Subscribe to Updates
Get the latest creative news from FooBar about art, design and business.
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
- ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
- ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
- ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
- ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
- 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
- ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
Author: admin
ಸರಗೂರು: ತಾಲ್ಲೂಕಿನ ಬಿ.ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲನಹಳ್ಳಿ ಗ್ರಾಮದಲ್ಲಿ ಅಕ್ರಂ ಪಾಷಾ ಎಂಬುವರ ಮನೆ ಆನೆಯೊಂದು ದಾಳಿ ನಡೆಸಿದ್ದು, ಬಾಗಿಲು ಮತ್ತು ಗೋಡೆಗೆ ಹಾನಿಯೆಸಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಮೋಳೆಯೂರು (ಶೀಗೊಡಿ) ವಲಯ ಕಾಡಿನಿಂದ ಬಂದ ಸಾಕಾಣೆ ಅಕ್ರಂ ಪಾಷಾ ಅವರ ಮನೆಯ ಮೇಲೆ ದಾಳಿ ನಡೆಸಿದೆ. ಆನೆ ದಾಳಿ ನಡೆಸುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರೂ ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯವಹಿಸಿದ್ದು, ಇದರಿಂದಾಗಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ ಘಟನೆ ನಡೆದಿದ್ದರೆ, ಅರಣ್ಯಾಧಿಕಾರಿಗಳು 11 ಗಂಟೆಯ ವೇಳೆಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಆಕ್ರೋಶಿತ ಜನರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆತ್ತಿಕೊಂಡರು. ಅಲ್ಲದೇ ನಷ್ಟಕ್ಕೊಳಗಾಗಿರುವ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಮಾತನಾಡಿದ ಅಧಿಕಾರಿ, ಇದು ಕಾಡಾನೆ ಅಲ್ಲ. ಇಂದು ಸಾಕಾಣೆ ಎಂದು ತಿಳಿಸಿದರು. ಮನೆಗೆ ಹಾನಿ ಮಾಡಿ, ಪದಾರ್ಥಗಳನ್ನು ನಾಶ ಮಾಡಿರುವ ಹಿನ್ನೆಲೆಯಲ್ಲಿ ನಮ್ಮ ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪರಿಹಾರವನ್ನು ನೀಡುತ್ತೆವೆ…
ತುಮಕೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು, ಮತ್ತು ಅನೇಕ ಅಂಬೇಡ್ಕರ್ ವಾದಿ ಸಂಘಟನೆಗಳು ಸೇರಿ ಸೆಪ್ಟಂಬರ್ 10ರಂದು ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಭೀಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಸುಮಾರು 12 ಗಂಟೆಯ ವೇಳೆಗೆ ಟೌನ್ ಹಾಲ್ ನಿಂದ ತುಮಕೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಯಲಿದ್ದು, 2 ಗಂಟೆಗೆ ತುಮಕೂರು ಬಸ್ ನಿಲ್ದಾಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜ್ಞಾನಪ್ರಕಾಶ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಲಿದ್ದಾರೆ. ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಲನ ಚಿತ್ರ ನಟ ಚೇತನ್ ಅಹಿಂಸಾ ಅವರು ಭಾಗವಹಿಸಲಿದ್ದಾರೆ. ಉಳಿದಂತೆ ಹಲವು ಸಂಘಟನೆಗಳ ಮುಖಂಡರು, ಚಿಂತಕರು, ಅಂಬೇಡ್ಕರ್ ವಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಜನರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮತ್ತು ಮಹಿಳೆಯರನ್ನು ಸ್ವಾವಲಂಬಿಯಾಗಿಸುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಚಗಾಂವ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವೀ ಹೆಗ್ಗಡೆಯವರ ವ್ಯಕ್ತಿತ್ವ ಅತ್ಯಂತ ಎತ್ತರದ್ದು. ಅವರ ದೂರದೃಷ್ಟಿ ಮತ್ತು ವಿಶಾಲ ಮನೋಭಾವದಿಂದಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ. ಒಂದು ಸರಕಾರದ ರೀತಿಯಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಹೆಬ್ಬಾಳಕರ್ ಹೇಳಿದರು. ಸಾಮೂಹಿಕ ಸತ್ಯನಾರಾಯಣ ಪೂಜಾ ವ್ಯವಸ್ಥಾಪನ ಸಮಿತಿ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕುದ್ರೆಮನಿ, ಕೊನೆವಾಡಿ, ಅತಿವಾಡ, ಬಾಚಿ ಹಾಗೂ ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಉಚಗಾಂವ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು…
ತೀವ್ರ ಹೃದಯಾಘಾತದಿಂದ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಂದು ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಉಮೇಶ್ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ್ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು ಬೆಂಗಳೂರು ದೆಹಲಿಯಲ್ಲಿ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ್ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅವರ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೋಲಾರ: ಭಾರತ-ಪಾಕಿಸ್ತಾನ ಪಂದ್ಯಾವಳಿ ಸಂದರ್ಭದಲ್ಲಿ ಪಾಕ್ ಪರವಾಗಿ ಸ್ಟೇಟಸ್ ಹಾಕಿದ್ದಂತ ಮೂವರ ವಿರುದ್ಧ, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ಓರ್ವನನ್ನು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸ ಪುರ ತಾಲೂಕಿನಲ್ಲಿ ನಡೆದಿದೆ. ಭಾರತ ಮತ್ತು ಪಾಕಿಸ್ತಾನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಬೆಂಬಲಿಸಿ ಸ್ಟೇಟಸ್ ಹಾಕಲಾಗಿತ್ತು. ಸೋಹೆಲ್, ತೋಹಿಬ್ ಪಾಷ ಹಾಗೂ ಮನ್ಸೂರ್ ಉಲ್ಲಾ ಎಂಬುವರು ಪಾಕ್ ಪರ ಸ್ಟೇಟಸ್ ಹಾಕಿದ್ದರು. ಇದನ್ನು ಗಮನಿಸಿದಂತ ಪುರಸಭೆಯ ನಾಮನಿರ್ದೇಶಿತ ಸದಸ್ಯ ರಾಮಾಂಜಿಯವರು ಶ್ರೀನಿವಾಸಪುರ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಸೊಹೇಲ್ ಎಂಬಾತನನ್ನು ಬಂಧಿಸಿದ್ದಾರೆ. ಇನ್ನುಳಿದ ತೊಹೀಬ್ ಹಾಗೂ ಮನ್ಸೂರ್ ಹಾಗಿ ಹುಡುಕಾಟ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾರವಾರ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರವಾರ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟ, ಐವರ ಸ್ಥಿತಿ ಗಂಭೀರ ಗಾಯಗೊಂಡ ಘಟನೆ ಗೋವಾ ರಾಜ್ಯದ ಕಾಣಕೋಣ ಬಳಿ ನಡೆದಿದೆ. ಸದ್ಯ ಗೋವಾದ ವಾಸ್ಕೊದಲ್ಲಿ ನೆಲೆಸಿರುವ ಉಲ್ಲಾಸ ನಾಗೇಕರ್ (64), ಇವರ ಪತ್ನಿ ವೀಣಾ ಉಲ್ಲಾಸ ನಾಗೇಕರ್ (60), ಪುತ್ರ ಹರೀಶ ಉಲ್ಲಾಸ ನಾಗೇಕರ್(35) ಮೃತರು. ಐವರು ಗಂಭೀರವಾಗಿ ಗಾಯಗೊಂಡಿದ್ದು, ದಕ್ಷಿಣ ಗೋವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತಕ್ಕೀಡಾದ ಕಾರುಗಳು ನುಜ್ಜುಗುಜ್ಜಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಇತ್ತೀಚಿಗೆ ಆಂಧ್ರಪ್ರದೇಶದಲ್ಲಿ ಬಳಿಯಲ್ಲಿ ಗಾಂಜಾ ಗ್ಯಾಂಗ್ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ಸಿಬ್ಬಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ರಾಜ್ಯ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ, ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ತಿಳಿಸಲಾಗಿದೆ. ಪೊಲೀಸರ ಹಿತದೃಷ್ಠಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸಿ, ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಕರ್ನಾಟಕದ ಅಭಿವೃದ್ಧಿ ಎರಡು ಭಾಗಗಳಾಗಿ ವಿಂಗಡಣೆಗೊಂಡಿದೆ ಮತ್ತು ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯ ಪಾಲು ದೊರಕದೇ ತಾರತಮ್ಯ ನಡೀತಾನೆ ಇದೆ. ಅದಕ್ಕೆ ನಾನು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಎಂದು ಅನಿಸುತ್ತದೆ. ಈ ಮಾತನ್ನು ಕೇಳಿದ ತಕ್ಷಣ ಕರ್ನಾಟಕದಲ್ಲಿ ರಾಜಕೀಯ ಮತ್ತು ಪ್ರತ್ಯೇಕದ ಸಂಚಲನ ಮೂಡಿಸಿತು. ಇದು ಮಾತನ್ನು ಆಡಿದವರು ಬೇರೆ ಯಾರು ಅಲ್ಲ ಎಂಟು ಬಾರಿ ಶಾಸಕರಾದ ನಾಲ್ಕು ಬಾರಿ ಸಚಿವರಾದ ಉಮೇಶ್ ಕತ್ತಿ. ಬುದ್ಧಿಜೀವಿಗಳು, ಕನ್ನಡ ಪರ ಸಂಘಟನೆಗಳು ಇವರು ವಿರುದ್ಧ ಸಿಡಿದೆದ್ದು ನಿಂತವು, ಆದರೆ ತಮ್ಮ ನಿಲುವನ್ನು ಬದಲಾಯಿಸದೆ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ನಾನು ಯಾವುದೇ ತ್ಯಾಗ ಮತ್ತು ಬಲಿದಾನಕ್ಕೆ ಸಿದ್ಧನಿದ್ದೇನೆ ಎಂದು ದಿಟ್ಟ ಮತ್ತು ನೇರ ಉತ್ತರ ಕೊಟ್ಟವರು ಇದೇ ಉಮೇಶ್ ಕತ್ತಿ. ಉಮೇಶ್ ಕತ್ತಿ ಅಭಿವೃದ್ಧಿ ಕೆಲಸದಿಂದಾಗಿ ಜನರ ವಿಶ್ವಾಸ ಮತ್ತು ಪ್ರೀತಿಗಳಿಸಿದ್ದ ತಮ್ಮ ಕ್ಷೇತ್ರದಲ್ಲಿ ಸಾಹುಕಾರ ಎಂದೇ ಜನರ ಮನಸ್ಸಿನಲ್ಲಿ ವಾಸವಾಗಿದ್ದರು. 1985ರಲ್ಲಿ ಉಮೇಶ್ ಕತ್ತಿ ಅವರ ತಂದೆ ವಿಶ್ವನಾಥ್ ಕತ್ತಿ ಅವರ ಅಕಾಲಿಕ…
ಬಂಟ್ವಾಳ ಸೆ 8:ಕಳೆದ 3 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅಮ್ಟಾಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ (Mangalore) ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದ್ದಾಳೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಸಿದ್ದ ಕಟ್ಟೆ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ. ಆಕೆ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ ಸೆ.6 ರಂದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದಳು. ಸೆ.12 ರಂದು ಪರೀಕ್ಷೆ ನಡೆಯಲಿದ್ದ ಸೆಮಿಸ್ಟರ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ರಾಯಚೂರು: ಮಲವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಹುಲಿಗೆಪ್ಪ ಬಿಸಿ ನೀರು ಎರಚಿದ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರು ಶ್ರೀಘನಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ತರಗತಿಯಲ್ಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಹುಲಿಗೆಪ್ಪ ಬಿಸಿ ನೀರು ಎರಚಿದ್ದಾರೆ ಎಂದು ಆರೋಪಿಸಲಾಗಿದೆ. ಬಿಸಿನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹದ ಶೇ. 40ರಷ್ಟು ಭಾಗ ಸುಟ್ಟು ಹೋಗಿದೆ. ಘಟನೆ ನಡೆದ ಬೆನ್ನಲ್ಲೇ ಗಂಭೀರ ಆರೋಪ ಹೊತ್ತಿರುವ ಶಿಕ್ಷಕ ಶಾಲೆಗೆ ಗೈರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ಬಾಲಕನಿಗೆ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದು ವಾರವಾದರೂ ಈವರೆಗೆ ಪ್ರಕರಣ ದಾಖಲಾಗಿಲ್ಲ. ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy