Subscribe to Updates
Get the latest creative news from FooBar about art, design and business.
- ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
- ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
- ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ
- ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
- ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!
- ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ
- ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
- ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
Author: admin
ಕೊರಟಗೆರೆ: ಕರ್ನಾಟಕದ ಕನ್ನಡಿಗರಿಗೆ ನವಂಬರ್-1 ಹೆಮ್ಮೆಯ ದಿನವಾಗಿದೆ. ಕರ್ನಾಟಕದ ಪ್ರತಿ ಮನೆಯಲ್ಲಿ ಇಂದು ಹಬ್ಬದ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಣೆ ಮಾಡಿದ್ದಾರೆ. ರಾಜ್ಯ ಸರಕಾರದ ಕೋಟಿಕಂಠ ಗಾಯನ ಎನ್ನುವ ವಿಶಿಷ್ಟ ಕಾರ್ಯಕ್ರಮವು ಕನ್ನಡಿಗರ ಗಮನ ಸೆಳೆದಿದೆ ಎಂದು ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಹೇಳಿದರು. ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೊರಟಗೆರೆ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಾಜ್ಯವು ಹತ್ತಾರು ವಿಸ್ಮಯ ಪ್ರಕೃತಿಯನ್ನು ಒಳಗೊಂಡಿದೆ. ನಮ್ಮ ನಾಡು ಶ್ರೀಗಂಧದ ಬೀಡು. ಹಚ್ಚಹಸುರಿನ ಸುಂದರ ಬೆಟ್ಟಗುಡ್ಡಗಳ ಗೂಡು, ಪವಿತ್ರ ಕಾವೇರಿ, ತುಂಗಾಭದ್ರೆ ನದಿಗಳು ಹರಿಯುವ, ಸಾಧುಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಈ ನಾಡಿಗೆ ಎಂದು ಹೇಳಿದರು. ಕೊರಟಗೆರೆ ಪಪಂ ಅಧ್ಯಕ್ಷೆ ಕಾವ್ಯ ರಮೇಶ್ ಮಾತನಾಡಿ, ಆಲೂರು ವೆಂಕಟರಾವ್ 1905ರಲ್ಲಿ…
ಕಲಬುರಗಿ: ಬಹಿರ್ದೆಸೆಗೆ ತೆರಳಿದ್ದ ವೇಳೆ ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಿ ಕೊಲೆ ಮಾಡಲಾಗಿದೆ. ಆಳಂದ ತಾಲ್ಲೂಕಿನ ಗ್ರಾಮದವೊಂದರ ಕಬ್ಬಿನ ಗದ್ದೆಯಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದಳು. ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಈ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ನಿರ್ಮಲಾ ಸೀತಾರಾಮನ್ ಪೀಯೂಷ್ ಗೋಯಲ್, ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು. ಸರ್ಕಾರವು 5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ನಿರೀಕ್ಷೆಯಲ್ಲಿದ್ದು, ದೇಶ ವಿದೇಶಗಳ ಖ್ಯಾತ ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಉದ್ಧೇಶಿಸಿ ವರ್ಚೂವಲ್ ಮೂಲಕ ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಧುಗಿರಿ: ತಾಲೂಕಿನ ಜೆ ಸಿ ಬಿ ಬಾಯ್ಸ್ ವತಿಯಿಂದ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆ ನಡೆಯಿತು. 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕಿನ ಜೆಸಿಬಿ ಬಾಯ್ಸ್ ಜೆಸಿಬಿಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಿದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅವರಿಗೆ ಅಪರಿಚಿತ ಯುವತಿ ವಾಟ್ಸಪ್ ವಿಡಿಯೋ ಕಾಲ್ ಮಾಡಿ ಹನಿಟ್ರ್ಯಾಪ್ ಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಸಂಬಂಧ ಶಾಸಕ ತಿಪ್ಪಾರೆಡ್ಡಿ ಅವರು ಚಿತ್ರದುರ್ಗ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್ 31 ರಂದು ಯುವತಿಯೋರ್ವಳು ಶಾಸಕ ತಿಪ್ಪಾರಡ್ಡಿಗೆ ಬೆತ್ತಲೆಯಾಗಿ ಕಾಲ್ ಮಾಡಿದ್ದು, ನಂತರ ವಾಟ್ಸಪ್ ಗೆ ಅಶ್ಲೀಲ ವಿಡಿಯೋ ಕಳುಹಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಶಾಸಕ ತಿಪ್ಪರೆಡ್ಡಿ ಅವರು ತಕ್ಷಣ ಮೊಬೈಲ್ ಅನ್ನ ಪಕ್ಕಕ್ಕೆ ಇಟ್ಟಿರುವುದಾಗಿ ತಿಳಿಸಿದ್ದಾರೆ. ನಂತರ ವಿಡಿಯೋ ಕಾಲ್ ಮಾಡಿದ್ದ ನಂಬರ್ ಅನ್ನ ತಿಪ್ಪಾರೆಡ್ಡಿ ಅವರು ಬ್ಲಾಕ್ ಮಾಡಿದ್ದಾಗಿ ತಿಳಿಸಿದ್ದಾರೆ. ಈ ಕುರಿತು ಶಾಸಕ ತಿಪ್ಪಾರೆಡ್ಡಿ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನಟ ಅಪ್ಪು ದೇವರ ಮಗು. ದಾನ ಮಾಡುವ ಗುಣಕ್ಕಾಗಿ ಜನರು ನಟ ಪುನೀತ್ ರನ್ನ ಪ್ರೀತಿಸಿದ್ರು. ಮೇರು ನಟರ ಸಾಲಿನಲ್ಲಿ ಪುನೀತ್ ನಿಲ್ಲುತ್ತಾರೆ ಎಂದು ಹಿರಿಯ ನಟ ರಜಿನಿಕಾಂತ್ ಗುಣಗಾನ ಮಾಡಿದರು. ನಟ ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ರಜಿನಿಕಾಂತ್, ಬಾಲ್ಯದಲ್ಲಿ ಪುನೀತ್ ಶಬರಿ ಮಲೆ ಪ್ರವಾಸದ ಬಗ್ಗೆ ನೆನಪಿಸಿಕೊಂಡರು. 1979ರಲ್ಲಿ ಚೆನ್ನೈನಲ್ಲಿ 4 ವರ್ಷದ ಅಪ್ಪು ಭೇಟಿಯಾಗಿದ್ದೆ. ಅಪ್ಪು ಇಲ್ಲ ಎಂದುಕೊಳ್ಳಲು ಆಗುತ್ತಲೇ ಇಲ್ಲ. ಅಪ್ಪು ನಿಧನರಾದಾಗ ನಾನು ಐಸಿಯುನಲ್ಲಿದ್ದೆ ಮೂರು ದಿನಗಳ ನಂತರ ಗೊತ್ತಾಯಿತು. ಅಪ್ಪು ಮೊದಲ ಚಿತ್ರ ನೋಡಲು ಆಹ್ವಾನಿಸಿದ್ದರು. ಅಪ್ಪು ಹಾಡು ಡ್ಯಾನ್ಸ್ ಅದ್ಬುತವಾಗಿತ್ತು. ಪುನೀತ್ ಗೆ 100 ದಿನದ ಸಮಾರಂಭದಲ್ಲಿ ಫಲಕ ನೀಡಿ ಗೌರವಿಸಿದೆ. ಇಂದು ಅಪ್ಪು ಇಲ್ಲ ಎಂದರೇ ನಂಬಲಾಗುತ್ತಿಲ್ಲ ನನ್ನ ಮನಸ್ಸಿನಲ್ಲಿ…
ಬೇರೆ ಭಾಷೆಯನ್ನು ಗೌರವಿಸಬೇಕು. ಆದರೆ ನಮ್ಮ ಭಾಷೆಯನ್ನು ಪ್ರೀತಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯೋತ್ಸವದ ದಿನವನ್ನು ನಾವು ರಾಜ್ಯಾದ್ಯಂತ ಅತಿ ಸಂತೋಷ ಹಾಗೂ ಸಡಗರದಿಂದ ಆಚರಿಸುತ್ತೇವೆ. ಈ ದಿನ ಸರ್ಕಾರದಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದಂತಹ ಮಹನೀಯರುಗಳಿಗೆ ಸನ್ಮಾನವನ್ನು ಏರ್ಪಡಿಸಿ ಅವರುಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡುವಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತದೆ. ಇದರಿಂದ ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ಕನ್ನಡದಲ್ಲಿ ಇನ್ನೂ ಉತ್ತಮವಾದ ಸಾಧನೆಯನ್ನು ಮಾಡಲು ಪ್ರೋತ್ಸಾಹಿಸುವಂತಹ ನಿಟ್ಟಿನಲ್ಲಿ ಸರ್ಕಾರವು ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು. ನಮ್ಮ ವಿಶ್ವವಿದ್ಯಾನಿಲಯದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಗೂ ಸಂಶೋಧಕರುಗಳಿಗೆ ಪ್ರಶಸ್ತಿಯನ್ನು ನೀಡುವಂತಹ ಕಾರ್ಯಕ್ರಮವನ್ನು ಏರ್ಪಡಿಸುವುದರಿಂದ ಅವರು ಇನ್ನಷ್ಟು ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಕನ್ನಡಕ್ಕೆ ಕೊಡುವಂತಹ ಕೊಡುಗೆ ಇನ್ನು ಹೆಚ್ಚಾಗುವ ಸಂಭವ ಇರುತ್ತದೆ. ಆದ್ದರಿಂದ ಈ…
67ನೇ ಕನ್ನಡ ರಾಜ್ಯೋತ್ಸವದಂದೇ ನಟ ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ರಾಜ್ಯದ ಅತ್ಯುನ್ನತ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ನಟ ಪುನೀತ್ ರಾಜ್ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿ ಸ್ವೀಕರಿಸಿದರು. ಈ ಕ್ಷಣಕ್ಕೆ ಹಿರಿಯ ನಟ ರಜನಿಕಾಂತ್ ಮತ್ತು ಜೂನಿಯರ್ ಎನ್ಟಿಆರ್, ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ, ನಟ ಶಿವರಾಜ್ ಕುಮಾರ್ ಹಾಗೂ ಸಚಿವರು, ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ಧ ಅಭಿಮಾನಿಗಳು ಸಾಕ್ಷಿಯಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ರಜನಿಕಾಂತ್, 67ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಎಲ್ಲರೂ ಜಾತಿ ಮತ ಬೇಧವಿಲ್ಲದೆ ನೆಮ್ಮದಿಯಿಂದ ಇರಬೇಕು. ರಾಜರಾಜೇಶ್ವರಿ, ಅಲ್ಲ, ಜೀಸಸ್ ನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಪುನೀತ್ ದೇವರ ಮಗು…
ಮೈಸೂರಿನ ಪೊಲೀಸರು ಓರ್ವ ಸರಗಳ್ಳನನ್ನ ಬಂಧಿಸಿ 13 ಲಕ್ಷ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಮೈಸೂರು ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮತ್ತು ಮಾಲು ಪತ್ತೆ ಸಂಬಂಧ ಕೃಷ್ಣರಾಜ ಉಪವಿಭಾಗದ ಅಪರಾಧ ಪತ್ತೆ ದಳ ಮತ್ತು ಸರಸ್ವತಿಪುರಂ ಮತ್ತು ಅಶೋಕಪುರಂ ಠಾಣೆಯ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡಗಳು ದಿನಾಂಕ: 29-10-2022 ರಂದು ಒಬ್ಬ ಸರಗಳ್ಳ ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದಾಗ ಆರೋಪಿತನು ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಜೊತೆಗೂಡಿ ಮೈಸೂರು ನಗರ ವಿವಿಧ ಪೊಲೀಸ್ ಠಾಣಾ ಹಾಗೂ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಸಂಬಂಧ 8 ಸರಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ. ಈ ಪ್ರಕರಣಗಳಿಂದ ರೂ. 13,00,000/- ಬೆಲೆಬಾಳುವ ಸುಮಾರು 290 ಗ್ರಾಂ ತೂಕದ 9 ಚಿನ್ನದ ಸರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಪತ್ತೆಯಿಂದ ಮೈಸೂರು ನಗರ ಸರಸ್ವತಿಪುರಂ ಪೊಲೀಸ್ ಠಾಣೆಯ 01 (2 ಚಿನ್ನದ…
ಇತ್ತೀಚೆಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟ ಶಿಲ್ಪಶ್ರೀ ಎಂಬ ಹೆಸರಿನ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ವಿದ್ಯಾರ್ಥಿನಿಯ ತಂಗಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಸ್ನಾತಕೋತ್ತರ ಶಿಕ್ಷಣವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಪ್ರಸ್ತುತ ಪದವಿ ಓದುತ್ತಿರುವ ಮೃತ ಶಿಲ್ಪಶ್ರೀ ಅವರ ಸಹೋದರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಉಚಿತವಾಗಿ ಸ್ನಾತಕೋತ್ತರ ಪದವಿ ಶಿಕ್ಷಣ ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಗಳಿಂದ ಒಂದು ದಿನದ ವೇತನವನ್ನು ಸಂತ್ರಸ್ತೆಯ ಕುಟುಂಬಸ್ಥರಿಗೆ ಹಣಕಾಸಿನ ನೆರವನ್ನು ನೀಡಲು ಸಿಂಡಿಕೇಟ್ ನಿರ್ಧರಿಸಲಾಗಿದೆ. ಈ ಸಂಬಂಧ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಲಾದ ಡಾ. ಜಯಕರ ಎಸ್.ಎಂ. ಅವರು, “ಸಿಬ್ಬಂದಿಗಳು ತಮ್ಮ ಒಂದು ದಿನದ ವೇತನವನ್ನು ನೀಡುವುದು ಕಡ್ಡಾಯವಲ್ಲ. ನಾವು ಎಲ್ಲರಲ್ಲಿಯೂ ಮನವಿ ಮಾಡುತ್ತೇವೆ. ಯಾರಿಗೆ ಒಂದು ದಿನದ ವೇತನ ನೀಡುವುದು ಇಷ್ಟವೋ ಅವರು ನೀಡಬಹುದು. ಸಿಂಡಿಕೇಟ್ ನ ಎಲ್ಲಾ ಸದಸ್ಯರೂ ಸಹ ಈ ಉದ್ದೇಶಕ್ಕಾಗಿ ತಮ್ಮ ಸಭಾ ಭತ್ಯೆಯನ್ನು ದಾನ ನೀಡುತ್ತಿದ್ದಾರೆ,” ಎಂದು ತಿಳಿಸಿದರು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬದವರಿಗೆ…