Subscribe to Updates
Get the latest creative news from FooBar about art, design and business.
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
- ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
- ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
- ಹುಸಿ ಬಾಂಬ್ ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
- ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
Author: admin
ಹಣಕಾಸಿನ ತೊಂದರೆಯಿಂದಾಗಿ ಚಿತ್ರೀಕರಣ ತಡವಾಗಿದ್ದಕ್ಕೆ ನಿರ್ಮಾಪಕನಿಗೆ ಖ್ಯಾತ ನಟರೊಬ್ಬರು ಬೆದರಿಕೆ ಹಾಕಿದ್ದು, ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿದೆ. ನಿರ್ಮಾಪಕ ಭರತ್ ವಿಷ್ಣುಕಾಂತ್ ಎಂಬುವರು ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಎಂಬ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಧ್ರುವನ್ ಎಂಬುವರು ನಾಯಕ ನಟನಾಗಿ ನಟಿಸುತ್ತಿದ್ದಾರೆ. ಹಣಕಾಸಿನ ತೊಂದರೆಯಿಂದಾಗಿ ಭರತ್ ಅವರು ಈ ಚಿತ್ರದ ಚಿತ್ರೀಕರಣವನ್ನು ತಡವಾಗಿ ಮಾಡುತ್ತಿರುವುದರಿಂದ ಬೇಸರಗೊಂಡ ಧ್ರುವನ್ ಈ ಬಗ್ಗೆ ನಟ ದರ್ಶನ್ ಅವರ ಬಳಿ ಹೋಗಿ ಹೇಳಿಕೊಂಡು ಅವರಿಂದ ಭರತ್ಗೆ ಫೋನ್ ಮಾಡಿಸಿದ್ದಾರೆ. ದರ್ಶನ್ ಅವರು ಕರೆ ಮಾಡಿ ಬೆದರಿಕೆ ಹಾಕಿದ್ದು, ಈ ಬಗ್ಗೆ ಭರತ್ ಅವರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದರ್ಶನ್ ಅವರು ಧ್ರುವನ್ ಮೊಬೈಲ್ನಿಂದಲೇ ಭರತ್ಗೆ ಕರೆ ಮಾಡಿರುವುದು ಗೊತ್ತಾಗಿದೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ಬಿಬಿಎಂಪಿಯ 243 ವಾರ್ಡ್ಗಳಿಗೆ ಕಲ್ಪಿಸಿರುವ ಮೀಸಲಾತಿಗೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಈಗಾಗಲೇ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇಂದು ಸಂಜೆವರೆಗೆ ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಪರಿಗಣಿಸಿ ಮೂರ್ನಾಲ್ಕು ದಿನಗಳ ಒಳಗೆ ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ. 7 ದಿನಗಳ ಹಿಂದೆ ಪ್ರಕಟಿಸಿದ್ದ ಮೀಸಲಾತಿಗೆ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿರುವುದರಿಂದ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ತೀವ್ರ ವಿರೋಧ ವ್ಯಕ್ತವಾಗಿರುವ ವಾರ್ಡ್ಗಳ ಮೀಸಲು ಬದಲು ಮಾಡುವ ಸಾಧ್ಯತೆಗಳಿವೆ. ಸರ್ಕಾರ ಸೂಚಿಸಿರುವ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ಕಾನೂನು ಹೋರಾಟ ನಡೆಸಲಾಗುವುದು ಎಂದು ಆ ಪಕ್ಷದ ಹಲವಾರು ಮುಖಂಡರು ತಿಳಿಸಿದ್ದಾರೆ. ಹೀಗಾಗಿ ಮೀಸಲಾತಿಯಲ್ಲಿ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಿ ಯಥಾವತ್ ಮೀಸಲು ಕಲ್ಪಿಸಿದರೆ ಕಾಂಗ್ರೆಸ್ ಮುಖಂಡರು ಮತ್ತೆ ನ್ಯಾಯಾಲಯದ ಕದ ತಟ್ಟುವ ಸಾಧ್ಯತೆಗಳಿವೆ. ಫ್ರೀ ಪ್ಲಾನ್: ಸುಪ್ರೀಂ ಕೋರ್ಟ್ ಎಂಟು ವಾರಗಳ ಒಳಗೆ ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸ್ಪಷ್ಟ ಸೂಚನೆ…
ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಮಹಿಳೆ ಮೇಲೆ ದಾಳಿ ಮಾಡಿ ತುಳಿದು ಸಾಯಿಸಿರುವ ಘಟನೆ ಚೆನ್ನಮ್ಮನ ಹೊಸ ಹಳ್ಳಿ ಬಳಿ ನಡೆದಿದೆ. ಸಿದ್ದಪ್ಪಾಜಿ ದೇವಾಲಯ ಅರ್ಚಕ ಚೆನ್ನಪ್ಪ ಅವರ ಪತ್ನಿ ಚೆನ್ನಮ್ಮ(65) ಆನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ಮಹಿಳೆ. ಎಂದಿನಂತೆ ಇಂದು ಬೆಳಗಿನ ಜಾವ 5.30ರ ಸುಮಾರಿನಲ್ಲಿ ಚೆನ್ನಮ್ಮ ಅವರು ತೋಟಕ್ಕೆ ಹೋಗಿ ಹಸುವಿನ ಹಾಲು ಕರೆಯುತ್ತಿದ್ದಾಗ ಏಕಾಏಕಿ ಅವರ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿ ತುಳಿದಿದೆ. ಮಹಿಳೆಯ ಕೂಗಾಟ, ಚೀರಾಟ ಕೇಳಿ ಅಕ್ಕ-ಪಕ್ಕದವರು ಸ್ಥಳಕ್ಕೆ ಬಂದು ಆನೆಯನ್ನು ಓಡಿಸುವಷ್ಟರೊಳಗೆ ಚೆನ್ನಮ್ಮ ಮೃತಪಟ್ಟಿದ್ದರು. ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ವಿಷಯ ತಿಳಿದು ಸುತ್ತ-ಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದರು. ಮಹಿಳೆಯ ಕುಟುಂಬಸ್ಥರ ರೋದನ ಹೇಳತೀರದಾಗಿತ್ತು. ಸುದ್ದಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದಾಗ ಗ್ರಾಮಸ್ಥರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭರವಸೆಯಾಗಿಯೇ ಉಳಿದ ಆಶ್ವಾಸನೆ: ಕಳೆದ ಐದು ವರ್ಷಗಳಿಂದಲೂ ಆನೆಗಳ ಉಪಟಳದಿಂದ ಇದುವರೆಗೂ ಲಕ್ಷಾಂತರ ರೂ. ಬೆಲೆ ಹಾನಿಯಾಗಿ ರೈತರು ಕಂಗಾಲಾಗಿದ್ದಾರೆ.…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವ ಆಚರಣೆ ಮಾಡಲು ಸಿದ್ದತೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು 75ನೇ ವರ್ಷದ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಹೊಸ ಮಾದರಿಯ 75 ಎಲೆಕ್ಟ್ರಿಕ್ ಬಸ್ಸುಗಳನ್ನು ರಸ್ತೆಗಿಳಿಸಲು ಬಿಎಂಟಿಸಿ ಸಿದ್ಧತೆ ಮಾಡಿಕೊಂಡಿದೆ. ಸ್ವಿಚ್ ಮೊಬಿಲಿಟಿ ಲಿಮಿಟೆಡ್ ನಿಂದ 12ಮೀಟರ್ ಉದ್ದದ ನಾನ್ ಎಸಿ ಇ ಬಸ್ಸುಗಳು ಇವಾಗಿವೆ. ಎಲ್ಲಾ ಅಂದುಕೊಂಡಂತೆ ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಬಸ್ಸುಗಳಿಗೆ ವಿಧಾನಸೌಧದ ಮುಂದೆ ಹಸಿರು ನಿಶಾನೆ ತೋರಲಿದ್ದಾರೆ. ಬಿಎಂಟಿಸಿಯೂ ಕೇಂದ್ರ ಸರ್ಕಾರದ ಫೇಮ್ -2 ಯೋಜನೆಯಡಿ 300 ಇ ಬಸ್ ಗಳ ಖರೀದಿಗೆ ಟೆಂಡರ್ ಆಹ್ವಾನಿಸಿತ್ತು. ಕಿ. ಲೋ ಮೀಟರ್ ಗೆ 48.95ಯಂತೆ ಸ್ವಿಚ್ ಕಂಪನಿ ಟೆಂಡರ್ ಪಡೆದು ಗುತ್ತಿಗೆ ಆಧಾರದ ಮೇಲೆ 300 ಬಸ್ಸುಗಳನ್ನ ಬಿಎಂಟಿಸಿಗೆ ಒದಗಿಸಲಿದೆ. ಈ ಬಸ್ಸುಗಳಿಗೆ ಟೆಂಡರ್ ಪಡೆದ ಕಂಪನಿಯೇ ಚಾಲಕರನ್ನ ಒದಗಿಸಲಿದೆ, ನಿರ್ವಹಣೆ ಮತ್ತು ಚಾರ್ಜ್ ಮಾಡಲು ಬೇಕಾದ ಮೂಲ ಸೌಕರ್ಯವನ್ನು…
ಬೆಂಗಳೂರಿನ ಲಾಲ್ಬಾಗ್ನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವಿಶೇಷವಾಗಿ ಕರ್ನಾಟಕ ರತ್ನ ಡಾ.ರಾಜ್ಕುಮಾರ್ ಮತ್ತು ಡಾ.ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ವಾರ್ಷಿಕ ಫಲಪುಷ್ಪ ಪ್ರದರ್ಶನದಲ್ಲಿ ದಿವಂಗತ ನಟ ರಾಜಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಎಲ್ಲರ ಪ್ರೀತಿಗೆ ಸದಾ ಚಿರಋಣಿ ಎಂದಿದ್ದಾರೆ. ಸಣ್ಣ ವಿಡಿಯೋ ತುಣುಕಿನೊಂದಿಗೆ ಟ್ವೀಟ್ ಮಾಡಿರುವ ಡಾ. ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್, ಕರ್ನಾಟಕ ಸರ್ಕಾರ, ಲಾಲ್ಬಾಗ್ ಅಧಿಕಾರಿಗಳು ಹಾಗೂ ಎಲ್ಲಾ ಅಭಿಮಾನಿ ದೇವರುಗಳು ಅಪ್ಪು ಅವರ ಮೇಲೆ ಇಟ್ಟಿರುವ ಅಪರಿಮಿತ ಪ್ರೀತಿಗೆ ನಾನು ಸದಾ ಚಿರಋಣಿ ಎಂದು ಬರೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಕರೋನಾವೈರಸ್ ಕಾರಣದಿಂದಾಗಿ ಕಳೆಗುಂದಿದ್ದ ಲಾಲ್ಬಾಗ್ ಫಲಪುಷ್ಪ ಪ್ರದರ್ಶನವನ್ನು ಈ ವರ್ಷ ಆಗಸ್ಟ್ 5 ರಿಂದ 15 ರವರೆಗೆ ಆಯೋಜಿಸಲಾಗಿದೆ. ಈ ವರ್ಷ ಲಾಲ್ಬಾಗ್ನ ಫಲಪುಷ್ಪ ಪ್ರದರ್ಶನದಲ್ಲಿ ಡಾ ರಾಜ್ಕುಮಾರ್, ಅವರ ಪತ್ನಿ ಪಾರ್ವತಮ್ಮ…
ಬಗೆ ಬಗೆಯ ಆಹಾರ ಪದ್ಧತಿಯಿಂದ ಭಾರತವು ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ, ಅಂದರೆ ನಮ್ಮ ಭಕ್ಷ್ಯಗಳಲ್ಲಿ ಅನೇಕ ರೀತಿಯ ಮಸಾಲೆಗಳನ್ನು ಬಳಸಲಾಗುತ್ತದೆ. ಈ ಮಸಾಲೆಗಳಲ್ಲಿ ಕೆಂಪು ಮೆಣಸಿನ ಪುಡಿಯ ಹೆಸರೂ ಸೇರಿದೆ. ಮೆಣಸಿನಕಾಯಿಗಿಂತ ಹೆಚ್ಚು, ಈ ಖಾರದ ಪುಡಿಯನ್ನು ಬಣ್ಣಕ್ಕಾಗಿ ಬಳಸಲಾಗುತ್ತದೆ ಮತ್ತು ಸಾಮಾನ್ಯವಾಗಿ ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುತ್ತದೆ. ನಿಮಗೆ ತಿಳಿದಿಲ್ಲದಿರಬಹುದು, ಆದರೆ ಅಡುಗೆಯ ಹೊರತಾಗಿ, ಕೆಂಪು ಮೆಣಸಿನ ಪುಡಿಯು ಅನೇಕ ಅದ್ಭುತ ಪ್ರಯೋಜನಗಳನ್ನು ಹೊಂದಿದೆ. ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಬಳಸಿದರೆ, ಕೆಂಪು ಮೆಣಸಿನ ಪುಡಿಯು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ ಎಂದು ಸಾಬೀತುಪಡಿಸಬಹುದು. ಹೃದಯಾಘಾತ ತಡೆಗೆ ಪ್ರಯೋಜನಕಾರಿ : ಕೆಂಪು ಮೆಣಸಿನ ಪುಡಿ ಹೃದಯಕ್ಕೆ ತುಂಬಾ ಒಳ್ಳೆಯದು. ಹೃದಯಾಘಾತವಾದ ತಕ್ಷಣ ಸ್ವಲ್ಪ ಕೆಂಪು ಮೆಣಸಿನ ಪುಡಿಯನ್ನು ನೀರಿನ ಜೊತೆ ಕರಗಿಸಿ ಕುಡಿದರೆ, ನಂತರ ಪರಿಸ್ಥಿತಿ ಸುಧಾರಿಸಬಹುದು ಎಂದು ಅನೇಕ ಸಂಶೋಧನೆಗಳಲ್ಲಿ ಹೇಳಲಾಗಿದೆ. ಕೆಂಪು ಮೆಣಸಿನಕಾಯಿಯಲ್ಲಿ ಪೊಟ್ಯಾಸಿಯಮ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ, ಇದು ನಿಮ್ಮ ದೇಹದ ಅಪಧಮನಿಗಳನ್ನು ಸಡಿಲಗೊಳಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು…
ಮಾನಸಿಕ ಒತ್ತಡಕ್ಕೆ ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿಯೊಬ್ಬರು ಅಸುನೀಗಿದ್ದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ. ಆಕೆ ಬಾಳಿ ಬದುಕಬೇಕಿದ್ದ ಯುವತಿ. ಆದ್ರೆ ಆಕೆಗೆ ಏನಾಯ್ತೋ ಏನೋ? ತನ್ನ ಹುಟ್ಟುಹಬ್ಬದ ದಿನವೇ ತನ್ನ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ(26) ಎಂಬ ಉಪನ್ಯಾಸಕಿ. ಚಂದನಾ ಚಾಮರಾಜನಗರದ ಜೆಎಸ್ಎಸ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್ಎಸ್ ಕಾಲೇಜಿನ ಹಾಸ್ಟೆಲ್ನಲ್ಲೇ ವಾಸ್ತವ್ಯ ಹೂಡಿದ್ದರು. ಈಕೆ ಎಲ್ಲರ ಜೊತೆಯಲ್ಲೂ ಸಹಾ ಉತ್ತಮ ಭಾಂದವ್ಯ ಹೊಂದಿದ್ರು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು,ವಿದ್ಯಾರ್ಥಿಗಳು ಶುಭಾಶಯ ಕೋರಿದ್ರು. ಆದ್ರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಜೊತೆ ಕೊಠಡಿಯಲ್ಲಿದ್ದ ಸ್ನೇಹಿತರು ಹೊರಹೋದ ನಂತರ ತನ್ನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಮಾನಸಿಕ ಒತ್ತಡ ಬಯಲು: ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿರುವ ಚಂದನಾ ” ಯಾಕೆ ಯಾರೂ ನನ್ನ ಅರ್ಥ…
ಬೆಂಗಳೂರು: ಜೈಲಲ್ಲಿ ಮುದ್ದೆ ಮುರಿದು ಬಂದ್ರೂ ಬುದ್ದಿ ಕಲಿಯದ ಖತರ್ನಾಕ್ ಖದೀಮ ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಯಾಸೀನ್ ಖಾನ್ ಆಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ. ಈತ ನಗರದಲ್ಲಿ ನಿರಂತರವಾಗಿ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಸದ್ಯ ಹಲಸೂರು ಗೇಟ್ ಪೊಲೀಸರು ಈತನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ 6 ಲಕ್ಷದ ಮೌಲ್ಯದ 100 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಹಾಗೂ 39 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನ ವಾಲ್ಮೀಕಿ ನಗರದ ನಿವಾಸಿಯಾಗಿರುವ ಇಮ್ರಾನ್ ಸುಲಭವಾಗಿ ಹಣ ಸಂಪಾದನೆ ಮಾಡಲು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಈತನ ವಿರುದ್ಧ ಬೆಂಗಳೂರಿನಲ್ಲಿಯೇ 30 ಪ್ರಕರಣ ದಾಖಲಾಗಿವೆ. ರಾಜ್ಯದ ಹಲವು ಕಡೆಗಳಲ್ಲಿ ಇಮ್ರಾನ್ ವಿರುದ್ಧ 60ಕ್ಕಿಂತ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿವೆ. ಹಲವು ಬಾರಿ ಜೈಲಿಗೆ ಹೋಗಿಬಂದಿದ್ದರೂ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿರಲಿಲ್ಲ.ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತೆ ತನ್ನ ಚಾಳಿ ಕೈಚಳಕ ತೋರುತ್ತಿದ್ದ. ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಯಾಸೀನ್,…
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಸಂಪುಟ ವಿಸ್ತರಣೆ ಮಾಡಿದ್ದಾರೆ. ೧೮ ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರಿಸಿದರು. ಬಿಜೆಪಿ ಮತ್ತು ಶಿವಸೇನೆ ಬಣ ಅಧಿಕಾರಕ್ಕೆ ಬಂದು 40 ದಿನಗಳ ನಂತರ ಸಂಪುಟ ವಿಸ್ತರಣೆ ಮಾಡಲಾಗಿದೆ. ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಣ ತಲಾ ೯ ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಭಗವಂತ್ ಕೊಶಿಯಾರಿ ಪ್ರಮಾಣ ವಚನ ಬೋಧಿಸಿದರು. ಶಿವಸೇನೆಯಿಂದ ದಾದಾಜಿ ಭೂಸೆ, ಉದಯ್ ಸಮಂತ್, ಗುಲಾಬ ರಾವ್ ಪಾಟೀಲ್, ಸಂದೀಪನ್ ಭೂಮಾರೆ, ಶಂಭೂರಾಜ್ ದೇಸಾಯಿ, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ವಸಂತ್ ಕೇಸರ್ಕರ್ ಹಾಗೂ ಬಿಜೆಪಿಯಿಂದ ಸಂಜಯ್ ರಾಥೊಡ್, ಚಂದ್ರಕಾಂತ್ ಪಾಟೀಲ್ ಸುಧೀರ್ ಮುಂಗುಂತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಂಡೆ, ರಾಧಾಕೃಷ್ಣ ವಿಖೆ ಪಾಟೀಲ್, ಮಂಗಲ್ ಪ್ರಭಾತ್ ಲೋಧಾ, ರವೀಂದ್ರ ಚವ್ಹಾಣ್, ವಿಜಯ್ ಗವಿತ್ ಹಾಗೂ ಅತುಲ್ ಮೊರೇಶ್ವರ್ ಸೇವ್ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಉಪಮುಖ್ಯಮಂತ್ರಿಯಾಗಿರುವ…
ಆರ್ ಎಸ್ ಎಸ್ ಸಂವಿಧಾನ ಮತ್ತು ರಾಷ್ಟ್ರಧ್ವಜವನ್ನೇ ವಿರೋಧಿಸುವ ಸಂಘಟನೆ, ಇಂತಹ ಸಂಘಟನೆಯ ಹಿನ್ನೆಲೆ ಹೊಂದಿರುವ ಬಿಜೆಪಿ ಅವರು, ಹರ್ ಘರ್ ತಿರಂಗ ಎಂಬ ನಾಟಕ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ನಡೆದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಬ್ರಿಟಿಷರು ಗಾಂಧೀಜಿ ಅವರನ್ನು ದಸ್ತಗಿರಿ ಮಾಡುತ್ತಾರೆ. ಈ ಚಳವಳಿ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಚಳವಳಿ ಎಂದ ಅವರು, ಆರ್ ಎಸ್ ಎಸ್ ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಅವರು ಬ್ರಿಟೀಷರ ಗುಲಾಮರಗಿದ್ದವರು ಎಂದು ಟೀಕಿಸಿದರು. ಆರ್ ಎಸ್ ಎಸ್ 1925ರಲ್ಲೇ ಇತ್ತು. ಜನಸಂಘ ಹೊಂದಿದ್ದು 1979ರಲ್ಲಿ. ಇದೇ ಜನಸಂಘದ ಗೋಲ್ ವಾರ್ ಕರ್, ರಾಷ್ಟ್ರಧ್ವಜ ವಿರೋಧಿಸಿದ್ದರು. 52ವರ್ಷ ನಾಗಪುರದ ಆರ್ಎಸ್ಎಸ್ ಕಚೇರಿ ಮೇಲೆ ತ್ರಿವರ್ಣ ಧ್ವಜ ಹಾರಿಸಿರಲಿಲ್ಲ. ಆರ್ ಎಸ್ ಎಸ್ ನವರ ಬುದ್ಧಿ ನಮಗೆ ಗೊತ್ತಿದೆ. ಚಾರ್ತುವರ್ಣ್ಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟವರು…