Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ತಿಪಟೂರು: ಗ್ರಾಮಗಳಲ್ಲಿ ಒಳಚರಂಡಿಗಳು ತುಂಬಿ ತುಳುಕುತ್ತಿದ್ದರೂ ಗ್ರಾಮ ಪಂಚಾಯಿತಿಯವರು ಒಳಚರಂಡಿಗಳನ್ನು ಸ್ವಚ್ಛತೆ ಮಾಡದೆ ನಿರ್ಲಕ್ಷಿಸಿದ್ದಾರೆ ಎಂದು ಕೆಲವು ಗ್ರಾಮಗಳ ಗ್ರಾಮಸ್ಥರು ಆರೋಪಿಸಿದ್ದಾರೆ ತಾಲೂಕಿನ ದಸರಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳ ಒಳಚರಂಡಿಗಳು ಸ್ವಚ್ಛತೆಯನ್ನು ಕಂಡಿದ್ದರೆ, ಇನ್ನೂ ಕೆಲವು ಒಳಚರಂಡಿಗಳು ಸ್ವಚ್ಛತೆಯನ್ನು ಕಾಣದಂತಾಗಿದೆ. ಪೂಜಾರಿ ಪಾಳ್ಯಗ್ರಾಮದಲ್ಲಿ ಒಳಚರಂಡಿಗಳು ತುಂಬಿ ತುಳುಕುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಅಧ್ಯಕ್ಷರು ಸದಸ್ಯರು ಇವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಇಲ್ಲಿನ ನಾಗರಿಕರು ದೂರಿದ್ದಾರೆ. ಒಳಚರಂಡಿ ಸ್ವಚ್ಛಗೊಳಿಸಿ ಎಂದರೆ, ಸ್ವಚ್ಛತೆಯನ್ನು ಪೂರ್ಣ ಮಾಡಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಗ್ರಾಮ ಪಂಚಾಯಿತಿ ವರ್ಕರ್ ಗಳು ಮಾತ್ರ ಅಧಿಕಾರಿಗಳ ಮಾತಿಗೆ ಬೆಲೆ ಇಲ್ಲದಂತೆ ವರ್ತಿಸುತ್ತಿರುವುದು ಕಂಡು ಬರುತ್ತಿದೆ. ದಿನೇ ದಿನೇ ಒಳ ಚರಂಡಿಗಳು ತುಂಬಿ ದುರ್ವಾಸನೆ ಬೀರುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೂಜಾರಿ ಪಾಳ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಅಳವಡಿಸಿದ ಸ್ಥಳಗಳಲ್ಲಿ ಕುಡಿಯುವ ನೀರನ್ನು ಬಳಸಿ ಬಟ್ಟೆ ಒಗೆಯುವುದು, ಹಸು, ಕರುಗಳ…
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷಕ್ಕಿಲ್ಲ. ಗೃಹ ಸಚಿವರು ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದಲೇ ಈ ಹಗರಣದ ತನಿಖೆ ಉತ್ತಮವಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಎಸ್ ಐ ನೇಮಕಾತಿ ಅಕ್ರಮ ಗೊತ್ತಾಗುತ್ತಿದ್ದಂತೆಯೇ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಿಐಡಿ ತನಿಖೆಗೆ ಆದೇಶಿಸಿ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಯಲಿಗೆಳೆಯುವ ಕೆಲಸ ಮಾಡಿದ್ದಾರೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು. ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗೃಹ ಸಚಿವರ ರಾಜೀನಾಮೆ ಕೇಳುವ ಹಕ್ಕಿಲ್ಲ. ಗೃಹ ಸಚಿವರು ತೋರಿದ ಆಸಕ್ತಿ, ದಕ್ಷತೆಯಿಂದಲೇ ಈ ಪ್ರಕರಣ ಇಲ್ಲಿಯವರೆಗೆ ಬಂದಿದೆ ಎಂದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲೇ ಪಿಎಸ್ ಐ ಹಗರಣ ಆಗಿತ್ತು. ಪ್ರಶ್ನೆಪತ್ರಿಕೆ ಬಹಿರಂಗಗೊಂಡಿತ್ತು. ಹಿರಿಯ ಅಧಿಕಾರಿ ಆರೋಪಿಯಾಗಿದ್ದರೂ ಆಗ ಯಾವುದೇ ಕ್ರಮಕೈಗೊಂಡಿರಲಿಲ್ಲ. ನಮ್ಮ ಅಧಿಕಾರಿಗಳಿಗೆ ಸಂಪೂರ್ಣ ಸ್ವತಂತ್ರ ನೀಡಿದ್ದೇವೆ. ನಮ್ಮದು ಜೀರೋ ಟಾಲರೆನ್ಸ್ ಯಾವುದನ್ನೂ…
ಕ್ರಿಪ್ಟೊ ಕರೆನ್ಸಿಯಲ್ಲಿ ಉತ್ತೇಜನ ನೀಡದಿರುವ ಭಾರತದ ಸಂಪ್ರದಾಯವಾದಿ ನಿಲುವು ವಿವಿಧ ಕ್ರಿಪ್ಟೊ ಫಂಡ್ ಗಳ ಋಣಾತ್ಮಕ ಅನುಭವಗಳಿಂದ ತ್ವರಿತವಾಗಿ ಸಮರ್ಥಿಸಲ್ಪಟ್ಟಿರುವ ಅಂಶ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ ತಜ್ಷರು ನೀಡಿರುವ ಮಾಹಿತಿ ಪ್ರಕಾರ ಪ್ರತಿಕೂಲ ಆರ್ಥಿಕ ಪರಿಸ್ಥಿತಿಯಿಂದಾಗಿ ಭಾರತ ಕ್ರಿಪ್ಟೊ ಕರೆನ್ಸಿಯಲ್ಲಿ ಸರಿಯಾಗಿ ಊಹಿಸಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಕಳೆದವಾರ ಸಿಂಗಾಪುರ ಮೂಲದ ಕ್ರಿಪ್ಟೊ ಹೆಡ್ಜ್ ಫಂಡ್, ತ್ರಿಆರೋಸ್ ಕ್ಯಾಪಿಟಲ್ ತೊಂದರೆಯಲ್ಲಿರುವುದು ಮಾಧ್ಯಮ ಮೂಲಗಳು ಬಹಿರಂಗಪಡಿಸಿವೆ. ಕ್ರಿಪ್ಟೊ ಮಾರುಕಟ್ಟೆಯ ಮೌಲ್ಯಮಾಪನ ಇತ್ತೀಚೆಗೆ ಕುಸಿದಿರುವುದರಿಂದ ಉನ್ನತ ಪ್ರೊಫೈಲ್ ಕ್ರಿಪ್ಟೊ ಹೂಡಿಕೆ ತೊಂದರೆಗಳನ್ನು ಎದುರಿಸುತ್ತಿರುವ ಸಂಸ್ಥೆಗಳ ಪೈಕಿ ಇದೂ ಒಂದಾಗಿದೆ. ಕಳೆದ ವರ್ಷ ನವೆಂಬರ್ನಲ್ಲಿ ಈ ಸಂಸ್ಥೆ ಗರಿಷ್ಠ ಮಟ್ಟ ತಲುಪಿದಾಗಿನಿಂದ ಇದು ಸುಮಾರು 3ನೇ 1 ಭಾಗದಷ್ಟು ಕುಸಿತಕಂಡಿದೆ. ತ್ರಿಆರೋಸ್ 15,250 ಬಿಡ್ ಕಾಯಿನ್ (324 ದಶಲಕ್ಷ ಅಮೆರಿಕನ್ ಡಾಲರ್) ಮತ್ತು 350 ದಶಲಕ್ಷ ಅಮೆರಿಕನ್ ಡಾಲರ್ ಸಾಲವನ್ನು ಪಾವತಿ ಮಾಡಲು ವಿಫಲವಾಗಿದ್ದು, ಈಗ ಈ ಸಂಸ್ಥೆ ದಿವಾಳಿಯ ಹಂಚಿಕೆ ಬಂದು…
ಕೊರಟಗೆರೆ: ದ್ವಿಚಕ್ರ ವಾಹನದಲ್ಲಿ ವಿವಿಧ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಾ, ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದ ಯುವಕರಿಗೆ ಕೊರಟಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ ಬಿಸಿ ಮುಟ್ಟಿಸಿದ್ದು, ಯುವಕನೋರ್ವನಿಗೆ ದಂಡ ವಿಧಿಸಿದೆ. ಬೈಕ್ ವೀಲಿಂಗ್ ಮಾಡುತ್ತಿದ್ದ ಕೊರಟಗೆರೆ ಪಟ್ಟಣದ ಮುತ್ತುರಾಜು ಬಿನ್ ಗಂಗರಾಜು ಎಂಬ ಯುವಕನಿಗೆ ಕೊರಟಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ 7 ಸಾವಿರ ದಂಡ ವಿಧಿಸಿದ್ದು, ಈ ಮೂಲಕ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವುದೇ ಅಲ್ಲದೇ, ಇತರರ ಪ್ರಾಣಕ್ಕೂ ಅಪಾಯ ಸೃಷ್ಟಿಸುತ್ತಿರುವ ಪುಂಡರಿಗೆ ಕಾನೂನಿನ ಬಿಸಿ ಮುಟ್ಟಿಸಲಾಗಿದೆ. ಕೊರಟಗೆರೆ ವೃತ್ತ ನಿರೀಕ್ಷಕ ಸಿದ್ದರಾಮೇಶ್ವರರವರು, ವ್ಹೀಲಿಂಗ್ ಮಾಡುತ್ತಿದ್ದ ಯುವಕನ ವಾಹನ ಜಪ್ತಿ ಮಾಡಿದ್ದರು. ಇದೀಗ ಯುವಕನಿಗೆ ಕೊರಟಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ 7 ಸಾವಿರ ದಂಡ ವಿಧಿಸಿದೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು. ಹಾಸನದಲ್ಲಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಬಡವರ ಕಷ್ಟಕ್ಕೆ ಪ್ರೀತಿಯಿಂದ ಸ್ಪಂದಿಸುವ ಮೂಲಕ ಬಿಜೆಪಿ ಪಕ್ಷ ಜನರಿಗೆ ಹತ್ತಿರವಾಗಲು ವೇಣು ಅವರು ಶ್ರಮಿಸಿದ್ದಾರೆ. ಜಾತಿ, ಧರ್ಮ, ಮತ ಇವೆಲ್ಲವನ್ನೂ ಮೀರಿ ಯಾರೇ ಸಹಾಯ ಕೇಳಿದರೂ, ಅವರ ಜಾತಿ ಧರ್ಮ ನೋಡದೇ ನೆರವಿಗೆ ಧಾವಿಸುವ ವೇಣು ಅವರು ಎಲ್ಲಾ ಬಿಜೆಪಿ ಮುಖಂಡರಿಗೆ ಮಾದರಿಯಾಗಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ತಿಳಿಸಿದ್ದಾರೆ. ಆರೆಸ್ಸೆಸ್ ಕಾರ್ಯಕರ್ತನಾಗಿ ನ್ಯಾಯ, ನಿಷ್ಠೆ, ಪ್ರೀತಿಗೆ ಹೆಚ್ಚು ಒಲವನ್ನು ನೀಡುವ ಇವರು, ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿ,…
ತುಮಕೂರು: ರಸ್ತೆ ದಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ದೇಹ ಛಿದ್ರಛಿದ್ರಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದ್ದು, ಡಿಕ್ಕಿ ಹೊಡೆದ ವಾಹನ ಹಾಗೂ ವ್ಯಕ್ತಿಯ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ. ಇಲ್ಲಿನ ಊರುಕೆರೆ ಬಳಿಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಬೆಳಗ್ಗಿನ ಜಾವ ಅಪಘಾತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿಯ ಮುಖ ಹಾಗೂ ದೇಹ ಜಜ್ಜಿ ಹೋಗಿದ್ದು, ಭೀಕರವಾಗಿ ಕಂಡು ಬಂದಿದೆ. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ರಾಜ್ಯ ಪೌರ ನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯನ್ನು ಪೌರಕಾರ್ಮಿಕರನ್ನು ಸರ್ಕಾರ ಖಾಯಂಗೊಳಿಸುವ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ವಾಪಸ್ ಪಡೆದುಕೊಳ್ಳಲಾಯಿತು. ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹೊರಗುತ್ತಿಗೆ ನೌಕರರು ಹಿಂಪಡೆಯುವಂತೆ ಹಿರಿಯೂರು ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಅವರು ಮನವಿ ಮಾಡಿದ್ದರು. ನಗರಸಭಾ, ಪಟ್ಟಣ ಪಂಚಾಯತಿ, ಪುರಸಭೆ ಹಾಗೂ ಎಲ್ಲಾ ಹೊರಗುತ್ತಿಗೆ ಪೌರಕಾರ್ಮಿಕರನ್ನು ಸರ್ಕಾರ ಖಾಯಂಗೊಳಿಸುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಮುಷ್ಕರನಿರತ ಪೌರಕಾರ್ಮಿಕರು ತಮ್ಮ ಮುಷ್ಕರವನ್ನು ಸ್ಥಗಿತಗೊಳಿಸಿ, ಕೆಲಸಕ್ಕೆ ಹಾಜರಾಗುವ ಜೊತೆಗೆ ಕಳೆದ ನಾಲ್ಕು ದಿನಗಳಿಂದ ಬಾಕಿ ಇರುವ ನಗರದ ಸ್ವಚ್ಛತೆಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಮನವಿ ಮಾಡಿದರು. ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ತಾಲ್ಲೂಕು ಸಮಿತಿಯು ಸಹ…
ಹವಾಮಾನ ವೈಪರೀತ್ಯದಿಂದಾಗಿ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಗಾಂನ ನುನ್ವಾನ್ ಶಿಬಿರದಿಂದ ಪವಿತ್ರ ಗುಹೆಯತ್ತ ತೆರಳಲು ಯಾತ್ರಾರ್ಥಿಗಳಿಗೆ ಅನುಮತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತಾನಾಗ್ ಜಿಲ್ಲೆಯ ಪಹಲ್ಗಾಂನ ಮೂಲ ಶಿಬಿರವನ್ನು ಕಳೆದ ಗುರುವಾರ ಅಮರನಾಥ ಯಾತ್ರಿಗಳ ಮೊದಲ ತಂಡ ತಲುಪಿತ್ತು. ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆಗೆ ಈ ಬಾರಿ ಚಾಲನೆ ನೀಡಿತ್ತು. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಿವಿಕವಾಗಿ ರೂಪಗೊಂಡ ಮಂಜುಗಡ್ಡೆ ಲಿಂಗವನ್ನು ಹೊಂದಿರುವ ಗುಹೆಯಲ್ಲಿರುವ ದೇಗುಲ ಜಗತ್ಪ್ರಸಿದ್ಧವಾಗಿದೆ. ಶಿವಲಿಂಗನ ದರ್ಶನ ಪಡೆದು ಬಹುತೇಕ ಯಾತ್ರಿಕರು ಕಾಲ್ನಡಿಗೆಯಲ್ಲಿ ತೆರಳುತ್ತಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗರ್ವನರ್ ಜಮ್ಮು ಬೇಸ್ ಕ್ಯಾಂಪ್ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡಿದರು. ಅಮರನಾಥ ದೇಗುಲ ಮಂಡಳಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಆನ್ ಲೈನ್ ದರ್ಶನ ಅವಕಾಶ ಕಲ್ಪಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ತುಮಕೂರು: ಕಳೆದ ಎರಡು ದಿನಗಳ ಹಿಂದೆ ರಾಜ್ಯದ ಖಾಸಗಿ ಸುದ್ದಿ ವಾಹಿನಿಯು ಸ್ಪ್ರಿಂಗ್ ಆಪರೇಷನ್ ಮೂಲಕ ಹಾವೇರಿಯ ಮಹಿಳಾ ಮುಖಂಡರೊಬ್ಬರ ಬಗ್ಗೆ ವರದಿ ಬಿತ್ತರಿಸಿತ್ತು. ಈ ವರದಿ ಬಿತ್ತರವಾದ ಕೂಡಲೇ ಹಾವೇರಿಯ ರೈತ ಮಹಿಳಾ ಮುಖಂಡರಾದ ಮಂಜುಳಾ ಪೂಜಾರ್ ಹಾಗೂ ಇತರರು ಪತ್ರಿಕಾಗೋಷ್ಠಿ ನಡೆಸುವ ನೆಪದಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವರದಿಗಾರರ ಮೇಲೆ ಹಲ್ಲೆ ನಡೆಯುತ್ತಿದ್ದಂತೆ ರಾಜ್ಯದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇನ್ನು ಇದಕ್ಕೆ ಸಂಬಂಧಿಸಿದಂತೆ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕ ಹಾಗೂ ತುಮಕೂರು ಜಿಲ್ಲೆಯ ಎಲ್ಲಾ ಪತ್ರಕರ್ತರ ವತಿಯಿಂದ ವರದಿಗಾರರ ಮೇಲಿನ ಹಲ್ಲೆಯನ್ನು ಖಂಡಿಸಿ, ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚೀನಿ ಪುರುಷೋತ್ತಮ್, ವರದಿಗಾರರ ಮೇಲಿನ ಹಲ್ಲೆ ನಿಜಕ್ಕೂ ಖಂಡನೀಯ, ಇನ್ನು ಹಲವು ನಕಲಿ ಮುಖಂಡರ ಮುಖವಾಡಗಳನ್ನ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು…
ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿ ಹತ್ಯೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಭಕ್ತರ ಸೋಗಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುರೂಜಿಗೆ ಮನಬಂದಂತೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಸಂಬಂಧಿಸಿದ ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾಂತೇಶ್ ಶಿರೋಳ್ ಮತ್ತು ಮಂಜುನಾಥ್ ದುಮ್ಮವಾಡ ಬಂಧಿತ ಆರೋಪಿ ಆಗಿದ್ದಾರೆ. ಇಬ್ಬರೂ ಆರೋಪಿಗಳು ಧಾರವಾಡ ಜಿಲ್ಲೆಯ ತಲಘಟಗಿ ತಾಲೂಕಿನ ದುಮ್ಮವಾಡ ನಿವಾಸಿಗಳು ಎಂದು ತಿಳಿದು ಬಂದಿದೆ. ನಗರದ ಉಣಿಕಲ್ ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಗುರೂಜಿ ಹತ್ಯೆ ಮಾಡಿದವರ ಬಂಧನಕ್ಕೆ ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿತ್ತು. ನಗರ ನಾಲ್ಕೂ ದಿಕ್ಕಿನಲ್ಲಿ ನಾಕಾಬಂಧಿ ಹಾಕಿದ ಪೊಲೀಸರು ಘಟನೆ ನಡೆದು ನಾಲ್ಕು ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಉಣಕಲ್ ರಸ್ತೆಯಲ್ಲಿ ಇರುವ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಮಧ್ಯಾಹ್ನ 12:23ರ ಹೊತ್ತಿಗೆ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿಯ ಹತ್ಯೆ ನಡೆಯಿತು. ಭಕ್ತರ ಸೋಗಿನಲ್ಲಿ ಬಂದಿದ್ದ ಆರೋಪಿಗಳು ರಿಸೆಪ್ಷನ್ ಬಳಿ…