Author: admin

ಧಾರವಾಡ: ವಿಮಾ ಪಾಲಿಸಿ ಹೊಂದಿದ್ದು ಎಮ್ಮೆಯೊಂದು ಕಾಯಿಲೆಯಿಂದ ಮರಣ ಹೊಂದಿದ ಬಗ್ಗೆ ಪೂರಕ ದಾಖಲೆಗಳೊಂದಿಗೆ ಮಾಹಿತಿ ನೀಡಿದರೂ, ಪರಿಹಾರ ಪಾವತಿಸದ ವಿಮಾ ಕಂಪೆನಿಗೆ ಇಲ್ಲಿನ ಜಿಲ್ಲಾ ಗ್ರಾಹಕ ವ್ಯವಹಾರಗಳ ಪರಿಹಾರ ಆಯೋಗವು 95 ಸಾವಿರ ರೂ.ದಂಡ ವಿಧಿಸಿದೆ. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ಮುತ್ತಪ್ಪ ತಪೇಲಿ ಎಂಬುವರು ವಿಮಾ ಪಾಲಿಸಿ ಹೊಂದಿದ್ದ ತಮ್ಮ ಎಮ್ಮೆ ಖಾಯಿಲೆಯಿಂದ ಮರಣಹೊಂದಿದರೂ ಕೂಡ ಯುನಿವೆರಲ್ ಸೊಂಪೆÇ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಕಂಪನಿಯವರು ಪರಿಹಾರದ ಹಣ ನೀಡಿಲ್ಲ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆಯನ್ನು ನಡೆಸಿದ ಆಯೋಗವು ಎಮ್ಮೆಯ ಮೇಲಿನ ವಿಮಾ ಮೊತ್ತವನ್ನು ಫಿರ್ಯಾದಿಗೆ ನೀಡುವಲ್ಲಿ ಕರ್ತವ್ಯ ಲೋಪ ಎಸಗಿ ಸೇವಾ ನ್ಯೂನ್ಯತೆ ಮಾಡಿದ ವಿಮಾ ಕಂಪನಿಗೆ 95 ಸಾವಿರ ರೂ.ಗಳ ದಂಡ ವಿಧಿಸಿದೆ. 30 ದಿನಗಳ ಒಳಗಾಗಿ ಆದೇಶ ಪಾಲನೆ ಮಾಡಬೇಕು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶಪ್ಪ ಕೆ. ಭೂತೆ,…

Read More

ನುಗ್ಗೆಕಾಯಿ ತಿನ್ನುವುದರಿಂದ ಅಧಿಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ಆದರೆ ನುಗ್ಗೆಕಾಯಿ ಬೀಜಗಳು ಸಹ ಅನೇಕ ಅದ್ಭುತ ಪ್ರಯೋಜನಗಳನಗನು ಹೊಂದಿವೆ. ತಾಜಾ ಮತ್ತು ಹಸಿ ನುಗ್ಗೆಕಾಯಿ ಬೀಜಗಳು ಸಾಕಷ್ಟು ಸಾಫ್ಟ್‌ ಆಗಿರುತ್ತವೆ. ಆದರೆ ಅವು ಒಣಗಿದ ತಕ್ಷಣ, ಅವು ಗಟ್ಟಿಯಾಗುತ್ತವೆ. ವಿಶಿಷ್ಟವಾದ ರೆಕ್ಕೆಯಂತಹ ರಚನೆಗಳೊಂದಿಗೆ ಬೂದು-ಬಿಳಿ ಬಣ್ಣದಲ್ಲಿರುತ್ತವೆ. ಅವುಗಳನ್ನು ವಿವಿಧ ಉದ್ದೇಶಗಳಿಗಾಗಿ ಹಬೆಯಲ್ಲಿ ಬೇಯಿಸಬಹುದು, ಕುದಿಸಬಹುದು ಅಥವಾ ಹುರಿಯಬಹುದು. ನುಗ್ಗೆಕಾಯಿಯು ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಅಗತ್ಯವಾದ ಅಮೈನೋ ಆಮ್ಲಗಳಿಂದ ಸಮೃದ್ಧವಾಗಿರುವ ಪೋಷಕಾಂಶಗಳನ್ನು ಹೊಂದಿದೆ. ಇದು ದೇಹಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ನುಗ್ಗೆಕಾಯಿ ಬೀಜಗಳ 10 ಆರೋಗ್ಯ ಪ್ರಯೋಜನಗಳು ಇಲ್ಲಿವೆ: 1. ನಿದ್ರೆಯನ್ನು ಸುಧಾರಿಸುತ್ತದೆ: ನುಗ್ಗೆಕಾಯಿ ಎಲೆಗಳನ್ನು 15 ನಿಮಿಷಗಳ ಕಾಲ ಬಿಸಿ ನೀರಿನಲ್ಲಿ ಹಾಕಿ ಮತ್ತು ನೀವು ಮಲಗುವ ಮೊದಲು ಅದನ್ನು ಕುಡಿಯಿರಿ ಮತ್ತು ರಾತ್ರಿಯ ವಿಶ್ರಾಂತಿಗಾಗಿ ಇದು ನಿಮಗೆ ಸಹಾಯ ಮಾಡುತ್ತದೆ ಮತ್ತು ರಾತ್ರಿಯಲ್ಲಿ ನಿದ್ರೆಗೆ ಜಾರಲು ಸಹಾಯ ಮಾಡುತ್ತದೆ. ಉತ್ತಮ ನಿದ್ದೆಯನ್ನು ಮಾಡಬಹುದು.…

