Subscribe to Updates
Get the latest creative news from FooBar about art, design and business.
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
Author: admin
೨೩ ಬಾರಿ ಸಿಂಗಲ್ಸ್ ಗ್ರ್ಯಾಂಡ್ಸ್ಲ್ಯಾಮ್ ಗೆದ್ದುಕೊಂಡಿರುವ ಖ್ಯಾತ ಮಹಿಳಾ ಟೆನಿಸ್ ತಾರೆ, ಅಮೆರಿಕಾದ ಸೆರೆನಾ ವಿಲಿಯಮ್ಸ್ ಇದೀಗ ಟೆನಿಸ್ ಜೀವನಕ್ಕೆ ನಿವೃತ್ತಿಯ ಸನಿಹಕ್ಕೆ ಬಂದಿದ್ದಾರೆ. ಮುಂದೆ ನಡೆಯಲಿರುವ ಯುಎಸ್ ಓಪನ್ ಬಳಿಕ ಟೆನಿಸ್ ಜೀವನಕ್ಕೆ ಗುಡ್ಬೈ ಹೇಳಲಿದ್ದೇನೆ ಎಂದು ಸೆರೆನಾ ತಿಳಿಸಿದ್ದಾರೆ. ಗಾಯದ ಸಮಸ್ಯೆಯಿಂದ ಹಲವು ತಿಂಗಳ ಕಾಲ ಟೆನಿಸ್ನಿಂದ ದೂರ ಉಳಿದಿದ್ದ ಸೆರೆನಾ, ಕಳೆದ ಜೂನ್ನಲ್ಲಿ ನಡೆದ ವಿಂಬಲ್ಡನ್ಗೆ ಮರಳಿದ್ದರು. ಆದರೆ ಮೊದಲ ಪಂದ್ಯದಲ್ಲೇ ಸೋಲುಂಡು ಅಭಿಮಾನಿಗಳಲ್ಲಿ ಆಘಾತ ಮೂಡಿಸಿದ್ದರು. ಇದೀಗ ಸದ್ಯ ನಡೆಯುತ್ತಿರುವ ಟೊರಂಟೋ ಓಪನ್ನ ಮೊದಲ ಸುತ್ತಿನಲ್ಲಿ ಸ್ಪೇನ್ನ ನುರಿಯಾ ಪರಿಝಾಸ್ ಡಿಯಾಸ್ ಗೆಲುವು ಸಾಧಿಸಿ, ಎರಡನೇ ಸುತ್ತಿಗೆ ಪ್ರವೇಶಿಸಿದ ಬಳಿಕ ಸೆರೆನಾ ಅವರು ನಿವೃತ್ತಿಯ ಹೇಳಿಕೆ ಘೋಷಿಸಿದ್ದಾರೆ. ನಾನು ನಿವೃತ್ತಿ ಎಂಬ ಪದವನ್ನು ಎಂದಿಗೂ ಇಷ್ಟಪಟ್ಟಿಲ್ಲ. ಇದು ನನಗೆ ಆಧುನಿಕ ಪದದಂತೆ ಅನಿಸುವುದಿಲ್ಲ. ನಾನು ಇದನ್ನು ಪರಿವರ್ತನೆ ಎಂದು ಯೋಚಿಸುತ್ತಿದ್ದೇನೆ. ನಾನು ಆ ಪದವನ್ನು ಹೇಗೆ ಬಳಸುತ್ತೇನೆ ಎಂಬುದರ ಕುರಿತು ಸೂಕ್ಷ್ಮವಾಗಿರಲು ಬಯಸುತ್ತೇನೆ. ಬಹುಶಃ ನಾನು…
ದಾವಣಗೆರೆ, ಆ.19: ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ೫೦ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 2೦ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ 2೦ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಪ್ರಯಾಣಿಸುತ್ತಿದ್ದ 2೦ ಮಂದಿ ಪೈಕಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ತಿಳಿದು ಬಂದಿದೆ. ಇನ್ನೂ ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಂಗಾಳಿ ನಟ ಸೈಬಲ್ ಭಟ್ಟಾಚಾರ್ಯ ಅವರು ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಬಂಗಾಳಿ ನಟ ಸೈಬಲ್ ಭಟ್ಟಾಚಾರ್ಯ ಕೊಲ್ಕತ್ತಾದ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳುವಾಗಿರುವ ನೋವಿನ ವಿಡಿಯೋವನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದರು.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಂಗಾಳಿ ಧಾರಾವಾಹಿ ಪ್ರೋಥೋಮ ಕದಂಬಿನಿಯಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ಸೈಬಲ್ ಭಟ್ಟಾಚಾರ್ಯ ಪ್ರಾದೇಶಿಕ ದೂರದರ್ಶನ ಉದ್ಯಮದಲ್ಲಿ ನಟನಾಗಿ ದೀರ್ಘಕಾಲ ಕೆಲಸ ಮಾಡಿದ್ದಾರೆ. ಆದರೆ ಇತ್ತೀಚೆಗೆ ಅವರು ಕೆಲಸ ಹುಡುಕಲು ಹೆಣಗಾಡುತ್ತಿದ್ದರು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ವೃತ್ತಿಪರ ಹಿನ್ನಡೆಯಿಂದ ಖಿನ್ನತೆಗೆ ಒಳಗಾಗಿದ್ದ ಆತ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೈಬಲ್ ಭಟ್ಟಾಚಾರ್ಯ ಗಂಭೀರವಾಗಿ ಗಾಯಗೊಂಡಿರುವುದನ್ನು ಅವರ ಮನೆಯಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಅವರು ಹರಿತವಾದ ವಸ್ತುವಿನಿಂದ ಹೊಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಅವರನ್ನು ಚಿತ್ತರಂಜನ್ ಆಸ್ಪತ್ರೆಗೆ ಸಾಗಿಸಲಾಯಿತು. ಮೊದಲ ನೋಟದಲ್ಲಿ, ನಟ ತನ್ನ ಜೀವನವನ್ನು ಕೊನೆಗೊಳಿಸಲು…
ಕರ್ತವ್ಯದಲ್ಲಿರುವ ಪೊಲೀಸರು ಹಾಗೂ ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಬಳಸಿ ದಾಳಿ ಮಾಡಿರುವುದು ‘ಭಯೋತ್ಪಾದನಾ ಕೃತ್ಯ’ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ದಾಳಿ ಪ್ರಕರಣದಲ್ಲಿ ಭಾಗಿಯಾಗಿರುವ ಅತೀಕ್ ಅಹ್ಮದ್ ಇನ್ನಿತರರು ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಹಾಗೂ ಶಿವಶಂಕರ್ ಅಮರಣ್ಣವರ್ ಅವರಿದ್ದ ಹೈಕೋರ್ಟ್ ನ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಉದ್ರಿಕ್ತರುಗಳು ಪೊಲೀಸ್ ಠಾಣೆಯ ಮುಂದೆ ಗುಂಪು ಗೂಡುವುದು, ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯ ಮೇಲೆ ಕಬ್ಬಿಣದ ರಾಡ್, ಪೆಟ್ರೋಲ್ ತುಂಬಿದ ಬಾಟಲ್ಗಳು ಸೇರಿದಂತೆ ಮಾರಕಾಸ್ತ್ರಗಳಿಂದ ದಾಳಿ ನಡೆಸುವುದು, ಗಲಭೆ ಉಂಟು ಮಾಡುವುದು ಇವೆಲ್ಲವೂ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಮಾಡಿದ ಭಯೋತ್ಪಾದನಾ ಚಟುವಟಿಕೆಗಳು ಎನಿಸುತ್ತದೆ ಎಂದು ತಿಳಿಸಿದ್ದಾರೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣ ಕುರಿತು ರಾಷ್ಟ್ರೀಯ ತನಿಖಾ ದಳ( ಎನ್ಐಎ) ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ ಆರೋಪಿಗಳು ಭಯೋತ್ಪದನಾ ಕೃತ್ಯ ಎಸಗುವ…
ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಮನೆಯ ಮೇಲೆ ಮರ ಬಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಸಂಭವಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರದಿಂದಾಗಿ ಭೀಮಾ ನದಿಯಲ್ಲಿ ದತ್ತಾತ್ರೇಯ ದೇವರ ಭಕ್ತ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಿಗ್ಗಾವಿ ತಾಲ್ಲೂಕಿನ ಕುನ್ನೂರು ಗ್ರಾಮದಲ್ಲಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಮುಸ್ತಾಕ್ ಎರಗುಪ್ಪಿ ಎಂದು ಗುರುತಿಸಲಾಗಿದೆ. ಮಳೆಯಿಂದಾಗಿ ಗೋಡೆ ಶಿಥಿಲಗೊಂಡಿದ್ದರಿಂದ ಗೋಡೆ ಕುಸಿದು ಬಿದ್ದು, ಈ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮುಸ್ತಾಕ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮುಸ್ತಾಕ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ, ಕಳಸಾ ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ಕತ್ತಿ ಭೇಟಿ ನೀಡಿ…
