Author: admin

ಸರಗೂರು: ತಾಲ್ಲೂಕಿನ ಪಪಂ ಮುಂಭಾಗದಲ್ಲಿ ಪೌರಕಾರ್ಮಿಕರನ್ನು ಸಹ ಸಂಪೂರ್ಣವಾಗಿ ಖಾಯಂಗೊಳಿಸಲು ಈ ಕುರಿತು ಕಳೆದ 5 ವರ್ಷಗಳಿಂದ ಹಂತ ಹಂತವಾಗಿ ಹೋರಾಟ ನಡೆಸಿಕೊಂಡು ಬರಲಾಗಿತ್ತು. ಇದೀಗ ಎಲ್ಲಾ 31 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು, ಪೌರಕಾರ್ಮಿಕರು ಒಗ್ಗೂಡಿ ರಾಜ್ಯಾದ್ಯಂತ ಸ್ವಚ್ಚತೆ ಕುಡಿಯುವ ನೀರು ಎಲ್ಲಾ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟಿಸಲು ಮುಂದಾಗಿವೆ. ನೇರ ಪಾವತಿ ಪೌರಕಾರ್ಮಿಕರು ಒಳಚರಂಡಿ ಸಹಾಯಕರು ಮತ್ತು ಮನೆ ಮನೆಗೆ ಕಸ ಸಂಗ್ರಹ ಹಾಗೂ ಕೃಷಿ ಸಾಗಾಣಿಕೆ ಮಾಡುವ ವಾಹನ ಚಾಲಕರ ಲೋಡರ್ಸ್ ಕ್ಲೀನರ್ಸ್ ಹೆಲ್ಪರ್ ವಾಟರ್ ಮೇನ್ ಮತ್ತು ಡಾಟಾ ಆಪರೇಟರ್ ಗಳ ಖಾಯಮಾತಿಗಾಗಿ ರಾಜ್ಯಾದ್ಯಂತ ಸ್ವಚ್ಚತೆಯನ್ನು ಸ್ಥಗಿತಗೊಳಿಸಿ, ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭವಾಗಿದ್ದು, ಈ ಹೋರಾಟಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರತಿಭಟನೆಯನ್ನುದ್ದೇಶಿಸಿ ಪಟ್ಟಣ ಪಂಚಾಯತ್ ಸದಸ್ಯ ಎಸ್ ಎಲ್.ರಾಜಣ್ಣ ಮಾತನಾಡಿ, ಈ ನೇರ ವೇತನ ಪಾವತಿ ಯೋಜನೆಯು ಪೌರಕಾರ್ಮಿಕರ ಬದುಕಿಗೆ ಮಾರಕವಾಗಿದೆ.…

Read More

ತುಮಕೂರು: ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ತುಮಕೂರು ನಗರದ ಕ್ಯಾತ್ಸಂದ್ರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ ದುರ್ಗದಹಳ್ಳಿಯ ಕೃಷ್ಣಪ್ಪ ಎಂಬಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಖಚಿತ ಮಾಹಿತಿಯ ಮೇಲೆ ದಾಳಿ ನಡೆಸಿದ ಕ್ಯಾತ್ಸಂದ್ರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕೃಷ್ಣಪ್ಪ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದು,  ತನ್ನ ಮನೆಯಲ್ಲಿ ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೆ ನಾಡಬಂದೂಕುಗಳ ತಯಾರಿ, ರಿಪೇರಿ, ಹಾಗೂ ಸಿಡಿಮದ್ದುಗಳ ತಯಾರಿಕೆಯಲ್ಲಿ ತೊಡಗಿದ್ದು, ಹತ್ತು ಇಪ್ಪತ್ತು ಸಾವಿರ ರೂ.ಗಳಿಗೆ ಬಂದೂಕುಗಳನ್ನು ಮಾರಾಟಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕ್ಯಾತ್ಸಂದ್ರ ಪೋಲಿಸರು ಪಿ.ಎಸ್.ಐ. ಓಂಕಾರ್ ರವರ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿದ್ದು, ಆರೋಪಿಯ ಜೊತೆಗೆ ಅವನಿಂದ ಬಂದೂಕುಗಳನ್ನು ಅಕ್ರಮವಾಗಿ ಖರೀದಿಸಿದ್ದ ಚಿಕ್ಕನಾಗಯ್ಯ, ಶಿವರಾಜು, ನಾರಾಯಣ, ನರಸರಾಜು, ಸಿದ್ದಗಂಗಪ್ಪ, ಮಾರುತೇಶ, ಮಹಮ್ಮದ್ ಅಯಾಜ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರಗಳ ದಾಸ್ತಾನು ನಿಯಮದ ಅನ್ವಯ ಪ್ರಕರಣ…

Read More

ತುಮಕೂರು: ತುಮಕೂರು ನಗರದ ಹೃದಯ ಭಾಗದಲ್ಲಿರುವ ರಾಜಶ್ರೀ ಕೃಷ್ಣರಾಜೇಂದ್ರ ಒಡೆಯರ್ ಅವರ ಆಳ್ವಿಕೆಯ ಸಂದರ್ಭದಲ್ಲಿ ಬಹು ವಿಸ್ತೀರ್ಣದ ಭೂಮಿ ನೀಡಿ ಸ್ಥಾಪಿಸಿದ್ದ ಕೆ.ಆರ್.ಜಿ.ಎಂ.ಎಸ್ ಶಾಲೆ ಇದೀಗ ಸಂಕಷ್ಟದಲ್ಲಿದೆ. ಸ್ವತಂತ್ರ ಪೂರ್ವದಲ್ಲೆ ಶಿಕ್ಷಣ ಸೌಲಭ್ಯಕ್ಕೆ ಮೀಸಲಿದ್ದ ಜಾಗ ಮಾಯವಾಗಿದ್ದು,  ಮಕ್ಕಳ ಶಿಕ್ಷಣಕ್ಕಾಗಿ ಮೈಸೂರು ಒಡೆಯರ್ ನೀಡಿದ್ದ ಜಾಗ ಅನ್ಯ ಇಲಾಖೆ ಬಳಕೆಯಾಗ್ತಿದೆ. ಶಾಲೆ ಹೆಸರಿನಲ್ಲಿದ್ದ ಜಾಗ ಬಾಲಭವನದ ಹೆಸರಿಗೆ ವರ್ಗಾವಣೆಯಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಬಳಕೆಯಾಗ ಬೇಕಿದ್ದ ಜಾಗ ಮತ್ತೊಂದು ಇಲಾಖೆಗೆ ಹೋಗಿದ್ದು ಯಾಕೆ?  ಶಾಲೆಯ ಮುಂಭಾಗದ ಆಟದ ಮೈದಾನವೇ ಬೇಕಿತ್ತಾ ಈಜುಕೊಳಕ್ಕೆ ಎನ್ನುವ ಪ್ರಶ್ನೆಗಳು ಇದೀಗ ಕೇಳಿ ಬಂದಿದೆ. ಖಾಲಿ ಜಾಗದ ಮೇಲೆ ಕಣ್ಣಾಕಿದ ಜಿ.ಪಂ.ನಿಂದ ಈಜು ಕೊಳ ನಿರ್ಮಾಣಕ್ಕೆ ಪ್ರಸ್ಥಾವನೆ ಸಲ್ಲಿಸಲಾಗಿದೆ.  ಇತಿಹಾಸದಲ್ಲಿ ಕೆ.ಆರ್.ಜಿ.ಎಂ.ಎಸ್  ಶಾಲೆ ಮರೆಯಾಗುವ ಆತಂಕ ಸೃಷ್ಟಿಯಾಗಿದೆ. ಶಿಕ್ಷಣ ಇಲಾಖೆಯ ತೀವ್ರ ನಿರ್ಲಕ್ಷ್ಯಕ್ಕೆ ಶಾಲೆ ಜಾಗ ಬಲಿಯಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು, …

Read More

ತುಮಕೂರು: ಕೆ.ಎನ್.ರಾಜಣ್ಣ ಮಧುಗಿರಿಯಲ್ಲಿ ಮಾಜಿ ಪ್ರಧಾನಿ ದೇವೆಗೌಡರ ಬಗ್ಗೆ ಬಹಳ ಹಗುರವಾಗಿ,  ಅನಾಗರಿಕವಾಗಿ, ಮಾತನಾಡಿದ್ದಾರೆ. ಪ್ರತಿಯೊಬ್ಬ ಮನುಷ್ಯ ಹುಟ್ಟಿದ ಮೇಲೆ ಸಾಯೋದು ಸರ್ವೇ ಸಾಮಾನ್ಯ. ಇನ್ನೊಬ್ಬರ ಸಾವನ್ನ ನಾವು ನಿರ್ಧಾರ ಮಾಡಬಾರ್ದು ಎಂದು ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ಹೇಳಿಕೆ ನೀಡಿದ್ದಾರೆ. ಒಬ್ಬ ಸಿನಿಯರ್ ಪೊಲಿಟಿಸಿಯನ್, ಆಗಿ ಕೆ.ಎನ್ .ರಾಜಣ್ಣ ದೇವಗೌಡರ ಬಗ್ಗೆ ಈ ರೀತಿಯಾಗಿ ಮಾತನಾಡಬಾರದಿತ್ತು. ಇವತ್ತು ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ ಅವರೇ ನಮ್ಮ ದೇಶಕ್ಕೆ  ದೇವೆಗೌಡರಂತಹ ನಾಯಕರು ಬೇಕು ಅಂತಾರೆ. AICC ಕೂಡ ಗೈಡ್ ಲೈನ್ ಮಾಡಿದೆ. ದೇವೇಗೌಡರ ಕುಟುಂಬವನ್ನ ಟಾರ್ಗೆಟ್ ಮಾಡಬೇಡಿ, ಅದರಿಂದ ಪಕ್ಷಕ್ಕೆ ಆಗುವ ಲಾಭ ಏನು ಇಲ್ಲ, ಅದರಿಂದ ನಷ್ಟವೇ ಜಾಸ್ತಿ ಅಂತಾ ಹೇಳಿದೆ. ರಾಜಣ್ಣ ಅವ್ರು ಕಾಂಗ್ರೆಸ್ ಗೆ ಲಾಭ ಆಗ್ಬಾರ್ದು, ನಷ್ಟ ಆಗಬೇಕು ಅಂತಲೇ ಇಂತಹ ಹೇಳಿಕೆ ನೀಡಿದ್ದಾರೆ ಎಂದರು. ಚುನಾವಣೆಯಲ್ಲಿ ನೀವು ಸ್ಫರ್ಧಿಸೋದು ಬಿಡೋದು ಅದು ನಿಮ್ಮ ವೈಯಕ್ತಿಕ. ಈ ಬಾರಿ ಕೆ.ಎನ್.ರಾಜಣ್ಣನಿಗೆ ಮಧುಗಿರಿ ಜನ ತಕ್ಕ…

Read More

ತುಮಕೂರು: ದೇವೇಗೌಡರ ಬಗ್ಗೆ ನನಗೆ ಗೌರವ ಇದೆ. ನನ್ನ ಪದ ಬಳಕೆಯನ್ನ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ  ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನ ಗುಂಚಿ ಸರ್ಕಲ್ ನಲ್ಲಿ ಇರುವ ರಾಜಣ್ಣ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ನಿನ್ನೆ ಸರ್ಕಾರಿ ಉದ್ಯೋಗಿ ನಿವೃತ್ತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದೆ.  ದೊಡ್ಡೇರಿ ಹೋಬಳಿ ಅದು, ಅಲ್ಲಿಯ ಜನ ಕಳೆದ ಬಾರಿ ಹೆಚ್ಚು ಮತ ಕೊಟ್ಟಿದ್ದರು. ಈ ಹೋಬಳಿಯ ಜನ ನನಗೆ ಒಳ್ಳೆ ಬೆಂಬಲ ಕೊಟ್ಟಿದ್ದೀರಾ,  2023 ನನ್ನ ಅಂತಿಮ ಚುನಾವಣೆ ಮತ್ತೆ ನಿಲ್ಲೋದಿಲ್ಲ ಅಂದಿದ್ದೆ.  ನಾನು ಅದನ್ನೇ ಪದೇ ಪದೇ ಹೇಳಿದಾಗ,  ಸಭಿಕರೊಬ್ಬರು  ಹೇಳಿದ್ರು… ಯಾಕೆ ಕೊನೆಯ ಚುನಾವಣೆ ಅಂತಿದ್ದೀರಿ, ದೇವೇಗೌಡರು ಈಗಲೂ ರಾಜಕಾರಣ ಮಾಡುತ್ತಿಲ್ವಾ ಅಂದರು.  ಅದಕ್ಕೆ ಪೂರಕವಾಗಿ ನಾನು ಮಾತಾಡಿದ್ದೆ ಎಂದು ಅವರು ಸ್ಪಷ್ಟನೆ ನೀಡಿದರು. ನನ್ನ ವಿರುದ್ದ ಪಿತೂರಿ ಮಾಡಿ ತಿರುಚಿ ಸುದ್ದಿ ಹರಡಿಸಲಾಗಿದೆ. ದೇವೇಗೌಡರ ಬಗ್ಗೆ ನನಗೆ ಗೌರವ ಇದೆ.  ತುಮಕೂರಿನಲ್ಲಿ ಅವರ…

Read More

ಬೆಂಗಳೂರು: ದೇವೇಗೌಡರು ಈ ರಾಜ್ಯದ ಪಿತಾಮಹ. ಕರ್ನಾಟಕದ ಆರೂವರೆ ಕೋಟಿ ಜನರ ತಂದೆ. ಆದರೆ, ದೇವೇಗೌಡರ ಹುಟ್ಟು, ಸಾವಿನ ಬಗ್ಗೆ ಮಾತನ್ನಾಡುತ್ತಾರೆ ರಾಜಣ್ಣ ನಿಮಗೆ ಅಪ್ಪ ಇಲ್ಲವಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ. ದೇವೇಗೌಡರು ಈಗ ಇಬ್ಬರ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂಬ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಇಬ್ರಾಹಿಂ, ದೇವೇಗೌಡರು ಅಜರಾಮರರು. ದೇವೇಗೌಡರಿಗೆ ಸಾವಿಲ್ಲ ಸೂರ್ಯ, ಚಂದ್ರ ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ. ದೇವೇಗೌಡರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದವರು. ಕೆ.ಎನ್.ರಾಜಣ್ಣ ತನ್ನ ಹೇಳಿಕೆಗೆ ದೇವೇಗೌಡರ ಮನೆಗೆ ಬಂದು ಕ್ಷಮೆಯಾಚಿಸಬೇಕು ಎಂದು ಸಿಎಂ ಇಬ್ರಾಹಿಂ ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಪಾವಗಡ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಬಜರಂಗದಳ ಪ್ರತಿಭಟನೆ ನಡೆಸಿದ್ದು,  ಆರೋಪಿಗಳನ್ನುಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದೆ. ಕೃತ್ಯ ಎಸಗಿದ ಆರೋಪಿಗಳನ್ನು  ಗಲ್ಲಿಗೇರಿಸುವ ಮೂಲಕ  ನೊಂದ ಹಿಂದೂ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹ ಸಂಯೋಜಕರಾದ ಸುಮನ್ ಪಾವಗಡ, ತಾಲೂಕು ಸಂಚಾಲಕರಾದ ಮಂಜುನಾಥ್, ವಾಸು ನಗರ ಸಂಚಾಲಕ  ಕಾರ್ತಿಕ್ ಗುಪ್ತಾ ಹಾಗೂ ಶ್ರೀರಾಮ ಸೇನೆ ತಾಲೂಕು ಅಧ್ಯಕ್ಷರಾದ ಕಾವಲಗೆರೆ ರಾಮಾಂಜಿ, ಶೇಖರ್ ಬಾಬು, ಅಲಕುಂದಿ ,ರಘು ಹಾಗೂ ಕಾರ್ಯಕರ್ತರು ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ’ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್‌.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿದೆ.  ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುತ್ತಿದ್ದರು. ರಾಜಣ್ಣ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ರಾಜಣ್ಣ ಹೇಳಿಕೆಯ ವಿಡಿಯೊವನ್ನು ನೆಟ್ಟಿಗರು ಹಂಚಿಕೊಂಡಿದ್ದು, ಕಿಡಿಕಾರಿದ್ದಾರೆ. ಇಂತಹ ಹೇಳಿಕೆ ನೀಡುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ‘ಇದು ನನ್ನ ಕಡೆಯ ಚುನಾವಣೆಯಾಗಿದ್ದು, ಪ್ರತಿ ಮನೆ ಬಾಗಿಲಿಗೆ ಬಂದು ಮತ ಕೇಳುತ್ತೇನೆ. ನಾನು ಶಾಸಕನಾದರೆ ನೀವು ಶಾಸಕರಾದಂತೆ. ಸರ್ಕಾರದ ಸೇವೆ ಒದಗಿಸದ ಎಲ್ಲ ಅಧಿಕಾರಿಗಳನ್ನು ಪ್ರಶ್ನೆ ಮಾಡಬಹುದು. ಶೋಕಿಗೆ ರಾಜಕಾರಣ ಮಾಡಬೇಡಿ’ ಎಂದು ರಾಜಣ್ಣ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಚಿತ್ರದುರ್ಗ: ಚಿಕ್ಕಜಾಜೂರುನಿಂದ ಕಡೂರುಗೆ ಹೋಗುವ ಮಾರ್ಗಮದ್ಯೆ ಎರಡು ಕಿರಿದಾದ ಸೇತುವೆ ಇದ್ದು ಅಪಘಾತಗಳು ಹೆಚ್ಚಿನದಾಗಿ ಸಂಭವಿಸುತಿದ್ದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ ಈ ಕೂಡಲೇ ರಸ್ತೆ ಅಗಲೀಕರಣ ಮಾಡಬೇಕೆಂದು ಅಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಹಶೀಲ್ದಾರ್ ಗೆ ಮನವಿ ಸಲ್ಲಿಸಿತು. ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಆರ್.ಕೋದಂಡರಾಮ್ ಅವರ ಮಾರ್ಗದರ್ಶನದಲ್ಲಿ ಪ್ರತಿಭಟನೆ ನಡೆಸಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ, ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಈ ಸಂರ್ಭದಲ್ಲಿ ರಾಜ್ಯಕಾರ್ಯದರ್ಶಿಗಳು ಹಾಗೂ ಜಿಲ್ಲಾಧ್ಯಕ್ಷರಾದ ರಾಮಚಂದ್ರ ಕೆ., ಹೊಳಲ್ಕೆರೆ ತಾಲೂಕು ಅಧ್ಯಕ್ಷರಾದ ಕೆ.ಎನ್.ತಿಪ್ಪೇಶ್, ಹಿರಿಯೂರು ತಾಲೂಕು ಕಾರ್ಯಧ್ಯಕ್ಷರಾದ ರಾಘವೇಂದ್ರ ಆರ್. ಹಾಗೂ ಪದಾಧಿಕಾರಿಗಳಾದ ಶ್ರೀಧರ್, ಸುನೀಲ್, ಮಂಜುನಾಥ್, ರಂಗಸ್ವಾಮಿ, ಆಕಾಶ್, ಸ್ವಾಮಿ, ರಘು, ಲಿಂಗರಾಜು, ಸ್ವಾಮಿ ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವವರೆಗೂ ವಿಸ್ತರಿಸಲು ಆಗ್ರಹಿಸಿ AIDSO ತುಮಕೂರು ಜಿಲ್ಲಾ ಸಮಿತಿ  ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರು,   ರಾಜ್ಯದ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್ ಅನ್ನು ಸೆಪ್ಟಂಬರ್ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್ ನಲ್ಲಿ ಆರಂಭವಾಗಿತ್ತು. ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್ 2021ರಲ್ಲಿ ನೀಡಲಾಗಿತ್ತು. ವಿದ್ಯಾರ್ಥಿ ಬಸ್ ಪಾಸಿಗೆ ಅವರ ಶೈಕ್ಷಣಿಕ ವರ್ಷದ ಕೊನೆಯವರೆಗೂ ಮಾನ್ಯತೆ ಇರುತ್ತದೆ. ಇದು ಇಷ್ಟು ವರ್ಷಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ಅಂದರೆ, ನವೆಂಬರ್ ನಲ್ಲಿ ತರಗತಿ ಆರಂಭದ ನಂತರ ಪಾಸ್ ಪಡೆದ ವಿದ್ಯಾರ್ಥಿಗಳು ಆಗಸ್ಟ್ ನವರೆಗೂ, ಡಿಸೆಂಬರ್ ನಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳು ಸೆಪ್ಟಂಬರ್ ವರೆಗೂ ಉಚಿತವಾಗಿ ಓಡಾಡಬಹುದು. ಜೂನ್ ತಿಂಗಳಿಗೆ ವಿದ್ಯಾರ್ಥಿ ಬಸ್ ಪಾಸಿನ ಅವಧಿಯು ಕೊನೆಗೊಳ್ಳಲಿರುವುದರಿಂದ ಮುಂದಿನ ತಿಂಗಳಿನಿಂದ…

Read More