Subscribe to Updates
Get the latest creative news from FooBar about art, design and business.
- ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
- ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
- ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
- ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
Author: admin
ತಿ.ನರಸೀಪುರ: ಇಲ್ಲಿನ ತಲಕಾಡು ಪೋಲೀಸ್ ಠಾಣೆಯ ಪಿಎಸ್ಐ ಸಿದ್ದಯ್ಯ ಹಾಗೂ ಮುಖ್ಯಪೇದೆ ಸತೀಶ್ ಕುಮಾರ್ ಎಸಿಬಿ ಬಲೆಗೆ ಬಿದ್ದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಿ ಸಂಧಾನ ವಿಚಾರವಾಗಿ 7, 500ರೂ.ಗಳ ಲಂಚಕ್ಕೆ ಪಿಎಸ್ ಐ ಸಿದ್ದಯ್ಯ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಈ ಸಂಬಂಧ ದೂರುದಾರ ಅಶೋಕ್ ಕುಮಾರ್ ಎಸಿಬಿಗೆ ದೂರು ನೀಡಿದ್ದರೆನ್ನಲಾಗಿದೆ. ಈ ಭ್ರಷ್ಟಾಚಾರದಲ್ಲಿ ಮುಖ್ಯಪೇದೆ ಸತೀಶ್ ಕುಮಾರ್ ಕೂಡ ಭಾಗಿಯಾಗಿದ್ದು, ಇವರಿಬ್ಬರನ್ನೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಮಧುಗಿರಿ : ಪರಿಸರವ ರಕ್ಷಣೆ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲ್ಲೂಕಿನ ಜನಕಲೋಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಸಿಗಳನ್ನು ನೆಟ್ಟರೆ ಸಾಲದು, ಮರ ಆಗುವವರೆಗೂ ಅದರ ಸಂರಕ್ಷಣೆ ಮಾಡವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಅರಣ್ಯ ಇಲಾಖೆ ಮತ್ತಷ್ಟು ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರ ಉಳಿವಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನಮ್ಮ ಸುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಈ ದಿಸೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದರು. ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ, ವಲಯ ಅರಣ್ಯ ಅಧಿಕಾರಿ ಸಿ.ರವಿ, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ವಲಯ ಅರಣ್ಯ ಅಧಿಕಾರಿ ತಾರಕೇಶ್ವರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಆರ್.ಕೆ.ರೆಡ್ಡಿ, ಸದಸ್ಯ ಜೀಲಾನ್, ನರಸಿಂಹಯ್ಯ, ಬಿ.ಆರ್.ಸಿ ಹನುಮಂತರಾಯಪ್ಪ, ಸಿ.ಆರ್.ಪಿ. ರಂಗನಾಥಪ್ಪ, ಮುಖ್ಯ ಶಿಕ್ಷಕ ಚಂದ್ರಣ್ಣ,…
ಮಧುಗಿರಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತುಮಕೂರು ಜಿಲ್ಲೆ -2 ಇವರ ವತಿಯಿಂದ ಜು.6 ರ ಬೆಳಗ್ಗೆ 11 ಗಂಟೆಗೆ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸ್ವ-ಉದ್ಯೋಗ ಮೇಳ ಮತ್ತು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಮಾವೇಶದ ಉದ್ಘಾಟನೆಯನ್ನು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದಾರೆ ಎಂದು ಟ್ರಸ್ಟ್ ನ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಎಂ.ಶೀನಪ್ಪ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಾಸಕ ಎಂ.ವಿ.ವೀರಭಧ್ರಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಸ್ತುಪ್ರದರ್ಶನದ ಉದ್ಘಾಟನೆಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ನೆರವೇರಿಸಲಿದ್ದಾರೆ. 44ನೇ ನಮ್ಮ ಊರು ನಮ್ಮ ಕೆರೆ ಲೋಕಾರ್ಪಣೆಯನ್ನು ಸಂಸದ ಜಿ.ಎಸ್.ಬಸವರಾಜು ಮಾಡಲಿದ್ದು, ಶಾಸಕ ಡಾ.ಜಿ.ಪರಮೇಶ್ವರ್ ಸುಜ್ಞಾನ ನಿಧಿ ಶಿಷ್ಯ ವೇತನವನ್ನು, ಡಾ.ಎಚ್.ಎಲ್.ಮಂಜುನಾಥ್ ಜನಮಂಗಲ ಸಲಕರಣೆ ವಿತರಣೆಯನ್ನು, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆರೋಗ್ಯ ರಕ್ಷಾ ಸೌಲಭ್ಯ ವಿತರಣೆಯನ್ನು, ಎಂ.ಚಿದಾನಂದಗೌಡ ಮಾಶಾಸನ ಪತ್ರಗಳನ್ನು, ಎಂ.ಆರ್.ಮನೋಹರ್ ಲಾಭಾಂಶ ಪತ್ರ ವಿತರಣೆಯನ್ನು ಮಾಡಲಿದ್ದಾರೆ ಎಂದು ತಿಳಿಸಿದರು. ಪುರಸಭೆ…
ಹಿರಿಯೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ವ್ಯಕ್ತಿಯೋರ್ವರಿಗೆ ಯುವಕನೊಬ್ಬನೊಬ್ಬ ಚಾಕುವಿನಿಂದ ಇರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಕೃಷ್ಣ ರಾಜಪುರ ರಸ್ತೆಯಲ್ಲಿ ನಡೆದಿದೆ . 35 ವರ್ಷ ವಯಸ್ಸಿನ ಸಮೀವುಲ್ಲಾ ಚಾಕು ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದು, ನೂತನ್ ಎಂಬ ಯುವಕ ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆಂದು ತಿಳಿದು ಬಂದಿದೆ. ಕಳೆದ ವರ್ಷ ಗಣೇಶ ಹಬ್ಬದಂದು ಆಲೂರು ಜಾಮಿಯಾ ಮಸೀದಿ ಎದುರು ಪಟಾಕಿ ಸಿಡಿಸಲಾಗಿತ್ತು. ಇದಕ್ಕೆ ಸಮೀವುಲ್ಲಾ ಆಕ್ಷೇಪ ವ್ಯಕ್ತಪಡಿಸಿದ್ದನಂತೆ. ಆಗಿನಿಂದ ನೂತನ್ ಹಾಗೂ ಮೆಮ್ ಸಮೀವುಲ್ಲಾ ನಡುವೆ ಪರಸ್ಪರ ದ್ವೇಷ ಬೆಳದಿತ್ತು ಎನ್ನಲಾಗಿದೆ. ಇನ್ನು ಮೊನ್ನೆ ರಾತ್ರಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಈ ವೇಳೆ ನೂತನ್ ಸಮಿವುಲ್ಲಾನಿಗೆ ಚಾಕು ಇರಿದು ಗಾಯಗೊಳಿಸಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇದೇ ವೇಳೆ ಗಾಯಗೊಂಡಿರುವ ಸಮೀವುಲ್ಲಾನ ಸ್ಥಿತಿ ಗಂಭೀರವಾಗಿದ್ದು, ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.ಈಗ ಆತ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಹಿರಿಯೂರು ತಾಲ್ಲೂಕಿನ ಗ್ರಾಮಾಂತರ ಪೋಲಿಸ್ ಠಾಣೆ ಪಿ ಎಸ್ ಐ …
ತುಮಕೂರು: ಜಿಲ್ಲೆ ತುರುವೇಕೆರೆ ಪಟ್ಟಣದ ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ಕೃಷಿ ಇಲಾಖೆಯ 2021—22 ನೇ ಸಾಲಿನ ಕೃಷಿ ಕಾರ್ಯಕ್ರಮದಡಿ ಸಮಗ್ರ ಕೃಷಿ ಮಾಹಿತಿ ರಥ ಹಾಗೂ ಆತ್ಮ ಯೋಜನೆಯಡಿ ರೈತರಿಗೆ ತರಬೇತಿ ಕಾರ್ಯಕ್ರಮ ಮತ್ತು ರೈತ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕಿನ ಶಾಸಕ ಮಸಾಲ ಜಯರಾಮ್, ನಮ್ಮ ತುರುವೇಕೆರೆ ತಾಲೂಕಿನ ರೈತರು ತೆಂಗು, ಅಡಿಕೆ, ಬೆಳೆಗಳನ್ನು ಬೆಳೆದು ಭತ್ತ, ರಾಗಿ ಮುಂತಾದ ಆಹಾರಗಳನ್ನು ಬೆಳೆಯುವಲ್ಲಿ ನಿರಾಸಕ್ತಿ ಹೊಂದಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಅತಿ ಹೆಚ್ಚು ಭತ್ತ, ರಾಗಿ ಆಹಾರ ಧಾನ್ಯಗಳನ್ನು ಬೆಳೆದ ತಾಲೂಕಿನ ರೈತರಿಗೆ ಚಿನ್ನದ ಖಡಗ ತೊಡಿಸುವುದಾಗಿ ಘೋಷಣೆ ಮಾಡಿದರು. ಇದೇ ವೇಳೆ ಆತ್ಮ ಯೋಜನೆಯಡಿ ತಾಲೂಕಿನಲ್ಲಿ ಸಮಗ್ರ ಕೃಷಿಯಲ್ಲಿ ತೊಡಗಿರುವ ರೈತರನ್ನು ಸನ್ಮಾನಿಸಿದ ಶಾಸಕರು, ವಿವಿಧ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಸಿ.ಎಸ್.ಆಶಾರಾಣಿ , ತಾಲೂಕು ಕೃಷಿ ಸಮಾಜದ ಅಧ್ಯಕ್ಷರಾದ ಕೆಂಪರಾಜು,…
ನೀವು ರೈಲು ಪ್ರಯಾಣಿಕರಾಗಿದ್ದರೆ ಪ್ರಯಾಣಕ್ಕಾಗಿ ಆನ್ಲೈನ್ ನಲ್ಲಿ ಟಿಕೆಟ್ಗಳನ್ನು ಬುಕ್ ಮಾಡುತ್ತಿದ್ದರೆ ಮೊದಲು ಈ ಸುದ್ದಿಯನ್ನು ತಪ್ಪದೇ ಓದಿ. ಐಆರ್ಸಿಟಿಸಿ ಅಪ್ಲಿಕೇಶನ್ ಮತ್ತು ವೆಬ್ಸೈಟ್ ಮೂಲಕ ಟಿಕೆಟ್ ಬುಕ್ ಮಾಡುವ ನಿಯಮಗಳನ್ನು ಬದಲಾಯಿಸಿದೆ. ಐಆರ್ಸಿಟಿಸಿ ನಿಯಮದ ಪ್ರಕಾರ, ಟಿಕೆಟ್ ಬುಕಿಂಗ್ಗಾಗಿ ನಿಮ್ಮ ಖಾತೆಯನ್ನು ನೀವು ಪರಿಶೀಲಿಸಬೇಕು ಇಲ್ಲವೇ, ಟಿಕೆಟ್ಗಳನ್ನು ಬುಕ್ ಮಾಡಲು ಸಾಧ್ಯವಾಗುವುದಿಲ್ಲ. ಪರಿಶೀಲನೆ ಇಲ್ಲದೆ ಬುಕ್ ಆಗಲ್ಲ ಟಿಕೆಟ್: ಭಾರತೀಯ ರೈಲ್ವೆಯ ಅಂಗಸಂಸ್ಥೆಯಾದ ಐಆರ್ಸಿಟಿಸಿಯ ಹೊಸ ನಿಯಮಗಳ ಅನ್ವಯ, ಬಳಕೆದಾರರು ಈಗ ಟಿಕೆಟ್ ಬುಕ್ ಮಾಡುವ ಮೊದಲು ತಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಪರಿಶೀಲಿಸಬೇಕಾಗುತ್ತದೆ. ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸದೆ ನೀವು ಆನ್ ಲೈನ್ನಲ್ಲಿ ಟಿಕೆಟ್ಗಳನ್ನು ಬುಕ್ ಮಾಡಲು ಸಾಧ್ಯವಾಗುವುದಿಲ್ಲ ಎಂಬುದು ಗಮನಿಸಬೇಕಾದ ಅಂಶವಾಗಿದೆ. ವಾಸ್ತವವಾಗಿ, ಕರೋನಾ ಸಾಂಕ್ರಾಮಿಕ ರೋಗ ಆರಂಭವಾದ ಬಳಿಕ ಆನ್ಲೈನ್ನಲ್ಲಿ ಟಿಕೆಟ್ಗಳನ್ನು ಬುಕ್ ಮಾಡದ ಐಆರ್ಸಿಟಿಸಿ ಖಾತೆಗಳನ್ನು ಹೊಂದಿರುವ ಅನೇಕ ಬಳಕೆದಾರರು ಇದ್ದಾರೆ. ಈ ನಿಯಮವು ಅಂತಹ ಜನರಿಗೆ ಮಾತ್ರ…
ಬೆಂಗಳೂರು: ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದು, ಇಂದು ಶಾಸಕ ಜಮೀರ್ ಅಹ್ಮದ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ ಬಳಿ ಇರುವ ಮನೆ ಸೇರಿದಂತೆ ಐದು ಕಡೆಗಳಲ್ಲಿ ಏಕಕಾಲಕ್ಕೆ ರೇಡ್ ಮಾಡಲಾಗಿದೆ. ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡ ಎಸಿಬಿ ಇಂದು ದಾಳಿ ನಡೆಸಿ ತನಿಖೆ ನಡೆಸುತ್ತಿದೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ ಬಳಿಯ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಎಸಿಬಿ ಅಧಿಕಾರಿಗಳು ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಬಂಬೂಬಜಾರ್ನ ಮನೆ ಬಳಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಐಎಂಎ ಕೇಸ್ ಸಂಬಂಧ ಇಡಿ ಎಸಿಬಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ…
ಆಯುರ್ವೇದದಲ್ಲಿ ಗಿಡಮೂಲಿಕೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಎಲ್ಲಾ ಗಿಡ ಮೂಲಿಕೆಗಳು ಸಹ ಒಂದಿಲ್ಲೊಂದು ಪ್ರಯೋಜನವನ್ನು ಹೊಂದಿರುತ್ತವೆ. ಅಂತಹ ಎಲೆಗಳಲ್ಲಿಯೇ ಒಂದು ಈ ದೊಡ್ಡಪತ್ರೆ ಎಲೆ. ಇದನ್ನು ಸಾಮಾನ್ಯವಾಗಿ ಅಜ್ವೈನ್ ಎಲೆಗಳು, ದೊಡ್ಡಿಪತ್ರೆ ಎಲೆಗಳು, ಸೆಲರಿ ಸಸ್ಯ ಎಂತಲೂ ಕರೆಯಲಾಗುತ್ತದೆ. ಈ ಎಲೆಗಳು ವಾತ-ಪಿತ್ತದಲ್ಲಿ ಪರಿಹಾರ ನೀಡುವುದಲ್ಲದೆ ಕೆಮ್ಮು ಮತ್ತು ಶೀತ, ಶ್ವಾಸಕೋಶ, ಮೂತ್ರದ ಸಮಸ್ಯೆ, ಅಲರ್ಜಿ, ತೂಕ ಹೆಚ್ಚಳದಿಂದಲ್ಲೂ ಪರಿಹಾರ ನೀಡುತ್ತದೆ ಎಂದು ಹೇಳಲಾಗುತ್ತದೆ. ದೊಡ್ಡಪತ್ರೆ ಎಲೆಗಳಲ್ಲಿರುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ… ದೊಡ್ಡಪತ್ರೆ /ಅಜ್ವೈನ್ ಎಲೆಗಳ ಪ್ರಯೋಜನಗಳು: ಅಜ್ವೈನ್ ಸಸ್ಯವು ತುಂಬಾ ಪ್ರಯೋಜನಕಾರಿಯಾಗಿದೆ. ಚಳಿಗಾಲದಲ್ಲಿ ಇದು ನಮಗೆ ವಿಶೇಷವಾಗಿ ಉಪಯುಕ್ತವಾಗಿದೆ. ಸೆಲರಿ ಸಸ್ಯವು ನೋಡಲು ಆಕರ್ಷಕವಾಗಿರುವುದು ಮಾತ್ರವಲ್ಲ, ಇದರ ಎಲೆಗಳನ್ನು ಅನೇಕ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸಲು ಉಪಯೋಗಿಸುತ್ತಾರೆ. ಇದನ್ನು ಅನೇಕ ದೇಶೀಯ ಔಷಧಿಗಳಲ್ಲಿಯೂ ಸಹ ಬಳಸುತ್ತಾರೆ. ವಾತದ ಸಮಸ್ಯೆ ಇರುವವರಿಗೆ ಪ್ರಯೋಜನಕಾರಿ: ನಮ್ಮ ಆಹಾರದಲ್ಲಿನ ಬದಲಾವಣೆ ಬಿಡುವಿಲ್ಲದ ಜೀವನ ಶೈಲಿಯಿಂದಾಗಿ ಹಲವರು ವಾತದ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಅಂತಹವರಿಗೆ ದೊಡ್ಡಪತ್ರೆ ಎಲೆಗಳ…
ಅಲ್ಲೂರಿ ಸೀತಾರಾಮ ರಾಜು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಯವರ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಸಂಭವಿಸಬಹುದಾದ ಭಾರೀ ದುರಂತವೊಂದು ತಪ್ಪಿದೆ. ಪಂಜಾಬ್ನಲ್ಲಿ ನಡೆದಿದ್ದ ಭದ್ರತಾ ಲೋಪದ ಬಳಿಕ ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದೆ. ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದ ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದಂದು ಪ್ರತಿಮೆ ಅನಾವರಣ ಮಾಡಲು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಆದರೆ ಪ್ರಧಾನಿ ಭೇಟಿಗೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭಲ್ಲಿ ಕಪ್ಪು ಬಲೂನ್ಗಳನ್ನು ಹಾರಿ ಬಿಡಲಾಗಿತ್ತು. ಬಲೂನ್ಗಳು ಎಲ್ಲವೂ ಆಕಾಶದಲ್ಲಿ ಹಾರುತ್ತಿದ್ದವು. ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಸಿ ಹೊರಡಬೇಕು ಎಂದು ಹೆಲಿಕಾಪ್ಟರ್ ಹತ್ತಿದ್ದಾರೆ. ಆದರೆ ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆ ಪ್ರತಿಭಟನಾಕಾರರು ಹಾರಿಬಿಟ್ಟ ಬಲೂನ್ ಅಡ್ಡಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲೆಟ್ ಬಹುದೊಡ್ಡ ಅಪಾಯ ತಪ್ಪಿಸಿದ್ದಾರೆ. ಪ್ರತಿಭಟನೆ ವೇಳೆ ಬಲೂನ್…
ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಮತ್ತೆ ಭೂಕಂಪ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್ಬ್ಲೇರ್ನಲ್ಲಿ ಇಂದು ಬೆಳಿಗ್ಗೆ 5.57ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಪೋರ್ಟ್ ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 215 ಕಿಮೀ ಇಎಸ್ಇ ದೂರದಲ್ಲಿ ಮುಂಜಾನೆ 5.57 ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಕೊಲ್ಲಿಯಿಂದ 44 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS), ಭೂಕಂಪನದ ತೀವ್ರತೆ: 5.0, ಕಾಲಮಾನ 05-07-2022 ರಂದು ಬೆಳಿಗ್ಗೆ 05:57:04 IST, ಲ್ಯಾಟ್: 10.54 ಮತ್ತು ಉದ್ದ: 94.36, ಆಳ: 44 ಕಿಮೀ , ಸ್ಥಳ: 215 ಕಿಮೀ, ಪೋರ್ಟ್ಬ್ಲೇರ್ ಮತ್ತು ಇಎಸ್ಇ ಮತ್ತು ನಿಕೋಬಾರ್ ದ್ವೀಪ, ಭಾರತ.” ಎಂದು ಮಾಹಿತಿ…