Subscribe to Updates
Get the latest creative news from FooBar about art, design and business.
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
- ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
Author: admin
ತುಮಕೂರು: ಗುಬ್ಬಿ ತಾಲ್ಲೂಕಿನಲ್ಲಿ ನಡೆದಿರುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಎಸ್.ಡಿ ದಿಲೀಪ್ ಕುಮಾರ್ ಮಾಡಿರುವ ಆರೋಪಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಕಲಿ ದಾಖಲೆ ಸೃಷ್ಟಿಸಿ 450 ಎಕರೆ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದಲ್ಲಿ ಶಾಸಕ ಶ್ರೀನಿವಾಸ್ ಎ1 ಆರೋಪಿ ಎಂದು ಬಿಜೆಪಿಯ ದಿಲೀಪ್ ಹೇಳಿದ್ದಾರೆ. ಅವರಿಗೆ ಸರಿಯಾದ ಮಾಹಿತಿ ಇಲ್ಲ ಎಂದರು. 2004 ರಲ್ಲಿ ಕದ್ದು ಮೈನ್ಸ್ ಹೊಡೆದು ಅವರ 12 ಲಾರಿ ಹಾಗೂ ಹಿಟಾಚಿಯನ್ನು ಪೊಲೀಸರು ಸೀಜ್ ಮಾಡಿದ್ದರು. ಅವರನ್ನು ಬರೀ ಚಡ್ಡಿಯಲ್ಲಿ ಸ್ಟೇಷನ್ ನಲ್ಲಿ ಕೂರಿಸಿದ್ದರು. ಅವಾಗ ಸ್ಟೇಷನ್ ಗೆ ಹೋಗಿ ಬಿಡಿಸಿದ್ದು ನಾನು. ಆ ಮನುಷ್ಯ ಇವತ್ತು ಮಾತನಾಡ್ತಾನೆ ಎಂದು ಹಳೆಯದನ್ನು ಕೆದಕಿ ಕಿಡಿಕಾರಿದರು. ಇವಾಗ ಅರೆಸ್ಟ್ ಆಗಿರುವ ಆರೋಪಿ ಕರಿಯಣ್ಣ ಯಾರು? ನನ್ನ ಹಿಂದೆ ಇರುವವನಾ? ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಅಕ್ರಮ ಮಾಡಿರುವ ವಿಚಾರ…
ತುಮಕೂರು: ಆಂಜನೇಯಸ್ವಾಮಿ ಜಾತ್ರಾ ರಥೋತ್ಸವದಲ್ಲಿ ಹಿಂದೂ ಮುಸಲ್ಮಾನರ ಸಾಮರಸ್ಯ ಸಾರಿದರು.ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಡೆದ ಆಂಜನೇಯಸ್ವಾಮಿ ಜಾತ್ರಾ ರಥೋತ್ಸವದಲ್ಲಿ ಈ ಘಟನೆ ನಡೆಯಿತು. ಆಂಜನೇಯ ಸ್ವಾಮಿ ರಥೋತ್ಸವದ ವೇಳೆ ಮಾರ್ಗಮಧ್ಯೆ ಸಿಕ್ಕ ಮಸೀದಿ ಬಳಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮುಸ್ಲಿಂ ಬಾಂಧವರು ಆಂಜನೇಯ ಸ್ವಾಮಿ ಗೆ ವಿಶೇಷ ಅರ್ಚನೆ ಮಾಡಿಸುವ ಮೂಲಕ ಸಾಮರಸ್ಯ ಸಂದೇಶ ಸಾರಿದರು. ಮಸೀದಿ ಮುಂಭಾಗ ಆಂಜನೇಯ ಸ್ವಾಮಿ ರಥವನ್ನು ಹಿಂದೂ ಮುಸಲ್ಮಾನರು ಜೊತೆಯಾಗಿ ಎಳೆಯುವ ಮೂಲಕ ಸಾಮರಸ್ಯದ ಸಂದೇಶ ಸಾರಿದರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ದುರ್ದೈವಿಯನ್ನು ಎಸ್.ವೆಂಕಟಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಮದುವೆಯಾಗಿದ್ದು, ಹಲವು ವರ್ಷಗಳ ಹಿಂದೆಯೇ ಇವರನ್ನು ಬಿಟ್ಟು ಗಂಡ ಹೋಗಿದ್ದು, ಒಂಟಿಯಾಗಿ ನಾಯನಹಳ್ಳಿ ಗ್ರಾಮದಲ್ಲಿ ವಾಸವಿದ್ದರು. ದುಷ್ಕರ್ಮಿಗಳು ನಿನ್ನೆ ಮನೆಗೆ ನುಗ್ಗಿ ಆಕೆಯನ್ನ ಕೊಂದು ಮನೆಯಲ್ಲಿ ಚಿನ್ನ-ನಗದು ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ 2019ರಲ್ಲಿ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. 2019ರ ಏಪ್ರಿಲ್ 13ರಂದು ‘ದೊಡ್ಡನೆಕ್ಕುಂದಿ ಗ್ರಾಮದ ಕೋದಂಡರಾಮ ಸರ್ಕಲ್ ದೇವಾಲಯದಲ್ಲಿ ನಡೆಯುತ್ತಿದ್ದ ಶ್ರೀರಾಮನವಮಿ ಪಲ್ಲಕ್ಕಿ ಉತ್ಸವದ ವೇಳೆ ಅನುಮತಿ ಪಡೆಯದೆ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದ ಅಂಗವಾಗಿ ರೋಡ್ ಶೋ ನಡೆಸಿದರು’ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ಮೆಯೊಹಾಲ್ ಕೋರ್ಟ್ ಸಂಖ್ಯೆ 43ರಲ್ಲಿ ದಾಖಲಾಗಿರುವ ಎಫ್ಐಆರ್ ಮಮತ್ತು ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ಎಸ್.ಎ. ಅಹಮದ್ ಅವರು, ‘ಕಾನೂನುಬಾಹಿರವಾಗಿ ದಾಖಲಾಗಿರುವ ಈ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ…
ಮದ್ಯವ್ಯಸನಿಯಾಗಿದ್ದ ಯುವಕನೊಬ್ಬ ಹೆತ್ತತಾಯಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ದಾಂಡೇಲಿಯಲ್ಲಿ ನಡೆದಿದೆ.ಆರೋಪಿಯನ್ನು ರೋಕಿ ಜಾನ್ ಪುಡ್ತೋಳ(24) ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿ ಜತೆ ದಾಂಡೇಲಿ ಪಟ್ಟಣದ ಅರಣ್ಯ ಇಲಾಖೆ ಡಿಪೋ ಆವರಣದಲ್ಲಿ ವಾಸವಾಗಿದ್ದ. ಎಂದಿನಂತೆ ಶನಿವಾರ ರಾತ್ರಿಯೂ ಮದ್ಯ ಸೇವಿಸಿ ಮನೆಗೆ ಬಂದಿದ್ದ ಮಗ ನಿದ್ದೆ ಮಾಡುತಿದ್ದ ತಾಯಿಯನ್ನು ಎಬ್ಬಿಸಿ ಏನೋ ಮಾತಾಡಬೇಕು ಎಂದು ಸೋಫಾ ಬಳಿ ಕರೆದು ಅತ್ಯಾಚಾರವೆಸಗಿದ್ದಾನೆ. ಈ ಘಟನೆಯಿಂದ ಕಂಗಾಲಗಿದ್ದ ತಾಯಿಯು ಮಗನಿಂದ ತಪ್ಪಿಸಿಕೊಂಡು ತನ್ನ ಕೋಣೆ ಸೇರಿಕೊಂಡಿದ್ದರು.ಮರುದಿನ ಬೆಳಗ್ಗೆ 6ರ ಸುಮಾರಿಗೆ ಆರೋಪಿ ‘ತಾನು ಎಲ್ಲಿಯೋ ಹೋಗಬೇಕು’ ಎಂದು ತಾಯಿಯನ್ನು ಕರೆದು ಪುನಃ ಅತ್ಯಾಚಾರವೆಸಗಿದ್ದಾನೆ. ಮಾತ್ರವಲ್ಲದೆ ಬೆದರಿಕೆಯನ್ನು ಹಾಕಿದ್ದಾನೆ.ಎಂದು ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ಮತ್ತು ಶಿರಾಡಿ ಘಾಟ್ ನಡುವಿನ ಹೆದ್ದಾರಿ ಇತರ ಸೇತುವೆಗಳ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸಕಲೇಶಪುರ ಹಾಗೂ ಶಿರಾಡಿ ಘಾಟ್ನನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಿರಾಡಿಘಾಟ್ ಮೂಲಕ ಪ್ರತಿನಿತ್ಯ ಸರಾಸರಿ 30 ಸಾವಿರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ರಸ್ತೆ ಬಂದ್ ಮಾಡಿದರೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತದೆ. ಆದ್ದರಿಂದ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ದುರಸ್ತಿ ಕಾಮಗಾರಿಗಳಿಗೆ ಅವಕಾಶ ಮಾಡಿಕೊಡಲಾಗುವುದು, ತೀರಾ ಅನಿವಾರ್ಯವಾದರೆ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಸದ್ಯಕ್ಕಂತೂ ಶಿರಾಡಿ ಘಾಟ್ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ಮಳೆ ಮತ್ತಿತರ ನೈಸರ್ಗಿಕ ಪ್ರಕೋಪಗಳಿಂದ ರಸ್ತೆಗಳು ಅಥವಾ…
ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ವರುಣ ಅಬ್ಬರ ತೀವ್ರಗೊಂಡಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ನಾಲ್ಕು ದಿನಗಳ ಭಾರಿ ಮಳೆಯಾಗಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಮುಂದುವರೆದಿದ್ದು, ಉತ್ತರ ಕರ್ನಾಟಕ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ನಾಲ್ಕು ದಿನ ಮಳೆ ಸುರಿಯಲಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದು, ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದಿದೆ. ಅಪಾಯದ ಸ್ಥಿತಿಯಲ್ಲಿದ್ದು ಗುಡ್ಡದ ಮತ್ತೊಂದು ಭಾಗ ಕುಸಿದಿರುವ ಘಟನೆ…
ಕಾಂಗ್ರೆಸ್ ಪಕ್ಷದಲ್ಲಿ ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದ್ದರೆ ಮೂಲ ಕಾಂಗ್ರೆಸ್ಸಿಗರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ನಲ್ಲಿ ಅಸಹನೆ, ಅಸಹಿಷ್ಣುತೆಯ ಅಲೆ ಪ್ರಬಲವಾಗಿ ಬೀಸುತ್ತಿದೆ. ಇಂದು ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿರುವ ಮಲ್ಲಿಕಾರ್ಜುನ ಖರ್ಗೆಯವರು ಮತ್ತೊರ್ವರ ಸಿಎಂ ಕುರ್ಚಿಯ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಅವರ “ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ” ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಕೆಣಕಿದೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯರವರ ಚಾಕರಿ ಮಾಡುವ ಸುಯೋಗ ಬಂದಿದೆ ಎಂದು ವ್ಯಂಗ್ಯವಾಡಿರುವ ಬಿಜೆಪಿ. ಸಿದ್ದರಾಮಯ್ಯ ಅವರ ಬಗ್ಗೆ ಇರುವ ಬೇಸರವನ್ನು ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಹರಿಪ್ರಸಾದ್ ಈ ರೀತಿ ಹೊರಹಾಕಿದ್ದಾರೆ. ಅಧಿಕಾರದಾಹಿ ಸಿದ್ದರಾಮಯ್ಯ ವಿರುದ್ಧ ಸಹನೆಯ ಕಟ್ಟೆ ಒಡೆದಿದೆ. ಎಷ್ಟೇ ಆದರೂ ಹರಿಪ್ರಸಾದ್ ಮೂಲ ಕಾಂಗ್ರೆಸ್ಸಿಗ, ವಲಸೆ ಸಿದ್ದರಾಮಯ್ಯ ಅವರನ್ನು ಎಷ್ಟು ವರ್ಷಗಳ ಕಾಲ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದೆ. ವರದಿ ಆಂಟೋನಿ ಬೇಗೂರು…
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ಹೆಚ್.ಪಿ. ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಬಂದ ವಿಚಾರಕ್ಕೆ ಸುಪ್ರೀಂ ಕೋರ್ಟ್ ಕೆಂಡಾಮಂಡಲವಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾ. ಸಂದೇಶ್ ಅವರಿಗೆ ವರ್ಗಾವಣೆಯಾಗುವ ಬೆದರಿಕೆ ಬಂದ ಬಗ್ಗೆ ಸ್ವತ: ನ್ಯಾಯಾಧೀಶರೇ ಪ್ರಸ್ತಾಪಿಸಿ, ಎಲ್ಲದಕ್ಕೂ ನಾನು ಸಿದ್ಧನಿರುವೆ, ಸಂವಿಧಾನಕ್ಕೆ ಬದ್ಧನಾಗಿ ಕರ್ತವ್ಯ ನಿರ್ವಹಿಸುವೆ ಎಂದು ಕೋರ್ಟ್ನಲ್ಲಿ ಹೇಳಿದ್ದು, ವೈರಲ್ ಆಗಿತ್ತು. ಈ ವಿಡಿಯೋಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಬಂದಾಗ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರು ಗರಂ ಆಗಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮಿಳುನಾಡಿನ ಅಣ್ಣಾ ಡಿಎಂಕೆಯ ನಾಯಕತ್ವಕ್ಕಾಗಿ ವಿಚಾರವಾಗಿ ಇಂದು ನಡೆದ ಬೆಳವಣಿಗೆಗಳು ಹಾದಿ-ಬೀದಿ ರಂಪಕ್ಕೆ ಸಾಕ್ಷಿಯಾಗಿದೆ. ಪಕ್ಷದ ಹಂಗಾಮಿ ಪ್ರಧಾನ ಕಾಂiiದರ್ಶಿಯಾಗಿ ಎಡಪ್ಪಾಡಿ ಪಳನಿ ಸ್ವಾಮಿ ಆಯ್ಕೆಯಾದ ಬೆನ್ನಲ್ಲೇ ಈ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಪಳನಿ ಸ್ವಾಮಿ ಬಣದ ಆಕ್ರೋಶ ಭುಗಿಲೆದ್ದಿದೆ. ಪನ್ನೀರ್ ಸೆಲ್ವಂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸುವ ನಿuಯವನ್ನು ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ. ಚೆನ್ನೈನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಸಚಿವ ಆರ್.ಬಿ. ಉದಯ್ಕುಮಾರ್ ಹಂಗಾಮಿ ಅಧ್ಯಕ್ಷರಾಗಿ ಎಡಪ್ಪಾಡಿ ಪಳನಿ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು. ಈ ಮೂಲಕ ಕಾನೂನು ಹೋರಾಟದಲ್ಲಿ ಪಳನಿ ಸ್ವಾಮಿ ಮೇಲುಗೈ ಸಾಧಿಸಿದ್ದು, ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನರಾದ ಐದೂವರೆ ವರ್ಷದ ಬಳಿಕ ಪಳನಿ ಸ್ವಾಮಿ ಅವರು ಅಣ್ಣಾ ಡಿಎಂಕೆ ಪಕ್ಷವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಣ್ಣಾ ಡಿಎಂಕೆ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್…