Author: admin

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಮ್ಯಾಂಡಾಸ್ ಚಂಡಮಾರುತದಿಂದಾಗಿ ನೆರೆಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಇದರ ಎಫೆಕ್ಟ್ ಕರ್ನಾಟಕದ ಮೇಲೂ ತಟ್ಟಿದೆ. ಈ ಹಿನ್ನೆಯಲ್ಲಿ ಮಳೆ, ಶೀತಗಾಳಿ ಹೆಚ್ಚಾಗಿದ್ದು ಮಕ್ಕಳು, ವೃದ್ಧರು ತುಂಬಾ ಎಚ್ಚರಿಕೆಯಿಂದಿರುವಂತೆ ಆರೋಗ್ಯ ಸಚಿವ ಸುಧಾಕರ್ ಸಲಹೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಚಳಿಗಾಲದ ಜೊತೆ ಚಂಡಮಾರುತದ ಪರಿಣಾಮ ಎದುರಿಸುತ್ತಿದ್ದೇವೆ. ಹೀಗಾಗಿ ಮಕ್ಕಳು, ವೃದ್ಧರು ತುಂಬಾ ಎಚ್ಚರಿಕೆಯಿಂದ ಇರಬೇಕು. ವೃದ್ಧರನ್ನ, ಮಕ್ಕಳನ್ನ ತುಂಬಾ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದಲೂ ಮಾರ್ಗಸೂಚಿ ಹೊರಡಿಸಿದ್ದೇವೆ. ವೈದ್ಯರಿಗೂ ಎಚ್ಚರಿಕೆ ವಹಿಸಲು ಸಭೆ ಕರೆದು ಸೂಚಿಸುತ್ತೇನೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೂ ಮುಂಜಾಗ್ರತಾ ಕ್ರಮ ವಹಿಸಲು ಈಗಾಗಲೇ ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಎಲ್ಲಾ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಈಗ ಸಭೆ ಕರೆದು ವೈದ್ಯರಿಗೂ ಸೂಚನೆ ಕೊಡುತ್ತೇನೆ. ಈ ವಾತಾವರಣದಿಂದ ಕೊರೋನಾ ಉಲ್ಬಣವಾಗುವುದಿಲ್ಲ. ಆದರೆ ದೇಹವನ್ನು ತುಂಬಾ ಬೆಚ್ಚಗೆ ಕಾಪಾಡಿಕೊಳ್ಳಬೇಕು.ನಾವೂ ಕೂಡ ತುಂಬಾ ಮುಂಜಾಗ್ರತೆವಹಿಸಿದ್ದೇವೆ ಎಂದರು.…

Read More

ಭಾರತೀಯ ಒಲಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ.ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ ಅಧ್ಯಕ್ಷ ಸಹದೇವ್ ಯಾದವ್ ಖಜಾಂಚಿಯಾಗಿ ಆಯ್ಕೆಯಾದರೆ, ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷ ಹಾಗೂ ಮಾಜಿ ಗೋಲ್ ಕೀಪರ್ ಕಲ್ಯಾಣ್ ಚೌಬೆ ಸಹ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ನಡೆಸದಿದ್ದರೆ ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸೂಚನೆ ನೀಡಿದ್ದ ಬೆನ್ನಲ್ಲೇ ಈ ಮಹತ್ವದ ಚುನಾವಣೆ ನಡೆದಿತ್ತು. ಅಸೋಸಿಯೇಷನ್ ನಿರ್ದೇಶಕರಾಗಿ ಭೂಪೇಂದ್ರ ಸಿಂಗ್ ಬಜ್ವಾ, ಅಮಿತಾಬ್ ಶರ್ಮಾ, ಹರ್ಪಾಲ್ ಸಿಂಗ್ ಹಾಗೂ ರೋಹಿತ್ ರಾಜ್ಪಾಲ್ ಆಯ್ಕೆಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚೆನ್ನೈ: ನಟ ರಜನಿಕಾಂತ್ ಇಂದು (ಡಿ.12) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರತಿ ಹುಟ್ಟುಹಬ್ಬ ಆಚರಿಸುತ್ತಿರುವಾಗ  ಅಭಿಮಾನಿಗಳು ಅವರನ್ನು ನೋಡಲು ಅವರ ಮನೆ ಮುಂದೆ ಸೇರುತ್ತಾರೆ. ಈ ಹುಟ್ಟುಹಬ್ಬದ ದಿನವೂ ಬೋಯಸ್ ತೋಟದ ಮನೆಯ ಮುಂದೆ ಅಭಿಮಾನಿಗಳು ಜಮಾಯಿಸಿ ರಜನಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ಇದಾದ ಬಳಿಕ ಮನೆಯಿಂದ ಹೊರ ಬಂದ ರಜನಿ ಪತ್ನಿ ಲತಾ, “ನಟ ರಜನಿ ಶೂಟಿಂಗ್‌ಗಾಗಿ ಹೈದರಾಬಾದ್‌ಗೆ ಹೋಗಿದ್ದಾರೆ. ಯಾವುದೇ ಅಭಿಮಾನಿಗಳು ಸೇರಬಾರದು ಎಂದು ಅವರು ಹೇಳಿದರು. ಇದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಇದೇ ವೇಳೆ ಮುಖ್ಯಮಂತ್ರಿ ಸ್ಟಾಲಿನ್, ತಮಿಳುನಾಡು ಬಿಜೆಪಿ ಅಧ್ಯಕ್ಷ, ಅಣ್ಣಾಮಲೈ ಮತ್ತಿತರ ನಾಯಕರು ನಟ ರಜನಿಕಾಂತ್ ಅವರಿಗೆ ಶುಭಾಶಯಗಳನ್ನು ಕೋರಿದರು. ಮುಖ್ಯಮಂತ್ರಿಗಳಿಂದ ಅಭಿನಂದನಾ ಸಂದೇಶ: “ನನ್ನ ಆತ್ಮೀಯ ಗೆಳೆಯ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಶುಭಾಶಯಗಳು ಎಂದು ತಿಳಿಸಿದರು. ಈಗೆ ಅನೇಕ ರಾಜಿಕೀಯ ನಾಯಕರು, ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಜಿನಿಕಾಂತ್ ಅವರಿಗೆ ಶುಭಾಶಯಗಳನ್ನು ಕೋರಿದರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ.…

Read More

ಬೆಳಗಾವಿ: ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲೆ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 25 ತೊಲೆ ಬಂಗಾರ, 20 ತೊಲೆ ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಗೋಕಾಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಮಿಳುನಾಡು :ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರುತ್ತಿದ್ದ ಅಂಗಡಿಗೆ ‘ಸೀಲ್’ ಜೈವಿಕ ವಿಘಟನೀಯವಲ್ಲದ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ ಮಾರಾಟ ನಡೆಯುತ್ತಿರುವ ಬಗ್ಗೆ ನಗರಸಭೆಗೆ ಸೂಚನೆ ನೀಡಲಾಗಿತ್ತು. ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಸೆಂಥಿಲಕುಮಾರ್ ಉತ್ತರ ಆರೋಗ್ಯ ನಿರೀಕ್ಷಕ ಕರ್ಪುಸಾಮಿ ಹಾಗೂ ಅಧಿಕಾರಿಗಳು ಅವಿನಾಶಿ ದಿನಸಿ, ಸಾಮಾನ್ಯ ಸರಕು, ಲೇಖನ ಸಾಮಗ್ರಿ ಸೇರಿದಂತೆ ಅಂಗಡಿಗಳ ತಪಾಸಣೆ ನಿಭಾಯಿಸಿದೆ ಆಗ ಹಳೆ ಬಸ್ ನಿಲ್ದಾಣ ಧ್ವಂಸವಾಗಿತ್ತು ಹತ್ತಿರದ 2 ಅಂಗಡಿಗಳು ಮಾರಾಟಕ್ಕಿದ್ದವು 620 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ ಪ್ರತಿ ಅಂಗಡಿಗೆ ರೂ. 15 ಸಾವಿರ ಹಾಗೂ ಇನ್ನೊಂದು ಅಂಗಡಿಗೆ ರೂ. 50 ಸಾವಿರ ದಂಡವನ್ನೂ ವಿಧಿಸಲಾಗಿದೆ. ಈ ಒಂದು ಅಂಗಡಿಯಲ್ಲಿ ಈಗಾಗಲೇ ಪ್ಲಾಸ್ಟಿಕ್ ಉತ್ಪನ್ನಗಳನ್ನು ರೂ. 20 ಸಾವಿರ ದಂಡ ವಿಧಿಸಿ ಮತ್ತೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡಿದ ಕಾರಣ ಅಂಗಡಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಪುರಸಭೆ ಆರೋಗ್ಯ ನಿರೀಕ್ಷಕರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ವಿವಾಹೇತರ ಸಂಬಂಧ ಯುವಕನೊಬ್ಬನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಂಧ್ರಪ್ರದೇಶದ ವೈಎಸ್ ಆರ್ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ರಾಜುಪಾಳಂ ನಿವಾಸಿ ಪರ್ಲಪಾಡು ನರಸಮ್ಮ ಅವರು ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಅವರಿಗೆ ಒಬ್ಬ ಮಗಳು ಮತ್ತು ಒಬ್ಬ ಮಗ ಇದ್ದಾರೆ. ಎಸ್‌ಸಿ ಕಾಲೋನಿಯ ಛಾಯಾಗ್ರಾಹಕ ಮಿಠೆ ಪೇಠಾಸ್ತಗಿರಿಯೊಂದಿಗೆ ಮಗಳ ಮದುವೆ ನಡೆದಿದೆ. ತಾಯಿ ಮಾಪುಣ್ಣಿ ಹಾಗೂ ಕಿರಿಯ ಸಹೋದರ ದಸ್ತಗಿರಿ (28) ಅವರನ್ನು ಅಗಲಿದ್ದಾರೆ. ಕೆಲವು ವರ್ಷಗಳ ಹಿಂದೆ ತಂದೆ ತೀರಿಕೊಂಡರು. ಈ ವೇಳೆ ನರಸಮ್ಮ ಹಾಗೂ ಅಳಿಯನ ಸೋದರ ಮಾವ ದಸ್ತಗಿರಿ ನಡುವೆ ವಿವಾಹೇತರ ಸಂಬಂಧ ಏರ್ಪಟ್ಟಿತ್ತು. ಟೈಲರ್ ಆಗಿದ್ದ ಚಿನ್ನ ದಸ್ತಗಿರಿ ಇತ್ತೀಚೆಗಷ್ಟೇ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದ. ಈ ಸ್ಥಿತಿಯಲ್ಲಿ ಶುಕ್ರವಾರ ಸಂಜೆ ನರಸಮ್ಮ ಮನೆಗೆ ಬಂದು ನೀನು ಬೇರೆ ಮದುವೆಯಾಗುವುದು ಹೇಗೆ ಎಂದು ಜಗಳವಾಡಿದ್ದಾಳೆ. ಕೋಪದ ಭರದಲ್ಲಿ ಚಾಕು ತೆಗೆದು ಪುಟ್ಟ ದಸ್ತಗಿರಿಗೆ ಇರಿದಿದ್ದಾನೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆಯಾದ ವ್ಯಕ್ತಿಯ ತಾಯಿ ಮಿಥೆ…

Read More

ಮೂಲ ನಿವಾಸಿ ಅಂಬೇಡ್ಕರ್ ಸಂಘ (ರಿ) ರಾಜ್ಯಾಧ್ಯಕ್ಷರು – ಸಂಸ್ಥಾಪಕರು ಡಾll ಬಿ ಎಂ ಮುನಿಮಾರಪ್ಪ ರಾಜ್ಯಾಧ್ಯಕ್ಷರು ಪ್ರಚಾರ ಘಟಕ ಜೈ ಭೀಮ್ Cನ ಯುವ ಸೈನ್ಯ ಪತ್ರಿಕೆ ಸಂಸ್ಥಾಪಕರು ಧನರಾಜ್ ಈ ಮೂರು ವ್ಯಕ್ತಿ ಕಳೆದ ಎರಡು ವರ್ಷ ಹಿಂದೆ ಮೂಲ ನಿವಾಸಿ ಅಂಬೇಡ್ಕರ್ ಸೈನ್ಯ ಹುಟ್ಟು ಹಾಕಿರುತ್ತಾರೆ ಮೂರು ಜನ ಶ್ರಮ ಇವತ್ತಿಗೆ ಆಲದ ಮರವಾಗಿ ಬೆಳೆದಿದೆ ಆ ಸಂಘದ ಹೆಸರು ಮೂಲ ನಿವಾಸಿ ಅಂಬೇಡ್ಕರ್ ಸಂಘ (ರಿ) ಕರ್ನಾಟಕದಲ್ಲಿ ಮೂಲೆ ಮೂಲೆಯಲ್ಲೂ ವಿಚಾರ ಕೆಲಸ ಮಾಡುತ್ತಾ ಬರುತ್ತಿದೆ ಪ್ರಚಾರ ಬಿಟ್ಟು ವಿಚಾರದ ಕಡೆ ಡಾll ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರಗಳನ್ನು ತಿಳಿಸುವ ಪ್ರಮುಖ ಕೆಲಸ ಮಾಡುತ್ತಿದೆ ರಾಜ ಸಮಿತಿ ಜಿಲ್ಲಾ ಸಮಿತಿ ಎಲ್ಲಾ ಕ್ಷೇತ್ರದ ಸಮಿತಿ ಸದ್ಯಸರು ಪದಾಧಿಕಾರಿಗಳು ಹೆಚ್ಚು ಕೆಲಸ ಮಾಡುತ್ತಿದ್ದಾರೆ ಮೂಲ ನಿವಾಸಿ ಅಂಬೇಡ್ಕರ್ ಸಂಘ ವತಿಯಿಂದ (ರಿ) ಒಂದು ವರ್ಷದ ಹಿಂದೆ ಇಂದಿನ ನಗರ ಬಿನ್ನಮಂಗಳ ಅಂಬೇಡ್ಕರ್ ಪುತ್ತಳಿಯನ್ನು ಉದ್ಘಾಟ ಸಮಾರಂಭವನ್ನು ಮಾಡಲಾಯಿತು…

Read More

ಬೆಂಗಳೂರು : ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು, 25 ತೊಲೆ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 25 ತೊಲೆ ಬಂಗಾರ, 20 ತೊಲೆ ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಗೋಕಾಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ : ಮೀಸಲಾತಿ ಶೇ.50 ಕ್ಕಿಂತ ಹೆಚ್ಚಳ ಅಸಾಧ್ಯ ಎಂದು ಕೇಂದ್ರ ಸರ್ಕಾರ ಯಾವ ಹಿನ್ನೆಲೆಯಲ್ಲಿ ಲಿಖಿತ ಉತ್ತರ ನೀಡಿದೆ ಎಂದು ಪರಿಶೀಲಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ಧವಾಗಿವೆ ಎಂದು ಸ್ಪಷ್ಟಪಡಿಸಿದರು. ಮೀಸಲಾತಿ ಹೆಚ್ಚಳವನ್ನು ರಾಜ್ಯ ಸರ್ಕಾರ ನಿಯಮಬದ್ಧವಾಗಿ ಮಾಡಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಕೈಬಿಡಲಿದೆ ಎಂಬ ಆತಂಕ ಬೇಡ. ಅವರ ಮೀಸಲಾತಿ ಹೆಚ್ಚಳ ಸರ್ಕಾರ ಹಾಗೂ ನಮ್ಮ ಪಕ್ಷದ ಬದ್ಧತೆಯಾಗಿದೆ. ಆದರೆ ಕೇಂದ್ರ ಸರ್ಕಾರದ ನೀಡಿರುವ ಲಿಖಿತ ಉತ್ತರ ಯಾವ ಹಿನ್ನೆಲೆಯಲ್ಲಿ ಹೇಳಲಾಗಿದೆ ಎಂದು ಮಾಹಿತಿ ಪಡೆದು ಸ್ಪಷ್ಟವಾಗಿ ತಿಳಿಸುತ್ತೇನೆಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ಅವರು ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟಿರುವ ವಿಚಾರ. ಈ ಕುರಿತು ರಾಷ್ಟ್ರ ನಾಯಕರು ಯಾವ ಸೂಚನೆ ನೀಡುತ್ತಾರೋ…

Read More