Subscribe to Updates
Get the latest creative news from FooBar about art, design and business.
- ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
- ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
Author: admin
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಕಳೆದ ವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆದಾಯಕ್ಕಿಂತ ಎರಡು ಸಾವಿರ ಪಟ್ಟು ಜಾಸ್ತಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ೮೭ ಕೋಟಿ ಹೆಚ್ಚುವರಿ ಆಸ್ತಿಯ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದಾಳಿ ನಡೆದ ಮಾರನೇ ದಿನವೇ ಕಚೇರಿಗೆ ಬಂದು ದಾಖಲೆ ಒದಗಿಸುವಂತೆ ಎಸಿಬಿ ಅಧಿಕಾರಿಗಳು ತಿಳಿಸಿದ್ದು, ಬಕ್ರೀದ್ ಕಾರಣ ನೀಡಿ ಜಮೀರ್ ಕಾಲಾವಕಾಶ ಪಡೆದಿದ್ದರು. ಸದ್ಯ ಬಕ್ರೀದ್ ಮುಗಿದ ಕಾರಣ ಜಮೀರ್ ದಾಖಲೆ ಸಮೇತ ಎಸಿಬಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ. ಈ ನಡುವೆ ಆದಾಯಕ್ಕಿಂತ ಶೇ.೨೦೩೧ ಪಟ್ಟು ಹೆಚ್ಚು ಅಕ್ರಮ ಆಸ್ತಿಯನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಸಂಪಾದಿಸಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿತ್ತು. ಇಡಿ ವರದಿ ಆಧರಿಸಿ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ…
ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಬಂಧಿಸಲಾಗಿದೆ. ರಾಜ್ಯ, ಹೊರ ರಾಜ್ಯ ಮತ್ತು ವಿದೇಶದ ಎಂಟು ಮಂದಿ ಯುವತಿಯರನ್ನು ರಕ್ಷಿಸಲಾಗಿದೆ. ಸಲೂನ್ ಸೆಂಟರ್ ತೆರೆದು ಯುವತಿಯರನ್ನು ಅಕ್ರಮವಾಗಿ ಇರಿಸಿಕೊಂಡು ಗಿರಾಕಿಗಳನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲೂ ತಂತ್ರಜ್ಞಾನ ಆಧರಿತ ಶಿಕ್ಷಣವನ್ನು ನೀಡಲಾಗಿದ್ದು ಕಲಿಕೆಗೆ ಪೂರಕವಾಗಿ ತಾಂತ್ರಿಕತೆ ಹಾಗೂ ತರಗತಿ ವಾರ ವಿಷಯವನ್ನು ವಿಂಗಡಿಸಿ ಬೋಧಿಸಲಾಗುತ್ತಿದೆ. ಈ ಶಿಕ್ಷಣ ಕ್ರಮ ದೇಶದಲ್ಲಿ ಮಾದರಿಯಾಗಿ ಇದ್ದು ಇದನ್ನು ಬೇರೆ ರಾಜ್ಯಗಳು ಅಳವಡಿಸಿಕೊಳ್ಳುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್.ಸಿ. ಅಶ್ವತ್ಥ್ ನಾರಾಯಣ ತಿಳಿಸಿದರು ತಾಲೂಕು ರಂಗಾಪುರ ಬಳಿ ತುಮಕೂರು ವಿಶ್ವವಿದ್ಯಾನಿಲಯದಿಂದ ತಿಪಟೂರು ಸ್ನಾತಕೋತ್ತರ ಕೇಂದ್ರ ಕಲ್ಪ ಸಿರಿ ನೂತನ ಕ್ಯಾಂಪಸ್ ಗೆ ಭೂಮಿ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಕೆರಗೋಡಿ ರಂಗಾಪುರ ಸುಕ್ಷೇತ್ರ ಅಧ್ಯಕ್ಷರು ಆದ ಶ್ರೀ ಗುರುಪರಾಗದೇಶಿ ಸ್ವಾಮೀಜಿ ಮಾತನಾಡಿ, ಯುವ ಜನತೆ ದೇಶದ ಸಂಸ್ಕೃತಿ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಸುಸಂಸ್ಕೃತ ಬದುಕು ಕಟ್ಟಿಕೊಳ್ಳಬೇಕು, ತಂದೆ ತಾಯಿಗಳು ತಮ್ಮೆಲ್ಲ ಕಷ್ಟಗಳನ್ನು ಬದಿಗಿಟ್ಟು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಾರೆ ಎಂದರು. ಈ ಕಾರ್ಯಕ್ರಮದಲ್ಲಿ ತುಮಕೂರಿನ ವಿವಿ ಕುಲಪತಿ ಪ್ರೊಫೆಸರ್ ಕೇಶವ ಅಧ್ಯಕ್ಷತೆ ವಹಿಸಿದ್ದರು. ಪ್ರೊಫೆಸರ್ ಕೆ.…
ತುರುವೇಕೆರೆ: ಪಟ್ಟಣದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ರವರ ಕಚೇರಿಯ ಆವರಣದಲ್ಲಿ ಮಹಿಳಾ ಕಾರ್ಯಕರ್ತರಿಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾಯಸಂದ್ರ ಗ್ರಾಮದ ರಾಜ್ಯ ರೈತ ಸಂಘಟನೆಯ ಚಂದ್ರಶೇಖರ್ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಮಟ್ಟದಲ್ಲೂ ಮಹಿಳೆಯರು ಸಂಘಟಿತರಾಗಬೇಕು, ಬೇರೆ ಪಕ್ಷಗಳು ನೀಡುವ ಸುಳ್ಳು ಆಶ್ವಾಸನೆ ಆಮಿಷಗಳಿಗೆ ಒಳಗಾಗದೆ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಮೆಲ್ ಕಾಂತರಾಜು, ಈ ಕಾರ್ಯಕ್ರಮಕ್ಕೆ ಸೇರಿರುವ ಜನಸಂಖ್ಯೆಯನ್ನು ನೋಡಿದರೆ, 2023ರ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆದ್ದೇ ಗೆಲ್ಲಿಸುತ್ತೀರಿ ಎಂಬ ನಂಬಿಕೆ ಇದೆ, ತುರುವೇಕೆರೆ ತಾಲೂಕಿನಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾ ನಾಯಕಿ ಎಂಬ ಐತಿಹಾಸಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಪುರುಷ ಕಾರ್ಯಕರ್ತರು ಇರುವುದಿಲ್ಲ ಕಾರ್ಯಕ್ರಮವನ್ನು ಮಹಿಳೆಯರೇ ನಡೆಸಬೇಕಾಗುತ್ತದೆ. ಇದರಿಂದ ರಾಜ್ಯಕ್ಕೆ ಮಹಿಳೆಯರಿಗಾಗಿ…
ಸಮಾಜಕ್ಕೆ ಪಿಡುಗಾಗಿರುವ ಮದ್ಯಪಾನವನ್ನು ಬಿಡಿಸುವ ಸಲುವಾಗಿ 1,549 ಮದ್ಯವರ್ಜನಾ ಶಿಬಿರಗಳನ್ನು ನಡೆಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ‘ನ ವತಿಯಿಂದ ಇಂದು ಮದ್ಯಾವರ್ಜನಾ ಶಿಬಿರದ ಪೂರ್ವಭಾವಿ ಸಭೆಯನ್ನು ರಾಜೀಮತಿ ಭವನವನ್ನು ನಡೆಸಲಾಯಿತು. ಸಭೆಯನ್ನು ಉದ್ಘಾಟಿಸಿದ ಚೌದ್ರಿ ಟಿ.ರಂಗಪ್ಪ ಮತ್ತು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಂಗಳ ಗೌರಮ್ಮ’ನವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭೆಯಲ್ಲಿ ಮದ್ಯಾವರ್ಜನಾ ಶಿಬಿರದ ತಾಲ್ಲೂಕು ಯೋಜನಾಧಿಕಾರಿಯಾದ ಗಣೇಶ್ ಮಾತನಾಡಿ ಶಿಬಿರದ ರೂಪು ರೇಷೆಗಳನ್ನು ವಿವರಿಸಿದರು. ನಂತರ ಸಭೆಯಲ್ಲಿ ಶಿಬಿರದ ಉಸ್ತುವಾರಿ ಮಂಡಳಿಯನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ಅನಿತಾ ಶೆಟ್ಟಿ , ಸುತ್ತಮುತ್ತಲಿನ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಸಾರ್ವಜನಿಕರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್’ನಾ ಸಿಬ್ಬಂದಿ ಭಾಗವಹಿಸಿದ್ದರು. ವರದಿ : ವೆಂಕಟೇಶ ಜೆ.ಎಸ್. ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಸರಗೂರು ಮತ್ತು ನಂಜನಗೂಡು ತಾಲ್ಲೂಕಿನ ಜೀವನದಿ ನುಗು ಜಲಾಶಯ ಭರ್ತಿ ಯಾಗಿದ್ದು, ಜಲಾಶಯದಿಂದ ನೀರನ್ನು ಹೊರ ಬಿಡಲಾಗಿದೆ. ಕಳೆದ ಒಂದು ವಾರದಿಂದ ಸತತವಾಗಿ ಕೇರಳದ ವಯನಾಡು ಜಿಲ್ಲೆ ಹಾಗೂ ಗುಂಡ್ಲುಪೇಟೆ ತಾಲ್ಲೂಕು ಮತ್ತು ತಾಲ್ಲೂಕಿನ ಗಡಿಭಾಗದ ಮಲಬಾರ್ ಅರಣ್ಯ ಪ್ರದೇಶದಲ್ಲಿ ಅಧಿಕ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 3420 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಈ ವರ್ಷ ಅವಧಿಗಿಂತ ಬೇಗ ಜಲಾಶಯ ಭರ್ತಿಯಾಗಿದೆ. ಜಲಾಶಯದ ನೀರಿನ ಸರಾಸರಿ ಮಟ್ಟ 110 ಅಡಿ ಇದ್ದು, ಪ್ರಸ್ತುತ 108.5 ಅಡಿ ಇದ್ದು ಜಲಾಶಯದ ಭದ್ರತಾ ದೃಷ್ಟಿಯಿಂದ 1.5 ಅಡಿ ಬಾಕಿ ಉಳಿಸಿಕೊಂಡು ಜಲಾಶಯಕ್ಕೆ ಬಂದಷ್ಟು ನೀರನ್ನು ನದಿಗೆ ಬಿಡಲಾಗಿದೆ. ಶನಿವಾರ ಸಂಜೆಗೆ 3,420 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿಗೆ 3,390 ಕ್ಯೂಸೆಕ್ ನೀರನ್ನು ಜಲಾಶಯದ ಕ್ರಸ್ಟ್ ಗೇಟ್ ಮೂಲಕ 500 ಕ್ಯೂಸೆಕ್ ಹಾಗೂ 300 ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನಾ ಘಟಕದಿಂದ ನದಿಗೆ ಬಿಡಲಾಗಿದೆ. ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ತಡವಾಗಿ ಮಳೆ…
ಕಾಫಿನಾಡಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಬೃಹತ್ ಮರ ಕುಸಿದು ಬಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ಈ ಬೃಹತ್ ಗಾತ್ರದ ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ. ಆದರೆ, ವಾಹನ ಸವಾರರು ಪರದಾಡುವಂತಾಗಿದೆ. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಚಾರ್ಮಾಡಿ ಘಾಟ್ನ ೮ನೇ ತಿರುವಿನಲ್ಲಿ ಮರ ಬಿದ್ದ ಕಾರಣ ೧ ಕಿ.ಮೀ.ಗೂ ಹೆಚ್ಚಯ ಟ್ರಾಫಿಕ್ಜಾಮ್ ಆಗಿದೆ. ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮದ ರಸ್ತೆಯ ಮೇಲೆ ಗುಡ್ಡ ಕುಸಿದಿದೆ. ಇದರಿಂದಾಗಿ ಹೊರನಾಡು-ಶೃಂಗೇರಿ ಮಾರ್ಗದ ಸಂಚಾರ ಅಸ್ತವ್ಯಸ್ತಗೊಂಡಿದೆ. ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಪರಿಹಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ. ೪-೫ ಮನೆಗಳ ಮೇಲೆ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಕೂಲಿ ಕಾರ್ಮಿಕರು ಆತಂಕದಲ್ಲಿದ್ದಾರೆ. ಚಂದ್ರ-ದ್ರೋಣ ಪರ್ವತ ಶ್ರೇಣಿಯಲ್ಲಿ ಧಾರಾಕಾರ ಮಳೆಯಿಂದಾಗಿ ಮರ, ಮಣ್ಣು, ಬಂಡೆಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಕೊಳಗಾಮೆ-ಮುತ್ತೋಡಿ ಸಂಪರ್ಕ ಕಲ್ಪಿಸುವ ಗಿರಿ ಭಾಗದ ರಸ್ತೆಯಲ್ಲಿ ಭೂ ಕುಸಿತ…
ಭಾರತ- ಪಾಕಿಸ್ತಾನದ ಗಡಿ ಭಾಗವಾದ ಅಟ್ಟಾರಿಯ ವಾಘಾಗಡಿ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ ಮತ್ತು ಪಾಕಿಸ್ತಾನ ರೇಂಜರ್ಗಳು ಈದ್ ಅಲ್-ಅಧಾ ಹಿನ್ನೆಲೆ ಸಂದರ್ಭದಲ್ಲಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು. ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಬಿಎಸ್ಎಫ್ ಕಮಾಂಡೆಂಟ್ ಜಸ್ಬೀರ್ ಸಿಂಗ್, “ಈದ್ ಅಲ್ ಅಧಾ ಸಂದರ್ಭದಲ್ಲಿ, ಜಂಟಿ ಚೆಕ್ ಪೋಸ್ಟ್ ಅಟ್ಟಾರಿ ಗಡಿಯಲ್ಲಿ ಬಿಎಸ್ಎಫ್ ಪಾಕಿಸ್ತಾನ ರೇಂಜರ್ಗಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡಿವೆ ಎಂದರು. ಎರಡೂ ದೇಶಗಳ ಗಡಿ ಕಾವಲು ಪಡೆಗಳ ನಡುವಿನ ಸಾಂಪ್ರದಾಯಿಕ ಸೂಚಕವಾಗಿದೆ. ಇದು ಸ್ನೇಹದ ಸಂಪ್ರದಾಯ, ಸದ್ಭಾವನೆ ಮತ್ತು ಶಾಂತಿಯ ಸಂಕೇತವಾಗಿದೆ ಎಂದಿದ್ದಾರೆ. ಈದ್ ಅಲ್-ಅಧಾ ಅಥವಾ ಬಕ್ರಾ ಈದ್ ಅನ್ನು ’ತ್ಯಾಗದ ಹಬ್ಬ’ ಎಂದೂ ಕರೆಯಲಾಗುತ್ತದೆ . ಹಬ್ಬದ ಸಂದರ್ಭದಲ್ಲಿ ಮಟನ್ ಬಿರಿಯಾನಿ, ಘೋಷ್ಟ್ ಹಲೀಮ್, ಶಮಿ ಕಬಾಬ್ ಮತ್ತು ಮಟನ್ ಕೊರ್ಮಾದಂತಹ ಹಲವಾರು ಭಕ್ಷ್ಯಗಳು, ಜೊತೆಗೆ ಖೀರ್ ಮತ್ತು ಶೀರ್ ಖುರ್ಮಾದಂತಹ ಸಿಹಿಭಕ್ಷ್ಯಗಳನ್ನು ಈ ದಿನ ತಯಾರು ಮಾಡಲಾಗುತ್ತದೆ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ದಾನವನ್ನು…
