Subscribe to Updates
Get the latest creative news from FooBar about art, design and business.
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
- ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
Author: admin
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಮೋದಿನಗರದ ಉಮೇಶ್ ಶರ್ಮಾ ಎಂಬ ವ್ಯಕ್ತಿ ತನ್ನ ಬಾಡಿಗೆ ಮನೆಯಲ್ಲಿದ್ದ ಪಿಎಚ್ಡಿ ವಿದ್ಯಾರ್ಥಿ ಅಂಕಿತ್ ಗೋಖರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಶವವನ್ನು ತುಂಡು ತುಂಡಾಗಿ ಕತ್ತರಿಸಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾರೆ. ಘಟನೆ ಅಕ್ಟೋಬರ್ 5 ರಂದು ನಡೆದಿದೆ. ಇತ್ತೀಚೆಗಷ್ಟೇ ಈ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಉಮೇಶ್ ಶರ್ಮಾ ಮತ್ತು ಆತನ ಸ್ನೇಹಿತ ಪರ್ವೇಶ್ ನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. 100 ರೂ.ಗಾಗಿ ಉಮೇಶ್ ಶರ್ಮಾ ಪಿಎಚ್ಡಿ ವಿದ್ಯಾರ್ಥಿ ಅಂಕಿತ್ನನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಮನೆಯಲ್ಲಿ ದೇಹವನ್ನು ವಿರೂಪಗೊಳಿಸಲು ಬಳಸಿದ ಮರ, ಸುಟ್ಟ ಬಟ್ಟೆ, ಅಂಕಿತ್ನ ಕೂದಲು ಮತ್ತು ರಕ್ತದ ಕಲೆಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಂಕಿತ್ ಸ್ನೇಹಿತರು 3 ವಾರಗಳಿಂದ ಕರೆ ಮಾಡುತ್ತಿದ್ದರೂ ಅವರು ಸ್ವೀಕರಿಸಲಿಲ್ಲ. ಬಳಿಕ ಪೊಲೀಸರಿಗೆ ದೂರು ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.…
ರಾಯಚೂರು: ಚಿಪ್ಸ್ ಪ್ಯಾಕೆಟ್ನಲ್ಲಿ 500 ರೂಪಾಯಿಯ ಗರಿ ಗರಿ ನೋಟು ಸಿಗುತ್ತದೆ ಅಂದರೆ ನೀವು ನಂಬುತ್ತೀರಾ?ನಂಬಲು ಅಸಾಧ್ಯವಾದರೂ ಇದು ಸತ್ಯವಾಗಿದೆ.ಹೌದು, ಕುರ್ಕುರೆ ಖರೀದಿ ಮಾಡಿ ಸುಮಾರು 20 ಸಾವಿರಕ್ಕೂ ಹೆಚ್ಚು ಹಣವನ್ನು ರಾಯಚೂರು ಜಿಲ್ಲೆಯ ಜನ ಪಡೆದಿದ್ದಾರೆ. ಜಿಲ್ಲೆಯ ಲಿಂಗಸಗೂರು ತಾಲೂಕಿನ ಹನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕುರ್ಕುರೆ ಪ್ಯಾಕೆಟ್ ತೆಗೆದುಕೊಳ್ಳಲು ಜನ ಮುಗಿಬಿದ್ದಿದ್ದಾರೆ. 