ಕೇಂದ್ರ ವಿಭಾಗದ ಶೇಷಾದ್ರಿಪುರಂ, ಕಬ್ಬನ್’ಪಾರ್ಕ್, ಹಲಸೂರು ಗೇಟ್, ವಿಲ್ಸನ್ ಗಾರ್ಡನ್, ಎಸ್’ಜೆ ಪಾರ್ಕ್ ಮತ್ತು ವೈಯ್ಯಾಲಿಕಾವಲ್ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ 24 ಮಂದಿ ಆರೋಪಿಗಳನ್ನು ಬಂಧಿಸಿ 30 ಪ್ರಕರಣಗಳನ್ನು ಪತ್ತೆಹಚ್ಚಿ ನಗದು ಸೇರಿದಂತೆ 1.32 ಕೋಟಿ ಬೆಲೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಕಬ್ಬನ್’ಪಾರ್ಕ್ ಠಾಣೆ ಪೊಲೀಸರು 74 ಹಾಗೂ ಶೇಷಾದ್ರಿಪುರಂ ಠಾಣೆ ಪೊಲೀಸರು 13 ಮೊಬೈಲ್ಗಳು ಸೇರಿದಂತೆ ಒಟ್ಟು 87 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 7.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೊಲೀಸರು 14, ಕಬ್ಬನ್ ಪಾರ್ಕ್ 4, ಎಸ್ ಜೆ ಪಾರ್ಕ್ 4 ಹಾಗೂ ವಯ್ಯಾಲಿಕಾವಲ್ ಠಾಣೆ ಪೊಲೀಸರು 5 ದ್ವಿಚಕ್ರ ವಾಹನ ಸೇರಿ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 13.50 ಲಕ್ಷ ರೂ.ಗಳಾಗಿದೆ. ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು 296 ಗ್ರಾಂ ಹಾಗೂ ಕಬ್ಬನ್ಪಾರ್ಕ್ ಠಾಣೆ ಪೊಲೀಸರು…
ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ನ್ನು ಮಂಜೂರು ಮಾಡಿಸಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಗೊಳಿಸಿದರು. ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ, ಗ್ರಾಮಸ್ಥರು, ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೂರವಾಣಿ ಯ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಮೂಲಕ, ಈ ಭಾಗದ ಜನತೆಗೆ ಅತ್ಯಗತ್ಯ ವಾದ ಸೌಲಭ್ಯ ದೊರಕಿದೆ ಹಾಗೂ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ತಿಳಿಸಿದರು. ಕಳೆದ ನಾಲ್ಕು ವರ್ಷದಲ್ಲಿ ನೆರಟುರು ಪಂಚಾಯ್ತಿ ವ್ಯಾಪ್ತಿ ಯಲ್ಲಿ ಸುಮಾರು 6.8 ಕೋಟಿ ರೂ. ವಿವಿಧ ಅಭಿವೃದ್ದಿ ಕಾರ್ಯ ಗಳಿಗೆ ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣ ಗೊಂಡಿವೆ. ಈ ಮೂಲಕ ಗ್ರಾಮಸ್ಥರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಹಾಗೂ ಅದನ್ನು ತೀರಿಸಲು ಕತಿಬದ್ದನಾಗಿದ್ದೇನೆ ಎಂದು…
ವಿದೇಶದಿಂದ ಅಕ್ರಮವಾಗಿ ವಿಮಾನದಲ್ಲಿ ಚಿನ್ನ ಸಾಗಣೆ ಮಾಡಿಕೊಂಡು ಬಂದ ಇಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, 90 ಲಕ್ಷ ಮೌಲ್ಯದ 1.7 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಥಾಯ್ಲೆಂಡ್ ದೇಶದ ಫುಕೆಟ್ ನಿಂದ ವಿಮಾನದಲ್ಲಿ ಬೆಂಗಳೂರು ನಿಲ್ದಾಣಕ್ಕೆ ಬಂದಿಳಿದ 28 ವರ್ಷದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ ಧರಿಸಿದ ಬಟ್ಟೆಯೊಳಗೆ ಚಿನ್ನದ 18 ಬಿಸ್ಕತ್ಗಳು ಪತ್ತೆಯಾಗಿದೆ. ಬಟ್ಟೆಯೊಳಗೆ ಮರೆಮಾಚಿ ಚಿನ್ನವನ್ನಿಟ್ಟು ನಂತರ ಹೊಲಿಗೆ ಹಾಕಿ ಅಕ್ರಮ ಚಿನ್ನ ಸಾಗಣೆಗೆ ಮುಂದಾಗಿದ್ದ. ಬಂಧಿತ ಆರೋಪಿಯಿಂದ 63 ಲಕ್ಷ ಮೌಲ್ಯದ 1.199 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬಹ್ರೈನ ದೇಶದ ಮನಮದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಈತನ ಅನುಮಾನಾಸ್ಪದ ನಡಿಗೆಯಿಂದ ಸಂಶಯಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದಾಗ ವಿಲಕ್ಷಣವಾದ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯಿಂದ 27 ಲಕ್ಷ…
ಕೇಂದ್ರ ವಿಭಾಗದ ಶೇಷಾದ್ರಿಪುರಂ, ಕಬ್ಬನ್ಪಾರ್ಕ್, ಹಲಸೂರು ಗೇಟ್, ವಿಲ್ಸನ್ ಗಾರ್ಡನ್, ಎಸ್ಜೆ ಪಾರ್ಕ್ ಮತ್ತು ವೈಯ್ಯಾಲಿಕಾವಲ್ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ 24 ಮಂದಿ ಆರೋಪಿಗಳನ್ನು ಬಂಧಿಸಿ 30 ಪ್ರಕರಣಗಳನ್ನು ಪತ್ತೆಹಚ್ಚಿ ನಗದು ಸೇರಿದಂತೆ 1.32 ಕೋಟಿ ಬೆಲೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಕಬ್ಬನ್ಪಾರ್ಕ್ ಠಾಣೆ ಪೊಲೀಸರು 74 ಹಾಗೂ ಶೇಷಾದ್ರಿಪುರಂ ಠಾಣೆ ಪೊಲೀಸರು 13 ಮೊಬೈಲ್ಗಳು ಸೇರಿದಂತೆ ಒಟ್ಟು 87 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 7.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೆÇಲೀಸರು 14, ಕಬ್ಬನ್ಪಾರ್ಕ್ 4, ಎಸ್ಜೆ ಪಾರ್ಕ್ 4 ಹಾಗೂ ವಯ್ಯಾಲಿಕಾವಲ್ ಠಾಣೆ ಪೊಲೀಸರು 5 ದ್ವಿಚಕ್ರ ವಾಹನ ಸೇರಿ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 13.50 ಲಕ್ಷ ರೂ.ಗಳಾಗಿದೆ. ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು 296 ಗ್ರಾಂ ಹಾಗೂ ಕಬ್ಬನ್ಪಾರ್ಕ್ ಠಾಣೆ ಪೊಲೀಸರು 44 ಗ್ರಾಂ…
ಚಾಮರಾಜಪೇಟೆ ಮೈದಾನದ ವಿವಾದ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮೈದಾನದಲ್ಲಿ ಗಣೇಶ ಹಬ್ಬ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು ಎಂದು ಹೇಳಿಕೆ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಮುಗಿಬಿದ್ದಿವೆ. ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವದಂತಹ ರಾಷ್ಟ್ರೀಯ ಮತ್ತು ರಾಜ್ಯ ಹಬ್ಬಗಳನ್ನು ಚಾಮರಾಜಪೇಟೆ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಲು ಅವಕಾಶವಿದೆ. ಆದರೆ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಲಾಗದು. ಇದಕ್ಕೆ ನಮ್ಮ ಸಮ್ಮತಿಯೂ ಇಲ್ಲ ಎಂದು ಶಾಸಕರು ಹೇಳಿಕೆ ನೀಡಿರುವುದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ನಿನ್ನೆ ಮೈದಾನಕ್ಕೆ ಶಾಸಕರು ಭೇಟಿ ನೀಡಿದ್ದಾದರೂ ಏಕೆ, ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಯ ಪರಿಶೀಲನೆ ಎಂದು ಹೇಳಿ ಬೇರೆ ವಿಚಾರಕ್ಕೆ ಬಂದಿದ್ದರಾ ಎಂಬ ಹಲವು ಅನುಮಾನಗಳು ಕಾಡುತ್ತಿದ್ದು, ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲ ಎನ್ನಲು ಅವರ್ಯಾರು, ಮೈದಾನವೇನಾದರೂ ಅವರ ಸ್ವಂತ ಆಸ್ತಿಯೇ, ಅವರೇ ಗಳಿಸಿದ್ದಾ ಅಥವಾ ಅವರ ಪೂರ್ವಿಕರ ಆಸ್ತೀನಾ ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಕೆಂಡ ಕಾರಿದ್ದಾರೆ. ಆ.15ರಂದೇ…