತಿ ಪ್ರದರ್ಶನದಲ್ಲಿ ತೊಡಗಿರುವುದು ಸಾಮಾನ್ಯವಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿಂದು ಬಿಜೆಪಿ ಬೃಹತ್ ಜನಸ್ಪಂದನಾ ಸಮಾವೇಶ ನಡೆಯಲಿದ್ದು, ಸರ್ಕಾರದ ಮೂರು ವರ್ಷದ ಸಾಧನೆಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಶಕ್ತಿ ಪ್ರದರ್ಶಕ್ಕೆ ವೇದಿಕೆ ಸಜ್ಜಾಗಿದೆ. 40 ಎಕರೆ ಜಾಗದಲ್ಲಿ ಜನಸ್ಪಂದನಾ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ತೆರಳಲು ಬಿಜೆಪಿ ವಿಶೇಷ ಬಸ್ ವ್ಯವಸ್ಥೆಯನ್ನು ಮಾಡಿದೆ. ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿರುವ ಬಿಜೆಪಿ ಜನಸ್ಪಂದನಾ ಸಮಾವೇಶಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ನಾಲ್ಕು ಜಿಲ್ಲೆಗಳ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇತ್ತ ಕಾಂಗ್ರೆಸ್ ಸಮಾವೇಶದ ವಿರುದ್ಧ ಕಿಡಿಕಾರಿದ್ದು, ಇದು ಬಿಜೆಪಿ ಭ್ರಷ್ಟೋತ್ಸವ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಬೈಕ್ ಮೇಲೆ ಮರ ಬಿದ್ದು ಮಹಿಳೆ ಸಾವು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ರುಕ್ಮಿಣಿ ಶ್ರೀಶೈಲ್ ಮರನೂರ (40) ಮೃತ ದುರ್ದೈವಿ. ಬಾಗಲಕೋಟೆಯ ಜಿಲ್ಲೆಯ ಕುಳಲಿ ಗ್ರಾಮದ ರುಕ್ಮಿಣಿ ಮರನೂರ ತಮ್ಮ ಪತಿ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಜೋರಾಗಿ ಬಿಸಿದ ಗಾಳಿಯಿಂದ ಆಲದ ಮರದ ಕೊಂಬೆ ಅವರ ಮೇಲೆ ಬಿದ್ದಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ರುಕ್ಮಿಣಿ ಮೇಲೆ ಮರದ ರಂಬೆ ಬಿದ್ದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗ: ಕುಷ್ಟರೋಗ ಪ್ರಕರಣ ನಿವಾರಣೆಯ ಕಾರ್ಯಕ್ರಮದ ಅಡಿಯಲ್ಲಿ  ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾಕ್ಟರ್ ರೇಖಾ ಎಸ್.  ಆರೋಗ್ಯ ಕಾರ್ಯಕರ್ತರು ಕುಷ್ಠರೋಗ ಪತ್ತೆ ಕಾರ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು. ಗೋನೂರು ಗ್ರಾಮದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತರು ಆಗಮಿಸಿ  ಕುಷ್ಟರೋಗದ ಬಗ್ಗೆ ಮಾಹಿತಿ ನೀಡಿದ್ದಾರೆಯೇ ಎಂದು ರೇಖಾ ಪರಿಶೀಲನೆ ನಡೆಸಿದರು. 2025ರ ವೇಳೆಗೆ ಕುಷ್ಟರೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿ ವರ್ಷವೂ  ನಿಯಂತ್ರಣಕ್ಕೆ ತರುವ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, 18 ದಿನಗಳ ಕಾಲ ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಕುಷ್ಟರೋಗ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಪರಿಶೀಲನೆ ಕಾರ್ಯಕ್ಕೆ ಅಧಿಕಾರಿಗಳು ಆರೋಗ್ಯ ಕಾರ್ಯಕರ್ತರು  ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಸಾಥ್ ನೀಡಿದರು. ಈ ವೇಳೆ  ಡಿ.ಎಲ್.ಒ.  ಡಾ.ರೂಪ ಆರ್. ಡಿ. ಎನ್. ಟಿ.,  ತಂಡದ ಎಂ. ಚಂದ್ರಪ್ಪ ವೈ. ತಿಪ್ಪೇಶ್,  ರಾಜೇಂದ್ರ ಪ್ರಸಾದ್,  ಕೆ. ಪಿ. ಎಂ. ಡಬ್ಲ್ಯೂ …

Read More

ಮಧುಗಿರಿ: ಪಟ್ಟಣದ ಶ್ರೀ ಮಲ್ಲೇಶ್ವರ ಸ್ವಾಮಿ ಹಾಗೂ ವೆಂಕಟರಮಣ ಸ್ವಾಮಿ ದೇವಸ್ಥಾನದ ಪಕ್ಕದ ಬಾಲ ಗಂಗಾಧರನಾಥ ತಿಲಕ್ ಮಂಟಪದಲ್ಲಿ ಶ್ರೀ ವಿದ್ಯಾ ಗಣಪತಿ ಮಹಾಮಂಡಳಿ ಮಧುಗಿರಿ ಇವರ ವತಿಯಿಂದ ಗಣೇಶೋತ್ಸವ ನಡೆಯಿತು. ಸುಮಾರು 9 ದಿನಗಳ ಕಾಲ ವಿಜೃಂಭಣೆಯಿಂದ ನಡೆದ ಗಣೇಶೋತ್ಸವದಲ್ಲಿ ಪ್ರತಿದಿನವೂ ಕೂಡ ಒಂದೊಂದು ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕೊನೆ ದಿನ ವಿಶೇಷ ಮೆರವಣಿಗೆಯೊಂದಿಗೆ ಶ್ರೀ ವಿದ್ಯ ಗಣಪತಿ ಮಹಾಮಂಡಳಿ ಸಮಿತಿ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ಪದಾಧಿಕಾರಿಗಳು ನಗರದ ಯುವಕರು ವಿನಾಯಕನನ್ನು ಪೂಜಿಸಿ ನಂತರ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ರಾಹುಲ್ ಕುಮಾರ್ ರವರಿಗೆ ಮಧುಗಿರಿ ನಗರದ ಜನತೆ ಹಾಗೂ ಪಕ್ಕದೂರಿನ ಗ್ರಾಮಸ್ಥರು ಸ್ವಾಗತಿಸಿ ವಿಶೇಷವಾಗಿ ಸನ್ಮಾನಿಸಲಾಯಿತು. ಅದ್ದೂರಿ ಮೆರವಣಿಗೆಯಲ್ಲಿ ನಾಸಿಕ್ ಡೋಲು, ಬೊಂಬೆ ಕುಣಿತ ಸದ್ದಿಗೆ ಮಕ್ಕಳು,ಯುವಕರು ಹಾಗೂ ಯುವತಿಯರು ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು. ತದನಂತರ ಒಕ್ಕಲಿಗರ ಭವನ ನೀರಿನ ತಟ್ಟಿಯಲ್ಲಿ ಗಣೇಶನನ್ನು ಶ್ರದ್ದಾ ಭಕ್ತಿಯಿಂದ ವಿಸರ್ಜನೆ…

Read More

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯದ್ಯಂತ ಭೀಮ ಯಾತ್ರೆ ಬಳಗದಿಂದ ಸದಸ್ಯತ್ವಕ್ಕೆ ಚಾಲನೆ ನೀಡಲಾಯಿತು. ತಾಲೂಕಿನ ಹಂಚಿಬರಟ್ಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೀಮ ಯಾತ್ರೆ ಬಳಗ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭೀಮ ಯಾತ್ರೆ ಬಳಗದ ಸದಸ್ಯ ಪ್ರಕಾಶ್, ಭೀಮ ಯಾತ್ರೆ ಒಂದು ಸಮಾನತೆಯನ್ನು ಸಾರುತ್ತದೆ ಮತ್ತು ಯಾವುದೇ ರಾಜಕೀಯಕ್ಕೆ ಕಿವಿಕೊಡದೆ ಬಾಬಾ ಸಾಹೇಬರ ಸಮಾನತೆ ಸಂದೇಶಕ್ಕೆ ನಾವು ಬದ್ಧರಾಗಬೇಕೆಂದರು. ವಕೀಲ ರವಿ ಮಾತನಾಡಿ, ಭೀಮ ಯಾತ್ರೆ ಬಳಗ ಕೇವಲ ಒಂದು ಸಮಾಜಕ್ಕೆ ಸೀಮಿತವಲ್ಲ ಎಲ್ಲ ಜನಾಂಗದ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಈಗಿನ ಸಂದರ್ಭದಲ್ಲಿ ತಾಲೂಕಿನ ಸದಸ್ಯತ್ವ ನಡೆಯುತ್ತಿದೆ ಎಲ್ಲರೂ ಸದಸ್ಯ ಪಡೆದುಕೊಳ್ಳಿ ಎಂದು ಮನವಿ ಮಾಡಿದರು. ಇದೆ ಸಂದರ್ಭದಲ್ಲಿ ಪ್ರಸನ್ನ, ರಾಘವೇಂದ್ರ, ಪ್ರಕಾಶ್, ಶ್ರೀನಿವಾಸ್, ಜಗದೀಶ್, ಕುಮಾರಸ್ವಾಮಿ ಶಿವಕುಮಾರ್ ಮೊದಲಾದವರಿದ್ದರು. ಕಾರ್ಯಕ್ರಮದಲ್ಲಿ ಭೀಮ ಯಾತ್ರೆಯ ಸದಸ್ಯರಾದ ಶರಣಪ್ಪ ಜಿ. ರವೀಂದ್ರ ಡಿ. ಕುಮಾರಸ್ವಾಮಿ ಮಂಜುನಾಥ ಎಸ್. ರಘು ಆರ್. ಪ್ರಕಾಶ್ ಜೆ. ಪ್ರಸನ್ನ ಕೃಷ್ಣಮೂರ್ತಿ ರುದ್ರಮುನಿ ಶಾಂತಕುಮಾರ್ ಕಣಮೇಶ್ ನರಹರಿ ಜಯಪ್ಪ…

Read More