Subscribe to Updates
Get the latest creative news from FooBar about art, design and business.
- ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
- ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್.ಕೃಷ್ಣಮೂರ್ತಿ
- ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
- ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
- ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
- ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
- 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
- ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
Author: admin
ಬೆಳಗಾವಿ: ನಗರದಲ್ಲಿ ಎರಡು ವರ್ಷಗಳ ನಂತರ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗಾವಿ ಜನತೆಗೆ ಗಣೇಶ್ ಉತ್ಸವ ಒಂದು ವಿಶೇಷ ಹಬ್ಬವಾಗಿದ್ದು, ಎಲ್ಲಿ ಎಲ್ಲಾ ಸಮುದಾಯದ ಜನ ಸೇರಿ ಈ ಉತ್ಸವವನ್ನು ಆಚರಣೆ ಮಾಡುತ್ತಾರೆ. ಬೆಳಗಾವಿ ಗಣೇಶ್ ಉತ್ಸವ ತನ್ನದೇ ಆದ ಇತಿಹಾಸವನ್ನು ಹೊಂದಿದೆ. 1906ರಲ್ಲಿ ಸ್ವತಂತ್ರ ಹೋರಾಟಗಾರರಾದ ಬಾಲ್ ಗಂಗಾಧರ್ ತಿಲಕ್ ಅವರು ಸ್ವತಂತ್ರದ ಸಂಗ್ರಾಮದಲ್ಲಿ ಸಾರ್ವಜನಿಕರು ಭಾಗವಹಿಸಲು ಮತ್ತು ದೇಶವನ್ನು ಸ್ವಾತಂತ್ರ್ಯಗೊಳಿಸಲು ಧಾರ್ಮಿಕ ಆಚರಣೆ ಮತ್ತು ಹಬ್ಬಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಮ್ಮಿಕೊಂಡು ಅದರ ಅಂಗವಾಗಿ ಬೆಳಗಾವಿಯಲ್ಲಿ ಗಣೇಶ್ ಉತ್ಸವ ಪ್ರಾರಂಭಿಸಿದರು. ಈಗ 125 ವರ್ಷಗಳ ಕಳೆದು ತನ್ನ ಇತಿಹಾಸ ಪ್ರದರ್ಶನ ಮಾಡುತ್ತಾ ಇದೆ. ಈ ಸಂದರ್ಭದಲ್ಲಿ ಬೆಳಗಾವಿ ಪ್ರತಿ ಗಲ್ಲಿಗಳಲ್ಲಿ ಸಾರ್ವಜನಿಕ ಗಣಪತಿ ಮಂಟಪಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹತ್ತು ದಿನಗಳ ಕಾಲವರೆಗೆ ಈ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾ ಇದ್ದಾರೆ. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಾಡ್೯ ನಂ 44 ಸೇವಕರಾದ…
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಆದರೆ ಈಗ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 75 ಯುನಿಟ್ ಮಾಸಿಕ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು ಎಂದಿದ್ದಾರೆ. ಈ ಯೋಜನೆಯ ಸಂಬಂಧ ಸರ್ಕಾರದಿಂದ ಹೊರಡಿಸಿದ್ದಂತ ಸುತ್ತೋಲೆಯನ್ನು, ಈ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದವರಿಗೆ ಬಿಗ್ ಶಾಕ್ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾಲ್ಘರ್: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪಾಲ್ಘರ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಪಾಲ್ಘರ್ ಜಿಲ್ಲಾ ಪೋಲಿಸ್ ಅಧೀಕ್ಷಕರು ನೀಡಿದ್ದಾರೆ. ಸೈರಸ್ ಪಲ್ಲೋಂಜಿ ಮಿಸ್ತ್ರಿ ಭಾರತೀಯ ಮೂಲದ ಐರಿಷ್ ಉದ್ಯಮಿಯಾಗಿದ್ದವರು. ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಸೇತುವೆ ಹಾಗೂ ರಸ್ತೆಗಳ ದುರಸ್ಥಿಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡು ಶೀಘ್ರ ನೆರವು ನೀಡಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ತಾಲೂಕಿನ ಕಸಬಾ ಬೆಲ್ಲದಮಡುಗು ಕೆರೆ ಕೋಡಿ ಒಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಪಟ್ಟಣದ ಚೊಳೇನಹಳ್ಳಿ ಕೆರೆ ಕೋಡಿ ದುರಸ್ಥಿ ಕಾರ್ಯ ಹಾಗೂ ಕಾಳೇನಹಳ್ಳಿಯ ಬೃಹತ್ ಸೇತುವೆಗೆ ಆದ ಹಾನಿಯನ್ನು ಪರಿಶೀಲಿಸಿದ ಸಚಿವರು ಬಳಿಕ ಇಮ್ಮಡಗೊಂಡನಹಳ್ಳಿಯಲ್ಲಿ ಉಂಟಾದ ನೆರೆ ಹಾನಿಯನ್ನು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ನೀರಾವರಿ ಇಲಾಖೆಯ ಎಲ್ಲ ಕೆರೆಗಳು ತುಂಬಿದ್ದು, ನದಿಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ, ಕೆಲವೆಡೆ ಸೇತುವೆ ಹಾಗೂ ರಸ್ತೆಗಳಿಗೆ ಹಾನಿಯಾಗಿದೆ. ಇದಕ್ಕಾಗಿ ಅಗತ್ಯ ನೆರವನ್ನು ಅಧಿಕಾರಿಗಳ ವರದಿ ಬಂದಾಕ್ಷಣ ಬಿಡುಗಡೆ ಮಾಡಲಾಗುವುದು ಎಂದರು. ಸಣ್ಣ ನೀರಾವರಿ ಇಲಾಖೆಯ ಕೆರೆಗಳೆಲ್ಲ ತುಂಬಿದ್ದು, ಬೆಲ್ಲದಮಡುಗು ಕೆರೆ ಹೊರತು ಪಡಿಸಿ ಉಳಿದವು ಸುಭದ್ರವಾಗಿವೆ. ಬೆಲ್ಲದಮಡುಗು ಕೆರೆ ಕೋಡಿ, ಚೊಳೇನಹಳ್ಳಿ ಕೆರೆ ಕೋಡಿಯ ದುರಸ್ಥಿಕಾರ್ಯವನ್ನು ಶೀಘ್ರವಾಗಿ ಕೈಗೊಂಡು ಪೂರ್ಣಗೊಳಿಸಲು…
ಸರಗೂರು: ತಾಲ್ಲೂಕಿನ ನುಗು ಜಲಾಶಯದ ಹಿನ್ನೀರಿನಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಮೀನುಗಾರಿಕಾ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಅಕ್ರಮವಾಗಿ ಮೀನು ಹಿಡಿಯಲಾಗುತ್ತಿದೆ. ಈ ಬಗ್ಗೆ ಕಾನೂನು ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ನುಗು ಜಲಾಶಯದ ಮೀನಾಪಾಶುವಾರು ಹಕ್ಕಿನ ವಿಲೇವಾರಿ ಸಂಬಂಧ ಉಚ್ಚ ನ್ಯಾಯಾಲಯದಲ್ಲಿ ದಾವೆ ದಾಖಲಾಗಿದ್ದು, ನ್ಯಾಯಾಲಯ ಅಂತಿಮ ತೀರ್ಪು ನೀಡುವವರೆಗೂ ಮೀನುಗಾರಿಕೆ ನಡೆಸುವುದು ಕಾನೂನು ಬಾಹಿರವಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ, ಸೆಪ್ಟಂಬರ್ 1ರಂದು ಸಂಜೆ ಸುಮಾರು 30 ದೋಣಿಗಳಲ್ಲಿ ಬಲೆ ಹಾಕಿರುವ ಆರೋಪಿಗಳು, ಸೆಪ್ಟಂಬರ್ 2ರಂದು ಬರೋಬ್ಬರಿ 3 ಟನ್ ನಷ್ಟು ಮೀನುಗಳನ್ನು ರಾಜಾರೋಷವಾಗಿ ಹಿಡಿದು ಸಾಗಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನ್ಯಾಯಾಲಯದ ಆದೇಶ ಧಿಕ್ಕರಿ ಮೀನು ಹಿಡಿಯುತ್ತಿರುವುದನ್ನು ಕಂಡು ವಿಚಾರಿಸಲು ಹೋದವರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಇಷ್ಟೆಲ್ಲ ನಡೆದರೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು,…
ಹಿರಿಯೂರು: ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಅಣೆಕಟ್ಟು ಎಂದು ಕರೆಸಿಕೊಳ್ಳುವ ವಾಣಿ ವಿಲಾಸ ಸಾಗರ 88 ವರ್ಷಗಳ ನಂತರ ಐತಿಹಾಸಿಕ 2ನೇ ಬಾರಿಗೆ ಗುರುವಾರ ರಾತ್ರಿ ಕೋಡಿ ಬೀಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯನ್ನು ಸ್ಮರಿಸಬೇಕಿದೆ ಎಂದು ಮಾಜಿ ಶಾಸಕರಾದ ಡಿ.ಸುಧಾಕರ್ ಹೇಳಿದರು. ವಿಲಾಸ ಸಾಗರಕ್ಕೆ ಗಂಗಾ ಪೂಜೆ ಸಲ್ಲಿಸಿದ ಮಾತನಾಡಿದ ಅವರು, ವಾಣಿ ವಿಳಾಸ ಸಾಗರ ಕೋಡಿ ಹರಿಯುವ ಮೂಲಕ ಚಿತ್ರದುರ್ಗ ಜಿಲ್ಲೆಯ ಜನತೆಯ ಮೊಗದಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದರು. ಈ ಜಿಲ್ಲೆಗೆ ಭದ್ರಾ ಮೇಲ್ದಾಂಡನೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಜಿಲ್ಲೆಯ ರೈತ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ಶ್ರಮಿಸಿದ್ದವು. ಕೋದಂಡರಾಮ ಅವರು ಭದ್ರಾ ಮೇಲ್ದಾಂಡ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಿದ್ದರು ಎಂದು ಇದೇ ವೇಳೆ ಸುಧಾಕರ್ ತಿಳಿಸಿದರು. ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್ ಮಾತನಾಡಿ, ಬರದ ನಾಡಾಗಿದ್ದ ಚಿತ್ರದುರ್ಗ ಜಿಲ್ಲೆಯು ಇಂದು ಹಚ್ಚ ಹಸಿರಿನ ಕ್ರಾಂತಿಯಿಂದ ಕೂಡಿರಲು ಕಾರಣಕರ್ತರಾದ…
ಸರ್ಕಾರಿ ಶಾಲೆಗೆ ಸೇರಿದ ಜಾಗವು ಒತ್ತುವರಿಯಾಗಿದ್ದು, ಶಾಲೆಗೆ ಸೇರಿದ ಜಾಗವನ್ನು ಉಳಿಸುವಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ರವರಿಗೆ ಗ್ರಾಮಸ್ಥರು ಕೈ ಮುಗಿದು ಮನವಿ ಮಾಡಿದ ಘಟನೆ ನಡೆದಿದೆ. ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ದೊಡ್ಡತ್ತರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಾಗವನ್ನು ಗ್ರಾಮದ ಪ್ರಭಾವಿ ಮುಖಂಡರುಗಳು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿಯಾದ ಜಾಗವನ್ನು ತೆರವುಗೊಳಿಸಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮೇಗೌಡ ಒತ್ತಾಯಿಸಿದರು. ನ್ಯಾಯಾಲಯದ ಆದೇಶದಂತೆ ಶಾಲೆಯ ಜಾಗವನ್ನು ಗುರುತಿಸಿ, ಒತ್ತುವರಿಯಾದ ಜಾಗವನ್ನು ತೆರವುಗೊಳಿಸಲು ಇಂದು ಸರ್ವೇ ಅಧಿಕಾರಿ ಹಾಗೂ ಆನೆಗೊಳ ಗ್ರಾಮ ಪಂಚಾಯತಿಯ ಪಿ.ಡಿ.ಓ ಕುಮಾರ್, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಗೋಪಾಲಕೃಷ್ಣ, ಗ್ರಾಮ ಲೆಕ್ಕದಿಕಾರಿ ಕಾಂತೇಶ್ ರವರು ನೇತೃತ್ವದಲ್ಲಿ ಸರ್ವೇ ಮಾಡಿ ಶಾಲೆಯ ಜಾಗವನ್ನು ಗುರುತಿಸಲೆಂದು ಶಾಲೆಗೆ ಬಂದಾಗ ಶಾಲೆಯ ಜಾಗ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿ ಮುಖಂಡರು ಸರ್ವೇ ಮಾಡದಂತೆ ತಡೆಗಟ್ಟಿ ವಿನಾ ಕಾರಣ ತೊಂದರೆ…
ವಿಜಯಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಖಾಸಿಂಸಾಬ್ ಹುಸೇನಸಾಬ್ ಬಿಜಾಪುರ(88) ನಿಧನರಾಗಿದ್ದಾರೆ. ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಭಾನುವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ 4 ರಂದ ಜನಿಸಿದ್ದ ಕಾಹು 2003 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಕ್ರಾಂತ್ ರೋಣ’ ಚಿತ್ರದ ಮೂಲಕ ಕಿಚ್ಚ ಸುದೀಪ್ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡರು. ಅನುಪ್ ಭಂಡಾರಿ ನಿರ್ದೇಶನದ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಯಿತು. ಈ ಚಿತ್ರ ಸುದೀಪ್ ಅವರ ವೃತ್ತಿಜೀವನದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಯಿತು. ಇದಲ್ಲದೆ, ಬಿಡುಗಡೆಯಾದ ಪ್ರತಿಯೊಂದು ಭಾಷೆಯಲ್ಲೂ ಭಾರೀ ಕಲೆಕ್ಷನ್ ಗಳಿಸುವ ಮೂಲಕ ಡಬಲ್ ಬ್ಲಾಕ್ ಬಸ್ಟರ್ ಆಯಿತು. ‘ಕೆಜಿಎಫ್’ ನಂತರ ‘ವಿಕ್ರಾಂತ್ ರೋಣ’ ಮೊದಲ ವಾರಾಂತ್ಯದಲ್ಲಿಯೇ ಬ್ರೇಕ್ ಈವೆನ್ ಮಾಡಿ ಆ ಮಟ್ಟದಲ್ಲಿ ಭಾರತವನ್ನು ಬೆಚ್ಚಿಬೀಳಿಸಿದ ಕನ್ನಡ ಚಿತ್ರವಾಯಿತು. ಇತ್ತೀಚೆಗಷ್ಟೇ ಈ ಸಿನಿಮಾದ ಕನ್ನಡ ಅವತರಣಿಕೆ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು ಗೊತ್ತೇ ಇದೆ. ಈ ಚಿತ್ರ ಒಟಿಟಿಯಲ್ಲೂ ದಾಖಲೆ ಸೃಷ್ಟಿಸಲಿದೆ. ಚಿತ್ರದ ಕನ್ನಡ ಆವೃತ್ತಿಯು ಶುಕ್ರವಾರದಿಂದ ಪ್ರಮುಖ OTT ಚಾನೆಲ್ ‘G-5’ ನಲ್ಲಿ ಸ್ಟ್ರೀಮ್ ಆಗುತ್ತಿದೆ. ಈ ಚಿತ್ರವು ಕೇವಲ 24 ಗಂಟೆಗಳಲ್ಲಿ 500 ಮಿಲಿಯನ್ ವೀಕ್ಷಣೆಯನ್ನು ಗಳಿಸುವ ಮೂಲಕ ದಾಖಲೆಯನ್ನು ಸೃಷ್ಟಿಸಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ…
ಅಹಮದಾಬಾದ್ ಸೆಪ್ಟೆಂಬರ್ 3: ಗುಜರಾತ್ ಭೇಟಿಯ ಅಂತಿಮ ದಿನವಾದ ಇಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕೇಸರಿ ಪಕ್ಷವನ್ನು ತೊರೆಯದೆ ‘ಒಳಗಿನಿಂದ’ ತಮ್ಮ ಪಕ್ಷಕ್ಕಾಗಿ ಕೆಲಸ ಮಾಡುವಂತೆ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಬಿಜೆಪಿಯ ಭದ್ರಕೋಟೆಯಾದ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಹಾಗೂ ಎಎಪಿ ಭರ್ಜರಿ ಸಿದ್ಧತೆ ನಡೆದಿವೆ. ಅದರಲ್ಲೂ ಆಡಳಿತ ಪಕ್ಷಕ್ಕೆ ಆಮ್ ಆದ್ಮಿ ಪಕ್ಷ ನೇರ ಪೈಪೋಟಿ ನಡೆಸಲಿದೆ. ಈಗಾಗಲೇ ಎಎಪಿಯ ನಾಯಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುಜರಾತ್ನಲ್ಲಿ ಮತಭೇಟೆಯನ್ನು ಆರಂಭಿಸಿದ್ದಾರೆ. ಹಲವಾರು ಭರವಸೆಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿದ್ದಾರೆ. ಗುಜರಾತ್ ಭೇಟಿಯ ಎರಡನೇ ದಿನವಾದ ಇಂದು ಅರವಿಂದ್ ಕೇಜ್ರಿವಾಲ್ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಬಿಜೆಪಿಯಿಂದ “ಹಣ” ಪಡೆಯುವುದನ್ನು ಮುಂದುವರಿಸಬೇಕು. ಆದರೆ ಆಪ್ಗಾಗಿ “ಒಳಗಿನಿಂದ” ಕೆಲಸ ಮಾಡಬೇಕು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು. ಜೊತೆಗೆ ರಾಜ್ಯದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ…