Author: admin

ಧಾರ್ಮಿಕ ಕೇಂದ್ರಗಳಲ್ಲಿ ಕೆಲವು ವರ್ಗದವರು ವ್ಯಾಪಾರ ಮಾಡಬಾರದು ಎಂಬ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಸದ್ಯಸರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದ ಪ್ರಸಂಗ ಜರುಗಿತು. ಶೂನ್ಯವೇಳೆಯಲ್ಲಿ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ, ಸಾಮರಸ್ಯ, ಸಹೋದರತ್ವ ಮೂಡಿಸಬೇಕೆ ಹೊರತು ಕದಡುವಂತಹ ಕೆಲಸವಾಗಬಾರದು. ಬೀದಿಬದಿ ವ್ಯಾಪಾರಸ್ಥರು ಸ್ವಾಭಿಮಾನಿಗಳಾಗಿ ಬದುಕುತ್ತಿದ್ದಾರೆ.ಅಂಥವರಿಗೆ ಧಾರ್ಮಿಕ ಕೇಂದ್ರಗಳಲ್ಲಿ ವ್ಯಾಪಾರ ಮಾಡಬಾರದು ಎಂಬ ನಿರ್ಬಂಧದ ಫಲಕ ಹಾಕಲಾಗಿದೆ ಎಂದು ಹೇಳಿದರು. ಆ ಸಂದರ್ಭದಲ್ಲಿ ಖಾದರ್ ಅವರು ಬಳಸಿದ ಪದಕ್ಕೆ ಶಾಸಕ ಕೆ.ಜಿ.ಬೋಪಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆದು ಸದನದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರು ಸಮಾಧಾನಪಡಿಸಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಆಡಳಿತ ಪಕ್ಷದ ರಘುಪತಿ ಭಟ್, ಸೋಮಶೇಖರ್, ಸಿದ್ದು ಸವದಿ, ರೇಣುಕಾಚಾರ್ಯ ಎದ್ದು ನಿಂತು ಮಾತನಾಡುತ್ತಿದ್ದರು. ಹಾಗೆಯೇ ಕಾಂಗ್ರೆಸ್‍ನ ಜಮೀರ್ ಅಹಮ್ಮದ್ ಖಾನ್, ಅಜಯ್ ಧರ್ಮಸಿಂಗ್, ರಿಜ್ವಾನ್…

Read More

ಪಾವಗಡ: ಪಟ್ಟಣದ ಶ್ರೀನಿವಾಸ ನಗರದ  ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ  ಬೀಳ್ಕೊಡುಗೆ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಕಾರ್ಯದರ್ಶಿಗಳಾದ ಡಾ.ವೆಂಕಟರಾಮಯ್ಯ ಮಾತಾಡಿ,  ನಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯಾದ ಸುರಕ್ಷತೆಯನ್ನು ನಾವೇ ಒದಗಿಸಿ ಕೊಡುತ್ತೇವೆ.  ನಮ್ಮ ಕಾಲೇಜು ಪಾವಗಡ ತಾಲ್ಲೂಕಿಗೆ ಹೆಸರುವಾಸಿಯಾಗಿದೆ ಎಂದರು. ಇದೇ ಸಮಯದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗೇಂದ್ರಕುಮಾರ್, ಉಪ ಪ್ರಾಂಶುಪಾಲರಾದ  ನಾಗರಾಜು, ಕನ್ನಡ ಉಪನ್ಯಾಸಕರಾದ ಸುರೇಶ್, ಅರ್ಥಶಾಸ್ತ್ರ ಉಪನ್ಯಾಸಕರಾದ ಶಿವಕುಮಾರ್, ಎಲ್ಲ ಉಪನ್ಯಾಸಕರು, ಎಲ್ಲಾ ವಿದ್ಯಾರ್ಥಿಗಳು, ಎಲ್ಲಾ ಪೋಷಕ ವರ್ಗದವರು ಹಾಗೂ ಪತ್ರಕರ್ತ,  ವಿದ್ಯಾರ್ಥಿ ನಂದೀಶ್ ನಾಯ್ಕ ಪಿ. ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಪಾವಗಡ: ವಿಶ್ವ ಅರಣ್ಯ ದಿನಾಚರಣೆ ಅಂಗವಾಗಿ ಪಟ್ಟಣದ ಸಾಯಿ ಲೇ ಔಟ್ ನಲ್ಲಿ ಗಿಡವನ್ನು ನೆಟ್ಟು ನೀರು ಹರಿಸುವುದರ ಮೂಲಕ ಅರಣ್ಯ ಬೆಳೆಸಿ ಉಳಿಸಿ ಎಂದು ದೈಹಿಕ ಶಿಕ್ಷರ ಸಂಘದ ರಾಜ್ಯಾಧ್ಯಕ್ಷ ಹನುಮಂತರಾಯಪ್ಪ ಕರೆ ನೀಡಿದರು. ಹೆಲ್ಪ್ ಸೊಸೈಟಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಅರಣ್ಯ ದಿನಾಚರಣೆಯ ಅಂಗವಾಗಿ ಗಿಡ ವನ್ನು ನೆಡುವುದರ ಮೂಲಕ ಅರಣ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಶಿಕ್ಷಕ ರಮೇಶ್, ಎಸ್ ಎಲ್ ಎನ್ ಗ್ರಾನೈಟ್ ಮಾಲೀಕ ರವಿ, ಶ್ರೀಕಾಂತ್, ನರೇಶ್ ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ರಾಜ್ಯಾದ್ಯಂತ ಜೇಮ್ಸ್ ಚಿತ್ರವನ್ನು ತೆಗೆದು ರಾಜ್ಯಾದ್ಯಂತ ಬೇರೆ ಚಿತ್ರ ಹಾಕುವ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಪ್ರತಿಭನೆ ನಡೆಸಿ ಯಾವುದೇ ಕಾರಣಕ್ಕೂ ಈ ಚಿತ್ರವನ್ನು ತೆಗೆಯಬಾರದು ಎಂದು ಆಗ್ರಹಿಸಿದರು. ಪರಭಾಷಾ ಚಿತ್ರಗಳ ಹಾವಳಿಯಿಂದ ಕನ್ನಡ ಚಿತ್ರಗಳಿಗೆ ಧಕ್ಕೆಯಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಅಗ್ರಸ್ಥಾನ. ಉತ್ತಮ ಚಿತ್ರವಾಗಿ ಮೂಡಿ ಬಂದಿರುವ ಪುನೀತ್ ರಾಜ್‍ಕುಮರ್ ಅಭಿನಯದ ಜೇಮ್ಸ್ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದನ್ನು ಬಲವಂತವಾಗಿ ತೆಗೆದು ಹಾಕುವ ಪಿತೂರಿ ಮಾಡುತ್ತಿರುವ ಕ್ರಮ ಖಂಡನೀಯ ಎಂದು ಹೇಳಿದರು.ಕಳೆದ ಐದು ದಶಕಗಳ ಹಿಂದೆ ಡಾ.ರಾಜ್‍ಕುಮಾರ್ ಅಭಿನಯಿಸಿದ್ದ ರಣೀರ ಕಂಠೀರವ ಚಿತ್ರಕ್ಕೂ ಹೋರಾಟ ಮಾಡಿ ಚಿತ್ರಮಂದಿರ ಕೊಡಿಸಬೇಕಾಯಿತು. ಬಂಗಾರದ ಮನುಷ್ಯ ಚಿತ್ರವನ್ನು ತೆಗೆಯದಂತೆಯೂ ಕೂಡ ನಾವು ಹೋರಾಟ ಮಾಡಿದ್ದೆವು ಎಂದು ಹೇಳಿದರು.ನಮ್ಮ ರಾಜ್ಯದಲ್ಲಿ ನಿರಂತರವಾಗಿ ಪರಭಾಷಿಗರ ದೌರ್ಜನ್ಯ ನಡೆಯುತ್ತಲೇ ಇದೆ. ಯಾವುದೋ ಕಾರಣಕ್ಕೆ ನಮ್ಮ ಚಿತ್ರರಂಗ ಸೊರಗುತ್ತಿದೆ. ಉತ್ತಮ ಪ್ರದರ್ಶನ ಕಾಣುತ್ತಿದ್ದರೂ ಕೂಡ ಅದನ್ನು ತೆಗೆದು…

Read More

ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಅಂತಾರಾಜ್ಯ ಆರೋಪಿ ಸೇರಿದಂತೆ ಮೂವರನ್ನು ವೈಟ್‍ಫೀಲ್ಡ್ ಠಾಣೆ ಪೊಲೀಸರು ಬಂಧಿಸಿ 50 ಲಕ್ಷ ರೂ. ಬೆಲೆ ಬಾಳುವ 39 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಆನಂದ್(29), ತುಮಕೂರು ಜಿಲ್ಲೆ ಪಾವಗಡದ ಮಹಾಲಿಂಗಯ್ಯ(27) ಮತ್ತು ಚಿತ್ತಯ್ಯ(26) ಬಂಧಿತ ಆರೋಪಿಗಳು. ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಹಾಗೂ ನಕಲಿ ಕೀ ಬಳಸಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಈ ಬಗ್ಗೆ ವೈಟ್‍ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣದಲ್ಲಿ ಕಳುವಾದ ವಾಹನಗಳು ಮತ್ತು ಆರೋಪಿಗಳನ್ನು ಪತ್ತೆ ಮಾಡಲು ರಚಿಸಲಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ತನಿಖೆ ಕೈಗೊಂಡು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಆರೋಪಿಗಳಿಂದ 50 ಲಕ್ಷ ರೂ. ಬೆಲೆ ಬಾಳುವ 5 ರಾಯಲ್ ಎನ್‍ಫೀಲ್ಡ್ ಬೈಕ್, 7 ಯಮಹಾ ಆರ್‍ಎಕ್ಸ್, 14 ಹೀರೋ ಹೊಂಡಾ, 2 ಹೊಂಡಾ ಆಕ್ಟಿವಾ, 5 ಹೊಂಡಾಡಿಯೋ, 2 ಹೊಂಡಾ ಶೈನ್, ಬಜಾಜ್ ಪಲ್ಸಾರ್, ಯಮಹಾ ಎಫ್‍ಜಡ್, ಟಿವಿಎಸ್…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದ ಸರ್ಕಾರ ಅದನ್ನು ಮರೆತಿದೆ. ಇದರ ವಿರುದ್ಧ ಮಾ.28ರಂದು ಅನಿರ್ದಿಷ್ಟಾವ ಉಪವಾಸ ಸತ್ಯಾಗ್ರಹವನ್ನು ಬಳ್ಳಾರಿಯಲ್ಲಿ ಸಾರಿಗೆ ಸಚಿವರ ಮನೆ ಬಳಿ ಮಾಡಲಿದ್ದೇವೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2020ರಲ್ಲಿ ನಡೆದ ಸಾರಿಗೆ ಮುಷ್ಕರದ ಸಮಯದಲ್ಲಿ ಸರ್ಕಾರ ನೀಡಿದ 9 ಲಿಖಿತ ಭರವಸೆಗಳ ಪೈಕಿ ಅದರಲ್ಲೂ ಮುಖ್ಯವಾಗಿ ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೂ ವೇತನ ನಿಗದಿ ಮಾಡುವುದಾಗಿ ಮೂರು ತಿಂಗಳ ಕಾಲಾವಕಾಶ ಪಡೆಯಲಾಗಿತ್ತು. ಸರ್ಕಾರ ಕೊಟ್ಟ ಅವಧಿಯಲ್ಲಿ ಬೇಡಿಕೆಗಳನ್ನು ಈಡೇರಿಸಲಿಲ್ಲ. ಇದರಿಂದಾಗಿ ಮತ್ತೆ ಸಾರಿಗೆ ಮುಷ್ಕರ ಮಾಡಿದ್ದು, ಇದನ್ನೇ ನೆಪವಾಗಿಸಿಕೊಂಡ ಸರ್ಕಾರ ನಿಗಮಗಳಲ್ಲಿ ಸಾವಿರಾರು ನೌಕರ ರನ್ನು ವಜಾ ಮಾಡಿ, ಅನೇಕರನ್ನು ವರ್ಗಾವಣೆ ಮಾಡಲಾಯಿತು ಹಾಗೂ ಅಮಾನತಿನಂತಹ ಕ್ರೂರ ಶಿಕ್ಷೆಯನ್ನು ನೌಕರರಿಗೆ ಕೊಡಲಾಯಿತು. ಸುಳ್ಳು ಪ್ರಕರಣಗಳನ್ನು ದಾಖಲಿಸಿ ನೂರಾರು ಕುಟುಂಬಗಳಿಗೆ ತೊಂದರೆ ಕೊಡಲಾಯಿತು.…

Read More

ತಿಪಟೂರು: ಹೊನ್ನವಳ್ಳಿ ವೃತ್ತದ ಮತ್ತಿಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಯನ್ನು ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳು ನಿರ್ವಹಣೆ ಮಾಡಿದರು. ಶ್ರೀ ಬಸವೇಶ್ವರ ಸಂಜೀವಿನಿ ಸ್ತ್ರೀಶಕ್ತಿ ಗುಂಪಿನ ಪ್ರತಿನಿಧಿಯಾದ ಲತಾ ಜಿ.ಎಸ್. ಇವರು ಘನ ತ್ಯಾಜ್ಯ ಸಂಗ್ರಹಣ ವಾಹನದ ಚಾಲಕರಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗೌರವ ಹೆಚ್ಚಿಸಿದ್ದಾರೆ. ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಯನ್ನು  ಶ್ರೀಬಸವೇಶ್ವರ ಸಂಜೀವಿನಿ ಸ್ತ್ರೀ ಶಕ್ತಿ ಸಂಘದ ಸದಸ್ಯರಾದ ಮನುಜ, ಶ್ರೀ ತುಳಸಿ  ಸ್ತ್ರೀಶಕ್ತಿ ಸಂಘದ ಸದಸ್ಯರಾದ ನಾಗರತ್ನ, ಶ್ರೀ ಬಿದಿರಾಂಬಿಕ ಸ್ತ್ರೀಶಕ್ತಿ ಸಂಘದ ಸದಸ್ಯರಾದ ರೇಣುಕಾ ಇವರುಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರು ಯಾವ ಕೆಲಸಕ್ಕೂ ಸೈ ಎನಿಸಿಕೊಂಡಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುರುವೇಕೆರೆ: ತುಮಕೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಬ್ಬರು ಆಶಾ ಕಾರ್ಯಕರ್ತೆಯರಿಗೆ “ಉತ್ತಮ ಆಶಾ ಕಾರ್ಯಕರ್ತೆಯರು” ಪ್ರಶಸ್ತಿ ಪ್ರದಾನ ಮಾಡಲಾಯಿತು. ತುಮಕೂರಿನಲ್ಲಿ ನಡೆದ ಸಮಾರಂಭದಲ್ಲಿ ಶಾರದಮ್ಮ ಹಾಗೂ ಎನ್.ಎಸ್.ವಿ ಆಪರೇಷನ್ ಮಾಡಿಸಿ ಸಾಧನೆ ಮೆರೆದಿದ್ದ ಲತಾ ಅವರನ್ನು  ಉತ್ತಮ ಆಶಾ ಕಾರ್ಯಕರ್ತೆಯರಾಗಿ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 1 ರಲ್ಲಿನ ಬಿ ಎಲ್ ಗೌಡ ನಗರದ ವಾಣಿ ವಿಲಾಸ ಪುರ , ಹೊಸದುರ್ಗ ನಗರಕ್ಕೆ ತೆರಳುವ ಪ್ರಧಾನರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಲ್ಲಿ ಯಾವುದೇ ಮೂಲಭೂತ ಸೌಲಭ್ಯವಿಲ್ಲದೇ, ಭಕ್ತರು ಹಾಗೂ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ. ಈ ದೇವಸ್ಥಾನಕ್ಕೆ ಬರುವಂತಹ ಆಂಜನೇಯ ಸ್ವಾಮಿ ಭಕ್ತರಿಗೆ ಇಲ್ಲಿ ಕೈ, ಕಾಲು, ಮುಖ ತೊಳೆಯಲು ಕೂಡ ಯಾವುದೇ ವ್ಯವಸ್ಥೆಗಳಿಲ್ಲ.ಸರ್ಕಾರದಡಿಯಲ್ಲಿರುವ ಈ ದೇವಸ್ಥಾನವನ್ನು ನಿರ್ವಹಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಇದೆ. ಆದರೆ ಇದು ಬಳಸಲು ಯೋಗ್ಯವಾಗಿಲ್ಲ. ಈ ಪ್ರದೇಶದಲ್ಲಿ ಕೊಳಚೆ ನೀರಿದ್ದು, ಹಂದಿಗಳ ವಾಸಸ್ಥಳವಾಗಿ ದುರ್ವಾಸನೆಯಿಂದ ಕೂಡಿದೆ. ಇಲ್ಲಿ ಜನರು ಮೂಗು ಮುಚ್ಚಿಕೊಂಡು ಹೋಗುವಂತಾಗಿದೆ ಎಂದು ಸಾರ್ವಜನಿಕರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಕುಡಿಯುವ ನೀರಿಗೆ ಸೂಕ್ತವಾದ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಬೇಕು. ಇಲ್ಲಿ ಸೂಕ್ತವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ, ಬೀದಿ ಬದಿ…

Read More

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಸರ್ಕಾರ ರಚಿಸಲು ಸಿದ್ಧತೆ ಆರಂಭಿಸಿದೆ. ಮಾರ್ಚ್ 25 ರಂದು ಸರ್ಕಾರ ರಚನೆಗಾಗಿ ‘ಪ್ರಮಾಣ ವಚನ ಸ್ವೀಕಾರ ಸಮಾರಂಭ’ ಆಯೋಜಿಸಲಾಗಿದೆ. ಪ್ರಮಾಣ ವಚನಕ್ಕೂ ಮುನ್ನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಬೆಳಗ್ಗೆ ಎಂಟರಿಂದ ಒಂಬತ್ತು ಗಂಟೆಯೊಳಗೆ ರಾಜ್ಯದ 27 ಸಾವಿರಕ್ಕೂ ಹೆಚ್ಚು ಶಕ್ತಿ ಕೇಂದ್ರದ ದೇವಸ್ಥಾನಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಗುರುವಾರ ಸಂಜೆ ಬಿಜೆಪಿ(BJP) ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವೀಕ್ಷಕರಾಗಿ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ರಘುವರ್ ದಾಸ್ ಸಹ ವೀಕ್ಷಕರಾಗಿ ಭಾಗವಹಿಸಲಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ, ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ವಿಧಿವಿಧಾನಗಳು ಸಭೆಯಲ್ಲಿ ಪೂರ್ಣಗೊಳ್ಳಲಿವೆ. ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟ ರಚನೆ ಬಗ್ಗೆಯೂ ಷಾ ಚರ್ಚೆ…

Read More