Read More

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಶಕ್ತಿ ತುಂಬುವ ವಿಚಾರವಾಗಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಕಾನೂನು ಇಲಾಖೆ, ಅಡ್ವೊಕೇಟ್ ಜನರಲ್ ಅವರು ಅಧ್ಯಯನ ಮಾಡಿ ನೀಡುವ ವರದಿ ಆಧರಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ರಾಜ್ಯ ಭಾಷಾ ಆಯೋಗ ಹಾಗೂ ಭಾಷಾಂತರ ನಿರ್ದೇಶನಾಲಯದ ವತಿಯಿಂದ ಭಾರತ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ (ಸಿಸಿಪಿ) ಮತ್ತು ಭಾರತ ಸಾಕ್ಷ್ಯ ಅಧಿನಿಯಮ (ಐಇಎ), ದ್ವಿಭಾಷಾ ಕನ್ನಡ ಆವೃತ್ತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿ ಮಾತನಾಡಿದರು. ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಬದ್ಧವಾಗಿದ್ದೇವೆ. ತೀರ್ಪನ್ನು ಕಾನೂನು ಇಲಾಖೆ, ಅಡ್ವೊಕೇಟ್ ಜನರಲ್ ಅವರು ಅಧ್ಯಯನ ಮಾಡಿ ನೀಡುವ ಸಲಹೆ-ಸೂಚನೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ…

Read More

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ದೆಹಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.ಅವರ ವಶದಿಂದ ಒಟ್ಟು 2,251 ಜೀವಂತ ಕಾಟ್ರಿಡ್ಜ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಆರೋಪಿಗಳನ್ನು ರಾಷ್ಟ್ರ ರಾಜಧಾನಿಯ ಆನಂದ್ ವಿಹಾರ್ ಪ್ರದೇಶದಲ್ಲಿ ಎರಡು ಚೀಲಗಳ ಕಾಟ್ರಿಡ್ಜ್ಗಳೊಂದಿಗೆ ಬಂಧಿಸಲಾಗಿದೆ.ಉತ್ತರ ಪ್ರದೇಶದ ಲಕ್ನೋಗೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು ಎಂದು ಪೂರ್ವ ವಲಯದ ಸಹಾಯಕ ಪೊಲೀಸ್ ಆಯುಕ್ತ ವಿಕ್ರಮಜಿತ್ ಸಿಂಗ್ ಹೇಳಿದ್ದಾರೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ಪೊಲೀಸರು ಇನ್ನೂ ತಳ್ಳಿಹಾಕಿಲ್ಲ ಎಂದು ಅವರು ಹೇಳಿದರು. “ಇದುವರೆಗೆ ಬಂಧಿಸಲಾದ ಆರು ಜನರಲ್ಲಿ ಒಬ್ಬರು ಡೆಹ್ರಾಡೂನ್ನಿಂದ ಬಂದವ ಗನ್ ಹೌಸ್ನ ಮಾಲೀಕರಾಗಿದ್ದಾರೆ. ಮೇಲ್ನೋಟಕ್ಕೆ, ಇದು ಅಪರಾಧ ಜಾಲದ ಮೂಲಕ ಮಾಡಲ್ಪಟ್ಟಿದೆ ಎಂದು ತೋರುತ್ತದೆ. ಆದಾಗ್ಯೂ, ಪೊಲೀಸರು ಭಯೋತ್ಪಾದಕ ಕೋನವನ್ನು ತಳ್ಳಿಹಾಕುತ್ತಿಲ್ಲ” ಎಂದು ಸಿಂಗ್ ಹೇಳಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ (ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ) ಅಭಿಯಾನದ ಪ್ರಯುಕ್ತ ಇಂದು ಯಲಹಂಕ ವಲಯ ಆರ್‍ಎಂಝಡ್ ಗ್ಯಾಲೇರಿಯಾ ಮಾಲ್‍ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನದಡಿ ನಗರದ ವಿಧಾನಸೌಧ, ಎಂ.ಎಸ್ ಬಿಲ್ಡಿಂಗ್, ವಿ.ವಿ.ಟವರ್ ಸೇರಿದಂತೆ ಇನ್ನಿತರೆ ಪ್ರಮುಖ ಸ್ಥಳಗಳಲ್ಲಿ ಧ್ವಜಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಿರುವ ಪಾಲಿಕೆಯ ಧ್ವಜ ಮಾರಾಟ ಮೊಬೈಲ್ ಕೇಂದ್ರಕ್ಕೆ ಇದೇ ವೇಳೆ ಅವರು ಚಾಲನೆ ನೀಡಿದರು. ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕಾಗಿ ಪ್ರಚಾರ ಸಾಮಗ್ರಿಗಳಾದ ಕರಪತ್ರ, ಸ್ಟಿಕ್ಕರ್ ಹಾಗೂ ಬ್ಯಾಡ್ಜ್ ಅನ್ನು ಅನಾವರಣಗೊಳಿಸಿದರು. ಪೌರಕಾರ್ಮಿಕರಿಗೆ ಸಿಎಂ ಅಭಿನಂದನಾ ಪತ್ರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂದೇಶದ ಮೂಲಕ ಅಭಿನಂದನಾ ಪತ್ರವನ್ನು ಕಳುಹಿಸಿದ್ದು, ಅಭಿನಂದನಾ ಪತ್ರವನ್ನು…

Read More

ಚಾಮರಾಜಪೇಟೆ ಆಟದ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಸಕಲ ಸಿದ್ಧತೆಗಳು ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಪಶ್ಚಿಮ ವಿಭಾಗ ಪೊಲೀಸರು ಡಿಸಿಪಿ ಲಕ್ಷ್ಮಣ್ ನಿಂಬರಗಿ ನೇತೃತ್ವದಲ್ಲಿ ಪಥ ಸಂಚಲನ ನಡೆಸಿದರು. ಸಿಎಆರ್, ಕೆಎಸ್‍ಆರ್‍ಪಿ ಹಾಗೂ ಸ್ಥಳೀಯ ಪೊಲೀಸರನ್ನೊಳಗೊಂಡ ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಟಿಪ್ಪು ನಗರ, ವಾಲ್ಮಿಕಿನಗರ, ಚಾಮರಾಜಪೇಟೆ ಸೇರಿದಂತೆ ವಿವಿಧೆಡೆ ಪಥ ಸಂಚಲನ ನಡೆಸಿ ಸಾರ್ವಜನಿಕರಿಗೆ ಭರವಸೆ ಮೂಡಿಸಿದ್ದಾರೆ. ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವನ್ನು ಅದ್ಧೂರಿಯಾಗಿ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ಇಲ್ಲಿ ಭದ್ರತೆ ಕಲ್ಪಿಸುವುದು ದೊಡ್ಡ ಸವಾಲಾಗಿದೆ. ಈಗಾಗಲೇ ಚಾಮರಾಜಪೇಟೆ ಆಟದ ಮೈದಾನದ ವಿವಾದ ತಾರಕಕ್ಕೇರಿ ಸದ್ಯ ನಿಯಂತ್ರಣದಲ್ಲಿದ್ದು, ಸರ್ಕಾರದ ಮಧ್ಯಸ್ಥಿಕೆಯಲ್ಲಿ ಸಂಧಾನ ಪ್ರಕ್ರಿಯೆಗಳು ನಡೆದಿದೆ. ಈ ನಡುವೆ ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜರೋಹಣ ನಡೆಯುವುದು ಬಾರಿ ಕುತೂಹಲ ಕೆರಳಿಸಿದೆ. ಕೆಲ ಸಂಘಟನೆಗಳ ಮುಖಂಡರು ಹಾಗೂ ಸ್ಥಳೀಯ ಶಾಸಕರು ಕೂಡ ಅದ್ಧೂರಿಯಾಗಿ…

Read More

ಬೆಳ್ತಂಗಡಿ, ಅ.13- ತಾಲೂಕು ಹಾಗೂ ರಾಜ್ಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ತಮ್ಮ ಯೋಚನೆ ಹಾಗೂ ಯೋಜನೆಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದ ವಸಂತಮಹಲ್ ಬಳಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿಕರು ಹಾಗೂ ಅಡಿಕೆ ಬೆಳೆಗಾರರು ಅನೇಕ ಸಮಸ್ಯೆಗಳಿಂದ ಹತಾಶರಾಗಿದ್ದಾರೆ. ಅವರ ಬಗ್ಗೆ ಸಂಸತ್‍ನಲ್ಲಿ ಧ್ವನಿ ಎತ್ತುವುದಲ್ಲದೆ, ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಭರವಸೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯದಲ್ಲಿ ಏಳು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಈಗಾಗಲೆ ಪ್ರಾರಂಭಿಸಿದ್ದು, ಜನಸಾಮಾನ್ಯರಿಗೆ ಆಧಾರ್ ಕಾರ್ಡ್, ಆರೋಗ್ಯ ವಿಮೆ, ನೆರೆ-ಬರ ಪರಿಹಾರ, ಕೂಲಿ ಕಾರ್ಮಿಕರಿಗೆ ಇ-ಶ್ರಮ ಕಾರ್ಡ್ , ಆಯುಷ್ಮಾನ್ ಕಾರ್ಡ್ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗಿದೆ. ಧರ್ಮಸ್ಥಳದ ಮಂಜುನಾಥನ ಬಗ್ಗೆ ದೃಢ ನಂಬಿಕೆ ಎಲ್ಲರಲ್ಲಿದೆ. ದೇವಸ್ಥಾನದಲ್ಲಿ ಧಾರ್ಮಿಕ ಪರಂಪರೆ, ಶಿಸ್ತು,…

Read More

ಇರ್ವಿನ್ ರಸ್ತೆ ವಿಸ್ತರಣೆಗೆ ಎದುರಾಗಿದ್ದ ಕೆಲ ವಾಣಿಜ್ಯ ಕಟ್ಟಡಗಳು ಮತ್ತು ಮಸೀದಿಯ ಗೋಡೆಗಳ ತೆರವು ಕಾರ್ಯಾಚರಣೆ ರಾತ್ರಿಯಿಂದಲೇ ಆರಂಭಿಸಲಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಇದರೊಂದಿಗೆ ರಸ್ತೆ ವಿಸ್ತರಣೆಗೆ ಇದ್ದ ಅಡೆ ತಡೆ ಕೊನೆಗೂ ನಿವಾರಣೆಯಾಗಿದೆ. ಈ ರಸ್ತೆ ವಿಸ್ತರಣೆಗೆ ಹಲವು ವರ್ಷಗಳಿಂದಲೂ ಪ್ರಯತ್ನ ನಡೆದಿತ್ತು. ಆದರೆ ಈ ರಸ್ತೆಯಲ್ಲಿರುವ ವಾಣಿಜ್ಯ ಕಟ್ಟಡಗಳು ಮತ್ತು ಮಸೀದಿಯ ಗೋಡೆಯನ್ನು ಒಡೆಯಲು ತಡೆಯಾಜ್ಞೆ ಇದ್ದ ಕಾರಣ ಇಷ್ಟು ವರ್ಷಗಳವರೆಗೆ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ತಡೆಗೋಡೆ ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ. ಮಸೀದಿ ಮಂಡಳಿಯವರೊಂದಿಗೆ ಚರ್ಚಿಸಿ ಮನವೊಲಿಸಲಾಗಿದೆ. ನಂತರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೆರಡು ದಿನಗಳಲ್ಲಿ ತೆರವುಕಾರ್ಯ ಪೂರ್ಣಗೊಳ್ಳಲಿದೆ. ಇದರಿಂದ ರಸ್ತೆಯನ್ನು 10ರಿಂದ 12 ಅಡಿಗಳವರೆಗೆ ವಿಸ್ತರಣೆ ಮಾಡಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ ತಿಳಿಸಿದ್ದಾರೆ. ಗೋಡೆಯನ್ನು ತೆರವುಗೊಳಿಸುವುದರಿಂದ ಇರ್ವಿನ್ ರಸ್ತೆಯ ವಿಸ್ತರಣೆಗೆ ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ. ಜನರಿಗೆ, ವಾಹನಗಳ ಸಂಚಾರಕ್ಕೆ ಅನುಕೂಲವಾಗಲಿದೆ. ಇದಕ್ಕಾಗಿ ಹೈಕೋರ್ಟ್ ಗೆ ಮತ್ತು…

Read More

ರಾಜ್ಯದಲ್ಲಿ ಮಳೆಯ ಅಬ್ಬರ ತಪ್ಪಿದರೂ ಉಕ್ಕಿ ಹರಿಯುತ್ತಿರುವ ಜಲಾಶಯಗಳಿಂದ ಪ್ರವಾಹದ ಭೀತಿ ಎದುರಾಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ಮಳೆ ನಿಂತರೂ ಮರದ ಹನಿ ನಿಂತಿಲ್ಲ ಎನ್ನುವ ಹಾಗೆ ಮಳೆ ಪ್ರಮಾಣ ರಾಜ್ಯದಲ್ಲಿ ತಗ್ಗಿದರೂ ಮಳೆಯ ಅವಾಂತರಗಳು ಮಾತ್ರ ಹೆಚ್ಚಾಗಿವೆ. ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಜಿಲ್ಲೆಯ ಕಡೂರು ತಾಲ್ಲೂಕಿನ ಐತಿಹಾಸಿಕ ಮದಗದ ಕೆರೆ ಏರಿಯಲ್ಲಿ ಭೂ ಕುಸಿತ ಉಂಟಾಗಿದೆ. ಮುಳ್ಳಯ್ಯನಗಿರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಕೆರೆಗೆ ಹರಿದುಬರುತ್ತಿದ್ದು, ಏರಿ ಬಿರುಕುಬಿಟ್ಟ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಹೆಗ್ಗಾರು ಕೂಡಿಗೆಯಲ್ಲಿ ರಸ್ತೆ ಕೊಚ್ಚಿ ಹೋಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಚಕನೂರು ಗ್ರಾಮದಲ್ಲಿರುವ ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದ್ದು, ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಘಟಪ್ರಭ ನದಿ ತುಂಬಿ ಹರಿಯುತ್ತಿರುವುದರಿಂದ ಜಮೀನುಗಳಿಗೆ ನೀರು ನುಗ್ಗಿ ಕಬ್ಬಿನ ಬೆಳೆ ನಾಶವಾಗಿದೆ. ಜಲಾಶಯದಿಂದ ಭಾರೀ…

Read More

ಬೆಂಗಳೂರು : ರಾಜ್ಯದಲ್ಲಿ ಸದ್ಯ ಚರ್ಚಿತ ವಿಷಯ ಎಂದರೆ ಹೈಕೋರ್ಟ್ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿ ಆದೇಶ ನೀಡಿದೆ. 2016 ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಎಸಿಬಿ ಸಂಸ್ಥೆ ರಚನೆಯಾಗಿತ್ತು.‌ ಈಗ ಕೋರ್ಟ್ ಕೊಟ್ಟಿರುವ ತೀರ್ಪು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ. ಇಷ್ಟು ದಿನ ಆಟಕ್ಕೂಂಟು ಲೆಕ್ಕಕ್ಕಿಲ್ಲ ಎನ್ನುವಂತಿದ್ದ ಲೋಕಾಯುಕ್ತದಲ್ಲಿ ಬಾಕಿಯಿರುವ ಪ್ರಕರಣಗಳು ಸಾಕಷ್ಟಿವೆ. ಒಟ್ಟು 8,036 ಪ್ರಕರಣಗಳು ಲೋಕಾಯುಕ್ತದಲ್ಲಿ ಬಾಕಿ ಇವೆ. ಇದರಲ್ಲಿ‌‌ 2,430 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಗಂಭೀರವಲ್ಲದ 13 ಸಾವಿರ ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. ಈ ಪೈಕಿ 12 ಸಾವಿರ ಪ್ರಕರಣಗಳು ಇತ್ಯರ್ಥವಾಗಿವೆ. 2017 ರಿಂದ ಇಲ್ಲಿಯವರೆಗೂ ಅಂದರೆ ಐದು ವರ್ಷದಲ್ಲಿ 20,549 ಪ್ರಕರಣ ದಾಖಲಾಗಿವೆ. ಇದರಲ್ಲಿ 2, 431 ಪ್ರಕರಣಗಳನ್ನ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ 304 ಸ್ವಯಂ ಪ್ರೇರಿತ ದೂರನ್ನ ಲೋಕಾಯುಕ್ತ ದಾಖಲಿಸಿಕೊಂಡಿದೆ. ಒಟ್ಟಾರೆಯಾಗಿ ಈ ಎಲ್ಲಾ ಪ್ರಕರಣಗಳ ಜೊತೆ ಹೈಕೋರ್ಟ್ ಆದೇಶ ನೀಡಿರುವಂತೆ ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ…

Read More