ನಟಿ ಪಾಯಲ್ ರೋಹಟಗಿ ಮತ್ತು ಕುಸ್ತಿಪಟು ಸಂಗ್ರಾಮ್ ಸಿಂಗ್ ಆಗ್ರಾದಲ್ಲಿ ಸಪ್ತಪದಿ ತುಳಿದಿದ್ದಾರೆ. ಇತ್ತೀಚೆಗೆ ಕಂಗನಾ ರಣಾವತ್ ಅವರ ರಿಯಾಲಿಟಿ ಶೋ ಲಾಕ್ ಅಪ್ನಲ್ಲಿ ಕಾಣಿಸಿಕೊಂಡ ಪಾಯಲ್, ತಮ್ಮ ಸಾಂಪ್ರದಾಯಿಕ ಹಿಂದೂ ವಿವಾಹ ಸಮಾರಂಭಕ್ಕಾಗಿ ಕೆಂಪು ಲೆಹೆಂಗಾ ಚೋಲಿ ಸೆಟ್ ಧರಿಸಿದ್ದರು. ಭಾರವಾದ ಆಭರಣಗಳು ಮತ್ತು ಕನಿಷ್ಠ ಮೇಕಪ್ನೊಂದಿಗೆ ಅವಳು ತನ್ನ ವಧುವಿನ ನೋಟವನ್ನು ಕಂಗೋಳಿಸುವಂತೆ ಮಾಡಿತ್ತು.ಪಾಯಲ್ ತಮ್ಮ ಮದುವೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ,ಪಾಯಲ್ ಮತ್ತು ಸಂಗ್ರಾಮ್ ತಮ್ಮ ಮದುವೆಗೆ ಮೊದಲು ಸುಮಾರು ೧೨ ವರ್ಷಗಳ ಕಾಲ ಡೇಟಿಂಗ್ ನಡೆಸುತ್ತಿದ್ದರು. ಉತ್ತಮ ವಿವರಗಳೊಂದಿಗೆ ಕಸೂತಿ ಮಾಡಲಾದ ತನ್ನ ಲೆಹೆಂಗಾದಲ್ಲಿ ಪಾಯಲ್ ವಧುವಿನಂತೆ ಸುಂದರವಾಗಿ ಕಂಡುಬಂದರೆ, ಸಂಗ್ರಾಮ್ ತನ್ನ ಕ್ರೀಮ್ ಶೇರ್ವಾನಿ ಮತ್ತು ಮ್ಯಾಚಿಂಗ್ ಸಫಾದಲ್ಲಿ ದಟ್ಟವಾಗಿ ಕಾಣುತ್ತಿದ್ದರು. ಅವರು ಹಂಚಿಕೊಂಡ ಫೋಟೋಗಳಲ್ಲಿ, ಪಾಯಲ್ ಮತ್ತು ಸಂಗ್ರಾಮ್ ವಿವಿಧ ವಿವಾಹ ಆಚರಣೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವು ಚಿತ್ರಗಳು ಪಾಯಲ್ ಮತ್ತು ಸಂಗ್ರಾಮ್ ಅವರ ವರ್ಮಾಲಾ ಅಥವಾ ಜಯಮಾಲಾ ಸಮಾರಂಭವನ್ನು ಬಿಂಬಿಸುವಂತಿತ್ತು. ಅಲ್ಲಿ ಅವರು…
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಜತೆ ರಾಜಕುಮಾರ ಚಿತ್ರದಲ್ಲಿ ನಟಿಸಿದ್ದ ನಟಿ ಪ್ರಿಯಾ ಆನಂದ್ ನಿತ್ಯಾನಂದನ ಜತೆ ವಿವಾಹವಾಗುವುದಾಗಿ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಿಯಾ ಆನಂದ್ ಇತ್ತೀಚೆಗೆ ಯು ಟೂಬ್ ಚಾನಲ್ಗೆ ಸಂದರ್ಶನ ನೀಡಿರುವ ವೇಳೆ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ನಾನು ನಿತ್ಯಾನಂದ ಸ್ವಾಮಿ ಅವರೊಂದಿಗೆ ಮದುವೆಯಾಗಬೇಕು ಎಂದು ಬಯಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ನಿತ್ಯಾನಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿ ಅವರ ವಿರುದ್ಧ ಆರೋಪಗಳು ಕೇಳಿ ಬಂದಿವೆ. ಆದರೆ, ಅವರನ್ನು ಹಿಂಬಾಲಿಸುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಾಗಿದೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಪ್ರಿಯಾ ಆನಂದ್ ಈ ಹೇಳಿಕೆಯನ್ನೇ ಹಂಚಿಕೊಂಡರು. ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ನಿತ್ಯಾನಂದನನ್ನು ಮದುವೆಯಾಗುವುದಾಗಿ ಹೇಳಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಭಾಷೆಯ ಸಿನಿಮಾಗಳಲ್ಲಿ ಪ್ರಿಯಾ ಆನಂದ್, ದೊಡ್ಡ ಅಭಿಮಾನಿಗಳನ್ನು ಹೊಂದಿದ್ದು, ಪುನೀತ್ ರಾಜ್ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಚಿತ್ರದಲ್ಲೂ ಅವರು ನಟಿಸಿದ್ದಾರೆ. ವರದಿ…