Author: admin

ಕಳೆದ ಕೆಲ ವಾರಗಳಿಂದ ಪಾಕಿಸ್ತಾನದಲ್ಲಿ ಪ್ರವಾಹಕ್ಕೆ ಸಿಲುಕಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಪರಿಸ್ಥಿತಿ ಈಗಾಗಲೇ ಕೆಟ್ಟದಾಗಿದೆ. ಜೊತೆಗೆ ಪ್ರವಾಹದ ವಿನಾಶವು ಇಸ್ಲಾಮಾಬಾದ್ ಅನ್ನು ಜರ್ಜರಿತಗೊಳಿಸಿದೆ. ಒಂದು ಅಂದಾಜಿನ ಪ್ರಕಾರ, ತೀವ್ರ ಪ್ರವಾಹದಿಂದಾಗಿ ದೇಶವು ಅಂದಾಜು ಹತ್ತು ಶತಕೋಟಿ ಡಾಲರ್ ನಷ್ಟವನ್ನು ಅನುಭವಿಸಿದೆ. ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ (ESA) ಉಪಗ್ರಹ ಚಿತ್ರಗಳ ಪ್ರಕಾರ, ಪಾಕಿಸ್ತಾನದ ಮೂರನೇ ಒಂದು ಭಾಗದಷ್ಟು ಭೂಮಿ ತೀವ್ರ ಪ್ರವಾಹದ ಹಿಡಿತದಲ್ಲಿದೆ. ಇದು ಪಾಕಿಸ್ತಾನದ ಇತಿಹಾಸದಲ್ಲಿ ಅತ್ಯಂತ ಭೀಕರ ನೈಸರ್ಗಿಕ ವಿಕೋಪ ಎಂದು ಹೇಳಲಾಗಿದೆ. ಸಿಎನ್ಎನ್ ಪ್ರಕಾರ, ಪಾಕಿಸ್ತಾನದಲ್ಲಿ ತೀವ್ರ ಪ್ರವಾಹದಿಂದಾಗಿ ಇನ್ನೂ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಲಕ್ಷಾಂತರ ಎಕರೆ ಪ್ರದೇಶದಲ್ಲಿ ನೀರು ನುಗ್ಗಿ ಬೆಳೆ ಹಾನಿಯಾಗಿ ಆಹಾರದ ಕೊರತೆ ಎದುರಾಗಿದೆ. ಸಾವಿರಾರು ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಪ್ರವಾಹದಿಂದಾಗಿ ಜನರು ವಿವಿಧ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚುತ್ತಿದೆ. ಒಟ್ಟಿನಲ್ಲಿ ಪಾಕಿಸ್ತಾನ ಸದ್ಯಕ್ಕೆ ಭೀಕರ ಪ್ರಕೃತಿ ವಿಕೋಪವನ್ನು ಎದುರಿಸುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲಿ ದೊಡ್ಡ…

Read More

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರು ‘ಸನಾತನ ಪಂಚಾಂಗ – 2023′ ನ್ನು ಆ.30ರಂದು ಲೋಕಾರ್ಪಣೆ ಮಾಡಿದರು. ಪಂಚಾಂಗದ ರಚನೆಯ ಬಗ್ಗೆ ಹೆಗ್ಗಡೆಯವರು ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಉದ್ಯಮಿಗಳು ಹಾಗೂ ಹಿಂದೂ ಜಾಗರಣ ವೇದಿಕೆಯ ಪದ್ಮನಾಭ ಶೆಟ್ಟಿಗಾರ್, ವಕೀಲರಾದ ಉದಯಕುಮಾರ್ ಬಂದಾರು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕರು ಹಾಗೂ ಒಕ್ಕಲಿಗ ಯಾನೆ ಗೌಡರ ಯುವ ವೇದಿಕೆ ನಿಡ್ಲೆ ಗ್ರಾಮದ ಅಧ್ಯಕ್ಷರಾದ ಗಿರೀಶ್ ಗೌಡ ನಿಡ್ಲೆ, ಸನಾತನ ಸಂಸ್ಥೆಯ ಆನಂದ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಶಶಿಧರ್ ಎಂ ಗೌಡ ಮತ್ತಿತರರು ಉಪಸ್ಥಿತರಿದ್ದರು. ಸನಾತನ ಪಂಚಾಂಗವು ಕಳೆದ 17 ವರ್ಷಗಳಿಂದ 7 ಭಾಷೆಗಳಲ್ಲಿ ಲಕ್ಷಾಂತರ ಪ್ರತಿಗಳಲ್ಲಿ ಮುದ್ರಣವಾಗುತ್ತಿದೆ. ಈ ಪಂಚಾಂಗದಲ್ಲಿ ಪ್ರತಿ ತಿಂಗಳುಗಳಲ್ಲಿ ಬರುವ ಹಬ್ಬ-ಹರಿದಿನಗಳನ್ನು ಧರ್ಮಶಾಸ್ತ್ರದಂತೆ ಹೇಗೆ ಆಚರಿಸಬೇಕು…

Read More

ಬೆಂಗಳೂರು: ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದಾಖಲಾದ ಪೋಕ್ಸೋ ಕೇಸ್ ನಲ್ಲಿ ಬಂಧಿಸಲಾಗಿದೆ. ಈ ಕಾರಣದಿಂದಾಗಿ ಅವರನ್ನು ಅನಾಥಸೇವಾಶ್ರಮದ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಗೌರವ ಕಾರ್ಯದರ್ಶಿ ಪ್ರೊ.ಕೆ.ಇ ರಾಧಾಕೃಷ್ಣ ಅವರು, ಕ್ರಿಮಿನಲ್ ಆಪಾದನೆಯನ್ನು ಎದುರಿಸುತ್ತಿರುವ ಶ್ರೀ ಶಿವಮೂರ್ತಿ ಮುರುಘಾಶರಣರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನಾಥಸೇವಾಶ್ರಮದ ಅಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನದಿಂದ ವಿಮುಕ್ತಿಗೊಳಿಸಲಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy  

Read More

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಹಾಗೂ ಪೊಲೀಸರ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೆಹರು ನಗರದಲ್ಲಿ ಬೆಳಕಿಗೆ ಬಂದಿದೆ. 28 ವರ್ಷದ ಸಾವಿಯೋ ಪಿಳೈ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್ ಬರೆದಿಟ್ಟಿದ್ದು, ಕ್ಯಾಂಪ್ ಠಾಣೆಯ ಪಿಎಸ್‌ಐ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಡೆತ್‌ ನೋಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದ. ಆದ್ರೆ, ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್, ಕ್ಯಾಂಪ್ ಪಿಎಸ್‌ಐ ಸೇರಿ 1.50 ಲಕ್ಷ ಹಣ ಪಡೆದಿದ್ದಾರೆ ಎನ್ನಲಾಗಿದೆ. ಪೃಥ್ವಿ ಸಿಂಗ್ ರಮೇಶ ಜಾರಕಿಹೊಳಿ ಆಪ್ತ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. 1.50 ಲಕ್ಷ ಹಣ ಪಡೆದಿದ್ದಲ್ಲೇ ಇನ್ನು ಹೆಚ್ಚಿನ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು…

Read More

ಚೆನ್ನೈ: ಚೆನ್ನೈನಲ್ಲಿ ಯುವತಿಯೊಬ್ಬಳು ಸಾಂಪ್ರದಾಯಿಕ ತಮಿಳು ಬ್ರಾಹ್ಮಣ ಸಂಪ್ರದಾಯಗಳ ಪ್ರಕಾರ ಬಾಂಗ್ಲಾದೇಶದ ಮಹಿಳೆಯನ್ನು ವಿವಾಹವಾಗಿದ್ದಾರೆ. ವರದಿಯ ಪ್ರಕಾರ, ಕೆನಡಾದ ಕ್ಯಾಲ್‌ಗರಿಯಲ್ಲಿ ನೆಲೆಸಿರುವ ತಮಿಳು ಬ್ರಾಹ್ಮಣ ಪೋಷಕರ ಮಗಳು ಸುಭಿಕ್ಷಾ ಸುಬ್ರಮಣಿ, ಬಾಂಗ್ಲಾದೇಶದ ಹಿಂದೂ ಕುಟುಂಬದಿಂದ ಬಂದ ಟೀನಾ ಅವರೊಂದಿಗೆ ವಿವಾಹವಾಗಿದ್ದಾರೆ. ಆರು ವರ್ಷಗಳ ಕಾಲ ರಿಲೇಷನ್‌ಶಿಪ್‌ನಲ್ಲಿ ಇದ್ದರು ವರದಿ ತಿಳಿಸಿದೆ. ಮದುವೆಗೆ ಕುಟುಂಬಸ್ಥರ ವಿರೋಧವನ್ನು ಸಹ ಎದುರಿಸಿದ್ದರು. ಆದ್ರೆ, ಇದೀಗ ಕುಟುಂಬಗಳ ಒಪ್ಪಿಗೆ ಮೇರೆಗೆ ತಮಿಳು ಬ್ರಾಹ್ಮಣ ಶೈಲಿಯಲ್ಲಿ ವಿವಾಹವಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಇತ್ತೀಚಿನ ಅತಿವೃಷ್ಟಿಯಿಂದ ಬೆಳೆಹಾನಿಯಾಗಿರುವ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಪರಿಹಾರ ಪೊರ್ಟಲ್ ನಲ್ಲಿ ಅಪ್ ಲೋಡ್ ಮಾಡಿ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಸಚಿವರಾದ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ(ಸೆ.3) ನಡೆದ ಕೃಷಿ ಇಲಾಖೆಯ ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿಬ್ಬಂದಿ ಕೊರತೆ ಮತ್ತಿತರ ನೆಪ ಹೇಳಿ ಬೆಳೆಹಾನಿ ಪರಿಹಾರ ನೀಡುವ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಈಗಾಗಲೇ ನಿರ್ದೇಶನ ನೀಡಿರುವಂತೆ ಎಲ್ಲ ಜಿಲ್ಲೆಗಳಲ್ಲಿ ಹೆಸರು, ಉದ್ದು ಖರೀದಿ ಕೇಂದ್ರಗಳನ್ನು ಆರಂಭಿಸಿ ರೈತರ ನೋಂದಣ ಜತೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದರು. ರೈತರ ಮೂಲಕ ಬೆಳೆ ಸಮೀಕ್ಷೆಗೆ ನಡೆಸಲು ಸೂಚನೆ: ಇಲಾಖೆ ಅಭಿವೃದ್ಧಿಪಡಿಸಿರುವ ಆಪ್ ಮೂಲಕ ರೈತರೇ ಸ್ವತಃ ಬೆಳೆಸಮೀಕ್ಷೆ ಮಾಡಲು ಪ್ರೋತ್ಸಾಹ ನೀಡಬೇಕು. ಇದಕ್ಕಾಗಿ ಸೂಕ್ತ ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದು ಸಚಿವ…

Read More

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ಇನ್ನು ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಸ್ತಿರುವ ಪ್ರದೇಶದಲ್ಲಿ, ವಲಸೆ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 1,655 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ರಾಜ್ಯ ಸರ್ಕಾರ ಅಂಗನವಾಡಿಗಳಿಗೆ 268.98 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ‌ ಆರೋಪದಡಿ ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ಮಾಡಿದ್ದು, ಇದೀಗ ವೈದ್ಯರ ವರದಿ ಬಹಿರಂಗವಾಗಿದೆ. ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಿನ್ನೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯರು ಶ್ರೀಗಳ ಪುರುಷತ್ವ ವೈದ್ಯಕೀಯ ಪರೀಕ್ಷೆ ನಡೆಸಿದರು. ಪುರುಷತ್ವ ಪರೀಕ್ಷೆ ವರದಿಯನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ಬಳಿಕ ಪುರುಷತ್ವ ಪರೀಕ್ಷೆ ವರದಿಯಲ್ಲಿ ಮಗು ಜನ್ಮ ನೀಡಲು ಅರ್ಹತೆ ಹೊಂದಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ನಿನ್ನೆ ಮುರುಘಾ ಶ್ರೀಗಳ ರಕ್ತ, ಕೂದಲು ಮತ್ತು ಉಗುರು ಮಾದರಿಗಳನ್ನು ಸಧ್ಯ ಸಂಗ್ರಹಿಸಿ ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ ಎಂಬ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಕೊರಟಗೆರೆ: 8 ವರ್ಷದಿಂದ ತೆಂಗಿನ ಗರಿಯ ಗುಡಿಸಲೇ ಇವರಿಗೆ ಅರಮನೆ.. ಮಳೆರಾಯನ ಆರ್ಭಟಕ್ಕೆ ನರಕ- ಸಿಡಿಲು-ಮಿಂಚಿನ ರಭಸಕ್ಕೆ ನಡುಕ.. ರಾತ್ರಿಯಾದ್ರೇ ಕರಡಿ-ಚಿರತೆಯ ಕಾಟದಿಂದ ಹೊರಗಡೆ ಬರುವುದೇ ಕಷ್ಟಸಾಧ್ಯ. ಬೆಳಕೇ ಇಲ್ಲದ ಅರಮನೆಯೊಳಗೆ ಪ್ರತಿನಿತ್ಯ ಜೀವನ. ಗಾಂಧಿನಗರದ ದಲಿತ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನವೇ ಮರೀಚಿಕೆಯಾಗಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬುಕ್ಕಾಪಟ್ಟಣ ಗ್ರಾಪಂ ವ್ಯಾಪ್ತಿಯ ಗಾಂಧಿನಗರ ಗ್ರಾಮದಲ್ಲಿ 55ಕ್ಕೂ ಅಧಿಕ ದಲಿತ ಕುಟುಂಬ ವಾಸವಿದ್ದಾರೆ. 200ಕ್ಕೂ ಅಧಿಕ ಮತದಾರರು ಇದ್ದಾರೆ. 20ಕ್ಕೂ ಅಧಿಕ ಮನೆಗಳಿಗೆ ಭದ್ರತೆಯೇ ಇಲ್ಲ. 8ಕ್ಕೂ ಅಧಿಕ ದಲಿತರು ಕಳೆದ 8 ವರ್ಷದಿಂದ ಗುಡಿಸಲಿನಲ್ಲೇ ವಾಸವಿದ್ದಾರೆ. ಗಾಂಧಿನಗರದ ಜನತೆ ಶುದ್ದ ಕುಡಿಯುವ ನೀರನ್ನೂ ಇಲ್ಲಿನ ಜನರು ಕಂಡೇ ಇಲ್ವಂತೆ. ದೀಪದಿಂದ ಬಡವನ ಗುಡಿಸಲೇ ಭಸ್ಮ .. ಸೀಮೆಎಣ್ಣೆಯ ದ್ವೀಪದಿಂದ ಮಾತ್ರವೇ ಇವರಿಗೆ ರಾತ್ರಿ ವೇಳೆ ಬೆಳಕು. ಮಳೆರಾಯನ ಆರ್ಭಟ ಮತ್ತು ಬಿರುಗಾಳಿಯಿಂದ ಗುಡಿನಲ್ಲಿ ಉರಿಯುತ್ತೀದ್ದ ಸೀಮೆಎಣ್ಣೆಯ ದ್ವೀಪ ಕೆಳಗೆ ಬಿದ್ದು ಗುಡಿಸಲಿನ ಅರ್ಧಭಾಗ ಸುಟ್ಟು ಹೋಗಿದೆ.…

Read More

‘ಶುಲ್ಕ ಕಡಿಮೆ ಪಾವತಿಸಿದೆವು ಎಂಬ ಕಾರಣಕ್ಕೆ ನಮಗೆ ಕಾಲೇಜಿನ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಕೋಲಾರದ ಇಟಿಎಂಸಿ ನರ್ಸಿಂಗ್ ಕಾಲೇಜಿನ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರು ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಅಧಿಕಾರಿ ಡಾ.ಜಾನ್ಸನ್ ಕುಂದಾರ್ ವಿರುದ್ಧ ಆರೋಪ ಮಾಡಿದ್ದು, ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಈ ಕುರಿತು ಎಫ್‌ ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತ್ವರಿತವಾಗಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More