5 ರೂಪಾಯಿ ಕುರ್ಕುರೆ ಪ್ಯಾಕೆಟ್ನಲ್ಲಿ 500 ರೂ. ಬಂದಿದ್ದನ್ನು ಕಂಡು ಜನ ಸಂತಸಗೊಂಡಿದ್ದಾರೆ. ಫ್ಲಿಂಗ್ಸ್ ಪಂಜಾಬ್ ತಡ್ಕಾ ಹೆಸರಿನ ಕುರ್ಕುರೆ ಬ್ರಾಂಡ್ನ ಪ್ಯಾಕೆಟ್ನಲ್ಲಿ ಹಣ ಪತ್ತೆಯಾಗಿದೆ. ಬಹುಶಃ ತಮ್ಮ ಉತ್ಪನ್ನದ ಜಾಹಿರಾತು ಹಾಗೂ ಮಾರಾಟವನ್ನು ಹೆಚ್ಚಿಸುವ ಸಲುವಾಗಿ ಕಂಪನಿಯೇ ಪ್ಯಾಕೆಟ್ನಲ್ಲಿ ಹಣವಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಖಚಿತ ಕಾರಣ ಏನು ಎಂಬುದು ಯಾರಿಗೂ ತಿಳಿದಿಲ್ಲ. ತನಿಖೆಯ ಬಳಿಕವಷ್ಟೇ ಈ ಬಗ್ಗೆ ಖಚಿತ ಮಾಹಿತಿ ತಿಳಿಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತಿಪಟೂರು: ದಕ್ಷತೆ, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆಗೆ ಹೆಸರಾಗಿ ತಿಪಟೂರು ನಗರಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಸ್ಮಾನ್ ಸಾಬ್ ಗೆ ರಾಷ್ಟ್ರಪತಿ ಸೇವಾ ಪ್ರಶಸ್ತಿ ದೊರೆತಿರುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿ ಎಂದು ಬಿ.ಜೆ.ಪಿ. ಮುಖಂಡ ಕೆ.ಎಸ್. ಸದಾಶಿವಯ್ಯ ತಿಳಿಸಿದರು. ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಅದರಲ್ಲೂ ಗಾಂಧಿನಗರ ಪೊಲೀಸ್ ಚೌಕಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಸ್ಮಾನ್ ಸಾಬ್ ಅಪರಾಧ ದಳದ ಸದಸ್ಯರಾಗಿದ್ದು, ತಮ್ಮ ಕೆಲಸದ ಜವಾಬ್ದಾರಿಗಳನ್ನು ನಿಷ್ಠೆ, ಪ್ರಾಮಾಣಿಕ ಮತ್ತು ಸಮರ್ಪಣಾ ಭಾವದಿಂದ ನಿರ್ವಹಿಸುತ್ತಿದ್ದಾರೆ. ತಿಪಟೂರು ತಾಲ್ಲೂಕಿನ ಇಂತಹ ಸಾಧಕರಿಗೆ ರಾಷ್ಟ್ರಪತಿ ಸೇವಾ ಪ್ರಶಸ್ತಿ ದೊರೆತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ತಿಪಟೂರು ತಾಲ್ಲೂಕಿನ ಹಾಗೂ ನಗರದ ಜನತೆಯ ಪರವಾಗಿ ಬಿ.ಜೆ.ಪಿ ಸ್ಥಾಪಕ ಕೆ.ಎಸ್ ಸದಾಶಿವಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನಾಸಿಕ್ : ಪತ್ನಿಯೇ ತನ್ನ ಪತಿಗೆ ಬ್ಲಾಕ್ ಮೇಲ್ ಮಾಡಿ 4.5 ಲಕ್ಷ ರೂಪಾಯಿ ಹಣ ಪಡೆದಿರುವ ಪ್ರಕರಣ ನಾಸಿಕ್ನಲ್ಲಿ ನಡೆದಿದೆ. ಮಹಿಳೆ ತನ್ನ ಬೆತ್ತಲೆ ಫೋಟೋಗಳನ್ನು ಪತಿಗೆ ಕಳುಹಿಸಿ, ಬ್ಲಾಕ್ ಮೇಲ್ ಮಾಡಿದ್ದಾಳೆ.ಈ ಸಂಬಂಧ ಪತಿ ಅಂಬಾಡ್ ಪೊಲೀಸ್ ಠಾಣೆಯಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ಪತಿ ನೀಡಿರುವ ದೂರಿನ ಪ್ರಕಾರ, ನನಗೆ ಅಪರಿಚಿತ ನಂಬರ್ನಿಂದ ಕರೆ ಬಂದಿದೆ. ಮದುವೆಯಾದ ನಂತರವೂ ನಿಮ್ಮ ಪತ್ನಿ ಬೇರೆ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆ. ನನ್ನ ಬಳಿ ಅವರಿಬ್ಬರ ಖಾಸಗಿ ಫೋಟೋಗಳು ಮತ್ತು ವಿಡಿಯೋ ಇದೆ ಎಂದು ಹೇಳಿ ಪತ್ನಿಯ ನಗ್ನ ಫೋಟೋಗಳನ್ನು ಮೊಬೈಲ್ ಫೋನ್ಗೆ ಕಳುಹಿಸಿದ್ದಾರೆ. ಈ ಫೋಟೋಗಳನ್ನು ಎಲ್ಲೂ ಶೇರ್ ಮಾಡಬಾರದು ಎಂದರೇ, ಹಣ ನೀಡುವಂತೆ ಕೇಳಿದ್ದಾರೆ.ಪತ್ನಿಯೇ ಪ್ರಿಯಕರನ ನೆರವಿನಿಂದ ಸಂಚು ರೂಪಿಸಿ, ಮೊಬೈಲ್ನಲ್ಲಿ ಇಬ್ಬರ ಅಶ್ಲೀಲ ಫೋಟೋ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಾನ ಮರ್ಯಾದೆಗೆ ಹೆದರಿ 4 ಲಕ್ಷ 50 ಸಾವಿರ ರೂ.…
ಬೆಂಗಳೂರು : ಅಪರಾಧಿಗಳ ಪತ್ತೆ ಸಂಬಂಧ ಪೊಲೀಸರಿಗೆ ಸುಳಿವು ನೀಡುವ ಖಾಸಗಿ ವ್ಯಕ್ತಿಗಳಿಗೆ ರಾಜ್ಯ ಸರ್ಕಾರವು ಇನ್ಮುಂದೆ ಬರೋಬ್ಬರಿ 5 ಲಕ್ಷ ರೂ. ಬಹುಮಾನ ನೀಡಲಿದೆ. ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ , ಮಾದಕ ವಸ್ತು ಸಾಗಾಣಿಕೆ, ಸೇರಿದಂತೆ ಹಲವು ಸಮಾಜಘಾತುಕ ಚಟುವಟಿಕೆಗಳ ಮಾಹಿತಿ ನೀಡಿದರೆ ಭಾರೀ ಬಹುಮಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಗೃಹ ಸಚಿವ ಅರಗಜ್ಞಾನೇಂದ್ರ ಮಾಹಿತಿ ನೀಡಿದ್ದು , ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ , ಕಳ್ಳಸಾಗಾಣಿಕೆ , ಮಾದಕ ವಸ್ತು ಸಾಗಾಣಿಕೆ, ಆಯುಧ ಕಳ್ಳಸಾಗಾಣಿಕೆ ಸೇರಿದಂತೆ ಹಲವು ಸಮಾಜಘಾತುಕ ಚಟುವಟಿಕೆಗಳ ಮಾಹಿತಿ ನೀಡಿದರೆ ಪ್ರಕರಣದ ತೀವ್ರತೆ ಆಧಾರದ ಮೇಲೆ ಕನಿಷ್ಠ 20 ಸಾವಿರ ರೂ.ನಿಂದ 5 ಲಕ್ಷ ರೂ.ರವರೆಗೆ ಬಹಮಾನ ಘೋಷಿಸುವ ಪ್ರಸ್ತಾವನೆಗೆ ಅನುಮತಿ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯನಗರ : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಗರದ ಬಿಜೆಪಿ ಜಿಲ್ಲಾ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಅವರು, ವಿಜಯನಗರ ನೆಲದ ಗುಣವೇ ವಿಶೇಷವಾಗಿದೆ. ಗತವೈಭವ ಸಾರಿದ ನಾಡು ಇದು. ಆದ್ದರಿಂದ ಉತ್ತರ ಕರ್ನಾಟಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಇಂದು ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ತಲಾ 5000 ರೂ. ಹಣ ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ.ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಿದ್ದಾರೆ. ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ನೆರವಾಗಲು ನೇಕಾರ ಸಮ್ಮಾನ್ ಯೋಜನೆಯನ್ನು ಮುಖ್ಯಮಂತ್ರಿಗಳು 2020 -21ನೇ ಸಾಲಿನಿಂದ ಅನ್ವಯವಾಗುವಂತೆ ಘೋಷಣೆ ಮಾಡಿದ್ದು, ಕೈಮಗ್ಗ ನೇಕಾರರಿಗೆ ಇದು ನೆರವಾಗಲಿದೆ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ತಾಲ್ಲೂಕಿನ ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಜಿ.ಕಂಬದಹಳ್ಳಿ ಗ್ರಾಮದಲ್ಲಿ ರಂಗರಾಜು ಎಂಬ ರೈತನ ಎಡವಟ್ಟಿನಿಂದ ಇಡಿ ಗ್ರಾಮವೇ ಅಪಾಯಕ್ಕೀಡಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಅದೃಷ್ಟವಶಾತ್ ಯಾವುದೇ ಅಂತಹ ಘಟನೆಗಳು ಸಂಭವಿಸದೇ ಗ್ರಾಮಸ್ಥರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಪಕ್ಕದ ಜಮೀನಿನ ಮಾಲೀಕ ಸರ್ಕಾರಿ ಭೂಮಿಯನ್ನು ಉಳುಮೆ ಮಾಡಿ ಒತ್ತುವರಿ ಮಾಡುವ ಭರದಲ್ಲಿ ರಸ್ತೆ ಪಕ್ಕದಲ್ಲಿ ವಿದ್ಯುತ್ ಕಂಬವಿದ್ದರು ಸಹ ರೈತ ರಂಗರಾಜುವಿನ ದುರಾಸೆಗೆ ಮಣ್ಣು ತೆಗೆಸಿ ಭೂ ಸ್ವಾಧೀನ ಮಾಡಿಕೊಂಡು ವಿದ್ಯುತ್ ಕಂಬವನ್ನು ನೆಲಕ್ಕುರುಳಿಸಿದ್ದಾನೆ. ಆದ್ದರಿಂದ ಇಂತಹ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೆಸ್ಕಾಂ ಇಲಾಖೆ ನಿರ್ಲಕ್ಷ್ಯ: ಕಳೆದ ಎರಡು ತಿಂಗಳ ಹಿಂದೆಯೇ ಕಂಬ ಬೀಳುವ ಸಾಧ್ಯತೆ ಕಂಡುಬಂದಿತ್ತು. ಇದನ್ನು ಕಂಡ ಸ್ಥಳೀಯರು ತೀತಾ ಬೆಸ್ಕಾಂ ಇಲಾಖೆಯ ಗಮನಕ್ಕೆ ಅರ್ಜಿ ನೀಡಿ ಬೇರೆಡೆಗೆ ಕಂಬ ಸ್ಥಳಾಂತರಿಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ತಿಳಿಸಿದ್ದರು . ಆದರೆ ಇವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡದೆ ಅರ್ಜಿಯನ್ನು…
ಕೊರಟಗೆರೆ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸ್ಮಮೇಳನವನ್ನು 2023ರ ಜ.6 ರಿಂದ 8 ರವರೆಗೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಸಮ್ಮೇಳನವನ್ನು ವಿಶೇಷವಾಗಿ ಆಚರಿಸಲು ಕನ್ನಡ ಜ್ಯೋತಿ ರಥ ಯಾತ್ರೆಯು ರಾಜ್ಯಾದ್ಯಾಂತ ಸಂಚರಿಸುತ್ತಿರುವುದು ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಭಾಗವಹಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಮನವಿ ಮಾಡಿವೆ. ಡಿ.13ರ ಮಂಗಳವಾರ ಕೊರಟಗೆರೆ ಪಟ್ಟಣಕ್ಕೆ ಆಗಮಿಸಿದ ಕನ್ನಡದ ಭುವನೇಶ್ವರಿ ರಥವನ್ನು ಬಹಳ ಅದ್ಧೂರಿಯಾಗಿ ವಿವಿಧ ವಾದ್ಯ ಗೋಷ್ಟಿಗಳೊಂದಿಗೆ ಭಕ್ತಿ ಪೂರ್ವಕವಾಗಿ ನಗರದ ಪ್ರಮುಖ ರಸ್ತೆಯಲ್ಲಿ ತಾಲ್ಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ, ಕನ್ನಡಪರ ಸಂಘಟನೆಗಳು ಕನ್ನಡ ಜ್ಯೋತಿ ರಥವನ್ನು ಮೆರವಣೆಗೆಯೊಂದಿಗೆ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕೊರಟಗೆರೆ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ನಾಹಿದಾ ಜಮ್ ಜಮ್, ಪ.ಪಂ ಅಧ್ಯಕ್ಷೆ ಕಾವ್ಯರಮೇಶ್, ಸದಸ್ಯರಾದ ಎ.ಡಿ.ಬಲರಾಮಯ್ಯ, ಕೆ.ಆರ್.ಓಬಳರಾಜು, ಕರವೇ ಅಧ್ಯಕ್ಷ ನಟರಾಜು,ಕರ್ನಾಟಕ ರಣಧೀರರ ವೇದಿಕೆ ಮಂಜುಸ್ವಾಮಿ.ಎಂ.ಎನ್. ದೇವರಾಜು ಕೆ ಎನ್, ಕರವೇ ಹರೀಶ್ ಬಾಬು ಪ್ರದೀಪ್ಕುಮಾರ್, ಗೋವಿಂದರಾಜು, ರಂಗನಾಥ್, ಪ.ಪಂ ಮುಖ್ಯಾಧಿಕಾರಿ…
ಮಾಜಿ ಸಚಿವ ಜನಾರ್ದನರೆಡ್ಡಿ ನಮ್ಮ ಜೊತೆಯಲ್ಲೇ ಇರ್ತಾರೆ. ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಇಂದು ಈ ಕುರಿತು ಮಾಧ್ಯಮದವರೊಡನೆ ಮಾತಾಡಿದ ಬಿಎಸ್ ಯಡಿಯೂರಪ್ಪ, ಜನಾರ್ಧನ ರೆಡ್ಡಿ ಅವರ ಪರ ಬ್ಯಾಟ್ ಬೀಸಿದರು. ಜನಾರ್ಧನ ರೆಡ್ಡಿ ಪಕ್ಷವನ್ನು ಬಿಟ್ಟು ಎಲ್ಲೂ ಹೋಗಲ್ಲ, ಅವರು ಗಂಗಾವತಿಯಲ್ಲಿ ಮನೆಕಟ್ಟಿದ್ದಾರೆ ಅಂದಮಾತ್ರಕ್ಕೆ ಹೊಸಪಕ್ಷ ಕಟ್ಟುತ್ತಾರೆ ಅಂತ ಅರ್ಥ ಕಲ್ಪಿಸಬಾರದು. ರೆಡ್ಡಿಯವರು ಪಕ್ಷದಲ್ಲಿರುವುದು ಎಷ್ಟು ಮಹತ್ವ ಅನ್ನೋದನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುತ್ತೇನೆ, ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಎಲ್ಲಾ ಕೇಸ್ ಇತ್ಯರ್ಥಪಡಿಸಿಕೊಂಡು ಬಿಜೆಪಿಗೆ ರೆಡ್ಡಿ ಮರಳುತ್ತಾರೆ. ರೆಡ್ಡಿ ಅವರ ಜೊತೆ ಮಾತನಾಡಿದ್ದೇನೆ ಎಂದರು. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದಿದ್ದೇನೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ಎಂದು ಬಿಎಸ್ ವೈ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…