Author: admin

ಶಿವಮೊಗ್ಗ ; ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಹೊಂದಿದ್ದೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರವಯುತವಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ರಾಜ್ಯಕ್ಕೆ ಆಹ್ವಾನ ನೀಡಿದಾಗ ಬರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಅಧಿಕಾರಕ್ಕೆ ತರುತ್ತೇವೆ. ಮೋದಿ ನೃತೃತ್ವದ ಕೋರ್ ಕಮಿಟಿ ಸಭೆಯಲ್ಲೂ ಇದೇ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲೇಬೇಕೆಂದು ಮೋದಿ ಅವರು ಹೇಳಿದ್ದಾರೆ. ನಾವು ಸಹ ಮೋದಿಗೆ ಭರವಸೆ ನೀಡಿದ್ದೇವೆ. ರಾಜ್ಯಕ್ಕೆ ಮೋದಿ ಬಂದು ಹೋದ ಮೇಲೆ ಉತ್ಸಾಹ ಬಂದಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಭಾಗ ಇದಕ್ಕೆ ನಿರ್ದರ್ಶನ ಎಂಬಂತೆ ದೇವದುರ್ಗ ತಾಲೂಕಿನ ಹೇರೂರ ಎಂಬ ಗ್ರಾಮದಲ್ಲಿ ಇಂದಿಗೂ ಸಹ ಶಾಲಾ ಕೊಠಡಿ ಇಲ್ಲದೆ ಬಡ ವಿದ್ಯಾರ್ಥಿಗಳು ಶಾಲೆಯಿಂದ ಹೊರಗಡೆ ಕುಳಿತುಕೊಂಡು ಓದುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ ಕಟ್ಟಡಗಳು ಈಗೋ, ಆಗೋ ಬೀಳಬಹುದು ಎಂಬ ಸ್ಥಿತಿಯಲ್ಲಿದ್ದು, ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪ್ರಾಣ ಅಂಗೈಯಲ್ಲಿ ಹಿಡಿದು ವಿದ್ಯಾಭ್ಯಾಸ ಮಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮಳೆ ಬಂದರೆ ವಿದ್ಯಾರ್ಥಿಗಳ, ಶಿಕ್ಷಕರ ಪಾಡು ಹೇಳತೀರದು. ಇಷ್ಟೆಲ್ಲಾ ದುರುಸ್ಥಿತಿ ಇದ್ದರೂ ಸಹ ತಾಲೂಕು ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ. ಈ ನಿರ್ಲಕ್ಷ್ಯದ ಧೋರಣೆ ಸರಿಯಲ್ಲ. ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಂದು ಎರಡು ತಿಂಗಳುಗಳು ಕಳೆದರೂ ಈವರೆಗೆ ಕಟ್ಟಡ ನಿರ್ಮಾಣಕ್ಕೆ ಮುಂದಾಗಿಲ್ಲ ಎಂದು ರೂಪ ಶ್ರೀನಿವಾಸ್ ನಾಯಕ್ ಪ್ರಶ್ನಿಸಿದರಲ್ಲದೇ, ಶಾಲಾ ಕಟ್ಟಡ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿದರು. 10ರಿಂದ 15 ದಿನಗಳೊಳಗೆ ತಾತ್ಕಾಲಿಕ ಕ್ಲಾಸ್ ರೂಮ್…

Read More

ಅಂಜೂರ ಹಣ್ಣಿನಲ್ಲಿ ಕ್ಯಾಲ್ಸಿಯಂ & ಪೊಟ್ಯಾಷಿಯಂ ಪ್ರಮಾಣ ಹೆಚ್ಚಿದ್ದು, ಇದು ಮೂಳೆಗಳ ಸಾಂದ್ರತೆಯನ್ನು ಹೆಚ್ಚಿಸುತ್ತದೆ. * ಇದು ಆಂಟಿಆಕ್ಸಿಡೆಂಟ್ ಪ್ರಭಾವದಿಂದ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. * ಅಂಜೂರದಲ್ಲಿ ಪೊಟ್ಯಾಶಿಯಂ ಮತ್ತು ಸೋಡಿಯಂ ಇರುವುದರಿಂದ ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ. * ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೂರ ಮಾಡುತ್ತದೆ. ಮಲಬದ್ಧತೆ ಸಮಸ್ಯೆಯನ್ನೂ ಹೋಗಲಾಡಿಸುತ್ತದೆ. ಆಯುರ್ವೇದದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಅಂಜೂರದಲ್ಲಿ ಪೊಟ್ಯಾಸಿಯಮ್, ಖನಿಜ ಮತ್ತು ಜೀವಸತ್ವಗಳು ತುಂಬಿವೆ. ಇದು ನಿಮ್ಮ ಆರೋಗ್ಯಕ್ಕೆ ಮಾತ್ರವಲ್ಲ, ನಿಮ್ಮ ಚರ್ಮಕ್ಕೂ ತುಂಬಾ ಪ್ರಯೋಜನಕಾರಿ. ಕೆಂಪು ಅಂಜೂರದ ಹಾಲನ್ನು ಸೇವಿಸುವುದರಿಂದ ಮಧುಮೇಹಕ್ಕೆ ಪರಿಹಾರ ಸಿಗುತ್ತದೆ. ಹಾಗಿದ್ರೆ ಅಂಜೂರದ ಹಣ್ಣಿನ ಇತರೆ ಆರೋಗ್ಯಕರ ಪ್ರಯೋಜನಗಳನ್ನು ತಿಳಿದುಕೊಳ್ಳೋಣ. ಮೂಳೆಗಳನ್ನು ಬಲಪಡಿಸುತ್ತದೆ: ಅಂಜೂರ ಅನೇಕ ರೀತಿಯಲ್ಲಿ ದೇಹಕ್ಕೆ ಪ್ರಯೋಜನಕಾರಿ. ಇದರಲ್ಲಿ ಸಾಕಷ್ಟು ಕ್ಯಾಲ್ಸಿಯಂ ಅಂಶ ಇರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ಹಾಗೆಯೇ ಸ್ನಾಯು ದೌರ್ಬಲ್ಯವನ್ನು ದೂರ ಮಾಡುತ್ತದೆ. ಮೊಡವೆಗೆ ಮನೆಮದ್ದು: ಮೊಡವೆ ಸಮಸ್ಯೆಗಳಿಂದ ಬಳಲುತ್ತಿರುವವರು ಅಂಜೂರದ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಇದಕ್ಕಾಗಿ, ಒಣಗಿದ…

Read More

ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ವೈದ್ಯಕೀಯ ನೆರವು ಕೋರಿ ಶ್ರೀಲಂಕಾ ದೇಶಕ್ಕೆ ಪತ್ರ ಬರೆದಿದ್ದಾನೆ. ಎನ್ನಲಾಗಿದೆ. ಆಸ್ಟ್ರೇಲಿಯಾ ಸಮೀಪದ ದ್ವೀಪವೊಂದನ್ನು ಖರೀದಿಸಿ (ಕೈಲಾಸ ದೇಶ) ಅಲ್ಲಿರುವ ನಿತ್ಯಾನಂದ, ಇಲ್ಲಿ ವೈದ್ಯಕೀಯ ಸೌಲಭ್ಯಗಳಿಲ್ಲ. ತುರ್ತಾಗಿ ಚಿಕಿತ್ಸೆ ಬೇಕಾಗಿದೆ. ನೆರವು ನೀಡಿದರೆ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡುವುದಾಗಿ ಆಮಿಷ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಆರೋಗ್ಯದಲ್ಲಿ ಏರುಪೇರು ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ ಎಂದು ಶ್ರೀಲಂಕಾ ಅಧ್ಯಕ್ಷರಿಗೆ ನಿತ್ಯಾನಂದನ ಪತ್ರ ‘ಶ್ರೀಕೈಲಾಸ’ದಲ್ಲಿನ ಮೂಲಸೌಕರ್ಯ ಕೊರತೆ ಉಲ್ಲೇಖಿಸಿ ತನಗೆ ಚಿಕಿತ್ಸೆ ನೀಡುವಂತೆ ದೇವಮಾನವನ ಮನವಿ. ಅತ್ಯಾಚಾರದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಶ್ರೀಲಂಕಾದಲ್ಲಿ ರಾಜಕೀಯ ಆಶ್ರಯ ಬಯಸುತ್ತಿದ್ದಾರೆ ಎಂದು ವರದಿಯಾಗಿದೆ. ತನ್ನ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಉಲ್ಲೇಖಿಸಿ ನಿತ್ಯಾನಂದ ಆಗಸ್ಟ್ 7ರಂದು ದ್ವೀಪ ರಾಷ್ಟ್ರದ ಅಧ್ಯಕ್ಷರಿಗೆ ಪತ್ರ ಬರೆದಿದ್ದು,ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ…

Read More

ಚಿತ್ರದುರ್ಗ ಸೆಪ್ಟೆಂಬರ್ 3: ಪ್ರೌಢಶಾಲೆಯ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಠದ ಪರ ವಕೀಲ ಉಮೇಶ್, ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್​ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾಶ್ರೀಗಳಿಗೆ ಗೆದ್ದು ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು. ಪೋಕ್ಸೋ ಕಾಯ್ದೆ ಪ್ರಕರಣದಡಿ ಗುರುವಾರ ರಾತ್ರಿ ಮುರುಘಾಶರಣರನ್ನು ಬಂಧಿಸಿದ್ದ ಪೊಲೀಸರು ತಡರಾತ್ರಿ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಜಡ್ಜ್ ಆದೇಶಿಸಿದ್ದರು. ನಂತರ ಶುಕ್ರವಾರ ಎದೆ ನೋವು ಎಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ…

Read More

ಬೆಳಗಾವಿ : ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದೆ. ಬೆಳಗಾವಿ ನಗರದ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ ಆರೋಪಿ. ಪರೀಕ್ಷಾ ಅಕ್ರಮ ಬಯಲಿಗೆ ಬಂದಾಗಿನಿಂದ ತಲೆಮಲೆಸಿಕೊಂಡಿದ್ದ ಸಂಜೀವ್ ಭಂಡಾರಿಗೆ ಬಲೆ ಬೀಸಿದ್ದ ಪೊಲೀಸರು ಗೋಕಾಕದಲ್ಲಿ ಬಂಧಿಸಿದ್ದಾರೆ. ಆರೋಪಿ ಸಂಜೀವ ಭಂಡಾರಿಯನ್ನು ಗೋಕಾಕ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ವಶಕ್ಕೆ ಹಸ್ತಾಂತರಿಸುವಂತೆ ನ್ಯಾಯಾಲಯ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾ ಮಠದಿಂದ ತಮಗೆ ನೀಡಲಾಗಿದ್ದ ಬಸವ ಶ್ರೀ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಹಿಂದಿರುಗಿಸಲು ನಿರ್ಧರಿಸಿದ್ದು, ಇದರ ಜೊತೆಗೆ ಕೊಟ್ಟ 5 ಲಕ್ಷ ರೂಪಾಯಿಗಳ ಚೆಕ್ ಸಹ ಮರಳಿಸುತ್ತಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಶ್ರೀಗಳ ಕುರಿತ ಆರೋಪಗಳನ್ನು ಮಾಧ್ಯಮಗಳಲ್ಲಿ ನೋಡಿ ವಿಚಲಿತನಾಗಿದ್ದೇನೆ. ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ. ಈ ಪ್ರಕರಣದ ಸಂತ್ರಸ್ತ ಬಾಲಕಿಯರ ಜೊತೆ ನಾವಿದ್ದೇವೆ. ಆ ಬಾಲಕಿಯರಿಗೆ ನ್ಯಾಯ ಸಿಗಬೇಕು ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಶೈಕ್ಷಣಿಕ ವರ್ಷ ವಿಸ್ತರಣೆ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದ ಪೇಯಿಂಗ್‌ ಹಾಸ್ಟೆಲ್‌ ವಿದ್ಯಾರ್ಥಿನಿಯರು 3 ದಿನಗಳಿಂದ ಊಟವಿಲ್ಲದೆ ಉಪವಾಸ ಸಂಕಷ್ಟಕ್ಕೆ ಸಿಲುಕಿದ್ದು, ಶೀಘ್ರ ಸಮಸ್ಯೆ ಬಗೆಹರಿಸುವುದು ಅತ್ಯಗತ್ಯವಾಗಿದೆ. ಹೌದು, ನಗರದ ರೈಲ್ವೇ ಸ್ಟೇಷನ್‌ ರಸ್ತೆಯಲ್ಲಿರುವ ವಿವಿ ಹೆಣ್ಮಕ್ಕಳ ವಿದ್ಯಾರ್ಥಿ ನಿಲಯದ(ಪೇಯಿಂಗ್‌) ವಿದ್ಯಾರ್ಥಿಗಳು ಇಂಥದ್ದೊಂದು ಸಂಕಷ್ಟಕ್ಕೆ ಸಿಲುಕಿದ್ದು, ನೂತನ ಶಿಕ್ಷಣ ನೀತಿಯಿಂದ ಶೈಕ್ಷಣಿಕ ವರ್ಷ 1 ತಿಂಗಳು ವಿಸ್ತರಣೆಯಾಗಿರುವುದು ಅವರ ಸಮಸ್ಯೆಗೆ ಮುಖ್ಯ ಕಾರಣವಾಗಿದೆ. ತುಮಕೂರು ವಿವಿ ಹೆಣ್ಣುಮಕ್ಕಳ ವಿದ್ಯಾರ್ಥಿ ನಿಲಯದಲ್ಲಿ 128 ವಿದ್ಯಾರ್ಥಿನಿಯರಿದ್ದು, ವಿವಿ ಕಾಲೇಜು ವಿದ್ಯಾರ್ಥಿನಿಯರಿಗೆಂದೇ ಇರುವ ಈ ವಿದ್ಯಾರ್ಥಿ ನಿಲಯದಲ್ಲಿ ವಾರ್ಷಿಕ 16,000 ರೂ. ಊಟ, ವಸತಿ ಶುಲ್ಕ ನಿಗದಿಪಡಿಸಲಾಗಿದೆ. ಆದರೆ, ಈ ಬಾರಿ ಕೋವಿಡ್‌ ಕಾರಣದ ಜತೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆ 10 ತಿಂಗಳಿದ್ದ ಶೈಕ್ಷಣಿಕ ವರ್ಷವು 11 ತಿಂಗಳಿಗೆ ವಿಸ್ತರಣೆಗೊಂಡಿದ್ದು, ಇದೇ ಕಾರಣ ಹೇಳಿ ಹಾಸ್ಟೆಲ್‌ ವಾರ್ಡನ್‌ ವಿದ್ಯಾರ್ಥಿನಿಯರಿಗೆ ಸುಮಾರು 3 ದಿನಗಳಿಂದ ಊಟ ನೀಡದೆ, ವಿದ್ಯಾರ್ಥಿಗಳನ್ನು ಉಪವಾಸ ಕೆಡವಿ 1 ತಿಂಗಳಿಗೆ ತಗುಲುವ…

Read More

ಬೆಳಗಾವಿ: ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು, ಬಾಲಕಿ ಗರ್ಭ ಧರಿಸಲು ಕಾರಣನಾದ ಯುವಕನನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ತಾಲ್ಲೂಕಿನ ಗೌಳಿವಾಡ ಗ್ರಾಮದ ಮಲ್ಲು ಅಪ್ಪು ಪಿಂಗಳೆ (19) ಬಂಧಿತ ಆರೋಪಿ. ಅದೇ ತಾಲ್ಲೂಕಿನ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ, ಕೆಲ ವರ್ಷಗಳಿಂದ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಾಲಕಿ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿ ಮೇಲೆ ಪೋಕ್ಸೊ ಅಡಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರಕ್ಕೆ ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 3,546 ಕ್ಯೂಸೆಕ್ ನೀರು ಹರಿದು ಬಂದಿದೆ. ನೀರಿನ ಮಟ್ಟ 130 ಅಡಿಗೆ ಏರಿಕೆಯಾಗಿ ಗುರುವಾರ ಸಂಜೆ 6: 45 ಗಂಟೆಗೆ ಕೋಡಿ ಹರಿದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬಯಲುಸೀಮೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿರುವ ದೃಶ್ಯ ವೀಕ್ಷಿಸಲು ಜನರು ಕಾತರದಿಂದ ಕಾಯುತ್ತಿದ್ದರು. ವಿ.ವಿ.ಸಾಗರ ಜಲಾಶಯ ಸುಮಾರು 88 ವರ್ಷಗಳ ನಂತರ ಭರ್ತಿಯಾಗುತ್ತಿದ್ದು, ಕೋಡಿಯ ಮೂಲಕ ನದಿಗೆ ನೀರು ಹರಿಯಲಿದೆ. ವಿವಿ ಸಾಗರ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಿಂದಾಗಿ ಡ್ಯಾಂನ ಗರಿಷ್ಟ ಮಟ್ಟ ಸೆಪ್ಟೆಂಬರ್ 1ರಂದು ಸಂಜೆ ಗರಿಷ್ಠ 130 ಅಡಿಗೆ ಏರಿಕೆಯಾಗಿ ಭರ್ತಿಯಾಗಿದೆ. ಒಳಹರಿವು 4,564 ಕ್ಯೂಸೆಕ್ ಇದೆ. ಗರಿಷ್ಟ ಮಟ್ಟ 130 ಅಡಿ ತಲುಪಿದ್ದು, ಭರ್ತಿಯಾಗಿ ಕೋಡಿ ಹರಿದಿದೆ. ಹೆಚ್ಚುವರಿ ನೀರು ಕೋಡಿಯ ಮೂಲಕ ನದಿಗೆ ಹರಿಯಲಿದ್ದು, ಈಗಾಗಲೇ ನದಿಪಾತ್ರದ ಇಕ್ಕೆಲಗಳ ಹಾಗೂ ತಗ್ಗು ಪ್ರದೇಶದ ಜನಗಳಿಗೆ ತಮ್ಮ…

Read More