Author: admin

ಬಂಟ್ವಾಳ: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರೆನ್ನಲಾಗಿರುವ ತಂಡವೊಂದು ತಲ್ವಾರ್ ನಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗ ಬೆಳ್ಳೂರು ನಿವಾಸಿ, ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಅವರ ಮೇಲೆ  ಬಜರಂಗದಳದ ಕಾರ್ಯಕರ್ತರು ಎನ್ನಲಾಗಿರುವ ತಂಡವೊಂದು ದಾಳಿ ನಡೆಸಿದೆ ಎನ್ನುವ ಆರೋಪ ಕೇಳಿ ಬಂದಿದೆ. ನಿತಿನ್ ಬಡಗಬೆಳ್ಳೂರು, ನಿಶಾಂತ್ ಬೆಗಬೆಳ್ಳೂರು, ಪವನ್ ಕುಮ್ಡೇಲ್ ಮತ್ತಿತರರು ತಲ್ವಾರ್ ದಾಳಿ ನಡೆಸಿದವರಾಗಿದ್ದಾರೆ ಎಂದು ಹೇಳಲಾಗಿದೆ. ದಾಳಿ ವೇಳೆ ತಡೆಯಲು ಬಂದ ಪ್ರಕಾಶ್ ಅವರ ತಾಯಿ ಹಾಗೂ ಅಣ್ಣನಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರಕಾಶ್ ಅವರನ್ನು ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಸಾಂಗ್ಲಿ: ಭಾರತದ ದಲಿತ ಚಳುವಳಿ ಮತ್ತು ಅಂಬೇಡ್ಕರ್ ವಾದದ ಸಂಶೋಧಕಿ ಹಾಗೂ ಬರಹಗಾರ್ತಿ ಡಾ.ಗೇಲ್ ಓಮ್ವೇಡ್ ಅಲ್ಪಕಾಲದ ಅನಾರೋಗ್ಯದ ಬಳಿಕ ಬುಧವಾರ ಕಾಸೆಂಗಾಂವ್ ನಲ್ಲಿ ನಿಧನರಾಗಿದ್ದು, ತಮ್ಮ 81 ವರ್ಷ ವಯಸ್ಸಿನ ಬದುಕಿಗೆ ವಿದಾಯ ಹೇಳಿದ್ದಾರೆ. ಅಮೆರಿಕದಲ್ಲಿ ಜನಿಸಿದ್ದರೂ, ಭಾರತಕ್ಕೆ ಬಂದ ಬಳಿಕ ಅಂಬೇಡ್ಕರ್ ಅವರ ವಿಚಾರಗಳಿಂದ ಆಕರ್ಷಿತರಾದ ಅವರು, ದಲಿತರು, ಬಡವರು, ರೈತರು, ಮಹಿಳೆಯರು ಮತ್ತು ಇತರ ಸಾರ್ವಜನಿಕ ಚಳುವಳಿಗಳಲ್ಲಿ  ತಮ್ಮನ್ನು ತೊಡಗಿಸಿಕೊಂಡರು. ಅಮೆರಿಕದಲ್ಲಿ ತಮ್ಮ ಉನ್ನತ ವ್ಯಾಸಂಗ ಮುಗಿಸಿ ಭಾರತಕ್ಕೆ ಬಂದಿದ್ದ ಅವರು, 1983ರಲ್ಲಿ ಭಾರತೀಯ ಪ್ರಜೆಯಾದರು. 1980ರ ದಶಕ ಆರಂಭದಲ್ಲಿ ಶ್ರಮಿಕ್ ಮುಕ್ತಿ ದಳವನ್ನು ಸ್ಥಾಪಿಸಿದರು. ಅಮೆರಿಕದ ಮಿನ್ನೇಸೋಟ ರಾಜ್ಯದ ಮಿನ್ನಿಯಾಪೋಲಿಸ್ ನಲ್ಲಿ ಜನಿಸಿದ್ದರೂ, ಭಾರತದಕ್ಕೆ ಬಂದು ಅಂಬೇಡ್ಕರ್ ವಾದದಿಂದ ಪ್ರೇರಣೆಗೊಂಡು, ಇಲ್ಲಿಯ ಪ್ರಜೆಯೇ ಆಗಿ ಬದಲಾದ ಅವರು ದಲಿತರ, ಬಡವರ, ಸಾರ್ಜನಿಕರ ಸೇವೆಯಲ್ಲಿ ತೊಡಗಿದ್ದರು. ಡಾ.ಓಮ್ವೇಡ್ ಅವರ ಪತಿ ಡಾ.ಭರತ್ ಪಟಂಕರ್, ಪುತ್ರಿ ಪ್ರಾಚಿ, ಅಳಿಯ ತೇಜಸ್ವಿ ಹಾಗೂ ಮೊಮ್ಮಗಳು ನಿಯಾ ಅಮೇರಿಕದಲ್ಲಿ ನೆಲೆಸಿದ್ದಾರೆ. ಡಾ.ಓಮ್ವೇಡ್ತ್…

Read More

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ರಾಜೇಶ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಧ್ರುವ, ಮಹಾಲಕ್ಷ್ಮೀ ಹೆಗ್ಡೆ, ಶಿವಾನಂದ ಅವರಿಗೆ ಜಾಮೀನು ಮಂಜೂರು ಮಾಡಿಸಿಕೊಳ್ಳಲು ಹಾಗೂ ರಾಜೇಶ್ ತಲೆ ಮರೆಸಿಕೊಳ್ಳಲು ಸಹಕರಿಸಿ ಬಂಧಿಸಲ್ಪಟ್ಟಿದ್ದ ಅನಂತ್ ಭಟ್ ಜಾಮೀನಿನ ಮೇಲೆ ಗುರುವಾ ಬಿಡುಗಡೆಗೊಂಡಿದ್ದಾರೆ. ಆಗಸ್ಟ್ 8ರಂದು ತನ್ನ ಕಚೇರಿಯಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯನ್ನು ತನ್ನ ಚೇಂಬರ್ ಗೆ ಕರೆದು ಅಸಭ್ಯವಾಗಿ ವರ್ತಿಸಿ, ಲೈಂಗಿಕವಾಗಿ ಬಳಸಿಕೊಳ್ಳಲು ರಾಜೇಶ್ ಭಟ್ ಯತ್ನಿಸಿದ್ದ, ಈ ವೇಳೆ ಯುವತಿಯು ಸ್ಥಳದಿಂದ ತಪ್ಪಿಸಿಕೊಂಡಿದ್ದಳು ಎನ್ನಲಾಗಿದೆ.

Read More

ಬ್ಯಾಂಕ್ ಆಫ್ ಬರೋಡಾದಲ್ಲಿ ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್, ಇ-ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್, ಪ್ರಾಂತ್ಯ ಮುಖ್ಯಸ್ಥ, ಗ್ರೂಪ್ ಹೆಡ್, ಪ್ರಾಡಕ್ಟ್ ಹೆಡ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಲಾಗಿದೆ. ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್- (407 ಹುದ್ದೆಗಳು), ಎ-ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್-(50 ಹುದ್ದೆಗಳು), , ಪ್ರಾಂತ್ಯ ಮುಖ್ಯಸ್ಥ-(44 ಹುದ್ದೆಗಳು), ಗ್ರೂಪ್ ಹೆಡ್-(06 ಹುದ್ದೆಗಳು), ಪ್ರಾಡಕ್ಟ್ ಹೆಡ್-(01 ಹುದ್ದೆ),  ಮುಖ್ಯಸ್ಥ-(01 ಹುದ್ದೆ), ಡಿಜಿಟಲ್ ಸೇಲ್ಸ್ ಮ್ಯಾನೇಜರ್-(01 ಹುದ್ದೆಗಳು), ಐಟಿ ಫಂಕ್ಷನಲ್ ಅನಾಲಿಸ್ಟ್ ( 01 ಹುದ್ದೆ)ಗಳು ಖಾಲಿ ಇವೆ. ಅಭ್ಯರ್ಥಿಗಳು ಕನಿಷ್ಠ 24ರಿಂದ ಗರಿಷ್ಠ 45 ವರ್ಷದೊಳಗಿನವರಾಗಿರಬೇಕು. ಇನ್ನೂ ಸಾಮಾನ್ಯ ಅಭ್ಯರ್ಥಿ, ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕ 600 ರೂ. ಪಾವತಿಸಬೇಕು. ಎಸ್ ಸಿ, ಎಸ್ ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್, ಮೊಬೈಲ್ ವ್ಯಾಲೆಟ್ ಮೂಲಕವೂ…

Read More

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಮ್ ಸೆಂಟರ್ ಗಳನ್ನು ಬಂದ್ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಿವೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ  ಎಂದಿನಂತೆಯೇ ಪುನೀತ್ ರಾಜ್ ಕುಮಾರ್ ಅವರು ಸುಮಾರು ಎರಡು ಗಂಟೆಗಳ ಕಾಲ ಜಿಮ್ ನಲ್ಲಿ ಕಸರತ್ತು ನಡೆಸಿದ್ದಾರೆ. ಸುಮಾರು 10 ಗಂಟೆಯ ವೇಳೆಗೆ ಅವರಿಗೆ ಭಾರೀ ಪ್ರಮಾಣದಲ್ಲಿ ಹೃದಯಾಘಾತವಾಗಿದೆ. ಜಿಮ್ ವೇಳೆ ದೇಹದಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜವಾಗಿದೆ. ಹಾಗಾಗಿ ಇದು ಸಣ್ಣಪುಟ್ಟ ನೋವು ಅಂದುಕೊಂಡು ಪುನೀತ್ ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಆದರೂ ಕುಟುಂಬದ ವೈದ್ಯರ ಬಳಿಗೆ ಹೋಗಿ ತೋರಿಸಿದ್ದಾರೆ. ಈ ವೇಳೆ ವೈದ್ಯರಿಗೆ ಪರಿಸ್ಥಿತಿಯ ಗಂಭೀರತೆ ತಿಳಿದು ಬಂದಿದ್ದು, ಅವರು ತಕ್ಷಣವೇ ವಿಕ್ರಂ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದಾರೆ. ವಿಕ್ರಂ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಪುನೀತ್ ರಾಜ್ ಕುಮಾರ್ ಅವರ ಹಾರ್ಟ್ ಬೀಟ್ ತೀವ್ರವಾಗಿ ಕುಸಿದಿತ್ತು ಎನ್ನಲಾಗಿದೆ. ಆ ಬಳಿಕ…

Read More

ಇಟೆಲಿ: ಮನೆಯಲ್ಲಿ ಪತ್ನಿಯ ಕಾಟ ತಾಳಲಾಗುತ್ತಿಲ್ಲ, ನನ್ನನ್ನು ಜೈಲಿಗೆ ಸೇರಿಸಿಕೊಳ್ಳಿ ಎಂದು ವ್ಯಕ್ತಿಯೋರ್ವ ಪೊಲೀಸರಿಗೆ ಮನವಿ ಮಾಡಿಕೊಂಡಿರುವ ಘಟನೆ ಇಟೆಲಿಯಲ್ಲಿ ನಡೆದಿದ್ದು, ಈತನ ಮನವಿಗೆ ಸ್ಪಂದಿಸಿದ ಪೊಲೀಸರು ಆತನನ್ನು ಜೈಲಿಗೆ ಹಾಕಿದ್ದಾರೆ. 30 ವರ್ಷ ವಯಸ್ಸಿನ ಅಲ್ಬೇನಿಯನ್ ಪ್ರಜೆ ಪೊಲೀಸರಿಗೆ ಈ ವಿಚಿತ್ರ ಮನವಿಯನ್ನು ಮಾಡಿದವನಾಗಿದ್ದಾನೆ.  ಕೆಲವು ತಿಂಗಳ ಹಿಂದೆ ಮಾದಕ ವಸ್ತು ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಗೃಹ ಬಂಧನದಲ್ಲಿಟ್ಟಿದ್ದರು. ಆದರೆ, ಗೃಹ ಬಂಧನದ ವೇಳೆ ಪತ್ನಿ ತನಗೆ ಟಾರ್ಚರ್ ನೀಡುತ್ತಿದ್ದು, ಇದನ್ನು ಸಹಿಸಲು ತನ್ನಿಂದ ಸಾಧ್ಯವಿಲ್ಲ ಎಂದು ಆರೋಪಿ ಪೊಲೀಸರ ಮೊರೆ ಹೋಗಿದ್ದಾನೆ. ಮನೆಯಲ್ಲಿ ಇದ್ದು ಕೊಂಡು ಪತ್ನಿಯ ಕಾಟ ಸಹಿಸಲು ನನ್ನಿಂದ ಸಾಧ್ಯವಿಲ್ಲ ಹಾಗಾಗಿ ನನಗೆ ಗೃಹ ಬಂಧನ ಬೇಡ. ನನ್ನನ್ನು ಜೈಲಿನಲ್ಲಿಯೇ ಹಾಕಿ. ಪತ್ನಿಯ ಕಾಟ ಇರುವ ಈ ಮನೆಗಿಂತ ತನಗೆ ಜೈಲೇ ಉತ್ತಮ ಎಂದು ಆತ ಹೇಳಿದ್ದಾನೆ. ಗೃಹ ಬಂಧನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಜೈಲು ಸೇರುತ್ತಿದ್ದಂತೆಯೇ…

Read More

ತುಮಕೂರು: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರು ಹಲ್ಲೆ, ಕಿರುಕುಳ ನೀಡಿ, ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇಲ್ಲಿನ ಚಿ.ನಾ.ಹಳ್ಳಿ ತಾಲೂಕಿನ ಕೋರೆಗೆರೆ ಎಂಬಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಇನ್ನೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವರದಿಯಾಗಿದೆ. ಚಿ.ನಾ.ಹಳ್ಳಿ ತಾಲೂಕು ಕೋರಗೆರೆ ಗ್ರಾಮದ ದಲಿತ ಯುವಕ ನಾಗರಾಜು ಹಾಗೂ ಶೆಟ್ ಬಣಜಿಗ ಜಾತಿಯ ಮಹಿಳೆ ಪರಸ್ಪರ ಪ್ರೀತಿಸಿ 2007ರಲ್ಲಿ ವಿವಾಹವಾಗಿದ್ದರು. ವಿವಾಹದ ಬಳಿಕ ಅದೇ ಗ್ರಾಮದಲ್ಲಿ ವಾಸವಿದ್ದರು. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಂತರ್ಜಾತಿ ವಿವಾಹವಾಗಿ ಸಂತೋಷದಿಂದ ಬದುಕುತ್ತಿರುವ ಇವರ ಕುಟುಂಬವನ್ನು ನೋಡಿ ಹೊಟ್ಟೆ ಉರಿದುಕೊಂಡ ಸವರ್ಣಿಯರು ಈ ಕುಟುಂಬಕ್ಕೆ ಇದೀಗ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.https://googleads.g.doubleclick.net/pagead/ads?client=ca-pub-1459320771720342&output=html&h=280&adk=3143272777&adf=2627613796&pi=t.aa~a.4130071176~i.4~rp.4&w=645&fwrn=4&fwrnh=100&lmt=1635587942&num_ads=1&rafmt=1&armr=3&sem=mc&pwprc=1765030313&tp=site_kit&psa=1&ad_type=text_image&format=645×280&url=https%3A%2F%2Fmahanayaka.in%2Fantharjati-vivahavagiddakke-dampatige-samajika-bahishkara%2F&flash=0&fwr=0&pra=3&rh=161&rw=644&rpe=1&resp_fmts=3&wgl=1&fa=27&uach=WyJXaW5kb3dzIiwiMTAuMC4wIiwieDg2IiwiIiwiOTUuMC40NjM4LjU0IixbXSxudWxsLG51bGwsIjY0Il0.&tt_state=W3siaXNzdWVyT3JpZ2luIjoiaHR0cHM6Ly9hdHRlc3RhdGlvbi5hbmRyb2lkLmNvbSIsInN0YXRlIjo3fV0.&dt=1635587942013&bpp=4&bdt=6725&idt=-M&shv=r20211027&mjsv=m202110260101&ptt=9&saldr=aa&abxe=1&cookie=ID%3D01a6f37f0b5d3ff5-22befd657bce007c%3AT%3D1635577945%3ART%3D1635577945%3AS%3DALNI_MbuVEPZWKBonUyiYSRapzt5nUcitg&prev_fmts=0x0%2C645x280&nras=3&correlator=6107237182856&frm=20&pv=1&ga_vid=2121593561.1635577945&ga_sid=1635587941&ga_hid=1729249635&ga_fc=1&u_tz=330&u_his=23&u_h=768&u_w=1366&u_ah=728&u_aw=1366&u_cd=24&adx=15&ady=1620&biw=1349&bih=600&scr_x=0&scr_y=600&eid=21066431%2C31062937%2C21065724%2C21067496&oid=2&pvsid=3762954436406137&pem=98&ref=https%3A%2F%2Fmahanayaka.in%2Fpurusharu-madida-tappige-mahileyaru-tappithastharu-ramya%2F&eae=0&fc=1408&brdim=0%2C0%2C0%2C0%2C1366%2C0%2C1366%2C728%2C1366%2C600&vis=1&rsz=%7C%7Cs%7C&abl=NS&fu=128&bc=31&ifi=3&uci=a!3&btvi=1&fsb=1&xpc=slnv5D1ks2&p=https%3A//mahanayaka.in&dtd=50 ನಮ್ಮ ಜಮೀನಿನಲ್ಲಿಯೇ ಕೂಲಿ ಕೃಷಿ ಮಾಡಿಕೊಂಡು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ನಮ್ಮ ಮೇಲೆ ಕಿರುಕುಳ ನಡೆಸಲಾಗುತ್ತಿದ್ದು, ಈ ಗ್ರಾಮದಲ್ಲಿ ಇರಬಾರದು ಎಂದು ಬಹಿಷ್ಕಾರ ಹಾಕಿದ್ದಾರೆ. ಕುಡಿಯುವ ನೀರು, ಅಂಗಡಿಗಳಲ್ಲಿ ಸಾಮಾನು ಕೂಡ ನಮಗೆ ಕೊಡುತ್ತಿಲ್ಲ…

Read More

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಸಂತ್ರಸ್ತೆಯನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಿ ಕೆಲವರು ಹೇಳಿಕೆ ನೀಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ರಮ್ಯಾ, ಪ್ರತಿ ಬಾರಿಯೂ ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಪುರುಷನಿಂದಾಗುವ ದೈಹಿಕ ಹಾಗೂ ಮಾನಸಿಕ ದೌರ್ಜನ್ಯಗಳಾಗಿಲಿ, ಅತ್ಯಾಚಾರವೇ ಆಗಲಿ, ಏನೇ ನಡೆದರೂ ಮಹಿಳೆಯರೇ ದೂಷಣೆಗೆ ಒಳಗಾಗುತ್ತಾರೆ ಎಂದು ಹೇಳಿದ್ದಾರೆ. ಇದು ನಿನ್ನದೇ ತಪ್ಪು, ನೀನು ಹಾಗೆ ಹೇಳಬಾರದಿತ್ತು. ನೀನು ಅದನ್ನು ಧರಿಸಬಾರದಿತ್ತು. ನಿನ್ನ ಉಡುಪು ತೀರಾ ಬಿಗಿಯಾಗಿದೆ ಮತ್ತು ಉಡುಪು ಚಿಕ್ಕದಾಗಿದೆ. ನೀನು ತಡವಾಗಿ ಮನೆಯಿಂದ ಹೊರಗೆ ಹೋಗಬಾರದಿತ್ತು. ನೀನು ಮೇಕಪ್ ಧರಿಸಬಾರದಿತ್ತು. ಲಿಪ್ಸ್ ಸ್ಟಿಕ್ ಹಾಕೆ ಹಾಕಿಕೊಂಡಿದ್ದೆ? ಎಂದು ಪ್ರಶ್ನಿಸುತ್ತಾರೆ. ಇದನ್ನು ನಾವು ಆಗಾಗ ಕೇಳುತ್ತಲೇ ಇರುತ್ತೇವೆ. ಯಾಕೆಂದರೆ, ಪುರುಷರು ಪುರುಷರಾಗಿಯೇ ಇರುತ್ತಾರೆ. ನಾವು ಮಾತ್ರ…

Read More

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರು ಆಸ್ಪತ್ರೆಗೆ ಆಗಮಿಸುವ ಮೊದಲೇ ಅವರಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ. ಅವರು ಬಹಳ ಸೀರಿಯಸ್ ಆಗಿದ್ದಾರೆ ಎಂದೇ ಡಾಕ್ಟರ್ ಹೇಳಿದ್ದಾರೆ. ಹೀಗಾಗಿ ಪುನೀತ್ ಅವರ ಅಭಿಮಾನಿಗಳಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಸದ್ಯ ಪುನೀತ್ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದಾರೆ. ಪುನೀತ್ ಅವರಿಗೆ ಮಸಾಜ್ ಮಾಡಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಅವರು ಜೀವನ್ಮರಣ ಹೋರಾಟದಲ್ಲಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಈಗಾಗಲೇ ಆಸ್ಪತ್ರೆಯ ಮುಂದೆ ಜಮಾಯಿಸಿರುವ ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು ಗೋಳಾಡುತ್ತಿರುವ ದೃಶ್ಯ ಕಂಡು ಬಂದಿದೆ.

Read More

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇನ್ನು ಕೂಡ ಜೀವಂತವಾಗಿರಲಿವೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇಬ್ಬರಿಗೆ ದೃಷ್ಟಿಯನ್ನು ನೀಡಲಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ನಟ ಸೋನುಸೂದ್, ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ವೆಂಕಟೇಶ್ವರ ಪ್ರಸಾದ್, ಅನಿಲ್ ಕುಂಬ್ಳೆ, ಹರ್ಬಜನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More